ಪೋಸ್ಟ್‌ಗಳು

2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.

ಇಮೇಜ್
ಚಿತ್ತಾಪುರ: ಪಟ್ಟಣದ ಮಾತೋಶ್ರೀ ಮಹಾದೇವಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಭುವನೇಶ್ವರ ದೇವಿಯ ಭಾವಚಿತ್ರಕ್ಕೆ ಪೊಜೆ ನಂತರ ಪುಷ್ಪ ನಮನ ಸಲ್ಲಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಿದರು. ಈ ವೇಳೆಯಲ್ಲಿ ಶಾಲೆಯ ಮುಖ್ಯಗುರುಗಳಾದ ಜಗದೇವ ಕುಂಬಾರ, ಶಿಕ್ಷಕರಾದ ವಿಶ್ವನಾಥ ಮಡಿವಾಳ, ಶ್ರೀದೇವಿ, ಸೇವಕಿ ಜಯಶ್ರೀ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಕನ್ನಡ ರಾಜ್ಯೋತ್ಸವಕ್ಕೆ ಅವಮಾನ.

ಇಮೇಜ್
ಚಿತ್ತಾಪೂರ: ಈ ಬಾರಿ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಬೇಕು ಎಂದು  ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು ಆದ್ರೇ ಚಿತ್ತಾಪುರ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೆ ಅವಮಾನ ಮಾಡಿದ್ದು ಕಂಡುಬಂದಿದೆ. ಪಟ್ಟಣದ ನ್ಯಾಯಾಲಯ, ಕರ್ನಾಟಕ ಗ್ರಾಮೀಣ ಬ್ಯಾಂಕ,ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯ, ಬಿಜೆಪಿ ಮಂಡಲ ಕಾರ್ಯಾಲಯ, ಜೆಡಿಎಸ್ ಕಾರ್ಯಾಲಯ, ಭಾರತೀಯ ಸ್ಟೇಟ್ ಬ್ಯಾಂಕ, ಎಸ್ ಬಿಐ ಬ್ಯಾಂಕ,  ರೈಲುನಿಲ್ದಾಣ, ಸೇರಿದಂತೆ ಈ ಎಲ್ಲಾವುಗಳಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡದೆ ಕನ್ನಡಿಗರಿಗೆ ರಾಜ್ಯ ಸರ್ಕಾರಕ್ಕೆ ಅವಮಾನ ಮಾಡಿದಂತೆ ಆಗಿದೆ ಎನ್ನಲಾಗುತ್ತಿದೆ. ಕೊಡಲೇ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾ ಆಡಳಿತ ಎಚ್ಚತ್ತುಕೊಂಡು ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ ಅವಮಾನಿಸಿದ ಈ ಎಲ್ಲಾ ಕಾರ್ಯಾಲಯ, ಬ್ಯಾಂಕ, ರೈಲುನಿಲ್ದಾಣ, ನ್ಯಾಯಾಲಯ ವಿರುದ್ಧ ಕ್ರಮ ಕೈಗೊಂಡು ಕಾನೂನು ರೀತಿಯಲ್ಲಿ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಲಾಗಿದೆ. ಪಟ್ಟಣದಲ್ಲಿ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ ಅವಮಾನ ಮಾಡುವುದು ಇದೇನು ಹೊಸದಲ್ಲ, ಪದೇ ಪದೇ ಕನ್ನಡ ಭಾಷೆಗೆ ಅವಮಾನ ಆಗುತ್ತಿದೆ. ಇದರ ಕುರಿತು ಸಾಕಷ್ಟು ಬಾರಿ ಮನವಿ ಹೋರಾಟ ಮಾಡಿದ್ರು ಪ್ರಯೋಜನವಾಗಿಲ್ಲ ಎನ್ನುತ್ತಾರೆ. - ಚಂದರ ಚವ್ಹಾಣ್ ಕರವೇ, ಅಧ್ಯಕ್ಷರು ಚಿತ್ತಾಪುರ. ತಾಲ್ಲೂಕು ಆಡಳಿತ ವತಿಯಿಂದ ನಡೆದ 69ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಹಳೆಯ ಭುವನೇ...

ಕನ್ನಡ ಭಾಷೆಯನ್ನು ಗೌರವಿಸಬೇಕು: ಹಿರೇಮಠ.

ಇಮೇಜ್
ಚಿತ್ತಾಪುರ: ಕನ್ನಡ ನಾಡು ಉದಯವಾದ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಇದರ ಜೊತೆಗೆ ಕನ್ನಡ ಭಾಷೆಯನ್ನು ಗೌರವಿಸಬೇಕು ಎಂದು ತಹಸೀಲ್ದಾರ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ತಹಸೀಲ್‌ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ 69ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಸಹಸ್ರಾರು ವರ್ಷಗಳ ಇತಿಹಾಸವಿದೆ,ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತ ಎಂದು ಹೇಳಿದರು. ವಿಶೇಷ ಉಪನ್ಯಾಸಕ ರಾಗಿ ಆಗಮಿಸಿದ ರಾವೂರಿನ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ ಸಿದ್ದಲಿಂಗ ಬಾಳಿ ಮಾತನಾಡಿ, 1956 ನವೆಂಬರ್ 1ರಂದು ಕನ್ನಡ ಭಾಷಿಗರಿಗಾಗಿ ಒಂದು ರಾಜ್ಯ ಉದಯವಾದ ಹಿನ್ನೆಲೆ ರಾಜ್ಯೋತ್ಸವ ಆಚರಣೆಯನ್ನು ಮಾಡಲಾಯಿತು. 1973 ನವೆಂಬರ್ 1ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಯಿತು ಹೀಗಾಗಿ ಕರ್ನಾಟಕ ರಾಜ್ಯೋತ್ಸವಕ್ಕೆ ತನ್ನದೇ ಆದ ಭವ್ಯ ಇಹಾಸವಿದೆ ಎಂದರು.  ಎಲ್ಲಾ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಅದ್ಯತೆ ನೀಡಬ...

ಶಿಕ್ಷಕರ ಸ್ನೇಹಿ ಪೆನಲಗೆ ಬೆಂಬಲಿಸಲು ಮನವಿ.

ಇಮೇಜ್
ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಗೆ 2024-29 ನೇ ಸಾಲಿನ ಅವಧಿಗಾಗಿ ಅ.28 ರಂದು ನಡೆಯಲಿರುವ ಚುನಾವಣೆಯಲ್ಲಿ ನಿರ್ದೇಶಕರ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಕೈಲಾಸ ನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ಬಳೂಂಡಗಿ ನೇತೃತ್ವದ ಶಿಕ್ಷಕರ ಸ್ನೇಹಿ ಪೆನಲ್ ಹಾಗೂ ಇಂಗಳಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಣ್ಣಗೌಡ ಮಲ್ಯದ್ ರವರ ಪ್ರಜಾಸತ್ತಾತ್ಮಕ ಕ್ರಿಯಾಶೀಲ ಶಿಕ್ಷಕರ ಪೆನಲ್ ಅವರ ನಡುವೆ ಪೈಪೋಟಿ ನಡೆಯುತ್ತಿದೆ,  ಬಸವರಾಜ ಬಳೂಂಡಗಿ ನೇತೃತ್ವದಲ್ಲಿ ಚಿತ್ತಾಪುರ ಸರ್ಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿವಾನಂದ ನಾಲವಾರ, ಚಾಮನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗೌತಮಿ, ಗಂಡಗುರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಹ್ಮದ್ ಜಾವೀದ್, ಅಲ್ಲೂರ.ಬಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ಸಾಬಣ್ಣ ಜಕಬೋ ಅವರು ತಮ್ಮ ಬೆಂಬಲಿಗರೊಂದಿಗೆ ಅಬ್ಬರದ ಪ್ರಚಾರ ನಡೆಸಿದ್ದಾರೆ. ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಸವರಾಜ ಬಳೂಂಡಗಿ ರವರು ಕ್ಷೇತ್ರದಲ್ಲಿ ಸುಮಾರು 7 ವರ್ಷಕ್ಕೂ ಅಧಿಕ ವರ್ಷ ಸೇವೆ ಸಲ್ಲಿಸಿ ಈ ಕ್ಷೇತ್ರದಲ್ಲಿ ಸಾಕಷ್ಟು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಹಾಗೂ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಕೆಲಸ ಮಾಡಿದ್ದಾರೆ. ಇನ್ನೂ ಸಹ ಕ್ಷೇತ್ರದಲ್ಲಿ ಶಿಕ್ಷಕ ಕುಂದು ಕೊರತೆಗಳ ಹಾಗೂ ಸರ್ಕಾರಿ ನೌಕರರ ಸಮಸ್ಯೆಗಳ ಕುರ...

