ಪೋಸ್ಟ್‌ಗಳು

ಡಿಸೆಂಬರ್, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಜ.4ಕ್ಕೆ ಅಂಬಿಗರ ಚೌಡಯ್ಯ ಜಯಂತಿ ಪೂರ್ವಸಿದ್ಧತಾ ಸಭೆ.

ಇಮೇಜ್
ಚಿತ್ತಾಪೂರ: ಪಟ್ಟಣದ  ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಜನವರಿ 4 ಬೆಳಿಗ್ಗೆ 10:30ಕ್ಕೆ  ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತೋತ್ಸವದ ಪೂರ್ವ ಸಿದ್ಧತಾ ಸಭೆ ಕರೆಯಲಾಗಿದೆ ಎಂದು ಕೋಲಿ ಸಮಾಜದ ಯುವ ಘಟಕ ನಗರ ಅಧ್ಯಕ್ಷ ರಾಜು ಹೋಳಿಕಟ್ಟಿ ತಿಳಿಸಿದ್ದಾರೆ. ಜನೆವರಿ 21 ರಂದು ಸರ್ಕಾರದಿಂದ ಆಚರಣೆ ಮಾಡುವ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿ ಕುರಿತು ಚರ್ಚೆ ಮಾಡಲು ಹಾಗೂ ಸಮಾಜದ ಸಂಘಟನೆ ಕುರಿತು ಚರ್ಚೆ ನಡೆಸಲು ತಾಲ್ಲೂಕು ಕೋಲಿ ಸಮಾಜದ ಅಧ್ಯಕ್ಷ ರಾಮಲಿಂಗ ಬಾನರ್, ಗೌರವಾಧ್ಯಕ್ಷ ಹಣಮಂತ ಸಂಕನೂರು, ಪ್ರಧಾನ ಕಾರ್ಯದರ್ಶಿ ದೇವಿಂದ್ರ ಅರಣಕಲ್ ನಗರ ಕೋಲಿ ಸಮಾಜದ ಅಧ್ಯಕ್ಷ ಭೀಮಣ್ಣ ಹೋತಿನಮಡು, ತಾಲ್ಲೂಕು ಯುವ ಕೋಲಿ ಸಮಾಜದ ಅಧ್ಯಕ್ಷ ಗುಂಡು ಐನಾಪುರ, ಉಪಸ್ಥಿತಿಯಲ್ಲಿ ಸಭೆ ನಡೆಯಲಿದ್ದು   ಸಮಾಜದ ಸರ್ವ ಪದಾಧಿಕಾರಿಗಳು, ಯುವ ಘಟಕದ ಪದಾಧಿಕಾರಿಗಳು, ಸಲಹಾ ಸಮಿತಿಯ ಸರ್ವ ಮುಖಂಡರು ತಪ್ಪದೆ ಸಭೆಗೆ ಆಗಮಿಸಿ ಜಯಂತಿ ಆಚರಣೆ ಬಗ್ಗೆ ಸಲಹೆ, ಸೂಚನೆ ನೀಡುವ ಮೂಲಕ ಮಾರ್ಗದರ್ಶನ ಮಾಡಿ ಸಭೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.  

ಹೋಟೆಲ್-ರೆಸ್ಟೋರೆಂಟ್ ಮಧ್ಯರಾತ್ರಿ 1 ಗಂಟೆಗೆ ಕ್ಲೋಸ್ ಮಾಸ್ಕ್ ಕಡ್ಡಾಯ: ಖಡಕ್ ರೂಲ್ಸ್ ಜಾರಿ ಮಾಡಿದ ಡಿಸಿ.

