ಚಿತ್ತಾಪುರ: ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ದೇವಿಂದ್ರ ಅರಣಕಲ್ (ಭಾಗೋಡಿ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಹರನಾಳ (ವಾಡಿ) ಅವರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಟ್ಟಣದ ಸಂಘದ ಕಚೇರಿಯಲ್ಲಿ ಶುಕ್ರವಾರದಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ನಡೆಯಿತು. ಈ ವೇಳೆ ಅಧ್ಯಕ್ಷ ಸ್ಥಾನಕ್ಕೆ ದೇವಿಂದ್ರ ಅರಣಕಲ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಹರನಾಳ ಅವರು ಮಾತ್ರ ತಮ್ಮ ಉಮೇದುವಾರಿಕೆ (ನಾಮಪತ್ರ) ಸಲ್ಲಿಸಿದ್ದರು.
ನಿಗದಿತ ಸಮಯದವರೆಗೆ ಇವರ ವಿರುದ್ಧ ಬೇರೆ ಯಾವುದೇ ಅಭ್ಯರ್ಥಿಗಳು ಪ್ರತಿಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸದ ಕಾರಣ, ಇಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಅಫಜಲಪುರ ಸಹಕಾರ ಅಭಿವೃದ್ಧಿ ಅಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರುವ ಚಾಂದ್ ಭಾಷಾ ಅನ್ಸಾರಿ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.
ಒಕ್ಕಲತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ನೂತನ ನಿರ್ದೇಶಕರಾದ ಈರಯ್ಯ ಬೆಣ್ಣೂರ, ಭೀಮಾಶಂಕರ ಗುರಣ್ಣ, ಅಬ್ದುಲ್ ರಶೀದ್ ಯಾದಗೀರ, ಶ್ರೀನಿವಾಸ, ರಾಚಪ್ಪು, ವಿಜಯಕುಮಾರ, ಮಹೇಶ ಧರಿ, ಅಂಬರೀಶ ಸುಲೇಗಾಂವ್, ಅಶೋಕ ಹರನಾಳ. ಶ್ರೀಮತಿ ಗೌರಮ್ಮ, ಶ್ರೀಮತಿ ಸುನೀತಾ ವಗ್ಗರ, ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಬಿಜೆಪಿ ಮುಖಂಡರಾದ ಭೀಮರೆಡ್ಡಿ ಕುರಾಳ, ವೀರಣ್ಣ ಯಾರಿ, ಭೀಮಶ್ಯಾ ಜೀರೋಳ್ಳಿ, ಆನಂದ ಪಾಟೀಲ ನರಿಬೋಳ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಶಿವರಾಮ್ ಚವ್ಹಾಣ, ಕಾಂಗ್ರೆಸ್ ಮುಖಂಡರಾದ ರಸೂಲ್ ಮುಸ್ತಫಾ, ನಾಗರೆಡ್ಡಿ ಗೋಪಸೇನ್, ಹಣಮಂತ ಸಂಕನೂರ್, ಸಂತೋಷ ಪೂಜಾರಿ, ದೇವು ಯಾಬಾಳ, ಮಹೇಶ್ ಜಾಯಿ, ಸಿದ್ದು ಭೋವಿ ಸೇರಿದಂತೆ ಇತರರು ಇದ್ದರು