ಕೆಪಿಸಿಸಿ ಅಧ್ಯಕ್ಷರಿಂದ ಬಿ ಫಾರಂ ಸ್ವೀಕರಿಸಿದ ಪ್ರಿಯಾಂಕ ಖರ್ಗೆ.

ಬೆಂಗಳೂರ: 2023ರ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರಿಂದ ಬಿ ಫಾರಂ ಅನ್ನು ಸ್ವೀಕರಿಸಿದರು.

ನಂತರ ಮಾತನಾಡಿದ ಪ್ರಿಯಾಂಕ ಖರ್ಗೆ ಅವರು ಚಿತ್ತಾಪುರ ಜನತೆಯ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸದಾ ನನ್ನ ಬೆನ್ನೆಲುಬಾಗಿ ನಿಂತಿರುವ ಚಿತ್ತಾಪುರದ ಜನತೆಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.

ಚಿತ್ತಾಪುರದ ಅಭಿವೃದ್ಧಿಯ ಹಾದಿಯಲ್ಲಿ ಜೊತೆಯಾಗಿರುವ ಚಿತ್ತಾಪುರದ ಪ್ರಜ್ಞಾವಂತ ಮಹಾಜನತೆ ಮತ್ತೊಮ್ಮೆ ನಿಮ್ಮ ಅತ್ಯಮೂಲ್ಯವಾದ ಮತವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಮೂಲಕ ಮತ್ತೊಮ್ಮೆ ನಿಮ್ಮ ಸೇವೆ ಮಾಡುವ ಅವಕಾಶ ನೀಡಬೇಕು ಮತಕ್ಷೇತ್ರದ ಜನರಲ್ಲಿ ವಿನಂತಿಸಿಕೊಂಡರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.