ಮಣಿಕಂಠ ಮಾಡಿದ ಆರೋಪ ಸತ್ಯಕ್ಕೆ ದೂರ: ಮಲ್ಲಿಕಾರ್ಜುನ ಸ್ಪಷ್ಟನೆ.

ಇಮೇಜ್
ಚಿತ್ತಾಪುರ: ಬಜಾಜ್ ಕಲ್ಯಾಣ ಮಂಟಪದಲ್ಲಿ ಅ.25 ರಂದು ನಡೆದ ಜಿಲ್ಲಾ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ ಸಮಾರಂಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮಹಿಳೆಯರಿಗೆ ಹಣ ಹಂಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಮಾಡಿದ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮಲ್ಲಿಕಾರ್ಜುನ ಕಾಳಗಿ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಅವರು ಲೋಕಸಭಾ ಚುನಾವಣೆಯಲ್ಲಿ ಬಹುಮತದಿಂದ ಗೆಲುವು ಸಾಧಿಸಿದ್ದ ಖುಷಿಯಿಂದ ಪುರಸಭೆ ಸದಸ್ಯರು ಸ್ವಇಚ್ಛೆಯಿಂದ ಮಹಿಳೆಯರಿಗೆ ದುಡ್ಡು ಕೊಟ್ಟಿದ್ದು ಸತ್ಯ, ಆದ್ರೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರಿಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ಹೇಳುವ ಮಣಿಕಂಠ ಸ್ವಲ್ಪ ಆ ದಿನ ಅಲ್ಲಿ ಏನೂ ನಡೆದಿದ್ದೆ ಎಂದು ಆಲೋಚನೆ ಮಾಡಲಿ ಅಂದು ಸರ್ಕಾರದ 63 ಕೋಟಿ ರೂಪಾಯಿ ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಸಮಾರಂಭದಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು. ಅಭಿನಂದನಾ ಸಮಾರಂಭ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ ಎಪಿಎಂಸಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು ಮೊದಲು ಇದನ್ನ...

ಮತದಾರರಿಗೆ ಧನ್ಯವಾದ ಅರ್ಪಿಸಿದ ರಾಧಾಕೃಷ್ಣ ದೊಡ್ಡಮನಿ.

ಇಮೇಜ್
ಚಿತ್ತಾಪುರ: ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ಟಿಕೇಟು ನೀಡಿತ್ತು. ನೀವೆಲ್ಲ ಜೊತೆಯಾಗಿ ಕೆಲಸ ಮಾಡಿ ಮನೆ  ಮನೆಗೆ ಹೋಗಿ ಪ್ರಚಾರ ಮಾಡಿ ನನ್ನ ಗೆಲ್ಲುವುಗೆ ಸಹಕಾರಿಯಾಗಿದ್ದೀರಿ,  ನಿಮಗೆಲ್ಲ ನಾನು ಮನಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುವೆ ಎಂದು ಸಂಸದ ರಾಧಾಕೃಷ್ಣ ದೊಡ್ಡಮನಿ‌ ಹೇಳಿದರು.  ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮತದಾರರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ನಾನು ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ನೀವೆಲ್ಲ ವಿಶ್ವಾಸವಿಟ್ಟು ನನಗೆ ಗೆಲ್ಲಿಸಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ನಿಮ್ಮೆಲ್ಲರ ಸಹಕಾರ ಹೀಗೆ ಇರಲಿ, ನಾನು ಹೆಚ್ಚಿಗೆ ಮಾತನಾಡುವುದಿಲ್ಲ ನಿಮ್ಮ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ● ಕ್ಷೇತ್ರದ ಅಭಿವೃದ್ದಿಯ ಚಿತ್ರಣವನ್ನೇ ಬದಲಿಸುವೆ. ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ನಿಮ್ಮ ಅಭಿಮಾನದ ಅಕ್ಕರೆಗೆ ನನಗೆ ಮಾತು ಬರದಾಗಿದೆ ನೀವು ನಿಮ್ಮ ಪ್ರೀತಿ ತೋರಿಸಲು ಇಲ್ಲಿ ಸೇರಿದ್ದೀರಿ ನಿಮ್ಮ ವಿಶ್ವಾಸಕ್ಕೆ ನಮ್ಮ ಕುಟುಂಬದ ಪರವಾಗಿ ಕೋಟಿ ಕೋಟಿ ಧನ್ಯವಾದಗಳು.ನಾನು ನಿಮಗೆ ಹಲವಾರು ಸಲ ಮಾತು ಕೊಟ್ಟಿದ್ದೇನೆ. ನಮ್ಮ ಭಾಗದ ಅಭಿವೃದ್ದಿಯೇ ನನಗೆ ಮೂಲ ಮಂತ್ರ ಇಂದು ಕೂಡಾ 62 ಕೋಟಿ‌ ರೂಪಾಯಿ ವೆಚ್ಚದಲ್ಲಿ ಹಲವಾರು ಅಭಿವೃದ್ದಿ ಕಾಮಗಾರಿ...

ಮಹಿಳಾ ಶೌಚಾಲಯ ದುರಸ್ತಿಗೆ ಆಗ್ರಹ.

ಇಮೇಜ್
ಚಿತ್ತಾಪುರ: ಪಟ್ಟಣದ ಪುರಸಭೆಯ ವಾರ್ಡ್ ಸಂಖ್ಯೆ 15ರ ವ್ಯಾಪ್ತಿಯಲ್ಲಿ ಬರುವ ಒಂಬತ್ತು ಕಮಾನ್ ಏರಿಯಾದ ಮಹಿಳಾ ಶೌಚಾಲಯ ಅವ್ಯವಸ್ಥೆಯಿಂದ ಮಹಿಳೆಯರು ಶೌಚಾಲಯಕ್ಕೆ ಪರದಾಡುವ ಪರಿಸ್ಥಿತಿ ಉಂಟಾಗಿದೆ ಕೂಡಲೇ ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಕಾರ್ಯ ಮಾಡಬೇಕು ಎಂದು ಪುರಸಭೆ ಸದಸ್ಯ ಶ್ಯಾಮ್ ಮೇಧಾ ಆಗ್ರಹಿಸಿದ್ದಾರೆ. ಶೌಚಾಲಯದ ಬಾಗಿಲುಗಳು ಮುರಿದು ಬಿದ್ದು ಸುಮಾರು ತಿಂಗಳುಗಳಾದರೂ ಇನ್ನೂ ರಿಪೇರಿ ಆಗಿರುವುದಿಲ್ಲ. ಮತ್ತು ಶೌಚಾಲಯದ ಸುತ್ತಲೂ ಗಿಡ ಗಂಟಿಗಳು ಬೆಳೆದಿದ್ದರಿಂದ ಶೌಚಾಲಯಕ್ಕೆ ಹೋಗಲು ಪರದಾಡುವಂತಾಗಿದೆ. ಹೊಸ ಶೌಚಾಲಯದ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಆಗಿದ್ದರೂ ಇನ್ನೂ ಕೂಡ ಯಾವುದೇ ಕಾಮಗಾರಿ ಆರಂಭವಾಗಿರುವುದಿಲ್ಲ. ಶೌಚಾಲಯಕ್ಕೆ ಹೋಗುವ ರಸ್ತೆ ಹಾಗೂ ಸುತ್ತಮುತ್ತಲಿನ ಗಿಡಗಂಟಿಗಳು ಬೆಳೆದಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ ಹೀಗಾಗಿ ಮಹಿಳೆಯರು ಆತಂಕದಲ್ಲಿದ್ದಾರೆ. ಹೊಸ ಶೌಚಾಲಯ ನಿರ್ಮಾಣ ಆಗುವವರೆಗೆ ಈಗಿರುವ ಶೌಚಾಲಯದ ರಿಪೇರಿ ಮಾಡಿಸಿ ಬೆಳೆದಿರುವ ಗಿಡಗಂಟಿಗಳು ತೆರವುಗೊಳಿಸಿ ಮಹಿಳೆಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಅ,25ಕ್ಕೆ ಅಭಿನಂದನಾ ಸಮಾರಂಭ: ಸಾಲಿ.

