ಗುರುವಾರ, ಸೆಪ್ಟೆಂಬರ್ 28, 2023

ಸಾಹಿತ್ಯ ಬೆಳೆಸುವಲ್ಲಿ ಸಚಿವರ ಕೊಡುಗೆ ಅಪಾರ: ಡಾ.ಸಿದ್ದತೋಟೇಂದ್ರ.


ಚಿತ್ತಾಪೂರ: ಕ್ಷೇತ್ರದ ಶಾಸಕರು, ಸಚಿವರಾದ ಪ್ರಿಯಾಂಕ ಖರ್ಗೆ ಅವರಲ್ಲಿ ಕನ್ನಡ ಸಾಹಿತ್ಯದ ಬಗ್ಗೆ ಅಭಿರುಚಿ ಹಾಗೂ ಸಾಹಿತ್ಯ ಜ್ಞಾನ ಬೆಳೆಸಿಕೊಳ್ಳುವ ಆಸಕ್ತಿ ಇದೆ. ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಕೊಟ್ಟು ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ಎಜುಕೇಶನ್ ಹಬ್ ಮಾಡಿದ್ದಾರೆ ಹಾಗೂ ಈ ಭಾಗದಲ್ಲಿನ ಕನ್ನಡ ಸಾಹಿತ್ಯ ಬೆಳೆಸುವಲ್ಲಿ ಸಚಿವರ ಅಪಾರವಾದ ಕೊಡುಗೆಯಿದೆ ಎಂದು ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠ ನಾಲವಾರದ ಪೂಜ್ಯ ಶ್ರೀ ಡಾ. ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಬಜಾಜ್ ಕಲ್ಯಾಣ್ ಮಂಟಪ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಾಗಾವಿ ನಾಡು ಭವ್ಯ ಇತಿಹಾಸ ಹೊಂದಿದ್ದ ನಾಡಾಗಿದ್ದು ಇಲ್ಲಿನ 69 ಗುಡಿ ಅಂದಿನ ಪ್ರಾಚೀನ ವಿಶ್ವವಿದ್ಯಾಲಯವಾಗಿತ್ತು. ಇಲ್ಲಿ ದೇಶ ವಿದೇಶಗಳಿಂದ ಅಧ್ಯಯನ ಮಾಡಲು ಬರುತ್ತಿದ್ದರು ಇಂಥ ಪ್ರಾಚೀನ ಕಾಲದ ದತ್ತ ವೈಭವ ಮತ್ತೆ ಮರುಕಳಿಸಬೇಕಿದೆ ಎಂದು ಹೇಳಿ ಕನ್ನಡ ನಾನು ನುಡಿಯ ಬಗ್ಗೆ ಕೊಂಡಾಡಿದರು.


ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ, ಮಾತನಾಡಿ ಈ ೪ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಸಮಾಜಕ್ಕೆ ಒಂದು ವಿಶೇಷವಾದ ಸಂದೇಶವನ್ನು ನೀಡಲು ಬಯಸುತ್ತೇನೆ ನಾಗಾವಿ ನಾಡಿನಲ್ಲಿ ಐತಿಹಾಸಿಕ ಸ್ಮಾರಕಗಳು, ಶಾಸನಗಳು, ದೊರೆತಿವೆ ಈ ನೆಲದ ಶ್ರೀಮಂತಿಕೆ, ಪರಂಪರೆಯ ಇತಿಹಾಸವನ್ನು ಹೊಸ ಪೀಳಿಗೆಗೆ ತಿಳಿಸಬೇಕಾದರೆ ಈ ಭಾಗದ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಬೇಲೂರು ಹಳೇಬೀಡಿನ ಇತಿಹಾಸ ನಮ್ಮ ಮಕ್ಕಳಿಗೆ ಬೇಕಾಗಿಲ್ಲ. ಅದಕ್ಕಿಂತ ಎರಡು ಪಟ್ಟು ಇತಿಹಾಸ ಈ ಭಾಗದಲ್ಲಿದೆ ಹೀಗಾಗಿ ನಮ್ಮ ಮಕ್ಕಳು ಓದುವ ಪಠ್ಯಪುಸ್ತಕದಲ್ಲಿ ಈ ಭಾಗದ ಇತಿಹಾಸ ಅಳವಡಿಸಬೇಕು ಎಂದು ಒತ್ತಾಯಿಸಿದರು.


ವೇದಿಕೆಯ ಮೇಲೆ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಪ್ಪಗೇರೆ ಸೋಮಶೇಖರ್, ನೀಲಮ್ಮ ಕತ್ನಳ್ಳಿ, ಲಿಂಗಾರೆಡ್ಡಿ ಗೌಡ ಭಾಸ ರೆಡ್ಡಿ, ನಾಗರೆಡ್ಡಿ ಪಾಟೀಲ್, ಬಾಗನಗೌಡ ಸಂಕನೂರ್, ಭೀಮಣ್ಣ ಸಾಲಿ, ಸೋಮಶೇಖರ್ ಪಾಟೀಲ್, ಶಿವಾನಂದ್ ಪಾಟೀಲ್, ಮಲ್ಲಿಕಾರ್ಜುನ್ ಕಾಳಗಿ, ಮಲ್ಲಿನಾಥ್ ಇಂದೂರ, ಮುಕ್ತಾರ್ ಪಟೇಲ್, ಬಸವರಾಜ್ ಬಳೂಂಡಗಿ, ಶಂಭುಲಿಂಗ ಗುಂಡಗುರ್ತಿ, ಕಾಶಿನಾಥ್ ಗುತ್ತೇದಾರ್, ರಮೇಶ್ ಮರಗೂಳ, ವೇದಿಕೆ ಮೇಲೆ ಇದ್ದರು.
ವೀರಣ್ಣ ಸುಲ್ತಾನಪುರ, ಮಹಮ್ಮದ್ ಇಬ್ರಾಹಿಂ, ಮಲ್ಲಿಕಾರ್ಜುನ್ ಬೊಮ್ಮನಹಳ್ಳಿಕರ್, ವೆಂಕಟೇಶ್ ಬಳಿಚಕ್ರ, ಶ್ರೀಮತಿ ಪೂಜಾ ಬಂಕಲಗಿ, ನರಸಪ್ಪ ಚಿನ್ನಕಟ್ಟಿ, ಕಾಶಿರಾಯ್ ಕಲಾಲ್, ವೀರಭದ್ರಪ್ಪ ಹುಮನಾಬಾದ್, ನರಸಿಂಹ ಆಲ್ಮೇಲ್ಕರ್, ಮನೋಹರ್ ಹಡಪದ, ಕರಣಕುಮಾರ ಅಲ್ಲೂರ, ಸಾಬಣ್ಣ ಭರಾಟಿ, ಆನಂದ್ ಕಲ್ಲಕ್, ಇದ್ದರು. ನಾಡಗೀತೆ ಮತ್ತು ರೈತ ಗೀತೆಯನ್ನು ಗುಲ್ಬರ್ಗ ವಿಶ್ವವಿದ್ಯಾಲಯದ ಸಂಗೀತ ಪ್ರಾಧ್ಯಾಪಕರಾದ ಸಿದ್ಧಾರ್ಥ ಚಿಮ್ಮಾ ಇದ್ಲಾಯಿ ನಡೆಸಿಕೊಟ್ಟರು ಅದೇ ರೀತಿ ಜನಕಲಾ ಸಮಿತಿ ವಾಡಿ ವತಿಯಿಂದ ಸಂವಿಧಾನ ಪೀಠಿಕೆ ಗಾಯನ ನಡೆಯಿತು. ಮಲ್ಲಿಕಾರ್ಜುನ್ ಮುಡಬೂಳಕರ್ ನಿರೂಪಿಸಿದರು. ಜಗದೇವ್ ದಿಗ್ಗಾಂವಕರ್ ಸ್ವಾಗತಿಸಿದರು. ಬಸಪ್ಪ ಯಂಭತ್ನಾಳ ವಂದನಾರ್ಪಣೆ ನಡೆಸಿಕೊಟ್ಟರು.


ಮಾತೃಭಾಷೆಯಲ್ಲಿ ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು, ಪ್ರತಿಯೊಂದು ಇಲಾಖೆ ವಾಣಿಜ್ಯ ಮಾಳಿಗೆ ಹೆಸರಿನ ನಾಮ ಫಲಕಗಳು ಕನ್ನಡದಲ್ಲಿ ಬರೆದು ಕನ್ನಡಮಯವಾಗುವಂತೆ ಮನೋ ಧರ್ಮ ಬೆಳೆಸಿಕೊಳ್ಳಬೇಕು ಎಲ್ಲಿದ್ದರೇನು ಎಂತಿದ್ದರೇನು ಹೇಗಿದ್ದರೇನು? ನಾವು ಎಲ್ಲರೂ ಕನ್ನಡವ ಬಳಸಿ ಬೆಳೆಸಬೇಕು ಮಾತನಾಡಬೇಕು ಪ್ರತಿ ಕ್ಷೇತ್ರದಲ್ಲಿ ಬರವಣಿಗೆ ಕನ್ನಡ ಮಾಯವಾಗಬೇಕು ಎಂದರು

             - ನಿಂಗಪ್ಪ ಮಲ್ಕನ್ ಕೊಲ್ಲೂರ
      ಸಮ್ಮೇಳನ ಅಧ್ಯಕ್ಷರು. ಸಾಹಿತಿಗಳು ಚಿತ್ತಾಪುರ


ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವರ್ಷವಿಡಿ ತಾಲೂಕಿನ ಅತ್ಯಂತ ಕವಿಗೋಷ್ಠಿಗಳು ಕಾವ್ಯ ಸಮ್ಮೇಳನಗಳನ್ನು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪರಿಷತ್ತು ಕೆಲಸ ಮಾಡುತ್ತಿದೆ. ೪ನೇ ಕನ್ನಡ ಸಾಹಿತ್ಯ ಸಮ್ಮೇಳನದ ತೇರನ್ನು ನಿಮ್ಮೆಲ್ಲರ ಸಹಕಾರದಿಂದ ಯಶಸ್ವಿಯಾಗಿ ಎಳೆದಿದ್ದೇನೆ ಎಂದರು.

            - ವೀರೇಂದ್ರಕುಮಾರ ಕೊಲ್ಲೂರು
         ಅಧ್ಯಕ್ಷರು ತಾಲೂಕು ಕಸಾಪ ಚಿತ್ತಾಪುರ

ನಿರ್ಣಯಗಳು ಕೈಗೊಳ್ಳದೆ ಮುಕ್ತಾಯಗೊಂಡ ೪ನೇ ಸಾಹಿತ್ಯ ಸಮ್ಮೇಳನ.

   4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಭವ್ಯ ಮೆರವಣಿಗೆಯ ಸಾರೋಟಿನಲ್ಲಿ ಯಾರು ಇಲ್ಲದ ದೃಶ್ಯ.

