ಪೋಸ್ಟ್‌ಗಳು

2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ನಮ್ಮನ್ನು ರಕ್ಷಿಸುತ್ತಿದ್ದ ಹುಡೆ, ಅಗಸಿಗೆ ರಕ್ಷಣೆ ಇಲ್ಲದಂತಾಗಿದೆ.

ಇಮೇಜ್
ಪ್ರವಾಸೋದ್ಯಮ, ಪ್ರಾಚ್ಯವಸ್ತು ಮತ್ತು ಪುರಾತತ್ವ ಹಾಗೂ ಪಂಚಾಯತ್‌ ರಾಜ್ ಇಲಾಖೆಗಳ ನಿರ್ಲಕ್ಷತನ. -ಜಗದೇವ ಎಸ್ ಕುಂಬಾರ ವಾಡಿ: ಶತ್ರು ಸೈನಿಕರು ಒಳ ನುಗ್ಗುವುದನ್ನು ಹಾಗೂ ದಾಳಿಗೆ ಪ್ರತ್ಯುತ್ತರ ನೀಡುವ ಉದ್ದೇಶದಿಂದ ಗ್ರಾಮದ, ಜನರ ರಕ್ಷಣೆಗಾಗಿ ಗ್ರಾಮದಲ್ಲಿ ಹುಡೆ ಮತ್ತು ಊರ ಮುಂದೆ ಅಗಸಿನಿ ರ್ಮಿಸಲಾಗುತ್ತಿತ್ತು ಎಂದು ಇತಿಹಾಸ ಹೇಳುತ್ತಿದೆ ಆದರೆ ಅಂದು ನಮ್ಮನ್ನು ರಕ್ಷಿಸುತ್ತಿದ್ದ ಹುಡೆ, ಅಗಸಿಗೆ ರಕ್ಷಣೆ ಇಲ್ಲದಂತಾಗಿದೆ. ಲಕ್ಷ್ಮಿಪುರವಾಡಿ ಈಗಿನ (ಗಾಂಧಿನಗರ) ಗ್ರಾಮದಲ್ಲಿ ಸುಮಾರು ವರ್ಷಗಳ ಹಳೆಯ ಹುಡೆ, ಅಗಸಿ ಇದ್ದು ಈಗ ಅವು ಅಳಿವಿನ ಅಂಚಿನಲ್ಲಿ ಇವೆ ಎಂದರೆ ಇದಕ್ಕೆಲ್ಲ ಕಾರಣ ಪ್ರವಾಸೋದ್ಯಮ, ಪ್ರಾಚ್ಯವಸ್ತು ಮತ್ತು ಪುರಾತತ್ವ ಹಾಗೂ ಪಂಚಾಯತ್‌ರಾಜ್ ಇಲಾಖೆಗಳ ನಿರ್ಲಕ್ಷ್ಯತನವೇ ಎಂಬುವುದು ತೋರುತ್ತಿದೆ. ಈ ಭಾಗದಲ್ಲಿ ಶಾತವಾಹನರು, ರಾಷ್ಟ್ರಕೂಟರು, ಕಲ್ಯಾಣ ಚಾಲುಕ್ಯರು, ಕಳಚೂರ್ಯರು, ಈ ಪ್ರದೇಶದಲ್ಲಿ ಆಳ್ವಿಕೆ ನಡೆಸಿದರು. ರಾಷ್ಟ್ರಕೂಟರು ಈಗಿನ ಮಳಖೇಡ (ಮಾನ್ಯಖೇಟ) ತಮ್ಮ ರಾಜಧಾನಿಯನ್ನಾಗಿ ಸಿಕೊಂಡಿದ್ದ ಸಮಯದಲ್ಲಿ ತಾಲೂಕು ಕೇಂದ್ರ ಸೇಡಂನಲ್ಲಿ ರಾಣಿವಾಸ, ಸಮೀಪದ ನೀಲಹಳ್ಳಿಯಲ್ಲಿ ಖಜಾನೆಯು ಇತ್ತು. ಚಿತ್ತಾಪುರ ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಟಂಕಣಶಾಲೆ ದಂಡೋತಿಯಲ್ಲಿ ಸೈನ್ಯದ ವಾಸಸ್ಥಳವಿತ್ತು. ಅಷ್ಟೇ ಅಲ್ಲದೆ ನಾಗವಿ ಎಲ್ಲಮ್ಮ ದೇವಾಲಯ ಹಾಗೂ ಹೊನಗುಂಟಾ ಚಂದ್ರಲಾ ಪರಮೇಶ್ವರಿ ದೇವಾಲಯ, ಮಹಬೂಬ್ ಸುಭಾನಿ ದರ್ಗಾ, ಚರ್ಚ್ ಗಳು...

ಕಸಾಪ ಚುನಾವಣೆ: ಬಿರುಸಿನಿಂದ ನಡೆದ ಮತದಾನ.

ಇಮೇಜ್
ಚಿತ್ತಾಪುರ: ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಈಗಾಗಲೇ ಮತದಾನ ಬೆಳಗ್ಗೆ 8 ಗಂಟೆಯಿಂದಲೇ ಬಿರುಸಿನಿಂದ ಮತದಾನ ಆರಂಭಗೊಂಡಿದೆ. ಪಟ್ಟಣದ ತಹಸೀಲ್ ಕಚೇರಿಯಲ್ಲಿ ನಡೆಯುತ್ತಿರುವ ಕಸಾಪ ಚುನಾವಣೆಯ ಮತದಾನ ಶಾಂತಿಯುತವಾಗಿ ನಡೆಯುತ್ತಿದ್ದು.ಮತದಾರರು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಪರಿಷತ್ತು ಕೊಟ್ಟಿರುವ ಗುರುತಿನ ಚೀಟಿ, ಆಧಾರ್‌ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಸರ್ಕಾರದ ಮಾನ್ಯತೆ ಹೊಂದಿರುವ ಮತದಾರರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ತಾಲೂಕಿನಲ್ಲಿ ಒಟ್ಟು 439 ಮತದಾರರಲ್ಲಿ 12 ಗಂಟೆ ಸಮಯದವರೆಗೆ 124 ರಷ್ಟು ಮತದಾನ ಆಗಿದೆ ಎಂದು ಕಸಾಪ ತಾಲೂಕು ಚುನಾವಣಾ ಅಧಿಕಾರಿ ಮೋಹನ್ ರೆಡ್ಡಿ ತಿಳಿಸಿದ್ದಾರೆ. 11ಗಂಟೆಯಿಂದ ಕೆಲವೊತ್ತು ಮಳೆಸುರಿದರಿಂದ ಮತದಾನಕ್ಕೆ ಅಡ್ಡಿ ಉಂಟಾಗಿತ್ತು ಆದರೂ ಸಹ ಮತದಾರರು ಕ್ರುಷರ್ ನಲ್ಲಿ ಬಂದು ಮತದಾನ ಮಾಡಿದರು. ಈ ಚುನಾವಣೆಯಲ್ಲಿ ರಾಜ್ಯಾದ್ಯಂತ 3 ಲಕ್ಷಕ್ಕೂ ಅಧಿಕ ಮಂದಿ ಮತದಾರರಿದ್ದಾರೆ. ಸುಮಾರು 410 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಮಹೇಶ್ ಜೋಶಿ, ಮ.ಚಿ ಕೃಷ್ಣ, ವ.ಚ ಚನ್ನೇಗೌಡ, ಸಿ.ಕೆ ರಾಮೇಗೌಡ, ಸಂಗಮೇಶ ಬಾದವಾಡಗಿ, ರಾಜಶೇಖರ ಮುಲಾಲಿ, ಬಾಡದ ಭದ್ರಿನಾಥ್, ಬಸವರಾಜ ಶಿ. ಹಳ್ಳೂರ, ಶಿವರಾಜ ಪಾಟೀಲ, ಸರಸ್ವತಿ ಶಿವಪ್ಪ, ವೈ ರೇಣುಕಾ,ಕೆ. ರತ್ನಾಕರ ಶೆಟ್ಟಿ, ಪ್ರಮೋದ್ ಹಳಕಟ್ಟಿ, ಕೆ. ರವಿ ಅಂಬೇಕರ, ಮಾಯಣ್ಣ, ಸುಧೀಂದ್ರರಾವ್, ಸ...

ಇಎಸ್ಐ ಮೆಡಿಕಲ್ ಕಾಲೇಜಿನಲ್ಲಿ 15 ದಿನಗಳ ಸ್ವಚ್ಛತಾ ಆಂದೋಲನ.

ಇಮೇಜ್
ಕಲಬುರ್ಗಿ: ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಕಾಲೇಜುಗಳಲ್ಲಿ ನವೆಂಬರ್ 1 ರಿಂದ 15ರ ವರೆಗೆ ಸ್ವಚ್ಛತಾ ಆಂದೋಲನಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಶಿಕ್ಷಣ ಇಲಾಖೆ ಅವರು ಆದೇಶ ಅನ್ವಯ ಇಎಸ್ಐ ಮೆಡಿಕಲ್ ಕಾಲೇಜಿನಲ್ಲಿ 15 ದಿನಗಳ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ನಡೆಯಿತು. ಪಟ್ಟಣದ ಇಎಸ್ಐ ಆಸ್ಪತ್ರೆಯ ಮೆಡಿಕಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಚ್ಚತಾ ಆಂದೋಲನ ಕಾರ್ಯಕ್ರಮದಲ್ಲಿ  ಇಎ‌ಸ್ಐನ್ ಡೀನ್ ಇವೋನಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು   ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಎಲ್ಲ ಉದ್ಯೋಗಿಗಳಿಗೆ ಸ್ವಚ್ಛತಾ ಪ್ರತಿಜ್ಞೆಯನ್ನು ನೀಡಿ. ಆವರಣದ ಎಲ್ಲಾ ಸ್ಥಳಗಳಲ್ಲಿ ಸ್ಯಾನಿಟೈಜರ್ ಮಾಡಿ, ಕಡ್ಡಾಯವಾಗಿ ಮಾಸ್ಕ್ ಧರಿ‌ಸಲು ಸೂಚಿಸಿ, ಸ್ವಚ್ಛತಾ  ಕಾರ್ಯಾಗಾರ ಹಾಗು ಕೋವಿಡ್ ೧೯ ಮುನ್ನೆಚ್ಚರಿಕಾ ಕ್ರಮಗಳನ್ನು ಹಮ್ಮಿಕೊಂಡು ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಈ ಅವಧಿಯಲ್ಲಿ ರಸ್ತೆ, ಶೌಚಾಲಯ, ವಾರ್ಡ್ ಮತ್ತು ಗಿಡ ಮರಗಳನ್ನು ನೆಡುವ ಬಗ್ಗೆ ಒತ್ತುಕೊಡಲಾಯಿತು ಎಂದರು. ಇಎಸ್ಐ ಮೆಡಿಕಲ್ ಕಾಲೇಜಿನ ಮತ್ತು ಆಸ್ಪತ್ರೆಯಿಂದ ಜೈವಿಕ -ತ್ಯಾಜ್ಯ ನಿರ್ವಹಣೆ, ತೋಟಗಾರಿಕೆ ಮತ್ತು ಶಕ್ತಿಯ ಸಂರಕ್ಷರಣೆಗಾಗಿ ಸ್ತಪ್ ನೀರಿನ ಬಳಕೆ ಇತ್ಯಾದಿಗಳೊಂದಿಗೆ ಈ ಕೆಳಗಿನ  ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.  ಎಲ್ಲಾ ಕಟ್ಟಡಗಳ ಬೆಳಕಿನ ವ್ಯವಸ್ಥೆ,ಸೂಕ್ತವಾದ ಸ್ಥಳಗಳಲ್ಲಿ ಡಸ್ಟ್ ಬಿನ್, ಸ್ಯಾನಿಟೈಜರ್ ಹಾಗು ಹ್ಯಾ...

ಬಿಜೆಪಿಗರು ನನ್ನೊಂದಿಗೆ ಬಹಿರಂಗ ಚರ್ಚೆಗೆ ಬರಲಿ: ಖರ್ಗೆ.

ಇಮೇಜ್
ಚಿತ್ತಾಪುರ: ಕಾಂಗ್ರೆಸ್ ಸರ್ಕಾರದ ಅವಧಿಯ ಅಭಿವೃದ್ಧಿ ಹಾಗೂ ಪ್ರಸ್ತುತ ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮದ ಬಗ್ಗೆ ಬಿಜೆಪಿಗರು ಬಹಿರಂಗ ಚರ್ಚೆ ಬರಲಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು. ತಾಲೂಕಿನ ಮಾಡಬೂಳ ಗ್ರಾಮದಲ್ಲಿ 2.79 ಕೋಟಿ‌ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಗೊಳ್ಳಲಿರುವ ಜಲಜೀವನ ಮಿಷನ್ ಅಡಿಯಲ್ಲಿ ಮನೆ-ಮನೆಗೆ ನೀರು ಒದಗಿಸುವ ಯೋಜನೆ, ಕರ್ನಾಟಕ ಪಬ್ಲಿಕ್ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಹಾಗೂ ಘನತ್ಯಾಜ್ಯ ಘಟಕ ನಿರ್ಮಾಣ ಯೋಜನೆಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು ಕಲ್ಯಾಣ‌ ಕರ್ನಾಟಕ ಅದರಲ್ಲೂ ಕಲಬುರಗಿ ಎಂದರೆ ಬಿಜೆಪಿ ಸರ್ಕಾರಕ್ಕೆ ಅಲರ್ಜಿಯಾಗಿದೆ. ಎರಡುವರೆ ವರ್ಷದ ಅಧಿಕಾರಾವಧಿಯಲ್ಲಿ ಇಬ್ಬರು ಸಿಎಂ ಗಳನ್ನು ಬದಲಾವಣೆ ಮಾಡಿದ್ದೆ ಬಿಜೆಪಿ ಪಕ್ಷದ ಸಾಧನೆ ಏನೂ ಎಂದು ಟೀಕಿಸಿದರು. ಅಭಿವೃದ್ದಿ ವಿಚಾರದಲ್ಲಿ ನಮ್ಮೊಂದಿಗೆ ಬಹಿರಂಗ ಚರ್ಚೆಗೆ  ಬಿಜೆಪಿಗರು ಬರಲಿ ನಾನು ಅವರಿಗೆ ಉತ್ತರಿಸುತ್ತೇನೆ, ಆಗ ನಿಮ್ಮೆಲ್ಲರ ಸೇವೆ ಮಾಡಲು ಯಾರು ಇರಬೇಕು ಎಂದು ನೀವೆ  ನಿರ್ಧರಿಸಿ ಎಂದು ಸವಾಲ್ ಹಾಕಿದರು. ಕಳೆದ ವರ್ಷದ ಹಿಂದೆ ಇದೇ ದಿನದಂದು ನೋಟ್ ಬ್ಯಾನ್ ಮಾಡಿದ ಮೋದಿ ಸರ್ಕಾರ ಜನಸಾಮಾನ್ಯರ ಸಂಕಟಕ್ಕೆ ಕಾರಣವಾದರು. ಜೀರೋ ಅಕೌಂಟ್ ಓಪನ್ ಮಾಡಿಸಿ ಪ್ರತಿಯೊಬ್ಬರ ಅಕೌಂಟ್ ನಲ್ಲಿ ಹದಿನೈದು ಲಕ್ಷ ಹಾಕುವುದಾಗಿ ಹೇಳಿದವರು ಒಂದು ರೂಪಾಯಿನೂ ಹಾಕಲಿಲ್ಲ. ಜನಧನ್ ಯೋಜನೆ ಜನರಿಂದ ಧನ ಕೊಳ್ಳೆಹೊಡೆಯುವ ಯೋಜನೆಯಾಗಿ ಪರಿವ...

ಅಪ್ಪುವಿನ ಗೋಶಾಲೆ ಮತ್ತು ಅನಾಥಾಶ್ರಮದ ಜವಾಬ್ದಾರಿ ದರ್ಶನ್ ತೆಗೆದುಕೊಂಡಿದ್ದಾರೆ.

ಇಮೇಜ್
ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಅಂತ್ಯ ಕ್ರಿಯೆಗಳು ಸರ್ಕಾರದ ಗೌರವಗಳೊಂದಿಗೆ ನೆರವೇರಿಸಿದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದೇವರು ಧೈರ್ಯ ಕೊಡಲಿ ಎನ್ನುವುದೇ ಎಲ್ಲರ ಆಶಯ. ಕುಟುಂಬಸ್ಥರು, ಸ್ನೇಹಿತರು ಅಭಿಮಾನಿ ಬಳಗ ಸೇರಿದಂತೆ ಎಲ್ಲರೂ ಅಪ್ಪು ನಿಧನ ದಿಂದ ಬಹಳ ದು:ಖಿತರಾಗಿರಗಿದ್ದಾರೆ. ಇತ್ತೀಚೆಗೆ ತಮಿಳು ಚಿತ್ರರಂಗದ ನಟ ವಿಶಾಲ್ ಅವರು ಅಪ್ಪು ಅವರು ಓದಿಸುತ್ತಿದ್ದ, 1800 ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ಕಾರ್ಯಕ್ರಮ ಒಂದರಲ್ಲಿ ಹೇಳಿಕೆ ನೀಡಿದ್ದರು.  ಇದೀಗ ನಟ ದರ್ಶನ್ ಅವರು ಸಹ ಅಪ್ಪು ಅವರ ಬಗ್ಗೆ ಮುಖ್ಯವಾದ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ಪುನೀತ್ ರಾಜ್ ಕುಮಾರ್ ಅವರು ನೋಡಿಕೊಳ್ಳುತ್ತಿದ್ದ ಗೋಶಾಲೆ ಮತ್ತು ಅನಾಥಾಶ್ರಮದ ಜವಾಬ್ದಾರಿ ನಾನು ನೋಡಿಕೊಳ್ಳುವುದಾಗಿ ನಟ ದರ್ಶನ್ ಹೇಳಿದ್ದಾರೆ.ಇದೀಗ ಅಪ್ಪು ಅವರ ಕೆಲಸವನ್ನು ಮುಂದುವರೆಸಿಕೊಂಡು ಹೋಗಲಿದ್ದಾರೆ.

ಪುನೀತ್,ಅನುಮಾನಾಸ್ಪದ ಸಾವು: ದಾಖಲಾಯ್ತು ದೂರು.

ಇಮೇಜ್
ಬೆಂಗಳೂರು: ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣದಿಂದಾಗಿ ಇಡೀ ಕರ್ನಾಟಕವೇ ಶೋಕಸಾಗರದಲ್ಲಿ ಮುಳುಗಿದೆ. ಅಪ್ಪು ದೈಹಿಕವಾಗಿ ನಮ್ಮನ್ನು ಆಗಲಿ 6 ದಿನಗಳೇ ಕಳೆದರೂ ಅವರ ಅಗಲಿಕೆಯ ನೋವಿಂದ ಹೊರಬರಲು ಅಭಿಮಾನಿಗಳಿಂದ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ನಟ ಪುನೀತ್ ರಾಜ್ ಕುಮಾರ್ ಅನುಮಾನಾಸ್ಪದ ಸಾವಿನ ಕುರಿತು ಸಮಗ್ರ ತನಿಖೆ ಮಾಡಿ ಸತ್ಯಾಸತ್ಯತೆಯನ್ನ ಜನರ ಮುಂದಿಡಬೇಕೆಂದು ಅಪ್ಪು ಅಭಿಮಾನಿಯಾದ ಅರುಣ್ ಪರಮೇಶ್ವರ್ ಎಂಬುವವರು ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಇರೋದೇನು? ೨೯.೧೦.೨೦೨೧ ಆ ದಿನದಂದು ಪುನೀತ್ ರಾಜಕುಮಾರ್ ಅವರ ಸಾವಿನ ಸುದ್ದಿ ಮಾಧ್ಯಮದ ಮೂಲಕ ಸಮಗ್ರ ನಾಡಿನ ಕರ್ನಾಟಕ ಜನರಿಗೆ ತಿಳಿಯುತ್ತದೆ ಹಾಗೂ ಅವರು ಮನೆಯಿಂದ ಕ್ಲಿನಿಕ್ ಗೆ ಹೋಗಬೇಕಾದರೆ ಆರೋಗ್ಯವಾಗಿಯೇ ಹೋಗಿರುತ್ತಾರೆ. ಕ್ಲಿನಿಕ್ನಲ್ಲಿ ಯಾವ ರೀತಿಯ ತಪಾಸಣೆ ನಡೆಸಲಾಯಿತು ಹಾಗೂ ನಡೆಸಿದ ಮೇಲೆ ವಿಕ್ರಂ ಆಸ್ಪತ್ರೆಗೆ ಹೋಗಲು ಯಾಕೆ ತಡವಾಯಿತು, ವಿಕ್ರಮ ಹಾಸ್ಪಿಟಲ್ ಗೆ 15 ನಿಮಿಷ ತಡವಾಗಿ ಹೋಗಲು ಏನು ಕಾರಣ? ಎಲ್ಲಾ ಅನುಮಾನಗಳಿದ್ದು ಇದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕು. ಹಾಗೂ ಕ್ಲಿನಿಕ್ ನಲ್ಲಿರುವ ಸಿಸಿಟಿವಿ ವಿಡಿಯೋವನ್ನು ಯಾಕೆ ಮಾಧ್ಯಮಗಳಿಗೆ ನೀಡುತ್ತಿಲ್ಲ ಹಾಗೂ ಅಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷವೇ ಪುನೀತ್ ರಾಜಕುಮಾರ್ ಅವರ ಸಾವಿಗೆ ಕಾರಣವೇ ಹಾಗೂ ಅವರು ಅಷ್ಟು ತುರ್ತುಪರಿಸ್ಥಿತಿಯಲ್ಲಿ ಇದ್ದರೂ ಸಹ ಅವರನ್ನು ಆಂಬುಲೆನ...

ಭಾಷೆಗೆ ಆದ್ಯತೆ ನೀಡಿ, ಉಳಿಸಿ, ಬೆಳೆಸಿ: ಸಿದ್ದುಗೌಡ

ಇಮೇಜ್
ಚಿತ್ತಾಪುರ: ರಾಜ್ಯದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಿ, ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕನ್ನಡಿಗರೆಲ್ಲರೂ ಮಾಡಲು ಮುಂದಾಗಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸಿದ್ದುಗೌಡ ಅಫಜಲಪೂರಕರ್ ಹೇಳಿದರು. ಪಟ್ಟಣದ ತಹಸೀಲ್ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ನಿಮಿತ್ಯ ಕನ್ನಡಾಂಬೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ತಹಸೀಲ್ ಕಚೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕನ್ನಡ ಭಾಷೆಗೆ ಮೊದಲ ಆದ್ಯತೆಯನ್ನು ನೀಡಬೇಕು. ಹಾಗೆಂದು ಬದುಕಿನ ಭಾಷೆಯಾದ ಇಂಗ್ಲಿಷ್‌ ಅನ್ನು ಕಡೆಗಣಿಸಬಾರದು. ಕನ್ನಡ ಭಾಷೆ ಕೇವಲ ಒಂದೆರಡು ದಿನದಿಂದ ನಿರ್ಮಾಣವಾದದ್ದು ಅಲ್ಲ. ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಕೇವಲ ಭಾಷಣ ಮಾಡುವುದರಿಂದ ಭಾಷೆಯ ಅಭಿವೃದ್ಧಿ ಸಾಧ್ಯವಿಲ್ಲ. ಭಾಷೆ ಬಗ್ಗೆ ಚರ್ಚೆ ನಡೆದಾಗ ಮಹತ್ವದ ಅಂಶಗಳನ್ನು ದಾಖಲೀಕರಣ ಮಾಡುವ ಅಗತ್ಯ ಇದೆ ಎಂದರು. ಕರವೇ ತಾಲೂಕು ಅಧ್ಯಕ್ಷ ನರಹರಿ ಕುಲಕರ್ಣಿ ಮಾತನಾಡಿ ನಾವು ಕನ್ನಡ ಉಳಿಸಿ ಬೆಳೆಸುವ ಜೊತೆಗೆ ನಮ್ಮ ಸುತ್ತಲೂ ವಾಸವಾಗಿರುವ ಬೇರೆ ರಾಜ್ಯದ ಜನರಿಗೂ ಕನ್ನಡ ಕಲಿಸುವ ಮೂಲಕ ನಮ್ಮ ಭಾಷೆಯ ರಕ್ಷಣೆಗೆ ಮುಂದಾಗಬೇಕಿದೆ. ಆ ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸುವ ಬದ್ಧತೆಯನ್ನು ನಾವು ಮೆರೆಯಬೇಕಿದೆ ಎಂದರು. ತಹಸೀಲ್ದಾರ್ ಉ...