ಯೋಗ ಮಾಡುವ ಮೂಲಕ ನಿರೋಗಿಯಾಗಿ:ಸಾಲಿಮಠ.
ವಾಡಿ: ಜೀವನದಲ್ಲಿ ಪ್ರತಿಯೊಬ್ಬರೂ ಯೋಗ ಮಾಡುವುದರ ಮೂಲಕ ನಿರೋಗಿಯಾಗಿ ಜೀವನ ನಡೆಸಲು ಸಾದ್ಯ ಎಂದು ಭಾರತ ಸ್ವಾಭಿಮಾನ ಟ್ರಸ್ಟನ ಜಿಲ್ಲಾ ಅದ್ಯಕ್ಷರ ಶಿವಾನಂದ ಸಾಲಿಮಠ ಹೇಳಿದರು.
ರಾವೂರ ಗ್ರಾಮದ ಶ್ರೀ ಸಿದ್ಧಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಭಾರತ ಸ್ವಾಭಿಮಾನ ಟ್ರಸ್ಟ, ಪತಾಂಜಲಿ ಯೋಗ ಪೀಠದ ವತಿಯಿಂದ ಹಮ್ಮಿಕೊಂಡಿದ್ದ ಯೋಗದಿಂದ ಆಜಾದಿಕೆ ಅಮೃತ ಮಹೋತ್ಸವದ ಅಂಗವಾಗಿ ಯೋಗದಿಂದ ಆರೋಗ್ಯ ಎಂಬ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕರೋನಾ ಬಂದ ಮೇಲೆ ಜನರಿಗೆ ಯೋಗದ ಮಹತ್ವ ಅರ್ಥವಾಗುತ್ತಿದೆ. ಇವತ್ತಿನ ಕಲುಷಿತ ಸಮಾಜದಲ್ಲಿ ದೀರ್ಘಕಾಲ ಆರೋಗ್ಯಯುತವಾಗಿ ಜೀವನ ಸಾಗಿಸಲು ಯೋಗ ಅತ್ಯಂತ ಅವಶ್ಯಕ. ಪಿಜ್ಜಾ, ಬರ್ಗರ್ ನಂತಹ ಜಂಕ್ಫುಡ್ ನಿಂದ ಚಿಕ್ಕ ವಯಸ್ಸಿನಲ್ಲೇ ಬರಬಾರದ ಖಾಯಿಲೆಗಳು ಬರುತ್ತಿವೆ. ಪಾಶ್ಚಾತ್ಯ ಸಂಸ್ಕೃತಿಯಿಂದ ನಮ್ಮ ಆಹಾರ ಪದ್ದತಿಯೂ ಬದಲಾಗಿರುವುದು ದುರಂತ.
ದೇಶಿಯ ಆಹಾರ ಪದ್ದತಿಯಲ್ಲಿ ರೊಟ್ಟಿ, ಚಪಾತಿ, ಕಾಳುಗಳು, ತರಕಾರಿ, ಮೊಸರು, ಹಣ್ಣುಗಳನ್ನು ಸೇವಿಸಿದರೆ ಖಾಯಿಲೆಗಳು ಬರುವುದಿಲ್ಲ. ಒಂದು ವೇಳೆ ಬಂದರೂ ನಾವು ನಿತ್ಯ ಮಾಡುವ ಯೋಗ, ಸೂರ್ಯ ನಮಸ್ಕಾರಗಳು, ಪ್ರಾಣಾಯಾಮಗಳು ನಮಗೆ ರೋಗ ಬರದಂತೆ ಮಾಡುತ್ತವೆ.ವಿದ್ಯಾರ್ಥಿಗಳು ಈಗಿನಿಂದಲೇ ಯೋಗಭ್ಯಾಸವನ್ನು ರೂಢಿಸಿಕೊಂಡರೆ ನಿಮ್ಮ ಆರೋಗ್ಯದ ಜೊತೆ ಜ್ಞಾಪಕ ಶಕ್ತಿಯು ವೃದ್ಧಿಸುವುದಲ್ಲದೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಹೇಳಿದರು.
ಯೋಗ ಶಿಕ್ಷಕ ವೀರಣ್ಣ ಯಾರಿ ಮಾತನಾಡಿ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಯೋಗದ ಮೂಲಕ ಆರೋಗ್ಯದ ಅರಿವು ಮೂಡಿಸುವ ಅಗತ್ಯವಿದೆ. ಅನೇಕ ದುಶ್ಚಟಗಳಿಂದ ವಿದ್ಯಾರ್ಥಿಗಳು, ಯುವಕರು ತಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ದಯವಿಟ್ಟು ನಿಮ್ಮ ಮುಂದಿನ ಉತ್ತಮ ಆರೋಗ್ಯಯುತ ಬದುಕಿಗಾಗಿ ಯೋಗ ಮಾಡಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಂಚೂರು ಸವಿತಾ ಪೀಠದ ಶ್ರೀದರಾನಂದ ಸರಸ್ವತಿ ಸ್ವಾಮಿಗಳು,ಯೋಗ ಶಿಕ್ಷಕ ಮೋಹನ ಗಂಟಲಿ,ಶಿಕ್ಷಕ ಸಿದ್ಧಲಿಂಗ ಬಾಳಿ,ಶಿವಕುಮಾರ ಸರಡಗಿ, ಭೀಮಾಶಂಕರ ಬಮ್ಮನಳ್ಳಿ, ಸುಗುಣಾ ಕೋಳ್ಕೂರ, ಭುವನೇಶ್ವರಿ,ರಾಧಾ ರಾಠೋಡ, ಮಂಜುಳಾ ಪಾಟೀಲ, ವಿಜಯಲಕ್ಷ್ಮಿ ಬಮ್ಮನಳ್ಳಿ, ಇದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