ಪೋಸ್ಟ್‌ಗಳು

ಸೆಪ್ಟೆಂಬರ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಸಾಹಿತ್ಯ ಬೆಳೆಸುವಲ್ಲಿ ಸಚಿವರ ಕೊಡುಗೆ ಅಪಾರ: ಡಾ.ಸಿದ್ದತೋಟೇಂದ್ರ.

ಇಮೇಜ್
ಚಿತ್ತಾಪೂರ: ಕ್ಷೇತ್ರದ ಶಾಸಕರು, ಸಚಿವರಾದ ಪ್ರಿಯಾಂಕ ಖರ್ಗೆ ಅವರಲ್ಲಿ ಕನ್ನಡ ಸಾಹಿತ್ಯದ ಬಗ್ಗೆ ಅಭಿರುಚಿ ಹಾಗೂ ಸಾಹಿತ್ಯ ಜ್ಞಾನ ಬೆಳೆಸಿಕೊಳ್ಳುವ ಆಸಕ್ತಿ ಇದೆ. ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಕೊಟ್ಟು ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ಎಜುಕೇಶನ್ ಹಬ್ ಮಾಡಿದ್ದಾರೆ ಹಾಗೂ ಈ ಭಾಗದಲ್ಲಿನ ಕನ್ನಡ ಸಾಹಿತ್ಯ ಬೆಳೆಸುವಲ್ಲಿ ಸಚಿವರ ಅಪಾರವಾದ ಕೊಡುಗೆಯಿದೆ ಎಂದು ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠ ನಾಲವಾರದ ಪೂಜ್ಯ ಶ್ರೀ ಡಾ. ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು . ಪಟ್ಟಣದ ಬಜಾಜ್ ಕಲ್ಯಾಣ್ ಮಂಟಪ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಾಗಾವಿ ನಾಡು ಭವ್ಯ ಇತಿಹಾಸ ಹೊಂದಿದ್ದ ನಾಡಾಗಿದ್ದು ಇಲ್ಲಿನ 69 ಗುಡಿ ಅಂದಿನ ಪ್ರಾಚೀನ ವಿಶ್ವವಿದ್ಯಾಲಯವಾಗಿತ್ತು. ಇಲ್ಲಿ ದೇಶ ವಿದೇಶಗಳಿಂದ ಅಧ್ಯಯನ ಮಾಡಲು ಬರುತ್ತಿದ್ದರು ಇಂಥ ಪ್ರಾಚೀನ ಕಾಲದ ದತ್ತ ವೈಭವ ಮತ್ತೆ ಮರುಕಳಿಸಬೇಕಿದೆ ಎಂದು ಹೇಳಿ ಕನ್ನಡ ನಾನು ನುಡಿಯ ಬಗ್ಗೆ ಕೊಂಡಾಡಿದರು. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ, ಮಾತನಾಡಿ ಈ ೪ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಸಮಾಜಕ್ಕೆ ಒಂದು ವಿಶೇಷವಾದ ಸಂದೇಶವನ್ನು ನೀಡಲು ಬಯಸುತ್ತೇನೆ ನಾಗಾವಿ ನಾಡಿನಲ್ಲಿ ಐತಿಹಾಸಿಕ ಸ್ಮಾರಕಗಳು, ಶಾಸನಗಳು, ದೊರ...

ನಿರ್ಣಯಗಳು ಕೈಗೊಳ್ಳದೆ ಮುಕ್ತಾಯಗೊಂಡ ೪ನೇ ಸಾಹಿತ್ಯ ಸಮ್ಮೇಳನ.

ಇಮೇಜ್
    4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಭವ್ಯ ಮೆರವಣಿಗೆಯ  ಸಾರೋಟಿನಲ್ಲಿ ಯಾರು ಇಲ್ಲದ ದೃಶ್ಯ. ಚಿತ್ತಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ೪ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಿರಂಗ ಅಧಿವೇಶನ ಮಾಡದೇ ನಿರ್ಣಯಗಳನ್ನು ಕೈಗೊಳ್ಳದೇ ಮುಕ್ತಾಯಗೊಂಡಿರುವುದು ಸಾಹಿತ್ಯಾಭಿಮಾನಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಜನರಲ್ಲಿ ಕನ್ನಡ ನಾಡು ನುಡಿ,ನೆಲ,ಜಲ ಭಾಷೆಯ ಬಗ್ಗೆ ಜಾಗೃತಿ ಉಂಟು ಮಾಡುವುದು ಹಾಗೂ ಕನ್ನಡಾಭಿಮಾನ ಮೂಡಿಸುವುದು ಜೊತೆಗೆ ಕನ್ನಡ ನಾಡಿನ ಶ್ರೀಮಂತಿಗೆ ಮತ್ತು ಇತಿಹಾಸ ಬಗ್ಗೆ ಪರಿಚಯಿಸುವ ಕೆಲಸ ಮಾಡುವ ಮೂಲಕ ಸಮ್ಮೇಳನದ ಕೊನೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಂಡು ಅವುಗಳ ಅನುಷ್ಠಾನಕ್ಕೆ ಸರಕಾರಕ್ಕೆ ವರದಿ ಸಲ್ಲಿಸುವುದು ಕನ್ನಡ ಸಾಹಿತ್ಯ ಪರಿಷತ್ತಿನ ನಿಯಮಾವಳಿಯಾಗಿದೆ, ಆದರೆ ತಾಲೂಕು ಕಸಾಪ ಅಧ್ಯಕ್ಷರು ಪರಿಷತ್ತಿನ ನಿಯಮಗಳನ್ನೇ ಉಲ್ಲಂಘಿಸಿ ತಮ್ಮ ಮನ ಬಂದಂತೆ ವರ್ತಿಸಿರುವುದು ಕಂಡುಬಂದಿದೆ. 4ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜವಿದ್ದು ಪರಿಷತ್ತಿನ ಧ್ವಜ ಇಲ್ಲದೇ ಇರುವುದು. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪರಿಷತ್ತಿನ ದ್ವಜಾರೋಹಣ ಮಾಡುವುದು ನಿಯಮವಿದೆ ಆದರೆ ಇಲ್ಲಿನ ಕಸಾಪ ಅಧ್ಯಕ್ಷರು ಕೇವಲ ರಾಷ್ಟ್ರದ್ವಜಾರೋ...

ಸಮ್ಮೇಳನ ಆಯೋಜನೆಯ ಸ್ವಷ್ಟನೆ ನೀಡಲಿ: ನಾಲವಾರಕರ್ ಆಗ್ರಹ.

ಇಮೇಜ್
ಚಿತ್ತಾಪುರ: ಜಿಲ್ಲೆಯಲ್ಲಿ ಬರಗಾಲ ಆವರಿಸಿರುವುದರಿಂದ ಜಿಲ್ಲೆಯ ಯಾವುದೇ ತಾಲೂಕುಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆವಾಗಿರುವುದಿಲ್ಲ. ಆದರೆ ಯಾವ ಕಾರಣಕ್ಕಾಗಿ ಚಿತ್ತಾಪುರ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿರುವ ಬಗ್ಗೆ ಸ್ವಷ್ಟನೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ರಾಜ್ಯ ವಕ್ತಾರ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ಆಗ್ರಹಿಸಿದ್ದಾರೆ.  ಪಟ್ಟಣದಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ  ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ ಹೀಗಾಗಿ ಹಂಪಿ ಉತ್ಸವ, ಮೈಸೂರು ದಸರಾ ಉತ್ಸವಗಳನ್ನು ಸರಳ ರೀತಿಯಲ್ಲಿ ಆಚರಣೆಗೆ ರಾಜ್ಯ ಸರಕಾರ ಬದ್ಧವಾಗಿದ್ದು ಅಲ್ಲದೇ ಮಂಡ್ಯ ಜಿಲ್ಲೆಯಲ್ಲಿ ನಡೆಯಬೇಕಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರದ್ದು ಮಾಡಿರುವ ಮಾದರಿಯಲ್ಲಿ ಚಿತ್ತಾಪುರ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಕೂಡಾ ಮುಂದೂಡಬೇಕು ಎಂದರು   ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರಿಗೆ ಮಾಹಿತಿ ನೀಡದೇ, ಕನ್ನಡಪರ ಹೋರಾಟಗಾರರನ್ನು ಹಾಗೂ ಸಾಹಿತಿಗಳನ್ನು ಹೊರಗಿಟ್ಟು ಏಕ ಪಕ್ಷೀಯವಾಗಿ ನಡೆದುಕೊಂಡು ಬರೀ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಅಹ್ವಾನಿಸಿದ್ದರಿಂದ ಇದು ಸಾಹಿತ್ಯ ಸಮ್ಮೇಳನವಲ್ಲ ಕಾಂಗ್ರೆಸ್ ಸಮ್ಮೇಳನವಾಗಿದೆ ಎಂದು ಆರೋಪಿಸಿದರು.   ಉತ್ಸವಗಳಿಗೆ ಬಳಸುವ ಹಣವನ್ನು ರೈತರ...