ಇಮೇಜ್
ಕಲಬುರಗಿ: ಹೊಸ ವರ್ಷಾಚರಣೆಯ ಮುನ್ನಾ ದಿನ ಹಾಗೂ ವರ್ಷಾಚರಣೆಗೆ ಸಂಬಂಧಪಟ್ಟಂತೆ ಎಲ್ಲಾ ಆಚರಣೆಗಳನ್ನು ಡಿಸೆಂಬರ 31 ಮತ್ತು ಜನವರಿ 1 ರಂದು ತಡರಾತ್ರಿ ರಾತ್ರಿ 1 ಗಂಟೆಯ ಒಳಗೆ ಪೂರ್ಣಗೊಳಸಬೇಕು. ವರ್ಷಾಚರಣೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಒಂದೆಡೆ ಸೇರುವ ಸಂದರ್ಭದಲ್ಲಿ ಕಾರ್ಯಕ್ರಮ ಹಗಲು ಹೊತ್ತಿನಲ್ಲಿ ಹೊರಾಂಗಣ ಪ್ರದೇಶಗಳಲ್ಲಿ ಆಯೋಜಿಸಬೇಕು. ಹೋಟೆಲ್, ಪಬ್, ರಸ್ಟೋರೆಂಟ್‌ಗಳ, ಕ್ಲಬ್, ರೆಸಾರ್ಟ್ ಇತ್ಯಾದಿ ಒರಂಗಣಗಳ ಕುಳಿತುಕೊಳ್ಳುವ ವ್ಯವಸ್ಥೆಯಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಎಚ್ಚರಿಕೆ ನೀಡಿದ್ದಾರೆ. ವಿದೇಶಗಳಲ್ಲಿ ಕೋವಿಡ್ ದಿಢೀರ್ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ಜಿಲ್ಲೆಯ ಜನತೆ ಮೈ ಮರೆಯಬಾರದು. ಮಹಾಮಾರಿ ಕೋವಿಡ್ ಸೋಂಕಿನ ಮುನ್ನೆಚ್ಚರಿಕೆ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರದಲ್ಲಿದರೂ ಸಹ ಅದಾಗ್ಯೂ ಪ್ರಪಂಚದ ಕೆಲವು ದೇಶಗಳಲ್ಲಿ ಪ್ರಕರಣ ಏರುಗತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ ಎಂದಿದ್ದಾರೆ. ಅಂತರಾಷ್ಟ್ರೀಯ ಪ್ರಯಾಣಿಕರು ವಿದೇಶದಿಂದ ಕಲಬುರಗಿ ಜಿಲ್ಲೆಗೆ ಬಂದಾಗ ಏರ್‌ಪೋರ್ಟ್ನಲ್ಲಿ ಕೋವಿಡ್ ಸ್ಯಾಂಪಲ್ ನೀಡಿದಲ್ಲಿ ಫಲಿತಾಂಶ ಬರುವವರೆಗೂ 7 ದಿನಗಳ ವರೆಗೆ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಜ್ವರದ ಲಕ್ಷಣ ಕಂಡುಬಂದಲ್...

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ್ದು ಕುವೆಂಪು: ಮರತೂರ್

ಇಮೇಜ್
ಚಿತ್ತಾಪೂರ: ಕುವೆಂಪು ಅವರು ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದರೆ ಎಂದು  ಮಾಜಿ ಜಿಪಂ ಸದಸ್ಯ ಶಿವಾನಂದ ಪಾಟೀಲ ಮರತೂರ ಹೇಳಿದರು. ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್, ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ  ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನಾಚರಣೆಯ ಅಂಗವಾಗಿ " ವಿಶ್ವ ಮಾನವ ದಿನಾಚರಣೆ" ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಸಿಗೆ ನೀರು ಎರೆದು,ಕುವೆಂಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಂಜೆವಾಣಿ ಪತ್ರಿಕೆಯ 2023ರ ಕ್ಯಾಲೆಂಡರ ಬಿಡುಗಡೆ ಮಾಡಿ ಮಾತನಾಡಿದ ಅವರು ಕುವೆಂಪು ಅವರು ಎಲ್ಲ ಪ್ರಕಾರದ ಸಾಹಿತ್ಯದಲ್ಲಿ ತೊಡಗಿಸಿಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮನುಜಮತ ವಿಶ್ವಪಥ ಎಂದು ಸಾರಿ ಮಾನವ ಸಮಾಜಕ್ಕೆ ಅನೇಕ ಸಂದೇಶ ನೀಡಿದ್ದಾರೆ. ಹಾಗಾಗಿ ಅವರನ್ನು ವಿಶ್ವಮಾನವ ಎಂದು ಹೇಳಲಾಗುತ್ತದೆ ಎಂದರು. ಕುವೆಂಪು ಅವರು ನಾಡಿಗೆ ನಾಡ ಗೀತೆ, ರೈತ ಗೀತೆ ಹೇಗೆ ಅನೇಕ ಕೃತಿಗಳನ್ನು ರಚಿಸಿದ್ದಾರೆ  ಇಂದಿನ ವಿದ್ಯಾರ್ಥಿಗಳು ಅವರ ಕೃತಿಗಳನ್ನು ಓದಿ ಅರ್ಥಮಾಡಿಕೊಂಡು ಅವರ ವಿಚಾರಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪ್ರಾಸ್ತಾವಿಕ ನಾಸಾಸಾಪ ಅಧ್ಯಕ್ಷ ಕಾಶಿನಾಥ ಗುತ್ತೇದಾರ್ ಮ...

