ಪೋಸ್ಟ್‌ಗಳು

ಮಾರ್ಚ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಮೀಸಲಾತಿ ಜಾರಿ ಬಿಜೆಪಿ ಸರಕಾರದ ದೊಡ್ಡ ಸಾಧನೆ.

ಇಮೇಜ್
ಚಿತ್ತಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರಕಾರ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿಯನ್ನು ಪ್ರಕಟಿಸಿರುವುದನ್ನು ಹಾಗೂ ವೀರಶೈವ ಲಿಂಗಾಯತ ಹಾಗೂ ಒಳಪಂಗಡಗಳು ಮತ್ತು ಒಕ್ಕಲಿಗರು ಹಾಗೂ ಒಳ ಪಂಗಡಗಳಿಗೆ ಮೀಸಲಾತಿ ಸೌಲಭ್ಯ ಘೋಷಣೆ ಮಾಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದ ಬಿಜೆಪಿ ಸರಕಾರದ ದೊಡ್ಡ ಸಾಧನೆಯಾಗಿದೆ ಎಂದು ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷ ದೇವಿಂದ್ರನಾಥ ನಾದ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಚಾರ ಮೂವತ್ತು ವರ್ಷಗಳಿಂದಲೂ ಇದೆ ಕಾಂಗ್ರೆಸ್ ಸರಕಾರ ಅಶ್ವಾಸನೆ ಕೊಡುತ್ತಾ ಮೂಗಿಗೆ ತುಪ್ಪ ಸವರಿಕೊಂಡು ಬಂದಿತ್ತು. ಆದರೆ ಇಂದು ಕಾಂಗ್ರೆಸ್ ಸರಕಾರದಿಂದ ಆಗಲಾರದ ಒಳ ಮೀಸಲಾತಿ ಜಾರಿಗೆ ತರುವ ಕೆಲಸ ಬಿಜೆಪಿ ಸರಕಾರ ಮಾಡಿ ತೋರಿಸಿದೆ ಎಂದು ಹೇಳಿದ್ದಾರೆ. ಪರಿಶಿಷ್ಟ ಜಾತಿಯ ಒಳಗಿರುವ ಅನೇಕ ಉಪಜಾತಿಗಳಿಗೆ ಪ್ರತ್ಯೇಕ ಮೀಸಲಾತಿಯಿಲ್ಲದೇ ಎಲ್ಲರಿಗೂ ಅನ್ಯಾಯವಾಗುತ್ತಿತ್ತು. ಅದಕ್ಕಾಗಿ ರಾಜ್ಯದಲ್ಲಿ ಜನಸಂಖ್ಯೆಗೆ ಆಧಾರವಾಗಿ ಪರಿಶಿಷ್ಟ ಜಾತಿಯಲ್ಲೇ ಇರುವ ಉಪ ಜಾತಿಗಳನ್ನು ವರ್ಗೀಕರಿಸಿ ಮೀಸಲಾತಿ ನೀಡಬೇಕು ಎನ್ನುವುದು ಬಹುವರ್ಷಗಳ ಬೇಡಿಕೆಯಾಗಿದ್ದು ಅದಕ್ಕೆ ಸಂಬಂಧಿಸಿದಂತ  ತಕರಾರು ಚಳುವಳಿಗಳು, ಪ್ರತಿಭಟನೆಗಳು ಮತ್ತು ಸತ್ಯಾಗ್ರಹಗಳು ನಡೆದಿದ್ದವು ಎಂದರು.   ...

ಸರ್ಕಾರಿ ಕಾರ್ಯಕ್ರಮದಲ್ಲಿ ಸೀರೆ ವಿತರಣೆ: ಅರವಿಂದ್ ಆಕ್ರೋಶ.

