ಪೋಸ್ಟ್‌ಗಳು

ಆರ್‌ಎಸ್ಎಸ್, ಬಿಜೆಪಿ ನಕಲಿ ದೇಶಭಕ್ತರು: ಹೊಸಮನಿ.

ಇಮೇಜ್
✓ಭೀಮನಡೆ ಯಶಸ್ವಿ ಬಿಜೆಪಿ ಹತಾಶೆ,   ✓ಬಿಜೆಪಿಗರ ಆರೋಪ ಸತ್ಯಕ್ಕೆ ದೂರ. ಚಿತ್ತಾಪುರ: ಆರ್‌ಎಸ್ಎಸ್ ನವರು ತ್ರಿವರ್ಣ ಧ್ವಜಗಳು ಹಿಡಿದಿಲ್ಲ ಕೈಯಲ್ಲಿ ಬಡಗಿ ಹಿಡಿದು ಪಥಸಂಚಲನ ಮಾಡಿದ್ದರೆ ನಾವು ತ್ರಿವರ್ಣ ಧ್ವಜಗಳು ಹಿಡಿದು ಹಾಗೂ ಸಂವಿಧಾನ ಪೀಠಕೆ ಜೊತೆಗೆ ಎಲ್ಲಾ ಸಮಾಜಗಳ ಗುರುಗಳ ಭಾವಚಿತ್ರಗಳೊಂದಿಗೆ ಮೆರವಣಿಗೆ ಮಾಡಿದ್ದೇವೆ ಹಾಗಾಗಿ ಆರ್‌ಎಸ್ಎಸ್ ಮತ್ತು ಬಿಜೆಪಿ ನವರು ನಕಲಿ ದೇಶಭಕ್ತರು ನಾವು ನಿಜವಾದ ದೇಶಭಕ್ತರು ಎಂದು ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ ಹೇಳಿದರು. ಪಟ್ಟಣದ ಬುದ್ಧ ಮಂದಿರದಲ್ಲಿ ಸಂವಿಧಾನ  ಸಂರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಭೀಮ ನಡಿಗೆ ಪಥಸಂಚಲನದಲ್ಲಿ ಅಂಬೇಡ್ಕ‌ರ್ ಅನುಯಾಯಿಗಳು ಹಾಗೂ 22 ಸಮಾಜದ ಜನರು ಭಾಗವಹಿಸಿದ್ದರಿಂದ ಅಭೂತಪೂರ್ವ ಯಶಸ್ವಿಗೊಂಡಿದೆ, ಇದನ್ನು ಸಹಿಸಿಕೊಳ್ಳಲು ಆಗದ ಬಿಜೆಪಿ ಮುಖಂಡರು ಹತಾಶೆಗೊಂಡು ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು. ಆ‌ರ್.ಎಸ್.ಎಸ್ ನವರು ಕೈಯಲ್ಲಿ ಬಡಗಿ ಹಿಡಿದು ಪಥ ಸಂಚಲನ ಮಾಡುವ ಮೂಲಕ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ, ಆದರೆ ನಾವು ಯಾವುದೇ ಮಾರಕಾಸ್ತ್ರ ಇಲ್ಲದೇ ಶಿಸ್ತುಬದ್ಧವಾಗಿ, ಶಾಂತಿಯುತವಾಗಿ ಐತಿಹಾಸಿಕ ಭೀಮ ನಡಿಗೆ ಪಥ ಸಂಚಲನ ಮಾಡಿದ್ದೇವೆ, ಭೀಮ ನಡಿಗೆ ಪಥಸಂಚಲನದಲ್ಲಿ ಸ್ವಯಂಪ್ರೇರಿತವಾಗಿ ಜನ ಬಂದಿದ್ದಾರೆ ಯಾರನ್ನೂ ಹಣ ನೀಡಿ ಕರೆಯಿಸಿ...

ಸಚಿವರ ಕೈಗೊಂಬೆಯಾದ ತಹಸೀಲ್ದಾರ: ಸಜ್ಜನಶೆಟ್ಟಿ.

