ಬಡ ಮಹಿಳೆಯರಿಗೆ ಸೀರೆ ವಿತರಣೆ.


ಚಿತ್ತಾಪುರ: ಕ್ಷೇತ್ರದ ಶಾಸಕ ಪ್ರಿಯಾಂಕ ಖರ್ಗೆ ಅವರ 44ನೇ ಜನ್ಮದಿನದ ನಿಮಿತ್ಯ ಪಟ್ಟಣದ ದೇವದಾಸಿ ಕಾಲೋನಿಯಲ್ಲಿನ ವಿಮುಕ್ತ ದೇವದಾಸಿ ಬಡ ಮಹಿಳೆಯರಿಗೆ ಸೀರೆ ವಿತರಣೆ ಮಾಡಿದರು.
 ನಂತರ ಕೇಕ್ ಕಟ್ ಮಾಡಿ ಪ್ರತಿಯೊಬ್ಬರಿಗೆ ಸಿಹಿ ತಿನಿಸಿ, ಡಿಎಸ್ಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬೆಣ್ಣೂರಕರ್ ಮಾತನಾಡಿ  ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕರು ಹಗಲು-ಇರುಳು ಅನ್ನದೆ ಶ್ರಮಿಸುತ್ತಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ನಾವು ಬೆಂಬಲಿಸಿ ಗೆಲ್ಲಿಸುವ ಜೊತೆಗೆ ಅವರ ಸರಳ ಮನೋಭಾವನೆಯನ್ನು ನಾವೆಲ್ಲರೂ ಪಾಲಿಸೋಣ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಕಾಂತ್ ಶಿಂಧೆ, ಜಗನ್ನಾಥ ಮುಡಬೂಳಕರ್, ಆನಂದ್ ಮೊಗಲಾ, ಸಂಜಯ ಬುಳಕರ್, ವಿಜಯ್ ಕುಮಾರ್ ಚವ್ಹಾಣ, ಮಲ್ಲಿಕಾರ್ಜುನ್ ಕಲ್ಮರಿ, ಶರಣಬಸ್ಸು ಮುತ್ತಾಗಿ, ಸಿದ್ದಾರ್ಥ್, ಬಸವರಾಜ್, ರವಿ, ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.