ಭಾನುವಾರ, ಮಾರ್ಚ್ 19, 2023

ಕುಂಬಾರ ಅಭಿವೃದ್ಧಿ ನಿಗಮ ಘೋಷಣೆ : ಜಗದೇವ ಕುಂಬಾರ ಸ್ವಾಗತ.

ಬೆಂಗಳೂರ: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ ಹೀಗಾಗಿ ಸರ್ಕಾರದ ಆದೇಶವನ್ನು ತುಂಬು ಹೃದಯದಿಂದ ಸ್ವಾಗತಿಸುವುದಾಗಿ ರಾಜ್ಯ ಕುಂಬಾರರ ಯುವ ಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಗದೇವ ಕುಂಬಾರ ತಿಳಿಸಿದ್ದಾರೆ.
ಹಿಂದುಳಿದ ಪ್ರವರ್ಗ -2(ಎ) ಅಡಿಯಲ್ಲಿ ಬರುವ ಕುಂಬಾರ, ಚಕ್ರಸಾಲಿ, ಗುಣಗ, ಗಣಗಿ, ನಿಗಮ ಕೊಯವ, ಕುಲ, ಕುಲಾಲ, ಕುಂಬಾರ್, ಕುಂಬಾರ್ಡ್, ಕುಮ್ಮಾರ, ಕಸವನ್, ಮೂಲ, ಸಜ್ಜನ ಕುಂಬಾರ, ಖುಮಾರ, ಕುಂಭಾರ, ಖುಂಭಾರ ಮತ್ತು ಕುಲಾಲ‌್ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಈ ನಿಗಮ ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಓಬಿಸಿ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ರಾಜ್ಯದ ಇನ್ನುಳಿದ ಸಚಿವರಿಗೂ ,ಶಾಸಕರಿಗೂ ವಿಶೇಷವಾಗಿ ಅಧೀವೇಶನದಲ್ಲಿ ಕುಂಬಾರ ಸಮಾಜದ ನಿಗಮ ಕುರಿತು ವಿಷಯ ಮಂಡಿಸಿದ ಶಾಸಕರು, ಹಾಗೂ ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ ಅವರಿಗೂ ಹೀಗೆ ಎಲ್ಲಾರಿಗೂ ರಾಜ್ಯ ಕುಂಬಾರರ ಯುವ ಸೈನ್ಯ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಿ: ಪ್ರಭುರೆಡ್ಡಿ ಸೂಚನೆ.

ಚಿತ್ತಾಪುರ: ಮುಂಬರುವ ಬೇಸಿಗೆ ಮತ್ತು ಮುಂಗಾರು ಮಳೆಗಾಲದ ಆರಂಭದ ಅವಧಿಯಲ್ಲಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ...