ಶನಿವಾರ, ಡಿಸೆಂಬರ್ 31, 2022

ಜ.4ಕ್ಕೆ ಅಂಬಿಗರ ಚೌಡಯ್ಯ ಜಯಂತಿ ಪೂರ್ವಸಿದ್ಧತಾ ಸಭೆ.

ಚಿತ್ತಾಪೂರ: ಪಟ್ಟಣದ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಜನವರಿ 4 ಬೆಳಿಗ್ಗೆ 10:30ಕ್ಕೆ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತೋತ್ಸವದ ಪೂರ್ವ ಸಿದ್ಧತಾ ಸಭೆ ಕರೆಯಲಾಗಿದೆ ಎಂದು ಕೋಲಿ ಸಮಾಜದ ಯುವ ಘಟಕ ನಗರ ಅಧ್ಯಕ್ಷ ರಾಜು ಹೋಳಿಕಟ್ಟಿ ತಿಳಿಸಿದ್ದಾರೆ.

ಜನೆವರಿ 21 ರಂದು ಸರ್ಕಾರದಿಂದ ಆಚರಣೆ ಮಾಡುವ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿ ಕುರಿತು ಚರ್ಚೆ ಮಾಡಲು ಹಾಗೂ ಸಮಾಜದ ಸಂಘಟನೆ ಕುರಿತು ಚರ್ಚೆ ನಡೆಸಲು ತಾಲ್ಲೂಕು ಕೋಲಿ ಸಮಾಜದ ಅಧ್ಯಕ್ಷ ರಾಮಲಿಂಗ ಬಾನರ್, ಗೌರವಾಧ್ಯಕ್ಷ ಹಣಮಂತ ಸಂಕನೂರು, ಪ್ರಧಾನ ಕಾರ್ಯದರ್ಶಿ ದೇವಿಂದ್ರ ಅರಣಕಲ್ ನಗರ ಕೋಲಿ ಸಮಾಜದ ಅಧ್ಯಕ್ಷ ಭೀಮಣ್ಣ ಹೋತಿನಮಡು, ತಾಲ್ಲೂಕು ಯುವ ಕೋಲಿ ಸಮಾಜದ ಅಧ್ಯಕ್ಷ ಗುಂಡು ಐನಾಪುರ, ಉಪಸ್ಥಿತಿಯಲ್ಲಿ ಸಭೆ ನಡೆಯಲಿದ್ದು  ಸಮಾಜದ ಸರ್ವ ಪದಾಧಿಕಾರಿಗಳು, ಯುವ ಘಟಕದ ಪದಾಧಿಕಾರಿಗಳು, ಸಲಹಾ ಸಮಿತಿಯ ಸರ್ವ ಮುಖಂಡರು ತಪ್ಪದೆ ಸಭೆಗೆ ಆಗಮಿಸಿ ಜಯಂತಿ ಆಚರಣೆ ಬಗ್ಗೆ ಸಲಹೆ, ಸೂಚನೆ ನೀಡುವ ಮೂಲಕ ಮಾರ್ಗದರ್ಶನ ಮಾಡಿ ಸಭೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
 

ಹೋಟೆಲ್-ರೆಸ್ಟೋರೆಂಟ್ ಮಧ್ಯರಾತ್ರಿ 1 ಗಂಟೆಗೆ ಕ್ಲೋಸ್ ಮಾಸ್ಕ್ ಕಡ್ಡಾಯ: ಖಡಕ್ ರೂಲ್ಸ್ ಜಾರಿ ಮಾಡಿದ ಡಿಸಿ.

ಕಲಬುರಗಿ: ಹೊಸ ವರ್ಷಾಚರಣೆಯ ಮುನ್ನಾ ದಿನ ಹಾಗೂ ವರ್ಷಾಚರಣೆಗೆ ಸಂಬಂಧಪಟ್ಟಂತೆ ಎಲ್ಲಾ ಆಚರಣೆಗಳನ್ನು ಡಿಸೆಂಬರ 31 ಮತ್ತು ಜನವರಿ 1 ರಂದು ತಡರಾತ್ರಿ ರಾತ್ರಿ 1 ಗಂಟೆಯ ಒಳಗೆ ಪೂರ್ಣಗೊಳಸಬೇಕು. ವರ್ಷಾಚರಣೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಒಂದೆಡೆ ಸೇರುವ ಸಂದರ್ಭದಲ್ಲಿ ಕಾರ್ಯಕ್ರಮ ಹಗಲು ಹೊತ್ತಿನಲ್ಲಿ ಹೊರಾಂಗಣ ಪ್ರದೇಶಗಳಲ್ಲಿ ಆಯೋಜಿಸಬೇಕು. ಹೋಟೆಲ್, ಪಬ್, ರಸ್ಟೋರೆಂಟ್‌ಗಳ, ಕ್ಲಬ್, ರೆಸಾರ್ಟ್ ಇತ್ಯಾದಿ ಒರಂಗಣಗಳ ಕುಳಿತುಕೊಳ್ಳುವ ವ್ಯವಸ್ಥೆಯಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಎಚ್ಚರಿಕೆ ನೀಡಿದ್ದಾರೆ.

ವಿದೇಶಗಳಲ್ಲಿ ಕೋವಿಡ್ ದಿಢೀರ್ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ಜಿಲ್ಲೆಯ ಜನತೆ ಮೈ ಮರೆಯಬಾರದು. ಮಹಾಮಾರಿ ಕೋವಿಡ್ ಸೋಂಕಿನ ಮುನ್ನೆಚ್ಚರಿಕೆ ಅಗತ್ಯವಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರದಲ್ಲಿದರೂ ಸಹ ಅದಾಗ್ಯೂ ಪ್ರಪಂಚದ ಕೆಲವು ದೇಶಗಳಲ್ಲಿ ಪ್ರಕರಣ ಏರುಗತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ ಎಂದಿದ್ದಾರೆ.

ಅಂತರಾಷ್ಟ್ರೀಯ ಪ್ರಯಾಣಿಕರು ವಿದೇಶದಿಂದ ಕಲಬುರಗಿ ಜಿಲ್ಲೆಗೆ ಬಂದಾಗ ಏರ್‌ಪೋರ್ಟ್ನಲ್ಲಿ ಕೋವಿಡ್ ಸ್ಯಾಂಪಲ್ ನೀಡಿದಲ್ಲಿ ಫಲಿತಾಂಶ ಬರುವವರೆಗೂ 7 ದಿನಗಳ ವರೆಗೆ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಜ್ವರದ ಲಕ್ಷಣ ಕಂಡುಬಂದಲ್ಲಿ ಹತ್ತಿರದ ಆರೋಗ್ಯ ಸಂಸ್ಥೆಗಳಿಗೆ ಭೇಟಿ ನೀಡಬೇಕು. ಫಲಿತಾಂಶ ಪಾಸಿಟಿವ್ ಬಂದು ರೋಗ ಲಕ್ಷಣ ರಹಿತವಾಗಿದಲ್ಲಿ ಹೋಂ ಐಸೋಲೇಷನ್‌ನಲ್ಲಿರಬೇಕು. ಲಕ್ಷಣ ತೀವ್ರತೆ ಹೆಚ್ಚಾದಲ್ಲಿ ಆಸ್ಪತ್ರೆಗೆ ದಾಖಲಾಗಬೇಕು ಎಂದು ಅವರು ತಿಳಿಸಿದ್ದಾರೆ.