ಟ್ರಸ್ಟ್‌ಗೆ ಸಂಬಂಧಿಸಿದ ಜಮೀನು ಕಾನೂನು ಬಾಹಿರ ಮಾರಾಟ.

ಇಮೇಜ್
ಕಲಬುರಗಿ: ನಗರದ ಕೆಎಚ್‌ಬಿ ಕಾಲೋನಿ ಮಾಲಗತ್ತಿ ಭೂಮಿ ಮಂಡಳಿಂದ ಅಬ್ದುಲ್ ಶುಕೂರ್ ತಂದೆ ಮೊಹಮ್ಮದ್ ಮಹಮೂದ್ ಅಲಿ ಎಂಬುವರು ಮಾಮುಪುರಿ ವಾಲೆ ಎಂಬ ಹೆಸರಿನಿಂದ ಕರೆಯಲ್ಪಡುವ ಇವರು ಕಾನೂನಿನ ಬಾಹಿರವಾಗಿ, ಕೆಎಚ್‌ಬಿ ಸಿ.ಎ ಸೈಟ್ ನಂ.1 ಗ್ರಾಮ ಪಂಚಾಯತ ನಂ. ಸರ್ವೆ ನಂ.84/1 ಹಾಗೂ 84/2, ಸೈಟಿ ನಂ.1 ವಿಸ್ತೀರ್ಣ4376.80 ಚ. ಮೀಟರ, ಕೆ ಎಚ್ ಬಿ ಕಾಲೋನಿ ಮಾಲಗತ್ತಿ ಕಲಬುರಗಿ, ಈ ಜಮೀನನ್ನು ಟ್ರಸ್ಟ ಕಡೆಯಿಂದ ಖರೀದಿ ಮಾಡಿ ಕಾನೂನು ಬಾಹಿರವಾಗಿ ಸೈಟಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಪ್ರೆಸಿಡೆಂಟ್ ವರ್ಕಿಂಗ್ ಜರ್ನಾಲಿಸ್ಟ ಯೂನಿಯನ್ ಸೋಶಿಯಲ್ ಹಾಗೂ ವಲ್ವೇರ್ ಅಧ್ಯಕ್ಷ ಪಠಾನ ಸೂಫಿಯಾನ ಖಾನ ಆಗ್ರಹಿಸಿದ್ದಾರೆ.  ಮಾನ್ಯ ಜಿಲ್ಲಾ ಅಧಿಕಾರಿಗಳಿಗೆ ಮನವಿ ಮಾಡಿ ಮಾತನಾಡಿದ ಅವರು ಈ ಖರೀದಿ ಪತ್ರದ ನೊಂದಣಿ ಸಂಖ್ಯೆ ಜಿಎಲ್‌ಬಿ-1-07748--2021–22, ಸಿ.ಡಿ. ನಂ.ಜಿಎಲ್‌ಬಿಡಿ!146 ದಿನಾಂಕ 18-09-2021ರಂದು ಖರೀದಿ ಮಾಡಿರುತ್ತಾರೆ, ಈ ಜಮೀನು ಟ್ರಸ್ಟ ಜಮೀನು ಆದ ಕಾರಣ ಇದನ್ನು ಯಾವುದೆ ವ್ಯಕ್ತಿ ಸ್ವಯಂಗಾಗಿ ಖರೀದಿ ಮಾಡುವುದು ಕಾನೂನಿನ ಬಾಹಿರವಾಗಿರುತ್ತದೆ ಇದನ್ನು ಖರೀದಿಮಾಡಬೇಕಾದರೆ ಇದಕ್ಕೆ ತನ್ನದೆ ಆದ ಟ್ರಸ್ಟ್ ಗುರಿ ಉದ್ದೇಶಗಳು ಇರುತ್ತವೆ ಅವು ಯಾವುದೇ ಅನುಸರಿಸದೆ ಟ್ರಸ್ಟ್‌ನ ನಿಯಮಗಳನ್ನು ಉಲ್ಲಂಘಿಸಿದ ಯಾರೆ ಆಗರಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಖರೀದಿದಾರರು ಈ ಜಮೀನನ್ನು ಖರೀದಿಸಿದ ನಂತರ ಈ ಜಮೀನಿ...