ಅಕ್ರಮದಲ್ಲಿ ತೊಡಗುವವರಿಗೆ ಜೈಲು‌ಭಾಗ್ಯ: ಪ್ರಿಯಾಂಕ್ ಖರ್ಗೆ.

ಚಿತ್ತಾಪೂರ: ನಾನು ಗೆದ್ದು ಬಂದ ಮೇಲೆ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದವರಿಗೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗವವರಿಗೆ ಜೈಲ್ ಗೆ ಕಳಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅಬ್ಬರಿಸಿದರು‌.

ತಾಲ್ಲೂಕಿನ ಮಲಗಾಣ, ಕಣಸೂರ, ಅಶೋಕ ನಗರದಲ್ಲಿ ಚುನಾವಣೆಯ ಪ್ರಚಾರ ಸಭೆ ಕುರಿತು ಮಾತನಾಡಿದ ಅವರು ಬಿಜೆಪಿ ಅಭ್ಯರ್ಥಿ ಯುವಕರನ್ನು ದಾರಿ ತಪ್ಪಿಸುತ್ತಿದ್ದಾನೆ. ನಿಮಗೆ ಶಿಕ್ಷಣ, ಉದ್ಯೋಗ ಹಾಗೂ ನೆಮ್ಮದಿಯ ಜೀವನ ಬೇಕಾದರೆ ನನಗೆ ಮತನೀಡಿ. ಢಾಬಾ, ಜೈಲು ಹಾಗೂ ಬೇಲು ಅಂತ ಅಲೆದಾಡಬೇಕಾದರೆ ಮಣಿಕಂಠನಿಗೆ ಮತ ಹಾಕಿ ಎಂದರು.
ಖರ್ಗೆ ಹಾಗೂ ಕುಟುಂಬವನ್ನು ಸಾಫ್ ಮಾಡುತ್ತೇನೆ ಅಂತ ಅವನು ಹೇಳಿದ ಅಡಿಯೋ ವೈರಲ್ ಆಗಿದೆ. ನಮಗೆ ಸಾಫ್ ಮಾಡಲು ಬಂದರೆ ನನ್ನ ಕ್ಷೇತ್ರದ ಜನರು ಸುಮ್ಮನೆ ಇರುತ್ತೀರಾ ? ಎಂದು ಪ್ರಶ್ನಿಸಿದರು. ನಾನು ದಾದಾಗಿರಿ ಮಾಡಲು ಶುರು ಮಾಡಿದರೆ ಕಾಂಗ್ರೆಸ್ ನವರು ಮನೆಯಿಂದ ಹೊರಗೆ ಬರಲು ಆಗುವುದಿಲ್ಲ ಅಂತ ಮರಗೋಳದಲ್ಲಿ ಹೇಳಿದ್ದಾನಂತೆ, ಆ ಪಾರನಿಗೆ ಗೊತ್ತಿರಲಿ ಚಿತ್ತಾಪುರದ ಈ ಮೊಮ್ಮಗ‌ ಇನ್ನೂ ‌ಜೀವಂತವಾಗಿದ್ದಾನೆ  ಎಂದು ಟಕ್ಕರ್ ಕೊಟ್ಟರು.

ಈ ಸಂದರ್ಭದಲ್ಲಿ ಶಿವಾನಂದ ಪಾಟೀಲ್, ಸುನೀಲ ದೊಡ್ಮನಿ, ಪ್ರವೀಣ ನಾಮದಾರ್, ಶಂಭುಲಿಂಗ ಗುಂಡಗುರ್ತಿ, ಶರಣಗೌಡ, ಸುಧಾಕರ ಪಾಟೀಲ್, ಆನಂದ ಹೊಸಮನಿ, ಪೃಥ್ವಿ ನಾಮದಾರ್, ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.