ಇಮೇಜ್
ಚಿತ್ತಾಪುರ :   ಕಲಬುರಗಿಯ ನೂತನ ಸಂಸದ ಡಾ. ರಾಧಾಕೃಷ್ಣನ ದೊಡ್ಡಮನಿ ಅವರು ಸಂಸದರಾಗಿ ಪ್ರಪ್ರಥಮ ಬಾರಿ ಪಟ್ಟಣಕ್ಕೆ ಅ 25 ರಂದು  ಆಗಮಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ವತಿಯಿಂದ ಅದ್ದೂರಿಯಾಗಿ ಅಭಿನಂದನಾ ಸಮಾರಂಭ ಪಟ್ಟಣದ ಬಜಾಜ್ ಕಲ್ಯಾಣ ಮಂಟಪ ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.  ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ಜರುಗಿತು. ನಂತರ ಅವರು  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಸಂಸದ ಡಾ. ರಾಧಾಕೃಷ್ಣ ದೊಡ್ಡಮನಿ ಅವರು ಪಟ್ಟಣದ ಸುಪ್ರಸಿದ್ಧ  ಶ್ರೀ ನಾಗಾವಿ ಯಲ್ಲಮ್ಮ ದೇವಸ್ಥಾನಕ್ಕೆ ಮತ್ತು ಹಜರತ್ ಚಿತ್ತಶಾವಲಿ ದರ್ಗಾಕ್ಕೆ ಭೇಟಿ ನೀಡಿ ನಂತರ  ಸಂವಿಧಾನ ಶಿಲ್ಪಿ ಡಾ‌. ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ಶ್ರೀ ಬಸವೇಶ್ವರ ಮೂರ್ತಿಗೆ ಮಲಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶಾಸಕ ಡಾ. ಅಜಯಸಿಂಗ, ಶಾಸಕ ಎಂವೈ ಪಾಟೀಲ, ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  ಭವ್ಯ ಮೆರವಣಿಗೆ : ಪಟ್ಟಣದ ಚಿತ್ತಾಶವಲಿ ಚೌಕದಿಂದ ಬೆಳಿಗ್ಗೆ 10 ಗಂಟೆಗೆ ಮೆರವಣ...

ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿದ ಯುವತಿಗೆ ಗೂಸಾ.

ಇಮೇಜ್
ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಮಾಡಲು ಯತ್ನಿಸಿದ ಯುವತಿಗೆ ಪ್ರಯಾಣಿಕರು ಥಳಿಸಿದ ಘಟನೆ ಬುಧವಾರ ನಡೆದಿದೆ. ಬುಧವಾರ ಪಟ್ಟಣದಲ್ಲಿ ಸಂತೆ ಇರುವ ಕಾರಣ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪ್ರತಿ ಬುಧವಾರ ಒಂದಲ್ಲ ಒಂದು ಕಳ್ಳತನ ಆಗುತ್ತದೆ. ಇಂದು ಸಾಯಂಕಾಲ ಬಸ್ ನಿಲ್ದಾಣದಲ್ಲಿ ದಿಗ್ಗಾಂವ್ ಮತ್ತು ಅಲ್ಲೂರ ಗ್ರಾಮದ ಮಹಿಳೆಯರ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿ ಓಡಿಹೋಗುವಾಗ ಯುವತಿಯನ್ನು ಹಿಡಿದು ಪೋಲಿಸ್‌ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ ಇಲಾಖೆಯು ಬುಧವಾರ ಸಂತೆಯಂದ್ದು ಕಳ್ಳತನ ಆಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.

ನಾಳೆ ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆ.

ಇಮೇಜ್
ಚಿತ್ತಾಪುರ: ಕಲಬುರ್ಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ ಸಮಾರಂಭ ನಿಮಿತ್ಯ ನಾಳೆ (ಅ.23 ರಂದು) ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಹೇಳಿದರು. ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ ಸಮಾರಂಭ ಇದೇ ಅ.25 ರಂದು ಪಟ್ಟಣದಲ್ಲಿ ಆಯೋಜಿಸಿದ್ದು, ಹೀಗಾಗಿ ಸಮಾರಂಭವನ್ನು ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ ಮಾಡುವ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಪುರಸಭೆ ಸದಸ್ಯರು ಮತ್ತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು, ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳು ನೀಡಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಜಿಪಂ ಮಾಜಿ ಸದಸ್ಯ ಶಿವರುದ್ರಪ್ಪ ಭೀಣಿ, ಪುರಸಭೆ ಸದಸ್ಯ ವಿನೋದ ಗುತ್ತೇದಾರ, ಕಾಂಗ್ರೆಸ್ ಯುವ ಅಧ್ಯಕ್ಷ ಸಂಜಯ ಬುಳಕರ್‌, ಪ್ರಮುಖರಾದ ಸುನೀಲ್ ದೊಡ್ಡಮನಿ, ಮಲ್ಲಪ್ಪ ಹೊಸಮನಿ, ಶಿವಕಾಂತ್ ಬೆಣ್ಣೂರಕರ್, ರಾಮಲಿಂಗ ಬಾನರ್‌, ನಾಗು ಕಲ್ಲಕ ಇದ್ದರು.

ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸೋಣ.

ಇಮೇಜ್
ಚಿತ್ತಾಪುರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸೋಣ ಎಂದು ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವೆಂಬರ್ 1 ರಂದು ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬೆಳಿಗ್ಗೆ 8 ಗಂಟೆ ಅಧಿಕಾರಿಗಳು ಧ್ವಜಾರೋಹಣವನ್ನು ನೆರವೇರಿಸಿ ತಾಲೂಕು ಆಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲಾರೂ ಭಾಗವಹಿಸಬೇಕು ಎಂದು ಕೋರಿದ್ದಾರೆ.  ಪಟ್ಟಣದ ಎಲ್ಲ ರಸ್ತೆಗಳಲ್ಲಿ ಸ್ವಚ್ಛತೆ ಕಾರ್ಯ ಮಾಡಬೇಕು ಎಂದು ಪುರಸಭೆಗೆ ಸೂಚಿಸಿದರು, ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ದೀಪಾಲಂಕಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.  ಪಟ್ಟಣದ ಎಲ್ಲ ಅಂಗಡಿಗಳ ನಾಮಫಲಕ ಕನ್ನಡದಲ್ಲಿ ಇರುವಂತೆ ಮಾಡಬೇಕು, ಭುವನೇಶ್ವರಿ ವೃತ್ತ ಅಭಿವೃದ್ಧಿಗೊಳಿಸಿ ಆಲ್ಲಿ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸಬೇಕು, ಎಲ್ಲ ಅಂಗಡಿಗಳ ಮೇಲೆ ಕನ್ನಡ ಧ್ವಜ ಅಳವಡಿಸುವಂತೆ ಸೂಚಿಸಬೇಕು, ಉಪಹಾರದ ವ್ಯವಸ್ಥೆ ಮಾಡಬೇಕು, ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳ ವ್ಯವಸ್ಥೆ ಮಾಡಬೇಕು, ಮೆರವಣಿಗೆ ಅಚ್ಚುಕಟ್ಟಾಗಿ ನಡೆಯಬೇಕು ಮತ್ತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ...

ಸಂಘದ ಚುನಾವಣೆ: ಅರುಣಕುಮಾರ್‌ ನಾಮಪತ್ರ ಸಲ್ಲಿಕೆ.

