ಪೋಸ್ಟ್‌ಗಳು

ಆಗಸ್ಟ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಇಮೇಜ್
ಚಿತ್ತಾಪುರ: ತಾಲೂಕನ್ನು ಸಮಗ್ರ ಅಭಿವೃದ್ದಿಗೊಳಿಸಲು ಮುಂದಿನ ಐದು ವರ್ಷಗಳ ಅವಧಿಗಾಗಿ ನೂತನ ಯೋಜನೆಗಳ ಬಗ್ಗೆ ಪರಿಕಲ್ಪನೆ ಹೊಂದಿ‌ ಆ ಬಗ್ಗೆ ವರದಿ ತಯಾರಿಸುವಂತೆ ಕಳೆದ ಸಭೆಯಲ್ಲಿ ಸೂಚಿಸಿದ್ದೆ, ಆದರೆ‌ ಸರ್ಕಾರದ‌ ಬಹುತೇಕ‌ ಇಲಾಖೆಗಳ ಅಧಿಕಾರಿಗಳು ಆ ಬಗ್ಗೆ ಗಮನ ಹರಿಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.  ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹಳೆ ಕಲ್ಯಾಣಿಗಳ ಪುನಶ್ಚೇತನಗೊಳಿಸುವುದು ಸೇರಿದಂತೆ ತಾಲೂಕಿನ ಜಲಮೂಲಗಳ ಸಂರಕ್ಷಣೆಗಾಗಿ ಯೋಜನೆ ಹಾಕಿಕೊಳ್ಳಲಾಗಿದ್ದು, ಸಣ್ಣ, ಬೃಹತ್ ನೀರಾವರಿ ಇಲಾಖೆ, ಕೆಬಿಜೆಎನ್‌ಎಲ್, ಕೆಎನ್ ಎನ್ ಎಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗಳಯ ಜಂಟಿಯಾಗಿ ನೀಲನಕ್ಷೆ ತಯಾರಿಸಿ ಎಂದು ಸಚಿವರು ಸೂಚಿಸಿದರು. ಸನ್ನತಿ ಏತ ನೀರಾವರಿ ಯೋಜನೆಯಡಿಯಲ್ಲಿ‌ 16,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈವರೆಗೆ 11,830 ಹೆಕ್ಟರ್ ನೀರಾವರಿ ಹೊಂದಲಾಗಿದ್ದು ಸ್ಥಳೀಯ ರೈತರ ಸಹಕಾರದಿಂದಾಗಿ ಬಾಕಿ‌ ಇರುವ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಗಿಲ್ಲ ಎಂದು ಕೆಎನ್ ಎನ್ ಎಲ್ ಅಧಿಕಾರಿಗಳು ತಿಳಿಸಿದರು. ಪುನರ್ವಸತಿ ಕುರಿತಂತೆ ಯಾವ ಕ್ರಮ‌ಕೈಗೊಳ್ಳಲಾಗಿ...

ಸಚಿವರ ಮಾತಿಗೆ ಬೆಲೆ ಕೊಡದ ಅಬಕಾರಿ ಇಲಾಖೆ.

ಇಮೇಜ್
ಹಳ್ಳಿ-ಗಲ್ಲಿಗಳಲ್ಲಿ ಮದ್ಯ ದಂಧೆ ಜೋರು.  ಚಿತ್ತಾಪುರ: ತಾಲೂಕಿನ ಬಹುತೇಕ ಹಳ್ಳಿಗಳ ಗಲ್ಲಿ ಗಲ್ಲಿಗಳಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಬೇಕಾಬಿಟ್ಟಿ ಅಕ್ರಮ ಸರಾಯಿ ಮಾರಾಟ ಹಾಗೂ ಸಾಗಾಟ ಜೋರಾಗಿ ನಡೆಯುತ್ತಿದೆ. ಇದನ್ನೆಲ್ಲ ನೋಡಿದರೆ ಈ ಅಕ್ರಮ ಸರಾಯಿ ಮಾರಾಟಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸಾಥ್ ನೀಡುತ್ತಿರುವುದು ಕಂಡುಬರುತ್ತಿದೆ.  ಸಚಿವ ಪ್ರಿಯಾಂಕ್ ಖರ್ಗೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ. ಅಗಸ್ಟ್ 4ರಂದು ತಾಲ್ಲೂಕು ಪಂಚಾಯಿತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕಿರಾಣ ಅಂಗಡಿಗಳಲ್ಲಿ ದಾಭಾಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅವಧಿಗೆ ಮೀರಿದ ಸಮಯದವರೆಗೆ ದಾಭಾಗಳು ತೆಗೆದಿರುತ್ತವೆ.‌ಈ ಬಗ್ಗೆ ಅಬಕಾರಿ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಸಚಿವರು ಬೇರೆ ಜಿಲ್ಲೆಯವರು ಎಷ್ಟಾದರೂ ಮದ್ಯ ಮಾರಾಟ ಮಾಡಲಿ, ಚಿತ್ತಾಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಮಾರಾಟ ಮಾಡಲು ಅನುವು ಮಾಡಿಕೊಡಬೇಡಿ ಎಂದು  ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಬಕಾರಿ ಅಧಿಕಾರಿಗಳಿಗೆ ಹೇಳಿದರು ಅಬಕಾರಿ ಇಲಾಖೆ ಅಧಿಕಾರಿಗಳು ಸಚಿವರ ಮಾತಿಗೆ ಬೆಲೆ ಕೊಡದೆ ಅಕ್ರಮ ಸರಾಯಿ ಮಾರಾಟ...

ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ-ಎಸ್ಟಿ ಅನುದಾನ ಬಳಕೆ ಬೇಡ: ಡಿವಿಪಿ.

ಇಮೇಜ್
ಚಿತ್ತಾಪೂರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲು ಇರುವ 11 ಸಾವಿರ ಕೋಟಿ ಅನುದಾನವನ್ನು ಬಳಕೆ ಮಾಡದೇ ಸಮುದಾಯದ ಅಭಿವೃದ್ಧಿಗೆ ಬಳಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯರವರಿಗೆ ಬರೆದ ಮನವಿ ಪತ್ರವನ್ನು ಮಾನ್ಯ ತಹಶೀಲ್ದಾರ ರವರ ಮೂಲಕ ಸಲ್ಲಿಸಿದರು.   ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಜಗದೇವ ಎಸ್ ಕುಂಬಾರ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಈ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುತ್ತಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ವಿರೋಧಿಸುತ್ತದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು.    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಘೋಷಣೆ ಯೋಜನೆಗಳಿಗಾಗಿ ನಮ್ಮ ಹಣಬಳಸದೆ ಈ ಸಮುದಾಯಗಳ ವಿದ್ಯಾರ್ಥಿ ಯುವಜನರ ಹಾಗೂ ನಿರುದ್ಯೋಗ ಯುವಕರ, ಮಹಿಳೆಯರ ಮಕ್ಕಳ, ರೈತ ಕೂಲಿ ಕಾರ್ಮಿಕರ, ಒಟ್ಟಾರೆ ಈ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ  ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಅನು...