ಚಿತ್ತಾಪುರ: ಸಮಾಜದಲ್ಲಿ ಇಂದಿಗೂ ಪರೋಕ್ಷವಾಗಿ ಅಸ್ತಿತ್ವದಲ್ಲಿರುವ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡಲು ಕೇವಲ ಕಠಿಣ ಕಾನೂನುಗಳಿದ್ದರೆ ಸಾಲದು, ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡುವುದು ಅತ್ಯಗತ್ಯ. ಪ್ರತಿಯೊಬ್ಬರಿಗೂ ಗೌರವಯುತವಾಗಿ ಬದುಕುವ ಹಕ್ಕಿದೆ," ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಗಳಾದ ಅಭಿಷೇಕ ಜೋಶಿ ಹೇಳಿದರು.
ಪಟ್ಟಣದ ಪ್ರಜಾ ಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ “ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ” ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿದ ಅವರು ಜೀತ ಪದ್ಧತಿಯು ಮಾನವ ಹಕ್ಕುಗಳ ಘೋರ ಉಲ್ಲಂಘನೆಯಾಗಿದೆ. ಯಾವುದೇ ವ್ಯಕ್ತಿಯನ್ನು ಸಾಲದ ನೆಪದಲ್ಲಾಗಲಿ ಅಥವಾ ಇನ್ಯಾವುದೇ ಕಾರಣಕ್ಕೆ ಜೀತದಾಳಗಿ ಇರಿಸಿಕೊಳ್ಳುವುದು ಕಾನೂನುಬಾಹಿರವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಸೀಲ್ದಾರ್ ನಾಗಯ್ಯ ಹಿರೇಮಠ ಮಾತನಾಡಿ "ಜೀತ ಪದ್ಧತಿಯಿಂದ ಮುಕ್ತರಾದವರನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ತಾಲೂಕಿನ ಯಾವುದೇ ಮೂಲೆಯಲ್ಲಿ ಜೀತ ಪದ್ಧತಿ ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಆಡಳಿತದ ಗಮನಕ್ಕೆ ತರಬೇಕು. ನಿರ್ಮೂಲನಾ ಕಾಯಿದೆಯಡಿ ಸಿಗುವ ಸವಲತ್ತುಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸವನ್ನು ನಾವು ನಿರಂತರವಾಗಿ ಮಾಡುತ್ತೇವೆ," ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನ್ಯಾಯವಾದಿ ಬಸವರಾಜ ಎನ್. ಸಿಂಪಿ ಅವರು ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಯ ಇತಿಹಾಸ ಮತ್ತು ಪ್ರಸ್ತುತ ಕಾನೂನುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಅಂಜನಾದೇವಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಕ್ರಂ ಪಾಶಾ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸೋಮಶೇಖರ ಬಿ. ಕರದಳ್ಳಿ, ಶಿಶು ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಆರತಿ ತುಪ್ಪದ,ಪೊಲೀಸ್ ಉಪ ನಿರೀಕ್ಷಕ ಮಂಜುನಾಥ ರೆಡ್ಡಿ,ಕಾರ್ಮಿಕ ನಿರೀಕ್ಷಕ ವಿಕ್ರಮ ಬಡಿಗೇರ, ತಹಸೀಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿಗಳ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.