ಇಮೇಜ್
ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆಯ ಚುನಾವಣೆ ಇದೇ ಅ.28 ರಂದು ನಡೆಯಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಅರುಣಕುಮಾರ್ ಚಿಂಚನಸೂರ ನಿರ್ದೇಶಕರ ಹುದ್ದೆಗೆ ಆಯ್ಕೆ ಬಯಿಸಿ ಇಲಾಖೆಯ ಸಿಬ್ಬಂದಿಗಳೊಂದಿಗೆ ತೆರಳಿ ಚುನಾವಣಾಧಿಕಾರಿ ವಿಜಯಕುಮಾರ ಲೊಡ್ಡೆನೋರ ಅವರಿಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಅರುಣಕುಮಾರ್ ಚಿಂಚನಸೂರ ಅವರು ನಾಮಪತ್ರ ಸಲ್ಲಿಸಿ ಚುನಾವಣಾ ಕಣಕ್ಕಿಳಿದಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಬಸವರಾಜ ಜಮಾದಾರ, ಕೆಎಂಎಫ್ ಮಾಜಿ ನಿರ್ದೇಶಕ ತಿಪ್ಪಣ್ಣ ಆಳಂದ, ಇಲಾಖೆ ಸಿಬ್ಬಂದಿಗಳಾದ ಮಹ್ಮದ್ ಗೌಸೋದ್ದಿನ್, ಸಿದ್ದರಾಜ್, ಶರಣು, ಜಯಶ್ರೀ, ಸಿದ್ದಪ್ಪ, ರವಿಕುಮಾ‌ರ್, ಲಿಂಗರಾಜ್, ಪರಶುರಾಮ, ದೇವಿಂದ್ರಪ್ಪ ಭಾಲ್ಕಿ, ರವಿ ಬೆಳಮಗಿ ಸೇರಿದಂತೆ ಇತರರು ಇದ್ದರು.

ಅದ್ದೂರಿಯಾಗಿ ನಡೆದ ನಾಗಾವಿ ಪಲ್ಲಕ್ಕಿ ಉತ್ಸವ.

ಇಮೇಜ್
• ದಾರಿ ಉದ್ದಕ್ಕೂ ಅನ್ನ ದಾಸೋಹ.  •ಪಲ್ಲಕ್ಕಿ ಉತ್ಸವಕ್ಕೆ ಹರಿದುಬಂದ ಭಕ್ತ ಸಾಗರ. ಚಿತ್ತಾಪೂರ: ರಾಷ್ಟ್ರಕೂಟರ ಕುಲ ದೇವತೆಯಾದ ಸುಪ್ರಸಿದ್ಧ ಶ್ರೀ ನಾಗಾವಿ ಯಲ್ಲಮ್ಮ ದೇವಿ ಪಲ್ಲಕ್ಕಿ ಉತ್ಸವ ತುಂಬಾ ವಿಜೃಂಭಣೆಯಿಂದ ಸಾವಿರಾರು ಭಕ್ತರ ಜೈಘೋಷದ ಮಧ್ಯ ಗುರುವಾರ ಅದ್ದೂರಿಯಾಗಿ ಜರಗಿತ್ತು. ಪಟ್ಟಣದ ಸರಾಫ್ ಲಚ್ಚಪ್ಪ ನಾಯಕ ನಿವಾಸದಲ್ಲಿ ಮಧ್ಯಾಹ್ನ 2ಗಂಟೆ ಸುಮಾರಿಗೆ ವಿಘ್ನೇಶ್ವರ ಗುರು ಹಾಗೂ ಯಲ್ಲಮ್ಮ ದೇವಿ ಪಲ್ಲಕ್ಕಿಗೆ ತಹಸಿಲ್ದಾರ್ ನಾಗಯ್ಯ ಹೀರೆಮಠ, ಕಚೇರಿಯ ಸಿರಸ್ತೇದಾರ್ ಅಶ್ವಥ್ ನಾರಾಯಣ್, ಕಣ್ವ ನಾಯಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಪ್ರಭುರಾಜ ಕಾಂತಾ,ಬಿಜೆಪಿ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಡಿವಾಯ್ಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಜಗದೇವಪ್ಪ ಪಾಳಾ, ಗಣ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತ್ತು ನಂತರ ಸಕಲ ವಾದ್ಯಗಳೊಂದಿಗೆ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಮೂರ್ತಿ ಹೊತ್ತ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಚಿತಾವಲಿ ಚೌಕ, ಕಪಡಾ ಕಿರಾಣಾ ಬಜಾರ್, ಜನತಾ ಚೌಕ್, ನಾಗಾವಿ ಚೌಕ್, ಹಾಗೂ ಒಂಟಿ ಕಮಾನ್ ಸೇರಿ ವಿವಿಧ ಬೀದಿಗಳ ಮೂಲಕ ರಾತ್ರಿ 8 ಗಂಟೆಗೆ ಶ್ರೀ ನಾಗಾವಿ ಯಲ್ಲಮ್ಮ ದೇವಿ ದೇಗುಲ ತಲುಪಿತ್ತು. ಮೆರವಣಿಗೆಯಲ್ಲಿ ಭಾಜಾ ಭಜಂತ್ರಿ, ಡೊಳ್ಳು ಕುಣಿತ, ಕೋಲಾಟ ಬಣ್ಣ ಬಣ್ಣದ ಧ್ವಜಗಳು ಗಮನ ಸೆ...

ಸಂಘದ ಚುನಾವಣೆಗೆ ಪಿಡಿಓ ನಾಮಪತ್ರ ಸಲ್ಲಿಕೆ

ಇಮೇಜ್
ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆಯ ಚುನಾವಣೆ ಇದೇ ಅ.28 ರಂದು ನಡೆಯಲಿದ್ದು, ನಿರ್ದೇಶಕರ ಹುದ್ದೆಗೆ ಆಯ್ಕೆ ಬಯಿಸಿ ಅಳ್ಳೋಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಿಂದ್ರಪ್ಪ ಭಾಲ್ಕೆ ಅವರು ಇಲಾಖೆಯ ಸಿಬ್ಬಂದಿಗಳೊಂದಿಗೆ ತೆರಳಿ ಚುನಾವಣಾಧಿಕಾರಿ ವಿಜಯಕುಮಾರ ಲೊಡ್ಡೆನೋರ ಅವರಿಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ತಾಲೂಕು ಪಂಚಾಯತ್ ಕಚೇರಿ ವತಿಯಿಂದ ದೇವಿಂದ್ರಪ್ಪ ಭಾಲ್ಕೆ ಅವರು ನಾಮಪತ್ರ ಸಲ್ಲಿಸಿ ಚುನಾವಣಾ ಕಣಕ್ಕಿಳಿದಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ತಾಲೂಕು ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಾದ ಅಮೃತ್ ಕ್ಷೀರಸಾಗರ, ಹರೀಶ್ ಶಿಂಧೆ, ಓಂಕಾರ, ಶ್ರಾವಣ,ಅನೀಲಕುಮಾರ, ರೇಷ್ಮಾ, ಅನೀತಾ, ಜಕ್ಕಪ್ಪ, ಜುಬೇರ್, ಸಂದೇಶ, ಪ್ರಕಾಶ್ ಸೇರಿದಂತೆ ಇತರರು ಇದ್ದರು.

ಸ್ವಚ್ಛತೆಯಿಂದ ಉತ್ತಮ ಆರೋಗ್ಯ: ಗ್ರಾಪಂ ಅಧ್ಯಕ್ಷ.

ಇಮೇಜ್
ಚಿತ್ತಾಪುರ: ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರಿಂದ ಉತ್ತಮ ಆರೋಗ್ಯ ದೊರೆಯಲು ಸಾಧ್ಯ ಎಂದು ಭಾಗೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ ಪಾಟೀಲ್ ಹೇಳಿದರು. ತಾಲೂಕಿನ ಭಾಗೋಡಿ ಗ್ರಾಮದ ಪಂಚಾಯತ್ ಸಭಾಂಗಣದಲ್ಲಿ ಅಶೋಕ್ ಲೇಲ್ಯಾಂಡ್ ಹಾಗೂ ಲರ್ನಿಂಗ್ ಲಿಂಕ್ ಫೌಂಡೇಶನ್ ಮತ್ತು ರೋಟು ಸ್ಕೂಲ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬರಲ್ಲಿ ಪರಿಸರದ ಬಗ್ಗೆ ಕಾಳಜಿ ಇರಬೇಕು. ನಮ್ಮೆಲ್ಲರ ಜೀವನದಲ್ಲಿ ಇಂತಹ ಮನೋಭಾವನೆ ಮೂಡಿದಾಗ ಸ್ವಚ್ಛ ಊರು, ಸ್ವಚ್ಛ ಗ್ರಾಮ ನಿರ್ಮಾಣ ಸಾಧ್ಯವಾಗುತ್ತದೆ. ಸ್ವಸ್ಥ ಆರೋಗ್ಯ, ವಾತಾವರಣ, ಸಮಾಜದ ನಿರ್ಮಾಣದ ದಿಶೆಯಲ್ಲಿ  ಸ್ವಚ್ಛತೆ ಬಹುಮುಖ್ಯವಾಗಿದೆ ಎಂದರು. ಎಲ್ಎಲ್ಎಫ್ ತಾಲೂಕು ಬ್ಲಾಕ್ ಮ್ಯಾನೇಜರ್ ಸಂತೋಷ ಕುಮಾರ್ ಮಾತನಾಡಿ ತಮ್ಮ ಊರಿನ  ಬಡಾವಣೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯ ರಕ್ಷಣೆ ಕಡೆ ಗಮನ ಹರಿಸಬೇಕು, ಅಶುದ್ಧ ವಾತಾವರಣ ನಿರ್ಮಾಣವಾದಲ್ಲಿ ಅನಾರೋಗ್ಯಕ್ಕೆ ತುತ್ತಾಗಬೇಕಾಗುತ್ತೆದೆ ಹೀಗಾಗಲೇ ತಾಲೂಕಿನಲ್ಲಿ 597 ವೀಕಲ ಚೇತನ್ ಮಕ್ಕಳು ಇದ್ದಾರೆ ಎಂಬ ಮಾಹಿತಿ ಗಮನಕ್ಕೆ ಬಂದಿದೆ. ಆದ್ದರಿಂದ ನಮ್ಮ ನಮ್ಮ ಸ್ವಚ್ಛತೆ ನಾವೇ ಮಾಡಿಕೊಳ್ಳಬೇಕು ಎಂದರು. ವಾರಕ್ಕೆ ಒಂದು ದಿನದಂತೆ ನಮ್ಮ ಮನೆಯ ಅಕ್ಕ ಪಕ್...