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಇಮೇಜ್
ಚಿತ್ತಾಪುರ: ತಾಲೂಕಿನ ಕದ್ದರ್ಗಿ ಗ್ರಾಮಕ್ಕೆ ಬಿಜೆಪಿ ಪಕ್ಷದ ಯೋಜನೆಗಳ ಮಾಹಿತಿಯನ್ನು ಜನರಿಗೆ ಮುಟ್ಟಿಸಲು ಆಗಮಿಸಿದ ವಾಹನಕ್ಕೆ ಬಿಜೆಪಿ ಕಾರ್ಯಕರ್ತರು ಖುಷಿಯಿಂದ ಹಾಲಿನ ಅಭಿಷೇಕ ಮಾಡಿ ಬರಮಾಡಿಕೊಂಡರು. ಗ್ರಾಮದ ಬಿಜೆಪಿ ಮುಖಂಡ ಅಡೆಪ್ಪ ಮಾಲಿ ಪಾಟೀಲ್ ಮಾತನಾಡಿ "ಜನ ಸೇವೆಯೇ ಜನಾರ್ದನ ಸೇವೆ" ಎಂಬ ಆಶಯದೊಂದಿಗೆ ಸಮಾಜ ಸೇವಕ ಮಣಿಕಂಠ ರಾಠೋಡ್ ಅವರು ತಾಲೂಕಿನಲ್ಲಿ ಬಿಜೆಪಿ ಪಕ್ಷದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ಮುಟ್ಟಿಸುವ ನಿಟ್ಟಿನಲ್ಲಿ ತಾಲೂಕಿನ ಚಿತ್ತಾಪುರ ಪಟ್ಟಣ, ವಾಡಿ, ನಾಲವಾರ, ದಂಡೋತಿ, ಹೆಬ್ಬಾಳ, ರಾವೂರ, ಮಾಡಬೂಳ, ಭೀಮನಹಳ್ಳಿ, ಭಂಕೂರ ಹೀಗೆ 9 ಕಡೆ ಜನ ಸ್ನೇಹಿ ಕೇಂದ್ರಗಳನ್ನು ತೆರೆದು  ಸೇವೆ ಮಾಡುತ್ತಿದ್ದಾರೆ. ಹಾಗೂ ಪಕ್ಷದ ಯೋಜನೆಗಳ ಮಾಹಿತಿ ಪ್ರತಿ ಗ್ರಾಮದ ಜನ ಸಾಮಾನ್ಯರಿಗೆ ತಿಳಿಯಲಿ ಎಂದು ವಾಹನದ ಮೂಲಕ ಪ್ರಚಾರ ಮಾಡುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬಸವರಾಜ್ ಬೆಳಗುಂಪಿ, ಗಣಪತಿ ನಾಯಕ, ವಿಶ್ವರಾಜ್ ದೇಸಾಯಿ, ಅಶೋಕ್ ಗುತ್ತೇದಾರ,  ಪರಮೇಶ್ವರ ಗುಡ್ಡಪೂರ,  ಮಲ್ಲಿಕಾರ್ಜುನ ದೇಸಾಯಿ,  ಚಂದ್ರಶೇಖರ್ ದೇಸಾಯಿ,  ಶಿವಕುಮಾರ್ ಪಾಳ, ಮೊದಿನ್ ಪಟೇಲ್,  ಸಿದ್ದಲಿಂಗ ಕೋರಿ, ಬಾಪೂಗೌಡ,  ಸಿದ್ದು ಜೀವಣಗಿ,  ಸಾಗರ ದೇಸಾಯಿ,  ಭೀಮಾಶಂಕರ್ ದೇಸಾಯಿ, ಸೇರಿದಂತೆ ಇತರರಿದ್ದರು.

ಭುಟ್ಟೊ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ.

ಇಮೇಜ್
ಚಿತ್ತಾಪೂರ: ಪ್ರಧಾನಿ ನರೇಂದ್ರ ಮೋದಿಯವರು "ಗುಜರಾತ್ ನ ಕಟುಕ" ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ವಿರುದ್ಧ ಬಿಜೆಪಿ ಯುವ ಘಟಕ ನೇತೃತ್ವದಲ್ಲಿ ಗುರುವಾರ ಪಟ್ಟಣದ ಲಾಡ್ಜೀಂಗ್ ಕ್ರಾಸ್ ನಲ್ಲಿ ಪ್ರತಿಭಟನೆ ನಡೆಸಿ ಭುಟ್ಟೊ ಅವರ ಪ್ರತಿಕೃತಿಗೆ ಬೂಟ್ ಗಾಲಿನಿಂದ ಒದ್ದು ಪ್ರಕೃತಿ ದಹಿಸಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅರಣುಕುಮಾರ್ ಯಾಗಪೂರ ಮಾತನಾಡಿ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂ ಧರ್ಮವನ್ನು ರಕ್ಷಿಸುತ್ತಿದ್ದಾರೆ. ಇದನ್ನು ಅರಗಿಸಿಕೊಳ್ಳಲು ಆಗದ ಪಾಕಿಸ್ತಾನ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸುರೇಶ ಬೆನಕನಹಳ್ಳಿ, ಮಹ್ಮದ ಯುನುಸ್ ಪ್ರತಿಭಟನೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ, ಬಿಜೆಪಿ ಕಾರ್ಯದರ್ಶಿ ರಾಮದಾಸ ಚವ್ಹಾಣ್, ನಗರ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಪ್ರಸಾದ್  ಅವಾಂಟಿ,  ಕಾರ್ಮಿಕ ಬಂಡಿ, ಅಕ್ಷಯ ಚಕಡಿ, ಹನುಮಾನ, ಯಮುನಪ್ಪ,ದೇವರಾಜ ತಳವಾರ, ಧನರಾಜ್ ರಾಠೋಡ್, ಶಂಕರ ಜಾಪೂರ,ರಾಜು ಹೊನಗುಂಟಾ,ಮಂಜು ಹೆಬ್ಬಾಳ, ಸಾಗರ, ಗುಂಡು, ಕಾಶಿ, ಅಂಬರೀಶ, ವೀರೇಶ ರಾವೂರ, ಸೇರಿದಂತೆ ಇತರರು ಇದ್ದರು.