ಚಿತ್ತಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ೪ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಿರಂಗ ಅಧಿವೇಶನ ಮಾಡದೇ ನಿರ್ಣಯಗಳನ್ನು ಕೈಗೊಳ್ಳದೇ ಮುಕ್ತಾಯಗೊಂಡಿರುವುದು ಸಾಹಿತ್ಯಾಭಿಮಾನಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಜನರಲ್ಲಿ ಕನ್ನಡ ನಾಡು ನುಡಿ,ನೆಲ,ಜಲ ಭಾಷೆಯ ಬಗ್ಗೆ ಜಾಗೃತಿ ಉಂಟು ಮಾಡುವುದು ಹಾಗೂ ಕನ್ನಡಾಭಿಮಾನ ಮೂಡಿಸುವುದು ಜೊತೆಗೆ ಕನ್ನಡ ನಾಡಿನ ಶ್ರೀಮಂತಿಗೆ ಮತ್ತು ಇತಿಹಾಸ ಬಗ್ಗೆ ಪರಿಚಯಿಸುವ ಕೆಲಸ ಮಾಡುವ ಮೂಲಕ ಸಮ್ಮೇಳನದ ಕೊನೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಂಡು ಅವುಗಳ ಅನುಷ್ಠಾನಕ್ಕೆ ಸರಕಾರಕ್ಕೆ ವರದಿ ಸಲ್ಲಿಸುವುದು ಕನ್ನಡ ಸಾಹಿತ್ಯ ಪರಿಷತ್ತಿನ ನಿಯಮಾವಳಿಯಾಗಿದೆ, ಆದರೆ ತಾಲೂಕು ಕಸಾಪ ಅಧ್ಯಕ್ಷರು ಪರಿಷತ್ತಿನ ನಿಯಮಗಳನ್ನೇ ಉಲ್ಲಂಘಿಸಿ ತಮ್ಮ ಮನ ಬಂದಂತೆ ವರ್ತಿಸಿರುವುದು ಕಂಡುಬಂದಿದೆ.

4ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜವಿದ್ದು ಪರಿಷತ್ತಿನ ಧ್ವಜ ಇಲ್ಲದೇ ಇರುವುದು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪರಿಷತ್ತಿನ ದ್ವಜಾರೋಹಣ ಮಾಡುವುದು ನಿಯಮವಿದೆ ಆದರೆ ಇಲ್ಲಿನ ಕಸಾಪ ಅಧ್ಯಕ್ಷರು ಕೇವಲ ರಾಷ್ಟ್ರದ್ವಜಾರೋಹಣ ಮತ್ತು ನಾಡ ದ್ಜಜಾರೋಹಣ ನೆರವೇರಿಸಿ ಪರಿಷತ್ತಿನ ದ್ವಜಾರೋಹಣ ಮಾಡದೇ ಪರಿಷತ್ತಿನ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುವ ಮೂಲಕ ಪರಿಷತ್ತಿನ ಘನತೆ ಗೌರವಕ್ಕೆ ದಕ್ಕೆ ತಂದಿದ್ದಾರೆ.

ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನು ಕಸಾಪ ಜಿಲ್ಲಾಧ್ಯಕ್ಷರು ಮತ್ತು ತಾಲೂಕು ಅಧ್ಯಕ್ಷರು ಸಾರೋಟಿನಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಮ್ಮೇಳನದ ಸ್ಥಳಕ್ಕೆ ಕರೆತರುವುದು ಸಂಪ್ರದಾಯ, ಆದರೆ ಬಜಾಜ್ ಕಲ್ಯಾಣ ಮಂಟಪದ ಆವರಣ ಇನ್ನೂ ದೂರ ಇರುವಾಗಲೇ ಜಿಲ್ಲಾಧ್ಯಕ್ಷರು ಮತ್ತು ತಾಲೂಕು ಅಧ್ಯಕ್ಷರು ರಥದಿಂದ ಇಳಿದು ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಗೂ ನಾ ಡ್ರೈವರ್ ಹಾಡಿಗೆ ನೃತ್ಯ ಮಾಡಿದರು. ರಥದಲ್ಲಿದ್ದ ಸರ್ವಾಧ್ಯಕ್ಷರು ಅವರು ಇಳಿದು ನೃತ್ಯದಲ್ಲಿ ಭಾಗಿಯಾದರು.ಸರ್ವಾಧ್ಯಕ್ಷರನ್ನು ಸಮ್ಮೇಳನ ಸ್ಥಳದವರೆಗೂ ಸಾರೋಟಿನಲ್ಲಿ ಮೆರವಣಿಗೆ ಮೂಲಕ ಗೌರವಯುತದಿಂದ ವೇದಿಕೆ ಕರೆತರುವ ಸಂಪ್ರದಾಯವನ್ನು ಗಾಳಿಗೆ ತೂರಿದ್ದಾರೆ.

ಭಾನುವಾರ, ಸೆಪ್ಟೆಂಬರ್ 24, 2023

ಸಮ್ಮೇಳನ ಆಯೋಜನೆಯ ಸ್ವಷ್ಟನೆ ನೀಡಲಿ: ನಾಲವಾರಕರ್ ಆಗ್ರಹ.


ಚಿತ್ತಾಪುರ: ಜಿಲ್ಲೆಯಲ್ಲಿ ಬರಗಾಲ ಆವರಿಸಿರುವುದರಿಂದ ಜಿಲ್ಲೆಯ ಯಾವುದೇ ತಾಲೂಕುಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆವಾಗಿರುವುದಿಲ್ಲ. ಆದರೆ ಯಾವ ಕಾರಣಕ್ಕಾಗಿ ಚಿತ್ತಾಪುರ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿರುವ ಬಗ್ಗೆ ಸ್ವಷ್ಟನೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ರಾಜ್ಯ ವಕ್ತಾರ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ಆಗ್ರಹಿಸಿದ್ದಾರೆ.

 ಪಟ್ಟಣದಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ ಹೀಗಾಗಿ ಹಂಪಿ ಉತ್ಸವ, ಮೈಸೂರು ದಸರಾ ಉತ್ಸವಗಳನ್ನು ಸರಳ ರೀತಿಯಲ್ಲಿ ಆಚರಣೆಗೆ ರಾಜ್ಯ ಸರಕಾರ ಬದ್ಧವಾಗಿದ್ದು ಅಲ್ಲದೇ ಮಂಡ್ಯ ಜಿಲ್ಲೆಯಲ್ಲಿ ನಡೆಯಬೇಕಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರದ್ದು ಮಾಡಿರುವ ಮಾದರಿಯಲ್ಲಿ ಚಿತ್ತಾಪುರ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಕೂಡಾ ಮುಂದೂಡಬೇಕು ಎಂದರು 

 ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರಿಗೆ ಮಾಹಿತಿ ನೀಡದೇ, ಕನ್ನಡಪರ ಹೋರಾಟಗಾರರನ್ನು ಹಾಗೂ ಸಾಹಿತಿಗಳನ್ನು ಹೊರಗಿಟ್ಟು ಏಕ ಪಕ್ಷೀಯವಾಗಿ ನಡೆದುಕೊಂಡು ಬರೀ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಅಹ್ವಾನಿಸಿದ್ದರಿಂದ ಇದು ಸಾಹಿತ್ಯ ಸಮ್ಮೇಳನವಲ್ಲ ಕಾಂಗ್ರೆಸ್ ಸಮ್ಮೇಳನವಾಗಿದೆ ಎಂದು ಆರೋಪಿಸಿದರು.

  ಉತ್ಸವಗಳಿಗೆ ಬಳಸುವ ಹಣವನ್ನು ರೈತರ ಸಂಕಷ್ಟಕ್ಕೆ ಬಳಸಲಾಗುವುದು ಎಂದು ಸರಕಾರ ಹೇಳಿದೆ ಹೀಗಿರುವಾಗ ಚಿತ್ತಾಪುರ ಸಮ್ಮೇಳನಕ್ಕೆ ಹಣ ಎಲ್ಲಿಂದ ಬಂದಿದೆ ಎಂಬುದನ್ನು ಹಾಗೂ ಕನ್ನಡ ಭವನ ಯಾಕೆ ನೆನಗುದಿಯಲ್ಲಿದೆ ಎಂಬುದು ಸಚಿವ ಪ್ರಿಯಾಂಕ್ ಖರ್ಗೆ ಸ್ವಷ್ಟಪಡಿಸಬೇಕು. ಕಸಾಪ ಅಧ್ಯಕ್ಷರು ಸಮ್ಮೇಳನದ ಅಮಂತ್ರಣ ಪತ್ರಿಕೆಯಲ್ಲಿ ಪರಿಷತ್ತಿನ ದ್ಜಜಾರೋಹಣ ಕೈ ಬಿಟ್ಟು ಪರಿಷತ್ತಿನ ನಿಯಮಕ್ಕೆ ದಕ್ಕೆ ತಂದಿದ್ದಾರೆ, ಅಲ್ಲದೇ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅವರ ಹೆಸರು ಕೈ ಬಿಟ್ಟಿದ್ದಾರೆ ಹಾಗೂ ನಾಗಾವಿ ನಾಡಿನ ಅಕ್ಷರ ಜಾತ್ರೆಗೆ ಬನ್ನಿ ಎಂದು ಹೇಳಿ ನಾಗಾವಿ ಯಲ್ಲಮ್ಮ ದೇವಿಯ ಚಿತ್ರ ಹಾಕದೇ ಅವಮಾನಿಸಿರುವುದು ಖಂಡನೀಯ ಎಂದರು.

  ಮಂಡ್ಯ ಜಿಲ್ಲೆಯಲ್ಲಿ ನಡೆಯಬೇಕಾದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ರದ್ದು ಮಾಡಿದ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಅವರು ಯಾವ ಮುಖ ಇಟ್ಟುಕೊಂಡು, ಯಾವ ಉದ್ದೇಶಕ್ಕಾಗಿ ಚಿತ್ತಾಪುರ ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ ಇದೆಂಥ ವಿಪರ್ಯಸ ಸಂಗತಿ, ಇದರಿಂದ ರಾಜ್ಯಕ್ಕೆ ಯಾವ ಸಂದೇಶ ನೀಡುವಿರಿ ರಾಜ್ಯಾಧ್ಯಕ್ಷರೇ ಉತ್ತರ ನೀಡಿ ಎಂದು ಆಗ್ರಹಿಸಿದರು.

  ಸುದ್ದಿಗೋಷ್ಠಿಯಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ರವಿ ವಾಲಿ, ತಾಲೂಕು ಅಧ್ಯಕ್ಷ ಮಂಜುನಾಥ ಸ್ವಾಮಿ,ಮುಖಂಡ ಚಂದ್ರಕಾಂತ ನಾಟೀಕಾರ ಇದ್ದರು.
      

ಭಾನುವಾರ, ಸೆಪ್ಟೆಂಬರ್ 10, 2023

ಟ್ರಸ್ಟ್‌ಗೆ ಸಂಬಂಧಿಸಿದ ಜಮೀನು ಕಾನೂನು ಬಾಹಿರ ಮಾರಾಟ.

ಕಲಬುರಗಿ: ನಗರದ ಕೆಎಚ್‌ಬಿ ಕಾಲೋನಿ ಮಾಲಗತ್ತಿ ಭೂಮಿ ಮಂಡಳಿಂದ ಅಬ್ದುಲ್ ಶುಕೂರ್ ತಂದೆ ಮೊಹಮ್ಮದ್ ಮಹಮೂದ್ ಅಲಿ ಎಂಬುವರು ಮಾಮುಪುರಿ ವಾಲೆ ಎಂಬ ಹೆಸರಿನಿಂದ ಕರೆಯಲ್ಪಡುವ ಇವರು ಕಾನೂನಿನ ಬಾಹಿರವಾಗಿ, ಕೆಎಚ್‌ಬಿ ಸಿ.ಎ ಸೈಟ್ ನಂ.1 ಗ್ರಾಮ ಪಂಚಾಯತ ನಂ. ಸರ್ವೆ ನಂ.84/1 ಹಾಗೂ 84/2, ಸೈಟಿ ನಂ.1 ವಿಸ್ತೀರ್ಣ4376.80 ಚ. ಮೀಟರ, ಕೆ ಎಚ್ ಬಿ ಕಾಲೋನಿ ಮಾಲಗತ್ತಿ ಕಲಬುರಗಿ, ಈ ಜಮೀನನ್ನು ಟ್ರಸ್ಟ ಕಡೆಯಿಂದ ಖರೀದಿ ಮಾಡಿ ಕಾನೂನು ಬಾಹಿರವಾಗಿ ಸೈಟಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಪ್ರೆಸಿಡೆಂಟ್ ವರ್ಕಿಂಗ್ ಜರ್ನಾಲಿಸ್ಟ ಯೂನಿಯನ್ ಸೋಶಿಯಲ್ ಹಾಗೂ ವಲ್ವೇರ್ ಅಧ್ಯಕ್ಷ ಪಠಾನ ಸೂಫಿಯಾನ ಖಾನ ಆಗ್ರಹಿಸಿದ್ದಾರೆ.

 ಮಾನ್ಯ ಜಿಲ್ಲಾ ಅಧಿಕಾರಿಗಳಿಗೆ ಮನವಿ ಮಾಡಿ ಮಾತನಾಡಿದ ಅವರು ಈ ಖರೀದಿ ಪತ್ರದ ನೊಂದಣಿ ಸಂಖ್ಯೆ ಜಿಎಲ್‌ಬಿ-1-07748--2021–22, ಸಿ.ಡಿ. ನಂ.ಜಿಎಲ್‌ಬಿಡಿ!146 ದಿನಾಂಕ 18-09-2021ರಂದು ಖರೀದಿ ಮಾಡಿರುತ್ತಾರೆ, ಈ ಜಮೀನು ಟ್ರಸ್ಟ ಜಮೀನು ಆದ ಕಾರಣ ಇದನ್ನು ಯಾವುದೆ ವ್ಯಕ್ತಿ ಸ್ವಯಂಗಾಗಿ ಖರೀದಿ ಮಾಡುವುದು ಕಾನೂನಿನ ಬಾಹಿರವಾಗಿರುತ್ತದೆ ಇದನ್ನು ಖರೀದಿಮಾಡಬೇಕಾದರೆ ಇದಕ್ಕೆ ತನ್ನದೆ ಆದ ಟ್ರಸ್ಟ್ ಗುರಿ ಉದ್ದೇಶಗಳು ಇರುತ್ತವೆ ಅವು ಯಾವುದೇ ಅನುಸರಿಸದೆ ಟ್ರಸ್ಟ್‌ನ ನಿಯಮಗಳನ್ನು ಉಲ್ಲಂಘಿಸಿದ ಯಾರೆ ಆಗರಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಖರೀದಿದಾರರು ಈ ಜಮೀನನ್ನು ಖರೀದಿಸಿದ ನಂತರ ಈ ಜಮೀನಿನ ಮೇಲೆ 25 ನಿವೇಶನಗಳನ್ನು ರಚಿಸಿ ಇವುಗಳನ್ನು ಮಾರಾಟ ಮಾಡುತ್ತಿದ್ದಾರೆ, ಆದ ಕಾರಣ ಅಬ್ದುಲ ಶುಕೂರ ತಂದೆ ಮಹ್ಮದ ಮೆಹಮೂದ ಅಲಿ ಇವರ ಮೇಲೆ ಕಾನೂನಿನ ಕ್ರಮ ಜರುಗಿಸಬೇಕೆಂದು ಹಾಗೂ ಈ ಎಲ್ಲಾ 25 ನಿವೇಶನಗಳ ಎಲ್ಲಾ ಆದೇಶಗಳನ್ನು ಹಾಗೂ ಮಾರಾಟಗಳನ್ನು ರದ್ದುಗೋಳಿಸಬೇಕೆಂದು ಆಗ್ರಹಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...