ರೈತರ ಅಹವಾಲು ಸ್ವೀಕರಿಸಲು ಕಾಲಾವಕಾಶ: ಡಿಸಿ.

ಇಮೇಜ್
ಚಿತ್ತಾಪುರ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಉದ್ದೇಶಿತ ರಾಮ್ಕೊ ಸಿಮೆಂಟ್ ಕಂಪೆನಿಯ ಯೋಜನಾ ಸ್ಥಳದಲ್ಲಿ ವಾಸವಾಗಿರುವ ಆಸಕ್ತ ನಿವಾಸಿಗಳು, ಪರಿಸರಾಸಕ್ತ ಗುಂಪುಗಳು ಮತ್ತು ಈ ಯೋಜನೆಯಿಂದ ತೊಂದರೆಗೊಳಗಾಗಬಹುದಾದ ಸಾರ್ವಜನಿಕರು ತಮ್ಮ ಸಲಹೆಗಳು, ಅನಿಸಿಕೆಗಳು, ಟೀಕೆ-ಟಿಪ್ಪಣಿಗಳು ಹಾಗೂ ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ, ಸೇಡಂ ಸಹಾಯಕ ಆಯುಕ್ತರಿಗೆ ಅಥವಾ ಚಿತ್ತಾಪುರ ತಹಸೀಲ್ದಾ‌ರ್ ಅವರಿಗೆ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಹೇಳಿದರು. ದಿ ರಾಮ್ಮೊ ಸಿಮೆಂಟ್ಸ್ ಲಿಮಿಟೆಡ್ ರವರು ಚಿತ್ತಾಪುರ ತಾಲೂಕಿನ ಬೊಮ್ಮನಹಳ್ಳಿ ಸುಣ್ಣದಕಲ್ಲು ಗಣಿ ಬ್ಲಾಕ್ (ಇ-ಹರಾಜು ಮಾಡಿದ ಗಣಿ ಬ್ಲಾಕ್) ನಿಂದ 4.0 MTPA ಉತ್ಪಾದನಾ ಸಾಮರ್ಥ್ಯದ ಸುಣ್ಣದ ಕಲ್ಲು, ಮೇಲಿನ ಮಣ್ಣು 2,14321 M', ಅಧಿಕ ಭಾರ (Over Burden) 0.46 ΜΤΡΑ ಜೊತೆಗೆ 1000 TPH ಸಾಮರ್ಥ್ಯದ ಕ್ರಷರ್ 500 TPH ಸಾಮರ್ಥ್ಯದ ವೊಟ್ಲ‌ರ್ ಮತ್ತು ಸ್ಟ್ರೀನ್, 1200 TPH ಸಾಮರ್ಥ್ಯದ ಬೆಲ್ಟ್ ಕನ್ವೆಯರ್‌ಗಳನ್ನು ಒಟ್ಟು 500 ಹೇಕ್ಟೇರ್ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಕಲಬುರ್ಗಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಉದ್ದೇಶಿತ ಯೋಜನೆಯ ಪರಿಸರ ಸಾ...

ದಕ್ಷ ಅಧಿಕಾರಿಗಳಿಗೆ ಬಿಜೆಪಿ ಅಭ್ಯರ್ಥಿಯಿಂದ ಕಿರುಕುಳ: ಹೊಸ್ಮನಿ.

ಇಮೇಜ್
ಚಿತ್ತಾಪುರ: ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ವಿಧಾನಸಭೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಕಿರುಕುಳ ನೀಡುತ್ತಿದ್ದಾರೆ ಎಂದು ಭಾರತೀಯ ದಲಿತ ಪ್ಯಾಂಥ‌ರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಹೇಳಿದ್ದಾರೆ. ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಹಾಬಾದ ಸಿಪಿಐ ನಟರಾಜ ಲಾಡೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ ಅವರ ವೃತ್ತಿಯಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆಯಿಲ್ಲ. ಆದರೆ ಮಣಿಕಂಠ ರಾಠೋಡ ಸುಳ್ಳು ಆರೋಪ ಮಾಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಕಲುಷಿತ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ಮಣಿಕಂಠ ಒಬ್ಬ ರೌಡಿಶೀಟರ್‌ಯಾಗಿದ್ದು, ಗಡಿಪಾರಾದ ಈತ ಗುಂಡಾಗಳ ಪಡೆಕಟ್ಟಿಕೊಂಡು ಅಶಾಂತಿ ವಾತಾವರಣ ಮೂಡಿಸುತ್ತಿದ್ದಾರೆ. ಚಿತ್ತಾಪುರ ಯಾವತ್ತು ಶಾಂತಿ ತಾಲೂಕಾಗಿದ್ದು, ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ.ಹಿಂದೆ ಪೋಲಿಸ್ ಕಮಿಷನ‌ರ್ ಸೇರಿದಂತೆ ಅನೇಕ ಪೋಲಿಸ್‌ರ ವಿರುದ್ದವೂ ಸುಳ್ಳು ಆರೋಪ ಮಾಡಿದ ಉದಾಹರಣೆಗಳಿವೆ. ಆದ್ದರಿಂದ ದಕ್ಷ ಅಧಿಕಾರಿ ಸಿಪಿಐ ನಟರಾಜ ಲಾಡೆ ವಿರುದ್ಧ ಸುಳ್ಳು ಆರೋಪ ಮಾಡಿದ್ದು ಜನರು ನಂಬುದಿಲ್ಲ. ಸುಳ್ಳು ಆರೋಪ ಮಾಡಿರುವ ಮಣಿಕಂಠ ರಾಠೋಡ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

28ಕ್ಕೆ ಸರಕಾರಿ ನೌಕರರ ಸಂಘದ ಚುನಾವಣೆ

ಇಮೇಜ್
ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಯ ನಿರ್ದೇಶಕರ ಚುನಾವಣೆ ಅಕ್ಟೋಬರ್ 28 ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ವಿಜಯಕುಮಾರ ಲೊಡ್ಡನೋರ ತಿಳಿಸಿದ್ದಾರೆ. ಅ.9 ರಿಂದ 18 ವರೆಗೆ ಸರಕಾರಿ ನೌಕರರ ಭವನದಲ್ಲಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಅ.19 ರಂದು ನಾಮಪತ್ರ ಪರಿಶೀಲನೆ, ಅ.21 ರಂದು ಉಮೇದುವಾರಿಕೆ ವಾಪಸ್ಸು ಪಡೆಯಲು ಕೊನೆ ದಿನವಾಗಿದೆ. ಅಂದೇ ಅರ್ಹ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗುವುದು. ಅ.28 ರಂದು ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಲಿದ್ದು. ಅಂದೆ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ ಎಂದು ಚುನಾವಣಾಧಿಕಾರಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ನಾಗಾವಿಗೆ ಹೋಗುವ ರಸ್ತೆ ಸುಧಾರಣೆಗೆ ಆಗ್ರಹ.

