ಬೆಂಗಳೂರು: ಕರ್ನಾಟಕ ರಾಜ್ಯ ಕುಂಬಾರ ಜನಾಂಗ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಡಾ. ಶ್ರೀನಿವಾಸ್ ವೇಲು ಅವರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ, ಸಮಸ್ತ ಕುಂಬಾರ ಸಮುದಾಯದ ಪರವಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಗಳೂರಿನ ಅವರ ಅಧಿಕೃತ ಗೃಹ ಕಚೇರಿ 'ಕಾವೇರಿ'ಯಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರು ಉಪಸ್ಥಿತರಿದ್ದು, ಸಮುದಾಯದ ಮುಖಂಡರೊಂದಿಗೆ ಶುಭ ಕೋರಿದರು. ತದನಂತರ ಸಂಜೆ ಬೆಂಗಳೂರಿನ ಡಿ. ದೇವರಾಜ ಅರಸು ಭವನದಲ್ಲಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಆರ್. ಶ್ರೀನಿವಾಸ್, ಕೆ.ಎಸ್.ಆರ್.ಟಿ.ಸಿ ನಿರ್ದೇಶಕಿ ಗಾಯಿತ್ರಿ (IAS), ಅಖಿಲ ಭಾರತ ಕರ್ನಾಟಕ ಕುಂಬಾರ ಮಹಾಸಭಾದ ಅಧ್ಯಕ್ಷರಾದ ಶಿವಕುಮಾರ ಚೌಡ ಶೆಟ್ಟಿ, ಗೌರವಾಧ್ಯಕ್ಷರಾದ ಗುರುರಾಜ್, ಮಾಜಿ ಹೆಚ್ಚುವರಿ ಅಡ್ವಕೇಟ್ ಜನರಲ್ ದೇವದಾಸ್, ವಕೀಲರಾದ ಅನುಸೂಯಾ, ಡಾ. ಹೇಮಾವತಿ ಶ್ರೀನಿವಾಸ್ ವೇಲು ಹಾಗೂ ಸಮುದಾಯದ ಮುಖಂಡರಾದ ಸಂಗಮೇಶ, ಚಿಕ್ಕ ವೀರಯ್ಯ ಟಿ.ಎನ್, ವಿಠಲ್ ಶಂಕರ್ ಸೇರಿದಂತೆ ಹಲವು ಹಿತೈಷಿಗಳು ಭಾಗವಹಿಸಿದ್ದರು.
"ಅನಿವಾರ್ಯ ಕಾರಣಗಳಿಂದಾಗಿ ಬೆಂಗಳೂರಿನಲ್ಲಿ ನಡೆದ ನಮ್ಮ ಹೆಮ್ಮೆಯ ಸಮುದಾಯದ ನಾಯಕರಾದ ಡಾ. ಶ್ರೀನಿವಾಸ್ ವೇಲು ರವರ ಪದಗ್ರಹಣ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸಲು ಸಾಧ್ಯವಾಗಿಲ್ಲ. ನಮ್ಮ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಡಾ. ಶ್ರೀನಿವಾಸ್ ವೇಲು ರವರಿಗೆ ಈ ಜವಾಬ್ದಾರಿ ಸಿಕ್ಕಿರುವುದು ಅತ್ಯಂತ ಸಂತೋಷದ ವಿಷಯ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅವರ ನೇತೃತ್ವದಲ್ಲಿ ಕುಂಬಾರ ನಿಗಮವು ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಂತಾಗಲಿ ಎಂದು ಆಶಿಸುತ್ತೇನೆ. ಈ ನೇಮಕಾತಿ ಮಾಡಿದ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಬೆಂಬಲವಾಗಿ ನಿಂತ ಸಾರಿಗೆ ಸಚಿವರಿಗೆ ಧನ್ಯವಾದಗಳು."
- ಜಗದೇವ ಎಸ್. ಕುಂಬಾರ,
ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ,ಅಖಿಲ ಭಾರತ ಕುಂಬಾರ ಮಹಾಸಭಾ ಬೆಂಗಳೂರ.