60 ವರ್ಷ ಮೇಲ್ಪಟ್ಟವರು, ವೃದ್ಧರು, ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರು ಇಂತಹ ಆಚರಣೆಗಳಿಂದ ದೂರವಿರುವುದು ಉತ್ತಮವಾಗಿದೆ ಎಂದು ಸಲಹೆ ನೀಡಿರುವ ಅವರು ಕಾರ್ಯಕ್ರಮಗಳ ಆಯೋಜಕರು ಮತ್ತು ಸೇವಾ ಸಿಬ್ಬಂದಿಗಳು ಕೋವಿಡ್ ಲಸಿಕೆಯ ಎರಡು ಡೋಸ್ ಅಥವಾ ಬೂಸ್ಟರ್ ಡೋಸ್ ಪಡೆದಿರಬೇಕು ಎಂದಿದ್ದಾರೆ. ಜನ ದಟ್ಟಣೆಯನ್ನು ನಿಯಂತ್ರಿಸಲು ಪ್ರವೇಶ ದ್ವಾರಗಳ ಸಂಖ್ಯೆಯನ್ನು ಹೆಚ್ಚಿಸುವುದು. ಒಳಾಂಗಣ ಪ್ರದೇಶಗಳಲ್ಲಿನ ಆಚರಣೆಯಲ್ಲಿ ಭಾಗವಹಿಸುವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಖಚಿತ ಪಡಿಸಿಕೊಳ್ಳಬೇಕು. ಮಾಸ್ಕ್ ಧರಿಸದವರಿಗೆ ಪ್ರವೇಶ ನೀಡಬಾರದು. ಪ್ರತಿಯೊಬ್ಬರೂ ಥರ್ಮಲ್ ಸ್ಥಾನಿಂಗ್‌ಗೆ ಒಳಪಡಿಸುವುದಲ್ಲದೆ ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಸಹ ಮಾಡಬೇಕು. ಹೆಚ್ಚಿನ ಜನ ಸೇರುವುದುರಿಂದ ಮುಂಜಾಗ್ರತವಾಗಿ ಅಂಬುಲೆನ್ಸ್ ವ್ಯವಸ್ಥೆ ಸಹ ಮಾಡಬೇಕು ಎಂದು ಅವರು ಆಯೋಜಕರಿಗೆ ಸೂಚಿಸಿದ್ದಾರೆ.

ಬೂಸ್ಟರ್ ಡೋಸ್ ಪಡೆಯಲು ಮನವಿ: ಜಿಲ್ಲೆಯಲ್ಲಿ ಇದೂವರೆಗೆ ಬೂಸ್ಟರ್ ಡೋಸ್ ಪಡೆದವರ ಪ್ರಮಾಣ ಶೇ.21 ಇದ್ದು, ಜನವರಿ-2023 ಅಂತ್ಯದ ವರೆಗೆ ಇದರ ಪ್ರಮಾಣ ಶೇ.50ಕ್ಕೆ ಹೆಚ್ಚಿಸುವ ಗುರಿ ಇದೆ. ಕೋವಿಡ್ ಮಹಾಮಾರಿ ತಡೆಗಟ್ಟಲು ಬೂಸ್ಟರ್ ಪಡೆಯುವುದು ಅವಶ್ಯಕವಾಗಿರುವುದರಿಂದ ಎರಡು ಡೋಸ್ ಪಡೆದು ಬೂಸ್ಟರ್ ಡೋಸ್ ಪಡೆಯದವರು ಬೂಸ್ಟರ್ ಡೋಸ್ ಪಡೆಯುವಂತೆ ಡಿ.ಸಿ. ಯಶವಂತ  ಗುರುಕರ್ ಮನವಿ ಮಾಡಿದ್ದಾರೆ.

ಸಿನೆಮಾ ಹಾಲ್‌ನಲ್ಲಿ ಮಾಸ್ಕ್ ಕಡ್ಡಾಯ: ಜಿಲ್ಲೆಯ ಎಲ್ಲಾ ಸಿನೆಮಾ ಮಂದಿರ, ಥಿಯೇಟರ್‌ನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಪ್ರವೇಶದ್ವಾರದಲ್ಲಿ ಸಿಬ್ಬಂದಿಗಳು ಇದನ್ನು ಖಚಿತಪಡಿಸಿಕೊಳ್ಳಬೇಕು ಎಂದಿರುವ ಅವರು ಕೋವಿಡ್ ನಿಯಂತ್ರಣದಲ್ಲಿ ಆಗಾಗ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಆಡಳಿತ ನೀಡುವ ಸೂಚನೆಗಳನ್ನು ಪಾಲಿಸುವ ಮೂಲಕ ನೀಡುವ ಸೂಚನೆಗಳನ್ನು ಪಾಲಿಸುವ ಮೂಲಕ ಜಿಲ್ಲಾಡಳಿತಕ್ಕೆ ಸಹಕಾರ ನೀಡುವಂತೆ ಕೋರಿದ್ದಾರೆ.

ಗುರುವಾರ, ಡಿಸೆಂಬರ್ 29, 2022

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ್ದು ಕುವೆಂಪು: ಮರತೂರ್

ಚಿತ್ತಾಪೂರ: ಕುವೆಂಪು ಅವರು ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದರೆ ಎಂದು  ಮಾಜಿ ಜಿಪಂ ಸದಸ್ಯ ಶಿವಾನಂದ ಪಾಟೀಲ ಮರತೂರ ಹೇಳಿದರು.
ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್, ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ  ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನಾಚರಣೆಯ ಅಂಗವಾಗಿ " ವಿಶ್ವ ಮಾನವ ದಿನಾಚರಣೆ" ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಸಿಗೆ ನೀರು ಎರೆದು,ಕುವೆಂಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಂಜೆವಾಣಿ ಪತ್ರಿಕೆಯ 2023ರ ಕ್ಯಾಲೆಂಡರ ಬಿಡುಗಡೆ ಮಾಡಿ ಮಾತನಾಡಿದ ಅವರು ಕುವೆಂಪು ಅವರು ಎಲ್ಲ ಪ್ರಕಾರದ ಸಾಹಿತ್ಯದಲ್ಲಿ ತೊಡಗಿಸಿಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮನುಜಮತ ವಿಶ್ವಪಥ ಎಂದು ಸಾರಿ ಮಾನವ ಸಮಾಜಕ್ಕೆ ಅನೇಕ ಸಂದೇಶ ನೀಡಿದ್ದಾರೆ. ಹಾಗಾಗಿ ಅವರನ್ನು ವಿಶ್ವಮಾನವ ಎಂದು ಹೇಳಲಾಗುತ್ತದೆ ಎಂದರು.

ಕುವೆಂಪು ಅವರು ನಾಡಿಗೆ ನಾಡ ಗೀತೆ, ರೈತ ಗೀತೆ ಹೇಗೆ ಅನೇಕ ಕೃತಿಗಳನ್ನು ರಚಿಸಿದ್ದಾರೆ 
ಇಂದಿನ ವಿದ್ಯಾರ್ಥಿಗಳು ಅವರ ಕೃತಿಗಳನ್ನು ಓದಿ ಅರ್ಥಮಾಡಿಕೊಂಡು ಅವರ ವಿಚಾರಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕ ನಾಸಾಸಾಪ ಅಧ್ಯಕ್ಷ ಕಾಶಿನಾಥ ಗುತ್ತೇದಾರ್ ಮಾತನಾಡಿ  ನಾಗಾವಿ ನಾಡಿನ ಸಾಹಿತ್ಯ, ಕಲೆ, ಸಂಸ್ಕೃತಿ, ಅಭಿವೃದ್ಧಿಯ ಸಲುವಾಗಿ ಈ ಸಂಘ ಹುಟ್ಟಿಕೊಂಡಿದೆ. ಅದರ ಜೊತೆಗೆ ನಮ್ಮ ಕ್ಷೇತ್ರದ ಇತಿಹಾಸ ಮೊದಲು ನಾವು ಅರಿಯಬೇಕು ಅದು ನಾವು ನಮ್ಮ ಕ್ಷೇತ್ರದ ಇತಿಹಾಸ ಬಿಟ್ಟು ಬೇರೆ ಜಿಲ್ಲೆಗಳ ಇತಿಹಾಸ ತಿಳಿಯಲು ಶೈಕ್ಷಣಿಕ ಪ್ರವಾಸ ಕೈಗೊಳ್ಳುವುದು ನೋಡಿದರೆ ತುಂಬಾ ಬೇಜಾರು ಆಗುತ್ತದೆ ಎಂದು ಕಳವಳ ವ್ಯಕ್ತಪಡಿಸಿ ಕಾಲೇಜಿನ ಪ್ರಾಂಶುಪಾಲರಲ್ಲಿ ಮನವಿ ಮಾಡಿ ಕಾಲೇಜಿನ ವಿದ್ಯಾರ್ಥಿಗಳನ್ನು ಎನ್ಎಸ್ಎಸ್ ಶಿಬಿರವನ್ನು ನಾಗಾವಿ ಯಲ್ಲಮ್ಮ ದೇವಸ್ಥಾನ ಹತ್ತಿರ ಹಾಕಿಕೊಂಡು ವಿದ್ಯಾರ್ಥಿಗಳಲ್ಲಿ ಈ ಭಾಗದ ಇತಿಹಾಸ ತಿಳಿಸಲು ಹೇಳಿದರು.
ಸಂಜೆವಾಣಿ ಕನ್ನಡ ದಿನ ಪತ್ರಿಕೆಯು ಪ್ರತಿ ವರ್ಷ ಬಿಡುಗಡೆ ಮಾಡುವ ಕ್ಯಾಲೆಂಡರನ್ನು ಈ ವರ್ಷ ಚಿತ್ತಾಪುರಿನ ನಾಗಾವಿ ನಾಡಿ ರಾಷ್ಟ್ರಕೂಟ ಕುಲ ದೇವತೆ ಶ್ರೀ ನಾಗಾವಿ ಯಲ್ಲಮ್ಮ ದೇವಿ ಭಾವಚಿತ್ರವಿರುವ 2023ರ ಹೊಸ ವರ್ಷದ ಕ್ಯಾಲೆಂಡರನ್ನು ಗಣ್ಯರು ಬಿಡುಗಡೆ ಮಾಡಿದರು.

ಸಾ.ಶಿ.ಇ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಡಾ. ವಿಜಯಕುಮಾರ ಹಂಚನಾಳ, ಕಾಲೇಜಿನ ಪ್ರಾಂಶುಪಾಲರಾದ ಶಿವಶರಣಪ್ಪ ಬಿರಾದಾರ್, ಚಲನಚಿತ್ರ ನಿರ್ದೇಶಕರಾದ ಅಯ್ಯಪ್ಪ ರಾಮತೀರ್ಥ, ಮಾತನಾಡಿದರು. ಪ್ರಗತಿಪರ ರೈತರಾದ ರವೀಂದ್ರ ಸಜ್ಜನಶೆಟ್ಟಿ, ಕನ್ನಡ ಉಪನ್ಯಾಸಕರಾದ ಬಿ.ಕೆ ಪಂಡಿತ್ ಮೇದಿಕೆ ಮೇಲಿದ್ದರು. 

ಈ ಸಂದರ್ಭದಲ್ಲಿ  ಕಾಲೇಜಿನ ಉಪನ್ಯಾಸಕ ವೃಂದದವರಾದ ಡಾ. ಎಂ.ಎಂ ಮೇತ್ರಿ, ಡಾ. ಸಾವಿತ್ರಿ ಕುಲಕರ್ಣಿ, ಡಾ.ಮಲ್ಲಪ್ಪ ಮಾನೆಗಾರ್, ಡಾ.ಭಾಗ್ಯಲಕ್ಷ್ಮೀ ರಡ್ಡಿ, ಡಾ. ಶರಣಬಸಪ್ಪ ರಾಯಕೊಟ್ಟಿ, ಡಾ. ಶ್ರಾವಣ ಕಾಂಬಳೆ, ಡಾ. ಪರೀವಿನಾ ಪಾತೀಮಾ, ಡಾ. ನುಜಾತ್ ಪರೀವಿನ್, ಡಾ.ರವಿ ಬೀಳಾರ್, ನಬೀಸಾಬ್, ಶಿವಲಿಂಗಪ್ಪ ಕಂಬಾರ, ವಿರೇಂದ್ರ, ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಸದಸ್ಯರಾದ ಎಂ.ಡಿ ಮಶಾಕ್, ಸಂಜೆವಾಣಿ ಪತ್ರಕರ್ತರು ಜಗದೇವ ಕುಂಬಾರ, ಯಲ್ಲಯ್ಯ ಕಲಾಲ್,  ಸ್ವಾಗತ ಗೀತೆ ಮೌನೇಶ ಪಂಚಾಳ, ನಿರೂಪಣೆ, ವೀರಸಂಗಪ್ಪ ಸುಲೇಗಾಂವ, ಸ್ವಾಗತ ಭಾಷಣ, ವೀರೇಶ ಕರದಾಳ, ವಂದನಾರ್ಪಣೆ, ಪ್ರದೀಪ ಕುಲಕರ್ಣಿ ಮಾಡಿದರು.


ಶನಿವಾರ, ಡಿಸೆಂಬರ್ 24, 2022

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಚಿತ್ತಾಪುರ: ತಾಲೂಕಿನ ಕದ್ದರ್ಗಿ ಗ್ರಾಮಕ್ಕೆ ಬಿಜೆಪಿ ಪಕ್ಷದ ಯೋಜನೆಗಳ ಮಾಹಿತಿಯನ್ನು ಜನರಿಗೆ ಮುಟ್ಟಿಸಲು ಆಗಮಿಸಿದ ವಾಹನಕ್ಕೆ ಬಿಜೆಪಿ ಕಾರ್ಯಕರ್ತರು ಖುಷಿಯಿಂದ ಹಾಲಿನ ಅಭಿಷೇಕ ಮಾಡಿ ಬರಮಾಡಿಕೊಂಡರು.

ಗ್ರಾಮದ ಬಿಜೆಪಿ ಮುಖಂಡ ಅಡೆಪ್ಪ ಮಾಲಿ ಪಾಟೀಲ್ ಮಾತನಾಡಿ "ಜನ ಸೇವೆಯೇ ಜನಾರ್ದನ ಸೇವೆ" ಎಂಬ ಆಶಯದೊಂದಿಗೆ ಸಮಾಜ ಸೇವಕ ಮಣಿಕಂಠ ರಾಠೋಡ್ ಅವರು ತಾಲೂಕಿನಲ್ಲಿ ಬಿಜೆಪಿ ಪಕ್ಷದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ಮುಟ್ಟಿಸುವ ನಿಟ್ಟಿನಲ್ಲಿ ತಾಲೂಕಿನ ಚಿತ್ತಾಪುರ ಪಟ್ಟಣ, ವಾಡಿ, ನಾಲವಾರ, ದಂಡೋತಿ, ಹೆಬ್ಬಾಳ, ರಾವೂರ, ಮಾಡಬೂಳ, ಭೀಮನಹಳ್ಳಿ, ಭಂಕೂರ ಹೀಗೆ 9 ಕಡೆ ಜನ ಸ್ನೇಹಿ ಕೇಂದ್ರಗಳನ್ನು ತೆರೆದು  ಸೇವೆ ಮಾಡುತ್ತಿದ್ದಾರೆ. ಹಾಗೂ ಪಕ್ಷದ ಯೋಜನೆಗಳ ಮಾಹಿತಿ ಪ್ರತಿ ಗ್ರಾಮದ ಜನ ಸಾಮಾನ್ಯರಿಗೆ ತಿಳಿಯಲಿ ಎಂದು ವಾಹನದ ಮೂಲಕ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಸವರಾಜ್ ಬೆಳಗುಂಪಿ,
ಗಣಪತಿ ನಾಯಕ, ವಿಶ್ವರಾಜ್ ದೇಸಾಯಿ,
ಅಶೋಕ್ ಗುತ್ತೇದಾರ, ಪರಮೇಶ್ವರ ಗುಡ್ಡಪೂರ, 
ಮಲ್ಲಿಕಾರ್ಜುನ ದೇಸಾಯಿ, ಚಂದ್ರಶೇಖರ್ ದೇಸಾಯಿ, ಶಿವಕುಮಾರ್ ಪಾಳ, ಮೊದಿನ್ ಪಟೇಲ್, ಸಿದ್ದಲಿಂಗ ಕೋರಿ, ಬಾಪೂಗೌಡ, ಸಿದ್ದು ಜೀವಣಗಿ, ಸಾಗರ ದೇಸಾಯಿ, ಭೀಮಾಶಂಕರ್ ದೇಸಾಯಿ, ಸೇರಿದಂತೆ ಇತರರಿದ್ದರು.

ಗುರುವಾರ, ಡಿಸೆಂಬರ್ 22, 2022

ಭುಟ್ಟೊ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ.

ಚಿತ್ತಾಪೂರ: ಪ್ರಧಾನಿ ನರೇಂದ್ರ ಮೋದಿಯವರು "ಗುಜರಾತ್ ನ ಕಟುಕ" ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ವಿರುದ್ಧ ಬಿಜೆಪಿ ಯುವ ಘಟಕ ನೇತೃತ್ವದಲ್ಲಿ ಗುರುವಾರ ಪಟ್ಟಣದ ಲಾಡ್ಜೀಂಗ್ ಕ್ರಾಸ್ ನಲ್ಲಿ ಪ್ರತಿಭಟನೆ ನಡೆಸಿ ಭುಟ್ಟೊ ಅವರ ಪ್ರತಿಕೃತಿಗೆ ಬೂಟ್ ಗಾಲಿನಿಂದ ಒದ್ದು ಪ್ರಕೃತಿ ದಹಿಸಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಉದ್ದೇಶಿಸಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅರಣುಕುಮಾರ್ ಯಾಗಪೂರ ಮಾತನಾಡಿ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂ ಧರ್ಮವನ್ನು ರಕ್ಷಿಸುತ್ತಿದ್ದಾರೆ. ಇದನ್ನು ಅರಗಿಸಿಕೊಳ್ಳಲು ಆಗದ ಪಾಕಿಸ್ತಾನ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸುರೇಶ ಬೆನಕನಹಳ್ಳಿ, ಮಹ್ಮದ ಯುನುಸ್ ಪ್ರತಿಭಟನೆ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ, ಬಿಜೆಪಿ ಕಾರ್ಯದರ್ಶಿ ರಾಮದಾಸ ಚವ್ಹಾಣ್, ನಗರ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಪ್ರಸಾದ್  ಅವಾಂಟಿ,  ಕಾರ್ಮಿಕ ಬಂಡಿ, ಅಕ್ಷಯ ಚಕಡಿ, ಹನುಮಾನ, ಯಮುನಪ್ಪ,ದೇವರಾಜ ತಳವಾರ, ಧನರಾಜ್ ರಾಠೋಡ್, ಶಂಕರ ಜಾಪೂರ,ರಾಜು ಹೊನಗುಂಟಾ,ಮಂಜು ಹೆಬ್ಬಾಳ, ಸಾಗರ, ಗುಂಡು, ಕಾಶಿ, ಅಂಬರೀಶ, ವೀರೇಶ ರಾವೂರ, ಸೇರಿದಂತೆ ಇತರರು ಇದ್ದರು.

ಶನಿವಾರ, ಡಿಸೆಂಬರ್ 17, 2022

ನಾಗಾವಿ ಕ್ಷೇತ್ರ ಶ್ರೀಮಂತವಾಗಬೇಕು: ಅಗಸರ್

ಚಿತ್ತಾಪುರ: ನಾಗಾವಿ ಘಟಿಕ ಸ್ಥಾನವು ಅಳಿವಿನಂಚಿನಲ್ಲಿದ್ದು ಅಲ್ಲಿರುವ ಅವಶೇಷಗಳು ಹಾಳಾಗಿ ಹೊಗುತ್ತಿದ್ದು ಅವುಗಳನ್ನು ಸಂರಕ್ಷಿಸುವದಲ್ಲದೇ ಮುಂದಿನ ಪೀಳಿಗೆಗೆ ಪೋಶಿಸಿ ಶೈಕ್ಷಣಿಕವಾಗಿ ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ, ಶ್ರೀಮಂತಗೊಳಿಸಬೇಕಾಗಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ್ ಹೇಳಿದರು.
  ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶನಿವಾರ ನಡೆದ ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಉದ್ಘಾಟನೆ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರಕೂಟರ ಕಾಲದಲ್ಲಿಯೇ ನಾಗಾವಿ ಕ್ಷೇತ್ರವು ವಿಶ್ವವಿದ್ಯಾಲಯ ಕೇಂದ್ರವಾಗಿ ಪ್ರಸಿದ್ದಿ ಪಡೆದು ವಿಶ್ವದಲ್ಲಿಯೇ ಪ್ರಸಿದ್ದ ಕ್ಷೇತ್ರವಾಗಿದೆ.ಇಂತಹ ಐತಿಹಾಸಿಕ ಕ್ಷೇತ್ರದಲ್ಲಿ ಅಧ್ಯಯನ ಕೇಂದ್ರವಾಗಬೇಕು ಎನ್ನುವ ಬೇಡಿಕೆ ಈ ಭಾಗದಿಂದ ಕೇಳಿಬರುತ್ತಿದೆ ಗುಲಬರ್ಗಾ ವಿಶ್ವವಿದ್ಯಾಲಯವು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
 
  ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮಾತನಾಡಿ,ಈ ಭಾಗದ ಐತಿಹಾಸಿಕ ನಾಗಾವಿ ಕ್ಷೇತ್ರದ ಇತಿಹಾಸ ನಾಡಿನಾದ್ಯಂತ ಪರಿಚಯಿಸುವ ಉದ್ದೇಶದಿಂದ ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಹುಟ್ಟು ಹಾಕಿರುವ ಕಾರ್ಯ ಶ್ಲಾಘನೀಯ,ನಾಗಾವಿ ಉತ್ಸವ ಮಾಡುವುದು ಅವಶ್ಯಕವಾಗಿದ್ದು ಇದಕ್ಕೆ ಬೇಕಾದ ಸಹಕಾರ ನೀಡಲಾಗುವುದು ಉತ್ಸವದ ಮೂಲಕ ಇತಿಹಾಸದ ಬೆಳೆಕು ಚೆಲ್ಲಿದಂತಾಗುತ್ತದೆ,ಈ ಭಾಗದ ನಾಗಾವಿ ಇತಿಹಾಸದ ಸಂಶೋಧನೆಯಾಗಬೇಕಾಗಿದೆ,ನಶಿಸಿ ಹೋಗುತ್ತಿರುವ ಶಿಲಾಶಾಸನಗಳ ಉತ್ಖನನ ಸರಕಾರ ಮಾಡಿ ಸಂರಕ್ಷಣೆ ಮಾಡಬೇಕು ಇದರ ಕುರಿತು ನಾನು ಸರಕಾರದ ಮಟ್ಟದಲ್ಲಿ ಗಮನ ಸೆಳೆಯುವ ಪ್ರಯತ್ನವನ್ನು ಮಾಡಿ ಒತ್ತಾಯಿಸುತ್ತೇನೆ ಎಂದು ಹೇಳಿದರು.
  ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿದ ಅವರು, ನಾಗಾವಿ ಪ್ರಾಧೀಕಾರ ರಚನೆ ಆಗಬೇಕು ಮತ್ತು ನಾಗಾವಿ ಉತ್ಸವ ಜರುಗಬೇಕು ಎನ್ನುವ ಬೇಡಿಕೆ ಇದೆ. ಅದಕ್ಕಾಗಿ ನಾನು ಇಲ್ಲಿನ ಮುಖಂಡರ ಹಾಗೂ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿ ನಾಗಾವಿ ಕ್ಷೇತ್ರಕ್ಕೆ 5 ಕೋಟಿ ಹಾಗೂ ಸನ್ನತಿ ಅಭಿವೃದ್ದಿ ಪ್ರಾಧೀಕಾರ ರಚಿಸಿ ಇದಕ್ಕೆ 5ಕೋಟಿ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸಲಾಗುವುದು ಎಂದರು.

  ಕರ್ನಾಟಕ ಅಲೆಮಾರಿ ಹಾಗೂ ಅರೆಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷ  ದೇವಿಂದ್ರನಾಥ ನಾದ್ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ರಾಷ್ಟ್ರಕೂಟದ ಅವಧಿಯಲ್ಲಿ ನಾಗಾವಿ,ಸನ್ನತಿ,ದಂಡೋತಿ, ಅಲ್ಲೂರ ಸೇರಿದಂತೆ ಇತಿಹಾಸ ಪ್ರಸಿದ್ದ ಕ್ಷೇತ್ರಗಳಿದ್ದು ಅವುಗಳ ಅಭಿವೃದ್ದಿಗೆ ಸರಕಾರದ ವತಿಯಿಂದ ಅನುದಾನ ಒದಗಿಸಿ ಅಭಿವೃದ್ದಿಪಡಿಸಿ ಇಲ್ಲಿನ ಗತವೈಭವವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಹೇಳಿದರು.
  ಸಾಹಿತಿಗಳಾದ ಡಾ.ಶಿವರಂಜನ್ ಸತ್ಯಂಪೇಟ್, ಮುಡುಬಿ ಗುಂಡೇರಾವ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ ಮಾತನಾಡಿದರು. ಅಧ್ಯಾಪಕ ಡಾ.ಮಲ್ಲಿಕಾರ್ಜುನ ಭಾಗೋಡಿ ನಾಗಾವಿ ಸಾಂಸ್ಕೃತಿ ಪರಿಸರ ಕುರಿತು ಉಪನ್ಯಾಸ ನೀಡಿದರು. ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಕಾಶಿನಾಥ ಗುತ್ತೆದಾರ ಪ್ರಾಸ್ತಾವಿಕ ಮಾತನಾಡಿದರು.

  ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಉಪಾಧ್ಯಕ್ಷೆ ಶೃತಿ ಪೂಜಾರಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆನಂದ ಪಾಟೀಲ ನರಬೋಳ, ಭೀಮಣ್ಣ ಸಾಲಿ, ಬಸವರಾಜ ಬೆಣ್ಣೂರಕರ್, ಸಿಪಿಐ ಪ್ರಕಾಶ ಯಾತನೂರ, ಬಸವರಾಜ ಬಳೂಂಡಗಿ, ಚಂದ್ರಶೇಖರ ಕಾಶಿ, ನಾಗರಾಜ ಬಂಕಲಗಿ, ಮುಕ್ತಾರ ಪಟೇಲ್ ವೇದಿಕೆಯಲ್ಲಿದ್ದರು. ಪದಾಧಿಕಾರಿಗಳಾದ ರವೀಂದ್ರ ಇವಣಿ, ಶಾಂತಕುಮಾರ ಮಳಖೇಡ, ರಾಜಶೇಖರ ಬಳ್ಳಾ,ದೇವಪ್ಪ ನಂದೂರಕರ್, ರವಿಶಂಕರ ಬುರ್ಲಿ, ಮಹ್ಮದ ಮಶಾಕ್, ಜಗದೇವ ಕುಂಬಾರ, ಭಾರತಿ ಸಿಂಪಿ, ಪ್ರದೀಪ ಕುಲಕರ್ಣಿ, ದೇವಿಂದ್ರಪ್ಪ ಇಮಾಡಪೂರ, ಮೋನಯ್ಯ ಪಂಚಾಳ, ನಟರಾಜ ಶಿಲ್ಪಿ, ಯಲ್ಲಯ್ಯ ಕಲಾಲ್, ವಿಷ್ಣುವರ್ಧನರೆಡ್ಡಿ ಇತರರು ಇದ್ದರು.
  ಇದೇ ಸಂದರ್ಭದಲ್ಲಿ 6 ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿರುವ ಸಾಹಿತ್ಯ ಕ್ಷೇತ್ರದ ವೀರಯ್ಯ ಸ್ವಾಮಿ ಸ್ಥಾವರಮಠ, ಶಿಕ್ಷಣ ಕ್ಷೇತ್ರದ ಬಸಪ್ಪ ಮುಗಳಖೋಡ,ಕೃಷಿ ಕ್ಷೇತ್ರದ ಡಿ.ನರಸಯ್ಯಗೌಡ, ರಂಗಭೂಮಿ ಕ್ಷೇತ್ರದ ಸಿದ್ದಲಿಂಗಯ್ಯಸ್ವಾಮಿ ಕೋಡಗಿಮಠ,ಕಲಾ ಕ್ಷೇತ್ರದ ನರಸೀಂಹ ಅಲಮೇಲಕರ್, ಸಮಾಜ ಸೇವಾ ಕ್ಷೇತ್ರದ ಮಹ್ಮದ ಇಬ್ರಾಹಿಂ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ್ ಅವರು ರಾಜ್ಯೊತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ವಿರಸಂಗಪ್ಪ ಸುಲೇಗಾಂವ ಸ್ವಾಗತಿಸಿದರು, ನರಸಪ್ಪ ಚಿನ್ನಕಟ್ಟಿ ನಿರೂಪಿಸಿದರು.

ಮಂಗಳವಾರ, ಡಿಸೆಂಬರ್ 13, 2022

ಭ್ರಷ್ಟಾಚಾರ-ನಿರುದ್ಯೋಗ ಬಗ್ಗೆ ಮಾತನಾಡಿದ್ದೇ ತಪ್ಪಾ?: ಪ್ರಿಯಾಂಕ್ ಖರ್ಗೆ

ಚಿತ್ತಾಪೂರ:ರಾಜ್ಯ ಸರ್ಕಾರದ ಬ್ರಹ್ಮಾಂಡದ ಭ್ರಷ್ಟಾಚಾರವನ್ನು ಬಯಲಿಗೇಳಿದ್ದೀದ್ದೇನೆ. ಉದ್ಯೋಗ ಸಿಗದೆ ನಮ್ಮ ಯುವಕರು ಬೀದಿ ಬೀದಿ ಅಲೆಯುತ್ತಿದ್ದಾರೆ. ಅವರಿಗೆ ಉದ್ಯೋಗ ಕೊಡಿ ಎಂದು ಆಗ್ರಹಿಸಿದ್ದೇನೆ.ಇದು ಬಿಜೆಪಿಯವರಿಗೆ ಸರಿ ಕಾಣದೆ ನನ್ನನ್ನು ಹೇಗಾದರೂ ಮಾಡಿ ಚುನಾವಣೆಯಲ್ಲಿ ಸೋಲಿಸಲು ಷಡ್ಯಂತರ ಮಾಡುತ್ತಿದ್ದಾರೆ. ನಮ್ಮ ಚಿತ್ತಾಪುರದ ಜನರು ಪ್ರಜ್ಞಾವಂತರಿದ್ದ ಬಿಜೆಪಿಯವರ ಬೂಟಾಟಿಕೆಯ ಇಲ್ಲಿ ನಡೆಯುವುದಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಗುಡುಗಿದರು.
ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಪುರಸಭೆ ಆಯೋಜಿಸಿದ್ದ, 2022-23ನೇ ಸಾಲಿನ 15ನೇ ಹಣಕಾಸಿನ ಲೋಕೋಪಯೋಗಿ ಇಲಾಖೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಇಲಾಖೆ ಯೋಜನೆಯಲ್ಲಿ 25.ಕೋಟಿ ಅನುದಾನದಡಿಯಲ್ಲಿ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಬ್‌ಕಾ ಸಾತ್ ಸಬ್ ಕಾ ವಿಕಾಸ್ ಬರೀ ಬೊಗಳೆ ಘೋಷಣೆಯಾಗಿ ಉಳಿದುಕೊಂಡಿದೆ. ಅಲ್ಪಸಂಖ್ಯಾತರ ಮೇಲೆ ದಾಳಿ ಜಾಸ್ತಿಯಾಗಿದೆ. 58 ಪ್ರತಿಶತ ಬಜೆಟ್ ಜಾಹೀರಾತಿಗೆ ಬಳಸಲಾಗುತ್ತಿದೆ. ಮಕ್ಕಳು ಇಲ್ಲದೇ ಶಾಲೆಗಳು ಮುಚ್ಚುತ್ತಿವೆ. 100 ಸ್ಮಾರ್ಟ್ ಸಿಟಿ ಯೋಜನೆ ಎಲ್ಲಿ ಹೋಯಿತು. ರೈತರ ಆದಾಯ ಕುಸಿದು ಹೋಗುತ್ತಿದೆ. ಸ್ವಿಸ್ ಬ್ಯಾಂಕ್ ಹಣ ಯಾರಿಗೆ ಬಂದಿದೆ. 2 ಸಾವಿರ ಕೋಟಿ ಇದ್ದ ಹಣ ಬಿಜೆಪಿ ಬಂದ ಮೇಲೆ ವಿದೇಶಿ ಬ್ಯಾಂಕ್ ಗಳಲ್ಲಿ 38 ಸಾವಿರ ಕೋಟಿ ಕಪ್ಪುಹಣ ಹೆಚ್ಚಿಗೆ ಜಮಾ ಆಗಿದೆ.
 ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮಗಳಲ್ಲಿ ಅನುದಾನ ಕೊರತೆ ಇದೆ. ಆಶ್ವಾಸನೆ ನೀಡಿದ್ದ ಅನುದಾನ ಬಂದಿಲ್ಲ. ನಮ್ಮ ಭಾಗದಲ್ಲಿ 
50 ಸಾವಿರ ಹುದ್ದೆಗಳು ಖಾಲಿ ಇವೆ. ಇಡೀ ದೇಶ ನಿರುದ್ಯೋಗದಿಂದ ಬಳಲುತ್ತಿದೆ. ಉದ್ಯೋಗ ನೀಡುವ ಮಾತು ಬಿಜೆಪಿ ಹಾಗೂ ನರೇಂದ್ರ ಮೋದಿ ಮಾತನಾಡುತ್ತಿಲ್ಲ. ಸತ್ಯ, ಪ್ರಾಮಾಣಿಕ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಲ್ಲವನ್ನು ಪರೀಕ್ಷಿಸಿ ಒಳ್ಳೆಯತನಕ್ಕೆ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.
 ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಮಾತನಾಡಿ ಬಿಜೆಪಿಯವರು ಜನಸಂಕಲ್ಪ ಯಾತ್ರೆ ನೆಪದಲ್ಲಿ ನೃತ್ಯ ಮಾಡುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನರೇಂದ್ರ ಮೋದಿ ಅವರು ದೇಶದ ಜನರನ್ನು ಭಾವನಾತ್ಮಕ ವಿಷಯಗಳ ಆಧಾರದ ಮೇಲೆ ಹೇಗೆ ಮೋಸ ಮಾಡಬಹುದು ಎನ್ನುವುದು ಚೆನ್ನಾಗಿ ಅರಿತುಕೊಂಡಿದ್ದಾರೆ. ಧರ್ಮಗಳ ನಡುವೆ ಕಿಚ್ಚು ಹಚ್ಚಿ ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳುವಲ್ಲಿ ಬಿಜೆಪಿಯವರು ಜಾಣರಾಗಿದ್ದು ಜನರು ಅರಿತುಕೊಳ್ಳಬೇಕು ಎಂದರು.

ಪುರಸಭೆ ಸದಸ್ಯೆ ಶೀಲಾ ಕಾಶಿ
ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಶಿವಾನಂದ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಮುಖಂಡ ನಾಗರೆಡ್ಡಿಗೌಡ ಪಾಟೀಲ, ಜಗದೀಶ ಚವ್ಹಾಣ, ಮುಕ್ತಾರ್ ಪಟೇಲ, ಮಾತನಾಡಿದರು.
    
ಪುರಸಭೆ ಉಪಾಧ್ಯಕ್ಷೆ ಶೃತಿ ಪೂಜಾರಿ, ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಯಯದ್ ಮಹೆಮೂದ್ ಸಾಹೇಬ್,  ರಾಜಶೇಖರ್ ತಿಮ್ಮನಾಯಕ್, ರಮೇಶ ಮರಗೋಳ, ಸಿದ್ದುಗೌಡ ಅಫಜಲ್‌ಪುರಕರ್, ಶಿವರುದ್ರ ಭೀಣಿ, ಶಾಂತಣ್ಣ ಚಾಳಿಕಾರ, ಜಗಣ್ಣಗೌಡ ರಾಮತೀರ್ಥ, ವಿನೋದ ಗುತ್ತೇದಾರ್,ಶ್ರೀನಿವಾಸ ಪಾಲಪ್, ಶಿವರಾಜ್ ಪಾಳೇದ್, ವೀರಣ್ಣಗೌಡ ಪರಸರೆಡ್ಡಿ, ಸಂತೋಷ ಪೂಜಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಪುರಸಭೆ ಸದಸ್ಯರು ಹಾಗೂ ಸಿಬ್ಬಂದಿಗಳು ಪಾಲ್ಗೋಂಡಿದ್ದರು. 

ಪುರಸಭೆ ಮುಖ್ಯಧಿಕಾರಿ ಮನೋಜಕುಮಾರ ಗುರಿಕಾರ್ ಸ್ವಾಗತಿಸಿದರು. ಸಮುದಾಯ ಸಂಘಟನಾ ಅಧಿಕಾರಿ ರಘುನಾಥ ನರಸಾಳೆ ನಿರೂಪಿಸಿದರು.

ಶುಕ್ರವಾರ, ಡಿಸೆಂಬರ್ 9, 2022

ಆಕ್ರಮ ಮರಳು ದಂಧೆಯಲ್ಲಿ ಅಧಿಕಾರಿಗಳು ಭಾಗಿ: ಪ್ರಿಯಾಂಕ ಖರ್ಗೆ.

ಚಿತ್ತಾಪೂರ: ಆಕ್ರಮ ಮರಳು ದಂಧೆ ಕೊರರ ಜೊತೆ ಕಂದಾಯ, ಗಣಿ ಮತ್ತು ಭೂ-ವಿಜ್ಞಾನ ಇಲಾಖೆ, ಲೋಕೋಪಯೋಗಿ ಇಲಾಖೆ,ಸಾರಿಗೆ ಇಲಾಖೆ,ಗೃಹ ಇಲಾಖೆಯ ಅಧಿಕಾರಿಗಳಿಂದ ಹಿಡಿದು ಪಿಡಿಓವರೆಗೆ ಎಲ್ಲ ಹಂತದ ಇಲಾಖೆಯ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಹೇಳಿದರು 

ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ನಡೆದ ತಾಲೂಕು ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ತನಾಡಿದ ಅವರು ತಾಲೂಕಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಸಂಗ್ರಹವಾದ ಡಿಎಂಎಫ್ ಸುಂಕದ ಹಣವನ್ನು ಕಲಬುರಗಿಗೆ ವರ್ಗಾವಣೆ ಆಗುತ್ತಿದೆ.ಆದರೆ ಸಂಗ್ರಹವಾದ ಸುಂಕವನ್ನು ಚಿತ್ತಾಪುರಕ್ಕೆ ಮಾತ್ರ ಬಳಕೆಯಾಗಬೇಕು

ಕಾನೂನು ಬಾಹಿರವಾಗಿ 24 ತಾಸು ಕಾಲ ಗುತ್ತಿಗೆದಾರರು ಅಕ್ರಮ ಮರುಳು ಸಾಗಾಣಿಕೆ ಮಾಡುತ್ತಿದ್ದಾರೆ. ಓವರ್ ಲೋಡ್ ಕೂಡಾ ಒಂದು ಸಮಸ್ಯೆಯಾಗಿದೆ. ಇದರಿಂದ ಗ್ರಾಮೀಣ ಭಾಗದ ರಸ್ತೆಗಳು ಹಾಳಾಗಿವೆ. ಸರ್ಕಾರ ಈ ರಸ್ತೆಗಳನ್ನು ಕೂಡಾ ಮೇಲ್ದರ್ಜೆಗೆ ಏರಿಸುತ್ತಿಲ್ಲ. ಅಕ್ರಮ ಮರಳು ಸಾಗಾಣಿಕೆಯಿಂದ ಇಷ್ಟೆಲ್ಲ ಅನಾನೂಕೂಲ ಇದ್ದರೂ ಯಾಕೆ ಅಕ್ರಮ ಮರಳು ಸಾಗಾಣಿಕೆ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದರು.

ಒಬ್ಬ ವ್ಯಕ್ತಿ ಗರಿಷ್ಠ 70 ವಾಹನಗಳನ್ನು ನೋಂದಣಿ ಮಾಡಿಸಬಹುದು. ಒಂದು ಲಾರಿಗೆ ಕನಿಷ್ಠ 16 ಟನ್ ಗಳಿಂದ 22 ಟನ್ ಮರಳು ಸಾಗಾಣಿಕೆ ಮಾಡಬಹುದಾಗಿದೆ.ಎಂದು ಗಣಿ ಮತ್ತು ಭೂ-ವಿಜ್ಞಾನ ಇಲಾಖೆ ಅಧಿಕಾರಿಗಳು ಹೇಳುತ್ತಾರೆ ಇದರಿಂದ ವಿಆರ್ ರಸ್ತೆ ಸಂಪೂರ್ಣ ಹಾಳಾಗಿವೆ.ಕೃಷಿ‌ ಜಮೀನುಗಳಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಮಾಡಲಾಗುತ್ತಿದೆ. ನಾನು ಈ ಮೊದಲು ಹೇಳಿದಂತೆ ಅಂತಹ ಜಮೀನುಗಳನ್ನ ವಶಪಡಿಸಿಕೊಳ್ಳಲಾಗಿದೆಯಾ? ಹಾಗಾದರೆ ಎಷ್ಟು ಜಮೀನು ವಶಪಡಿಸಿಕೊಂಡಿದ್ದೀರಾ? ಎಂದು ಅಧಿಕಾರಿಗಳಿಗೆ ಕಿಡಿಕಾರಿದರು.

ಕಾಟಮದೇವರಹಳ್ಳಿ ಹಾಗೂ ಮುತ್ತಗಾ ಗ್ರಾಮಗಳಲ್ಲಿ ಅಕ್ರಮ ಜಾಸ್ತಿ ನಡೆಯುತ್ತಿದೆ.ನಾನು ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿ ಅವರೊಂದಿಗೆ ಮಾತನಾಡುವವರೆಗೆ ಮರಳು ಸಾಗಾಣಿಕೆಗೆ ಬಂದ್ ಮಾಡಿಸಿ.ಜೊತೆಗೆ ಮರುಳು ಸಾಗಾಣಿಕೆ ನಡೆಯುವ ಗ್ರಾಮಗಳ ರಸ್ತೆಗಳ ಫೋಟೋ ತೆಗೆದುಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಇದೇ 12ರಂದು ಮತ್ತೊಮ್ಮೆ ಸಭೆ ಕರೆದು ಆ ಸಭೆಯಲ್ಲಿ ಗುತ್ತಿಗೆದಾರರನ್ನೂ ಕೂಡಾ ಕರೆಯಬೇಕು ಎಂದು ಕರೆ ನೀಡಿದರು.

ಈ ಸಂಧರ್ಭದಲ್ಲಿ ತಹಸೀಲ್ದಾರ್ತಾ ಉಮಾಕಾಂತ ಹಳ್ಳೆ, ಇಓ ನೀಲಗಂಗಾ ಬಬಲಾದ,ಶಹಾಬಾದ ಇಓ ಬಸಲಿಂಗಪ್ಪ ಡಿಗ್ಗಿ, ಶಹಾಬಾದ್ ತಹಸೀಲ್ದಾರ ಸುರೇಶ ವರ್ಮಾ, ಶಹಾಬಾದ ಸಿಪಿಐ ರಾಘವೇಂದ್ರ, ಚಿತ್ತಾಪುರ ಸಿಪಿಐ ಪ್ರಕಾಶ ಯಾತನೂರು, ಹಾಗೂ ಟಾಸ್ಕ್ ಪೋರ್ಸ್ ಸಮಿತಿಯ ಸದಸ್ಯ ಅಧಿಕಾರಿಗಳು ಭಾಗವಹಿಸಿದ್ದರು.

ಶನಿವಾರ, ಡಿಸೆಂಬರ್ 3, 2022

ವಿಠಲ್ ಹೇರೂರ ಹಾಕಿಕೊಟ್ಟ ಮಾರ್ಗದರ್ಶನ ಪಾಲಿಸೋಣ.

ಚಿತ್ತಾಪೂರ: ಕೂಲಿ ಸಮಾಜಕ್ಕೆ ವಿಠಲ್ ಹೇರೂರು ಅವರು ಹಾಕಿಕೊಟ್ಟ ಮಾರ್ಗದರ್ಶನ ನಾವೂ ಎಲ್ಲಾರು ಪಾಲಿಸೋಣ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.

ಪಟ್ಟಣದ ನಿಜ ಶರಣ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ವಿಠಲ ಹೇರೂರು ಅವರ ಪುಣ್ಯಸ್ಮರಣೆ ನಿಮಿತ್ಯ ಹೇರೂರು ಅವರ ಭಾವಚಿತ್ರಕ್ಕೆ ಪುಸ್ಪನಮನ ಸಲ್ಲಿಸಿ ಮಾತನಾಡಿದ ಅವರು ಸಂಘದಲ್ಲಿ ಹಿರಿಯ ಮಾರ್ಗದರ್ಶನ ವಿಲ್ಲದೆ ಯಾವುದೇ ರೀತಿಯ ಮನವಿ, ಪ್ರತಿಭಟನೆ ಯಾವುದು ಮಾಡಬೇಡಿ ಸಮಾಜದ ಪ್ರತಿಯೊಬ್ಬರ ಮಾರ್ಗದರ್ಶನ ತೆಗೆದುಕೊಳ್ಳಿ ಅದರ ಜೊತೆಗೆ ಸಂಘದ ಸಲಹ ಸಮಿತಿಯ ಮಾರ್ಗದರ್ಶನ ಕೂಡ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಬಸವರಾಜ ಚಿಮ್ಮನ್ನಳ್ಳಿ ಮಾತನಾಡಿ ವಿಠಲ್ ಹೇರೂರು ಅವರು ನಮ್ಮನ್ನು ಅಗಲಿ 
9 ವರ್ಷಗಳು ಆಗುತ್ತಿದ್ದು ಅವರು ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದೆವೆ. ಒಂದು ವೇಳೆ ವೀಠಲ್ ಹೇರೂರ ಸಾಹೇಬರು ಇದ್ದರೆ ಕೂಲಿ ಸಮಾಜ ಎಸ್‌ಟಿ ಸೇರ್ಪಡೆ ಆಗುತ್ತಿತ್ತು ಎಂದು ಹೇಳಿದರು.

