ಬುಧವಾರ, ಅಕ್ಟೋಬರ್ 4, 2023

ಸಂಕನೂರ, ಕೆಸರು ಗದ್ದೆಯಾದ ರಸ್ತೆ: ಜನ ಸಂಚಾರ ಅಸ್ತವ್ಯಸ್ತ.

ಸಂಕನೂರ ಗ್ರಾಮದ ಸರ್ಕಾರಿ ಶಾಲೆಯ ಮುಂದೆ ಕೆಸರು ಗದ್ದೆಯಾದ ರಸ್ತೆಯ ಚಿತ್ರಣ.

ಚಿತ್ತಾಪುರ: ಅಳ್ಳೂಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕನೂರ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರದ ಮುಂದಿನ ರಸ್ತೆ ಕೆಸರು ಗದ್ದೆಯಾಗಿ ಮಾರ್ಪಟ್ಟು, ಜನಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಗ್ರಾಮದ ಮುಖ್ಯರಸ್ತೆಯಾಗಿದ್ದು. ಈ ರಸ್ತೆಯಲ್ಲಿ ಸಾಕಷ್ಟು ಜನರು ಶಾಲಾ ವಿದ್ಯಾರ್ಥಿಗಳು, ನಡೆದಾಡುತ್ತಾರೆ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಗೆ ಹಾಗೂ ಸಂಬಂಧಪಟ್ಟ ಇಲಾಖೆಗೆ ಈ ರಸ್ತೆ ದುರಸ್ತೇಗೆ ಮನವಿ ಮಾಡಿದ್ರು ಪ್ರಯೋಜನವಾಗುತ್ತಿಲ್ಲ . ಈಗಾಗಲೇ ಈ ರಸ್ತೆಯಿಂದಾಗಿ ಬೈಕ್ ಸವಾರರಿಗೆ ಸಾಕಷ್ಟು ಸಣ್ಣ-ಪುಟ್ಟ ಅನಾಹುತಗಳು ಆಗಿದ್ದು. ಶಾಲಾ ವಿದ್ಯಾರ್ಥಿಗಳು ಬಿದ್ದು ಸಮವಸ್ತ್ರ ಗಲೀಜು ಮಾಡಿಕೊಂಡ ಸಂದರ್ಭಗಳು ಇವೆ.

ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ರಸ್ತೆ ಕಾಮಗಾರಿಯನ್ನು ಕೈಯೆತ್ತಿಕೊಂಡು ಕೆಸರುಗದ್ದೆಯಾದ ರಸ್ತೆಯನ್ನು ಒಳ್ಳೆಯ ರಸ್ತೆಯನ್ನಾಗಿ ಮಾಡಿಕೊಡಬೇಕಾಗಿ ಗ್ರಾಮಸ್ಥರಾದ ಸಾಹೇಬ್ ಗೌಡ, ಮಂಜುನಾಥ್, ಮಹಾದೇವ್, ನಾಗಪ್ಪ, ಅಂಬರೀಶ್, ಒತ್ತಾಯಿಸಿದ್ದಾರೆ.

ಭಾನುವಾರ, ಅಕ್ಟೋಬರ್ 1, 2023

ಬೀದಿ ನಾಯಿಗಳ ಹಾವಳಿ

ಪಟ್ಟಣದ ಮಾರ್ಕೆಟ್ ನಲ್ಲಿ ಬೀದಿ ನಾಯಿಗಳ ಓಡಾಟ, ಜಗಳ, ಜನರಲ್ಲಿ ಭಯದ ವಾತಾವರಣ ನಿರ್ಮಾಣ.

ಚಿತ್ತಾಪುರ: ಮಾರ್ಕೆಟ್ ನಲ್ಲಿ  ಬೀದಿ ನಾಯಿಗಳದ್ದೇ ಕಾರುಬಾರು. ಪಟ್ಟಣದ ಬಹುತೇಕ ರಸ್ತೆಗಳನ್ನು ಆಕ್ರಮಿಸಿಕೊಂಡಿರುವ ಬೀದಿ ನಾಯಿಗಳಿಗೆ ರಸ್ತೆಗಳೇ ಆಶ್ರಯ ತಾಣಗಳಾಗಿವೆ. ಇದರಿಂದ ನಗರದಲ್ಲಿ ಸಂಚರಿಸುವ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ರಸ್ತೆ ಮಧ್ಯೆದಲ್ಲಿಯೇ ದಿನನಿತ್ಯ ಅಡ್ಡಾಡುವ ನಾಯಿಗಳ ಹಾವಳಿಯಿಂದ ವಾಹನ ಸವಾರರು ನೆಮ್ಮದಿಯಿಂದ ವಾಹನ ಚಾಲನೆ ಮಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಪುರಸಭೆ ಮಾತ್ರ ಈ ವಿಷಯದಲ್ಲಿ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಈಗಲಾದರೂ ಪುರಸಭೆ ಎಚ್ಚೆತ್ತುಕೊಂಡು ಪಟ್ಟಣದಲ್ಲಿನ ನಾಯಿಗಳ ಹಾವಳಿ ತಡೆಗಟ್ಟುವಂತೆ ಕ್ರಮವಹಿಸುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

ಮಾರ್ಕೆಟ್ ರಸ್ತೆಯಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದೆ. ಬೆಳಗಿನ ಸಮಯದಲ್ಲಿ ವಾಯುವಿಹಾರಕ್ಕಾಗಿ ಹೋಗುವರಿಗೂ ಹಾಗೂ ಮಕ್ಕಳು ಈ ರಸ್ತೆಯಲ್ಲಿ ಸಂಚರಿಸಲು ಭಯ ಪಡುವಂತಹ ವಾತಾವರಣ ನಿರ್ಮಾಣ ಆಗಿದೆ ಎನ್ನುತ್ತಾರೆ.

             -ಮಂಜುನಾಥ್ ಸ್ವಾಮಿ
ತಾಲೂಕಾಧ್ಯಕ್ಷ, ಕರವೇ ಕಾವಲು ಪಡೆ ಚಿತ್ತಾಪುರ.
==================================

ಪಟ್ಟಣದಲ್ಲಿ ಅನೇಕ ಕಡೆಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಚ್ಚಿಸಿಕೊಂಡು ತೊಂದರೆ ಅನುಭವಿಸಿದ್ದೇವೆ. ವಾಹನಕ್ಕೆ ಅಡ್ಡವಾದಾಗ ತಪ್ಪಿಸಲು ಹೋಗಿ ಕೈಕಾಲು ಪೆಟ್ಟು ಮಾಡಿಕೊಂಡಿದ್ದೇವೆ ಎನ್ನುತ್ತಾರೆ.

                  - ವೀರಣ್ಣ ಸುಲ್ತಾನಪುರ್
 ಮಾಜಿ ಅಧ್ಯಕ್ಷ, ನೇತಾಜಿ ಯುವಕ ಸಂಘ ಚಿತ್ತಾಪುರ.

ಗುರುವಾರ, ಸೆಪ್ಟೆಂಬರ್ 28, 2023

ಸಾಹಿತ್ಯ ಬೆಳೆಸುವಲ್ಲಿ ಸಚಿವರ ಕೊಡುಗೆ ಅಪಾರ: ಡಾ.ಸಿದ್ದತೋಟೇಂದ್ರ.


ಚಿತ್ತಾಪೂರ: ಕ್ಷೇತ್ರದ ಶಾಸಕರು, ಸಚಿವರಾದ ಪ್ರಿಯಾಂಕ ಖರ್ಗೆ ಅವರಲ್ಲಿ ಕನ್ನಡ ಸಾಹಿತ್ಯದ ಬಗ್ಗೆ ಅಭಿರುಚಿ ಹಾಗೂ ಸಾಹಿತ್ಯ ಜ್ಞಾನ ಬೆಳೆಸಿಕೊಳ್ಳುವ ಆಸಕ್ತಿ ಇದೆ. ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಕೊಟ್ಟು ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ಎಜುಕೇಶನ್ ಹಬ್ ಮಾಡಿದ್ದಾರೆ ಹಾಗೂ ಈ ಭಾಗದಲ್ಲಿನ ಕನ್ನಡ ಸಾಹಿತ್ಯ ಬೆಳೆಸುವಲ್ಲಿ ಸಚಿವರ ಅಪಾರವಾದ ಕೊಡುಗೆಯಿದೆ ಎಂದು ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠ ನಾಲವಾರದ ಪೂಜ್ಯ ಶ್ರೀ ಡಾ. ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಬಜಾಜ್ ಕಲ್ಯಾಣ್ ಮಂಟಪ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಾಗಾವಿ ನಾಡು ಭವ್ಯ ಇತಿಹಾಸ ಹೊಂದಿದ್ದ ನಾಡಾಗಿದ್ದು ಇಲ್ಲಿನ 69 ಗುಡಿ ಅಂದಿನ ಪ್ರಾಚೀನ ವಿಶ್ವವಿದ್ಯಾಲಯವಾಗಿತ್ತು. ಇಲ್ಲಿ ದೇಶ ವಿದೇಶಗಳಿಂದ ಅಧ್ಯಯನ ಮಾಡಲು ಬರುತ್ತಿದ್ದರು ಇಂಥ ಪ್ರಾಚೀನ ಕಾಲದ ದತ್ತ ವೈಭವ ಮತ್ತೆ ಮರುಕಳಿಸಬೇಕಿದೆ ಎಂದು ಹೇಳಿ ಕನ್ನಡ ನಾನು ನುಡಿಯ ಬಗ್ಗೆ ಕೊಂಡಾಡಿದರು.


ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ, ಮಾತನಾಡಿ ಈ ೪ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಸಮಾಜಕ್ಕೆ ಒಂದು ವಿಶೇಷವಾದ ಸಂದೇಶವನ್ನು ನೀಡಲು ಬಯಸುತ್ತೇನೆ ನಾಗಾವಿ ನಾಡಿನಲ್ಲಿ ಐತಿಹಾಸಿಕ ಸ್ಮಾರಕಗಳು, ಶಾಸನಗಳು, ದೊರೆತಿವೆ ಈ ನೆಲದ ಶ್ರೀಮಂತಿಕೆ, ಪರಂಪರೆಯ ಇತಿಹಾಸವನ್ನು ಹೊಸ ಪೀಳಿಗೆಗೆ ತಿಳಿಸಬೇಕಾದರೆ ಈ ಭಾಗದ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಬೇಲೂರು ಹಳೇಬೀಡಿನ ಇತಿಹಾಸ ನಮ್ಮ ಮಕ್ಕಳಿಗೆ ಬೇಕಾಗಿಲ್ಲ. ಅದಕ್ಕಿಂತ ಎರಡು ಪಟ್ಟು ಇತಿಹಾಸ ಈ ಭಾಗದಲ್ಲಿದೆ ಹೀಗಾಗಿ ನಮ್ಮ ಮಕ್ಕಳು ಓದುವ ಪಠ್ಯಪುಸ್ತಕದಲ್ಲಿ ಈ ಭಾಗದ ಇತಿಹಾಸ ಅಳವಡಿಸಬೇಕು ಎಂದು ಒತ್ತಾಯಿಸಿದರು.


ವೇದಿಕೆಯ ಮೇಲೆ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಪ್ಪಗೇರೆ ಸೋಮಶೇಖರ್, ನೀಲಮ್ಮ ಕತ್ನಳ್ಳಿ, ಲಿಂಗಾರೆಡ್ಡಿ ಗೌಡ ಭಾಸ ರೆಡ್ಡಿ, ನಾಗರೆಡ್ಡಿ ಪಾಟೀಲ್, ಬಾಗನಗೌಡ ಸಂಕನೂರ್, ಭೀಮಣ್ಣ ಸಾಲಿ, ಸೋಮಶೇಖರ್ ಪಾಟೀಲ್, ಶಿವಾನಂದ್ ಪಾಟೀಲ್, ಮಲ್ಲಿಕಾರ್ಜುನ್ ಕಾಳಗಿ, ಮಲ್ಲಿನಾಥ್ ಇಂದೂರ, ಮುಕ್ತಾರ್ ಪಟೇಲ್, ಬಸವರಾಜ್ ಬಳೂಂಡಗಿ, ಶಂಭುಲಿಂಗ ಗುಂಡಗುರ್ತಿ, ಕಾಶಿನಾಥ್ ಗುತ್ತೇದಾರ್, ರಮೇಶ್ ಮರಗೂಳ, ವೇದಿಕೆ ಮೇಲೆ ಇದ್ದರು.
ವೀರಣ್ಣ ಸುಲ್ತಾನಪುರ, ಮಹಮ್ಮದ್ ಇಬ್ರಾಹಿಂ, ಮಲ್ಲಿಕಾರ್ಜುನ್ ಬೊಮ್ಮನಹಳ್ಳಿಕರ್, ವೆಂಕಟೇಶ್ ಬಳಿಚಕ್ರ, ಶ್ರೀಮತಿ ಪೂಜಾ ಬಂಕಲಗಿ, ನರಸಪ್ಪ ಚಿನ್ನಕಟ್ಟಿ, ಕಾಶಿರಾಯ್ ಕಲಾಲ್, ವೀರಭದ್ರಪ್ಪ ಹುಮನಾಬಾದ್, ನರಸಿಂಹ ಆಲ್ಮೇಲ್ಕರ್, ಮನೋಹರ್ ಹಡಪದ, ಕರಣಕುಮಾರ ಅಲ್ಲೂರ, ಸಾಬಣ್ಣ ಭರಾಟಿ, ಆನಂದ್ ಕಲ್ಲಕ್, ಇದ್ದರು. ನಾಡಗೀತೆ ಮತ್ತು ರೈತ ಗೀತೆಯನ್ನು ಗುಲ್ಬರ್ಗ ವಿಶ್ವವಿದ್ಯಾಲಯದ ಸಂಗೀತ ಪ್ರಾಧ್ಯಾಪಕರಾದ ಸಿದ್ಧಾರ್ಥ ಚಿಮ್ಮಾ ಇದ್ಲಾಯಿ ನಡೆಸಿಕೊಟ್ಟರು ಅದೇ ರೀತಿ ಜನಕಲಾ ಸಮಿತಿ ವಾಡಿ ವತಿಯಿಂದ ಸಂವಿಧಾನ ಪೀಠಿಕೆ ಗಾಯನ ನಡೆಯಿತು. ಮಲ್ಲಿಕಾರ್ಜುನ್ ಮುಡಬೂಳಕರ್ ನಿರೂಪಿಸಿದರು. ಜಗದೇವ್ ದಿಗ್ಗಾಂವಕರ್ ಸ್ವಾಗತಿಸಿದರು. ಬಸಪ್ಪ ಯಂಭತ್ನಾಳ ವಂದನಾರ್ಪಣೆ ನಡೆಸಿಕೊಟ್ಟರು.


ಮಾತೃಭಾಷೆಯಲ್ಲಿ ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು, ಪ್ರತಿಯೊಂದು ಇಲಾಖೆ ವಾಣಿಜ್ಯ ಮಾಳಿಗೆ ಹೆಸರಿನ ನಾಮ ಫಲಕಗಳು ಕನ್ನಡದಲ್ಲಿ ಬರೆದು ಕನ್ನಡಮಯವಾಗುವಂತೆ ಮನೋ ಧರ್ಮ ಬೆಳೆಸಿಕೊಳ್ಳಬೇಕು ಎಲ್ಲಿದ್ದರೇನು ಎಂತಿದ್ದರೇನು ಹೇಗಿದ್ದರೇನು? ನಾವು ಎಲ್ಲರೂ ಕನ್ನಡವ ಬಳಸಿ ಬೆಳೆಸಬೇಕು ಮಾತನಾಡಬೇಕು ಪ್ರತಿ ಕ್ಷೇತ್ರದಲ್ಲಿ ಬರವಣಿಗೆ ಕನ್ನಡ ಮಾಯವಾಗಬೇಕು ಎಂದರು

             - ನಿಂಗಪ್ಪ ಮಲ್ಕನ್ ಕೊಲ್ಲೂರ
      ಸಮ್ಮೇಳನ ಅಧ್ಯಕ್ಷರು. ಸಾಹಿತಿಗಳು ಚಿತ್ತಾಪುರ


ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವರ್ಷವಿಡಿ ತಾಲೂಕಿನ ಅತ್ಯಂತ ಕವಿಗೋಷ್ಠಿಗಳು ಕಾವ್ಯ ಸಮ್ಮೇಳನಗಳನ್ನು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪರಿಷತ್ತು ಕೆಲಸ ಮಾಡುತ್ತಿದೆ. ೪ನೇ ಕನ್ನಡ ಸಾಹಿತ್ಯ ಸಮ್ಮೇಳನದ ತೇರನ್ನು ನಿಮ್ಮೆಲ್ಲರ ಸಹಕಾರದಿಂದ ಯಶಸ್ವಿಯಾಗಿ ಎಳೆದಿದ್ದೇನೆ ಎಂದರು.

            - ವೀರೇಂದ್ರಕುಮಾರ ಕೊಲ್ಲೂರು
         ಅಧ್ಯಕ್ಷರು ತಾಲೂಕು ಕಸಾಪ ಚಿತ್ತಾಪುರ

ನಿರ್ಣಯಗಳು ಕೈಗೊಳ್ಳದೆ ಮುಕ್ತಾಯಗೊಂಡ ೪ನೇ ಸಾಹಿತ್ಯ ಸಮ್ಮೇಳನ.

   4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಭವ್ಯ ಮೆರವಣಿಗೆಯ ಸಾರೋಟಿನಲ್ಲಿ ಯಾರು ಇಲ್ಲದ ದೃಶ್ಯ.

ಚಿತ್ತಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ೪ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಿರಂಗ ಅಧಿವೇಶನ ಮಾಡದೇ ನಿರ್ಣಯಗಳನ್ನು ಕೈಗೊಳ್ಳದೇ ಮುಕ್ತಾಯಗೊಂಡಿರುವುದು ಸಾಹಿತ್ಯಾಭಿಮಾನಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಜನರಲ್ಲಿ ಕನ್ನಡ ನಾಡು ನುಡಿ,ನೆಲ,ಜಲ ಭಾಷೆಯ ಬಗ್ಗೆ ಜಾಗೃತಿ ಉಂಟು ಮಾಡುವುದು ಹಾಗೂ ಕನ್ನಡಾಭಿಮಾನ ಮೂಡಿಸುವುದು ಜೊತೆಗೆ ಕನ್ನಡ ನಾಡಿನ ಶ್ರೀಮಂತಿಗೆ ಮತ್ತು ಇತಿಹಾಸ ಬಗ್ಗೆ ಪರಿಚಯಿಸುವ ಕೆಲಸ ಮಾಡುವ ಮೂಲಕ ಸಮ್ಮೇಳನದ ಕೊನೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಂಡು ಅವುಗಳ ಅನುಷ್ಠಾನಕ್ಕೆ ಸರಕಾರಕ್ಕೆ ವರದಿ ಸಲ್ಲಿಸುವುದು ಕನ್ನಡ ಸಾಹಿತ್ಯ ಪರಿಷತ್ತಿನ ನಿಯಮಾವಳಿಯಾಗಿದೆ, ಆದರೆ ತಾಲೂಕು ಕಸಾಪ ಅಧ್ಯಕ್ಷರು ಪರಿಷತ್ತಿನ ನಿಯಮಗಳನ್ನೇ ಉಲ್ಲಂಘಿಸಿ ತಮ್ಮ ಮನ ಬಂದಂತೆ ವರ್ತಿಸಿರುವುದು ಕಂಡುಬಂದಿದೆ.

4ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜವಿದ್ದು ಪರಿಷತ್ತಿನ ಧ್ವಜ ಇಲ್ಲದೇ ಇರುವುದು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪರಿಷತ್ತಿನ ದ್ವಜಾರೋಹಣ ಮಾಡುವುದು ನಿಯಮವಿದೆ ಆದರೆ ಇಲ್ಲಿನ ಕಸಾಪ ಅಧ್ಯಕ್ಷರು ಕೇವಲ ರಾಷ್ಟ್ರದ್ವಜಾರೋಹಣ ಮತ್ತು ನಾಡ ದ್ಜಜಾರೋಹಣ ನೆರವೇರಿಸಿ ಪರಿಷತ್ತಿನ ದ್ವಜಾರೋಹಣ ಮಾಡದೇ ಪರಿಷತ್ತಿನ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುವ ಮೂಲಕ ಪರಿಷತ್ತಿನ ಘನತೆ ಗೌರವಕ್ಕೆ ದಕ್ಕೆ ತಂದಿದ್ದಾರೆ.

ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನು ಕಸಾಪ ಜಿಲ್ಲಾಧ್ಯಕ್ಷರು ಮತ್ತು ತಾಲೂಕು ಅಧ್ಯಕ್ಷರು ಸಾರೋಟಿನಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಮ್ಮೇಳನದ ಸ್ಥಳಕ್ಕೆ ಕರೆತರುವುದು ಸಂಪ್ರದಾಯ, ಆದರೆ ಬಜಾಜ್ ಕಲ್ಯಾಣ ಮಂಟಪದ ಆವರಣ ಇನ್ನೂ ದೂರ ಇರುವಾಗಲೇ ಜಿಲ್ಲಾಧ್ಯಕ್ಷರು ಮತ್ತು ತಾಲೂಕು ಅಧ್ಯಕ್ಷರು ರಥದಿಂದ ಇಳಿದು ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಗೂ ನಾ ಡ್ರೈವರ್ ಹಾಡಿಗೆ ನೃತ್ಯ ಮಾಡಿದರು. ರಥದಲ್ಲಿದ್ದ ಸರ್ವಾಧ್ಯಕ್ಷರು ಅವರು ಇಳಿದು ನೃತ್ಯದಲ್ಲಿ ಭಾಗಿಯಾದರು.ಸರ್ವಾಧ್ಯಕ್ಷರನ್ನು ಸಮ್ಮೇಳನ ಸ್ಥಳದವರೆಗೂ ಸಾರೋಟಿನಲ್ಲಿ ಮೆರವಣಿಗೆ ಮೂಲಕ ಗೌರವಯುತದಿಂದ ವೇದಿಕೆ ಕರೆತರುವ ಸಂಪ್ರದಾಯವನ್ನು ಗಾಳಿಗೆ ತೂರಿದ್ದಾರೆ.

ಭಾನುವಾರ, ಸೆಪ್ಟೆಂಬರ್ 24, 2023

ಸಮ್ಮೇಳನ ಆಯೋಜನೆಯ ಸ್ವಷ್ಟನೆ ನೀಡಲಿ: ನಾಲವಾರಕರ್ ಆಗ್ರಹ.


ಚಿತ್ತಾಪುರ: ಜಿಲ್ಲೆಯಲ್ಲಿ ಬರಗಾಲ ಆವರಿಸಿರುವುದರಿಂದ ಜಿಲ್ಲೆಯ ಯಾವುದೇ ತಾಲೂಕುಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆವಾಗಿರುವುದಿಲ್ಲ. ಆದರೆ ಯಾವ ಕಾರಣಕ್ಕಾಗಿ ಚಿತ್ತಾಪುರ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿರುವ ಬಗ್ಗೆ ಸ್ವಷ್ಟನೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ರಾಜ್ಯ ವಕ್ತಾರ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ಆಗ್ರಹಿಸಿದ್ದಾರೆ.

 ಪಟ್ಟಣದಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ ಹೀಗಾಗಿ ಹಂಪಿ ಉತ್ಸವ, ಮೈಸೂರು ದಸರಾ ಉತ್ಸವಗಳನ್ನು ಸರಳ ರೀತಿಯಲ್ಲಿ ಆಚರಣೆಗೆ ರಾಜ್ಯ ಸರಕಾರ ಬದ್ಧವಾಗಿದ್ದು ಅಲ್ಲದೇ ಮಂಡ್ಯ ಜಿಲ್ಲೆಯಲ್ಲಿ ನಡೆಯಬೇಕಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರದ್ದು ಮಾಡಿರುವ ಮಾದರಿಯಲ್ಲಿ ಚಿತ್ತಾಪುರ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಕೂಡಾ ಮುಂದೂಡಬೇಕು ಎಂದರು 

 ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರಿಗೆ ಮಾಹಿತಿ ನೀಡದೇ, ಕನ್ನಡಪರ ಹೋರಾಟಗಾರರನ್ನು ಹಾಗೂ ಸಾಹಿತಿಗಳನ್ನು ಹೊರಗಿಟ್ಟು ಏಕ ಪಕ್ಷೀಯವಾಗಿ ನಡೆದುಕೊಂಡು ಬರೀ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಅಹ್ವಾನಿಸಿದ್ದರಿಂದ ಇದು ಸಾಹಿತ್ಯ ಸಮ್ಮೇಳನವಲ್ಲ ಕಾಂಗ್ರೆಸ್ ಸಮ್ಮೇಳನವಾಗಿದೆ ಎಂದು ಆರೋಪಿಸಿದರು.

  ಉತ್ಸವಗಳಿಗೆ ಬಳಸುವ ಹಣವನ್ನು ರೈತರ ಸಂಕಷ್ಟಕ್ಕೆ ಬಳಸಲಾಗುವುದು ಎಂದು ಸರಕಾರ ಹೇಳಿದೆ ಹೀಗಿರುವಾಗ ಚಿತ್ತಾಪುರ ಸಮ್ಮೇಳನಕ್ಕೆ ಹಣ ಎಲ್ಲಿಂದ ಬಂದಿದೆ ಎಂಬುದನ್ನು ಹಾಗೂ ಕನ್ನಡ ಭವನ ಯಾಕೆ ನೆನಗುದಿಯಲ್ಲಿದೆ ಎಂಬುದು ಸಚಿವ ಪ್ರಿಯಾಂಕ್ ಖರ್ಗೆ ಸ್ವಷ್ಟಪಡಿಸಬೇಕು. ಕಸಾಪ ಅಧ್ಯಕ್ಷರು ಸಮ್ಮೇಳನದ ಅಮಂತ್ರಣ ಪತ್ರಿಕೆಯಲ್ಲಿ ಪರಿಷತ್ತಿನ ದ್ಜಜಾರೋಹಣ ಕೈ ಬಿಟ್ಟು ಪರಿಷತ್ತಿನ ನಿಯಮಕ್ಕೆ ದಕ್ಕೆ ತಂದಿದ್ದಾರೆ, ಅಲ್ಲದೇ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅವರ ಹೆಸರು ಕೈ ಬಿಟ್ಟಿದ್ದಾರೆ ಹಾಗೂ ನಾಗಾವಿ ನಾಡಿನ ಅಕ್ಷರ ಜಾತ್ರೆಗೆ ಬನ್ನಿ ಎಂದು ಹೇಳಿ ನಾಗಾವಿ ಯಲ್ಲಮ್ಮ ದೇವಿಯ ಚಿತ್ರ ಹಾಕದೇ ಅವಮಾನಿಸಿರುವುದು ಖಂಡನೀಯ ಎಂದರು.

  ಮಂಡ್ಯ ಜಿಲ್ಲೆಯಲ್ಲಿ ನಡೆಯಬೇಕಾದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ರದ್ದು ಮಾಡಿದ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಅವರು ಯಾವ ಮುಖ ಇಟ್ಟುಕೊಂಡು, ಯಾವ ಉದ್ದೇಶಕ್ಕಾಗಿ ಚಿತ್ತಾಪುರ ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ ಇದೆಂಥ ವಿಪರ್ಯಸ ಸಂಗತಿ, ಇದರಿಂದ ರಾಜ್ಯಕ್ಕೆ ಯಾವ ಸಂದೇಶ ನೀಡುವಿರಿ ರಾಜ್ಯಾಧ್ಯಕ್ಷರೇ ಉತ್ತರ ನೀಡಿ ಎಂದು ಆಗ್ರಹಿಸಿದರು.

  ಸುದ್ದಿಗೋಷ್ಠಿಯಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ರವಿ ವಾಲಿ, ತಾಲೂಕು ಅಧ್ಯಕ್ಷ ಮಂಜುನಾಥ ಸ್ವಾಮಿ,ಮುಖಂಡ ಚಂದ್ರಕಾಂತ ನಾಟೀಕಾರ ಇದ್ದರು.
      

ಭಾನುವಾರ, ಸೆಪ್ಟೆಂಬರ್ 10, 2023

ಟ್ರಸ್ಟ್‌ಗೆ ಸಂಬಂಧಿಸಿದ ಜಮೀನು ಕಾನೂನು ಬಾಹಿರ ಮಾರಾಟ.

ಕಲಬುರಗಿ: ನಗರದ ಕೆಎಚ್‌ಬಿ ಕಾಲೋನಿ ಮಾಲಗತ್ತಿ ಭೂಮಿ ಮಂಡಳಿಂದ ಅಬ್ದುಲ್ ಶುಕೂರ್ ತಂದೆ ಮೊಹಮ್ಮದ್ ಮಹಮೂದ್ ಅಲಿ ಎಂಬುವರು ಮಾಮುಪುರಿ ವಾಲೆ ಎಂಬ ಹೆಸರಿನಿಂದ ಕರೆಯಲ್ಪಡುವ ಇವರು ಕಾನೂನಿನ ಬಾಹಿರವಾಗಿ, ಕೆಎಚ್‌ಬಿ ಸಿ.ಎ ಸೈಟ್ ನಂ.1 ಗ್ರಾಮ ಪಂಚಾಯತ ನಂ. ಸರ್ವೆ ನಂ.84/1 ಹಾಗೂ 84/2, ಸೈಟಿ ನಂ.1 ವಿಸ್ತೀರ್ಣ4376.80 ಚ. ಮೀಟರ, ಕೆ ಎಚ್ ಬಿ ಕಾಲೋನಿ ಮಾಲಗತ್ತಿ ಕಲಬುರಗಿ, ಈ ಜಮೀನನ್ನು ಟ್ರಸ್ಟ ಕಡೆಯಿಂದ ಖರೀದಿ ಮಾಡಿ ಕಾನೂನು ಬಾಹಿರವಾಗಿ ಸೈಟಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಪ್ರೆಸಿಡೆಂಟ್ ವರ್ಕಿಂಗ್ ಜರ್ನಾಲಿಸ್ಟ ಯೂನಿಯನ್ ಸೋಶಿಯಲ್ ಹಾಗೂ ವಲ್ವೇರ್ ಅಧ್ಯಕ್ಷ ಪಠಾನ ಸೂಫಿಯಾನ ಖಾನ ಆಗ್ರಹಿಸಿದ್ದಾರೆ.

 ಮಾನ್ಯ ಜಿಲ್ಲಾ ಅಧಿಕಾರಿಗಳಿಗೆ ಮನವಿ ಮಾಡಿ ಮಾತನಾಡಿದ ಅವರು ಈ ಖರೀದಿ ಪತ್ರದ ನೊಂದಣಿ ಸಂಖ್ಯೆ ಜಿಎಲ್‌ಬಿ-1-07748--2021–22, ಸಿ.ಡಿ. ನಂ.ಜಿಎಲ್‌ಬಿಡಿ!146 ದಿನಾಂಕ 18-09-2021ರಂದು ಖರೀದಿ ಮಾಡಿರುತ್ತಾರೆ, ಈ ಜಮೀನು ಟ್ರಸ್ಟ ಜಮೀನು ಆದ ಕಾರಣ ಇದನ್ನು ಯಾವುದೆ ವ್ಯಕ್ತಿ ಸ್ವಯಂಗಾಗಿ ಖರೀದಿ ಮಾಡುವುದು ಕಾನೂನಿನ ಬಾಹಿರವಾಗಿರುತ್ತದೆ ಇದನ್ನು ಖರೀದಿಮಾಡಬೇಕಾದರೆ ಇದಕ್ಕೆ ತನ್ನದೆ ಆದ ಟ್ರಸ್ಟ್ ಗುರಿ ಉದ್ದೇಶಗಳು ಇರುತ್ತವೆ ಅವು ಯಾವುದೇ ಅನುಸರಿಸದೆ ಟ್ರಸ್ಟ್‌ನ ನಿಯಮಗಳನ್ನು ಉಲ್ಲಂಘಿಸಿದ ಯಾರೆ ಆಗರಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಖರೀದಿದಾರರು ಈ ಜಮೀನನ್ನು ಖರೀದಿಸಿದ ನಂತರ ಈ ಜಮೀನಿನ ಮೇಲೆ 25 ನಿವೇಶನಗಳನ್ನು ರಚಿಸಿ ಇವುಗಳನ್ನು ಮಾರಾಟ ಮಾಡುತ್ತಿದ್ದಾರೆ, ಆದ ಕಾರಣ ಅಬ್ದುಲ ಶುಕೂರ ತಂದೆ ಮಹ್ಮದ ಮೆಹಮೂದ ಅಲಿ ಇವರ ಮೇಲೆ ಕಾನೂನಿನ ಕ್ರಮ ಜರುಗಿಸಬೇಕೆಂದು ಹಾಗೂ ಈ ಎಲ್ಲಾ 25 ನಿವೇಶನಗಳ ಎಲ್ಲಾ ಆದೇಶಗಳನ್ನು ಹಾಗೂ ಮಾರಾಟಗಳನ್ನು ರದ್ದುಗೋಳಿಸಬೇಕೆಂದು ಆಗ್ರಹಿಸಿದ್ದಾರೆ.

ಮಂಗಳವಾರ, ಆಗಸ್ಟ್ 29, 2023

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಚಿತ್ತಾಪುರ: ತಾಲೂಕನ್ನು ಸಮಗ್ರ ಅಭಿವೃದ್ದಿಗೊಳಿಸಲು ಮುಂದಿನ ಐದು ವರ್ಷಗಳ ಅವಧಿಗಾಗಿ ನೂತನ ಯೋಜನೆಗಳ ಬಗ್ಗೆ ಪರಿಕಲ್ಪನೆ ಹೊಂದಿ‌ ಆ ಬಗ್ಗೆ ವರದಿ ತಯಾರಿಸುವಂತೆ ಕಳೆದ ಸಭೆಯಲ್ಲಿ ಸೂಚಿಸಿದ್ದೆ, ಆದರೆ‌ ಸರ್ಕಾರದ‌ ಬಹುತೇಕ‌ ಇಲಾಖೆಗಳ ಅಧಿಕಾರಿಗಳು ಆ ಬಗ್ಗೆ ಗಮನ ಹರಿಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

 ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹಳೆ ಕಲ್ಯಾಣಿಗಳ ಪುನಶ್ಚೇತನಗೊಳಿಸುವುದು ಸೇರಿದಂತೆ ತಾಲೂಕಿನ ಜಲಮೂಲಗಳ ಸಂರಕ್ಷಣೆಗಾಗಿ ಯೋಜನೆ ಹಾಕಿಕೊಳ್ಳಲಾಗಿದ್ದು, ಸಣ್ಣ, ಬೃಹತ್ ನೀರಾವರಿ ಇಲಾಖೆ, ಕೆಬಿಜೆಎನ್‌ಎಲ್, ಕೆಎನ್ ಎನ್ ಎಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗಳಯ ಜಂಟಿಯಾಗಿ ನೀಲನಕ್ಷೆ ತಯಾರಿಸಿ ಎಂದು ಸಚಿವರು ಸೂಚಿಸಿದರು.
ಸನ್ನತಿ ಏತ ನೀರಾವರಿ ಯೋಜನೆಯಡಿಯಲ್ಲಿ‌ 16,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈವರೆಗೆ 11,830 ಹೆಕ್ಟರ್ ನೀರಾವರಿ ಹೊಂದಲಾಗಿದ್ದು ಸ್ಥಳೀಯ ರೈತರ ಸಹಕಾರದಿಂದಾಗಿ ಬಾಕಿ‌ ಇರುವ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಗಿಲ್ಲ ಎಂದು ಕೆಎನ್ ಎನ್ ಎಲ್ ಅಧಿಕಾರಿಗಳು ತಿಳಿಸಿದರು.

ಪುನರ್ವಸತಿ ಕುರಿತಂತೆ ಯಾವ ಕ್ರಮ‌ಕೈಗೊಳ್ಳಲಾಗಿದೆ ಎಂದು ಸಚಿವರು ಅಧಿಕಾರಿಗಳಿಗೆ ಪ್ರಶ್ನಿಸಿದಾಗ ಉತ್ತರಿಸಿದ ಅಧಿಕಾರಿಗಳು‌ ಸನ್ನತಿ ಯೋಜನೆಯಿಂದಾಗಿ‌ ಸನ್ನತಿ ಗ್ರಾಮ ಭಾದ್ಯಸ್ಥವಾಗುವುದಿಲ್ಲ ಆದರೆ, ಹುರಸಗುಂಡಗಿ‌ ಗ್ರಾಮದ 700 ಕ್ಕೂ ಅಧಿಕ ಮನೆಗಳು ಹಾನಿಯಾಗುತ್ತಿದ್ದು ಆ ಪೈಕಿ 400 ಕ್ಕೂ ಅಧಿಕ ಮನೆಗಳಿಗೆ ಪರಿಹಾರ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಕೆಎನ್‌ಎನ್ ಎಲ್‌ಇಲಾಖೆಯ ವತಿಯಿಂದ ಎಸ್ ಸಿಪಿ‌/ ಟಿಎಸ್ ಪಿ ಯೋಜನೆಯಡಿಯಲ್ಲಿ‌ ಈ ಹಿಂದೆ‌ ಕರೆಯಲಾಗಿರುವ ಎಲ್ಲ ಟೆಂಡರ್ ಗಳನ್ನು ರದ್ದುಗೊಳಿಸಿ ಹೊಸದಾಗಿ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಿ ಎಂದರು 
ಪಿಎಂ‌ಜಿಎಸ್ ವೈ ಹಾಗೂ ಪಿಆರ್ ಇ‌ ಇಲಾಖೆಯವರು ಯಾವ ರಸ್ತೆಗಳನ್ನು ಮೇಲ್ದರ್ಜೆಗೇರಿಸಬೇಕು ಎನ್ನುವ ಕುರಿತು ಪ್ರಸ್ತಾವನೆ ಸಲ್ಲಿಸಿದ್ದೀರಾ ಎಂದು ಸಚಿವರು ಪ್ರಶ್ನಿಸಿದಾಗ ಸಿಇಓ ಅವರಿಗೆ ಕಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದರು.
ಇದೇ ವೇಳೆ ಕೃಷಿ‌‌‌ ಇಲಾಖೆ ಸಹಾಯಕ ನಿರ್ದೇಶಕರಾದ ಸಂಜೀವಕುಮಾರ ಮಾನಕರ್ ಸಭೆಯಲ್ಲಿ ಮಾತನಾಡಿ ತಾಲೂಕಿನಲ್ಲಿ ಮಳೆಯ ಅಭಾವದಿಂದಾಗಿ ಉದ್ದು ಹಾಗೂ ಹೆಸರು ಸಂಪೂರ್ಣ ಹಾನಿಯಾಗಿದೆ. ತೊಗರಿ ಶೇ 100% ಬಿತ್ತನೆ ಪೂರ್ಣಗೊಂಡಿದೆ. ಆದರೆ, ಇನ್ನೊಂದು ವಾರದೊಳಗೆ ಮಳೆ ಬೀಳದೆ ಇದ್ದರೆ ತೊಗರಿ ಬೆಳೆಯೂ ಕೂಡಾ ಹಾನಿಯಾಗಲಿದೆ ಎಂದು ಕೃಷಿ‌‌‌ ಇಲಾಖೆ ಸಹಾಯಕ ನಿರ್ದೇಶಕ ಸಂಜೀವ್ ತಿಳಿಸಿದರು.

ತೊಗರಿಯ ನೆಟೆ‌ರೋಗದ ಪರಿಹಾರದ ಮೂರು ಹಂತಗಳ ಪೈಕಿ‌ ಇದುವರೆಗೆ ಒಂದು ಹಂತದ ಪರಿವಾರ ಬಿಡುಗಡೆಯಾಗಿದ್ದು ಇನ್ನುಳಿದ‌ ಹಂತದ ಪರಿಹಾರ ಬಿಡುಗಡೆ ಈಗಾಗಲೇ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಜೊತೆಗೆ ಬರ ಘೋಷಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳೆ ಹಾನಿಯ ಸರ್ವೆ ಮಾಡಲಾಗಿದೆ ಎಂದರು.ತಾಲೂಕಿಗೆ ಗೊಡೌನ್ ಅವಶ್ಯಕತೆ ಇದ್ದು ನಿರ್ಮಾಣ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿ‌ ತಿಳಿಸಿದಾಗ ಪ್ರಸ್ತಾವನೆ ಸಲ್ಲಿಸಿ ಎಂದು‌ ಸಚಿವರು ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿದ್ದವೀರಯ್ಯ ಸ್ವಾಮಿ ಮಾತನಾಡಿ 15 ಹೊಸ ಶಾಲೆಗಳ ನಿರ್ಮಾಣಕ್ಕಾಗಿ ನೀಲಿನಕ್ಷೆ ತಯಾರಿಸಲಾಗಿದೆ‌ ಎಂದರು. ಸಚಿವರು ಮಾತನಾಡಿ ಶಾಲೆ ಕಟ್ಟಡಗಳ ನಿರ್ಮಾಣಕ್ಕಾಗಿ ಕೋಟಿಗಟ್ಟಲೇ ಅನುದಾನ ಬಿಡುಗಡೆ ಮಾಡಿದ್ದರೂ ಕೂಡಾ ಕಳಪೆ ಕಾಮಗಾರಿ ಆಗುತ್ತಿವೆ ಎಂದು ಸಚಿವರು ಅಸಮಧಾನ ವ್ಯಕ್ತಪಡಿಸಿದರು. ಕಟ್ಟಡಗಳ ಕಳಪೆ ಕಾಮಗಾರಿಯಲ್ಲಿ ಅಧಿಕಾರಿಗಳು ಯಾವುಕ್ಕೆ ಕ್ರಮ ಯಾಕೆ ಕೈಗೊಳ್ಳುವುದಿಲ್ಲ. ಕಟ್ಟಡ ನಿರ್ಮಾಣ ಮಾಡಿ ನಾಲ್ಕು ವರ್ಷ ಆಗಿರುವುದಿಲ್ಲ ಆದರೂ ಸೋರುತ್ತಿವೆ ಯಾಕೆ ಎಂದ ಪ್ರಶ್ನಿಸಿದರು.

ತಾಲೂಕಿನಲ್ಲಿ 334 ಶಿಕ್ಷಕರ ಕೊರತೆ ಇದ್ದು 254 ಅತಿಥಿ ಶಿಕ್ಷಕರನ್ನು ಇಲಾಖೆ ಒದಗಿಸಿದೆ ಎಂದು ರುದ್ನೂರು ಹೇಳಿದರು. ಆಗ ಉತ್ತರಿಸಿದ ಸಚಿವರು, ಮೂಲಭೂತ ಸೌಲಭ್ಯ ಒದಗಿಸುವ ಜವಾಬ್ದಾರಿ ನನ್ನದು ಆದರೆ, ಉತ್ತಮ ‌ಕಲಿಕೆ ಜವಾಬ್ದಾರಿ ನಿಮ್ಮದು ಎಂದರು.ಜಿಲ್ಲಾ ಪಂಚಾಯತ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ವರ್ಗಾವಣೆಯಾದರೂ ಯಾಕೆ ರಿಲೀವ್ ಆಗಿಲ್ಲ ಹಾಗೂ ಯಾಕೆ ರಿಲೀವ್ ಮಾಡಿಲ್ಲ. ಸಂಬಂದಪಟ್ಟ ಆ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಸಚಿವರು ಪಂಚಾಯತ ರಾಜ್ ಇಲಾಖೆಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರಿಗೆ ಸೂಚಿಸಿದರು.
ತಾಲೂಕಿನಲ್ಲಿ ಇನ್ನೂ ಎಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರ ಬೇಕಾಗುತ್ತದೆ ಹಾಗೂ ಅದಕ್ಕೆ ಬೇಕಾಗುವ ಸಿಬ್ಬಂದಿಗಳು ಮತ್ತು ಇತರೆ ಮೂಲಭೂತ ಸೌಲಭ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸಚಿವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ನಂತರದ ಹೊಸ ಹಾಸ್ಟೆಲ್ ಗಳ ನಿರ್ಮಾಣಕ್ಕೆ ಹಾಗೂ ಹಳೆ ಹಾಸ್ಟೆಲ್ ಗಳನ್ನು ಹೊಡೆದುಹಾಕಿ ನೂತನ ಹಾಸ್ಟೆಲ್ ಗಳ ಮತ್ತು ಜನಸಂಖ್ಯೆಗೆ ಅನುಗುಣವಾಗಿ ಹೊಸ ಹಾಸ್ಟೆಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಸಮಗ್ರ ಅಭಿವೃದ್ಧಿಗೆ ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದು ಕೆಲ ಅಧಿಕಾರಿಗಳನ್ನು ಹೊರತುಪಡಿಸಿ‌ ಉಳಿದವರು ಆ ಬಗ್ಗೆ ಗಂಭೀರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ. ಹಾಗಾಗಿ, ಸರ್ಕಾರದ ಇಲಾಖೆಯ ಅಧಿಕಾರಿಗಳು ಆದಷ್ಟು ಬೇಗ ಪ್ರಸ್ತಾವನೆ ಸಲ್ಲಿಸಿ, ಈ ಅವಧಿಯಲ್ಲಿ ಚಿತ್ತಾಪುರದ ಅಭಿವೃದ್ದಿ ಆಗದಿದ್ದರೆ ಮುಂದೆಯೂ ಆಗುವುದಿಲ್ಲ. ನೀವು ಬಜೆಟ್ ಬಂದ ಮೇಲೂ ಮೈಗಳ್ಳತನ ತೋರಿಸಿದರೆ ನಾನೂ ಕೂಡಾ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಖಡಕ್ ಆಗಿ ಹೇಳಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸಯ್ಯಾದ ಶಾಷಾವಲಿ,
ತಾಪಂ ಇಓ ನೀಲಗಂಗಾ ಬಬಲಾದ್, ಸಿಪಿಐ ಪ್ರಕಾಶ ಯಾತನೂರು, ಕಾಳಗಿ ಮತ್ತು ಶಹಾಬಾದ್ ತಹಸೀಲ್ದಾರ ಅವರು ಉಪಸ್ಥಿತರಿದ್ದರು‌.

ಗುರುವಾರ, ಆಗಸ್ಟ್ 17, 2023

ಸಚಿವರ ಮಾತಿಗೆ ಬೆಲೆ ಕೊಡದ ಅಬಕಾರಿ ಇಲಾಖೆ.


ಹಳ್ಳಿ-ಗಲ್ಲಿಗಳಲ್ಲಿ ಮದ್ಯ ದಂಧೆ ಜೋರು. 

ಚಿತ್ತಾಪುರ: ತಾಲೂಕಿನ ಬಹುತೇಕ ಹಳ್ಳಿಗಳ ಗಲ್ಲಿ ಗಲ್ಲಿಗಳಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಬೇಕಾಬಿಟ್ಟಿ ಅಕ್ರಮ ಸರಾಯಿ ಮಾರಾಟ ಹಾಗೂ ಸಾಗಾಟ ಜೋರಾಗಿ ನಡೆಯುತ್ತಿದೆ. ಇದನ್ನೆಲ್ಲ ನೋಡಿದರೆ ಈ ಅಕ್ರಮ ಸರಾಯಿ ಮಾರಾಟಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸಾಥ್ ನೀಡುತ್ತಿರುವುದು ಕಂಡುಬರುತ್ತಿದೆ. 
ಸಚಿವ ಪ್ರಿಯಾಂಕ್ ಖರ್ಗೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ.

ಅಗಸ್ಟ್ 4ರಂದು ತಾಲ್ಲೂಕು ಪಂಚಾಯಿತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕಿರಾಣ ಅಂಗಡಿಗಳಲ್ಲಿ ದಾಭಾಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅವಧಿಗೆ ಮೀರಿದ ಸಮಯದವರೆಗೆ ದಾಭಾಗಳು ತೆಗೆದಿರುತ್ತವೆ.‌ಈ ಬಗ್ಗೆ ಅಬಕಾರಿ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಸಚಿವರು ಬೇರೆ ಜಿಲ್ಲೆಯವರು ಎಷ್ಟಾದರೂ ಮದ್ಯ ಮಾರಾಟ ಮಾಡಲಿ, ಚಿತ್ತಾಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಮಾರಾಟ ಮಾಡಲು ಅನುವು ಮಾಡಿಕೊಡಬೇಡಿ ಎಂದು 
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಬಕಾರಿ ಅಧಿಕಾರಿಗಳಿಗೆ ಹೇಳಿದರು ಅಬಕಾರಿ ಇಲಾಖೆ ಅಧಿಕಾರಿಗಳು ಸಚಿವರ ಮಾತಿಗೆ ಬೆಲೆ ಕೊಡದೆ ಅಕ್ರಮ ಸರಾಯಿ ಮಾರಾಟಕ್ಕೆ ಸಾಥ್ ನೀಡುವುದು ಕಂಡುಬರುತ್ತಿದೆ.
ಅಕ್ರಮ ಸರಾಯಿ ಮಾರಾಟಕ್ಕೆ ಅಧಿಕಾರಿಗಳ ಸಾಥ್.

ಪಟ್ಟಣದ  ಬಾರ್ ಗಳು, ವೈನ್‌ಶಾಪ್ ಮಳಿಗೆಗಳಿಂದ ಬೆಳಿಗ್ಗಿನ ಜಾವ 4/5 ಗಂಟೆಗೆ ಆಟೋಗಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ವ್ಯವಸ್ಥಿತ  ಸರಾಯಿ ಸಾಗಾಟ ಮಾಡುವ ಜಾಲ ಬೇರುಬಿಟ್ಟಿದೆ. ಮದ್ಯ ದಂಧೆ ಹೆಚ್ಚಳವಾಗಲು ಅಧಿಕಾರಿಗಳು ಮುಖ್ಯ ಕಾರಣ. ಅಧಿಕಾರಿಗಳ ಕಣ್ಣೆದುರಲ್ಲೇ ಈ ದಂಧೆ ನಡೆಯುತ್ತಿದ್ದರೂ, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಯಾವುದೇ ಕ್ರಮ ಕೈಗೊಳ್ಳದೆ ಪರೋಕ್ಷವಾಗಿ ಸಾರಾಯಿ ದಂಧೆ ಬೆಂಗಾವಲಾಗಿ ನಿಂತಿದ್ದಾರೆ. ಇನ್ನಾದರೂ ಅಧಿಕಾರಿಗಳು ಎಚ್ಚರವಹಿಸಿ ಮಾರಾಟಗಾರರ ಮೇಲೆ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವರೇ ಎಂಬ ಪ್ರಶ್ನೆ   ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಶುಕ್ರವಾರ, ಆಗಸ್ಟ್ 4, 2023

ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ-ಎಸ್ಟಿ ಅನುದಾನ ಬಳಕೆ ಬೇಡ: ಡಿವಿಪಿ.


ಚಿತ್ತಾಪೂರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲು ಇರುವ 11 ಸಾವಿರ ಕೋಟಿ ಅನುದಾನವನ್ನು ಬಳಕೆ ಮಾಡದೇ ಸಮುದಾಯದ ಅಭಿವೃದ್ಧಿಗೆ ಬಳಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯರವರಿಗೆ ಬರೆದ ಮನವಿ ಪತ್ರವನ್ನು ಮಾನ್ಯ ತಹಶೀಲ್ದಾರ ರವರ ಮೂಲಕ ಸಲ್ಲಿಸಿದರು.

  ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಜಗದೇವ ಎಸ್ ಕುಂಬಾರ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಈ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುತ್ತಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ವಿರೋಧಿಸುತ್ತದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. 

  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಘೋಷಣೆ ಯೋಜನೆಗಳಿಗಾಗಿ ನಮ್ಮ ಹಣಬಳಸದೆ ಈ ಸಮುದಾಯಗಳ ವಿದ್ಯಾರ್ಥಿ ಯುವಜನರ ಹಾಗೂ ನಿರುದ್ಯೋಗ ಯುವಕರ, ಮಹಿಳೆಯರ ಮಕ್ಕಳ, ರೈತ ಕೂಲಿ ಕಾರ್ಮಿಕರ, ಒಟ್ಟಾರೆ ಈ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ  ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯಿಸುತ್ತದೆ ಎಂದರು.

  ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲ್ಲೂಕು ಸಂಚಾಲಕ ಪೃಥ್ವಿರಾಜ್ ಸಾಗರ, ಕುಮಾರ ಜಾಧವ್, ಶರಣು ದಂಡೋತಿ, ಸುನಿಲ್ ಜಿತುರೆ, ಸೇರಿದಂತೆ ಇತರರು ಇದ್ದರು.



ಸೋಮವಾರ, ಜೂನ್ 5, 2023

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ಪಲ್ಲೇದ.

ಚಿತ್ತಾಪೂರ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಮಾತನ್ನು ನಾವು ಚಿಕ್ಕಂದಿನಿಂದಲೇ ಕೇಳಿರುತ್ತೇವೆ. ಮಾತ್ರವಲ್ಲದೆ ಅದರ ಮೇಲೆ ಪ್ರೀತಿ, ಕಾಳಜಿಯು ಮುಖ್ಯವಾಗಿರುತ್ತದೆ. ಅದಕ್ಕನುಗುಣವಾಗಿ ವಿಶ್ವ ಪರಿಸರ ದಿನವೆಂದು ಜೂನ್‌ 5ರಂದು ಆಚರಿಸುತ್ತೇವೆ. ಈ ಮಾತು ಕೇವಲ ಆ ದಿನಕ್ಕನುಗುಣವಾಗಿರದೆ ಪ್ರತಿ ದಿನ ಸಾಧ್ಯವಾಗದಿದ್ದರೆ ವಾರಕ್ಕೊಮ್ಮೆಯಾದರೂ ಸಸ್ಯದ ಪೋಷಣೆ ಮಾಡಿದರೆ ಆ ಗಿಡವೇ ಮುಂದಿನ ಮರವಾಗಿ ನಾವು ಪ್ರಕೃತಿಗೆ ಕೊಟ್ಟ ಉಡುಗೊರೆಯಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋಷ ಎಸ್ ಪಲ್ಲೇದ ಹೇಳಿದರು.


ಪಟ್ಟಣದ ಹೊರ ವಲಯದ ಜ್ಞಾನ ಗಂಗಾ ಶಿಕ್ಷಣಾ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ,ಇವರ ಸಂಯುಕ್ತಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ, ಪ್ಲಾಸ್ಟಿಕ್ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಿಮ್ಮ ನಿಮ್ಮ ಸುತ್ತಲಿನ ಪರಿಸರ ಸಂರಕ್ಷಣೆ ಮಾಡಿದ್ರೆ ನಮ್ಮ ಆರೋಗ್ಯ ಸುಚಿಯಾಗಿರುತ್ತದೆ. ಅಷ್ಟೇ ಅಲ್ಲದೇ ಸದೃಢ ಸಮಾಜ ನಿರ್ಮಾಣ ಮಾಡಲು ಸಾದ್ಯವಾಗುತ್ತದೆ ಎಂದರು.


ವಲಯ ಅರಣ್ಯಾಧಿಕಾರಿ ವಿಜಯಕುಮಾರ ಮಾತನಾಡಿ
ಪರಿಸರ ಮಾಲಿನ್ಯ, ಜಲಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ನಿಯಂತ್ರಣ ಮಾಡುವಲ್ಲಿ ನಾವು ನಿರಂತರಾಗಿರಬೇಕು, ನಮ್ಮ ಸುತ್ತಲಿನ ಫಲವತ್ತಾದ ಮಣ್ಣು, ಸಗಣಿ, ಒಳಸಿಕೊಂಡು ಸಸಿಗಳನ್ನು ನೆಟ್ಟು ಬೆಳೆಸಬೇಕು ಎಂದು ಕರೆ ನೀಡಿ. ಹುಟ್ಟಿದ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿರುವಂತೆ ಎಲ್ಲ ಪಶು–ಪಕ್ಷಿ, ಪ್ರಾಣಿ, ಮರ-ಗಿಡಗಳಿಗೂ ಇದೆ. ಇವೆಲ್ಲವೂ ಬದುಕಿದಾಗ ಮಾತ್ರ ನಾವು-ನೀವು ಎಲ್ಲರೂ ಜೀವಿಸಲು ಸಾಧ್ಯ. ಅರಣ್ಯದಲ್ಲಿರುವ ಆನೆ, ಹುಲಿ, ಚಿರತೆ ಇಂದಿನ ದಿನಗಳಲ್ಲಿ ಅಲ್ಲಲ್ಲಿ ಗ್ರಾಮ, ಪಟ್ಟಣ ಮತ್ತು ನಗರಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ಅರಣ್ಯ ನಾಶವೇ ಇದಕ್ಕೆ ಮೂಲ ಕಾರಣ. ಪ್ರಾಣಿ ಸಂಕುಲಗಳು ಅರಣ್ಯ ಬಿಟ್ಟು ಊರೊಳಗೆ ಬರುವುದು ಸಹಜ ಹೀಗಾಗಿ ಯಾರು ಭಯಪಡಬೇಡಿ ಇದಕ್ಕೆ ಪರ್ಯಾಯವಾಗಿ ಹೆಚ್ಚಿನ ಪ್ರಮಾಣ ಗಿಡ-ಮರಗಳು ಬೆಳಸುವ ಜೊತೆಗೆ ಅವುಗಳ ರಕ್ಷಣೆ ಆಗಬೇಕಾಗಿದೆ ಆದ್ದರಿಂದ ನಾವು ನಿವು ಎಲ್ಲರೂ ಪರಿಸರ ಸಂರಕ್ಷಣೆಯಲ್ಲಿ ಪಾಲ್ಗೊಳ್ಳೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಜ್ಞಾನ ಗಂಗಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರಕಾಶ ಹಂಚನಾಳ, ಸಿವಿಲ್ ನ್ಯಾಯಾಧೀಶರಾದ ಸಂತೋಷಕುಮಾರ ದೈವಜ್ಞ, ಶ್ರೀಮತಿ ಅಂಜನಾದೇವಿ ಆರ್, ಗಂಗಾಧರ ಸಾಲಿಮಠ, ವಲಯ ಅರಣ್ಯಾಧಿಕಾರಿ ವಿಜಯಕುಮಾರ,ಸತೀಶ ಮುಡಬೂಳಕರ,ಶಿವಾನಂದ ಅಂಬಿಗೇರ್,  ಅರಣ್ಯ ಸಿಬ್ಬಂದಿಗಳಾದ ಜಟ್ಟೆಪ್ಪ ಸಾರಿ, ಚಂದ್ರಹಾಸ ನಾಯಕ, ಮಂಜುನಾಥ ಹಂದ್ರಾಳ, ಗುರುರಾಜ, ಸಂತೋಷ ಕುಮಾರ, ಶಿಕ್ಷಣಾ ಸಂಸ್ಥೆಯ ಸಿಬ್ಬಂದಿಗಳಾದ ಶ್ರೀಮತಿ ಶೃತಿ, ಶ್ರೀಮತಿ ಪ್ರೀಯಾಂಕಾ, ಗುರು, ರಶ್ಮಿ, ಪ್ರಶಾಂತ, ಮಲ್ಲಣ್ಣಗೌಡ, ಸೇರಿದಂತೆ ಇತರರು ಇದ್ದರು.

ಭಾನುವಾರ, ಜೂನ್ 4, 2023

ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಿ: ಕಾಶಿನಾಥ ಗುತ್ತೇದಾರ್

ಚಿತ್ತಾಪುರ: ಗ್ರಂಥಾಲಯ ಜ್ಞಾನದ ಭಂಡಾರ ಇದ್ದಂತೆ ಹೀಗಾಗಿ ಯುವಕರು ಅಲ್ಲಿ ಇಲ್ಲಿ ಕುಳಿತುಕೊಂಡು ಹರಾಟೆ ಹೊಡೆದು ವ್ಯರ್ಥ ಸಮಯವನ್ನು ಕಳೆಯದೇ ಗ್ರಂಥಾಲಯಕ್ಕೆ ಭೇಟಿ ನೀಡಿ ವಿವಿಧ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು ಎಂದು ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ತು ಅಧ್ಯಕ್ಷ ಕಾಶಿನಾಥ ಗುತ್ತೇದಾರ ಹೇಳಿದರು.

  ಪಟ್ಟಣದ ಸ್ಟೇಷನ್ ತಾಂಡಾದ ಸೇವಾಲಾಲ್ ಮಂದಿರದ ಹತ್ತಿರ ತಾಂಡಾ ಅಭಿವೃದ್ದಿ ನಿಗಮದಿಂದ ಮಂಜೂರಾದ ನೂತನ ಗ್ರಂಥಾಲಯದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗೆ ಸಹಾಯಕವಾಗುವ ಪುಸ್ತಕಗಳು, ಭಾರತದ ಸಂವಿಧಾನ, ರಾಜಕೀಯ, ಇತಿಹಾಸ, ಅರ್ಥಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳ ಸಾವಿರಾರು ಪುಸ್ತಕಗಳು ಒಂದೇ ಸ್ಥಳದಲ್ಲಿ ಸಂಗ್ರಹಿಸಿರುವ ಗ್ರಂಥಾಲಯಗಳು ಅಮೂಲ್ಯವಾದ ಜ್ಞಾನ ಭಂಡಾರ ಎಂದರು. ಪ್ರತಿಯೊಬ್ಬರು ತಮ್ಮ ಜ್ಞಾನದ ಹಸಿವನ್ನು ತೀರಿಸಿಕೊಳ್ಳಲು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದರ ಜತೆಗೆ ಮಕ್ಕಳಲ್ಲಿ ಓದುವ ಅಭಿರುಚಿಯನ್ನು ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.

  ದೇವರ ಮೂರ್ತಿ ಇರುವುದಕ್ಕೆ ಎಲ್ಲರೂ ದೇವಸ್ಥಾನ ಎಂದು ಭಾವಿಸಿದ್ದಾರೆ ಆದರೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಗ್ರಂಥಾಲಯವನ್ನು ದೇವಸ್ಥಾನ ಎಂದು ಭಾವಿಸಿಕೊಂಡು ಜೀವನದ ಅತ್ಯಮೂಲ್ಯ ಸಮಯ ಗ್ರಂಥಾಲಯದಲ್ಲೇ ಕಳೆದಿದ್ದರಿಂದ ಇಂದು ಮಹಾನ್ ಜ್ಞಾನಿಯಾಗಿದ್ದಾರೆ ಎಂದು ಬಣ್ಣಿಸಿದರು. ತಾಂಡಾದಲ್ಲಿ ಉದ್ಘಾಟನೆಯಾದ ಗ್ರಂಥಾಲಯವನ್ನು ದೇವಸ್ಥಾನದಂತೆ ನೋಡಿಕೊಂಡು ಇದರ ಸದುಪಯೋಗ ಮಾಡಿಕೊಳ್ಳುವ ಮೂಲಕ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಗ್ರಂಥಾಲಯಕ್ಕೆ ನಾನು ವಯಕ್ತಿಕವಾಗಿ ೫ ಸಾವಿರ ವೆಚ್ಚದ ವಿವಿಧ ಪುಸ್ತಕಗಳ್ನು ದೇಣಿಗೆಯಾಗಿ ನೀಡುತ್ತೇನೆ ಎಂದು ಗುತ್ತೇದಾರ ಹೇಳಿದರು.

 ಪುರಸಭೆ ಸದಸ್ಯ ಜಗದೀಶ ಚವ್ಹಾಣ್ ಇವತ್ತಿನ ದಿನಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿ ಓದುಗರ ಸಂಖ್ಯೆ ಕ್ಷೀಣಿಸುತ್ತಿದೆ.ಈ ಗ್ರಂಥಾಲಯ ತಾಂಡಾ ವಿದ್ಯಾರ್ಥಿಗಳ ಕಲಿಕೆಗೆ ಜನಸಾಮಾನ್ಯರ ಜ್ಞಾನಾಭಿವೃದ್ಧಿಗೆ ಉತ್ತಮ ಅವಕಾಶಕ್ಕೆ ಕಲ್ಪಿಸಿದಂತೆ ಆಗಿದೆ ಇದರಿಂದ ಪ್ರತಿಯೊಬ್ಬರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

  ಉದ್ಘಾಟನೆ ನೆರವೇರಿಸಿದ ನಿಗಮದ ಜಿಲ್ಲಾ ಅಭಿವೃದ್ದಿ ಅಧಿಕಾರಿ ಸೂರ್ಯಕಾಂತ ರಾಠೋಡ ಮಾತನಾಡಿ, ಗ್ರಂಥಾಲಯಕ್ಕೆ ತಾಂಡಾ ಅಭಿವೃದ್ದಿ ನಿಗಮದಿಂದ ೧ಲಕ್ಷ ವೆಚ್ಚದಲ್ಲಿ ವಿವಿಧ ಸ್ಪರ್ಧಾತ್ಮಕ ಹಾಗೂ ಸಾಮಾನ್ಯ ಪುಸ್ತಕಗಳು ಹಾಗೂ ೧ ಲಕ್ಷ ವೆಚ್ಚದ ಪೀಠೋಪಕರಣಗಳು ಸೇರಿದಂತೆ ಒಟ್ಟು ೨ಲಕ್ಷ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡುವ ಮೂಲಕ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

  ಬಂಜಾರ ಸಮಾಜದ ಹಿರಿಯ ಮುಖಂಡ ತುಕಾರಾಮ್ ನಾಯಕ, ಗೋರ್ ಸೇನಾ ಜಿಲ್ಲಾಧ್ಯಕ್ಷ ಅಶ್ವಥ ರಾಠೋಡ, ಶಿವರಾಮ ಚವ್ಹಾಣ, ಬೊಮ್ಮು ಪವಾರ, ಶಿಕ್ಷಕರಾದ ಛತ್ರು ರಾಠೋಡ, ವಿಶ್ವನಾಥ ರಾಠೋಡ ಮಾತನಾಡಿದರು. ದೇವಿದಾಸ ನಾಯಕ, ತುಕಾರಾಮ ಪವಾರ, ಕಿರಣ ನಾಯಕ, ಲಕ್ಷ್ಮಣ ನಾಯಕ, ಆರ್.ಸಿ.ರಾಮನ್, ರವೀಂದ್ರ ನಾಯಕ, ಕುಮಾರ ಚವ್ಹಾಣ, ವಾಸು ರಾಠೋಡ, ಭೀಮಾ ನಾಯಕ, ಪಿಪಿನ್ ರಾಠೋಡ, ಅನೀಲ ಪವಾರ, ಆಕಾಶ ಚವ್ಹಾಣ, ಧರ್ಮು ಜಾಧವ, ಪ್ರಭುದಾಸ ರಾಠೋಡ, ಹೀರಾಬಾಯಿ ರಾಠೋಡ ಇತರರು ಇದ್ದರು. ಭೀಮಸಿಂಗ ಪವಾರ ಪ್ರಾರ್ಥಿಸಿದರು, ಜಗದೀಶ ಪವಾರ ನಿರೂಪಿಸಿ ವಂದಿಸಿದರು.

ಬುಧವಾರ, ಮೇ 31, 2023

ಪ್ರೀಯಾಂಕ್ ಖರ್ಗೆ ಸಚಿವ ಸ್ಥಾನಕ್ಕಾಗಿ ಹರಕೆ ಈಡೇರಿಸಿದ ಅಭಿಮಾನಿ.

ಚಿತ್ತಾಪೂರ: ಮೀಸಲು ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರಿಯಾಂಕ್ ಖರ್ಗೆ ಗೆಲುವಿಗೆ ಹಾಗೂ ಸಚಿವ ಸ್ಥಾನಕ್ಕೆ ಹೇಳವನಕೇರಿ ಗ್ರಾಮದ ಅಭಿಮಾನಿ ಹಾಗೂ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಸಲಹ ಸಮಿತಿ ಸದಸ್ಯ ತಿಪ್ಪಣ್ಣ ರಾಮಣ್ಣ ಹೆಳವ ಅವರು ಮಂಗಳವಾರ ದೇವರಿಗೆ ಹರಕೆ ತಿರಿಸಿದ್ದಾರೆ.

ತೀವ್ರ ಜಿದ್ದಜಿದ್ದಿನ ಕ್ಷೇತ್ರವಾಗಿದ್ದ ಚಿತ್ತಾಪೂರ ಮತಕ್ಷೇತ್ರದ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರು ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳನ್ನು ಪಡೆದು ಗೆಲವು ಸಾಧಿಸಲೆಂದು ಹಾಗೂ ನೂತನ ಸರಕಾರದಲ್ಲಿ ಸಚಿವ ಸ್ಥಾನ ಸಿಗಲೆಂದು ಶ್ರೀ ನಾಗಾವಿ ಯಲ್ಲಮ್ಮ ದೇವಿ, ಯನಾಗುಂದಿ ಮಾತಾ ಮಣಿಕೇಶ್ವರಿ, ಯನಾಗುಂದಿ ಮೌಲಾಲಿ ಮುತ್ಯಾ, ಕಾನಕುರ್ತಿ ಶ್ರೀ ಯಲ್ಲಮ್ಮ ದೇವಿ, ಹಾಗೂ ಶ್ರೀ ಪರಶುರಾಮ ದೇವರಿಗೆ ಪ್ರತಿ ದೇವರಿಗೆ ಐದು ಟೆಂಗಿನಕಾಯಿ ಒಡಿಯುವ ಹರಿಕೆ ಮಾಡಿದ್ದರು.

ನೂತನ ಸರಕಾರದಲ್ಲಿ ಗ್ರಾಮೀಣ ಪಂಚಾಯತ ರಾಜಾ ಇಲಾಖೆ ಸಚಿವರಾಗಿದ್ದಕ್ಕೆ ಅಭಿಮಾನಿಯು ಖುಷಿಯಿಂದ ಮಂಗಳವಾರ ಎಲ್ಲಾ ದೇವರಿಗೆ ಭೇಟಿ ನೀಡಿ ದೇವರ ಹರಿಕೆ ತಿರಿಸಿದ್ದರು.





ಶುಕ್ರವಾರ, ಮೇ 19, 2023

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮುಂದಿನ ಚುನಾವಣೆಯಲ್ಲಿ 50 ಸಾವಿರ ಮತಗಳಿಂದ ಬಿಜೆಪಿ ಗೆಲ್ಲಿಸುವೆ:ಮಣಿಕಂಠ

   ಚಿತ್ತಾಪುರ: ಕೆಲವು ಸಣ್ಣಪುಟ್ಟ ತಪ್ಪುಗಳಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನಗೆ ಸೋಲು ಉಂಟಾಗಿದೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನನಗೆ ಟಿಕೇಟ್ ಸಿಗಲಿ ಅಥವಾ ಯಾರೇ ಅಭ್ಯರ್ಥಿಯಾಗಲಿ ಅವರ ಪರ ಶ್ರಮಿಸಿ 50 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಾಗುವುದು ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಹೇಳಿದರು.

  ಪಟ್ಟಣದ ಬಾಪುರಾವ್ ಪಾಟೀಲ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ನನಗೆ ಸ್ವಲ್ಪ ಮಾರ್ಗದರ್ಶನ ಕೊರತೆ ಇತ್ತು ನಾನು ಎಲ್ಲರನ್ನೂ ತೆಗೆದುಕೊಂಡು ಹೋಗಲು ಆಗಲಿಲ್ಲ, ಎಲ್ಲ ಮುಖಂಡರನ್ನು ಹಾಗೂ ಕಾರ್ಯಕರ್ತರ ಸಮೀಪ ಹೋಗುವುದಕ್ಕೆ ಆಗಲಿಲ್ಲ ಆದರೂ ಪಕ್ಷದ ಮೇಲೆ ಹಾಗೂ ನನ್ನ ಮೇಲೆ ವಿಶ್ವಾಸವಿಟ್ಟು ಕಾರ್ಯಕರ್ತರು ಹಗರಲಿರಳು ಶ್ರಮಿಸಿದ್ದರಿಂದ ೬೭ ಸಾವಿರಕ್ಕೂ ಅಧಿಕ ಮತಗಳು ಬಂದಿವೆ ಇದೊಂದು ದೊಡ್ಡ ಸಾಧನೆ ಈ ಮೂಲಕ ಚಿತ್ತಾಪುರದಲ್ಲಿ ಕಾರ್ಯಕರ್ತರೇ ಬಿಜೆಪಿಗೆ ದೊಡ್ಡ ಶಕ್ತಿಯಾಗಿದ್ದಾರೆ ಎಂಬುದು ತೋರಿಸಿಕೊಟ್ಟಿದ್ದಾರೆ ಎಂದರು.

  ಕಾರ್ಯಕರ್ತರು ಯಾರೂ ಎದೆಗುಂದದೇ ನಿಮ್ಮ ಜೊತೆ ನಾನು ಇದ್ದೇನೆ ಪಕ್ಷದ ಸಂಘಟನೆಯಲ್ಲಿ ತೊಡಗಬೇಕು, ಈ ನಿಟ್ಟಿನಲ್ಲಿ ಬರುವ ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವಂತೆ ಈಗಿನಿಂದಲೇ ಕಾರ್ಯಪ್ರವೃತರಾಗಿ ಎಂದು ಕರೆ ನೀಡಿದರು.

  ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೋರ, ಚಂದ್ರಶೇಖರ ಅವಂಟಿ, ಸೋಮಶೇಖರ ಪಾಟೀಲ ಬೆಳಗುಂಪಾ, ಬಸವರಾಜ ಬೆಣ್ಣೂರಕರ್,ನಾಗರಾಜ ಭಂಕಲಗಿ ಅವರು ಮಾತನಾಡಿ,ಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ತಪ್ಪುಗಳಿಂದ ನಮಗೆ ಸೋಲಾಗಿದೆ ಬರುವ ದಿನಗಳಲ್ಲಿ ಎಲ್ಲರೂ ಒಗ್ಗೂಡಿ ಪಕ್ಷದ ಸಂಘಟನೆಯಲ್ಲಿ ತೊಡಗಿ ಮತ್ತೇ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಹೇಳಿದರು.

   ಬಿಜೆಪಿ ತಾಲೂಕು ಅಧ್ಯಕ್ಷ ನೀಲಕಂಠ ಪಾಟೀಲ, ತೊಗರಿ ಅಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಮುಖಂಡರಾದ ವಿಠಲ್ ನಾಯಕ, ಶಶಿಧರ ಸೂಗುರ, ಧರ್ಮಣ್ಣ ಇಟಗಾ, ಬಸವರಾಜ ಬೆಣ್ಣೂರಕರ್, ಮಲ್ಲಿಕಾರ್ಜುನ ಪೂಜಾರಿ, ನಾಗುಬಾಯಿ ಜಿತುರೆ, ಆನಂದ ಪಾಟೀಲ ನರಬೋಳ, ಶರಣಗೌಡ ಪಾಟೀಲ ಭೀಮನಳ್ಳಿ, ಗುಂಡಣ್ಣ ಬಾಳಿ, ರವೀಂದ್ರ ಸಜ್ಜನಶೆಟ್ಟಿ, ಪೋಮು ರಾಠೋಡ, ಶಂಕರ ಚವ್ಹಾಣ, ಭೀಮರೆಡ್ಡಿ ಕುರಾಳ, ಮಹೇಂದ್ರ ಕೋರಿ, ಅಣ್ಣಾರಾವ ಬಾಳಿ, ಶ್ರೀಕಾಂತ ಸುಲೇಗಾಂವ ಇತರರು ಇದ್ದರು. ರಾಮದಾಸ ಚವ್ಹಾಣ ನಿರೂಪಿಸಿದರು, ನಾಗರಾಜ ಹೂಗಾರ ವಂದಿಸಿದರು.

ಶನಿವಾರ, ಮೇ 13, 2023

ಪ್ರಿಯಾಂಕ್ ಖರ್ಗೆ ಹ್ಯಾಟ್ರಿಕ್ ಗೆಲುವು.

ಚಿತ್ತಾಪೂರ: ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರು ಭರ್ಜರಿ ಜಯಭೇರಿಯೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 

ಪ್ರಿಯಾಂಕ್ ಖರ್ಗೆ ಅವರು 13640 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರನ್ನು ಮಣಿಸಿದ್ದಾರೆ. ಪ್ರಿಯಾಂಕ್ ಅವರಿಗೆ 81,323 ಮತಗಳು ದೊರಕಿದ್ದರೆ, ಅವರ ನೇರ ಎದುರಾಳಿ ಮಣಿಕಂಠ 67,683 ಮತಗಳನ್ನು ಪಡೆದಿದ್ದಾರೆ. ಇವರಿಬ್ಬರ ಮಧ್ಯೆಯೇ ತೀವ್ರ ಪೈಪೋಟಿ ನಡೆಸಿದ್ದು, ಕ್ಷೇತ್ರದಲ್ಲಿದ್ದ ಇತರೆ ಯಾವ ಅಭ್ಯರ್ಥಿಯೂ ಸಾವಿರ ಮತಗಳ ಗಡಿ ದಾಟುವುದಕ್ಕೂ ಸಾಧ್ಯವಾಗಿಲ್ಲ. ಒಟ್ಟು 1,53,195 ಮತಗಳು ಚಲಾವಣೆಯಾಗಿದೆ. 962 ಮತಗಳನ್ನು ಪಡೆದ ಆಮ್ ಆದ್ಮಿ ಪಕ್ಷದ ಜಗದೀಶ್ ಎಸ್ ಸಾಗರ್ ಮೂರನೇ ಸ್ಥಾನಕ್ಕೆ ತೃಪ್ತರಾಗಿದ್ದಾರೆ. ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿ ಶರಣು ಸೂಗುರ 878 ಮತಗಳು, ಜೆಡಿಎಸ್ ಅಭ್ಯರ್ಥಿ ಡಾ. ಸುಭಾಶ್ಚಂದ್ರ ರಾಠೋಡ್ 643 ಮತಗಳು, ಕೆಆರ್ ಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಪೂಜಾರಿ 485 ಮತಗಳು, ಸ್ವತಂತ್ರ ಅಭ್ಯರ್ಥಿ ರಾಜು ಹುದನೂರ 505 ಮತಗಳು ಪಡೆದಿದ್ದಾರೆ.
ಇನ್ನು ನೋಟಾಕ್ಕೆ 816 ಮತಗಳು ಬಿದ್ದಿವೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೈ ಅನ್ನುವ ಜಯ ಘೋಷಗಳು ಕೇಳಿ ಬಂದವು. ಸರ್ವ ಕಾಂಗ್ರೆಸ್ ಕಾರ್ಯಕರ್ತರು ಜಯ ಘೋಷಗಳೊಂದಿಗೆ ಗುಲಾಲ್ ಎರಚಿ ಸಂತಸ  ಪಡುತ್ತಿದ್ದಾರೆ.

ಬಿಜೆಪಿಯವರು ಚಿತ್ತಾಪುರ ಜನತೆಗೆ ಇಷ್ಟ ಇಲ್ಲದಿದ್ದರೂ ರೌಡಿಶೀಟರ್ ನಲ್ಲಿ ಹೆಸರಿದ್ದ ಮಣಿಕಂಠ ರಾಠೋಡ ಅವರನ್ನು ಕಣಕ್ಕಿಳಿಸಿದರು. ಅವರ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಚಾರ ನಡೆಸಿದ್ದು ಪ್ರಯೋಜನಕ್ಕೆ ಬರಲಿಲ್ಲ. ಅಂತೂ ಸತ್ಯಕ್ಕೆ ಜಯವಾಗಿದೆ ಎಂದರು.
                    - ಪ್ರಿಯಾಂಕ್ ಖರ್ಗೆ
                ಶಾಸಕರು, ಮತಕ್ಷೇತ್ರ ಚಿತ್ತಾಪೂರ.

ಭಾನುವಾರ, ಮೇ 7, 2023

ದಾದಾಗಿರಿಗೆ ಅಂಜುವ ಮೊಮ್ಮಗ ನಾನಲ್ಲ: ಪ್ರಿಯಾಂಕ್ ಖರ್ಗೆ.

ಚಿತ್ತಾಪೂರ: ದಾದಾಗಿರಿ ಶುರು ಮಾಡಿದರೆ ಕಾಂಗ್ರೆಸ್ ನವರು ಹೊರಗಡೆ ಬರುವುದಕ್ಕೆ ಆಗುವುದಿಲ್ಲ ಅಂತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಹೇಳುತ್ತಾನೆ.  ಎಂಎಲ್ಎ ಚುನಾವಣೆಗೆ ನಿಲ್ಲುವುದಕ್ಕೆ ಬಂದಿದ್ದಾನಾ? ಅಥವಾ ದಾದಾಗಿರಿ‌‌ ಮಾಡುವುದಕ್ಕೆ ಬಂದಿದ್ದಾನಾ? ಅವನು ದಾದಾಗಿರಿ ಮಾಡಿದರೆ ಚಿತ್ತಾಪುರದ ಮೊಮ್ಮಗ ನಾನು ಸುಮ್ಮನೆ ಕೂತಿರುತ್ತೇನಾ ? ಎಂದು ಕಾಂಗ್ರೆಸ್ ಅಭ್ಯರ್ಥಿ  ಪ್ರಿಯಾಂಕ್ ಖರ್ಗೆ ಮಾರುತ್ತರ ನೀಡಿದರು.

ತಾಲ್ಲೂಕಿನ ಮಹಾನಗರ ತಾಂಡಾ, ಮುಗಳನಾಗಂವ್, ಬೆಣ್ಣೋರ, ಸಂಗಾವಿ, ಪೇಠಶಿರೂರು, ಕಾಟಮದೇವರ ಹಳ್ಳಿ, ಬೆಳಗುಂಪಾ, ಇವಣಿ,ಭಾಗೋಡಿ, ಕದ್ದರ್ಗಿ, ಜೀವಣಗಿ, ಗ್ರಾಮದಲ್ಲಿ ನಡೆದ‌ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು ನಾನು ಈ ತಾಲೂಕಿನ ಮೊಮ್ಮಗ ನಮ್ಮ ಜನರ ಕಷ್ಟ ಸುಖಗಳ ಅರಿವು ನನಗಿದೆ. ಎಲ್ಲಿಂದಲೋ ಬಂದವರು ದಾದಾಗಿರಿ ಮಾಡಿದರೆ ನಾನು ಸುಮ್ಮನಿರಬೇಕಾ? ಎಂದು ಪ್ರಶ್ನಿಸಿದರು.

ಮಣಿಕಂಠ ಯಾರು ಅಂತ ನನಗೆ ಗೊತ್ತಿರಲಿಲ್ಲ. ಅವನು ನನಗೆ ಶೂಟ್ ಮಾಡುತ್ತೇನೆ ಎಂದು ಹೇಳಿದಾಗಲೇ ಅವನ ಬಗ್ಗೆ ಗೊತ್ತಾಗಿದ್ದು. " ಅಲ್ಲಪ್ಪ ನನಗೆ ಶೂಟ್ ಮಾಡುವುದಕ್ಕೆ ನಿಮ್ಮಪ್ಪನ ಗಂಟು ಏನಾದರೂ ತಿಂದಿದ್ದೇನಾ ? ಅಥವಾ ನಿನ್ನ ಗಂಟು ತಿಂದಿದ್ದೇನಾ? ಅಸಲಿಗೆ ನಿನ್ನ ಗಂಟು ಬೇಡ. ಯಾಕೆಂದರೆ ಅದು ಪಾಪದ‌ ದುಡ್ಡು ಎಂದು ತೀಕ್ಷ್ಣವಾಗಿ ಹೇಳಿದರು.

ಮಣಿಕಂಠನನ್ನು ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ ನಂತರ ಪ್ರಬುದ್ದತೆಯ ಸಂಕೇತವಾದ ಚಿತ್ತಾಪುರ ಮರ್ಯಾದೆಗೆ ರಾಜ್ಯ ಮಟ್ಟದಲ್ಲಿ ಧಕ್ಕೆಯಾಗಿದೆ. ಕಾನೂನು ಬಾಹಿರವಾಗಿ ಅಕ್ಕಿ ಹಾಗೂ ಹಾಲಿನ ಪುಡಿ ಸಾಗಾಣಿಕೆ ಮಾಡುವ ವ್ಯಕ್ತಿಯನ್ನು ಬಿಜೆಪಿಯವರು ತಮ್ಮ ನಾಯಕ ಎಂದು ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ ಬಂದಿರುವುದೇ ದುರಂತ ಎಂದರು.

ಈ ಸಲದ ಚುನಾವಣೆಯಲ್ಲಿ ನನಗೆ ಹೆಚ್ಚಿನ ಬಹುಮತದಿಂದ ಆರಿಸಿ ತರುವ ಮೂಲಕ ನಿಮ್ಮ ಸೇವೆ ಮಾಡಲು ಅನುಕೂಲ ಮಾಡಿಕೊಡಿ ಎಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಶಾಸಕ ವಿಶ್ವಜಿತ್ ಕದಂ, ಬೀಮಣ್ಣ ಸಾಲಿ, ನಾಗರೆಡ್ಡಿಗೌಡ ಪಾಟೀಲ, ರಮೇಶ ಮರಗೋಳ, ಸಿದ್ದುಗೌಡ ಪಾಟೀಲ್, ಪ್ರಭು ಕುಂಬಾರ, ಪ್ರದೀಪ ಪೂಜಾರಿ, ದೇವಿಂದ್ರ ಗುಡ್ಡಪೂರ, ದಶರಥ ಕದ್ದರ್ಗಿ, ದೇವಿಂದ್ರ ಭಾಗೋಡಿ, ವಿಶ್ವನಾಥ ರೆಡ್ಡಿ ಯರಗಲ್, ಸೇರಿದಂತೆ ಇತರರು ಇದ್ದರು.

ಅಕ್ರಮದಲ್ಲಿ ತೊಡಗುವವರಿಗೆ ಜೈಲು‌ಭಾಗ್ಯ: ಪ್ರಿಯಾಂಕ್ ಖರ್ಗೆ.

ಚಿತ್ತಾಪೂರ: ನಾನು ಗೆದ್ದು ಬಂದ ಮೇಲೆ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದವರಿಗೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗವವರಿಗೆ ಜೈಲ್ ಗೆ ಕಳಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅಬ್ಬರಿಸಿದರು‌.

ತಾಲ್ಲೂಕಿನ ಮಲಗಾಣ, ಕಣಸೂರ, ಅಶೋಕ ನಗರದಲ್ಲಿ ಚುನಾವಣೆಯ ಪ್ರಚಾರ ಸಭೆ ಕುರಿತು ಮಾತನಾಡಿದ ಅವರು ಬಿಜೆಪಿ ಅಭ್ಯರ್ಥಿ ಯುವಕರನ್ನು ದಾರಿ ತಪ್ಪಿಸುತ್ತಿದ್ದಾನೆ. ನಿಮಗೆ ಶಿಕ್ಷಣ, ಉದ್ಯೋಗ ಹಾಗೂ ನೆಮ್ಮದಿಯ ಜೀವನ ಬೇಕಾದರೆ ನನಗೆ ಮತನೀಡಿ. ಢಾಬಾ, ಜೈಲು ಹಾಗೂ ಬೇಲು ಅಂತ ಅಲೆದಾಡಬೇಕಾದರೆ ಮಣಿಕಂಠನಿಗೆ ಮತ ಹಾಕಿ ಎಂದರು.
ಖರ್ಗೆ ಹಾಗೂ ಕುಟುಂಬವನ್ನು ಸಾಫ್ ಮಾಡುತ್ತೇನೆ ಅಂತ ಅವನು ಹೇಳಿದ ಅಡಿಯೋ ವೈರಲ್ ಆಗಿದೆ. ನಮಗೆ ಸಾಫ್ ಮಾಡಲು ಬಂದರೆ ನನ್ನ ಕ್ಷೇತ್ರದ ಜನರು ಸುಮ್ಮನೆ ಇರುತ್ತೀರಾ ? ಎಂದು ಪ್ರಶ್ನಿಸಿದರು. ನಾನು ದಾದಾಗಿರಿ ಮಾಡಲು ಶುರು ಮಾಡಿದರೆ ಕಾಂಗ್ರೆಸ್ ನವರು ಮನೆಯಿಂದ ಹೊರಗೆ ಬರಲು ಆಗುವುದಿಲ್ಲ ಅಂತ ಮರಗೋಳದಲ್ಲಿ ಹೇಳಿದ್ದಾನಂತೆ, ಆ ಪಾರನಿಗೆ ಗೊತ್ತಿರಲಿ ಚಿತ್ತಾಪುರದ ಈ ಮೊಮ್ಮಗ‌ ಇನ್ನೂ ‌ಜೀವಂತವಾಗಿದ್ದಾನೆ  ಎಂದು ಟಕ್ಕರ್ ಕೊಟ್ಟರು.

ಈ ಸಂದರ್ಭದಲ್ಲಿ ಶಿವಾನಂದ ಪಾಟೀಲ್, ಸುನೀಲ ದೊಡ್ಮನಿ, ಪ್ರವೀಣ ನಾಮದಾರ್, ಶಂಭುಲಿಂಗ ಗುಂಡಗುರ್ತಿ, ಶರಣಗೌಡ, ಸುಧಾಕರ ಪಾಟೀಲ್, ಆನಂದ ಹೊಸಮನಿ, ಪೃಥ್ವಿ ನಾಮದಾರ್, ಸೇರಿದಂತೆ ಇತರರು ಇದ್ದರು.

ಕ್ಷೇತ್ರವ್ಯಾಪ್ತಿಯಲ್ಲಿ ಮಣಿಕಂಠ ರಾಠೋಡ ಬಿರುಸಿನ ಪ್ರಚಾರ.

ಚಿತ್ತಾಪೂರ: ಮೀಸಲು ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅಇವರು  ಪಟ್ಟಣದ 23 ವಾರ್ಡ್ ಗಳ ಮನೆ ಮನೆಗೆ ಹೋಗಿ ಮತ ಕೇಳುವ ಮೂಲಕ ಬಿರುಸಿನ ಪ್ರಚಾರ ನಡೆಸಿದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ತಾಲೂಕಿನಲ್ಲಿ ಸಾಕಾಷ್ಟು ಅಭಿವೃದ್ಧಿಗೆ ಸಾದ್ಯವಾಗುತ್ತದೆ. ನಾನು ನಿಮ್ಮ ಮನೆಯ ಮಗನಾಗಿ ನಿಮ್ಮೆಲ್ಲರ ಸೇವೆ ಮಾಡುವ ಭಾಗ್ಯ ನನ್ನಗೆ ಒದಗಿ ಬಂದಿದೆ. ಹೀಗಾಗಿ ಮೇ,10ಕ್ಕೆ ಬಿಜೆಪಿ ಪಕ್ಷಕ್ಕೆ ಮತ ನೀಡಿ ನನ್ನಗೆ ಗೆಲ್ಲಿಸಿ ಎಂದು ಮತದಾರರಲ್ಲಿ ಕೈ ಮುಗಿದು ಬೇಡಿಕೊಂಡರು.

ಯಾವುದೇ ಪ್ರತಿಫಲಾ ಪೇಕ್ಷೆ ಇಲ್ಲದೆ ಕಾರ್ಯಕರ್ತರು ಪಣತೊಟ್ಟು ಮನೆಮನೆಗೂ ಪ್ರಚಾರದಲ್ಲಿ ತೊಡಗಿದ್ದಾರೆ. ಕಾರ್ಯಕರ್ತರ ಪ್ರೀತಿಗೆ ಚಿರಋಣಿ ಎಂದು ಹೇಳಿದರು.

ಕೇಂದ್ರದಿಂದ ಬಿಡುಗಡೆಯಾಗುವ ಒಂದು ಪೈಸೆ ಹಣವೂ ನಿರ್ದಿಷ್ಟ ಫಲಾನುಭವಿ ಯನ್ನು ತಲುಪಲು ಹಾಗೂ ನಿರ್ದಿಷ್ಟ ಯೋಜನೆಗೆ ಬಳಕೆ ಯಾಗಲು ಡಬಲ್‌ ಎಂಜಿನ್ ಸರ್ಕಾರ ಮುಖ್ಯ. ನಾಲ್ಕು ವರ್ಷಗಳ ಕರ್ನಾಟಕದ ಬಿಜೆಪಿ ಆಡಳಿತದಲ್ಲಿ ಇದು ಸಾಬೀತಾಗಿದೆ

ಬಿಜೆಪಿಯ ಜನಕಲ್ಯಾಣ ಕಾರ್ಯಕ್ರಮಗಳೇ ಗೆಲುವಿಗೆ ಸ್ಪೂರ್ತಿಯಾಗಿದ್ದು, ಜನರ ಬದುಕು ಸುಧಾರಣೆಯತ್ತ ಸಾಗುತ್ತಿದೆ. ಸಮೃದ್ಧ ಕರ್ನಾಟಕ ಪ್ರತಿ ನಿರ್ಮಾಣಕ್ಕಾಗಿ ಮತ್ತೊಮ್ಮೆ ಬಿಜೆಪಿಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಾಗರಾಜ ಬಂಕಲಗಿ, ಮಲ್ಲಿಕಾರ್ಜುನ ಎಮ್ಮೆನೋರ, ಪ್ರಭು ಗಂಗಾಣಿ, ಕೋಟೇಶ್ವರ ರೇಷ್ಮೆ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಪೂಜಾರಿ, ಸೇರಿದಂತೆ ನೂರಾರು ಕಾರ್ಯಕರ್ತರು ಪ್ರಚಾರದಲ್ಲಿ ಭಾಗಿಯಾಗಿದ್ದರು.

ಶುಕ್ರವಾರ, ಮೇ 5, 2023

ಶಿಕ್ಷಣ,ಉದ್ಯೋಗಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಪ್ರಿಯಾಂಕ್ ಖರ್ಗೆ.

ಚಿತ್ತಾಪೂರ: ಕ್ಷೇತ್ರದ ಜನತೆಗೆ ಒಳ್ಳೆಯ ಶಿಕ್ಷಣ ಹಾಗೂ ಉದ್ಯೋಗ ಸೀಗಬೇಕಾದರೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಖರ್ಗೆ ಹೇಳಿದರು.

ತಾಲ್ಲೂಕಿನ ತೋನಸನಳ್ಳಿ, ಮಲಕೂಡ, ಮರಗೋಳ, ಮುಡಬೂಳ, ಮೋಗಲಿ,
ದಂಡೋತಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಹಿಂದೆ ಹೋದರೆ‌ ಜೈಲು‌ ಹಾಗೂ ಬೇಲು ಗ್ಯಾರಂಟಿ ಜನರಿಗೆ ತಿಳಿ ಹೇಳಿದರು.

ಬಿಜೆಪಿಗರು ಮೋದಿ ಫೋಟೋ ತೋರಿಸಿ ಕಳ್ಳನಿಗೆ ಟಿಕೆಟ್ ಕೊಟ್ಟರೆ ಆರಿಸಿ ಕಳಿಸಲು ಚಿತ್ತಾಪುರದ ಪ್ರಬುದ್ಧ ಮತದಾರರು ಮತ ಹಾಕುತ್ತಾರೆಯೇ? ಎಂದು ಪ್ರಶ್ನಿಸಿದರು.

ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನಿಗೆ ಚುನಾವಣೆಯಲ್ಲಿ ಅಪ್ಪಿತಪ್ಪಿ ಗೆಲ್ಲಿಸಿದರೆ ಅಂಗನವಾಡಿಗೆ ಹೋಗುವ ಮಕ್ಕಳಿಗೆ ಹಾಲು ಸಿಗಲ್ಲ. ಯಾಕೆಂದರೆ, ಅವನು ಅಕ್ರಮವಾಗಿ ಹಾಲಿನಪುಡಿ ಸಾಗಾಣಿಕೆ ಮಾಡಿದ್ದಕ್ಕೆ ಯಾದಗಿರಿ ಕೋರ್ಟ್ ಶಿಕ್ಷೆ ನೀಡಿದೆ. ಅವನ ವಿರುದ್ದ ತೆಲಂಗಾಣ, ಆಂಧ್ರ,‌ಕರ್ನಾಟಕ ಹಾಗೂ ಮಹಾರಾಷ್ಟ್ರ ಹೀಗೆ ನಾಲ್ಕು ರಾಜ್ಯದ ಆರು ಜಿಲ್ಲೆಗಳಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆ ಮಾಡಿದಕ್ಕೆ ಒಟ್ಟು 40 ಕೇಸುಗಳಿವೆ. ಹೀಗಾಗಿ ಅವನು ಕೇವಲ ರಾಜ್ಯದ ಫಿಗರ್ ಅಲ್ಲ ದಕ್ಷಿಣ ಭಾರತದ ಫಿಗರ್ ಆಗಿದ್ದಾನೆ ಎಂದು ವ್ಯಂಗ್ಯಮಾಡಿದರು.

ನನಗೆ ನೀವು ಹೇಗೆ ಆಶೀರ್ವಾದ ಮಾಡಬೇಕೆಂದರೆ ಮತ್ತೊಮ್ಮೆ ಬಿಜೆಪಿಗೆ ಚಿತ್ತಾಪುರದಲ್ಲಿ ಅಭ್ಯರ್ಥಿಗೆ ಮತ ಹಾಕಿರಬಾರದು ಎಂದು ಜನತೆಯಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ,ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ಬೀಮಣ್ಣ ಸಾಲಿ, ನಾಗರೆಡ್ಡಿಗೌಡ ಪಾಟೀಲ, ರಾಜಶೇಖರ ತಿಮ್ಮನಾಯಕ, ತೆಲಂಗಾಣದ ಸುಜಾತ, ಶರಣಪ್ಪ ನಾಟೀಕಾರ್, ರಾಮಲಿಂಗ ಬಾನರ್, ಸಾಬಣ್ಣ ಡಿಗ್ಗಿ, ಬಸವರಾಜ ಚಿಮ್ಮನ್ನಳ್ಳಿ, ಗುಂಡು ಐನಾಪುರ, ಶರಣು ಡೋಣಗಾಂವ್, ರಮೇಶ ಕವಡೆ, ಸೇರಿದಂತೆ ಇತರರು ಇದ್ದರು.

ಸಮಾಜ ಸೇವೆ ನೋಡಿ ಮತ ಹಾಕಿ.

ಚಿತ್ತಾಪೂರ: ಕ್ಷೇತ್ರದಲ್ಲಿ ಒಂದು ವರ್ಷದಿಂದ ಸಮಾಜ ಸೇವೆ ಮಾಡುತ್ತಾ ಇರುವೆ ಈ ಸಮಾಜ ಸೇವೆ ನೋಡಿ ನನ್ನಗೆ ಮತ ನೀಡಿ ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಮತದಾರರಲ್ಲಿ ಮನವಿ ಮಾಡಿದರು.

ತಾಲ್ಲೂಕಿನ ಚಾಮನೂರ, ಕಡಬೂರ್, ಕುಲಕಂದ, ಮಳಗ, ತುನ್ನೂರ, ಬನ್ನಟ್ಟಿ, ಕುಂಬಾರ ಹಳ್ಳಿ, ನಾಲವಾರ ಸ್ಟೇಷನ್, ಸ್ಟೇಷನ್ ತಾಂಡಾ, ಸೂಗುರ, ಸೂಗುರ ತಾಂಡಾದಲ್ಲಿ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ನಾನು ಯಾವುದೇ ಉನ್ನತ ಹುದ್ದೆಯಲ್ಲಿ ಇಲ್ಲಾ ಶಾಸಕನು ಇಲ್ಲಾ ಆದರೂ ನಾನು ಕ್ಷೇತ್ರದಲ್ಲಿ ನನ್ನ ವೈಯಕ್ತಿಕ ಹಣದಿಂದ ನಿಮ್ಮೆಲ್ಲರ ಸೇವೆ ಮಾಡುತ್ತಿರುವೆ ಮುಂದೆಯೂ ಮಾಡುವೇ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಖರ್ಗೆ ಅವರು ನನ್ನ ಮೇಲೆ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದರೆ ಅದು ಸತ್ಯಕ್ಕೆ ದೂರವಾಗಿದೆ. ನಾನು ಒಂದು ವೇಳೆ ಕಾನೂನಿನ ಅಡಿಯಲ್ಲಿ ತಪ್ಪಿತಸ್ಥ ಆಗಿದ್ದಾರೆ ಕಾನೂನು ಈಗಾಗಲೇ ನನ್ನ ಶಿಕ್ಷೇ ನೀಡುತ್ತಿತ್ತು ಅವರು ಹೇಳುವ ಮಾತ್ತು ಯಾರು ನಂಬಬೇಡಿ ಮತಗಳು ಸೆಳೆಯಲು ಇದು ಒಂದು ಕುತುಂತ್ರವಾಗಿದೆ ಎಂದರು.

ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡದೆ ಬಿಜೆಪಿ ಪಕ್ಷಕ್ಕೆ ಬೆಂಬಲಸಿ ನನ್ನಗೆ ಗೆಲ್ಲಿಸಿ, ನಾವು ಹಿಂದು ಧರ್ಮದ ಪರವಾಗಿದ್ದೆವೆ ಅವರು ಜಾತಿ-ಜಾತಿಗಳ ಮಧ್ಯ ಜಗಳ ಹಚ್ಚುವರು ಇದ್ದರೆ ಎಂದು ಹೇಳಿದರು.

ಇದೇ ವೇಳೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಹಾಗೂ ಇತರ ಪಕ್ಷವನ್ನು ತೊರೆದು ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಹಾಗೂ ಮಣಿಕಂಠ ರಾಠೋಡ ಅವರ ಸಮಾಜ ಸೇವೆ ನೋಡಿ ಮಾಜಿ ಜಿಪಂ ಸದಸ್ಯ ಇಬ್ರಾಹಿಂ ಪಟೇಲ,  ಮಾಜಿ ತಾಪಂ ಸದಸ್ಯ ಬಸವರಾಜ ಲೋಕನಳ್ಳಿ, ಅವರ ಮುಂದಾಳತ್ವದಲ್ಲಿ ನೂರಾರು ಜನರು ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಜಾರ್ಖಂಡ್ ಸಂಸದ ಆದಿತ್ಯಸಾಹು ಸಿಂಗ್, ಮುಕುಂದ ದೇಶಪಾಂಡೆ, ಶಶಿಧರ ಸುಗೂರ, ನಿಂಗಾರೆಡ್ಢಿ ಭಾಸರೆಡ್ಡಿ, ಸುರೇಶ ರಾಠೋಡ್, ವಿಠ್ಠಲ ನಾಯಕ, ಸೇರಿದಂತೆ ಇತರರು ಇದ್ದರು.



ಗುರುವಾರ, ಮೇ 4, 2023

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.


ಚಿತ್ತಾಪೂರ: ಚುನಾವಣೆಯ ಭದ್ರತೆಯ ಸಲುವಾಗಿ ಪಟ್ಟಣದ ತಹಸೀಲ್ ಕಛೇರಿಯಲ್ಲಿ  ಕರ್ತವ್ಯದಲ್ಲಿ ಇದ್ದ ಪೋಲೀಸ ಪೇದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಮಲ್ಲಿಕಾರ್ಜುನ ಪೋತೆಪೂರ (38) ಎಂಬ ಪೋಲೀಸ ಪೇದೆ ಬುಧವಾರ ರಾತ್ರಿ ತಹಸೀಲ್ ಕಛೇರಿಯ ಭದ್ರತೆಯ ಕರ್ತವ್ಯದಲ್ಲಿದ್ದ ಪೋಲೀಸ ಪೇದೆ 303 ಬಂದೂಕನಿಂದ ತಾನೇ ಪೈರಿಂಗ್, ಅಥವಾ ಆಕಸ್ಮಿಕವಾಗಿ ಮಾಡಿಕೊಂಡಿರಬಹುದು ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ.

ಪೋಲೀಸ ಪೇದೆಯ ಚಲನ ವಲನದ ಕುರಿತು
ತಹಸೀಲ್ ಕಛೇರಿಯಲ್ಲಿನ ಸಿಸಿ ಟಿವಿ ಪರಿಶೀಲನೆಯ ನಡೆಯುತ್ತಿದೆ.

ಜಿಲ್ಲಾ ಪೋಲೀಸ ವರಿಷ್ಠಾಧಿಕಾರಿ ನೇತೃತ್ವದಲ್ಲಿ ತನಿಖೆ ಕೈಗೊಂಡು ಸಾವಿನ ನಿಖರತೆ ತಿಳಿಸಲಾಗುವುದು ಎಂದು ಪೋಲೀಸ ಮೂಲಗಳಿಂದ ತಿಳಿದು ಬಂದಿದೆ.

ಕೆಟ್ಬ ಹಾಗೂ ಭ್ರಷ್ಟ ಸರ್ಕಾರ‌ ರಾಜ್ಯದಲ್ಲಿದೆ: ಖರ್ಗೆ ಆರೋಪ.

ಚಿತ್ತಾಪೂರ: ರಾಜ್ಯದ ಇತಿಹಾಸದಲ್ಲಿಯೇ ಬಿಜೆಪಿ ಸರ್ಕಾರವು ಅತ್ಯಂತ ಕೆಟ್ಟ ಹಾಗೂ ಭ್ರಷ್ಟ ಸರ್ಕಾರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ತಾಲ್ಲೂಕಿನ ದಿಗ್ಗಾಂವ,
ಅಲ್ಲೂರು(ಬಿ), ಅಲ್ಲೂರ(ಕೆ), ಇಟಗಿ 
ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಇದೆ ಎನಿಸುವುದಿಲ್ಲ. 40% ಸರ್ಕಾರ ಇದೆ ಎನ್ನುವುದು ಜನರ ಅಭಿಪ್ರಾಯವಾಗಿದೆ. ಈ ಸರ್ಕಾರ ಹುದ್ದೆಗಳನ್ನು ಮಾರಾಟ ಮಾಡಿಕೊಂಡು ನಿರುದ್ಯೋಗಿ ಯುವಕರ ಪಾಲಿಗೆ ಕರಾಳವಾಗಿ ಪರಿಣಮಿಸಿದೆ.

 ತಾಲೂಕಿನಲ್ಲಿ ರಾಜಕೀಯ ವಾತಾವರಣ ಕಲುಷಿತಗೊಳ್ಳುತ್ತಿದೆ. ತತ್ವ ಸಿದ್ದಾಂತದ ಬಗ್ಗೆ ಮಾತನಾಡುವ ಬಿಜೆಪಿ ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿಗೆ ಟಿಕೇಟ್ ನೀಡಿದೆ. ಅಕ್ರಮ ಅಕ್ಕಿ ಹಾಗೂ ಹಾಲಿನ‌ಪುಡಿ‌ ಕಳ್ಳತನ ಮಾಡಿ ಮಾರಾಟ‌ ಮಾಡಿದ ಆರೋಪದ ಮೇಲೆ ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ಮಹಾರಾಷ್ಟ್ರದ ವಿವಿಧ ಠಾಣೆಗಳಲ್ಲಿ 40 ಕೇಸುಗಳು ದಾಖಲಾಗಿವೆ. ಇದನ್ನೆಲ್ಲ ನಾನು ಹೇಳುತ್ತಿಲ್ಲ. ಚುನಾವಣೆ ನಾಮ ಪತ್ರದ ಜೊತೆಗೆ ಅವನು ತಹಸೀಲ್ದಾರರಿಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ವಿವರವಾಗಿ ಹೇಳಿಕೊಂಡಿದ್ದಾನೆ. ಅಂತವನಿಗೆ ಟಿಕೇಟ್ ನೀಡಿರುವ ಬಿಜೆಪಿಗರು ಚಿತ್ತಾಪುರದ ಘನತೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ನೀವು ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿ ಎಂದರು.

ಈ ಸಲದ ಚುನಾವಣೆ ಯುವಕರ ಭವಿಷ್ಯದ ಮಹಿಳೆಯ‌ ಸುಭದ್ರತೆಯ ಹಾಗೂ‌ ವಿದ್ಯಾರ್ಥಿಗಳ‌ ಶೈಕ್ಷಣಿಕ ಅಭಿವೃದ್ದಿಗೆ ಸಂಬಂಧಿಸಿದ್ದು ಕಾನೂನು ಬಾಹಿರ ಕೆಲಸ ಮಾಡುವ ವ್ಯಕ್ತಿಗಳಿಗೆ ಮತ ನೀಡುವ ಬದಲು ಅಭಿವೃದ್ದಿ ಪರವಾಗಿರುವ ನನ್ನಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ನಾಗರೆಡ್ಡಿ ಪಾಟೀಲ ಕರದಾಳ, ಹಣಮಂತ ಸಂಕನೂರ, ಶರಣಪ್ಪ ನಾಟೀಕಾರ್, ರಾಮಲಿಂಗ ಬಾನರ್, ಬಸವರಾಜ ಚಿಮ್ಮನ್ನಳ್ಳಿ, ಸೇರಿದಂತೆ ಹಲವರಿದ್ದರು.

ಭಜರಂಗದಳ, ಹಿಂದೂ ಸಮಾಜದ ಕವಚ: ಮಣಿಕಂಠ ರಾಠೋಡ.

ಚಿತ್ತಾಪೂರ: ಭಜರಂಗದಳ ಎನ್ನುವುದು ಸಮಾಜ ವಿರೋಧಿ ಸಂಘಟನೆಯಲ್ಲ. ಗೋಮಾತೆಯ ಹಿತಕ್ಕಾಗಿ, ಹಿಂದು ಸೋದರಿಯರ ಮಾನ ಸಮ್ಮಾನ ಸಂರಕ್ಷಣೆಗಾಗಿ ಎಂಥ ತ್ಯಾಗಕ್ಕೂ ಸಿದ್ದವಾಗಿರುವ ಕಾರ್ಯಕರ್ತರ ಪಡೆ, ಹಿಂದೂ ಸಮಾಜದ ಕವಚವಿದ್ದಂತೆ ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಹೇಳಿದರು.

ತಾಲ್ಲೂಕಿನ ಯರಗಲ್, ಮರಗೋಳ, ದಂಡೋತಿ, ತನಸನಹಳ್ಳಿ (ಟಿ), ಗ್ರಾಮದಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಹಿಂದೂ ವಿರೋಧಿ ನಿಲುವಿಗೆ ಧಿಕ್ಕಾರ.
ಬಜರಂಗ ದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಹೇಳುತ್ತದೆ ಈ ನಿಲುವು  ನೋಡಿದ್ರೆ ನೀವು ಹಿಂದೂ ದ್ರೋಹಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಡಿ ಎಂದರು.

ನಾನು ಗೆಲ್ಲಲಿ ಬಿಡಲಿ ನಾನು ನಿಮ್ಮ ಕ್ಷೇತ್ರದ ಸಲುವಾಗಿ ಸೇವೆ ಸಲ್ಲಿಸುವೆ.
ಮರಗೋಳ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ದಬ್ಬಾಳಿಕೆ ಜಾಸ್ತಿಯಾಗಿದೆ ನಾನು ಗಣೇಶನ ದೇವಸ್ಥಾನಕ್ಕೆ ಆಶೀರ್ವಾದ ಪಡೆಯಲು ಬರುವೆ ಎಂದರೆ ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಮಣಿಕಂಠಗೆ ಕರಿಸಬೇಡಿ ಎಂದು ದಬ್ಬಾಳಿಕೆ ಮಾಡುತ್ತಾರೆ. ಈ ಕಾಂಗ್ರೆಸ್ ಕಾರ್ಯಕರ್ತರಿಗೆ ಒಂದು ಮಾತ್ತು ಹೇಳುವೇ ನಮ್ಮ ಬಿಜೆಪಿ ಪಕ್ಷ ಚಿತ್ತಾಪುರನಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ ಆಗ ಅವರಿಗೆ ತಕ್ಕ ಪಾಠ ಕಲಿಸುವುದಾಗಿ ತಿರುಗೇಟು ನೀಡಿದರು.

ಕ್ಷೇತ್ರದ ಯಾವುದೇ ಗ್ರಾಮದ ಸಮಸ್ಯೆ ಇರಲಿ ಸಂಬಂಧಿಸಿದ ಅಧಿಕಾರಿಗಳಿಗೆ ನಿಮ್ಮ ಗ್ರಾಮಕ್ಕೆ ಕರೆಸಿ ಸಮಸ್ಯೆಗೆ ಪರಿಹಾರ ಕೋಡಿಸುವ ಪ್ರಯತ್ನ ಮಾಡುವೆ. ಮೇ,10ಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ನೀಡುವ ಮೂಲಕ ನನ್ನಗೆ ಆಶೀರ್ವಾದ ಮಾಡಿ ಎಂದು ಜನರಲ್ಲಿ ಕೈ ಮುಗಿದರು.

ಈ ಸಂಬಂಧದಲ್ಲಿ ಜಾರ್ಖಂಡ್ ಸಂಸದ ಅದಿತ್ಯಸಾಹು ಸಿಂಗ್, ಮುಕುಂದ ದೇಶಪಾಂಡೆ, ಶಶಿಧರ ಸುಗೂರ, ಶಶಿಕಲಾ ಟೆಂಗಳಿ, ಮಲ್ಲಿಕಾರ್ಜುನ ಎಮ್ಮೆನೋರ, ರಾಮದಾಸ ಚವ್ಹಾಣ್, ತಮ್ಮಣ್ಣ ಡಿಗ್ಗಿ, ಸೇರಿದಂತೆ ಇತರರು ಇದ್ದರು.


ಸೋಮವಾರ, ಮೇ 1, 2023

ನಿಮ್ಮ ಮಗನಾಗಿ ಸೇವೆ ಮಾಡುವೆ: ಮಣಿಕಂಠ ರಾಠೋಡ.

ಚಿತ್ತಾಪೂರ: ಮೇ,೧೦ಕ್ಕೆ ನಡೆಯಲ್ಲಿರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ನೀಡುವ ಮೂಲಕ ನನ್ನಗೆ ಗೆಲ್ಲಿಸಿ ನಾ ನಿಮ್ಮ ಮನೆಯ ಮಗನಾಗಿ ಕೆಲಸ ಮಾಡುವೆ ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಮತದಾರರಲ್ಲಿ ಮನವಿ ಮಾಡಿದರು.
 
ತಾಲ್ಲೂಕಿನ ಸಾತನೂರ, ಹೊಸೂರ, ಭಂಕಲಗಾ, ಅಣೀಕೇರ ತಾಂಡಾ, ಭೀಮನಹಳ್ಳಿ, ಆಲೂರ, ಸೂಲಹಳ್ಳಿ, ಕಮರವಾಡಿ, ಕಮರವಾಡಿ ತಾಂಡಾ, ಡಿಗ್ಗಿ ತಾಂಡಾದಲ್ಲಿ ಚುನಾವಣೆಯ ಪ್ರಚಾರ ಕುರಿತು ಮಾತನಾಡಿದ ಅವರು.

ನಾನು ಕ್ಷೇತ್ರದಲ್ಲಿ ಸಾಕಾಷ್ಟು ಸಮಾಜ ಸೇವೆ ಮಾಡಿರುವೆ. ಅದು ನಾ ಏನೂ ಹೇಳಬೇಕಿಲ್ಲ. ಅದು ನಿಮ್ಮೆಲ್ಲರಿಗೆ ಗೊತ್ತಿದೆ. ಪ್ರಿಯಾಂಕ್ ಖರ್ಗೆ ಅವರ ಬೇಜವಾಬ್ದಾರಿಯಿಂದ ಕೆಲ ಕ್ಷೇತ್ರಗಳಲ್ಲಿ ಮೂಲಭೂತ ಸೌಲಭ್ಯಗಳು ಇಲ್ಲದೆ ಜನರು ಪರದಾಡುವ ಪರಿಸ್ಥಿತಿ ಉಂಟಾಗಿದೆ ಹೀಗಾಗಿ ಮುಂಬರುವ ದಿನಗಳಲ್ಲಿ ನನ್ನಗೆ ಒಂದು ಬಾರಿ ಅವಕಾಶ ಕೋಡಿ ಕ್ಷೇತ್ರದ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯ ಒದಗಿಸುವ ಕೆಲಸ ನಾನು ನಿಷ್ಠೆಯಿಂದ ಮಾಡಿ ತೋರಿಸುವೆ.

ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಷದ ಹಾವು ಎಂದು ಹೇಳಿ ದೇಶದ ಪ್ರಧಾನಿಗೆ ಅಪಮಾನ ಮಾಡಿದ್ರೆ ಇಲ್ಲಿ ಪ್ರಿಯಾಂಕ್ ಖರ್ಗೆ ಕೊಡ ಮೋದಿಗೆ ನಾಲಾಯಕ ಅನ್ನುವ ಮೂಲಕ ಅಪಮಾನ ಮಾಡುತ್ತಿದ್ದಾರೆ. ಅವರು ಮಾಡುವ ಅಪಮಾನ ಬರಿ ನರೇಂದ್ರ ಮೋದಿಗಷ್ಟೇ ಅಲ್ಲಾ ದೇಶದ ಪ್ರತಿಯೊಬ್ಬ ಪ್ರಜೆಗೆ ಅಪಮಾನ ಮಾಡಿದಂತೆ ಹೀಗಾಗಿ ಅವರಿಗೆ ಮೇ,೧೦ಕ್ಕೆ ನೀವು ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದೆ ಬಿಜೆಪಿ ಪಕ್ಷಕ್ಕೆ ಮತ ನೀಡಿ ಎಂದರು.

ಸುಮಾರು ೭೦ ವರ್ಷಗಳಿಂದ ನಮ್ಮ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸದೆ,
ಉದ್ಯೋಗ ನೀಡದೆ ತುಳಿದುಕೊಂಡು ಬಂದಿದ್ದರೆ. ಹೀಗಾಗಿ ನಮ್ಮ ಭಾಗದ ಜನರು ಬೆಂಗಳೂರ,ಮುಂಬೈ ,ಹೈದ್ರಾಬಾದ್ ನಲ್ಲಿ ಹೋಗಿ ಕೋಲಿ ನಲ್ಲಿ ಮಾಡಿ ಜೀವನ ನಡೆಸುತ್ತಿದ್ದಾರೆ ಎಂದು ಖರ್ಗೆ ಕುಟುಂಬದ ವಿರುದ್ಧ ಕಿಡಿಕಾರಿದರು. 

ಇದೇ ವೇಳೆಯಲ್ಲಿ ನೂರಾರು ಹಿರಿಯರು ಹಾಗೂ ಯುವಕರು ಕಾಂಗ್ರೆಸ್ ಜೆಡಿಎಸ್ ಹಾಗೂ ಇತರ ಪಕ್ಷ ತೊರೆದು ಬಿಜೆಪಿಯ ತತ್ವ ಸಿದ್ಧಾಂತ ಹಾಗೂ ಮಣಿಕಂಠ ರಾಠೋಡ ಅವರ ಸಮಾಜ ಸೇವೆ ಮೆಚ್ಚಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ನಿಂಗಾರೆಡ್ಢಿ ಭಾಸರೆಡ್ಡಿ, ಶರಣಗೌಡ, ರಾಮರೆಡ್ಡಿ ಗೌಡ, ಮಲ್ಲಿಕಾರ್ಜುನ ಎಮ್ಮೆನೋರ, ಶಂಕ್ರಣ್ಣ ಗೌಡ, ತಮ್ಮಣ್ಣ ಡಿಗ್ಗಿ, ಮಹಿಪಾಲ್ ಮೂಲಿಮನಿ, ಹಿಬ್ರಾಹಿಂ ದಿಗ್ಗಾಂವ, ಸಣ್ಣ ದೇವಪ್ಪ  ಹೋನಪ್ಪನೂರ, ಸೇರಿದಂತೆ ಅನೇಕ ಇದ್ದರು.

ಬಿಜೆಪಿಯಿಂದ ಕೋಲಿ,ಕಬ್ಬಲಿಗ ಸಮಾಜಕ್ಕೆ ಅನ್ಯಾಯ: ಕಮಕನೂರ.

ಚಿತ್ತಾಪೂರ: ಕೋಲಿ,ಕಬ್ಬಲಿಗ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡುತ್ತೇವೆ ಎಂದು ಬಿಜೆಪಿ ಸರ್ಕಾರ ಮಾತು ಕೊಟ್ಟಿತ್ತು ಅದನ್ನು ತಪ್ಪಿದ್ದಾರೆ ಕೋಲಿ ಕಬ್ಬಲಿಗ ಸಮಾಜವನ್ನು ಎಸ್ ಟಿಗೆ ಸೇರಿಸದೆ ಬಿಜೆಪಿ ಸರ್ಕಾರ ಅನ್ಯಾಯ ಮಾಡಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.

ತಾಲ್ಲೂಕಿನ ಮತಕ್ಷೇತ್ರದ ಹೊಸೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕ್ ಖರ್ಗೇ ಅವರ ಪರವಾಗಿ ಪ್ರಚಾರ ನಡೆಸಿ ಮಾತನಾಡಿದ ಅವರು ಕೇಂದ್ರ,ರಾಜ್ಯ ಸರ್ಕಾರ ಪತನ ಆಗಬೇಕು ಆಗ ನಮ್ಮ ಕೋಲಿ, ಕಬ್ಬಲಿಗ ಸಮಾಜಕ್ಕೆ ಎಸ್ ಟಿ ಮಿಸಲಾತಿ ಸಿಗುತ್ತದೆ.ಇಡಿ ಕರ್ನಾಟಕ ಸರ್ಕಾರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರಿಗೆ ಸೋಲಿಸುವ ಹುನ್ನಾರ ನಡೆಸುತ್ತಿದ್ದಾರೆ ಹೀಗಾಗಿ ಅವರಿಗೆ ಈ ಬಾರಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅವರ ಕೈ ಬಲಿಷ್ಠ ಪಡಿಸೋಣ ಎಂದರು.

ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸರ್ಕಾರ ಬಂದೆ ಬರುತ್ತೆ, ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ಕೋಲಿ ಸಮಾಜ ಎಸ್ಟಿಗೆ ಸೇರ್ಪಡೆ ಆಗುತ್ತೆ ಎಂದು ಭವಿಷ್ಯ ನುಡಿದರು. 

ಈ ಸಂದರ್ಭದಲ್ಲಿ ವಿಶ್ವನಾಥ ಪಾಟೀಲ ಹೆಬ್ಬಾಳ, ಜಗಣ್ಣಗೌಡ ರಾಮತೀರ್ಥ, ಪ್ರಭುರಾಜ ಕಾಂತಾ, ಶಾಂತಣ್ಣ ಚಾಳಿಕಾರ, ಶರಣಪ್ಪ ನಾಟೀಕಾರ್, ರಾಮಲಿಂಗ ಬಾನರ್, ಶಿವೂ ಸುಲ್ತನಪೂರ, ಭೀಮಣ್ಣ ಶಿಭಾ, ಸಾಬಣ್ಣ ಇಟಗಾ, ಭೀಮಣ್ಣ ಹೋತಿನಮಡಿ, ಸಾಯಬಗೌಡ, ಶಾಂತಪ್ಫ, ಸೇರಿದಂತೆ ಅನೇಕ ಇದ್ದರು.

ಶುಕ್ರವಾರ, ಏಪ್ರಿಲ್ 28, 2023

ಅಭಿವೃದ್ದಿ ನೋಡಿ ಮತ ಹಾಕಿ: ಪ್ರಿಯಾಂಕ್ ಖರ್ಗೆ.

ಚಿತ್ತಾಪೂರ: ನಮಗೆ ಅಭಿವೃದ್ದಿಯೇ ಮೂಲಮಂತ್ರ, ಚಿತ್ತಾಪುರದಲ್ಲಿ ಒಂದು ಪರಿಪೂರ್ಣ ಸಮಾಜ ನಿರ್ಮಾಣದ ಕನಸು ಇದೆ. ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡ ಮುಖ್ಯವಾಹಿನಿಗೆ ತರುವ ತುಡಿತ ನಮಗಿದೆ. ಯಾವುದೇ ಧರ್ಮ ಹಾಗೂ ಜಾತಿಯ ರಾಜಕೀಯ ಬೇಕಿಲ್ಲ. ಹಾಗಾಗಿ ಸರ್ವಾಂಗೀಣ ಅಭಿವೃದ್ದಿ ನೋಡಿ ನನ್ನಗೆ ಮತ ಹಾಕಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಖರ್ಗೆ ಹೇಳಿದರು. 

ಬೆಂಗಳೂರಿನಲ್ಲಿ ಪಕ್ಷ ಸೇರ್ಪಡೆಗೊಂಡ ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಬಾಳ, ಮಾಜಿ ಜಿಪಂ ಸದಸ್ಯ ಅರವಿಂದ ಚವ್ಹಾಣ ಸೇರಿದಂತೆ ಹಲವರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ, ಚಿತ್ತಾಪುರ ಅಭಿವೃದ್ದಿ ಪರ, ಯುವಕರ ಭವಿಷ್ಯದ ಕಾಳಜಿ‌ ಇರುವ ಸ್ವಾಭಿಮಾನಿಗಳು ಕಾಂಗ್ರೆಸ್ ಸೇರುತ್ತಿದ್ದಾರೆ ಹಾಗಾಗಿ ಅವರಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.
ಈ ಸಲದ ಚುನಾವಣೆ ಚಿತ್ತಾಪುರದ ಭವಿಷ್ಯದ ಪ್ರಶ್ನೆಯಾಗಿದೆ. ಬಿಜೆಪಿ ಅಭ್ಯರ್ಥಿ ಪರ ಯಾವೊಬ್ಬ ನಾಯಕರು ಪ್ರಚಾರಕ್ಕೆ ಬರುತ್ತಿಲ್ಲ. ಬಿಜೆಪಿಯಲ್ಲಿರುವ ಸ್ವಾಭಿಮಾನಿಗಳು ಕಾಂಗ್ರೆಸ್ ಸೇರುತ್ತಿದ್ದಾರೆ ಇಲ್ಲವೇ ತಟಸ್ಥರಾಗಿದ್ದಾರೆ ಹಾಗಾಗಿ ಕೇವಲ ಎನ್ ರವಿಕುಮಾರ ಮಾತ್ರ ಪ್ರಚಾರಕ್ಕೆ ಹೋಗುತ್ತಿದ್ದಾರೆ.

ಬಸವ ತತ್ವ, ಅಂಬಿಗರ ಚೌಡಯ್ಯನವರ ತತ್ವ ಆದರ್ಶ, ಸಂವಿಧಾನದ ಪರಿಪಾಲನೆ ಹಾಗೂ ಅಭಿವೃದ್ಧಿ ಪರ ಚಿಂತನೆ ಇರುವ ವ್ಯಕ್ತಿ ಚುನಾವಣೆಗೆ ನಿಂತಾಗ ಮಾತ್ರ ಅವರ ಪರ ಮಾತನಾಡಲು ಕಾರ್ಯಕರ್ತರಿಗೆ ಎದೆಗಾರಿಕೆ ಇರುತ್ತದೆ. ಆದರೆ, ಬೆಜೆಪಿ ಪರವಾಗಿ ಅಂತ ವಾತಾವರಣ ಇಲ್ಲ. 

ಸಿಎಂ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಲು ಬರುತ್ತಿದ್ದಾರೆ. ಅವರ ಪರ ಏನು ಹೇಳಿ ಮತಯಾಚಿಸುತ್ತಾರೆ. ನಮ್ಮ ಅಭ್ಯರ್ಥಿ ಅಕ್ಕಿ ಹಾಗೂ ಹಾಲಿನಪುಡಿ ಕಳ್ಳ ಸಾಗಾಣಿಕೆ ಮಾಡುತ್ತಾರೆ ಅವರ ಮೇಲೆ 40 ಕೇಸು ದಾಖಲಾಗಿವೆ. ಒಂದು ಕೇಸಿನಲ್ಲಿ ಕೋರ್ಟ್ ಶಿಕ್ಷೆ ನೀಡಿದೆ ಅಂತ ಹೇಳಿ ಪ್ರಚಾರ ಮಾಡುತ್ತಾರೆಯೇ? ಎನ್ ರವಿಕುಮಾರ ಅವರು ಇಂತಹ ಅಭ್ಯರ್ಥಿಯನ್ನು ಸಮರ್ಥ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ. ನನ್ನ ಮೇಲೂ 9 ಕೇಸುಗಳಿವೆ ಅವೆಲ್ಲ ಸಮಾಜ ಕಲ್ಯಾಣಕ್ಕಾಗಿ ಹೋರಾಟ ನಡೆಸಿದಾಗ ಹಾಕಿದ ಕೇಸುಗಳು ಆದರೆ, ಮಣಿಕಂಠನ ವಿಚಾರನೆ ಬೇರೆ ಎಂದರು.

ಇಎಸ್ ಐಸಿ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿಯದ, ರೇಲ್ವೆ ಪ್ರತ್ಯೇಕ ವಲಯ ತರುವಲ್ಲಿ‌ ವಿಫಲರಾದ, ವಾಡಿ ರೇಲ್ವೆ ಮೇಲ್ಸೇತುವೆ ಪೂರ್ಣಗೊಳಿಸದ ಸಂಸದರನ್ನು ಗುಲಬರ್ಗಾ ಸಂಸದ ಎನ್ನಲು ಹೇಗೆ ಸಾಧ್ಯ? ಅವರು ಕೇವಲ ಚಿಂಚೋಳಿ ಸಂಸದ ಎಂದು ಉಮೇಶ ಜಾಧವ ಅವರಿಗೆ ಕುಟುಕಿದರು. 
ಈ ಸಂದರ್ಭದಲ್ಲಿ ಹೊಸರು ಗ್ರಾಮದ ಹಲವರು ಹಾಗೂ ಅಲ್ಲೂರು ( ಬಿ) ಗ್ರಾಮದ ಮಲ್ಲಯ್ಯ ಸ್ವಾಮಿ, ಯರಗಲ್ ಗ್ರಾಮದ ಮುಂತಾದವರು ಕಾಂಗ್ರೆಸ್ ಪಕ್ಷದ ತತ್ವ ಹಾಗೂ ಸಿದ್ದಾಂತವನ್ನು ಮತ್ತು ಪ್ರಿಯಾಂಕ್ ಖರ್ಗೆ ಅವರ ಅಭಿವೃದ್ದಿಪರ‌ ಚಿಂತನೆ ಮೆಚ್ಚಿ ಕಾಂಗ್ರೆಸ್ ಪಕ್ಷ‌ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಭಾಗಣ್ಣಗೌಡ ಸಂಕನೂರು, ಭೀಮಣ್ಣ ಸಾಲಿ, ನಾಗರೆಡ್ಡಿ ಪಾಟೀಲ ಕರದಾಳ, ರಮೇಶ ಮರಗೋಳ, ಶಿವಾನಂದ ಪಾಟೀಲ, ಮಹೇಬೂಬ ಸಾಹೇಬ, ಮುಕ್ತಾರ್ ಪಟೇಲ್,ಮಾಜಿ ಜಿಪಂ ಸದಸ್ಯ ಅರವಿಂದ ಚವ್ಹಾಣ್, ಮಾಜಿ ಶಾಸಕರ ವಿಶ್ವನಾಥ ಪಾಟೀಲ ಹೆಬ್ಬಾಳ ಸೇರಿದಂತೆ ಹಲವರಿದ್ದರು.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...