ನಾಗಾವಿ ಕ್ಷೇತ್ರ ಶ್ರೀಮಂತವಾಗಬೇಕು: ಅಗಸರ್

ಇಮೇಜ್
ಚಿತ್ತಾಪುರ: ನಾಗಾವಿ ಘಟಿಕ ಸ್ಥಾನವು ಅಳಿವಿನಂಚಿನಲ್ಲಿದ್ದು ಅಲ್ಲಿರುವ ಅವಶೇಷಗಳು ಹಾಳಾಗಿ ಹೊಗುತ್ತಿದ್ದು ಅವುಗಳನ್ನು ಸಂರಕ್ಷಿಸುವದಲ್ಲದೇ ಮುಂದಿನ ಪೀಳಿಗೆಗೆ ಪೋಶಿಸಿ ಶೈಕ್ಷಣಿಕವಾಗಿ ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ, ಶ್ರೀಮಂತಗೊಳಿಸಬೇಕಾಗಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ್ ಹೇಳಿದರು.   ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶನಿವಾರ ನಡೆದ ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಉದ್ಘಾಟನೆ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರಕೂಟರ ಕಾಲದಲ್ಲಿಯೇ ನಾಗಾವಿ ಕ್ಷೇತ್ರವು ವಿಶ್ವವಿದ್ಯಾಲಯ ಕೇಂದ್ರವಾಗಿ ಪ್ರಸಿದ್ದಿ ಪಡೆದು ವಿಶ್ವದಲ್ಲಿಯೇ ಪ್ರಸಿದ್ದ ಕ್ಷೇತ್ರವಾಗಿದೆ.ಇಂತಹ ಐತಿಹಾಸಿಕ ಕ್ಷೇತ್ರದಲ್ಲಿ ಅಧ್ಯಯನ ಕೇಂದ್ರವಾಗಬೇಕು ಎನ್ನುವ ಬೇಡಿಕೆ ಈ ಭಾಗದಿಂದ ಕೇಳಿಬರುತ್ತಿದೆ ಗುಲಬರ್ಗಾ ವಿಶ್ವವಿದ್ಯಾಲಯವು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.     ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮಾತನಾಡಿ,ಈ ಭಾಗದ ಐತಿಹಾಸಿಕ ನಾಗಾವಿ ಕ್ಷೇತ್ರದ ಇತಿಹಾಸ ನಾಡಿನಾದ್ಯಂತ ಪರಿಚಯಿಸುವ ಉದ್ದೇಶದಿಂದ ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಹುಟ್ಟು ಹಾಕಿರುವ ಕಾರ್ಯ ಶ್ಲಾಘನೀಯ,ನಾಗಾವಿ ಉತ್ಸವ ಮಾಡುವುದು ಅವಶ್ಯಕವಾಗಿದ್ದು ಇದಕ್ಕೆ ಬೇ...

ಭ್ರಷ್ಟಾಚಾರ-ನಿರುದ್ಯೋಗ ಬಗ್ಗೆ ಮಾತನಾಡಿದ್ದೇ ತಪ್ಪಾ?: ಪ್ರಿಯಾಂಕ್ ಖರ್ಗೆ

ಇಮೇಜ್
ಚಿತ್ತಾಪೂರ: ರಾಜ್ಯ ಸರ್ಕಾರದ ಬ್ರಹ್ಮಾಂಡದ ಭ್ರಷ್ಟಾಚಾರವನ್ನು ಬಯಲಿಗೇಳಿದ್ದೀದ್ದೇನೆ. ಉದ್ಯೋಗ ಸಿಗದೆ ನಮ್ಮ ಯುವಕರು ಬೀದಿ ಬೀದಿ ಅಲೆಯುತ್ತಿದ್ದಾರೆ. ಅವರಿಗೆ ಉದ್ಯೋಗ ಕೊಡಿ ಎಂದು ಆಗ್ರಹಿಸಿದ್ದೇನೆ.ಇದು ಬಿಜೆಪಿಯವರಿಗೆ ಸರಿ ಕಾಣದೆ ನನ್ನನ್ನು ಹೇಗಾದರೂ ಮಾಡಿ ಚುನಾವಣೆಯಲ್ಲಿ ಸೋಲಿಸಲು ಷಡ್ಯಂತರ ಮಾಡುತ್ತಿದ್ದಾರೆ. ನಮ್ಮ ಚಿತ್ತಾಪುರದ ಜನರು ಪ್ರಜ್ಞಾವಂತರಿದ್ದ ಬಿಜೆಪಿಯವರ ಬೂಟಾಟಿಕೆಯ ಇಲ್ಲಿ ನಡೆಯುವುದಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಗುಡುಗಿದರು. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಪುರಸಭೆ ಆಯೋಜಿಸಿದ್ದ, 2022-23ನೇ ಸಾಲಿನ 15ನೇ ಹಣಕಾಸಿನ ಲೋಕೋಪಯೋಗಿ ಇಲಾಖೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಇಲಾಖೆ ಯೋಜನೆಯಲ್ಲಿ 25.ಕೋಟಿ ಅನುದಾನದಡಿಯಲ್ಲಿ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಬ್‌ಕಾ ಸಾತ್ ಸಬ್ ಕಾ ವಿಕಾಸ್ ಬರೀ ಬೊಗಳೆ ಘೋಷಣೆಯಾಗಿ ಉಳಿದುಕೊಂಡಿದೆ. ಅಲ್ಪಸಂಖ್ಯಾತರ ಮೇಲೆ ದಾಳಿ ಜಾಸ್ತಿಯಾಗಿದೆ. 58 ಪ್ರತಿಶತ ಬಜೆಟ್ ಜಾಹೀರಾತಿಗೆ ಬಳಸಲಾಗುತ್ತಿದೆ. ಮಕ್ಕಳು ಇಲ್ಲದೇ ಶಾಲೆಗಳು ಮುಚ್ಚುತ್ತಿವೆ. 100 ಸ್ಮಾರ್ಟ್ ಸಿಟಿ ಯೋಜನೆ ಎಲ್ಲಿ ಹೋಯಿತು. ರೈತರ ಆದಾಯ ಕುಸಿದು ಹೋಗುತ್ತಿದೆ. ಸ್ವಿಸ್ ಬ್ಯಾಂಕ್ ಹಣ ಯಾರಿಗೆ ಬಂದಿದೆ. 2 ಸಾವಿರ ಕೋಟಿ ಇದ್ದ ಹಣ ಬಿಜೆಪಿ ಬಂದ ಮೇಲೆ ವಿದೇಶಿ ಬ್ಯಾಂಕ್ ಗಳಲ್ಲಿ 38 ಸಾವಿರ ಕೋಟಿ ...

