ಶುಕ್ರವಾರ, ಏಪ್ರಿಲ್ 28, 2023

ಅಭಿವೃದ್ದಿ ನೋಡಿ ಮತ ಹಾಕಿ: ಪ್ರಿಯಾಂಕ್ ಖರ್ಗೆ.

ಚಿತ್ತಾಪೂರ: ನಮಗೆ ಅಭಿವೃದ್ದಿಯೇ ಮೂಲಮಂತ್ರ, ಚಿತ್ತಾಪುರದಲ್ಲಿ ಒಂದು ಪರಿಪೂರ್ಣ ಸಮಾಜ ನಿರ್ಮಾಣದ ಕನಸು ಇದೆ. ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡ ಮುಖ್ಯವಾಹಿನಿಗೆ ತರುವ ತುಡಿತ ನಮಗಿದೆ. ಯಾವುದೇ ಧರ್ಮ ಹಾಗೂ ಜಾತಿಯ ರಾಜಕೀಯ ಬೇಕಿಲ್ಲ. ಹಾಗಾಗಿ ಸರ್ವಾಂಗೀಣ ಅಭಿವೃದ್ದಿ ನೋಡಿ ನನ್ನಗೆ ಮತ ಹಾಕಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಖರ್ಗೆ ಹೇಳಿದರು. 

ಬೆಂಗಳೂರಿನಲ್ಲಿ ಪಕ್ಷ ಸೇರ್ಪಡೆಗೊಂಡ ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಬಾಳ, ಮಾಜಿ ಜಿಪಂ ಸದಸ್ಯ ಅರವಿಂದ ಚವ್ಹಾಣ ಸೇರಿದಂತೆ ಹಲವರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ, ಚಿತ್ತಾಪುರ ಅಭಿವೃದ್ದಿ ಪರ, ಯುವಕರ ಭವಿಷ್ಯದ ಕಾಳಜಿ‌ ಇರುವ ಸ್ವಾಭಿಮಾನಿಗಳು ಕಾಂಗ್ರೆಸ್ ಸೇರುತ್ತಿದ್ದಾರೆ ಹಾಗಾಗಿ ಅವರಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.
ಈ ಸಲದ ಚುನಾವಣೆ ಚಿತ್ತಾಪುರದ ಭವಿಷ್ಯದ ಪ್ರಶ್ನೆಯಾಗಿದೆ. ಬಿಜೆಪಿ ಅಭ್ಯರ್ಥಿ ಪರ ಯಾವೊಬ್ಬ ನಾಯಕರು ಪ್ರಚಾರಕ್ಕೆ ಬರುತ್ತಿಲ್ಲ. ಬಿಜೆಪಿಯಲ್ಲಿರುವ ಸ್ವಾಭಿಮಾನಿಗಳು ಕಾಂಗ್ರೆಸ್ ಸೇರುತ್ತಿದ್ದಾರೆ ಇಲ್ಲವೇ ತಟಸ್ಥರಾಗಿದ್ದಾರೆ ಹಾಗಾಗಿ ಕೇವಲ ಎನ್ ರವಿಕುಮಾರ ಮಾತ್ರ ಪ್ರಚಾರಕ್ಕೆ ಹೋಗುತ್ತಿದ್ದಾರೆ.

ಬಸವ ತತ್ವ, ಅಂಬಿಗರ ಚೌಡಯ್ಯನವರ ತತ್ವ ಆದರ್ಶ, ಸಂವಿಧಾನದ ಪರಿಪಾಲನೆ ಹಾಗೂ ಅಭಿವೃದ್ಧಿ ಪರ ಚಿಂತನೆ ಇರುವ ವ್ಯಕ್ತಿ ಚುನಾವಣೆಗೆ ನಿಂತಾಗ ಮಾತ್ರ ಅವರ ಪರ ಮಾತನಾಡಲು ಕಾರ್ಯಕರ್ತರಿಗೆ ಎದೆಗಾರಿಕೆ ಇರುತ್ತದೆ. ಆದರೆ, ಬೆಜೆಪಿ ಪರವಾಗಿ ಅಂತ ವಾತಾವರಣ ಇಲ್ಲ. 

ಸಿಎಂ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಲು ಬರುತ್ತಿದ್ದಾರೆ. ಅವರ ಪರ ಏನು ಹೇಳಿ ಮತಯಾಚಿಸುತ್ತಾರೆ. ನಮ್ಮ ಅಭ್ಯರ್ಥಿ ಅಕ್ಕಿ ಹಾಗೂ ಹಾಲಿನಪುಡಿ ಕಳ್ಳ ಸಾಗಾಣಿಕೆ ಮಾಡುತ್ತಾರೆ ಅವರ ಮೇಲೆ 40 ಕೇಸು ದಾಖಲಾಗಿವೆ. ಒಂದು ಕೇಸಿನಲ್ಲಿ ಕೋರ್ಟ್ ಶಿಕ್ಷೆ ನೀಡಿದೆ ಅಂತ ಹೇಳಿ ಪ್ರಚಾರ ಮಾಡುತ್ತಾರೆಯೇ? ಎನ್ ರವಿಕುಮಾರ ಅವರು ಇಂತಹ ಅಭ್ಯರ್ಥಿಯನ್ನು ಸಮರ್ಥ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ. ನನ್ನ ಮೇಲೂ 9 ಕೇಸುಗಳಿವೆ ಅವೆಲ್ಲ ಸಮಾಜ ಕಲ್ಯಾಣಕ್ಕಾಗಿ ಹೋರಾಟ ನಡೆಸಿದಾಗ ಹಾಕಿದ ಕೇಸುಗಳು ಆದರೆ, ಮಣಿಕಂಠನ ವಿಚಾರನೆ ಬೇರೆ ಎಂದರು.

ಇಎಸ್ ಐಸಿ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿಯದ, ರೇಲ್ವೆ ಪ್ರತ್ಯೇಕ ವಲಯ ತರುವಲ್ಲಿ‌ ವಿಫಲರಾದ, ವಾಡಿ ರೇಲ್ವೆ ಮೇಲ್ಸೇತುವೆ ಪೂರ್ಣಗೊಳಿಸದ ಸಂಸದರನ್ನು ಗುಲಬರ್ಗಾ ಸಂಸದ ಎನ್ನಲು ಹೇಗೆ ಸಾಧ್ಯ? ಅವರು ಕೇವಲ ಚಿಂಚೋಳಿ ಸಂಸದ ಎಂದು ಉಮೇಶ ಜಾಧವ ಅವರಿಗೆ ಕುಟುಕಿದರು. 
ಈ ಸಂದರ್ಭದಲ್ಲಿ ಹೊಸರು ಗ್ರಾಮದ ಹಲವರು ಹಾಗೂ ಅಲ್ಲೂರು ( ಬಿ) ಗ್ರಾಮದ ಮಲ್ಲಯ್ಯ ಸ್ವಾಮಿ, ಯರಗಲ್ ಗ್ರಾಮದ ಮುಂತಾದವರು ಕಾಂಗ್ರೆಸ್ ಪಕ್ಷದ ತತ್ವ ಹಾಗೂ ಸಿದ್ದಾಂತವನ್ನು ಮತ್ತು ಪ್ರಿಯಾಂಕ್ ಖರ್ಗೆ ಅವರ ಅಭಿವೃದ್ದಿಪರ‌ ಚಿಂತನೆ ಮೆಚ್ಚಿ ಕಾಂಗ್ರೆಸ್ ಪಕ್ಷ‌ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಭಾಗಣ್ಣಗೌಡ ಸಂಕನೂರು, ಭೀಮಣ್ಣ ಸಾಲಿ, ನಾಗರೆಡ್ಡಿ ಪಾಟೀಲ ಕರದಾಳ, ರಮೇಶ ಮರಗೋಳ, ಶಿವಾನಂದ ಪಾಟೀಲ, ಮಹೇಬೂಬ ಸಾಹೇಬ, ಮುಕ್ತಾರ್ ಪಟೇಲ್,ಮಾಜಿ ಜಿಪಂ ಸದಸ್ಯ ಅರವಿಂದ ಚವ್ಹಾಣ್, ಮಾಜಿ ಶಾಸಕರ ವಿಶ್ವನಾಥ ಪಾಟೀಲ ಹೆಬ್ಬಾಳ ಸೇರಿದಂತೆ ಹಲವರಿದ್ದರು.

ಚಿತ್ತಾಪುರ ಜನರ ಚಿತ್ತ ಮಣಿಕಂಠನತ್ತ ಇರಲಿ: ಸಿಎಂ ಬೊಮ್ಮಾಯಿ.



  ಖರ್ಗೆ ಕ್ಷೇತ್ರದಲ್ಲಿ ಸಿಎಂ  ಬೊಮ್ಮಾಯಿ       ಭರ್ಜರಿ ರೋಡ್ ಶೋ.

ಚಿತ್ತಾಪುರ: ಇಲ್ಲಿ ನಿಮ್ಮೆಲ್ಲರ ಪ್ರೋತ್ಸಾಹ ನೋಡಿದರೆ ನನಗನಿಸುತ್ತದೆ ನಿಮ್ಮೆಲ್ಲರ ಚಿತ್ತ ಮಣಿಕಂಠನತ್ತ ಇರಲಿ. ಬಿಜೆಪಿ ಪಕ್ಷವನ್ನು ಗೆಲ್ಲಿಸಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

ಪಟ್ಟಣದ ಅಕ್ಕಮಹಾದೇವಿ ದೇವಸ್ಥಾನದಿಂದ ಪ್ರಮುಖ ಬೀದಿಯಲ್ಲಿ ರೋಡ್ ಶೋ ಬಂದು ಭುವನೇಶ್ವರಿ ವೃತ್ತದಲ್ಲಿ ಮಾತನಾಡಿದ ಅವರು ನಾನು ಮುಖ್ಯಮಂತ್ರಿ ಆದ ಮೇಲೆ ಅಭಿವೃದ್ಧಿಗೆ ಸಾವಿರಾರು ಕೋಟಿ ಬಿಡುಗಡೆ ಮಾಡಿರುವೆ ಅದರಲ್ಲೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂಪಾಯಿ ಕೊಟ್ಟಿದ್ದೇನೆ. ಅದೇ ಕಾಂಗ್ರೆಸ್ ಸರ್ಕಾರ ಇದ್ದಾಗ ಒಂದು ಕೋಟಿ. ನೀಡಿದೆ ನೀವೇ ವಿಚಾರ ಮಾಡಿ ಎಂದು ಹೇಳಿದರು.
ಕಾಂಗ್ರೆಸ್ ನವರು ಮತದಾರರಿಗೆ ಗ್ಯಾರಂಟಿಗಳನ್ನು ನೀಡಿದ್ದಾರೆ ಆದರೆ ಆ ಗ್ಯಾರೆಂಟಿಗಳು ಮೇ ಹತ್ತರವರೆಗೆ ಮಾತ್ರ ಅವರ ಗ್ಯಾರಂಟಿಗಳು ನಂತರ ಗಳಗಂಟಿ ಗಳಗಂಟಿ ಎಂದು ಟೀಕೆ ಮಾಡಿದರು. ಚಿತ್ತಾಪುರ ನಲ್ಲಿ ಕಾಂಗ್ರೆಸ್ ಏನ್ ಗ್ಯಾರಂಟಿ ನೀಡಿದೆ ಅದಕ್ಕೆ ಪ್ರಧಾನಿಯವರು ಹೇಳಿದ್ದಾರೆ ಬ್ರಷ್ಟಾಚಾರವೇ ಅವರ ಗ್ಯಾರೆಂಟಿ ಅದು ಇನ್ನು ಮುಂದೆ ನಿಂತು ಹೋಗುತ್ತದೆ. ಮೇ 13ಕ್ಕೆ ಚಿತ್ತಾಪುರದಲ್ಲಿ ಗ್ಯಾರಂಟಿ ಇರುವುದು ಮಣಿಕಂಠ ರಾಠೋಡ್ ಒಬ್ಬನೇ ಎಂದು ಹೇಳಿದರು.

ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ ಮೋದಿ ಸರ್ಕಾರ ರೈತರಿಗೆ 
ಕಿಸಾನ್ ಸನ್ಮಾನ ಯೋಜನೆ,  ಪ್ರಧಾನ ಮಂತ್ರಿ ಅವಾಸ್ ಯೋಜನೆ, ಆರೋಗ್ಯಕ್ಕೆ ಆಯುಷ್ಮಾನ್ ಕಾರ್ಡ್, ನಮ್ಮ ರಾಜ್ಯ ಸರ್ಕಾರ ರೈತರಿಗೆ ವಿದ್ಯಾನಿಧಿ ಕೊಟ್ಟಿದೆ, ರೈತರಿಗೆ ಯಶಸ್ವಿನಿ ಯೋಜನೆ ತಂದಿದ್ದೇವೆ, ಕಳೆದ ವರ್ಷ ಡಿಜಲ್ ಸಬ್ಸಿಡಿ ಕೊಟ್ಟಿದ್ದೇವೆ, ಈ ವರ್ಷ ಐದು ಲಕ್ಷದವರೆಗೆ ಶೂನ್ಯ ಬಗ್ಗೆ ಸಾಲ ಕೊಡ್ತಾ ಇದೀವಿ ದಿನ- ದಲಿತರಿಗೆ 75 ಯೂನಿಟ್ ಪುಕ್ಕಟೆ ಕೊಡ್ತಾ ಇದ್ದೇವೆ. ಹೆಣ್ಣು ಮಕ್ಕಳಿಗೆ ಶ್ರೀ ಸಾಮರ್ಥ್ಯ ಯೋಜನೆ, ಮೂರು ಲಕ್ಷ ಹೆಣ್ಣು ಮಕ್ಕಳಿಗೆ ಉದ್ಯೋಗ ಕೊಡ್ತಾ ಇದ್ದೇವೆ, ಸ್ವಾಮಿ ವಿವೇಕಾನಂದ ಯೋಜನೆಯಲ್ಲಿ ಯುವಕರಿಗಾಗಿ ಮೂರು ಲಕ್ಷ ಉದ್ಯೋಗವನ್ನು ಕೊಡ್ತಾ ಇದ್ದೇವೆ, ವಿದ್ಯಾರ್ಥಿಗಳಿಗೆ ಡಿಗ್ರಿವರೆಗೆ ಉಚಿತ ಶಿಕ್ಷಣ, ವಿದ್ಯಾರ್ಥಿಯರಿಗೆ ಉಚಿತ ಬಸ್ ಪ್ರಯಾಣ, ಹೀಗೆ ಬಿಜೆಪಿ ಸರ್ಕಾರ ಕಂಕಣ ಬದ್ಧವಾಗಿ ಕೆಲಸ ಮಾಡುತ್ತಿದೆ.

ಅಣ್ಣ ಬಸವಣ್ಣನ ಹಾದಿಯಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ಅವರಿಗೂ ಸಮಪಾಲು ಸರ್ವರಿಗೂ ಸಮ ಬಾಳು. ಸಬ್ ಕೆ ಸಾಥ್ ಸಬ್ ಕಾ ವಿಕಾಸ್. ನಿಟ್ಟಿನಲ್ಲಿ ನಾವು ನಡೆಯುತ್ತಿದ್ದೇವೆ. ಕರ್ನಾಟಕದಿಂದ ನವ ಕರ್ನಾಟಕ ಭಾರತ ನಿರ್ಮಾಣವಾಗಬೇಕಾದರೆ ಚಿತ್ತಾಪುರ ನಲ್ಲಿ ಕಮಲ ಅರಳಬೇಕು ಎಂದರು.

ಭಾರತ ದೇಶವನ್ನು ಸ್ವಚ್ಛ ಭಾರತ ಮಾಡಲು ಹೊರಟಿರುವ ನರೇಂದ್ರ ಮೋದಿಯವರಿಗೆ ನಾವು ನೀವೆಲ್ಲರೂ ಶಕ್ತಿ ತುಂಬಬೇಕು. ಎಲ್ಲರೂ ಕೈಯಲ್ಲಿ ಕೇಸರಿ ಶಾಲು ಹಿಡಿಯಿರಿ ಈ ಕೇಸರಿ ಶಾಲು ನಮ್ಮ ಹಿಂದುತ್ವದ ಒಗ್ಗಟ್ಟು.
ಜೊತೆಗೆ ಚಿತ್ತಾಪುರ ನಲ್ಲಿ ಎಲ್ಲಾ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಮಣಿಕಂಠ ರಾಠೋಡ್ ಅವರನ್ನು ಗೆಲ್ಲಿಸಿ ಎಂದು ಹೇಳಿದರು. 

- ಶೃತಿ, ಚಲನಚಿತ್ರ ನಟಿ.


 ರಾಜ್ಯದ ಮುಖ್ಯಮಂತ್ರಿಗಳು ಬಸವರಾಜ್ ಬೊಮ್ಮಾಯಿ ಅವರು ಚಿತ್ತಾಪುರಗೆ ಬಂದು ನನಗೆ ಆಶೀರ್ವಾದ ಮಾಡಿದ್ದಾರೆ. ಜೊತೆಗೆ ಇಲ್ಲಿ ಸೇರಿದ ಸಾವಿರಾರು ಕಾರ್ಯಕರ್ತರ ಆಶೀರ್ವಾದ ನನ್ನ ಮೇಲಿದೆ ಹೀಗಾಗಿ ನನಗೆ ಈ ಬಾರಿ 50, ಸಾವಿರ ಅಧಿಕ ಮತಗಳಿಂದ ಆರಿಸಿ ತರಬೇಕು ಎಂದು ಮನವಿ ಮಾಡಿದರು.

- ಮಣಿಕಂಠ ರಾಠೋಡ್.
ಬಿಜೆಪಿ ಅಭ್ಯರ್ಥಿ ಚಿತ್ತಾಪುರ.

ಈ ಸಂದರ್ಭದಲ್ಲಿ ರಾಜುಗೌಡ, ಎನ್ ರವಿ ಕುಮಾರ್, ಬಸವರಾಜ್ ಬೆಣ್ಣೂರಕರ್, ಸೇರಿದಂತೆ ಸಾವಿರಾರು ಕಾರ್ಯಕರ್ತರು ಇತರರಿದ್ದರು.

ಬುಧವಾರ, ಏಪ್ರಿಲ್ 26, 2023

ದೇಶದ ಸುರಕ್ಷತೆಯಲ್ಲಿ ಮೊದಿ ಸೇವೆ ಅಗಾಧ: ಎಮ್ಮೆನೋರ.

ಚಿತ್ತಾಪೂರ: ಭಾರತೀಯ ಜನಾತಾ ಪಕ್ಷ ಮತ್ತು ಕಾಂಗ್ರೆಸ್ ಪಕ್ಷ ಬಗ್ಗೆ ಯೋಚಿಸಿದಾಗ ಬಿಜೆಪಿ ಪಕ್ಷ ವಿಭಿನ್ನವಾದ ಪಕ್ಷ, ಏಕೆಂದರೆ ದೇಶದ ಪ್ರಧಾನಿ ನರೇಂದ್ರ ಮೊದಿ ಅವರು ದೇಶ ಅಭಿವೃದ್ಧಿ, ದೇಶ ಸುರಕ್ಷತೆಗಾಗಿ ಹಗಲು ಇರುಳು ಅನ್ನದೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ಓಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ ಹೇಳಿದರು.

ತಾಲ್ಲೂಕಿನ ತರ್ಕಸಪೇಟನ ಪ್ರಚಾರದಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷ ಸಣ್ಣ-ಸಣ್ಣ ಸಮುದಾಯಗಳು ಸಹ ಸಮಾಜದ  ಮುಖ್ಯವಾಹಿನಿಗೆ ಬರಬೇಕೆಂದು ಅನೇಕ ನಿಗಮ ಮಂಡಳಿಗಳನ್ನು ಮಾಡಿದ್ದಾರೆ. ದೇಶದ ಪ್ರಗತಿಗಾಗಿ ಹಗಲು ರಾತ್ರಿ ಎನ್ನದೆ ದೇಶದ ಪ್ರಧಾನಿ ಮತ್ತು ರಾಜ್ಯದ ಮುಖ್ಯಮಂತ್ರಿ ಅವರು ಜನ ಸೇವೆಯಲ್ಲಿ ತಮ್ಮ‌ನ್ನು ತಾವು ತೊಡಗಿಸಿಕೊಂಡಿದ್ದಾರೆ. ಪಿಎಂ ಕಿಸಾನ್ ಯೋಜನೆ ಅಡ್ಡಿಯಲ್ಲಿ ರೈತರಿಗೆ ನೇರವಾಗಿ 24 ಲಕ್ಷ ಕೋಟಿ ರೂ.ಹಣ ಜಮಾಡುವ ಕೆಲಸ ಮಾಡಿದ್ದಾರೆ. 

ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ  ಕೆಲಸ ಮಾಡಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ಆದ್ರೆ ಹೇಳಿಕೊಳ್ಳುವಷ್ಟು ಕೆಲಸ ಆಗಿಲ್ಲ. ರೈತರ ಸಲುವಾಗಿ ಹಲವು ಕೆರೆ ತುಂಬುವ ಬೇಡಿಕೆಯನ್ನು ಕಳೆದ ಹತ್ತು ವರ್ಷದಿಂದ ಬಹು ಮುಖ್ಯ ಬೇಡಿಕೆಯಾಗಿತ್ತು. ಅದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗುತ್ತಿತು. ಆದ್ರೆ ಇನ್ನೂ ಆ ಬೇಡಿಕೆ  ಈಡೇರಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು 

ಒಂದು ಸಲ ಬಿಜೆಪಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಬಹುಮತಗಳ ಅಂತರದಲ್ಲಿ ಗೆಲ್ಲಿಸೋಣ ಎಂದು ಜನರಲ್ಲಿ ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮಾತನಾಡಿ ತರ್ಕಸಪೇಟ ಗ್ರಾಮ ನನಗೆ ಹೊಸದೆನಲ್ಲ ಆದ್ರೆ ಇಷ್ಟೋಂದು ಜನ ಸೇರುತ್ತಾರೆ ಎಂದು ನಿರೀಕ್ಷೆ ಮಾಡಿಲ್ಲ, ಈ ಪ್ರೀತಿ ಮತದಾನ ದಿನದವರೆಗೆ ಇರಲಿ ಎಂದು ಜನರಲ್ಲಿ ಕೈ ಮುಗಿದು ಮನವಿ ಮಾಡಿದ್ದಾರೆ.

 ಈ ಗ್ರಾಮದಲ್ಲಿ ಸಾಕಷ್ಟು ಸಮಸ್ಯೆಗಳ ಹಾಗೂ ಬೇಡಿಕೆಗಳು ನೀಡಿದ್ದೀರಿ ಅವುಗಳಲ್ಲಿ ವಿಶೇಷವಾಗಿ ಬಸವೇಶ್ವರ ಮೂರ್ತಿ, ಗ್ರಾಮ ಪಂಚಾಯತ್ ಮತ್ತು ಮಹಿಳೆಯರ ಶೌಚಾಲಯ ಬಹುದಿನಗಳ ಬೇಡಿಕೆಯಾಗಿದೆ. ಆ ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡುವೆ. ನಿಮ್ಮ ಕಷ್ಟ ನನಗೆ ಅರ್ಥವಾಗುತ್ತೆ, ಈ ಸಮಸ್ಯೆ ಬಗೆಹರಿಸಲು, ನೀವೂ ನನ್ನಗೆ ಮತದಾನ ದಿನ ಮತ ನೀಡಿ ಗೆಲ್ಲಿಸಿ ಎಂದರು.

ಕಾಂಗ್ರೆಸ್,ಜೆಡಿಎಸ್ ಹಾಗೂ ಇತರ ಪಕ್ಷ ತೊರೆದು ತರ್ಕಸಪೇಟನ ನಾರಾರು ಯುವಕರ ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ನಿಂಗಾರೆಡ್ಡಿ ಬಾಸರೆಡ್ಡಿ, ಭೀಮರಡ್ಡಿ ಕುರಾಳ,  ಸುರೇಶ ರಾಠೋಡ್ ಕವಿತಾ ಚವ್ಹಾಣ್, ಶಿವಕುಮಾರ ಸುಣಗಾರ, ಮಲ್ಲಿಕಾರ್ಜುನ ಅಅಲ್ಲೂರಕರ್, ಗೌಡ, ನಂದರೆಡ್ಡಿ ಗೌಡ, ಶಾಂತಯ್ಯ ಗುತ್ತೇದಾರ್ ನಾಗೇಶ ಪಂಚಾಳ, ವೆಂಕಟರೆಡ್ಡಿ ಗೌಡ, ಬಲವಂತ ದೇವರಳ್ಳಿ, ಮಲ್ಲಿಕಾರ್ಜುನ ಕುಂಬಾರ, ಈಶಪ್ಪ, ಬಸವರಾಜ ಕುಂಬಾರ ಸೇರಿದಂತೆ ಇತರರು ಇದ್ದರು.




ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಬಿರುಸಿನ ಪ್ರಚಾರ.

ಚಿತ್ತಾಪೂರ: ಈ ಬಾರಿ ಮತ್ತೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮ್ಮ ಸರ್ಕಾರದಿಂದ ಮತ ಕ್ಷೇತ್ರದಲ್ಲಿ  ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ ಜೊತೆಗೆ ನಾನೂ ಸಹ ಇನ್ನೂ ಮುಂದೆ ಹೆಚ್ಚಿನ ಕೆಲಸಗಳು ಮಾಡುವೆ ಆದ್ದರಿಂದ ಬಿಜೆಪಿ ಅಭ್ಯರ್ಥಿಯಾದ ನನಗೆ ಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಮಣಿಕಂಠ ರಾಠೋಡ ಮನವಿ ಮಾಡಿದರು.

ತಾಲ್ಲೂಕಿನ ಚೌಕಂಡ್ಡಿ ತಾಂಡಾದ ಮತ ಯಾಚನೆಯಲ್ಲಿ ಮಾತನಾಡಿದ ಅವರು 
ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷ ನನಗೆ ಸೇವೆ ಮಾಡಲು ಅವಕಾಶ ನೀಡಿದೆ, ದೇಶದ ಪ್ರಧಾನಿ ಅವರು ಕಲಬುರಗಿ ಜಿಲ್ಲೆಗೆ ಬಂದಾಗ, ಬಂಜಾರ ಸಮಾಜದ ಒಬ್ಬ, ಮಗ  ದೆಹಲಿಯಲ್ಲಿದ್ದಾರೆ. ನೀವು ಯಾವುದೇ ರೀತಿಯ ಚಿಂತೆ ಮಾಡುವ ಅಗತ್ಯವಿಲ್ಲ. ಎಂದು ಹೇಳಿದರು. ಈಗ ನನಗೆ ರಾಜ್ಯದಲ್ಲಿ ವಿಧಾನಸೌಧ ಪ್ರವೇಶ ಮಾಡಲು ಅವಕಾಶ ನೀಡುವ ಮೂಲಕ ಎಲ್ಲಾರೂ ನನಗೆ ಮತ ನೀಡಿ ಅರ್ಶಿವಾದ ಮಾಡಬೇಕು ಎಂದರು.

ನಾನು ಸೇವಲಾಲ್ ಮಹಾರಾಜರ ಆದರ್ಶ ಮತ್ತು ತತ್ವ ಸಿದ್ಧಾಂತಗಳ ಮೇಲೆ ನಡೆಯುತ್ತಿರುವೆ ನಮ್ಮ ಸಮುದಾಯದವರು ಕೆಲಸ ಮಾಡಲು ಮುಂಬಯಿ ಬೆಂಗಳೂರು, ಪುಣೆ, ಹೋಗುವ ಅಗತ್ಯವಿಲ್ಲ ನಾನು ನಮ್ಮ ಯುವಕರಿಗೆ ನಮ್ಮ ತಾಲೂಕಿನಲ್ಲಿ ಜನರಿಗೆ ಉದ್ಯೋಗ ದೊರೆಯುವ ಕೆಲಸ ಮಾಡುತ್ತೇನೆ . ನಿಮ್ಮ ಗ್ರಾಮಗಳಿಗೆ, ತಾಂಡಗಳಿಗೆ, ಕುಡಿಯುವ ನೀರು, ಶೌಚಾಲಯ, ಮೂಲಭೂತ ಸೌಕರ್ಯಗಳನ್ನು  ನೀಡುವ ಪ್ರಮಾಣಿಕ ಕೆಲಸ ಮಾಡುತ್ತೇನೆ ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ ನನಗೆ ಒಂದು ಅವಕಾಶ ನೀಡಿ ಎಂದು ಹೇಳಿದರು. 

ಮೇ, 6 ರಂದು ದೇಶದ ಪ್ರಧಾನಿಯವರು ನನಗೆ ಅಶೀವಾದ ನೀಡಲು ಚಿತ್ತಾಪುರ ಮತಕ್ಷೇತ್ರದ ರಾವೂರ ಗ್ರಾಮಕ್ಕೆ ಬರುತ್ತಿದ್ದಾರೆ. ನೀವು ಎಲ್ಲಾರೂ ಬಂದು ಕಾರ್ಯಕ್ರಮವನ್ನು ಯಶಸ್ವಿಗೋಳಿಸಿ, ನನ್ನ ಕೈ ಬಲ ಪಡಿಸಬೇಕು, ನಿಮ್ಮ ಮನೆಯ ಮಗನ್ನು ವಿಧಾನಸೌಧಗೆ ಕಳುಹಿಸುವ ಕೆಲಸ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ನಿಂಗಾರೆಡ್ಡಿ ಬಾಸರೆಡ್ಡಿ, ಭೀಮರಡ್ಡಿ ಕುರಾಳ, ಮಲ್ಲಿಕಾರ್ಜುನ ಎಮ್ಮೆನೋರ, ಸುರೇಶ ರಾಠೋಡ್ ಕವಿತಾ ಚವ್ಹಾಣ್, ಶಿವಕುಮಾರ ಸುಣಗಾರ,  ಸೇರಿದಂತೆ ಇತರರು ಇದ್ದರು.


ಮಂಗಳವಾರ, ಏಪ್ರಿಲ್ 25, 2023

ಇಂದು ಐನಾಪೂರ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆ.

ಚಿತ್ತಾಪೂರ: ಕೂಲಿ ಸಮಾಜದ ಯುವ ಮುಖಂಡ ಸೋಮಶೇಖರ್ ಐನಾಪುರ  ಮಲ್ಕೂಡ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ತಮ್ಮ ಇತರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ತಿಳಿಸಿದ್ದಾರೆ. 

 ಕಳೆದ ಸುಮಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದರು ಸಹ ಪಕ್ಷದಲ್ಲಿ ಯಾವುದೇ ಸ್ಥಾನಮಾನ ಇಲ್ಲ ಮತ್ತು ಮಲ್ಕೋಡು ಗ್ರಾಮದಲ್ಲಿ ನಾವು ಕಾಂಗ್ರೆಸ್ ಪಕ್ಷದಿಂದ ರಾಜಕೀಯವಾಗಿ ಬೆಳೆಯುವುದು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸಹಿಸಲಾಗುತ್ತಿಲ್ಲ. ಕಿವಿಯಾರೆ ಅವರ ಮಾತುಗಳು ಕೇಳಿ ನನ್ನ ಮನಸ್ಸಿಗೆ ತುಂಬಾ ನೋವು ಉಂಟಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ. 

ಭಾನುವಾರ, ಏಪ್ರಿಲ್ 23, 2023

ಮುಸ್ಲಿಂರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ.

ಚಿತ್ತಾಪೂರ:  ಮುಸ್ಲಿಂ ಸಮುದಾಯದ ಹಿರಿಯರು ಮತ್ತು ಯುವಕರು ಕಾಂಗ್ರೆಸ್ ಪಕ್ಷ ತೊರೆದು ಹಾಜಿ ಮಲನ್, ಖಸೀಂ ಸಾಹೇಬ್ ಬಾಬಾ ಅವರ ನೇತ್ರತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಸಾವಿರಾರು ಸಂಖ್ಯೆಯ ಮುಸ್ಲಿಂ ಜನರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಬಿಜೆಪಿ ಪಕ್ಷದ ಓಬಿಸಿ ಮೋರ್ಚ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ ಮಾತನಾಡಿ
ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಮುಳುಗಿದೆ. ಮುಳುಗುವ ಹಡಗಿನಲ್ಲಿ ಪ್ರಯಾಣಿಕರು ಸಂಚಾರ ಮಾಡಿದರೇ ಅಪಾಯ ಕಟ್ಟಿಟ್ಟಬುತ್ತಿ. ಹೀಗಾಗಿ ಚಿತ್ತಾಪುರ ಕ್ಷೇತ್ರದಲ್ಲಿ 2023ಕ್ಕೆ ಕಾಂಗ್ರೆಸ್‌ ಪಕ್ಷದ ಮುಳುಗಡೆ ಖಚಿತವಾಗಿದೆ ಎಂದರು.
ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಮಿಂಚಿನ ಸಂಚಾರ ನಡೆಸಿದ್ದಾರೆ. ಚಿತ್ತಾಪುರ ಕ್ಷೇತ್ರದ ಪ್ರತಿ ಹಳ್ಳಿಯ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಬೂತ್‌ ಮಟ್ಟದ ಸಭೆಗಳನ್ನ ಈಗಾಗಲೇ ನಡೆಸಿದ್ದಾರೆ. ಬೂತ್‌ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಮೀಣ ಮತದಾರರ ವಿಶ್ವಾಸಗಳಿಸಲು ಹಗಲುರಾತ್ರಿ ಎನ್ನದೇ  ಪ್ರಚಾರದಲ್ಲಿ ತೊಡಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಮಾತನಾಡಿ ವಿಶೇಷವಾಗಿ ಮುಸ್ಲೀಂ ಯುವ ಕಾರ್ಯಕರ್ತರ, ಮತ್ತು ಮುಸ್ಲಿಂ ಸಮುದಾಯವರು ಇಷ್ಟೊಂದು ಸಾವಿರಾರು ಸಂಖ್ಯೆಯ ಪ್ರಮಾಣದಲ್ಲಿ ಸೇರ್ಪಡೆಯಿಂದ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತಹ ಆಗಿದೆ ಎಂದರು.ಇಷ್ಟೋಂದು ಪ್ರಮಾಣದಲ್ಲಿ ಜನರು  ಖಸೀಂ ಸಾಬ್  ಸಾಹೇಬ್  ಅವರ ರೂಪ್ ದಲ್ಲಿ ಬಂದು ನನಗೆ ದೇವರ ರೂಪದಲ್ಲಿ ಆರ್ಶೀವಾದ ಮಾಡಿದ್ದೀರಿ ಎಂದು ಅಂದುಕೊಂಡಿದ್ದೇನೆ. 

ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ಏನು ಮಾಡಿದೆ. ನಾವು ಮನೆಯಲ್ಲಿ ಕುಳಿತುಗೊಂಡರು ನಾನು ಗೆಲುತ್ತೇವೆ ನಮಗೆ ಮುಸ್ಲೀಂ ಮತ ಬರುತ್ತೆ ಅಂದುಕೊಂಡಿದ್ದಾರೆ.  ಕಾಂಗ್ರೆಸ್ ಪಕ್ಷ ಭ್ರಮಯಲ್ಲಿದ್ದಾರೆ. ಕಳೆದ ಹತ್ತು ವರ್ಷದಲ್ಲಿ ಏನು ಮಾಡಿದ್ದಾರೆ ? ಎಲ್ಲಾ ಕಡೆ ವೇದಿಕೆಯಲ್ಲಿ ಹೇಳುತ್ತಾರೆ ಮುಸ್ಲಿಂ ಸಮುದಾಯದ ಓಟ್ ನಮಗೆ ಸಿಗುತ್ತೆ ಎಂದು ,ಇಂದು ಮುಸ್ಲಿಂ ಸಮುದಾಯ ಕೂಡ ಜಾಗೃತರಾಗಿದ್ದಾರೆ ಇವತ್ತು ಇಷ್ಟೋಂದು ಪ್ರಮಾಣದಲ್ಲಿ ನೀವು ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ನಿದ್ದೆ ಕೆಡಿಸುತ್ತದೆ ಎಂದು ಹೇಳಿದರು. 

ಕೆಲ ಕಾಂಗ್ರೆಸ ಮುಂಖಡರು ನಿಮ್ಮ ಮನೆ ಬರುತ್ತಾರೆ, ದೊಡ್ಡ ದೊಡ್ಡ ಕನಸು ತೆಗದುಕೊಂಡು ಬರುತ್ತಾರೆ. ಹಣದ ಅಮಿಷ ತೊರಿಸುತ್ತಾರೆ, ನಿಮ್ಮ ಕಷ್ಟ ಸುಖದಲ್ಲಿ ಭಾಗಿಯಾಗುತ್ತೇವೆ ಎಂದು ಭರವಸೆ ನೀಡುತ್ತಾರೆ ಅದನ್ನು ನಂಬಬೇಡಿ ನಿಮ್ಮ ಮನೆಯನ್ನು ಹಾಳು ಮಾಡಿ, ಅವರು ದೊಡ್ಡ ದೊಡ್ಡ ಮನೆಗಳನ್ನು ಕಟ್ಟಿಕೊಳ್ಳುತ್ತಿದ್ದಾರೆ ಅವರಿಗೆ ಸರಿಯಾಗಿ ಉತ್ತರ ನೀಡಿ ಇಷ್ಟು ದಿನಗಳು ನಮಗೆ ಏನೂ ಮಾಡಿರಿ ಎಂದು ಪ್ರಶ್ನಿಸಿ ಎಂದರು.

ಪಟ್ಟಣದಲ್ಲಿ ಬಹುದೊಡ್ಡ ಶಕ್ತಿ ಇರುವ ಹಾಜಿ ಮಾಲನ್ ಖಸೀಂ ಬಾಬಾ ಅವರು, ಬಿಜೆಪಿ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿಕೊಂಡು ಮತ್ತು ನನ್ನ ಸಮಾಜ ಸೇವೆಯನ್ನು ಮೆಚ್ಚಿಕೊಂಡು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ ನಮಗೆ ಚಿತ್ತಾಪುರ ಮತಕ್ಷೇತ್ರಕ್ಕೆ ದೊಡ್ಡ ಶಕ್ತಿ ಸಿಕ್ಕಿದೆ ಅವರ ಅರ್ಶಿವಾದದಿಂದ ನಾವು 25 ಸಾವಿರ ಮತಗಳ ಅಂತರಗಳಿಂದ ಬಿಜೆಪಿ ಗೆಲವು ಸಾಧಿಸಲಿದ್ದೆವೆ ಎಂದು ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿನ ಬಿಜೆಪಿ ತಾಲೂಕ ಅಧ್ಯಕ್ಷ ನೀಲಕಂಠರಾವ ಪಾಟೀಲ, ನಿಂಗಾರೆಡ್ಢಿ ಪರಸರೆಡ್ಡಿ, ಶಶಿಧರ ಸುಗೂರ, ಮುಕುಂದ ದೇಶಪಾಂಡೆ,ನಾಗರಾಜ ಬಂಕಲಗಿ, ರವೀಂದ್ರ ಸಜ್ಜನಶೆಟ್ಟಿ, ಶಂಕರ ಚವ್ಹಾಣ, ಹಾಜಿ ಮಲಂಗ್ ಬಾಬಾ, ಶರಣು ಬಾಬಾ, ಪ್ರಭು ಗಂಗಾಣಿ, ಮಹ್ಮದ ಯುನುಸ್, ಸೇರಿದಂತೆ ಇತರರು ಇದ್ದರು.

ಸೋಮವಾರ, ಏಪ್ರಿಲ್ 17, 2023

ಭ್ರಷ್ಟ ಅಧಿಕಾರಿಗಳಿಗೆ ಜೈಲಿಗೆ ಹಾಕಿಸುವೆ: ಪ್ರಿಯಾಂಕ್ ಖರ್ಗೆ.

ಚಿತ್ತಾಪೂರ: ಕೆಕೆಆರ್ ಡಿಬಿಯಲ್ಲಿ ಅವ್ಯಾಹತವಾದ ಭ್ರಷ್ಟಾಚಾರ ನಡೆದಿದೆ. ಜನ ಸಾಮಾನ್ಯರ ದುಡ್ಡು ಲೂಟಿ ಮಾಡಿದ ಬ್ರಷ್ಟ ಅಧಿಕಾರಿಗಳನ್ನು ನಾವು ಅಧಿಕಾರಕ್ಕೆ ಬಂದ ನಂತರ ಜೈಲಿಗೆ ಕಳಿಸುತ್ತೇವೆ ಎಂದು ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಹೇಳಿದರು.
ಪಟ್ಟಣದ ಸೇಂದಿ ಡಿಪೋ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕ್ಷೇತ್ರದ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕ್ ಖರ್ಗೆ ಅವರ  ನಾಮಪತ್ರ ಸಲ್ಲಿಕೆಯಾ ಬೃಹತ ಜನ ಆಶೀರ್ವಾದ ಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಪಕ್ಷ ಎಷ್ಟೇ ತಿಪ್ಪರಲಾಗ ಹಾಕಿದರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆ ಇಲ್ಲ. ನಮ್ಮಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇದ್ದಾರೆ. ಬಿಜೆಪಿಯಲ್ಲಿ ಯಾರು ಇದ್ದಾರೆ? ಅಲ್ಲೇ ಇದ್ದ ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿಯನ್ನು ಕೀಳಾಗಿ ನಡೆಸಿಕೊಂಡಿದ್ದರಿಂದ ಅವರಿಬ್ಬರು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಪಾಪ, ಯಡಿಯೂರಪ್ಪಗೆ ಕಣ್ಣೀರು ಹಾಕಿಸಿ‌ ಸಿಎಂ ಹುದ್ದೆಯಿಂದ ಕೆಳಗಿಳಿಸಲಾಯಿತು. ಹೀಗಾಗಿ ಯಾವ ನಾಯಕರು ಅಲ್ಲಿದ್ದಾರೆ! ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದ ಆಡಳಿತದಲ್ಲಿ ರೈತರ ರಸಗೊಬ್ಬರ, ಪೆಟ್ರೋಲ್, ಅಡುಗೆ ಅನಿಲ‌ ಬೆಲೆ ದುಬಾರಿಯಾಗಿದೆ. ಪ್ರತಿ‌ ಕುಟುಂಬದ ಯಜಮಾನನಿಗೆ ಸಂಸಾರದ ತೊಂದರೆ ನೀಗಿಸಲು ನಮ್ಮ ಪಕ್ಷ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರೂ‌,2000 ನೀಡುತ್ತೇವೆ. 200 ಯೂನಿಟ್ ವಿದ್ಯುತ್ ನ್ನು ಉಚಿತವಾಗಿ ಗೃಹಜ್ಯೋತಿ ಯೋಜನೆಯಡಿಯಲ್ಲಿ ನೀಡುತ್ತೇವೆ. ನಿರುದ್ಯೋಗಿ ಪದವಿಧರ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇವೆ. ಉದ್ಯೋಗ ಸಿಗುವವರೆಗೆ ಅಂತಹ ಯುವಕರಿಗೆ ಯುವ ನಿಧಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ರೂ, 3000 ಹಾಗೂ ಡಿಪ್ಲೋಮಾ ಮುಗಿದವರಿಗೆ ರೂ,1500 ನೀಡುತ್ತೇವೆ.

ಪ್ರತಿ ಕುಟುಂಬಕ್ಕೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಹತ್ತು ಕೆಜಿ ಅಕ್ಕಿ ಉಚಿತ ನೀಡುತ್ತೇವೆ. ಈ ನಾಲ್ಕು ಯೋಜನೆಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಾಗಿವೆ. ಈ ನಾಲ್ಕು ಯೋಜನೆಯಲ್ಲಿ ಮೂರಕ್ಕೆ ವಿರೋಧಿಸುವ ಬಿಜೆಪಿ ಅದರಲ್ಲೂ ಚಿತ್ತಾಪುರದ‌ ಬಿಜೆಪಿ ನಾಯಕರು ಅನ್ನಭಾಗ್ಯಕ್ಕೆ ಒಪ್ಪಲಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.

ಬಿಜೆಪಿಗರಿಗೆ ಸಮಾಜ ಕಲ್ಯಾಣ ಬೇಕಿಲ್ಲ ಸ್ವಯಂ ಕಲ್ಯಾಣ ಪ್ರಮುಖವಾಗಿದೆ. ಚಿತ್ತಾಪುರದಲ್ಲಿ‌ ಬಿಜೆಪಿ ಆಯ್ಕೆ ಮಾಡಿಕೊಂಡಿರುವ ವ್ಯಕ್ತಿಯ ಹಿನ್ನೆಲೆ ಬಗ್ಗೆ ಯೋಚಿಸಿದಾಗ ಲೂಟಿಗೆ ಪರೋಕ್ಷವಾಗಿ ಬೆಂಬಲವಿದೆ ಎಂದು ಒಪ್ಪಿಕೊಂಡಂತಾಗುತ್ತದೆ. ಬಡವರಿಗೆ ಹಂಚಲು ಉದ್ದೇಶಿಸುವ ಅಕ್ಕಿ ಹಾಗೂ ಹಾಲಿನ‌ ಪೌಡರ ಕದಿಯುವವರಿಗೆ ಟಿಕೇಟ್ ನೀಡಲಾಗಿದೆ. ಇದು ನಾನು ಹೇಳುತ್ತಿಲ್ಲ‌ ಇದನ್ನು ಯಾದಗಿರಿಯ ಕೋರ್ಟ್ ಹೇಳಿದೆ. ನಿಮಗೆ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ‌ ಮುಖ್ಯವಲ್ಲ. ನಿಮ್ಮ ಚುನಾವಣೆ ಹೋರಾಟ ಮೋದಿ, ಶಾ ಹಾಗೂ ಆರ್ ಎಸ್ ಎಸ್ ವಿರುದ್ದವಿರಬೇಕು ಎಂದು ಮನವಿ ಮಾಡಿದರು.

ಚಿತ್ತಾಪುರ ಹಿತ‌ಕಾಪಾಡುವುದು, ಇಲ್ಲಿನ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು,‌ ಮಹಿಳೆಯರಿಗೆ ಸುರಕ್ಷತೆಯ ನೀಡುವುದಕ್ಕಾಗಿ ಈ ತಾಲೂಕಿನ ಮೊಮ್ಮಗನಾದ ನನ್ನಿಂದ ಮಾತ್ರ ಸಾಧ್ಯ ಯಾವ ಬಿಜೆಪಿ ಅಭ್ಯರ್ಥಿಯಿಂದ ಸಾಧ್ಯವಿಲ್ಲ ಹಾಗಾಗಿ ನನಗೆ ಆಶೀರ್ವಾದ ಮಾಡಿ ಎಂದು ಕೈ ಜೋಡಿಸಿ ಕೇಳಿಕೊಳ್ಳುತ್ತೇನೆ. ತಾಲೂಕಿನಲ್ಲಿ ಪ್ರಬುದ್ಧ ಸಮಾಜ‌ ನಿರ್ಮಾಣ‌ ಮಾಡುವ ಜವಾಬ್ದಾರಿ ನನಗೆ‌ ಬಿಡಿ. ಹೋದ ಸಲವೂ ನನಗೆ ಆರಿಸಿ ತಂದಿದ್ದೀರಿ ಆದರೆ ಪಗಾರ ಕಡಿಮೆ ಮಾಡಿದ್ದೀರಿ ಆದರೆ ಈ ಸಲ ಜಾಸ್ತಿ ಪಗಾರ ನೀಡಿ. ಕನಿಷ್ಠ 25,000 ಮತಗಳ ಅಂತರದಲ್ಲಿ ನನ್ನನ್ನು ಗೆಲ್ಲಿಸಿ. ನಿಮ್ಮ ಹದಿನೈದು ದಿನ ನಿಮ್ಮ ಶ್ರಮ ನೀಡಿ ಆಮೇಲೆ ಮುಂದಿನ ಐದು ವರ್ಷದ ಅವಧಿ ನಿಮ್ಮ ಕಾಳಜಿ ನನಗೆ ಬಿಡಿ. ನಿಮ್ಮ ಅಭಿವೃದ್ದಿ ನನಗೆ ಸೇರಿದ್ದು ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ 500 ಕ್ಕೂ ಅಧಿಕ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷವನ್ನು ಹಲವಾರು ಕಾರ್ಯಕರ್ತರು ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ, ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ, ನಾಗರೆಡ್ಡಿಗೌಡ ಪಾಟೀಲ್, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ಮರಗೋಳ, ಶಿವಾನಂದ ಪಾಟೀಲ್, ರೇವಣಸಿದ್ದಪ್ಪ ಮಾಸ್ಟರ್, ಬಸನಗೌಡ ಸಂಕನೂರ, ನೀಲಕಂಠರಾವ್ ಮೂಲಗೆ, ಎಸ್ ಬಿ ಕಾಮರೆಡ್ಡಿ, ಮಲ್ಲಿಕಾರ್ಜುನ ಕಾಳಗಿ, ಶೃತಿ ಪೂಜಾರಿ, ಮೈಮೊದ್ ಸಾಹೇಬ, ಶ್ರೀನಿವಾಸ ಸಾಗರ, ಅಜೀಜ್ ಸೇಠ, ಲಚ್ಚಪ್ಪ ಜಮಾದಾರ್, ರಾಜು ಕಪನೂರ್, ಚಂದ್ರಶೇಖರ ಕಾಶಿ, ಸಿದ್ದುಗೌಡ ಪಾಟೀಲ್, ಮುಕ್ತಾರ ಪಟೇಲ್, ಸೇರಿದಂತೆ ಇತರರು ಇದ್ದರು.


ಗುರುವಾರ, ಏಪ್ರಿಲ್ 13, 2023

ಕೆಪಿಸಿಸಿ ಅಧ್ಯಕ್ಷರಿಂದ ಬಿ ಫಾರಂ ಸ್ವೀಕರಿಸಿದ ಪ್ರಿಯಾಂಕ ಖರ್ಗೆ.

ಬೆಂಗಳೂರ: 2023ರ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರಿಂದ ಬಿ ಫಾರಂ ಅನ್ನು ಸ್ವೀಕರಿಸಿದರು.

ನಂತರ ಮಾತನಾಡಿದ ಪ್ರಿಯಾಂಕ ಖರ್ಗೆ ಅವರು ಚಿತ್ತಾಪುರ ಜನತೆಯ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸದಾ ನನ್ನ ಬೆನ್ನೆಲುಬಾಗಿ ನಿಂತಿರುವ ಚಿತ್ತಾಪುರದ ಜನತೆಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.

ಚಿತ್ತಾಪುರದ ಅಭಿವೃದ್ಧಿಯ ಹಾದಿಯಲ್ಲಿ ಜೊತೆಯಾಗಿರುವ ಚಿತ್ತಾಪುರದ ಪ್ರಜ್ಞಾವಂತ ಮಹಾಜನತೆ ಮತ್ತೊಮ್ಮೆ ನಿಮ್ಮ ಅತ್ಯಮೂಲ್ಯವಾದ ಮತವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಮೂಲಕ ಮತ್ತೊಮ್ಮೆ ನಿಮ್ಮ ಸೇವೆ ಮಾಡುವ ಅವಕಾಶ ನೀಡಬೇಕು ಮತಕ್ಷೇತ್ರದ ಜನರಲ್ಲಿ ವಿನಂತಿಸಿಕೊಂಡರು.

ಚಿತ್ತಾಪೂರಲ್ಲಿ ಕಮಲ ಅರಳಿಸುವುದು ಬಿಜೆಪಿ ಮುಖ್ಯ ಉದ್ದೇಶ.

ಚಿತ್ತಾಪೂರ: ವಿಧಾನ ಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕ ಖರ್ಗೆ ಅವರನ್ನು ಸೋಲಿಸಿ ಚಿತ್ತಾಪುರನಲ್ಲಿ ಕಮಲ ಅರಳಿಸುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಮುಕುಂದ ದೇಶಪಾಂಡೆ ಹೇಳಿದರು.

ಪಟ್ಟಣದ ಬಜಾಜ್ ಕಾಂಪ್ಲೆಕ್ಸ್ ಬಿಜೆಪಿ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಕುರಿತು ಮಾತನಾಡಿದ ಅವರು ಬಿಜೆಪಿಯ ಎಲ್ಲಾ ಅಕ್ಷಾಂಕ್ಷಿಗಳನ್ನು ಕರೆದು ಎಲ್ಲಾರನ್ನು ಸಮಾಧಾನ ಮಾಡುವ ಕೆಲಸ ನಾವು ಮಾಡುತ್ತಿದ್ದೇವೆ ಈ ಚುನಾವಣೆಯಲ್ಲಿ ಶತಯಗತಯಾ ಬಿಜೆಪಿಯನ್ನು ಗೆಲ್ಲಲೇಬೇಕು ಹೀಗಾಗಿ ವಿಭಿನ್ನ ರೀತಿಯಾಗಿ ಪ್ರಚಾರವನ್ನು ಪಕ್ಷ ಸಂಘಟನೆ ಮಾಡಲು ಸಿದ್ಧವಾಗಿದೆ. ಭಾರತೀಯ ಜನತಾ ಪಕ್ಷ ಚುನಾವಣೆಗೆ ಅಷ್ಟೇ ಸಭೆ ಪ್ರಚಾರ ಮಾಡುವುದಿಲ್ಲ.  ನಮ್ಮ ಬಿಜೆಪಿ ಸರ್ಕಾರದ ಉದ್ದೇಶ ಸಮಾಜದ ಕಟ್ಟಕಡೆಯ ಮನುಷ್ಯಗೂ ನಮ್ಮ ಸರ್ಕಾರದ ಯೋಜನೆಗಳನ್ನು ಕಲ್ಪಿಸುವ ಉದ್ದೇಶ ನಮ್ಮ ಪ್ರಧಾನಿ ಮತ್ತು ಪಕ್ಷದಾಗಿದೆ ಎಂದರು.

ನಮ್ಮ ತಾಲೂಕಿನಲ್ಲಿ ಬಂಡಾಯ ಅಂತ ಇಲ್ಲ. ಇದ್ದರೆ ಅವರನ್ನು ನಮ್ಮ ರಾಜ್ಯ ನಾಯಕರು ಅಸಮಾಧಾನ ಇರುವರರನ್ನು ಸಮಾಧಾನ ಪಡೆಸುವ ಕೆಲಸ ಮಾಡುತ್ತಾರೆ ಯಾರು ಸಹ ಪಕ್ಷವನ್ನು ತೊರೆಯುವ ಕೆಲಸ ಮಾಡಲ್ಲ ಎಂಬ ವಿಶ್ವಾಸವಿದೆ. ಹಾಗೂ ಝಾರ್ಖಂಡನ್ ರಾಜ್ಯ ಸಭೆ ಸದಸ್ಯ ಚಿತ್ತಾಪೂರಗೆ ಮತಕ್ಷೇತ್ರದ ಉಸ್ತುವಾರಿಯಾಗಿ ಅದಿತ್ಯ ಪ್ರಸಾದ  ಸಾಹು ಬರುತ್ತಿದ್ದಾರೆ ಎಂದು ಹೇಳಿದರು. 

ಏಪ್ರಿಲ್‍,೧೪ ಬೆಳಿಗ್ಗೆ ೧೧ ಗಂಟೆಗೆ ಬಾಪುರಾವ್ ಕಲ್ಯಾಣ ಮಂಟಪದಲ್ಲಿ ವಿಧಾನ ಸಭೆ ಚುನಾವಣೆ ನಿಮಿತ್ಯ ತಾಲೂಕಿನ ೨೫೭ ಬೂತ್ ಗಳ ಬಿಜೆಪಿ ಕಾಯಕರ್ತರ ಸಭೆಯನ್ನು ಕರೆಯಲಾಗಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದರು

-ಮುಕುಂದ ದೇಶಪಾಂಡೆ.
ಬಿಜೆಪಿ ಚುನಾವಣೆ ಉಸ್ತುವಾರಿ ಚಿತ್ತಾಪುರ.

ಚಿತ್ತಾಪೂರ ಮೀಸಲು ಮತಕ್ಷೇತ್ರದ ಅಭ್ಯರ್ಥಿ ಮಣಿಕಂಠ ರಾಠೋಡ್ ಮಾತನಾಡಿ ಮೊದಲು ನನ್ನನ್ನೂ ಅಭ್ಯರ್ಥಿಯಾಗಿ ಘೋಷಿಸಿದ ಬಿಜೆಪಿ ಕೇಂದ್ರ ಮತ್ತು ರಾಜ್ಯ ಮಟ್ಟದ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು ಸಲ್ಲಿಸುತ್ತೇನೆ ಎಂದು ಹೇಳಿ ನಂತರ ಮಾತನಾಡಿ ಬಿಜೆಪಿಯಲ್ಲಿ ಟಿಮ್ ವರ್ಕ್ ನಡೆದಿದೆ. ಪ್ರತಿಯೊಂದೂ ಬೂತ್ ಮಟ್ಟದಿಂದ ಹಿಡಿದು ಕಾರ್ಯಕರ್ತರ ಭರವಸೆಯಿದೆ ಈ ಬಾರಿ ನಾವು ೨೦ ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಬಿಜೆಪಿಯಲ್ಲಿ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯ ಇಲ್ಲ ನಮ್ಮ ಪಕ್ಷದಲ್ಲಿ ನಾವು ಅಣ್ಣತಮ್ಮ ಹಾಗೆ ನಡೆದುಕೊಂಡಿದ್ದೇವೆ. ಮುಂದೆ ಸಹ ನಮ್ಮ ಗುರಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರುವ ಗುರಿಯಾಗಿದೆ. ವಿವಿಧ ಗ್ರಾಮಗಳಲ್ಲಿ ನೂರಾರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕ ಅಧ್ಯಕ್ಷ  ನೀಲಕಂಠರಾವ್ ಪಾಟೀಲ್, ಮಲ್ಲಿಕಾರ್ಜುನ ಪೂಜಾರಿ, ಮಲ್ಲಿಕಾರ್ಜುನ ಎಮ್ಮೆನೋರ, ನಾಗರಾಜ ಹೂಗಾರ, ಆನಂದ ಪಾಟೀಲ, ಸುರೇಶ ರಾಠೋಡ್, ರಾಮದಾಸ ಚವ್ಹಾಣ್, ಮಹೇಶ ಬೆಟಗೇರಿ, ಮಹೇಂದ್ರ ಕೋರಿ, ಸೇರಿದಂತೆ ಇತರರು ಇದ್ದರು.

ಭಾನುವಾರ, ಏಪ್ರಿಲ್ 9, 2023

ಪಾಶಾಮಿಯ್ಯಾ ಖುರೇಷಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ.

ಚಿತ್ತಾಪುರ: ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಾಶಾಮಿಯ್ಯಾ ಖುರೇಷಿ ಅವರು ಶನಿವಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸುಮಾರು 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದು ಪಕ್ಷದ ಸಂಘಟನೆಯಲ್ಲಿ ನಮ್ಮ ಸಮಾಜದವರನ್ನು ಒಗ್ಗೂಡಿಸಿ ಪಕ್ಷವನ್ನು ಬಲಪಡಿಸಿದ್ದೇನೆ ಅದರಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಪ್ರಿಯಾಂಕ್ ಖರ್ಗೆ ಅವರನ್ನು ಗೆಲ್ಲಿಸಲು ನಮ್ಮ ಸಮಾಜದವರನ್ನು ಒಟ್ಟಾರೆಯಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಕೂಲಿ ಕಾರ್ಮಿಕತರಂತೆ ದುಡಿದು ಅಧಿಕಾರಕ್ಕೆ ತಂದಿದ್ದೇವೆ ಆದರೆ ನಮ್ಮನ್ನು ಹಾಗೂ ನಮ್ಮ ಮುಸ್ಲಿಂ ಸಮಾಜಕ್ಕೆ ಕಡೆಗಣಿಸುತ್ತಾ ಬಂದಿದ್ದಾರೆ ಹೀಗಾಗಿ ಕಾಂಗ್ರೆಸ್‌ನಲ್ಲಿ ದುಡಿದವರಿಗೆ ಬೆಲೆಯಿಲ್ಲ ಫೋಜು ಹೊಡೆಯುವವರಿಗೆ ಜಾಸ್ತಿ ಗೌರವವಿದೆ ಎಂದು ಹೇಳಿದರು.

ಕಳೆದ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ಪರವಾಗಿ ಪುರಸಭೆಯ ವ್ಯಾಪ್ತಿಯ ನನ್ನ 12ನೇ ವಾರ್ಡಿನಲ್ಲಿ ಒಂದು ಬಾರಿ 17೦೦ ಮತ್ತು ಇನ್ನೊಂದು ಬಾರಿ 15೦೦ ಹೆಚ್ಚಿನ ಮತಗಳನ್ನು ಪಡೆಯಲು ಶ್ರಮಿಸಿದ್ದೇನೆ, ಇಷ್ಟಾದರೂ ಸಹಿತ ಶಾಸಕ ಪ್ರಿಯಾಂಕ್ ಖರ್ಗೆ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರು ನನಗೆ ಮತ್ತು ನಮ್ಮ ಸಮಾಜಕ್ಕೆ ಯಾವುದೇ ಕೆಲಸ ಕಾರ್ಯಗಳು ನೀಡದೆ ಅನ್ಯಾಯ ಮಾಡಿದ್ದಾರೆ ಆ ಕಾರಣಕ್ಕಾಗಿ ಅಸಮಾಧಾನಗೊಂಡು ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು. ಈಗಾಗಲೇ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಬೆಂಗಳೂರಿನಲ್ಲಿ ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ ಎಂದು ಪಾಶಾಮಿಯ್ಯಾ ಖುರೇಷಿ ತಿಳಿಸಿದರು.

ಮುಂಬರುವ ದಿನಗಳಲ್ಲಿ ಸಮಾಜದ ಮತ್ತು ನನ್ನ ವಾರ್ಡಿನ ಜನರೊಂದಿಗೆ ಚರ್ಚಿಸಿ ಅವರ ಸೂಚನೆ ಮತ್ತು ಮಾರ್ಗದರ್ಶನದ ಮೇರೆಗೆ ಬಿಜೆಪಿ, ಜೆಡಿಎಸ್ ಎನ್ನದೇ ನಮ್ಮ ಸಮಾಜದ ಅಭಿವೃದ್ದಿಗಾಗಿ ನಮ್ಮ ಸಮಾಜದ ಪರವಾಗಿ ಯಾವ ಪಕ್ಷ ನಮ್ಮ ಜೊತೆಗೆ ನಿಲ್ಲುತ್ತದೆಯೋ ಆ ಪಕ್ಷಕ್ಕೆ ನನ್ನ ಮತ್ತು ನಮ್ಮ ಸಮಾಜ ಬೆಂಬಲ ಸೂಚಿಸಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು ಜೊತೆಗೆ ಮಹಿಬೂಬ್ ಖುರೇಷಿ ಇದ್ದರು.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...