ಇಮೇಜ್
ಚಿತ್ತಾಪುರ: ಭೀಮ ನಡಿಗೆ ಪಥಸಂಚಲನಕ್ಕೆ ಎರೆಡೆರಡು ಬಾರಿ ಅನುಮತಿ ನೀಡುವ ಮೂಲಕ ತಹಸೀಲ್ದಾರ್ ತಮ್ಮ ಮನಬಂದಂತೆ ವರ್ತಿಸಿದ್ದು, ಸಚಿವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ  ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಆ‌ರ್ ಎಸ್ಎಸ್ ಪಥ ಸಂಚಲನಕ್ಕೆ ತಾಲೂಕು ಕಂದಾಯ ವ್ಯಾಪ್ತಿಯಲ್ಲಿ ಇರುವವರಿಗೆ ಹಾಗೂ 350 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು, ಸಂಚಲನಕ್ಕೆ ಬರುವವರ ಐಡಿ ಕಾರ್ಡ್ ಪರಿಶೀಲನೆ ನಡೆಸಿ ಬ್ಯಾರಿಕೇಡ್ ಹಾಕಿ ನಾಕಾಬಂಧ ಹಾಕಿ, ಪಥ ಸಂಚಲನ ಫೇಲ್ ಮಾಡುವ ಉದ್ದೇಶದಿಂದ ಪೊಲೀಸರು ತುಂಬಾ ತೊಂದರೆ ನೀಡಿದ್ದರು. ಆದರೆ ಭೀಮ ನಡಿಗೆ ಪಥಸಂಚಲನಕ್ಕೆ ಯಾವುದೇ ಬ್ಯಾರಿಕೇಡ್ ಹಾಕಿಲ್ಲ, ಯಾರನ್ನು ತಪಾಸಣೆ ನಡೆಸಲಿಲ್ಲ ಮತ್ತು ಇಂತಿಷ್ಟೇ ಜನರು ಭಾಗವಹಿಸಬೇಕು ಅಂತ ಹೇಳಿಲ್ಲ ಮತ್ತು ಸಮಯ ಪರಿಪಾಲನೆ ಮಾಡಿಲ್ಲ ಹೀಗಾಗಿ ಇಲ್ಲಿ ಅಧಿಕಾರಿಗಳು ತಾರತಮ್ಯ ಮಾಡಿ ಕಾನೂನು ತಮಗೆ ಬೇಕಾದ ಹಾಗೆ ಬಳಸಿಕೊಂಡಿದ್ದಾರೆ ಎಂದು ದೂರಿದರು. ಆರ್.ಎಸ್ಎಸ್ ಪಥ ಸಂಚಲನ ಸಮಯದಲ್ಲಿ ನಾವು ಪಥ ಸಂಚಲನ ಮಾಡುತ್ತೇವೆ ಎಂದು ಹೇಳಿದ ಸಂಘಟನೆಗಳೇ ಬೇರೆ, ಈಗ ಮಾಡಿದವರೇ ಬೇರೆನೇ ಎಂದು ಕುಟುಕಿದರು. ಶಾಂತಿಪ್ರಿಯ ಚಿತ್ತಾಪುರದಲ್ಲಿ ಇಷ್ಟೊಂದು ಗದ್ದಲ, ಅಶಾಂತಿ ವಾತಾವರಣ ನಿರ್ಮಾಣವಾಗುವುದಕ್ಕೆ ಕಾರಣ ಯಾರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ ಎಂದರು. ಬಿ...

ಕನ್ನಡ ಸಾಹಿತ್ಯ ಪರಿಷತ್‌ ಕಾರ್ಯಕ್ರಮ ಆಂಗ್ಲ ಶಾಲೆಯಲ್ಲಿ : ಇಂದೂರು ಆಕ್ಷೇಪ.

ಇಮೇಜ್
ಚಿತ್ತಾಪುರ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದಲ್ಲಿ ಸಿರಿನುಡಿ ಸಂಭ್ರಮ ಎಂಬ ಕಾರ್ಯಕ್ರಮ ಇಂದು ಶನಿವಾರ ಹಮ್ಮಿಕೊಂಡಿರುವ ಶೇಷಗಿರಿರಾವ್ ಹಿರಿಯ ಮತ್ತು ಪ್ರೌಢ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸುವ ಮೂಲಕ ಕನ್ನಡ ಭಾಷೆಗೆ ಅವಮಾನ ಮಾಡಲಾಗುತ್ತಿದೆ ಎಂದು ತಾಲೂಕಾ ಜೈ ಕರ್ನಾಟಕ ಮಾಜಿ ಅಧ್ಯಕ್ಷ ಮಲ್ಲಿನಾಥ ಇಂದೂರು ಅವರು ಉದಯಕಾಲ ಪತ್ರಿಕೆ ಜೊತೆಗೆ ಮಾತನಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಕನ್ನಡ ನಾಡು, ನುಡಿ, ನೆಲ,ಜಲ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಕೊಡುಗೆ ನೀಡಿರುವ ಮತ್ತು ಶ್ರಮಿಸುತ್ತಿರುವವರನ್ನು ಗುರುತಿಸಿ ಪರಿಷತ್ತಿನಿಂದ ಸನ್ಮಾನಿಸಿ, ಪ್ರಶಸ್ತಿ ನೀಡಿ ಗೌರವಿಸುವುದು ಪರಿಷತ್ತಿನ ಸಂಪ್ರದಾಯ. ಅದನ್ನು ಮೀರಿ ಆಂಗ್ಲ ಭಾಷೆಯಲ್ಲಿ ಬೋಧನೆ ಮಾಡುವ ಉಪನ್ಯಾಸಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡುವುದು ಅಲ್ಲದೇ ಮಾಧ್ಯಮ ಕ್ಷೇತ್ರವನ್ನು ಕಡೆಗಣಿಸುವ ಮೂಲಕ ಕನ್ನಡ ಭಾಷೆ ಬೋಧಿಸುವ ಶಿಕ್ಷಕ, ಉಪನ್ಯಾಸಕರಿಗೆ, ಹಾಗೂ ನಾಲ್ಕನೆ ಅಂಗವಾದ ಪತ್ರಿಕಾ ರಂಗವನ್ನು ಅವಮಾನ ಮಾಡಿದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಕೇಳಿದಾಗ ತಾಲೂಕಾ ಅಧ್ಯಕ್ಷರಿಗೆ ಕೇಳಿ ಎಂದು ಹಾರಿಕೆ ಉತ್ತರ ನೀಡಿದ್ದಾರೆ. ತಾಲೂಕಾ ಅಧ್ಯಕ್ಷರಿಗೆ ಕೇಳಿದರೆ ಆಗಿರುವ ತಪ್ಪು ಮುಂದಿನ ಕಾರ್ಯಕ್ರಮದಲ್ಲಿ ಸರಿಪಡಿಸಿಕೊಳ್ಳೋಣ ಎಂದು ಹೇಳುವ ಮೂಲಕ ತಪ್ಪು ಒಪ್ಪಿಕೊಂಡು ಕನ್ನಡ ಭಾಷೆ...

ಪ್ರಜಾ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

ಇಮೇಜ್
ಚಿತ್ತಾಪುರ: ಪಟ್ಟಣದ ಪ್ರಜಾ ಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ರಾಜಕುಮಾ‌ರ್ ಮರತೂರಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಸಮಾಜ ಕಲ್ಯಾಣಾಧಿಕಾರಿ ಚೇತನ್ ಗುರಿಕಾರ, ವಾಲ್ಮೀಕಿ ಸಮಾಜ ತಾಲೂಕು ಅಧ್ಯಕ್ಷ ಭೀಮರಾಯ ದೋರಿ, ಯುವ ಅಧ್ಯಕ್ಷ ರಾಜು ದೋರಿ, ಮುಖಂಡರಾದ ಸಾಬಣ್ಣ ಮುಸ್ಲಾ, ಅಂಬಣ್ಣ ಬೊಮ್ಮನಹಳ್ಳಿ, ಹಣಮಂತ ಬೊಮ್ಮನಹಳ್ಳಿ, ಮೌನೇಶ್ ಲಾಡ್ಲಾಪೂರ, ಸಾಬಣ್ಣ ಲಾಡ್ಲಾಪೂರ, ರಾಮು ಮುಸ್ಲಾ, ಭೀಮರಾಯ ಲಾಡ್ಡಾಪೂರ, ಸಾಬಣ್ಣ ಕುಂಬಾರಹಳ್ಳಿ, ಹಣಮಂತ ಗಲಿಗಿನ್, ಅಮೃತ್ ಶಾಮನೂರ, ಮಹಾದೇವ ಬೊಮ್ಮನಹಳ್ಳಿ, ಉಮೇಶ್ ದೋರಿ, ವೆಂಕಟೇಶ್ ಬಳಿಚಕ್ರ, ಜಗದೇವ ಚಾಮನೂರ, ಚಂದ್ರು ಇಟಗಾ, ಭಾಗಣ್ಣ ದೋರಿ, ಸಾಯಬಣ್ಣ ವಾಡಿ, ದೇವಪ್ಪ ಕುಂಬಾರಹಳ್ಳಿ, ನಿಂಗಣ್ಣ ಚಾಮನೂರ, ಹಣಮಂತ ದಿಗ್ಗಾಂವ, ಶರಣು ವಾಡಿ, ಭೀಮಾಶಂಕರ ದಿಗ್ಗಾಂವ ಸೇರಿದಂತೆ ಇತರರು ಇದ್ದರು.

ನ್ಯಾ.ಬಿ.ಆರ್ ಗವಾಯಿ ಮೇಲೆ ಶೂ ಎಸೆತಕ್ಕೆ ಖಂಡನೆ

ಇಮೇಜ್
ಚಿತ್ತಾಪುರ : ರಾಷ್ಟ್ರದ ಸರ್ವೋಚ್ಛ ನ್ಯಾಯಾಲಯದ ಘನತೆವೆತ್ತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರನ್ನು ಅಪಮಾನಿಸಲು ಶೂ ಎಸೆಯಲು ಯತ್ನಿಸಿರುವ ಘಟನೆ ಅತ್ಯಂತ ಖಂಡನೀಯ ಎಂದು ಬೌದ್ಧ ಮಹಾಸಭಾ ತಾಲೂಕಾಧ್ಯಕ್ಷ ಜಗನ್ನಾಥ ಮುಡಬೂಳಕ‌ರ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ. ಈ ಸಂವಿಧಾನದ ಘಟನೆ ಸಾರ್ವಭೌಮತ್ವವನ್ನು ಅಪಮಾನಿಸಲು ಯತ್ನಿಸಿದ ನೀಚ ಹಾಗೂ ಅನಾಗರೀಕ ವರ್ತನೆಯಾಗಿದ್ದು, ಕೃತ್ಯ ಎಸಗಿದ ವಕೀಲನ ವರ್ತನೆ ಯಾರೂ ಕ್ಷಮಿಸಲಾರದ ದುಷ್ಕೃತ್ಯವಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಮಾನಿಸುವ ಹಾಗೂ ಅಗೌರವ ತೋರುವ ವರ್ತನೆ ಹಾಗೂ ಕೃತ್ಯಗಳು ವಿದ್ರೋಹಿತನದ ಪರಮಾವಧಿಯಾಗಿದೆ. ದೇಶದ ಕಾನೂನಿನ ಅನ್ವಯ ಪೊಲೀಸರು ಈ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಉತ್ಸವ ಯಶಸ್ಸು: ಕೃತಜ್ಞತೆ ಸಲ್ಲಿಸಿದ ಹಿರೇಮಠ

ಇಮೇಜ್
ಚಿತ್ತಾಪುರ: ಐತಿಹಾಸಿಕ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವದ ಯಶಸ್ಸಿಗೆ ಶ್ರಮಿಸಿದ ಮತ್ತು ಸಹಕರಿಸಿದ ಎಲ್ಲರಿಗೂ ದೇವಸ್ಥಾನ ಸಮಿತಿ ಅಧ್ಯಕ್ಷರು/ತಹಸೀಲ್ದಾರ್ ನಾಗಯ್ಯ ಹಿರೇಮಠ ರವರು ತಾಲೂಕು ಆಡಳಿತದಿಂದ ಹೃದಯ ಪೂರ್ವಕ ಧನ್ಯವಾದಗಳು ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ ಮಾರ್ಗದರ್ಶನದಿಂದ ಯಾವುದೇ ಲೋಪವಿಲ್ಲದೆ ಪಲ್ಲಕ್ಕಿ ಉತ್ಸವ ಶಾಂತಿಯುತವಾಗಿ ನಡೆಯಿತ್ತು. ನಾಗಾವಿ ಯಲ್ಲಮ್ಮ ದೇವಿ ಪಲ್ಲಕ್ಕಿ ಉತ್ಸವ ಮತ್ತು ಜಾತ್ರೆಯು ಸುಗಮವಾಗಿ ನಡೆಯುವಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪುರಸಭೆ ಕಾರ್ಯಲಯದ ಸಿಬ್ಬಂದಿ ವರ್ಗ, ಪದವಿ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಮಾಡಿದ ಶಿಸ್ತುಬದ್ಧ ಸೇವೆ, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ದೀಪಾಲಂಕಾರ ಸಮಿತಿ ಸದಸ್ಯರು ಸದಸ್ಯರು, ಪತ್ರಕರ್ತರಿಗೂ ಮತ್ತೂ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡದ ಭಕ್ತಾದಿಗಳ ಜೊತೆಗೆ ಎಲ್ಲರ ಸಾಮೂಹಿಕ ಪ್ರಯತ್ನದಿಂದಾಗಿ ಜಾತ್ರೆಯು ವಿಜ್ರಂಭಣೆಯಿಂದ ನೆರವೇರಿತು ಎಂದು ಹೇಳಿ ಕೃತಜ್ಞತೆ ಸಲ್ಲಿಸಿದ್ದಾರೆ.