ಆಕ್ರಮ ಮರಳು ದಂಧೆಯಲ್ಲಿ ಅಧಿಕಾರಿಗಳು ಭಾಗಿ: ಪ್ರಿಯಾಂಕ ಖರ್ಗೆ.

ಇಮೇಜ್
ಚಿತ್ತಾಪೂರ: ಆಕ್ರಮ ಮರಳು ದಂಧೆ ಕೊರರ ಜೊತೆ ಕಂದಾಯ, ಗಣಿ ಮತ್ತು ಭೂ-ವಿಜ್ಞಾನ ಇಲಾಖೆ, ಲೋಕೋಪಯೋಗಿ ಇಲಾಖೆ,ಸಾರಿಗೆ ಇಲಾಖೆ,ಗೃಹ ಇಲಾಖೆಯ ಅಧಿಕಾರಿಗಳಿಂದ ಹಿಡಿದು ಪಿಡಿಓವರೆಗೆ ಎಲ್ಲ ಹಂತದ ಇಲಾಖೆಯ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು  ಶಾಸಕ ಪ್ರಿಯಾಂಕ ಖರ್ಗೆ ಹೇಳಿದರು  ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ನಡೆದ ತಾಲೂಕು ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ತನಾಡಿದ ಅವರು ತಾಲೂಕಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಸಂಗ್ರಹವಾದ ಡಿಎಂಎಫ್ ಸುಂಕದ ಹಣವನ್ನು ಕಲಬುರಗಿಗೆ ವರ್ಗಾವಣೆ ಆಗುತ್ತಿದೆ.ಆದರೆ ಸಂಗ್ರಹವಾದ ಸುಂಕವನ್ನು ಚಿತ್ತಾಪುರಕ್ಕೆ ಮಾತ್ರ ಬಳಕೆಯಾಗಬೇಕು ಕಾನೂನು ಬಾಹಿರವಾಗಿ 24 ತಾಸು ಕಾಲ ಗುತ್ತಿಗೆದಾರರು ಅಕ್ರಮ ಮರುಳು ಸಾಗಾಣಿಕೆ ಮಾಡುತ್ತಿದ್ದಾರೆ. ಓವರ್ ಲೋಡ್ ಕೂಡಾ ಒಂದು ಸಮಸ್ಯೆಯಾಗಿದೆ. ಇದರಿಂದ ಗ್ರಾಮೀಣ ಭಾಗದ ರಸ್ತೆಗಳು ಹಾಳಾಗಿವೆ. ಸರ್ಕಾರ ಈ ರಸ್ತೆಗಳನ್ನು ಕೂಡಾ ಮೇಲ್ದರ್ಜೆಗೆ ಏರಿಸುತ್ತಿಲ್ಲ. ಅಕ್ರಮ ಮರಳು ಸಾಗಾಣಿಕೆಯಿಂದ ಇಷ್ಟೆಲ್ಲ ಅನಾನೂಕೂಲ ಇದ್ದರೂ ಯಾಕೆ ಅಕ್ರಮ ಮರಳು ಸಾಗಾಣಿಕೆ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದರು. ಒಬ್ಬ ವ್ಯಕ್ತಿ ಗರಿಷ್ಠ 70 ವಾಹನಗಳನ್ನು ನೋಂದಣಿ ಮಾಡಿಸಬಹುದು. ಒಂದು ಲಾರಿಗೆ ಕನಿಷ್ಠ 16 ಟನ್ ಗಳಿಂದ 22 ಟನ್ ಮರಳು ಸಾಗಾಣಿಕೆ ಮಾಡಬಹುದಾಗಿದೆ.ಎಂದು ಗಣಿ ಮತ್ತು ಭೂ-ವಿಜ್ಞಾನ ಇಲಾಖೆ ಅಧಿಕಾರಿಗಳು ಹೇಳುತ್ತಾರೆ ಇದರಿಂದ ...

ವಿಠಲ್ ಹೇರೂರ ಹಾಕಿಕೊಟ್ಟ ಮಾರ್ಗದರ್ಶನ ಪಾಲಿಸೋಣ.

ಇಮೇಜ್
ಚಿತ್ತಾಪೂರ: ಕೂಲಿ ಸಮಾಜಕ್ಕೆ ವಿಠಲ್ ಹೇರೂರು ಅವರು ಹಾಕಿಕೊಟ್ಟ ಮಾರ್ಗದರ್ಶನ ನಾವೂ ಎಲ್ಲಾರು ಪಾಲಿಸೋಣ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು. ಪಟ್ಟಣದ ನಿಜ ಶರಣ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ವಿಠಲ ಹೇರೂರು ಅವರ ಪುಣ್ಯಸ್ಮರಣೆ ನಿಮಿತ್ಯ ಹೇರೂರು ಅವರ ಭಾವಚಿತ್ರಕ್ಕೆ ಪುಸ್ಪನಮನ ಸಲ್ಲಿಸಿ ಮಾತನಾಡಿದ ಅವರು ಸಂಘದಲ್ಲಿ ಹಿರಿಯ ಮಾರ್ಗದರ್ಶನ ವಿಲ್ಲದೆ ಯಾವುದೇ ರೀತಿಯ ಮನವಿ, ಪ್ರತಿಭಟನೆ ಯಾವುದು ಮಾಡಬೇಡಿ ಸಮಾಜದ ಪ್ರತಿಯೊಬ್ಬರ ಮಾರ್ಗದರ್ಶನ ತೆಗೆದುಕೊಳ್ಳಿ ಅದರ ಜೊತೆಗೆ ಸಂಘದ ಸಲಹ ಸಮಿತಿಯ ಮಾರ್ಗದರ್ಶನ ಕೂಡ ತೆಗೆದುಕೊಳ್ಳಬೇಕು ಎಂದು ಹೇಳಿದರು. ಬಸವರಾಜ ಚಿಮ್ಮನ್ನಳ್ಳಿ ಮಾತನಾಡಿ ವಿಠಲ್ ಹೇರೂರು ಅವರು ನಮ್ಮನ್ನು ಅಗಲಿ  9 ವರ್ಷಗಳು ಆಗುತ್ತಿದ್ದು ಅವರು ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದೆವೆ. ಒಂದು ವೇಳೆ ವೀಠಲ್ ಹೇರೂರ ಸಾಹೇಬರು ಇದ್ದರೆ ಕೂಲಿ ಸಮಾಜ ಎಸ್‌ಟಿ ಸೇರ್ಪಡೆ ಆಗುತ್ತಿತ್ತು ಎಂದು ಹೇಳಿದರು. ಬಿಜೆಪಿ ಓಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ ಮಾತನಾಡಿ ಸಂಘಟನೆ ಎಂಬ ವಿಷಯ ಬಂದಾಗ ನಮಗೆ ವಿಠಲ್ ಹೇರೂರು ಹೆಸರು ನಮ್ಮ ಸಮಾಜದಲ್ಲಿ ನೆನಪು ಬರುತ್ತದೆ. ಆದರೆ ಇಂದು ಸಮಾಜದಲ್ಲಿ ಸಂಘಟನೆ ದಾರಿ ತಪ್ಪುತ್ತಿದೆ. ರಾಜಕೀಯ ಮಾಡಬೇಡಿ ಸಮಾಜದ ಹಿತದೃಷ್ಟಿ ಇರಲಿ, ಸಂಘಟನೆಗೆ ಒಂದು ದೃಢತೆ ಇರಲಿ, ಇಲ್ಲ ಅಂದ್ರೆ ಸಂಘಟನೆಗೆ ರಾಜೀನಾಮೆ ನೀಡಿ ಎಂದು ಸಮಾಜ...

ಶೈಕ್ಷಣಿಕ ಅವಧಿ ಪ್ರಾರಂಭದಲ್ಲಿಯೇ ಯೋಜನೆಗಳು ಅನುಷ್ಠಾನವಾಗಲಿ.

ಇಮೇಜ್
ಚಿತ್ತಾಪುರ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಅನೇಕ ಯೋಜನೆಗಳು ಜಾರಿಗೊಳಿಸಿದೆ ಆದರೆ ಅವುಗಳು ಶೈಕ್ಷಣಿಕ ಅವಧಿ ಪ್ರಾರಂಭದಲ್ಲಿಯೇ ಅನುಷ್ಠಾನಗೊಂಡು ವಿದ್ಯಾರ್ಥಿಗಳಿಗೆ ತಲುಪುವಂತೆ ಆಗಬೇಕು ಎಂದು ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಹೇಳಿದರು.  ಪಟ್ಟಣದ ನಾಗಾವಿ ಕ್ಯಾಂಪಸ್‌ನಲ್ಲಿನ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶೂ-ಸಾಕ್ಸ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಶೈಕ್ಷಣಿಕ ಅವಧಿ ಪ್ರಾರಂಭವಾಗಿ ಅರ್ಧ ವರ್ಷ ಕಳೆದ ನಂತರ ಶಾಲಾ ಮಕ್ಕಳಿಗೆ ಸಮವಸ್ತ್ರ, ಶೂ-ಸಾಕ್ಸ್, ಪುಸ್ತಕಗಳು ವಿತರಿಸುತ್ತಿರುವುದರಿಂದ ಮಕ್ಕಳಿಗೆ ತೊಂದರೆ ಆಗುತ್ತಿದೆ ಹಾಗಾಗಿ ಸರಕಾರಗಳು ಮಕ್ಕಳ ವಿದ್ಯಾಭ್ಯಾಸದ ಹಿತದೃಷ್ಠಿಯಿಂದ ನಿಗದಿತ ಸಮಯದಲ್ಲಿ ಶಿಕ್ಷಣದ ಯೋಜನೆಗಳು ಮುಟ್ಟಿಸುವಂತದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  ಎಸ್‌ಡಿಎಂಸಿ ಅಧ್ಯಕ್ಷ ಕಾಶಿನಾಥ ಗುತ್ತೇದಾರ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಸರಕಾರ ಅನೇಕ ಯೋಜನೆಗಳು ಜಾರಿಗೊಳಿಸಿದೆ ಹೀಗಾಗಿ ವಿದ್ಯಾರ್ಥಿಗಳು ಸರಕಾರ ಸೌಲಭ್ಯಗಳನ್ನು ಪಡೆದುಕೊಂಡು ಶೈಕ್ಷಣಿಕವಾಗಿ ಅಭಿವೃದ್ದಿ ಸಾಧಿಸಬೇಕು     ಜೊತೆಗೆ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯ ಪರಿಪಾಲನೆ ಮತ್ತು ಏಕಾಗ್ರತೆ ಸಂಪಾದಿಸುವ ಮೂಲಕ ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನ ಹಾಗೂ ಮನೆಯಲ...