ನೇಟೆರೋಗ ತೊಗರಿ ಬೆಳೆ ನಾಶ, ಪರಿಹಾರಕ್ಕೆ ಆಗ್ರಹ.

ಚಿತ್ತಾಪೂರ: ತೊಗರಿ ಬೆಳೆಗೆ ನೇಟೆರೋಗ ಬಾದೆಯಿಂದ ಚಿತ್ತಾಪೂರ, ಕಾಳಗಿ, ಹಾಗೂ ಶಹಬಾದ ತಾಲೂಕಿನಾದ್ಯಂತ ತೊಗರಿ ಬೆಳೆ ಕಾಯಿ ಕಟ್ಟುವ ಹಂತದಲ್ಲಿ ನೇಟೆರೋಗ ಭಾದೆಯಿಂದ ತೊಗರಿ ಬೆಳೆ ನಾಶವಾಗಿವೆ ಹೀಗಾಗಿ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ್ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಅತ್ಯುತ್ತಮ ತೊಗರಿ ಬೆಳೆ ಬೆಳೆಯುವ 3 ತಾಲೂಕುಗಳಲ್ಲಿ ನೇಟೆರೋಗದಿಂದ ಸಂಪೂರ್ಣ ಬೆಳೆ ನಾಶವಾಗಿವೆ. ಈಗಾಗಲೇ ಅತಿವೃಷ್ಟಿಯಿಂದ ಅನೇಕ ಬೆಳೆಗಳು ನಾಶವಾಗಿವೆ. ಇನ್ನು ಅಳಿದು ಉಳಿದ ಬೆಳೆ ನೇಟೆರೋಗ ಬಾದೆಯಿಂದ ಸಂಪೂರ್ಣ ನಾಶವಾಗಿರುವುದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ. 

ರೈತ ಪರ ಕಾಳಜಿ ವಹಿಸಿ ಜಿಲ್ಲಾದ್ಯಾದಂತ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಕಾರ್ಯಕ್ರಮವನ್ನು ಯಶಸ್ವಿ ಮಾಡಿರುವ ಕೀರ್ತಿ ನಿಮಗೆ ಸಲ್ಲುತ್ತದೆ. ರೈತ ಪರ ಕಾಳಜಿ ಹೊಂದಿರುವಂತ ತಾವು ಚಿತ್ತಾಪೂರ ಕಾಳಗಿ, ಹಾಗೂ ಶಹಬಾದ ತಾಲೂಕುಗಳಲ್ಲಿ ಕೃಷಿ ಅಧಿಕಾರಿಗಳ ಮುಖಾಂತರ ಸರ್ವೆ ಮಾಡಿಸಿ. ನೇಟೆರೋಗಕ್ಕೆ ತುತ್ತಾದ ಬೆಳೆಗೆ 25 ಸಾವಿರ ರೂಪಾಯಿ  ಪರಿಹಾರ ಒದಗಿಸಲು ಕೋರಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.