ಸೋಮವಾರ, ಮೇ 1, 2023

ಬಿಜೆಪಿಯಿಂದ ಕೋಲಿ,ಕಬ್ಬಲಿಗ ಸಮಾಜಕ್ಕೆ ಅನ್ಯಾಯ: ಕಮಕನೂರ.

ಚಿತ್ತಾಪೂರ: ಕೋಲಿ,ಕಬ್ಬಲಿಗ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡುತ್ತೇವೆ ಎಂದು ಬಿಜೆಪಿ ಸರ್ಕಾರ ಮಾತು ಕೊಟ್ಟಿತ್ತು ಅದನ್ನು ತಪ್ಪಿದ್ದಾರೆ ಕೋಲಿ ಕಬ್ಬಲಿಗ ಸಮಾಜವನ್ನು ಎಸ್ ಟಿಗೆ ಸೇರಿಸದೆ ಬಿಜೆಪಿ ಸರ್ಕಾರ ಅನ್ಯಾಯ ಮಾಡಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.

ತಾಲ್ಲೂಕಿನ ಮತಕ್ಷೇತ್ರದ ಹೊಸೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕ್ ಖರ್ಗೇ ಅವರ ಪರವಾಗಿ ಪ್ರಚಾರ ನಡೆಸಿ ಮಾತನಾಡಿದ ಅವರು ಕೇಂದ್ರ,ರಾಜ್ಯ ಸರ್ಕಾರ ಪತನ ಆಗಬೇಕು ಆಗ ನಮ್ಮ ಕೋಲಿ, ಕಬ್ಬಲಿಗ ಸಮಾಜಕ್ಕೆ ಎಸ್ ಟಿ ಮಿಸಲಾತಿ ಸಿಗುತ್ತದೆ.ಇಡಿ ಕರ್ನಾಟಕ ಸರ್ಕಾರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರಿಗೆ ಸೋಲಿಸುವ ಹುನ್ನಾರ ನಡೆಸುತ್ತಿದ್ದಾರೆ ಹೀಗಾಗಿ ಅವರಿಗೆ ಈ ಬಾರಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅವರ ಕೈ ಬಲಿಷ್ಠ ಪಡಿಸೋಣ ಎಂದರು.

ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸರ್ಕಾರ ಬಂದೆ ಬರುತ್ತೆ, ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ಕೋಲಿ ಸಮಾಜ ಎಸ್ಟಿಗೆ ಸೇರ್ಪಡೆ ಆಗುತ್ತೆ ಎಂದು ಭವಿಷ್ಯ ನುಡಿದರು. 

ಈ ಸಂದರ್ಭದಲ್ಲಿ ವಿಶ್ವನಾಥ ಪಾಟೀಲ ಹೆಬ್ಬಾಳ, ಜಗಣ್ಣಗೌಡ ರಾಮತೀರ್ಥ, ಪ್ರಭುರಾಜ ಕಾಂತಾ, ಶಾಂತಣ್ಣ ಚಾಳಿಕಾರ, ಶರಣಪ್ಪ ನಾಟೀಕಾರ್, ರಾಮಲಿಂಗ ಬಾನರ್, ಶಿವೂ ಸುಲ್ತನಪೂರ, ಭೀಮಣ್ಣ ಶಿಭಾ, ಸಾಬಣ್ಣ ಇಟಗಾ, ಭೀಮಣ್ಣ ಹೋತಿನಮಡಿ, ಸಾಯಬಗೌಡ, ಶಾಂತಪ್ಫ, ಸೇರಿದಂತೆ ಅನೇಕ ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...