ಜನತೆಯ ಸುದ್ದಿ ವಾಹಿನಿ

ಶನಿವಾರ, ಅಕ್ಟೋಬರ್ 29, 2022

ಕದ್ದರ್ಗಿ ಶಾಲೆಯಲ್ಲಿ ಕೋಟಿ ಕಂಠ ಗಾಯನ.

ಚಿತ್ತಾಪೂರ: ಕನ್ನಡ ಹಬ್ಬ, ಕರುನಾಡ ರಾಜ್ಯೋತ್ಸವಕ್ಕೆ ಮೆರುಗು ನೀಡುವುದಕ್ಕೆ ಉತ್ಸಾಹ, ಲವಲವಿಕೆ ತುಂಬುವಂತೆ ಅದಕ್ಕೆ ಪೂರ್ವಭಾವಿಯಾಗಿ ಕದ್ದರ್ಗಿ ಶಾಲೆಯ ಕೋಟಿ ಕಂಠ ಗಾಯನ ನಡೆಯಿತ್ತು.

ತಾಲ್ಲೂಕಿನ ಕದ್ದರ್ಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 
ಕೋಟಿ ಕಂಠ ಗಾಯನದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವೃಂದದವರು ಭಾಗವಹಿಸಿದರು.

ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ,
ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ, ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು. ಎಂಬ ಹಾಡುಗಳು ಹಾಡಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಚಂದ್ರಕಾಂತ ಐನಾಪೂರ, ಶಿಕ್ಷಕಿ ನಾಗಮ್ಮ ಕುಂಬಾರ, ಅತಿಥಿ ಶಿಕ್ಷಕ ಜಗದೇವ ಕುಂಬಾರ ಸೇರದಂತೆ ವಿದ್ಯಾರ್ಥಗಳು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ...