ಪೋಸ್ಟ್‌ಗಳು

ಏಪ್ರಿಲ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅಭಿವೃದ್ದಿ ನೋಡಿ ಮತ ಹಾಕಿ: ಪ್ರಿಯಾಂಕ್ ಖರ್ಗೆ.

ಇಮೇಜ್
ಚಿತ್ತಾಪೂರ: ನಮಗೆ ಅಭಿವೃದ್ದಿಯೇ ಮೂಲಮಂತ್ರ, ಚಿತ್ತಾಪುರದಲ್ಲಿ ಒಂದು ಪರಿಪೂರ್ಣ ಸಮಾಜ ನಿರ್ಮಾಣದ ಕನಸು ಇದೆ. ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡ ಮುಖ್ಯವಾಹಿನಿಗೆ ತರುವ ತುಡಿತ ನಮಗಿದೆ. ಯಾವುದೇ ಧರ್ಮ ಹಾಗೂ ಜಾತಿಯ ರಾಜಕೀಯ ಬೇಕಿಲ್ಲ. ಹಾಗಾಗಿ ಸರ್ವಾಂಗೀಣ ಅಭಿವೃದ್ದಿ ನೋಡಿ ನನ್ನಗೆ ಮತ ಹಾಕಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಖರ್ಗೆ ಹೇಳಿದರು.  ಬೆಂಗಳೂರಿನಲ್ಲಿ ಪಕ್ಷ ಸೇರ್ಪಡೆಗೊಂಡ ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಬಾಳ, ಮಾಜಿ ಜಿಪಂ ಸದಸ್ಯ ಅರವಿಂದ ಚವ್ಹಾಣ ಸೇರಿದಂತೆ ಹಲವರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ, ಚಿತ್ತಾಪುರ ಅಭಿವೃದ್ದಿ ಪರ, ಯುವಕರ ಭವಿಷ್ಯದ ಕಾಳಜಿ‌ ಇರುವ ಸ್ವಾಭಿಮಾನಿಗಳು ಕಾಂಗ್ರೆಸ್ ಸೇರುತ್ತಿದ್ದಾರೆ ಹಾಗಾಗಿ ಅವರಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು. ಈ ಸಲದ ಚುನಾವಣೆ ಚಿತ್ತಾಪುರದ ಭವಿಷ್ಯದ ಪ್ರಶ್ನೆಯಾಗಿದೆ. ಬಿಜೆಪಿ ಅಭ್ಯರ್ಥಿ ಪರ ಯಾವೊಬ್ಬ ನಾಯಕರು ಪ್ರಚಾರಕ್ಕೆ ಬರುತ್ತಿಲ್ಲ. ಬಿಜೆಪಿಯಲ್ಲಿರುವ ಸ್ವಾಭಿಮಾನಿಗಳು ಕಾಂಗ್ರೆಸ್ ಸೇರುತ್ತಿದ್ದಾರೆ ಇಲ್ಲವೇ ತಟಸ್ಥರಾಗಿದ್ದಾರೆ ಹಾಗಾಗಿ ಕೇವಲ ಎನ್ ರವಿಕುಮಾರ ಮಾತ್ರ ಪ್ರಚಾರಕ್ಕೆ ಹೋಗುತ್ತಿದ್ದಾರೆ. ಬಸವ ತತ್ವ, ಅಂಬಿಗರ ಚೌಡಯ್ಯನವರ ತತ್ವ ಆದರ್ಶ, ಸಂವಿಧಾನದ ಪರಿಪಾಲನೆ ಹಾಗೂ ಅಭಿವೃದ್ಧಿ ಪರ ಚಿಂತನೆ ಇರುವ ವ್ಯಕ್ತಿ ಚುನಾವ...

ಚಿತ್ತಾಪುರ ಜನರ ಚಿತ್ತ ಮಣಿಕಂಠನತ್ತ ಇರಲಿ: ಸಿಎಂ ಬೊಮ್ಮಾಯಿ.

ಇಮೇಜ್
  ಖರ್ಗೆ ಕ್ಷೇತ್ರದಲ್ಲಿ ಸಿಎಂ  ಬೊಮ್ಮಾಯಿ       ಭರ್ಜರಿ ರೋಡ್ ಶೋ. ಚಿತ್ತಾಪುರ: ಇಲ್ಲಿ ನಿಮ್ಮೆಲ್ಲರ ಪ್ರೋತ್ಸಾಹ ನೋಡಿದರೆ ನನಗನಿಸುತ್ತದೆ ನಿಮ್ಮೆಲ್ಲರ ಚಿತ್ತ ಮಣಿಕಂಠನತ್ತ ಇರಲಿ. ಬಿಜೆಪಿ ಪಕ್ಷವನ್ನು ಗೆಲ್ಲಿಸಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಪಟ್ಟಣದ ಅಕ್ಕಮಹಾದೇವಿ ದೇವಸ್ಥಾನದಿಂದ ಪ್ರಮುಖ ಬೀದಿಯಲ್ಲಿ ರೋಡ್ ಶೋ ಬಂದು ಭುವನೇಶ್ವರಿ ವೃತ್ತದಲ್ಲಿ ಮಾತನಾಡಿದ ಅವರು ನಾನು ಮುಖ್ಯಮಂತ್ರಿ ಆದ ಮೇಲೆ ಅಭಿವೃದ್ಧಿಗೆ ಸಾವಿರಾರು ಕೋಟಿ ಬಿಡುಗಡೆ ಮಾಡಿರುವೆ ಅದರಲ್ಲೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂಪಾಯಿ ಕೊಟ್ಟಿದ್ದೇನೆ. ಅದೇ ಕಾಂಗ್ರೆಸ್ ಸರ್ಕಾರ ಇದ್ದಾಗ ಒಂದು ಕೋಟಿ. ನೀಡಿದೆ ನೀವೇ ವಿಚಾರ ಮಾಡಿ ಎಂದು ಹೇಳಿದರು. ಕಾಂಗ್ರೆಸ್ ನವರು ಮತದಾರರಿಗೆ ಗ್ಯಾರಂಟಿಗಳನ್ನು ನೀಡಿದ್ದಾರೆ ಆದರೆ ಆ ಗ್ಯಾರೆಂಟಿಗಳು  ಮೇ ಹತ್ತರವರೆಗೆ ಮಾತ್ರ ಅವರ ಗ್ಯಾರಂಟಿಗಳು ನಂತರ ಗಳಗಂಟಿ ಗಳಗಂಟಿ ಎಂದು ಟೀಕೆ ಮಾಡಿದರು. ಚಿತ್ತಾಪುರ ನಲ್ಲಿ ಕಾಂಗ್ರೆಸ್ ಏನ್ ಗ್ಯಾರಂಟಿ ನೀಡಿದೆ ಅದಕ್ಕೆ ಪ್ರಧಾನಿಯವರು ಹೇಳಿದ್ದಾರೆ ಬ್ರಷ್ಟಾಚಾರವೇ ಅವರ ಗ್ಯಾರೆಂಟಿ ಅದು ಇನ್ನು ಮುಂದೆ ನಿಂತು ಹೋಗುತ್ತದೆ. ಮೇ 13ಕ್ಕೆ ಚಿತ್ತಾಪುರದಲ್ಲಿ ಗ್ಯಾರಂಟಿ ಇರುವುದು ಮಣಿಕಂಠ ರಾಠೋಡ್ ಒಬ್ಬನೇ ಎಂದು ಹೇಳಿದರು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ ಮೋದಿ ಸರ್ಕಾರ ...

ದೇಶದ ಸುರಕ್ಷತೆಯಲ್ಲಿ ಮೊದಿ ಸೇವೆ ಅಗಾಧ: ಎಮ್ಮೆನೋರ.

ಇಮೇಜ್
ಚಿತ್ತಾಪೂರ: ಭಾರತೀಯ ಜನಾತಾ ಪಕ್ಷ ಮತ್ತು ಕಾಂಗ್ರೆಸ್ ಪಕ್ಷ ಬಗ್ಗೆ ಯೋಚಿಸಿದಾಗ ಬಿಜೆಪಿ ಪಕ್ಷ ವಿಭಿನ್ನವಾದ ಪಕ್ಷ, ಏಕೆಂದರೆ ದೇಶದ ಪ್ರಧಾನಿ ನರೇಂದ್ರ ಮೊದಿ ಅವರು ದೇಶ ಅಭಿವೃದ್ಧಿ, ದೇಶ ಸುರಕ್ಷತೆಗಾಗಿ ಹಗಲು ಇರುಳು ಅನ್ನದೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ಓಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ ಹೇಳಿದರು. ತಾಲ್ಲೂಕಿನ ತರ್ಕಸಪೇಟನ ಪ್ರಚಾರದಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷ ಸಣ್ಣ-ಸಣ್ಣ ಸಮುದಾಯಗಳು ಸಹ ಸಮಾಜದ  ಮುಖ್ಯವಾಹಿನಿಗೆ ಬರಬೇಕೆಂದು ಅನೇಕ ನಿಗಮ ಮಂಡಳಿಗಳನ್ನು ಮಾಡಿದ್ದಾರೆ. ದೇಶದ ಪ್ರಗತಿಗಾಗಿ ಹಗಲು ರಾತ್ರಿ ಎನ್ನದೆ ದೇಶದ ಪ್ರಧಾನಿ ಮತ್ತು ರಾಜ್ಯದ ಮುಖ್ಯಮಂತ್ರಿ ಅವರು ಜನ ಸೇವೆಯಲ್ಲಿ ತಮ್ಮ‌ನ್ನು ತಾವು ತೊಡಗಿಸಿಕೊಂಡಿದ್ದಾರೆ. ಪಿಎಂ ಕಿಸಾನ್ ಯೋಜನೆ ಅಡ್ಡಿಯಲ್ಲಿ ರೈತರಿಗೆ ನೇರವಾಗಿ 24 ಲಕ್ಷ ಕೋಟಿ ರೂ.ಹಣ ಜಮಾಡುವ ಕೆಲಸ ಮಾಡಿದ್ದಾರೆ.  ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ  ಕೆಲಸ ಮಾಡಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ಆದ್ರೆ ಹೇಳಿಕೊಳ್ಳುವಷ್ಟು ಕೆಲಸ ಆಗಿಲ್ಲ. ರೈತರ ಸಲುವಾಗಿ ಹಲವು ಕೆರೆ ತುಂಬುವ ಬೇಡಿಕೆಯನ್ನು ಕಳೆದ ಹತ್ತು ವರ್ಷದಿಂದ ಬಹು ಮುಖ್ಯ ಬೇಡಿಕೆಯಾಗಿತ್ತು. ಅದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗುತ್ತಿತು. ಆದ್ರೆ ಇನ್ನೂ ಆ ಬೇಡಿಕೆ  ಈಡೇರಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು...

ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಬಿರುಸಿನ ಪ್ರಚಾರ.

ಇಮೇಜ್
ಚಿತ್ತಾಪೂರ: ಈ ಬಾರಿ ಮತ್ತೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮ್ಮ ಸರ್ಕಾರದಿಂದ ಮತ ಕ್ಷೇತ್ರದಲ್ಲಿ  ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ ಜೊತೆಗೆ ನಾನೂ ಸಹ ಇನ್ನೂ ಮುಂದೆ ಹೆಚ್ಚಿನ ಕೆಲಸಗಳು ಮಾಡುವೆ ಆದ್ದರಿಂದ ಬಿಜೆಪಿ ಅಭ್ಯರ್ಥಿಯಾದ ನನಗೆ ಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಮಣಿಕಂಠ ರಾಠೋಡ ಮನವಿ ಮಾಡಿದರು. ತಾಲ್ಲೂಕಿನ ಚೌಕಂಡ್ಡಿ ತಾಂಡಾದ ಮತ ಯಾಚನೆಯಲ್ಲಿ ಮಾತನಾಡಿದ ಅವರು  ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷ ನನಗೆ ಸೇವೆ ಮಾಡಲು ಅವಕಾಶ ನೀಡಿದೆ, ದೇಶದ ಪ್ರಧಾನಿ ಅವರು ಕಲಬುರಗಿ ಜಿಲ್ಲೆಗೆ ಬಂದಾಗ, ಬಂಜಾರ ಸಮಾಜದ ಒಬ್ಬ, ಮಗ  ದೆಹಲಿಯಲ್ಲಿದ್ದಾರೆ. ನೀವು ಯಾವುದೇ ರೀತಿಯ ಚಿಂತೆ ಮಾಡುವ ಅಗತ್ಯವಿಲ್ಲ. ಎಂದು ಹೇಳಿದರು. ಈಗ ನನಗೆ ರಾಜ್ಯದಲ್ಲಿ ವಿಧಾನಸೌಧ ಪ್ರವೇಶ ಮಾಡಲು ಅವಕಾಶ ನೀಡುವ ಮೂಲಕ ಎಲ್ಲಾರೂ ನನಗೆ ಮತ ನೀಡಿ ಅರ್ಶಿವಾದ ಮಾಡಬೇಕು ಎಂದರು. ನಾನು ಸೇವಲಾಲ್ ಮಹಾರಾಜರ ಆದರ್ಶ ಮತ್ತು ತತ್ವ ಸಿದ್ಧಾಂತಗಳ ಮೇಲೆ ನಡೆಯುತ್ತಿರುವೆ ನಮ್ಮ ಸಮುದಾಯದವರು ಕೆಲಸ ಮಾಡಲು ಮುಂಬಯಿ ಬೆಂಗಳೂರು, ಪುಣೆ, ಹೋಗುವ ಅಗತ್ಯವಿಲ್ಲ ನಾನು ನಮ್ಮ ಯುವಕರಿಗೆ ನಮ್ಮ ತಾಲೂಕಿನಲ್ಲಿ ಜನರಿಗೆ ಉದ್ಯೋಗ ದೊರೆಯುವ ಕೆಲಸ ಮಾಡುತ್ತೇನೆ . ನಿಮ್ಮ ಗ್ರಾಮಗಳಿಗೆ, ತಾಂಡಗಳಿಗೆ, ಕುಡಿಯುವ ನೀರು, ಶೌಚಾಲಯ, ಮೂಲಭೂತ ಸೌಕರ್ಯಗಳನ್ನು  ನೀಡುವ ಪ್ರಮಾಣಿಕ ಕೆಲಸ ಮಾಡುತ್ತೇನೆ ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ...

ಇಂದು ಐನಾಪೂರ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆ.

ಇಮೇಜ್
ಚಿತ್ತಾಪೂರ: ಕೂಲಿ ಸಮಾಜದ ಯುವ ಮುಖಂಡ ಸೋಮಶೇಖರ್ ಐನಾಪುರ  ಮಲ್ಕೂಡ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ತಮ್ಮ ಇತರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ತಿಳಿಸಿದ್ದಾರೆ.   ಕಳೆದ ಸುಮಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದರು ಸಹ ಪಕ್ಷದಲ್ಲಿ ಯಾವುದೇ ಸ್ಥಾನಮಾನ ಇಲ್ಲ ಮತ್ತು ಮಲ್ಕೋಡು ಗ್ರಾಮದಲ್ಲಿ ನಾವು ಕಾಂಗ್ರೆಸ್ ಪಕ್ಷದಿಂದ ರಾಜಕೀಯವಾಗಿ ಬೆಳೆಯುವುದು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸಹಿಸಲಾಗುತ್ತಿಲ್ಲ. ಕಿವಿಯಾರೆ ಅವರ ಮಾತುಗಳು ಕೇಳಿ ನನ್ನ ಮನಸ್ಸಿಗೆ ತುಂಬಾ ನೋವು ಉಂಟಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ. 

ಮುಸ್ಲಿಂರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ.

ಇಮೇಜ್
ಚಿತ್ತಾಪೂರ:  ಮುಸ್ಲಿಂ ಸಮುದಾಯದ ಹಿರಿಯರು ಮತ್ತು ಯುವಕರು ಕಾಂಗ್ರೆಸ್ ಪಕ್ಷ ತೊರೆದು ಹಾಜಿ ಮಲನ್, ಖಸೀಂ ಸಾಹೇಬ್ ಬಾಬಾ ಅವರ ನೇತ್ರತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಸಾವಿರಾರು ಸಂಖ್ಯೆಯ ಮುಸ್ಲಿಂ ಜನರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಬಿಜೆಪಿ ಪಕ್ಷದ ಓಬಿಸಿ ಮೋರ್ಚ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ ಮಾತನಾಡಿ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಮುಳುಗಿದೆ. ಮುಳುಗುವ ಹಡಗಿನಲ್ಲಿ ಪ್ರಯಾಣಿಕರು ಸಂಚಾರ ಮಾಡಿದರೇ ಅಪಾಯ ಕಟ್ಟಿಟ್ಟಬುತ್ತಿ. ಹೀಗಾಗಿ ಚಿತ್ತಾಪುರ ಕ್ಷೇತ್ರದಲ್ಲಿ 2023ಕ್ಕೆ ಕಾಂಗ್ರೆಸ್‌ ಪಕ್ಷದ ಮುಳುಗಡೆ ಖಚಿತವಾಗಿದೆ ಎಂದರು. ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಮಿಂಚಿನ ಸಂಚಾರ ನಡೆಸಿದ್ದಾರೆ. ಚಿತ್ತಾಪುರ ಕ್ಷೇತ್ರದ ಪ್ರತಿ ಹಳ್ಳಿಯ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಬೂತ್‌ ಮಟ್ಟದ ಸಭೆಗಳನ್ನ ಈಗಾಗಲೇ ನಡೆಸಿದ್ದಾರೆ. ಬೂತ್‌ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಮೀಣ ಮತದಾರರ ವಿಶ್ವಾಸಗಳಿಸಲು ಹಗಲುರಾತ್ರಿ ಎನ್ನದೇ  ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠ...

ಭ್ರಷ್ಟ ಅಧಿಕಾರಿಗಳಿಗೆ ಜೈಲಿಗೆ ಹಾಕಿಸುವೆ: ಪ್ರಿಯಾಂಕ್ ಖರ್ಗೆ.

ಇಮೇಜ್
ಚಿತ್ತಾಪೂರ: ಕೆಕೆಆರ್ ಡಿಬಿಯಲ್ಲಿ ಅವ್ಯಾಹತವಾದ ಭ್ರಷ್ಟಾಚಾರ ನಡೆದಿದೆ. ಜನ ಸಾಮಾನ್ಯರ ದುಡ್ಡು ಲೂಟಿ ಮಾಡಿದ ಬ್ರಷ್ಟ ಅಧಿಕಾರಿಗಳನ್ನು ನಾವು ಅಧಿಕಾರಕ್ಕೆ ಬಂದ ನಂತರ ಜೈಲಿಗೆ ಕಳಿಸುತ್ತೇವೆ ಎಂದು ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಹೇಳಿದರು. ಪಟ್ಟಣದ ಸೇಂದಿ ಡಿಪೋ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕ್ಷೇತ್ರದ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕ್ ಖರ್ಗೆ ಅವರ  ನಾಮಪತ್ರ ಸಲ್ಲಿಕೆಯಾ ಬೃಹತ ಜನ ಆಶೀರ್ವಾದ ಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಪಕ್ಷ ಎಷ್ಟೇ ತಿಪ್ಪರಲಾಗ ಹಾಕಿದರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆ ಇಲ್ಲ. ನಮ್ಮಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇದ್ದಾರೆ. ಬಿಜೆಪಿಯಲ್ಲಿ ಯಾರು ಇದ್ದಾರೆ? ಅಲ್ಲೇ ಇದ್ದ ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿಯನ್ನು ಕೀಳಾಗಿ ನಡೆಸಿಕೊಂಡಿದ್ದರಿಂದ ಅವರಿಬ್ಬರು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಪಾಪ, ಯಡಿಯೂರಪ್ಪಗೆ ಕಣ್ಣೀರು ಹಾಕಿಸಿ‌ ಸಿಎಂ ಹುದ್ದೆಯಿಂದ ಕೆಳಗಿಳಿಸಲಾಯಿತು. ಹೀಗಾಗಿ ಯಾವ ನಾಯಕರು ಅಲ್ಲಿದ್ದಾರೆ! ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರದ ಆಡಳಿತದಲ್ಲಿ ರೈತರ ರಸಗೊಬ್ಬರ, ಪೆಟ್ರೋಲ್, ಅಡುಗೆ ಅನಿಲ‌ ಬೆಲೆ ದುಬಾರಿಯಾಗಿದೆ. ಪ್ರತಿ‌ ಕುಟುಂಬದ ...

ಕೆಪಿಸಿಸಿ ಅಧ್ಯಕ್ಷರಿಂದ ಬಿ ಫಾರಂ ಸ್ವೀಕರಿಸಿದ ಪ್ರಿಯಾಂಕ ಖರ್ಗೆ.

ಇಮೇಜ್
ಬೆಂಗಳೂರ: 2023ರ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರಿಂದ ಬಿ ಫಾರಂ ಅನ್ನು ಸ್ವೀಕರಿಸಿದರು. ನಂತರ ಮಾತನಾಡಿದ ಪ್ರಿಯಾಂಕ ಖರ್ಗೆ ಅವರು ಚಿತ್ತಾಪುರ ಜನತೆಯ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸದಾ ನನ್ನ ಬೆನ್ನೆಲುಬಾಗಿ ನಿಂತಿರುವ ಚಿತ್ತಾಪುರದ ಜನತೆಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಚಿತ್ತಾಪುರದ ಅಭಿವೃದ್ಧಿಯ ಹಾದಿಯಲ್ಲಿ ಜೊತೆಯಾಗಿರುವ ಚಿತ್ತಾಪುರದ ಪ್ರಜ್ಞಾವಂತ ಮಹಾಜನತೆ ಮತ್ತೊಮ್ಮೆ ನಿಮ್ಮ ಅತ್ಯಮೂಲ್ಯವಾದ ಮತವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಮೂಲಕ ಮತ್ತೊಮ್ಮೆ ನಿಮ್ಮ ಸೇವೆ ಮಾಡುವ ಅವಕಾಶ ನೀಡಬೇಕು ಮತಕ್ಷೇತ್ರದ ಜನರಲ್ಲಿ ವಿನಂತಿಸಿಕೊಂಡರು.

ಚಿತ್ತಾಪೂರಲ್ಲಿ ಕಮಲ ಅರಳಿಸುವುದು ಬಿಜೆಪಿ ಮುಖ್ಯ ಉದ್ದೇಶ.

ಇಮೇಜ್
ಚಿತ್ತಾಪೂರ: ವಿಧಾನ ಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕ ಖರ್ಗೆ ಅವರನ್ನು ಸೋಲಿಸಿ ಚಿತ್ತಾಪುರನಲ್ಲಿ ಕಮಲ ಅರಳಿಸುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಮುಕುಂದ ದೇಶಪಾಂಡೆ ಹೇಳಿದರು. ಪಟ್ಟಣದ ಬಜಾಜ್ ಕಾಂಪ್ಲೆಕ್ಸ್ ಬಿಜೆಪಿ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಕುರಿತು ಮಾತನಾಡಿದ ಅವರು ಬಿಜೆಪಿಯ ಎಲ್ಲಾ ಅಕ್ಷಾಂಕ್ಷಿಗಳನ್ನು ಕರೆದು ಎಲ್ಲಾರನ್ನು ಸಮಾಧಾನ ಮಾಡುವ ಕೆಲಸ ನಾವು ಮಾಡುತ್ತಿದ್ದೇವೆ ಈ ಚುನಾವಣೆಯಲ್ಲಿ ಶತಯಗತಯಾ ಬಿಜೆಪಿಯನ್ನು ಗೆಲ್ಲಲೇಬೇಕು ಹೀಗಾಗಿ ವಿಭಿನ್ನ ರೀತಿಯಾಗಿ ಪ್ರಚಾರವನ್ನು ಪಕ್ಷ ಸಂಘಟನೆ ಮಾಡಲು ಸಿದ್ಧವಾಗಿದೆ. ಭಾರತೀಯ ಜನತಾ ಪಕ್ಷ ಚುನಾವಣೆಗೆ ಅಷ್ಟೇ ಸಭೆ ಪ್ರಚಾರ ಮಾಡುವುದಿಲ್ಲ.  ನಮ್ಮ ಬಿಜೆಪಿ ಸರ್ಕಾರದ ಉದ್ದೇಶ ಸಮಾಜದ ಕಟ್ಟಕಡೆಯ ಮನುಷ್ಯಗೂ ನಮ್ಮ ಸರ್ಕಾರದ ಯೋಜನೆಗಳನ್ನು ಕಲ್ಪಿಸುವ ಉದ್ದೇಶ ನಮ್ಮ ಪ್ರಧಾನಿ ಮತ್ತು ಪಕ್ಷದಾಗಿದೆ ಎಂದರು. ನಮ್ಮ ತಾಲೂಕಿನಲ್ಲಿ ಬಂಡಾಯ ಅಂತ ಇಲ್ಲ. ಇದ್ದರೆ ಅವರನ್ನು ನಮ್ಮ ರಾಜ್ಯ ನಾಯಕರು ಅಸಮಾಧಾನ ಇರುವರರನ್ನು ಸಮಾಧಾನ ಪಡೆಸುವ ಕೆಲಸ ಮಾಡುತ್ತಾರೆ ಯಾರು ಸಹ ಪಕ್ಷವನ್ನು ತೊರೆಯುವ ಕೆಲಸ ಮಾಡಲ್ಲ ಎಂಬ ವಿಶ್ವಾಸವಿದೆ. ಹಾಗೂ ಝಾರ್ಖಂಡನ್ ರಾಜ್ಯ ಸಭೆ ಸದಸ್ಯ ಚಿತ್ತಾಪೂರಗೆ ಮತಕ್ಷೇತ್ರದ ಉಸ್ತುವಾರಿಯಾಗಿ ಅದಿತ್ಯ ಪ್ರಸಾದ  ಸಾಹು ಬರುತ್ತಿದ್ದಾರೆ ಎಂದು ಹೇಳಿದರು.  ...

ಪಾಶಾಮಿಯ್ಯಾ ಖುರೇಷಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ.

ಇಮೇಜ್
ಚಿತ್ತಾಪುರ: ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಾಶಾಮಿಯ್ಯಾ ಖುರೇಷಿ ಅವರು ಶನಿವಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸುಮಾರು 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದು ಪಕ್ಷದ ಸಂಘಟನೆಯಲ್ಲಿ ನಮ್ಮ ಸಮಾಜದವರನ್ನು ಒಗ್ಗೂಡಿಸಿ ಪಕ್ಷವನ್ನು ಬಲಪಡಿಸಿದ್ದೇನೆ ಅದರಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಪ್ರಿಯಾಂಕ್ ಖರ್ಗೆ ಅವರನ್ನು ಗೆಲ್ಲಿಸಲು ನಮ್ಮ ಸಮಾಜದವರನ್ನು ಒಟ್ಟಾರೆಯಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಕೂಲಿ ಕಾರ್ಮಿಕತರಂತೆ ದುಡಿದು ಅಧಿಕಾರಕ್ಕೆ ತಂದಿದ್ದೇವೆ ಆದರೆ ನಮ್ಮನ್ನು ಹಾಗೂ ನಮ್ಮ ಮುಸ್ಲಿಂ ಸಮಾಜಕ್ಕೆ ಕಡೆಗಣಿಸುತ್ತಾ ಬಂದಿದ್ದಾರೆ ಹೀಗಾಗಿ ಕಾಂಗ್ರೆಸ್‌ನಲ್ಲಿ ದುಡಿದವರಿಗೆ ಬೆಲೆಯಿಲ್ಲ ಫೋಜು ಹೊಡೆಯುವವರಿಗೆ ಜಾಸ್ತಿ ಗೌರವವಿದೆ ಎಂದು ಹೇಳಿದರು. ಕಳೆದ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ಪರವಾಗಿ ಪುರಸಭೆಯ ವ್ಯಾಪ್ತಿಯ ನನ್ನ 12ನೇ ವಾರ್ಡಿನಲ್ಲಿ ಒಂದು ಬಾರಿ 17೦೦ ಮತ್ತು ಇನ್ನೊಂದು ಬಾರಿ 15೦೦ ಹೆಚ್ಚಿನ ಮತಗಳನ್ನು ಪಡೆಯಲು ಶ್ರಮಿಸಿದ್ದೇನೆ, ಇಷ್ಟಾದರೂ ಸಹಿತ ಶಾಸಕ ಪ್ರಿಯಾಂಕ್ ಖರ್ಗೆ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರು ನನಗೆ ಮತ್ತು ನಮ್ಮ...