Jtv kannada

ಜನತೆಯ ಸುದ್ದಿ ವಾಹಿನಿ

ಮಂಗಳವಾರ, ಜೂನ್ 2, 2026

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ನಾಗೇಶ ಹಲಗಿ ಒತ್ತಾಯ.

ಚಿತ್ತಾಪುರ: ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಹೆಮ್ಮೆಯ ನಾಯಕ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನವನ್ನು ನೀಡಬೇಕು ಎಂದು ಮಾದಿಗ ಸಮಾಜದ ಯುವ ಮುಖಂಡ ಹಾಗೂ ದಲಿತ ಸಂಘರ್ಷ ಸಮಿತಿ (ಭೀಮಘರ್ಜನೆ) ರಾಜ್ಯ ಸಂಘಟನಾ ಸಂಚಾಲಕ ನಾಗೇಶ ಹಲಗಿ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಯುವ ಸಮುದಾಯಕ್ಕೆ ಸ್ಫೂರ್ತಿಯಾಗಿರುವ ಅವರಿಗೆ ಡಿಸಿಎಂ ಹುದ್ದೆ ನೀಡುವುದು ಸೂಕ್ತ ಎಂದಿದ್ದಾರೆ.

​ಅವರು ಸಚಿವರಾಗಿ ಕೈಗೊಂಡಿರುವ ಜನಪರ ಹಾಗೂ ಪ್ರಗತಿಪರ ಕೆಲಸಗಳು ಇಡೀ ರಾಜ್ಯಕ್ಕೆ ಮಾದರಿಯಾಗಿವೆ. ​ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತಷ್ಟು ಬಲ ತುಂಬಲು ಮತ್ತು ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಅವರಿಗೆ ಡಿಸಿಎಂ ಸ್ಥಾನ ನೀಡುವುದು ಅತ್ಯಗತ್ಯವಾಗಿದೆ. ದಲಿತ, ಶೋಷಿತ ಹಾಗೂ ಯುವ ಸಮುದಾಯದ ಧ್ವನಿಯಾಗಿರುವ ಖರ್ಗೆ ಅವರಿಗೆ ಉನ್ನತ ಸ್ಥಾನಮಾನ ನೀಡುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಯ ಎತ್ತಿಹಿಡಿಯಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಕಾಲುದಾರಿ ಬಂದ್: ಜೂನ್ 8 ಕ್ಕೆ ಬೃಹತ್ ಪ್ರತಿಭಟನೆ.

ಚಿತ್ತಾಪುರ: ತಾಲೂಕಿನ ವಾಡಿ ಪಟ್ಟಣದ ರೈಲು ನಿಲ್ದಾಣದ ಹತ್ತಿರದಿಂದ ಹನುಮಾನ ನಗರ, ವಿಜಯ ನಗರ, ಇಂದಿರಾ ನಗರ ಸೇರಿದಂತೆ ನಾಲ್ಕೈದು ಬಡಾವಣೆಗಳಿಗೆ ಸಂಪರ್ಕಿಸುವ ಕಾಲುದಾರಿಯನ್ನು ರೈಲ್ವೆ ಸಿಬ್ಬಂದಿ ಏಕಾಏಕಿ ತಡೆದಿರುವುದಕ್ಕೆ ಸ್ಥಳೀಯ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರೈಲ್ವೆ ಇಲಾಖೆಯ ಈ ಕ್ರಮವನ್ನು ಖಂಡಿಸಿ ಬಿಜೆಪಿ, ಮಾದಿಗ ದಂಡೋರ ಹೋರಾಟ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಂಘಟನೆಗಳು ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿವೆ.

​ಈ ಕುರಿತು ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅವರು ರೈಲು ನಿಲ್ದಾಣದ ಪ್ರಬಂಧಕರಾದ ಸಿ.ಎಚ್. ರಾಮಕೃಷ್ಣ ಅವರ ಮುಖಾಂತರ ರೈಲ್ವೆ ಮೇಲಾಧಿಕಾರಿಗಳಿಗೆ ಪತ್ರ ರವಾನಿಸಿ, ಇಲಾಖೆಯ ನಿರ್ಧಾರದ ವಿರುದ್ಧ ತೀವ್ರ ಆಸಮಾಧಾನ ವ್ಯಕ್ತಪಡಿಸಿ ಪತ್ರದ ವಿವರಗಳನ್ನು ಹಂಚಿಕೊಳ್ಳುತ್ತಾ ಮಾತನಾಡಿದ ವೀರಣ್ಣ ಯಾರಿ ಅವರು, "ವಾಡಿ ಪಟ್ಟಣವು ರೈಲ್ವೆ ಇಲಾಖೆಗೆ ಸಾಕಷ್ಟು ಆದಾಯ ಮತ್ತು ಸಂಪನ್ಮೂಲಗಳನ್ನು ಒದಗಿಸುವ ಪ್ರಮುಖ ಕೇಂದ್ರವಾಗಿದೆ. ಆದರೆ ಇಲಾಖೆಯು ನಿರಂತರವಾಗಿ ಜನರಿಗೆ ತೊಂದರೆ ನೀಡುತ್ತಾ ಬಂದಿದೆ. ಪಟ್ಟಣವು ರೈಲ್ವೆ ಹಳಿಗಳಿಂದ ಆವೃತವಾಗಿದ್ದು, ಹಳಿಯ ಮತ್ತೊಂದು ಭಾಗದಲ್ಲಿರುವ ನಾಲ್ಕೈದು ಬಡಾವಣೆಗಳಲ್ಲಿ ಸುಮಾರು 15 ರಿಂದ 20 ಸಾವಿರ ಜನರು ವಾಸಿಸುತ್ತಿದ್ದಾರೆ. ರೈಲು ನಿಲ್ದಾಣದ ಆರಂಭದಿಂದಲೂ ಜನರಿಗೆ ಅನುಕೂಲಕರವಾಗಿದ್ದ ಪಾದಚಾರಿ ಮಾರ್ಗವನ್ನು ಇದ್ದಕ್ಕಿದ್ದಂತೆ ಮುಚ್ಚಿರುವುದರಿಂದ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಸಂಚರಿಸಲು ತೀವ್ರ ತೊಂದರೆ ಅನುಭವಿಸುವಂತಾಗಿದೆ" ಎಂದು ಬೇಸರ ವ್ಯಕ್ತಪಡಿಸಿದರು.
"ಬಡಾವಣೆಗಳ ಜನರ ಅನುಕೂಲಕ್ಕಾಗಿ ಮೇಲ್ಸೇತುವೆ (FOB) ಮತ್ತು ಕೆಳಸೇತುವೆ (Underpass) ನಿರ್ಮಿಸುವಂತೆ ನಾವು ಪದೇ ಪದೇ ಸಂಬಂಧಿಸಿದ ಎಲ್ಲಾ ಮೇಲಾಧಿಕಾರಿಗಳಿಗೆ ವಿನಂತಿಯ ಮನವಿ ಪತ್ರಗಳನ್ನು ಸಲ್ಲಿಸಿದ್ದೇವೆ. ಆದರೂ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಇದ್ದ ಕಾಲುದಾರಿಯನ್ನೂ ಬಂದ್ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ."

— ಅರ್ಜುನ ಕಟ್ಡಿಮನಿ,
ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಕ್ಷಣಾ ವೇದಿಕೆ ವಾಡಿ.


​ರೈಲ್ವೆ ಇಲಾಖೆಯು ತಕ್ಷಣವೇ ಈ ಸಮಸ್ಯೆಗೆ ಪರ್ಯಾಯ ಮಾರ್ಗವನ್ನು ಸೂಚಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಬರುವ ಜೂನ್ 8 ರಂದು ಸಾರ್ವಜನಿಕರೊಂದಿಗೆ ರೈಲ್ವೆ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈಲ್ವೆ ಮೇಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದ ಮೂಲಕ ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಪುರಸಭೆ ಮಾಜಿ ಸದಸ್ಯರಾದ ಕಿಶನ ಜಾಧವ, ಅಂಬದಾಸ ಜಾಧವ, ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾ ಉಪಾಧ್ಯಕ್ಷ ಜಗದೀಶ ಮುಕ್ಕನಾಳ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕಾಂಬಳೆ, ಮುಖಂಡರಾದ ಮಹಾಂತೇಶ ಬಿರಾದಾರ, ಪಂಡಿತ್ ಪವಾರ, ಹಾಜಪ್ಪ ಅರಸಣಗಿ, ಗೋವಿಂದ ಚವ್ಹಾಣ, ರಾಮಾಂಜನೇಯ ದದಾಸರಿ, ದೇವೇಂದ್ರ, ವಿಜಯ ಜಾನ್ ಸೇರಿದಂತೆ ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಹುದ್ದೆ ನೀಡಲು ಕುರುಬ ಸಮಾಜ ಒತ್ತಾಯ.

ಚಿತ್ತಾಪುರ: ಕ್ಷೇತ್ರದ ಜನಪ್ರಿಯ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಹೊಸಳ್ಳಿ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

​ಪಟ್ಟಣದ ಕನಕ ಭವನದಲ್ಲಿ ಮಂಗಳವಾರ ಕುರುಬ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು ​"ಪ್ರಿಯಾಂಕ್ ಖರ್ಗೆ ಅವರು ಸಮಾಜ ಕಲ್ಯಾಣ, ಪ್ರವಾಸೋದ್ಯಮ, ಐಟಿಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಚಿವರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿ.ಎಸ್.ಐ ಹಗರಣ ಮತ್ತು ಬಿಟ್ ಕಾಯಿನ್ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರಗಳನ್ನು ಧೈರ್ಯವಾಗಿ ಬಯಲಿಗೆಳೆದ ದಿಟ್ಟ ನಾಯಕ ಇವರಾಗಿದ್ದಾರೆ. ಇವರ ಜನಪರ ಹೋರಾಟದ ಪರಿಣಾಮವಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಹೀಗಾಗಿ ಇವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲೇಬೇಕು" ಎಂದರು.

​ಸಮಾಜದ ಹಿರಿಯ ಮುಖಂಡ ಜುಮ್ಮಣ್ಣ ಪೂಜಾರಿ ಮಾತನಾಡಿ, "ಪ್ರಿಯಾಂಕ್ ಖರ್ಗೆ ಅವರು ಎಲ್ಲ ಜಾತಿ ಜನಾಂಗದವರನ್ನು ಸಮಾನವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಕ್ಷೇತ್ರದಲ್ಲಿ ಸ್ಪೋರ್ಟ್ಸ್ ಹಬ್, ಎಜುಕೇಷನ್‌ ಹಬ್, ಮೃಗಾಲಯ ಹಾಗೂ ಗುಂಡಗುರ್ತಿ ಉದ್ಯಾನವನ ನಿರ್ಮಾಣ ಮಾಡುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಆಸ್ಪತ್ರೆ, ಶಾಲಾ ಕೋಣೆಗಳು, ಕುಡಿಯುವ ನೀರು, ವಿದ್ಯುತ್, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ಪ್ರಾಮಾಣಿಕ ನಾಯಕ ಇವರಾಗಿದ್ದಾರೆ. ಇಂತಹ ಅಭಿವೃದ್ಧಿ ಪರ ಚಿಂತನೆಯುಳ್ಳ ನಾಯಕನನ್ನು ಡಿಸಿಎಂ ಮಾಡಿದರೆ ಎಲ್ಲ ಸಮಾಜದವರು ಸ್ವಾಗತಿಸುತ್ತಾರೆ" ಎಂದರು.

ಈ ಸಂದರ್ಭದಲ್ಲಿ ಕುರುಬ ಸಮಾಜದ ಪ್ರಮುಖ ಮುಖಂಡರಾದ ಯಲ್ಲಾಲಿಂಗ ಪೂಜಾರಿ ಮುಗುಟಾ, ಬಸವರಾಜ ಪೂಜಾರಿ ಮೊಗಲಾ, ಮಲ್ಲಿಕಾರ್ಜುನ ಪೂಜಾರಿ ಮೊಗಲಾ, ಸಂತೋಷ ಪೂಜಾರಿ, ಜಗನ್ನಾಥ ಆಲೂರ, ಯಲ್ಲಾಲಿಂಗ ಇವಣಿ, ನಾಗೇಶ್ ಪೂಜಾರಿ, ಶಿವಶರಣಪ್ಪ ಪೂಜಾರಿ, ದೇವಿಂದ್ರಪ್ಪ ಅಲ್ಲೂರಕರ್, ಬೀರು ಪೂಜಾರಿ, ನಾಗು ಪೂಜಾರಿ, ಸುನೀಲ ಅಮಗೋಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸೋಮವಾರ, ಜೂನ್ 1, 2026

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಹುದ್ದೆ ನೀಡಲು ಆನಂದ್ ಯರಗಲ್ ಆಗ್ರಹ

 

ಚಿತ್ತಾಪುರ: ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಅತ್ಯುತ್ತಮ ಆಡಳಿತ ನೀಡುತ್ತಿರುವ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಆನಂದ್ ಯರಗಲ್ ಒತ್ತಾಯಿಸಿದ್ದಾರೆ.

​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಕೇವಲ ಕ್ಷೇತ್ರಕ್ಕೆ ಸೀಮಿತವಾಗದೆ ಇಡೀ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಯುವ ನಾಯಕತ್ವ, ದೂರದೃಷ್ಟಿ ಮತ್ತು ಆಡಳಿತಾತ್ಮಕ ದಕ್ಷತೆ ಹೊಂದಿರುವ ಅವರಿಗೆ ಡಿಸಿಎಂ ಹುದ್ದೆ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

​"ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿ ಐಟಿ-ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ಹಿಂದುಳಿದಿರುವಿಕೆಯನ್ನು ನೀಗಿಸಲು ಅವರ ಕೈ ಬಲಪಡಿಸುವುದು ಅಗತ್ಯವಾಗಿದೆ. ಹೀಗಾಗಿ ಹೈಕಮಾಂಡ್ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು."

ಆನಂದ್ ಯರಗಲ್, ಕಾಂಗ್ರೆಸ್ ಯುವ ಮುಖಂಡ


​ಖರ್ಗೆ ಅವರಿಗೆ ಉನ್ನತ ಜವಾಬ್ದಾರಿ ನೀಡುವುದರಿಂದ ಮುಂಬರುವ ದಿನಗಳಲ್ಲಿ ಪಕ್ಷ ಮತ್ತು ಸರ್ಕಾರ ಎರಡಕ್ಕೂ ಮತ್ತಷ್ಟು ಶಕ್ತಿ ಬರಲಿದ್ದು, ಇಡೀ ಭಾಗದ ಯುವಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತಷ್ಟು ಸೌಲಭ್ಯಗಳು ಸಿಗಲು ಸಹಕಾರಿಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಸಹಾಯಕ ಕೃಷಿ ನಿರ್ದೇಶಕರ ದಿಢೀರ್ ಭೇಟಿ, ಪರಿಶೀಲನೆ

ಚಿತ್ತಾಪುರ: ತಾಲೂಕಿನ ರೈತರಿಗೆ ಗುಣಮಟ್ಟದ ಕೃಷಿ ಪರಿಕರಗಳು ಸರಿಯಾದ ದರದಲ್ಲಿ ಸಿಗುವಂತೆ ಮಾಡಲು ಮತ್ತು ಯಾವುದೇ ರೀತಿಯ ಕಪ್ಪು ಮಾರುಕಟ್ಟೆ ದಂಧೆಗೆ ಆಸ್ಪದ ನೀಡದಂತೆ ಕೃಷಿ ಇಲಾಖೆಯ ಉನ್ನತ ಅಧಿಕಾರಿಗಳ ತಂಡವು ಪಟ್ಟಣದ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್ ಭೇಟಿ ನೀಡಿ ಕಟ್ಟುನಿಟ್ಟಿನ ತಪಾಸಣೆ ನಡೆಸಿದೆ.

ಸೇಡಂ ಉಪವಿಭಾಗದ ಉಪ ಕೃಷಿ ನಿರ್ದೇಶಕರಾದ ಆನಂದಕುಮಾರ್ ಹಾಗೂ ತಾಲೂಕಿನ ಜಂಟಿ ಕೃಷಿ ನಿರ್ದೇಶಕರಾದ ಸಂಜೀವ ಕುಮಾರ್ ಮಾನ್ಕರ್ ಅವರ ನೇತೃತ್ವದಲ್ಲಿ ಕೃಷಿ ಅಧಿಕಾರಿಗಳಾದ ರವಿಂದ್ರ, ಕುಮಾರ ಮತ್ತು ಇತರ ಅಧಿಕಾರಿಗಳನ್ನೊಳಗೊಂಡ ತಂಡವು ಮೇ 29, ರಂದು ಪಟ್ಟಣದ ವಿವಿಧ ರಸಗೊಬ್ಬರ ಮತ್ತು ಬಿತ್ತನೆ ಬೀಜ ಮಾರಾಟ ಮಳಿಗೆಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಿತು.

​ಪ್ರತಿಯೊಂದು ಕೃಷಿ ಪರಿಕರ ಮಾರಾಟ ಮಳಿಗೆಯಲ್ಲೂ ಕಡ್ಡಾಯವಾಗಿ ದರ ಪಟ್ಟಿ ಹಾಗೂ ದಾಸ್ತಾನು (Stock) ವಿವರಗಳನ್ನು ಒಳಗೊಂಡ ಬೋರ್ಡ್ ಅನ್ನು ರೈತರಿಗೆ ಕಾಣಿಸುವಂತೆ ಪ್ರದರ್ಶಿಸಬೇಕು.ರಸಗೊಬ್ಬರ ಮಾರಾಟ ಮಾಡುವಾಗ ನೈಜ ಗೋದಾಮು ದಾಸ್ತಾನು ಮತ್ತು ಪಿ.ಓ.ಎಸ್ (POS) ಯಂತ್ರದಲ್ಲಿನ ದಾಸ್ತಾನು ತಾಳೆಯಾಗಬೇಕು. ರೈತರಿಗೆ ಕಡ್ಡಾಯವಾಗಿ ಪಿ.ಓ.ಎಸ್ ಯಂತ್ರದ ಮೂಲಕವೇ ರಸಗೊಬ್ಬರ ವಿತರಿಸಬೇಕು ಹಾಗೂ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿ.ಎ.ಪಿ ಬಳಕೆಯ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಬಿತ್ತನೆ ಬೀಜಗಳು, ರಸಗೊಬ್ಬರಗಳು ಹಾಗೂ ಕೀಟನಾಶಕಗಳನ್ನು ಸರ್ಕಾರ ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ದರ ವಸೂಲಿ ಮಾಡಬಾರದು.​ಹೆಚ್ಚಿನ ದರ ವಸೂಲಿ ಮಾಡಿದರೆ ಪರವಾನಗಿ ರದ್ದು.

"ರೈತರಿಂದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವುದು ಅಥವಾ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಷ್ಟೇ ಅಲ್ಲದೆ, ಅವರ ವ್ಯಾಪಾರ ಪರವಾನಗಿಯನ್ನು (License) ತಕ್ಷಣದಿಂದಲೇ ರದ್ದುಗೊಳಿಸಲಾಗುವುದು" ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ದಾಸ್ತಾನು: ರಿಯಾಯಿತಿ ದರದಲ್ಲಿ ವಿತರಣೆ ಪ್ರಾರಂಭ

ಚಿತ್ತಾಪುರ: ತಾಲೂಕಿನಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ದಾಸ್ತಾನು ಮಾಡಲಾಗಿದೆ. ತಾಲೂಕಿನಲ್ಲಿ ಯಾವುದೇ ರೀತಿಯ ಬೀಜ ಮತ್ತು ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಸಂಜೀವಕುಮಾರ ಮಾನಕ‌ರ್ ಪ್ರಕಟಣೆಗೆ ತಿಳಿಸಿದ್ದಾರೆ.

ಜೂನ್ 1 ರಂದು ಚಿತ್ತಾಪುರದ ರೈತ ಸಂಪರ್ಕ ಕೇಂದ್ರದಲ್ಲಿ ಪ್ರಾಯೋಗಿಕವಾಗಿ ರೈತರಿಗೆ ತೊಗರಿ, ಹೆಸರು ಮತ್ತು ಉದ್ದು ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರೈತರು ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಂಡು, ಆಧುನಿಕ ಕೃಷಿ ಸಲಕರಣೆ ಹಾಗೂ ಉಪಕರಣಗಳನ್ನು ಬಳಸಿ ಆರ್ಥಿಕವಾಗಿ ಯಶಸ್ವಿಯಾಗಬೇಕು ಎಂದು ಕರೆ ನೀಡಿದರು.

ರೈತರಿಗೆ ಕೃಷಿ ಇಲಾಖೆಯ ಪ್ರಮುಖ ಸೂಚನೆಗಳು:

ರೈತರು ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸುವಾಗ ಕಡ್ಡಾಯವಾಗಿ ಅಧಿಕೃತ ರಸೀದಿಯನ್ನು ಪಡೆಯಬೇಕು.ಬಿತ್ತನೆ ಮಾಡುವ ಮುನ್ನ ಕಡ್ಡಾಯವಾಗಿ ಬಿಜೋಪಚಾರ (Seed Treatment) ಮಾಡಿಯೇ ಬಿತ್ತನೆ ಮಾಡಬೇಕು.ಮುಂಗಾರು ಹಂಗಾಮಿನ ಸುರಕ್ಷತೆಗಾಗಿ ರೈತರು ಕಡ್ಡಾಯವಾಗಿ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಮಾಡಿಸಬೇಕು

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳ ವಿತರಣೆ ವಿವರ (ಪ್ರತಿ ಕ್ವಿಂಟಾಲ್‌ಗೆ):

ತೊಗರಿ: ಪೂರ್ಣ ದರ ₹13,200. ಸಾಮಾನ್ಯ ರೈತರಿಗೆ ₹2,500 ರಿಯಾಯಿತಿ ಇದ್ದು, ರೈತರು ಪಾವತಿಸಬೇಕಾದ ದರ ₹10,700. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ (SC/ST) ರೈತರಿಗೆ ₹3,750 ರಿಯಾಯಿತಿ ಇದ್ದು, ಪಾವತಿಸಬೇಕಾದ ದರ ₹9,450.

ಹೆಸರು:ಪೂರ್ಣ ದರ ₹12,700. ಸಾಮಾನ್ಯ ರೈತರಿಗೆ ₹2,500 ರಿಯಾಯಿತಿ ಇದ್ದು, ರೈತರು ಪಾವತಿಸಬೇಕಾದ ದರ ₹10,200. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತರಿಗೆ ₹3,750 ರಿಯಾಯಿತಿ ಇದ್ದು, ಪಾವತಿಸಬೇಕಾದ ದರ ₹8,950.

ಉದ್ದು: ಪೂರ್ಣ ದರ ₹11,750. ಸಾಮಾನ್ಯ ರೈತರಿಗೆ ₹2,500 ರಿಯಾಯಿತಿ ಇದ್ದು, ರೈತರು ಪಾವತಿಸಬೇಕಾದ ದರ ₹9,250. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತರಿಗೆ ₹3,750 ರಿಯಾಯಿತಿ ಇದ್ದು, ಪಾವತಿಸಬೇಕಾದ ದರ ₹8,000.ಅರ್ಹ ರೈತರ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಈ ಸೌಲಭ್ಯವನ್ನು ಪಡೆದುಕೊಳ್ಳಲು ಕೋರಲಾಗಿದೆ

ಕಾರ್ಯಕ್ರಮದಲ್ಲಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಕೃಷಿ ಅಧಿಕಾರಿಗಳಾದ ರವಿಕುಮಾರ್, ಬಸವರಾಜ್, ಸಿದ್ದರಾಮ, ಇಲಾಖೆಯ ಸಿಬ್ಬಂದಿಗಳು ಹಾಗೂ ತಾಲೂಕಿನ ಪ್ರಮುಖ ರೈತರು ಉಪಸ್ಥಿತರಿದ್ದರು.

ಶ್ರೀನಿವಾಸ್ ಸಾಗರ್ ಅವರಿಗೆ ಎಂ.ಎಲ್.ಸಿ ಸ್ಥಾನ ನೀಡಲು ಒತ್ತಾಯ.

​ಚಿತ್ತಾಪೂರ: ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದ ಕಾಂಗ್ರೆಸ್ ಪಕ್ಷದ ತಳಮಟ್ಟದ ಬಲವರ್ಧನೆಗಾಗಿ ಯಾವುದೇ ಅಧಿಕಾರದ ಹಪಹಪಿಯಿಲ್ಲದೆ ನಿರಂತರವಾಗಿ ಶ್ರಮಿಸುತ್ತಾ ಬಂದಿರುವ ಹಿರಿಯ ಮುಖಂಡರಾದ ಶ್ರೀನಿವಾಸ್ ಸಾಗರ್ ಅವರಿಗೆ ಮುಂಬರುವ ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಬೇಕೆಂದು ಉಪ್ಪಾರ ಸಮಾಜ ಹಾಗೂ ಅವರ ಅಪಾರ ಬೆಂಬಲಿಗರು ಪಕ್ಷದ ಹೈಕಮಾಂಡ್ ಮತ್ತು ರಾಜ್ಯ ನಾಯಕರಲ್ಲಿ ಮನವಿ ಮಾಡಿದ್ದಾರೆ.

​ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಬಂದಿರುವ ಶ್ರೀನಿವಾಸ್ ಸಾಗರ್ ರಾವೂರ ಅವರು ಸಮಾಜದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಜನರ ಏಳಿಗೆಗಾಗಿ ಸತತವಾಗಿ ಹೋರಾಡುತ್ತಾ ಬಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷದ ಸಂಘಟನೆಗೆ ಇವರು ನೀಡಿರುವ ಕೊಡುಗೆ ಅಪಾರವಾಗಿದೆ. ಹಿಂದುಳಿದ ವರ್ಗಗಳ ಪ್ರಮುಖ ಸಮುದಾಯವಾದ ಉಪ್ಪಾರ (ಪ್ರವರ್ಗ- 1) ಜಾತಿಗೆ ಸೇರಿರುವ ಇವರಿಗೆ ಈ ಬಾರಿ ವಿಧಾನ ಪರಿಷತ್ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.

​​ಸುದೀರ್ಘ ರಾಜಕೀಯ ಮತ್ತು ಸಾಮಾಜಿಕ ಸೇವೆ:
ಶ್ರೀನಿವಾಸ್ ಜಗನ್ನಾಥಪ್ಪ ಸಾಗರ್ ಅವರು ಕಳೆದ 40 ವರ್ಷಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದು, ಅವರ ಪ್ರಮುಖ ಕಾರ್ಯಚಟುವಟಿಕೆಗಳಾದ ​ಸಾಮಾಜಿಕ ನಾಯಕತ್ವ: 1980 ರಿಂದ ಕಲಬುರಗಿ ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾಗಿ ಸಮುದಾಯದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
​ಸ್ಥಳೀಯ ಸಂಸ್ಥೆಗಳ ಸೇವೆ: 1981 ರಲ್ಲಿ ರಾವೂರ್ ಗ್ರಾಮದ ವಿ.ಎಸ್.ಎಸ್.ಎಸ್.ಎನ್ ಸಹಕಾರ ಸಂಘಕ್ಕೆ ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ತದನಂತರ 1987 ರಿಂದ 1992 ರವರೆಗೆ ರಾವೂರ್ ಮಂಡಲ ಪಂಚಾಯತ್ ಸದಸ್ಯರಾಗಿ ಕಾಂಗ್ರೆಸ್ ಪಕ್ಷದಿಂದ ಸೇವೆ ಸಲ್ಲಿಸಿದ್ದಾರೆ. 1995 ರಲ್ಲಿ ರಾವೂರ್ ಕ್ಷೇತ್ರದಿಂದ ಚಿತ್ತಾಪುರ ತಾಲೂಕು ಪಂಚಾಯತ್ ಸಮಿತಿ ಸದಸ್ಯರಾಗಿ ಚುನಾಯಿತರಾಗಿದ್ದರು. ​ಕೃಷಿ ಮತ್ತು ಕಾರ್ಮಿಕರ ಪರ ಹೋರಾಟ: 1993 ರಲ್ಲಿ ಚಿತ್ತಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಸದಸ್ಯರಾಗಿ ಮತ್ತು 1984 ರಲ್ಲಿ ವಾಡಿ ಸಿಮೆಂಟ್ ಕಾರ್ಖಾನೆಯ ಭೂ ಸಂತ್ರಸ್ತರ ಪುನರ್ವಸತಿ ಸಂಘದ ಉಪಾಧ್ಯಕ್ಷರಾಗಿ ಭೂಮಿ ಕಳೆದುಕೊಂಡ ನೂರಾರು ಸ್ಥಳೀಯ ನಿವಾಸಿಗಳಿಗೆ ಉದ್ಯೋಗ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು.

​ಪಕ್ಷದ ಸಂಘಟನೆ: 1983-1990 ರವರೆಗೆ ಚಿತ್ತಾಪುರ ತಾಲೂಕು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, 1991-1995 ರವರೆಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಹಾಗೂ 1995-2000 ರವರೆಗೆ ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದಾರೆ.

​ರಾಜ್ಯ ಮತ್ತು ರಾಷ್ಟ್ರ ಮಟ್ಟದ ಜವಾಬ್ದಾರಿಗಳು: 1993 ರಲ್ಲಿ ಕರ್ನಾಟಕ ರಾಜ್ಯ ಆಗ್ರೋ ಇಂಡಸ್ಟ್ರೀಸ್ ಕಾರ್ಪೊರೇಶನ್‌ನ ನಾಮನಿರ್ದೇಶಿತ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.​2005 ರಿಂದ 2008 ರವರೆಗೆ ಮತ್ತು ಪ್ರಸ್ತುತ 2022 ರಿಂದ ಕೆ.ಪಿ.ಸಿ.ಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ಸದಸ್ಯರಾಗಿ ಸಕ್ರಿಯರಾಗಿದ್ದಾರೆ.​2011 ರಲ್ಲಿ ಸಿಕಂದರಾಬಾದ್‌ನ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ (Z.R.U.C.C) ಸದಸ್ಯರಾಗಿ ಮತ್ತು 2013 ರಿಂದ 2014 ರವರೆಗೆ ನವದೆಹಲಿಯ ರೈಲ್ವೆ ಬೋರ್ಡ್ ಪಿಎಸ್‍ಸಿ (ಪ್ರಯಾಣಿಕರ ಸೇವಾ ಸಮಿತಿ) ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

​"ಅವರು ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ಮುಡಿಪಾಗಿಟ್ಟಿದ್ದಾರೆ. ಪಕ್ಷವು ಅವರ ನಿಷ್ಠೆ ಮತ್ತು ಸುದೀರ್ಘ ಸೇವೆಯನ್ನು ಗುರುತಿಸಿ ವಿಧಾನ ಪರಿಷತ್ ಸದಸ್ಯರನ್ನಾಗಿ (MLC) ನಾಮನಿರ್ದೇಶನ ಮಾಡಿದರೆ, ಕಲ್ಯಾಣ ಕರ್ನಾಟಕ ಭಾಗದ ಜನರ ಧ್ವನಿಯಾಗಿ ಮತ್ತು ಪಕ್ಷದ ಬಲವರ್ಧನೆಗೆ ಇನ್ನಷ್ಟು ಶಕ್ತಿಮೀರಿ ಶ್ರಮಿಸಲು ಸಾಧ್ಯವಾಗುತ್ತದೆ.

-ಜಾಫರ್ ಮೀಯಾ
ಕಾಂಗ್ರೆಸ್ ಮುಖಂಡರು ರಾವೂರ.
 
​ಪ್ರಾದೇಶಿಕ ಸಮತೋಲನ ಮತ್ತು ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರು ಇವರ ಹೆಸರನ್ನು ಪರಿಗಣಿಸಬೇಕೆಂದು ಈ ಭಾಗದ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಪ್ರಬಲವಾಗಿ ಆಗ್ರಹಿಸಿದ್ದಾರೆ.

-ಆನಂದ ಯರಗಲ್
ಕಾಂಗ್ರೆಸ್ಶಯುವ ಮುಖಂಡರು ಚಿತ್ತಾಪೂರ 

ಹಿಂದುಳಿದವರು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಪರವಾಗಿ ಅವರು ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಇಂತಹ ನಿಷ್ಠಾವಂತ ಮತ್ತು ಹಿರಿಯ ನಾಯಕರಿಗೆ ವಿಧಾನ ಪರಿಷತ್‌ನಲ್ಲಿ ಪ್ರಾತಿನಿಧ್ಯ ನೀಡುವುದು ನ್ಯಾಯ ಸಮ್ಮತವಾಗಿದೆ 

- ಯುನೂಸ್ ಪ್ಯಾರೆ,
ಕಾಂಗ್ರೆಸ್ ಮುಖಂಡರು ರಾವೂರ.

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ಹಡಪದ ಸಮಾಜ ಆಗ್ರಹ

ಚಿತ್ತಾಪುರ: ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಹಾಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನವನ್ನು ನೀಡಬೇಕು ಎಂದು ಹಡಪದ ಸಮಾಜದ ತಾಲೂಕಾಧ್ಯಕ್ಷ ಹಾಗೂ ವಾಡಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ ಹಡಪದ ಮತ್ತು ತಾಲೂಕಾ ಪ್ರಧಾನ ಕಾರ್ಯದರ್ಶಿ ಕಲ್ಯಾಣಿ ಗುಂಡುಗುರ್ತಿ ಅವರು ಸರ್ಕಾರದ ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ಕ್ಷೇತ್ರ ಸೇರಿದಂತೆ ಇಡೀ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಯುವ ನಾಯಕರಾಗಿರುವ ಅವರು ತಂತ್ರಜ್ಞಾನ, ಗ್ರಾಮೀಣಾಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವ ಮತ್ತು ಆಡಳಿತ ವೈಖರಿಯನ್ನು ಗುರುತಿಸಿ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬುದು ಕಾಂಗ್ರೆಸ್ ಪಕ್ಷದ ಹಡಪದ ಸಮಾಜದ ಮುಖಂಡರ ಆಶಯವಾಗಿದೆ ಎಂದು ತಿಳಿಸಿದ್ದಾರೆ.

"ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ನೀಡುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತಷ್ಟು ಹೆಚ್ಚಿನ ಬಲ ಸಿಗಲಿದೆ ಮತ್ತು ಅಭಿವೃದ್ಧಿ ಕಾರ್ಯಗಳು ವೇಗವಾಗಿ ಸಾಗಲಿವೆ." 

— ರಮೇಶ ಹಡಪದ 
ಹಡಪದ ಸಮಾಜದ ತಾಲೂಕಾಧ್ಯಕ್ಷ ಹಾಗೂ ವಾಡಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿತ್ತಾಪೂರ.

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯದ ಹಿರಿಯ ನಾಯಕರು ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಿಯಾಂಕ್ ಖರ್ಗೆ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಅವರು ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಶುಕ್ರವಾರ, ಮೇ 29, 2026

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ಸಿಗಲೆಂದು ನಾಗಾವಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ; ನೂರಾರು ತೆಂಗಿನಕಾಯಿ ಒಡೆದು ಯುವ ಕಾಂಗ್ರೆಸ್ ಪ್ರಾರ್ಥನೆ.

ಚಿತ್ತಾಪುರ: ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಸಿಗಲಿ ಎಂದು ಹಾರೈಸಿ, ತಾಲ್ಲೂಕಿನ ಪ್ರಸಿದ್ಧ ಶ್ರೀ ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ದೇವಿಂದ್ರ ಯಾಬಾಳ ರವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಗೆ ವಿಶೇಷ ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಶೀಘ್ರದಲ್ಲೇ ಉಪಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ಪ್ರಾರ್ಥಿಸಿ, ದೇವಸ್ಥಾನದ ಮುಂಭಾಗದಲ್ಲಿ ನೂರಾರು ತೆಂಗಿನಕಾಯಿಗಳನ್ನು ಒಡೆಯುವ ಮೂಲಕ ವಿಶಿಷ್ಟವಾಗಿ ಹರಕೆ ತೀರಿಸಲಾಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ದೇವಿಂದ್ರ ಯಾಬಾಳ ಅವರು, ಮಾತನಾಡಿ "ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ಕ್ಷೇತ್ರ ಮಾತ್ರವಲ್ಲದೆ ಇಡೀ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ದಕ್ಷ ಆಡಳಿತ ಮತ್ತು ದೂರದೃಷ್ಟಿಯ ನಾಯಕತ್ವವನ್ನು ಗುರುತಿಸಿ ಹೈಕಮಾಂಡ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎನ್ನುವುದು ಈ ಭಾಗದ ಜನರ ಮತ್ತು ಯುವ ಸಮೂಹದ ತೀವ್ರ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ನಾಗಾವಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನೂರಾರು ತೆಂಗಿನಕಾಯಿಗಳನ್ನು ಒಡೆದು ಪ್ರಾರ್ಥಿಸಿದ್ದೇವೆ. ದೇವಿಯ ಆಶೀರ್ವಾದದಿಂದ ಅವರಿಗೆ ಶೀಘ್ರದಲ್ಲೇ ಉನ್ನತ ಸ್ಥಾನ ಸಿಗುವ ವಿಶ್ವಾಸವಿದೆ," ಎಂದು ಹೇಳಿದರು.

​ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಪಂ ಮಾಜಿ ಸದಸ್ಯ ಶಿವರುದ್ರ ಬೇಣಿ, ಹಣಮಂತ ಸಂಕನೂರ, ರಾಮಲಿಂಗ ಬಾನರ್, ಸಂತೋಷ್ ಪೂಜಾರಿ, ವಿನ್ನು ಕುಮಾರ್, ರವಿಸಾಗರ ಹೊಸಮನಿ, ಶೀವಯೋಗಿ ರಾವೂರ, ಕರಣಕುಮಾರ ಅಲ್ಲೂರ್, ಯುವ ಕಾಂಗ್ರೆಸ್‌ನ ಪ್ರಮುಖ ಪದಾಧಿಕಾರಿಗಳು, ಉಪಸ್ಥಿತರಿದ್ದು, ಪ್ರಿಯಾಂಕ್ ಖರ್ಗೆ ಅವರ ಪರವಾಗಿ ಘೋಷಣೆಗಳನ್ನು ಕೂಗಿ ಬೆಂಬಲ ವ್ಯಕ್ತಪಡಿಸಿದರು.

ಪ್ರಿಯಾಂಕ್ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸಲು ಕೆಪಿಸಿಸಿಗೆ ಮನವಿ.

ಚಿತ್ತಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಹಾಗೂ ಜನಪರ ಆಡಳಿತವನ್ನು ಮತ್ತಷ್ಟು ಬಲಪಡಿಸಲು ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಪ್ರಿಯಾಂಕ್ ಎಂ. ಖರ್ಗೆ ಅವರನ್ನು ಕರ್ನಾಟಕ ರಾಜ್ಯದ ನೂತನ ಉಪ ಮುಖ್ಯಮಂತ್ರಿಯನ್ನಾಗಿ (DCM) ನೇಮಕ ಮಾಡಬೇಕು ಎಂದು ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

​ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಜ್ಯ ಸರ್ಕಾರ ಹಾಗೂ ಪ್ರಿಯಾಂಕ ಖರ್ಗೆ ರವರ ಪರವಾಗಿ ಕಾರ್ಯಕರ್ತರು ಜಯ ಘೋಷ ಹಾಕುವ ಮೂಲಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅವರ ಮುಖಾಂತರ ಕೆಪಿಸಿಸಿ ಅಧ್ಯಕ್ಷರಿಗೆ ಈ ಅಧಿಕೃತ ಮನವಿ ಪತ್ರವನ್ನು ಸಲ್ಲಿಸಿದರು.

ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ​ರಮೇಶ ಮರಗೋಳ 
ಮಾತನಾಡಿ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ಯುವಜನರ ಆಕಾಂಕ್ಷೆಗಳು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ರಾಜ್ಯದ ಪ್ರಭಾವಿ ಯುವ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ. ತಮ್ಮ ಸರಳತೆ, ಪ್ರಾಮಾಣಿಕತೆ ಮತ್ತು ಆಡಳಿತಾತ್ಮಕ ಅನುಭವದಿಂದ ರಾಜ್ಯಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಶಿಕ್ಷಣ, ಉದ್ಯೋಗ, ತಂತ್ರಜ್ಞಾನ ಹಾಗೂ ಸಾಮಾಜಿಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಾ ಜನಸೇವೆ ಮಾಡುತ್ತಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರು ನೀಡುತ್ತಿರುವ ಕೊಡುಗೆ, ಹಿಂದುಳಿದ ವರ್ಗಗಳ ಏಳಿಗೆಯ ಕುರಿತಾದ ಬದ್ಧತೆ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಅವರು ವಹಿಸಿರುವ ಪಾತ್ರ ಶ್ಲಾಘನೀಯವಾಗಿದೆ ಹೀಗಾಗಿ ಪ್ರಿಯಾಂಕ ಖರ್ಗೆ ರವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ 
​"ರಾಜಕೀಯದಲ್ಲಿ ಹೊಸ ಚಿತ್ರಣ ಮೂಡಿಸುವ ಸಾಮರ್ಥ್ಯ ಮತ್ತು ಜನಪರ ಆಡಳಿತದ ದೃಷ್ಟಿಕೋನ ಹೊಂದಿರುವ ಪ್ರಿಯಾಂಕ್ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಿದರೆ, ರಾಜ್ಯದ ಜನತೆಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ದೊರೆಯಲಿದೆ" ಎಂದರು ನನ್ನಗೆ ಸಲ್ಲಿಸಿದ ಮನವಿ ಪತ್ರ ಕೆಪಿಸಿಸಿ ರಾಜ್ಯ ಅಧ್ಯಕ್ಷರಿಗೆ ಸಲ್ಲಿಸಿ ಒತ್ತಡ ಹೇರುವುದಾಗಿ ತಿಳಿಸಿದರು.

​ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಶಿವರುದ್ರ ಭೇಣಿ, ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸುನಿಲ್ ದೊಡ್ಡಮನಿ, ಚಂದ್ರಶೇಖರ್ ಕಾಶಿ, ಮುಕ್ತಾರ್ ಪಾಟೇಲ್, ಮಲ್ಲಿಕಾರ್ಜುನ್ ಕಾಳಗಿ, ಶಿವಕಾಂತ ಬೇಣ್ಣೂರಕರ್, ಉದಯಕುಮಾರ್ ಸಾಗರ್, ಮಲ್ಲಿಕಾರ್ಜುನ್ ಬೇಣೂರಕರ್, ಬಸವರಾಜ್ ಚಿನ್ಮಳ್ಳಿ, ರಾಮಲಿಂಗ ಬಾನರ್, ದೇವೇಂದ್ರ ಅಣಕಲ್, ಹಣಮಂತ ಸಂಕನೂರ, ಜಗನ್ ಗೌಡ ಪಾಟೀಲ್, ಮಲ್ಲಿಕಾರ್ಜುನ ಬೋಮ್ಮನಳ್ಳಿಕರ್, ಜಗನ್ನಾಥ್ ಮುಡಬೂಳಕರ್, ದೇವಿಂದ್ರ ಯಾಬಾಳ, ನಾಮದೇವ ರಾಠೋಡ್, ಶರಣು ಡೋಣಗಾವ್, ಕರಣ ಅಲ್ಲೂರ್, ಜಗದೀಶ್ ಚವ್ಹಾಣ್, ಚಂದು ಜಾಧವ್, ಶರಣಪ್ಪ ನಾಶಿ, ನಿಂಗರೆಡ್ಡಿ ಗೌಡ, ಸೂರ್ಯಕಾಂತ ಪೂಜಾರಿ, ವಿಜಯಕುಮಾರ್, ಓಂಕಾರ ರೇಷ್ಮ, ನಾಗರಾಜ, ಮಹಾಂತೇಶ ಬೊಮ್ನಳ್ಳಿ, ವಿನ್ನುಕುಮಾರ, ರವಿಸಾಗರ, ಸೇರಿದಂತೆ ಅನೇಕ ಕಾಂಗ್ರೆಸ್ ಹಿರಿಯ ಮುಖಂಡರು ಯುವ ಕಾರ್ಯಕರ್ತರು ಇದ್ದರು.

ಪ್ರಿಯಾಂಕ್ ಖರ್ಗೆ ಡಿಸಿಎಂ ಆಗಲಿ, ರುದ್ರಪ್ಪ ಲಂಬಾಣಿಗೆ ಸಚಿವ ಸ್ಥಾನ ಸಿಗಲಿ: ಬಂಜಾರ ಸಮುದಾಯದ ಮುಖಂಡರ ಆಗ್ರಹ

ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಹಾಗೂ ಬಂಜಾರ ಸಮಾಜದ ಶಾಸಕ ರುದ್ರಪ್ಪ ಲಂಬಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಬಂಜಾರ ಸಮುದಾಯದ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದರು.

ಪಟ್ಟಣದ ಬಜಾಜ್ ಕಾಂಪ್ಲೆಕ್ಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖಂಡರು ಜಂಟಿಯಾಗಿ ಈ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ಮಾತನಾಡಿದ ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಜಗದೀಶ ಚವ್ಹಾಣ, "ಕ್ಷೇತ್ರದ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಾಯಕ ಪ್ರಿಯಾಂಕ್ ಖರ್ಗೆ ಅವರು ಉಪಮುಖ್ಯಮಂತ್ರಿ ಆಗಬೇಕು ಎನ್ನುವುದು ಕಾಂಗ್ರೆಸ್ ಪಕ್ಷದ ಬಂಜಾರ ಸಮುದಾಯದ ಮುಖಂಡರ ಮತ್ತು ಸಾರ್ವಜನಿಕರ ತೀವ್ರ ಆಶಯವಾಗಿದೆ. ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ಪಕ್ಷ ಮತ್ತು ಸರ್ಕಾರವನ್ನು ಮತ್ತಷ್ಟು ಬಲಪಡಿಸಬೇಕು" ಎಂದು ಒತ್ತಾಯಿಸಿದರು.

ಬಳಿಕ ಸಮಾಜದ ಹಿರಿಯ ಮುಖಂಡರಾದ ಚಂದು ಜಾಧವ ಮಾತನಾಡಿ, "ಬಂಜಾರ ಸಮಾಜದ ಹಿರಿಯ ಶಾಸಕರಾದ ರುದ್ರಪ್ಪ ಲಂಬಾಣಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಲಂಬಾಣಿ ಅವರಿಗೆ ಸಚಿವ ಸ್ಥಾನ ಸಿಕ್ಕರೆ ನಮ್ಮ ಹಿಂದುಳಿದ ಬಂಜಾರ ಸಮುದಾಯದ ಹಾಗೂ ತಾಂಡಾಗಳ ಅಭಿವೃದ್ಧಿಗೆ ಮತ್ತು ಕಲ್ಯಾಣಕ್ಕೆ ಭಾರಿ ಸಹಕಾರಿಯಾಗುತ್ತದೆ" ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಬಂಜಾರ ಸಮಾಜದ ಪ್ರಮುಖ ಮುಖಂಡರಾದ ಭೀಮಸಿಂಗ್ ಚವ್ಹಾಣ, ದೇವಿದಾಸ್ ಚವ್ಹಾಣ, ಪ್ರವೀಣ್ ಪವಾರ್, ರಾಕೇಶ್ ಪವಾರ್, ಯಾಗಾಪುರದ ವಿಜಯಕುಮಾರ್ ಚವ್ಹಾಣ, ಗೋಪಾಲ ರಾಠೋಡ್ ಸೇರಿದಂತೆ ಸಮುದಾಯದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ನಾಗೇಶ ಹಲಗಿ ಒತ್ತಾಯ.

ಚಿತ್ತಾಪುರ: ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಹೆಮ್ಮೆಯ ನಾಯಕ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ...