ಶುಕ್ರವಾರ, ನವೆಂಬರ್ 5, 2021

ಅಪ್ಪುವಿನ ಗೋಶಾಲೆ ಮತ್ತು ಅನಾಥಾಶ್ರಮದ ಜವಾಬ್ದಾರಿ ದರ್ಶನ್ ತೆಗೆದುಕೊಂಡಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಅಂತ್ಯ ಕ್ರಿಯೆಗಳು ಸರ್ಕಾರದ ಗೌರವಗಳೊಂದಿಗೆ ನೆರವೇರಿಸಿದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದೇವರು ಧೈರ್ಯ ಕೊಡಲಿ ಎನ್ನುವುದೇ ಎಲ್ಲರ ಆಶಯ.

ಕುಟುಂಬಸ್ಥರು, ಸ್ನೇಹಿತರು ಅಭಿಮಾನಿ ಬಳಗ ಸೇರಿದಂತೆ ಎಲ್ಲರೂ ಅಪ್ಪು ನಿಧನ ದಿಂದ ಬಹಳ ದು:ಖಿತರಾಗಿರಗಿದ್ದಾರೆ. ಇತ್ತೀಚೆಗೆ ತಮಿಳು ಚಿತ್ರರಂಗದ ನಟ ವಿಶಾಲ್ ಅವರು ಅಪ್ಪು ಅವರು ಓದಿಸುತ್ತಿದ್ದ, 1800 ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ಕಾರ್ಯಕ್ರಮ ಒಂದರಲ್ಲಿ ಹೇಳಿಕೆ ನೀಡಿದ್ದರು. 

ಇದೀಗ ನಟ ದರ್ಶನ್ ಅವರು ಸಹ ಅಪ್ಪು ಅವರ ಬಗ್ಗೆ ಮುಖ್ಯವಾದ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ.

ಇಷ್ಟು ದಿನಗಳ ಕಾಲ ಪುನೀತ್ ರಾಜ್ ಕುಮಾರ್ ಅವರು ನೋಡಿಕೊಳ್ಳುತ್ತಿದ್ದ ಗೋಶಾಲೆ ಮತ್ತು ಅನಾಥಾಶ್ರಮದ ಜವಾಬ್ದಾರಿ ನಾನು ನೋಡಿಕೊಳ್ಳುವುದಾಗಿ ನಟ ದರ್ಶನ್ ಹೇಳಿದ್ದಾರೆ.ಇದೀಗ ಅಪ್ಪು ಅವರ ಕೆಲಸವನ್ನು ಮುಂದುವರೆಸಿಕೊಂಡು ಹೋಗಲಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಿ: ಪ್ರಭುರೆಡ್ಡಿ ಸೂಚನೆ.

ಚಿತ್ತಾಪುರ: ಮುಂಬರುವ ಬೇಸಿಗೆ ಮತ್ತು ಮುಂಗಾರು ಮಳೆಗಾಲದ ಆರಂಭದ ಅವಧಿಯಲ್ಲಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ...