ಪೋಸ್ಟ್‌ಗಳು

ಅಕ್ಟೋಬರ್, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪುನೀತ್‌ ರಾಜ್​ಕುಮಾರ್​ ಪ್ರಥಮ ಪುಣ್ಯಸ್ಮರಣೆ: ಗುತ್ತೇದಾರ್ ಕುಟುಂಬದಿಂದ ಪೂಜೆ.

ಇಮೇಜ್
ಚಿತ್ತಾಪೂರ: ಚಲನಚಿತ್ರ ನಟ, ಪವರ್​​ಸ್ಟಾರ್​ ಪುನೀತ್ ರಾಜ್​ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಗುತ್ತೇದಾರ್ ಕುಟುಂಬದಿಂದ ಪುನೀತ್ ರಾಜಕುಮಾರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪ್ರಥಮ ಪುಣ್ಯಸ್ಮರಣೆ ಆಚರಿಸಿದರು. ಈ ಸಂದರ್ಭದಲ್ಲಿ ಫ್ರೌಢ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಕಸಾಪ ನಿಕಟಪೂರ್ವ ಅಧ್ಯಕ್ಷರು ಹಾಗೂ ವಿಜಯ ಕರ್ನಾಟಕ ಪತ್ರಕರ್ತರಾದ ಕಾಶಿನಾಥ ಗುತ್ತೇದಾರ್,  ಜಗದೇವ ಕುಂಬಾರ,  ಎಂ.ಡಿ ಮಶಾಖ್, ಹರೀಶ್, ಭವಾನಿ, ಕವಿತಾ,ವೆಂಕಟೇಶ, ಸೇರಿದಂತೆ ಇತರರು ಇದ್ದರು.

ಕದ್ದರ್ಗಿ ಶಾಲೆಯಲ್ಲಿ ಕೋಟಿ ಕಂಠ ಗಾಯನ.

ಇಮೇಜ್
ಚಿತ್ತಾಪೂರ: ಕನ್ನಡ ಹಬ್ಬ, ಕರುನಾಡ ರಾಜ್ಯೋತ್ಸವಕ್ಕೆ ಮೆರುಗು ನೀಡುವುದಕ್ಕೆ ಉತ್ಸಾಹ, ಲವಲವಿಕೆ ತುಂಬುವಂತೆ ಅದಕ್ಕೆ ಪೂರ್ವಭಾವಿಯಾಗಿ ಕದ್ದರ್ಗಿ ಶಾಲೆಯ ಕೋಟಿ ಕಂಠ ಗಾಯನ ನಡೆಯಿತ್ತು. ತಾಲ್ಲೂಕಿನ ಕದ್ದರ್ಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ  ಕೋಟಿ ಕಂಠ ಗಾಯನದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವೃಂದದವರು ಭಾಗವಹಿಸಿದರು. ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ, ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು. ಎಂಬ ಹಾಡುಗಳು ಹಾಡಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಚಂದ್ರಕಾಂತ ಐನಾಪೂರ, ಶಿಕ್ಷಕಿ ನಾಗಮ್ಮ ಕುಂಬಾರ, ಅತಿಥಿ ಶಿಕ್ಷಕ ಜಗದೇವ ಕುಂಬಾರ ಸೇರದಂತೆ ವಿದ್ಯಾರ್ಥಗಳು ಇದ್ದರು.