ಇಮೇಜ್
ಚಿತ್ತಾಪುರ: ಮತಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಅಡಿಕಲ್ಲು ಉದ್ಘಾಟನೆ ಹಾಗೂ ಹಕ್ಕು ಪತ್ರ ವಿತರಣೆ ಈ ಸರ್ಕಾರಿ ಕಾರ್ಯಕ್ರಮದಲ್ಲಿ ಆಶಾ‌ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆ ವಿತರಣೆ ಮಾಡಿ ಶಾಸಕ ಪ್ರಿಯಾಂಕ್ ಖರ್ಗೆ  ನಿಯಮ ಉಲ್ಲಂಘಿಸಿದರೆ ಎಂದು ಬಿಜೆಪಿ ಮುಖಂಡ ಅರವಿಂದ್ ಚವ್ಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರ್ಚ್.19 ರಂದು ಪಟ್ಟಣದಲ್ಲಿ ದಿ. ವಾಲ್ಮೀಕಿ ನಾಯಕ ಅವರ ಪುಣ್ಯತಿಥಿ ಅಂಗವಾಗಿ ನಮ್ಮ ಸೋಹದರರಾದ ವಿಠ್ಠಲ್ ನಾಯಕ್ ಅವರು ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದ್ರೆ ಚುನಾವಣೆ ಹತ್ತಿರ ಬರುತ್ತಿದೆ ಎಂದು ಕುಂಟು ನೆಪವೊಡ್ಡಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚಿತ್ತಾಪುರ ಆಗಮಿಸಿ ಬಿಜೆಪಿ ಮುಖಂಡರನ್ನು ಕರೆಸಿ ಉಡಿ ತುಂಬುವ ಕಾರ್ಯಕ್ರಮ ಮಾಡುವಂತಿಲ್ಲ ಎಂದು ತಡೆಹಿಡಿದ್ರು ನಾವು ಕಾರ್ಯಕ್ರಮ ರದ್ದು ಮಾಡಿವಿ ಆದ್ರೆ ನಿನ್ನೆ ಸರ್ಕಾರಿ ಕಾರ್ಯಕ್ರಮದಲ್ಲಿ ಮತದಾರರ ಮತಗಳನ್ನು ಸೆಳೆಯಲು ಸೀರೆ ವಿತರಣೆ ಮಾಡಿದ್ದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ಇರಲಿಲ್ವ? ಹಾಗೂ ತಾಲೂಕಿನ ಅಧಿಕಾರಿಗಳು ಸಹ ಇದ್ದರೂ ಅವರ ಮುಂದೆ ಶಾಸಕರು ಸರಕಾರಿ ಕಾರ್ಯಕ್ರಮದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆ ಹಂಚಿಕೆ ಮಾಡಿರುವುದು ಖಂಡನೀಯ ಕೂಡಲೇ ಶಾಸಕ ಪ್ರಿಯಾಂಕ ಖರ್ಗೆ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಶಿಸ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಸ...

ಈಡಿಗ ಸಮಾಜದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ.

ಇಮೇಜ್
ಚಿತ್ತಾಪುರ: ತಾಲೂಕು ಆರ್ಯ ಈಡಿಗ ಸಮಾಜದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ವಇಚ್ಛೆಯಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದು ಕಾಶಿನಾಥ ಗುತ್ತೇದಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಸಮಾಜದ ಮುಖಂಡರಿಂದ ಕಾಶಿನಾಥ ಗುತ್ತೇದಾರ್ ಅವರಿಗೆ ಸನ್ಮಾನ. ತಾಲೂಕಿನಲ್ಲಿ ಕಳೆದ ೨೦೦೬ ರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಮಾಡುತ್ತಾ ಈ ಭಾಗದ ಜನರಲ್ಲಿ ಗುರುಗಳ ವಿಚಾರಗಳನ್ನು ಪರಿಚಯಿಸುವ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇನೆ. ಆಗಿನ ಸೋಲೂರಿನ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಳೆದ ೨೦೧೦ ರಲ್ಲಿ ಈಡಿಗ ಸಮಾಜದ ಸಂಘಟನೆಗಾಗಿ ತಾಲೂಕು ಪದಾಧಿಕಾರಿಗಳಾಗಿ ಆಯ್ಕೆ ಮಾಡಿದ್ದರು. ನನ್ನ ಸಂಘಟನಾ ಕಾರ್ಯಚಟುವಿಕೆ ಗಮನಿಸಿ ಪ್ರಧಾನ ಕಾರ್ಯದರ್ಶಿಯ ಜವಾಬ್ದಾರಿ ವಹಿಸಿದ್ದರು. ಅಂದಿನಿಂದ ಇಲ್ಲಿವರೆಗೆ ತಾಲೂಕಿನಲ್ಲಿ ಈಡಿಗ ಸಮಾಜದ ಸಂಘಟನೆ ಬಲ ಪಡಿಸುವಲ್ಲಿ ಮತ್ತು ಗ್ರಾಮೀಣ ಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಗಳನ್ನು ತಿಳಿಸುವ ನಿಟ್ಟಿನಲ್ಲಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ಆತ್ಮತೃಪ್ತಿ ನನಗಿದೆ ಎಂದರು. ಸಮಾಜದ ಸೋಲೂರ ಮಠದ ಆರ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳು ಕಾಶಿನಾಥ ಗುತ್ತೇದಾರ ಅವರ ಮನೆಗೆ ಭೇಟಿ ನೀಡಿದ ಸಂದರ್ಭ.   ತಾಲೂಕಿನಲ್ಲಿ ಸಮಾಜದ ಸಂಘಟನೆ ಹಾಗೂ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮಕ್ಕಾಗಿ ಹಗಲಿ...