ಬಿಜೆಪಿ ಓಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ ಮಾತನಾಡಿ ಸಂಘಟನೆ ಎಂಬ ವಿಷಯ ಬಂದಾಗ ನಮಗೆ ವಿಠಲ್ ಹೇರೂರು ಹೆಸರು ನಮ್ಮ ಸಮಾಜದಲ್ಲಿ ನೆನಪು ಬರುತ್ತದೆ. ಆದರೆ ಇಂದು ಸಮಾಜದಲ್ಲಿ ಸಂಘಟನೆ ದಾರಿ ತಪ್ಪುತ್ತಿದೆ. ರಾಜಕೀಯ ಮಾಡಬೇಡಿ ಸಮಾಜದ ಹಿತದೃಷ್ಟಿ ಇರಲಿ, ಸಂಘಟನೆಗೆ ಒಂದು ದೃಢತೆ ಇರಲಿ, ಇಲ್ಲ ಅಂದ್ರೆ ಸಂಘಟನೆಗೆ ರಾಜೀನಾಮೆ ನೀಡಿ ಎಂದು ಸಮಾಜದ ಕುರಿತು ಕಳವಳ ವ್ಯಕ್ತಪಡಿಸಿ ಸಮಾಜದ ಏಳಿಗೆಗಾಗಿ ನಾವು ಪ್ರತಿಯೊಬ್ಬರು ಶ್ರಮಿಸೋಣ ಎಂದರು.

ಸಮಾಜದ ಯುವ ಘಟಕ ಅಧ್ಯಕ್ಷ ಗುಂಡು ಐನಾಪುರ ಮಾತನಾಡಿ ನಾವುಗಳು ಎಲ್ಲಾರೂ ಒಗ್ಗೂಡಿ ಒಂದಾಗಿ ಸಮಾಜದ ಅಭಿವೃದ್ಧಿ ಕಾಣೋಣ ಅದರ ಸಲುವಾಗಿ ವಿಠಲ ಹೇರೂರು ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ನಡೆಯೋಣ ಎಂದರು.

ತಾಲೂಕ ಅಧ್ಯಕ್ಷ ರಾಮಲಿಂಗ ಬಾನರ್,ಹಣಮಂತ ಸಂಕನೂರ,ಸುರೇಶ ಬೆನಕನಳ್ಳಿ, ಮಾತನಾಡಿದರು.

ಈ ಸಂದರ್ಭದಲ್ಲಿ  ದೇವಿಂದ್ರ ಅರಣಕಲ್, ಶರಣು ಡೋಣಗಾಂವ, ಭೀಮಣ್ಣ ಹೊತ್ತಿನಮಡಿ, ನಾಗೇಂದ್ರ, ಭೀಮು ಹೊಳಿಕಟ್ಟಿ, ಮಲ್ಲಪ್ಪ ಹೋನಪ್ಪನೂರು, ಕಾಶಿನಾಥ ದೇವರಮನಿ ಕದ್ದರ್ಗಿ, ಆನಂದ ಯರಗಲ್, ಗೋಳಿ ಇಟಗಾ, ಸೆರಿದಂತೆ ಇತರರು ಇದ್ದರು.


ಶುಕ್ರವಾರ, ಡಿಸೆಂಬರ್ 2, 2022

ಶೈಕ್ಷಣಿಕ ಅವಧಿ ಪ್ರಾರಂಭದಲ್ಲಿಯೇ ಯೋಜನೆಗಳು ಅನುಷ್ಠಾನವಾಗಲಿ.

ಚಿತ್ತಾಪುರ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಅನೇಕ ಯೋಜನೆಗಳು ಜಾರಿಗೊಳಿಸಿದೆ ಆದರೆ ಅವುಗಳು ಶೈಕ್ಷಣಿಕ ಅವಧಿ ಪ್ರಾರಂಭದಲ್ಲಿಯೇ ಅನುಷ್ಠಾನಗೊಂಡು ವಿದ್ಯಾರ್ಥಿಗಳಿಗೆ ತಲುಪುವಂತೆ ಆಗಬೇಕು ಎಂದು ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಹೇಳಿದರು.

 ಪಟ್ಟಣದ ನಾಗಾವಿ ಕ್ಯಾಂಪಸ್‌ನಲ್ಲಿನ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶೂ-ಸಾಕ್ಸ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಶೈಕ್ಷಣಿಕ ಅವಧಿ ಪ್ರಾರಂಭವಾಗಿ ಅರ್ಧ ವರ್ಷ ಕಳೆದ ನಂತರ ಶಾಲಾ ಮಕ್ಕಳಿಗೆ ಸಮವಸ್ತ್ರ, ಶೂ-ಸಾಕ್ಸ್, ಪುಸ್ತಕಗಳು ವಿತರಿಸುತ್ತಿರುವುದರಿಂದ ಮಕ್ಕಳಿಗೆ ತೊಂದರೆ ಆಗುತ್ತಿದೆ ಹಾಗಾಗಿ ಸರಕಾರಗಳು ಮಕ್ಕಳ ವಿದ್ಯಾಭ್ಯಾಸದ ಹಿತದೃಷ್ಠಿಯಿಂದ ನಿಗದಿತ ಸಮಯದಲ್ಲಿ ಶಿಕ್ಷಣದ ಯೋಜನೆಗಳು ಮುಟ್ಟಿಸುವಂತದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 ಎಸ್‌ಡಿಎಂಸಿ ಅಧ್ಯಕ್ಷ ಕಾಶಿನಾಥ ಗುತ್ತೇದಾರ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಸರಕಾರ ಅನೇಕ ಯೋಜನೆಗಳು ಜಾರಿಗೊಳಿಸಿದೆ ಹೀಗಾಗಿ ವಿದ್ಯಾರ್ಥಿಗಳು ಸರಕಾರ ಸೌಲಭ್ಯಗಳನ್ನು ಪಡೆದುಕೊಂಡು ಶೈಕ್ಷಣಿಕವಾಗಿ ಅಭಿವೃದ್ದಿ ಸಾಧಿಸಬೇಕು 
 
 ಜೊತೆಗೆ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯ ಪರಿಪಾಲನೆ ಮತ್ತು ಏಕಾಗ್ರತೆ ಸಂಪಾದಿಸುವ ಮೂಲಕ ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನ ಹಾಗೂ ಮನೆಯಲ್ಲಿ ಪಾಲಕರ ಸಹಕಾರ ಮತ್ತು ಪ್ರೋತ್ಸಾಹವನ್ನು ಪಡೆದು ಸಾಧನೆಯ ಪಥದಲ್ಲಿ ಸಾಗಬೇಕು. ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕೆ ಬೇಕಾದ ವಿಷಯಗಳ ಕಡೆ ಗಮನ ಹರಿಸಬೇಕು ಹೊರತು ಅನಗತ್ಯ ಸಂಬಂಧಪಡದ ವಿಷಯಗಳ ಕಡೆ ಕಿವಿಗೊಡಬಾರದು ಎಂದು ಕಿವಿಮಾತು ಹೇಳಿದರು.

  ಮುಖ್ಯಶಿಕ್ಷಕಿ ಶ್ರೀಮತಿ ಸುನಂದಾ ಬಾರಡ್, ಶಿಕ್ಷಕ ಶಿವಬಸಪ್ಪ ಗುತ್ತೇಪ್ಪನವರ್ ಮಾತನಾಡಿದರು. ಪುರಸಭೆ ಮಾಜಿ ಅಧ್ಯಕ್ಷ ಈರಪ್ಪ ಭೋವಿ,ಪತ್ರಕರ್ತ ಎಂ.ಡಿ.ಮಶಾಕ್, ಶಿಕ್ಷಕರಾದ ಸಂತೋಷಕುಮಾರ ಜಮಾದಾರ, ಶಿವಪುತ್ರ ವಿ, ವೀಣಾ ಕುಂಬಾರ, ಹಣಮಂತ, ಜನ್ನತುಲ್ ಫೀರ್ದೋಸ್, ಮಮತಾ, ರೇಣುಕಾ ರೋಣದ್, ಫಾತೀಮಾ ಅನ್ನೀಸಾ, ಮೇಘಾ, ಸಿದ್ದಮ್ಮ ಇತರರು ಇದ್ದರು. ಶಿಕ್ಷಕ ಸಂಗಾರೆಡ್ಡಿ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಪುರಸಭೆಯಿಂದ ಕಸದ ಡಬ್ಬಿಗಳನ್ನು ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಶಾಲೆಯ ಮುಖ್ಯಶಿಕ್ಷಕರಿಗೆ ಹಸ್ತಾಂತರ ಮಾಡಿದರು.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...