ಇಮೇಜ್
ಚಿತ್ತಾಪೂರ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದಿಂದ ನಾಗಾವಿ ಯಲ್ಲಮ್ಮ ದೇವಸ್ಥಾನದ ವರೆಗಿನ ರಸ್ತೆ ಸುಧಾರಣೆ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ರಾಷ್ಟ್ರಕೂಟರ ಮನೆತನದ ಕುಲದೇವತೆ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವ ಅಕ್ಟೋಬರ್ 17ರಂದು ನಡೆಯಲಿದ್ದು ಈ ಉತ್ಸವಕ್ಕೆ ವಿವಿಧ ರಾಜ್ಯಗಳಾದ ತೆಲಂಗಾಣ, ಹೈದರಾಬಾದ್, ಮಹಾರಾಷ್ಟ್ರ, ಸೇರಿದಂತೆ ಸಾಕಷ್ಟು ಭಕ್ತರು ಆಗಮಿಸುತ್ತಾರೆ ಹಾಗೂ ಪಲ್ಲಕ್ಕಿ ಉತ್ಸವ ಕೊಡ ಇದೇ ರಸ್ತೆ ಮಾರ್ಗವಾಗಿ ಸಾಗುತ್ತದೆ ಹೀಗಾಗಿ ರಸ್ತೆ ಉದ್ದಕ್ಕೂ ಇರುವ ತಗ್ಗು ಗುಂಡಿಗಳು ಹಾಗೂ ಅಲ್ಲಲ್ಲಿ ಹಾಳ್ಳಾದ ರಸ್ತೆ ಸುಧಾರಣೆ ಮಾಡುವಂತೆ ಸ್ಥಳೀಯರು ಆಗ್ರಹವಾಗಿದೆ. ಖಬರಸ್ಥಾನ್ ರಸ್ತೆಯ ಅಕ್ಕ-ಪಕ್ಕ ಸಾರ್ವಜನಿಕರು ಮಲವಿಸರ್ಜನೆ ಮಾಡುತ್ತಿದ್ದು ಇಂತಹ ಜಾತ್ರಾ ಮಹೋತ್ಸವ ಸಮಯದಲ್ಲಿ ಹೋರ ಜಿಲ್ಲಾ, ರಾಜ್ಯಗಳಿಂದ ಬರುವ ಭಕ್ತಾದಿಗಳು ನೋಡಿ ಪಟ್ಟಣದ ಅಸ್ವಚ್ಛತೆ ಕಾಣದೆ ಸ್ವಚ್ಛತಾ ಕಾರ್ಯ ಆಗಬೇಕು ಇದಕ್ಕೆ ಪುರಸಭೆ ಇಲಾಖೆ ಕಾಳಜಿ ವಹಿಸಿ ಕೆಲಸ ಮಾಡಬೇಕು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪುರಸಭೆ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ಉತ್ಸವಕ್ಕೂ ಮುಂಚೆ ರಸ್ತೆ ಸುಧಾರಣೆ ಮಾಡಿ ಭಕ್ತರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಾರೆ ಕಾದುನೋಡಬೇಕಾಗಿದೆ.

ಹರಿಯಾಣ ಗೆಲುವು: ಬಿಜೆಪಿ ವಿಜಯೋತ್ಸವ.

ಇಮೇಜ್
ಚಿತ್ತಾಪೂರ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದಕ್ಕೆ ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂದೆ ಕಾರ್ಯಕರ್ತರು ಬುಧವಾರ ಪಾಟಾಕಿ ಸಿಡಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಮುಖಂಡರು, ಕಾರ್ಯಕರ್ತರು, ಜಯಘೋಷ ಹಾಕುವ ಮೂಲಕ ವಿಜಯೋತ್ಸವ ಆಚರಿಸಿದರು. ಪುರಸಭೆ ವಿರೋಧ ಪಕ್ಷದ ನಾಯಕ ನಾಗರಾಜ ಭಂಕಲಗಿ ಮಾತನಾಡಿ ಹರಿಯಾಣ ರಾಜ್ಯದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಮತ್ತೋಮ್ಮೆ ದೇಶದ ಪ್ರಧಾನಿಯ ಕೈ ಬಲಪಡಿಸಿದೆ. ಇದು ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ಸಿಕ್ಕ ಗೆಲುವು. ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ’ ಎಂದರು. ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಮಾತನಾಡಿ ರಾಜ್ಯದಲ್ಲಿ ಆಡಳಿತ ಇರುವ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಮತ್ತು ಆಮಿಷಗಳಿಗೆ ಒಳಗಾಗದೆ, ಪ್ರಧಾನಿ ಮೋದಿಯವರು ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ಮಾಡುತ್ತಿರುವ ಅಭಿವೃದ್ಧಿ ಹಾಗೂ ಜನಪರ ಯೋಜನೆಗಳಿಗೆ ಹರಿಯಾಣ ಜನ ಆಶಿರ್ವಾದ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಸಹ ಬಿಜೆಪಿ ಜಯ ಸಾಧಿಸಲಿದೆ ಎಂದ ಭವಿಷ್ಯ ನುಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್,  ಮಂಡಳ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ, ಮಹಿಳಾ ಮೋರ್ಚಾ ಅಧ್ಯಕ್ಷ ಶ್ರೀಮತಿ ನಾಗುಬಾಯಿ ಜ...

ಎರಡನೇ ಬಾರಿ ಅಧ್ಯಕ್ಷರಾಗಿ ರಮೇಶ್ ಹಡಪದ ಆಯ್ಕೆ

ಇಮೇಜ್
ಚಿತ್ತಾಪುರ: ತಾಲೂಕು ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷರಾಗಿ ರಮೇಶ್ ಕೊಲ್ಲೂರು ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಈರಣ್ಣಸಂಣ್ಣೂ‌ರ್ ತಿಳಿಸಿದ್ದಾರೆ.  ಪಟ್ಟಣದ ಹಡಪದ ಅಪ್ಪಣ್ಣ ಸಮಾಜದ ಸಮುದಾಯ ಭವನದಲ್ಲಿ ನಡೆದ ಸಭೆ ಯಲ್ಲಿ ಸರ್ವಾನುಮತಿಯಿಂದ ಆಯ್ಕೆ ಮಾಡಲಾಗಿದೆ. ಈ ಸಭೆಯಲ್ಲಿ ರಾಜ್ಯ ಕಾನೂನು ಸಲಹೆಗಾರ ರಮೇಶ್ ಮಲ್ನೋಡ,ರಾಜ್ಯ ಸಂಘಟನೆ ಕಾರ್ಯದರ್ಶಿ ಬಸವರಾಜ ಹಳ್ಳಿ, ಜಿಲ್ಲಾ ಗೌರವಾಧ್ಯಕ್ಷ ಬಸವರಾಜ್ ಸೂಗೂರು, ಜಿಲ್ಲಾ ನಗರ ಅಧ್ಯಕ್ಷ ಮಲ್ಲಿಕಾರ್ಜುನ್ ಸವಳಗಿ,ಸಮಾಜದ ಹಿರಿಯ ಮುಖಂಡರಾದ ಗಿರಿಮಲ್ಲಪ್ಪ ಕಟ್ಟಿಮನಿ, ಅಶೋಕ್‌ ಚಿತ್ತಾಪುರ,ಅಶೋಕ್‌ ಚೌಕಿ, ಲಕ್ಷ್ಮಣ ವಾಡಿ, ಮಲ್ಲಿಕಾರ್ಜುನ್ ರಾಜೋಳಿ, ಶಿವಾನಂದ್ ವಾಡಿ, ಕಲ್ಯಾಣ್ ರಾವ್ ಗುಂಡಗುತ್ತಿ , ಶೇಖಣ್ಣ ದಂಡಗುಂಡ, ಶಿವಕುಮಾರ್ ನಾಲ್ವರ್, ಸಂತೋಷ್ ಕಟಂದೇವರಹಳ್ಳಿ, ಸೇರಿದಂತೆ ಸಮಾಜದ ಮುಖಂಡ ಯುವಕರು ಉಪಸ್ಥಿತರಿದ್ದರು.