ಕುಂಬಾರ ಅಭಿವೃದ್ಧಿ ನಿಗಮ ಘೋಷಣೆ : ಜಗದೇವ ಕುಂಬಾರ ಸ್ವಾಗತ.

ಇಮೇಜ್
ಬೆಂಗಳೂರ: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ ಹೀಗಾಗಿ ಸರ್ಕಾರದ ಆದೇಶವನ್ನು ತುಂಬು ಹೃದಯದಿಂದ ಸ್ವಾಗತಿಸುವುದಾಗಿ ರಾಜ್ಯ ಕುಂಬಾರರ ಯುವ ಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಗದೇವ ಕುಂಬಾರ ತಿಳಿಸಿದ್ದಾರೆ. ಹಿಂದುಳಿದ ಪ್ರವರ್ಗ -2(ಎ) ಅಡಿಯಲ್ಲಿ ಬರುವ ಕುಂಬಾರ, ಚಕ್ರಸಾಲಿ, ಗುಣಗ, ಗಣಗಿ, ನಿಗಮ ಕೊಯವ, ಕುಲ, ಕುಲಾಲ, ಕುಂಬಾರ್, ಕುಂಬಾರ್ಡ್, ಕುಮ್ಮಾರ, ಕಸವನ್, ಮೂಲ, ಸಜ್ಜನ ಕುಂಬಾರ, ಖುಮಾರ, ಕುಂಭಾರ, ಖುಂಭಾರ ಮತ್ತು ಕುಲಾಲ‌್ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಈ ನಿಗಮ ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಓಬಿಸಿ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ರಾಜ್ಯದ ಇನ್ನುಳಿದ ಸಚಿವರಿಗೂ ,ಶಾಸಕರಿಗೂ ವಿಶೇಷವಾಗಿ ಅಧೀವೇಶನದಲ್ಲಿ ಕುಂಬಾರ ಸಮಾಜದ ನಿಗಮ ಕುರಿತು ವಿಷಯ ಮಂಡಿಸಿದ ಶಾಸಕರು, ಹಾಗೂ ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ ಅವರಿಗೂ ಹೀಗೆ ಎಲ್ಲಾರಿಗೂ ರಾಜ್ಯ ಕುಂಬಾರರ ಯುವ ಸೈನ್ಯ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಮಾರ್ಚ್. 20ಕ್ಕೆ ಕಲಬುರಗಿ ಚಲೋ ಬೃಹತ ಪ್ರತಿಭಟನೆ.

ಇಮೇಜ್
ಚಿತ್ತಾಪೂರ: ಸುಮಾರು 40 ವರ್ಷಗಳಿಂದ ಕೋಲಿ ಕಬ್ಬಲಿಗ ಸಮಾಜದ ಬೇಡಿಕೆಗಳು ಈಡೇರಿಸದ ಕೇಂದ್ರ ಸರ್ಕಾರ ವಿರುದ್ಧ ಮಾರ್ಚ.20 ರಂದು ಕಲಬುರಗಿ ಚಲೋ ಎಂಬ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೋಲಿ ಕಬ್ಬಲಿಗ ಎಸ್ ಟಿ ಹೋರಾಟ ಸಮಿತಿ ಅಧ್ಯಕ್ಷ ಲಚ್ಚಪ್ಪ ಜಮಾದಾರ್ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಎಸ್ ಟಿ ಹೋರಾಟ ಸಮಿತಿ ವತಿಯಿಂದ ಕೋಲಿ ಕಬ್ಬಲಿಗ ಜಾತಿಗಳಿಗೆ ಎಸ್ ಟಿ ಯಲ್ಲಿ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ  "ಕಲಬುರಗಿ ಚಲೋ" ಬೃಹತ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು ಸಮಾಜದ ಕುಲ ಶಾಸ್ತ್ರೀಯ ಅಧ್ಯಯನ ಮುಗಿದರೂ ಅದನ್ನು ಇನ್ನೂ ಸಮಾಜವನ್ನು ಎಸ್ ಟಿಗೆ ಸೇರ್ಪಡೆಯಾಗಿಲ್ಲ ಕೇಂದ್ರ ಸರ್ಕಾರ ಗಣ್ಯರು ಬರಿ ಹರಕೆ ಉತ್ತರ ನೀಡುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾರ್ಚ್ 20ರಂದು ಜಗತ್ ವೃತ್ತದಿಂದ ತಿಮ್ಮಪುರ ವೃತ್ತದಿಂದ ಡಿಸಿ ಕಛೇರಿಯ ವರೆಗೆ ನಡೆಯಲಿರುವ ಕಲಬುರಗಿ ಚಲೋ ಎಂಬ ಬೃಹತ ಪ್ರತಿಭಟನೆಗೆ ಕೋಲಿ ಕಬ್ಬಲಿಗ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ,ರಾಮಲಿಂಗ ಬಾನರ್, ಹಣಮಂತ ಸಂಕನೂರ, ರಾಮಲಿಂಗ, ದೇವಿಂದ್ರ ಅರಣಕಲ್, ಭೀಮಣ್ಣ ಹೊತ್ತಿನಮಡಿ, ಚಂದ್ರು ಕಾಳಗಿ, ಶಿವಪ್...

ಬೇಣ್ಣೂರಕರಗೆ ಬಿಜೆಪಿ ಟಿಕೆಟ್ ನೀಡಲು ಸ್ಥಳೀಯರ ಒತ್ತಾಯ.

ಇಮೇಜ್
ಚಿತ್ತಾಪೂರ:  ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಹಾಗೂ ಚಿತ್ತಾಪೂರ ಮೀಸಲು ಮತಕ್ಷೇತ್ರದ ಪ್ರಬಲ ಆಕಾಂಕ್ಷಿ ಬಸವರಾಜ ಬೆಣ್ಣೂರಕರ್ ಅವರಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಬೇಕು ಎಂದು ಸ್ಥಳೀಯರು ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದರು. ಡಿ.ಎಸ್ ನಾಮದಾರ್ ಮಾತನಾಡಿ ಸ್ವಾತಂತ್ರ್ಯ ಬಂದ ನಂತರ ಸ್ಥಳೀಯವಾಗಿ ಶಾಸಕರಾದವರು ವಿಶ್ವನಾಥ್ ಪಾಟೀಲ್, ವಾಲ್ಮೀಕಿ ನಾಯಕ್ ಬಿಟ್ರು ಉಳಿದ ಬೇರೆಯವರೇ ಶಾಸಕರಾಗಿದ್ದಾರೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬೇರೆಯವರಿಗೆ ಮಣೆ ಹಾಕುವುದು ಬಹುಶಃ ಅಷ್ಟು ಸಮಂಜಸವಲ್ಲ ಹೀಗಾಗಿ ಸ್ಥಳೀಯವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂಬುದು ಈ ನಮ್ಮ ಸ್ಥಳೀಯರ ಒತ್ತಾಯವಾಗಿದೆ. ಈಗಾಗಲೇ ಬಸವರಾಜ್ ಬೆಣ್ಣೊರಕರ್ ಅವರು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರು ಆಗಿದ್ದಾರೆ  ಹಾಗೂ ಈ ಬಾರಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಮತ್ತು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ವಿವಿಧ ಸಂಘಟನೆಗಳಲ್ಲಿ ನೇತೃತ್ವ ವಹಿಸಿ ಪ್ರತಿ ಸಮಾಜದವರ ಜೊತೆ ಪ್ರೀತಿ ಸಹ ಬಾಳ್ವೆಯಿಂದ ನಡೆದುಕೊಂಡು ಬಂದವರು ಹೀಗಾಗಿ ಸ್ಥಳೀಯವಾಗಿ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಸೂಕ್ತವಾದ ಅಭ್ಯರ್ಥಿಯಾಗಿದ್ದಾರೆ ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ಬಿಜೆಪಿ ಕೇಂದ್ರ ರಾಜ್ಯದ ಪ್ರಭಾವಿ ನಾಯಕರಿಗೆ ಭೆಟ್ಟಿಯಾಗಿ ಬ...