ಶೂ ಎಸೆಯುವ ಯತ್ನ ಭಯೋತ್ಪಾದಕ ಕೃತ್ಯ: ಬುಳಕರ ಆಗ್ರಹ

ಇಮೇಜ್
ಚಿತ್ತಾಪುರ: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿಯವರ ಮೇಲೆ ವಕೀಲನೊಬ್ಬ ಶೂ ಎಸೆಯುವ ಪ್ರಯತ್ನ ಮಾಡಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಯುವ ಮುಖಂಡ ಸಂಜಯ ಬುಳಕರ ಹೇಳಿದರು.  ಬುಧವಾರ ತಹಸೀಲ್ ಕಾರ್ಯಾಲಯಕ್ಕೆ ತೆರಳಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಸೀಲ್ದಾರ್ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಸಲ್ಲಿಸಿದರು. ತದನಂತರ ಮಾತನಾಡದ ಅವರು ಈ ದೇಶದ ಸರ್ವೋಚ್ಚ ನ್ಯಾಯಮೂರ್ತಿಗಳ ಮೇಲೆಯೇ ಕೋರ್ಟ್ ಹಾಲ್ ನಲ್ಲೇ ಈ ಕೃತ್ಯ ನಡೆದಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದರು. ಇದೊಂದು ಭಯೋತ್ಪಾದಕ ಕೃತ್ಯ, ಇದು ಈ ದೇಶದ ಸಂವಿಧಾನವನ್ನು ಒಪ್ಪದ ಸಮುದಾಯದವರ ಮನೋ ಸ್ಥಿತಿಯಾಗಿದೆ.ದಲಿತರೊಬ್ಬರು ಈ ಸ್ಥಾನಕ್ಕೆ ಬಂದಿರುವುದನ್ನೆ ಸಹಿಸಲಾಗದ ದುಷ್ಟ-ಮನಸುಗಳು ಈ ರೀತಿಯ ಕೃತ್ಯವನ್ನು ಬೆಂಬಲಿಸುತ್ತವೆ, ಮತ್ತು ಇಂತಹ ಕೃತ್ಯದಲ್ಲಿ ತೊಡಗುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ನ್ಯಾಯಮೂರ್ತಿಗಳು ದಲಿತರು, ಬೌದ್ಧ ಧರ್ಮದ ಉಪಾಸಕರು ಆಗಿದ್ದು. ಅದೇ ಮುಖ್ಯ ಕಾರಣವನ್ನಾಗಿಸಿಕೊಂಡು ಸನಾತನ ಧರ್ಮದ ಹೆಸರಲ್ಲಿ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿಗಳ ಮೇಲೆಯೇ ಶೂ ಎಸೆಯುವ ದುಷ್ಟ ಪ್ರಯತ್ನ ನಡೆಸಿರುವಾಗ ಈ ದೇಶದ ಸಾಮಾನ್ಯ ದಲಿತರ ಪಾಡೇನು ಎಂಬುದನ್ನು ಯೋಚಿಸಬೇಕಾಗಿದೆ.  ಈ ಕೃತ್ಯ ಸಂವಿಧಾನದ ಮೇಲೆ ನಡೆದ ತೀವ್ರ ಹಲ್ಲೆಯಾಗಿದೆ. ಇಂಥ ವ್ಯಕ್ತಿಗಳ...