ಚಿತ್ತಾಪುರ : ಶಾಸಕ ಪ್ರಿಯಾಂಕ್ ಖರ್ಗೇ ಅವರ 44ನೇ ಜನ್ಮದಿನದ ನಿಮಿತ್ಯ ಪಟ್ಟಣದ ಬಸ್ ನಿಲ್ದಾಣ ಹತ್ತಿರ ಭೀಮು ಹೊಳಿಕಟ್ಟಿ ಅವರ ನೇತೃತ್ವದಲ್ಲಿ ಅನ್ನದಾಸೋಹ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಈ ವೇಳೆಯಲ್ಲಿ ಕಾಂಗ್ರೆಸ್ ಯುವ ಮುಖಂಡ ಹಾಗೂ ಪ್ರಿಯಾಂಕ್ ಅಪ್ಪಟ ಅಭಿಮಾನಿ ಭೀಮು ಹೊಳಿಕಟ್ಟಿ ಅವರು ಮಾತನಾಡಿ ಜಿಲ್ಲೆಯಲ್ಲಿ ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ ಕ್ರಾಂತಿ ಮಾಡುದ್ದಾರೆ. ಮುಂಬರುವ ಚುನಾವಣೆಯಲ್ಲಿ ಯುವ ಮತದಾರರು ಸೇರಿದಂತೆ ಮತಕ್ಷೇತ್ರದ ಎಲ್ಲಾ ಮತ ಪ್ರಭುಗಳು ಅವರನ್ನು ಪ್ರಚಂಡ ಬಹು ಮತದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಮುಖಂಡರಾದ ಭೀಮಣ್ಣ ಹೊತ್ತಿನಮಡಿ , ಗುಂಡು ಐನಾಪುರ, ಶೀಲಾ ಕಾಶಿ, ಸಾಬಣ್ಣ ಹೊಳಿಕಟ್ಟಿ, ರಾಮಲಿಂಗ ಬಾನರ್, ಹಣಮಂತ ಸಂಕನೂರ, ಬಸವರಾಜ ಚಿನಮಳ್ಳಿ, ಸೇರಿದಂತೆ ಇತರರು ಇದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