ಕಿತ್ತು ಹೋದ ರಸ್ತೆ: ಸಂಚಾರಕ್ಕೆ ತೊಡಕು

ಇಮೇಜ್
ಚಿತ್ತಾಪೂರ: ತಾಲೂಕಿನ ಭಾಗೋಡಿ ಗ್ರಾಮದ ಮೂಲಕ ಡಿಗ್ರಿ ಕಾಲೇಜಿನ ಮಾರ್ಗವಾಗಿ ಚಿತ್ತಾಪುರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿತ್ತು ಹೋಗಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. 9 ಕಿಲೋಮೀಟರ್ ರಸ್ತೆಯು ಪ್ರತಿ ವರ್ಷ ಮಳೆಗೆ ಹಾಗೂ ಬಾರಿ ಗಾತ್ರದ ಮರಳು ತುಂಬಿದ ಟಿಪ್ಪರ್ ಹಾಗೂ ಟ್ರ್ಯಾಕ್ಟರ್ ಗಳ ಓಡಾಟದಿಂದ ಕಿತ್ತು ಹೋಗಿದೆ ಈಗ ಎರಡುಮೂರು ದಿನಗಳಿಂದ ಸತತವಾಗಿ ಸುರಿದ ಮಳೆಯಿಂದಾಗಿ ಮತ್ತಷ್ಟು ರಸ್ತೆ ಕಿತ್ತು ಹೋಗಿದ್ದು ಸಂಬಂಧಿಸಿ ಅಕಾರಿಗಳು ಈ ರಸ್ತೆಯ ಕಡೆ ತಿರುಗಿ ನೋಡುತ್ತಿಲ್ಲ ಕನಿಷ್ಠ ಮರಂ ಹಾಕುವ ಕೆಲಸ ಕೂಡ ಮಾಡಿಲ್ಲ. ಅಕಾರಿಗಳ ನಿರ್ಲಕ್ಷ್ಯದಿಂದ ವಾಹನ ಸವಾರರು ರಾತ್ರಿ ವೇಳೆ ಜೀವಭಯ ದಲ್ಲೇ ಸಂಚರಿಸುವಂತಾಗಿದೆ. ಎನ್ನುತ್ತಾರೆ. ಈ ರಸ್ತೆಯಿಂದ ಚಿತ್ತಾಪೂರ ಪಟ್ಟಣಕ್ಕೆ ಹೋಗಿ ಬರಲು ತುಂಬಾ ಅನುಕೂಲಕರ ಏಕೆಂದರೆ ಬರಿ 9 ಕಿಲೋಮೀಟರ್ ಅಷ್ಟೇ ಆದ್ರೆ ಮುಡಬೂಳ ಮಾರ್ಗವಾಗಿ ಬಂದ್ರೆ 15 ಕಿಲೋಮೀಟರ್ ಆಗುತ್ತದೆ ಹೀಗಾಗಿ ಭಾಗೋಡಿ ಗ್ರಾಮದ ಮೂಲಕ ಡಿಗ್ರಿ ಕಾಲೇಜಿನ ಮಾರ್ಗವಾಗಿ ಚಿತ್ತಾಪುರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ  ದುರಸ್ತಿ ಮಾಡಿ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಗ್ರಾಮ ಪಂಚಾಯತ್ ಇರುವ ಈ ಗ್ರಾಮದಲ್ಲಿ ಸಾಕಷ್ಟು ಜನಪ್ರತಿನಿಧಿಗಳು ಇದ್ದು ಇರದಂತೆ ಆಗಿದೆ. ಈಗಾಗಲೇ ರಸ್...

ಸತತವಾಗಿ ಮೂರು ಬಾರಿ ಕಬ್ಬಡ್ಡಿ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಇಮೇಜ್
ಚಿತ್ತಾಪುರ: ಕಲಬುರ್ಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಡೆದ 2024-25 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚಿತ್ತಾಪುರ ಕಬ್ಬಡ್ಡಿ ತಂಡ ಸತತವಾಗಿ ಮೂರನೇ ಬಾರಿಗೆ ಜಯಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಕಬ್ಬಡ್ಡಿ ತರಬೇತುದಾರರು ಹಾಗೂ ಚಿತ್ತಾಪೂರ ಕ್ರೀಡಾಂಗಣದ ವ್ಯವಸ್ಥಾಪಕ ಮರೇಪ್ಪ ಬೊಮ್ಮನಳ್ಳಿಕ‌ರ್ ತಿಳಿಸಿದ್ದಾರೆ. ಚಿತ್ತಾಪೂರ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ನಾಗಾವಿ ನಾಡಿನ ಕೀರ್ತಿ ತರುತ್ತಿರುವ ಎಲ್ಲಾ ಕಬ್ಬಡ್ಡಿ ತಂಡ ಆಟಗಾರರಿಗೆ ತುಂಬ ಧನ್ಯವಾದಗಳು ಸಲ್ಲಿಸಿ ಮುಂದೆ ರಾಜ್ಯ ಮಟ್ಟದಲ್ಲಿ ಗೆದ್ದು ಬರಲಿ ಎಂದು ಹೇಳಿದರು. ಕ್ರೀಡಾ ಪಟುಗಳಾದ ಶರಣು, ಭರತ್, ಮೌನೇಶ್‌, ಹಾಲಪ್ಪ, ಬಸವರಾಜ, ಆನಂದ, ರಾಜು, ದುರಾಜ್, ವಿಜಯ, ಭೀಮು, ಸದಾಶಿವ ಸೇರಿದಂತೆ ಇತರರು ಇದ್ದರು.

ಭಾರೀ ಮಳೆಗೆ ಮನೆ ಕುಸಿತ: ಪ್ರಾಣಾಪಾಯದಿಂದ ಪಾರು.

ಇಮೇಜ್
ಚಿತ್ತಾಪೂರ: ನಾಗಾವಿನಾಡಿನಲ್ಲಿ ಎರಡು ದಿನಗಳಿಂದ ರಾತ್ರಿವಿಡಿ ಭಾರೀ ಮಳೆಯಾಗಿದ್ದು, ಭಾರೀ ಮಳೆ ಹಾಗೂ ಗಾಳಿಯಿಂದಾಗಿ ಪಟ್ಟಣದಲ್ಲಿ ಮೂರು ಮನೆಗಳು ಕುಸಿದು ಬಿದ್ದಿವೆ ಈ ವೇಳೆ ಮನೆಯಲ್ಲಿದ್ದ  ಕುಟುಂಬಸ್ಥರಿಗೆ ಯಾವುದೇ ಹಾನಿಯಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಸುಲೆಗಾವ್ ಗಲ್ಲಿಯಲ್ಲಿ ಮಲ್ಲಿಕಾರ್ಜುನ ಬಸವರಾಜ ವಾರದ್, ತನುಜಾ ಗಂಡ ಸುಭಾಷ್, ಮತ್ತು ಚೌಡಮ್ಮ ಗುಡಿಯ ಹತ್ತಿರದ ರಾಮಣ್ಣ ಭೀಮ್ ಸಿಂಗ್ ಇವರ ಮನೆಗಳಿಗೆ ಹಾನಿಯಾಗಿದ್ದು ಮನೆಗಳಿಗೆ ಗ್ರಾಮ ಲೆಕ್ಕಾಧಿಕಾರಿ ಮೈನೋದ್ದಿನ್ ಹಾಗೂ ಪುರಸಭೆ ಇಲಾಖೆಯ ಸಿಬ್ಬಂದಿ ವರ್ಗ ಭೇಟಿ ನೀಡಿ ಸರ್ಕಾರದಿಂದ ಬರುವ ಸೌಲಭ್ಯವನ್ನು ಕಲ್ಪಿಸಲಾಗುವ ಭರವಸೆ ನೀಡಿದ್ದಾರೆ. ಮಳೆಯಿಂದ ಮನೆಗಳು ಕುಸಿತದ ಮಾಹಿತಿ ಬಂದಿದೆ ಕೊಡಲೇ ಪರಿಶೀಲಿಸಿ ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರದಿಂದ ಬರುವ ಸೌಲಭ್ಯ ಅತಿ ಶೀಘ್ರದಲ್ಲಿ ಕೂಡಿಸುವುದಾಗಿ ಹೇಳಿದರು ಹಾಗೂ ಇನ್ನೂ ಮಳೆ ಬರುವ ಸಂಭವವಿದೆ ತಾಲೂಕಿನ ಎಲ್ಲಾ ಗ್ರಾಮಸ್ಥರು ಎಚ್ಚರ ವಹಿಸಬೇಕು ಎಂದು ತಿಳಿಸಿದರು. - ನಾಗಯ್ಯ ಹೀರೆಮಠ. ತಹಸೀಲ್ದಾರರು ಚಿತ್ತಾಪೂರ 

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ.

ಇಮೇಜ್
ಚಿತ್ತಾಪುರ: ಮೂಲಭೂತ ಸೌಕರ್ಯ, ಸೇವಾ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಚಿತ್ತಾಪುರ ತಾಲ್ಲೂಕು ಘಟಕದವರು ಪಟ್ಟಣದಲ್ಲಿ ಗುರುವಾರ ಮುಷ್ಕರ ನಡೆಸಿದರು. ಆನಂತರ ತಹಶೀಲ್ದಾ‌ರ್ ನಾಗಯ್ಯ ಹೀರೆಮಠ ರವರಿಗೆ ಮನವಿ ಪತ್ರ ಸಲ್ಲಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾಧ್ಯಕ್ಷ ಮೋತಿಲಾಲ್ ಚವ್ಹಾಣ್ ಮಾತನಾಡಿ ಕಂದಾಯ ಇಲಾಖೆಯಿಂದ ಅಭಿವೃದ್ಧಿ ಪಡಿಸಿರುವ 17ಕ್ಕೂ ಅಧಿಕ ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಿರುವ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್‌ನೆಟ್, ಸ್ಕ್ಯಾನ‌ರ್ ಒದಗಿಸಿಲ್ಲ. ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅಲ್ಲದೆ, ಮಾನಸಿಕ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮ ಹೆಚ್ಚಾಗುತ್ತಿದೆ ಎಂದರು. ವೃತ್ತಕ್ಕೆ ಒಂದರಂತೆ ಮೊಬೈಲ್, ಲ್ಯಾಪ್ಟಾಪ್, ಗೂಗಲ್ ಕ್ರೋಮ್, ಬುಕ್, ಪ್ರಿಂಟರ್, ಇಂಟರ್ ನೆಟ್ ಸೌಲಭ್ಯ ನೀಡುವವರೆಗೆ ಮೊಬೈಲ್ ತಂತ್ರಾಂಶಗಳಾದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗ‌ರ್ ಹುಕುಂ, ಹಕ್ಕುಪತ್ರ, ನಮೂನೆ 1-5ರ ವೆಬ್ ಅಪ್ಲಿಕೇಷನ್, ಪೌತಿ ಆಂದೋಲನ ಆ್ಯಪ್ ಕೆಲಸ ನಿರ್ವಹಿಸದಿರಲು ತೀರ್...

ತಾಲ್ಲೂಕಿನದ್ಯಂತ ಸೆ. 17ಕ್ಕೆ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಿ.

ಇಮೇಜ್
ಚಿತ್ತಾಪೂರ: ಸಪ್ಟೆಂಬರ್ 17ರಂದು ತಾಲ್ಲೂಕಿನದ್ಯಂತ ಎಲ್ಲಾ ಸರ್ಕಾರಿ,ಅರೆ ಸರ್ಕಾರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಹಾಗೂ ವಿಶ್ವಕರ್ಮ ದಿನಾಚರಣೆಯನ್ನು ಕಡ್ಡಾಯವಾಗಿ ಆಚರಿಸಬೇಕೆಂದು ತಹಶೀಲ್ದಾರ್ ನಾಗಯ್ಯ ಹೀರೆಮಠ ತಿಳಿಸಿದ್ದಾರೆ.

ಗಣೇಶ ಹಬ್ಬ: ಬಾಂಧವ್ಯ ಗಟ್ಟಿಗೋಳಿಸುತ್ತದೆ.

ಇಮೇಜ್
ಚಿತ್ತಾಪುರ: ಯುವಕರನ್ನು ಸಂಘಟಿಸುವ ಹಾಗೂ ಜನರ ನಡುವೆ ಸಂಬಂಧಗಳನ್ನು ಗಟ್ಟಿಗೊಳಿಸುವ ಮತ್ತು ಬಾಂಧವ್ಯವನ್ನು ವೃದ್ಧಿಸುವ ಎಕೈಕ ಉತ್ಸವ ಅದುವೇ ಗಣೇಶ ಉತ್ಸವ ಎಂದು ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಕಾಶಿನಾಥ ಗುತ್ತೇದಾರ ಹೇಳಿದರು. ಪಟ್ಟಣದ ನ್ಯೂ ಪೊಲೀಸ್‌ ವಸತಿಗೃಹದ ಏರಿಯಾದಲ್ಲಿ ಶ್ರೀ ಏಕದಂತ ಮಿತ್ರ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಗಣೇಶ ಉತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಣೇಶ ಉತ್ಸವಕ್ಕೆ ನೂರಾರು ವರ್ಷಗಳ ಇತಿಹಾಸ ಇದೆ, ಸ್ವಾತಂತ್ರ್ಯ ಚಳುವಳಿಯಲ್ಲಿ ಗಣೇಶ ಉತ್ಸವ ಜಾರಿಗೆ ತಂದವರು, ಬಾಲ್ ಗಂಗಾಧರ ತಿಲಕ್ ಅವರು, ಅಂದಿನಿಂದ ಇಲ್ಲಿಯವರೆಗೂ ಸಾರ್ವಜನಿಕರೆಲ್ಲರೂ ಎಲ್ಲ ಜಾತಿ ಜನಾಂಗದವರು ಒಗ್ಗೂಡಿ ಸಂಭ್ರಮದಿಂದ ಆಚರಿಸುತ್ತಿದ್ದಾರೆ ಎಂದು ಹೇಳಿದರು. ಈ ಏರಿಯಾದಲ್ಲಿ ಕಳೆದ 9 ವರ್ಷಗಳಿಂದ ಯುವಕರು ಒಗ್ಗೂಡಿ ಬಹಳ ಹುಮ್ಮಸ್ಸಿನಿಂದ ಗಣೇಶ ಉತ್ಸವ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಿತ್ರ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ಉಪ್ಪಾರ, ಪತ್ರಕರ್ತ ಜಗದೇವ ಕುಂಬಾರ, ಪ್ರಮುಖರಾದ ವಿಶ್ವನಾಥ ಸ್ವಾಮಿ, ಸಾಬಣ್ಣ ಹುಣಚೇರಿ, ಉಮೇಶ್ ಕಲಾಲ್, ಆಕಾಶ್ ಬಿರೇದಾರ್, ಕಿರಣ ಮಡಿವಾಳ, ನಾಗರಾಜ ಉಪ್ಪಾರ, ಮಲ್ಲಿಕಾರ್ಜುನ್ ಉಪ್ಪಾರ, ಪ್ರಶಾಂತ ಮಡಿವಾಳ, ಪ್ರೀತಮ್ ಮಡಿವಾಳ, ರಾಜು ಕಲಾಲ್‌, ಅಭಿಷೇಕ್ ಜಮಾದಾರ, ನಿತೀಶ ಕಲಾಲ್, ಸಿದ್ದಣ್ಣ ಗೌಡ, ಬಸ್ಸು ಸ್ವಾಮಿ, ವಿಶ್ವನಾಥ ...

ಅದ್ದೂರಿಯಾಗಿ ನಡೆದ ಈದ್ ಮಿಲಾದ್.

ಇಮೇಜ್
ಚಿತ್ತಾಪುರ: ಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಸೋಮವಾರ ಮೆರವಣಿಗೆ ನಡೆಸುವ ಮೂಲಕ ಹಬ್ಬದವನ್ನು ಅದ್ದೂರಿಯಾಗಿ  ಆಚರಿಸಿದರು. ಪಟ್ಟಣದ ಐತಿಹಾಸಿಕ ಹಜರತ್ ಚಿತ್ತಷಹಾ ವಲಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಚಿತ್ತಾವಲಿ ವೃತ್ತದಲ್ಲಿ ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಮೆರವಣಿಗೆಗೆ ಚಾಲನೆ ನೀಡಿದರು. ಚಿತ್ತಾವಲಿ ವೃತ್ತದಿಂದ ಪ್ರಾರಂಭವಾದ ಮೆರವಣಿಗೆ ಹೋಳಿ ಕಟ್ಟಿ, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ರಸ್ತೆ, ಬಸವೇಶ್ವರ ವೃತ್ತ, ಲಾಡ್ಜಿಂಗ್ ವೃತ್ತ, ತಹಸೀಲ್ ಕಚೇರಿ ರಸ್ತೆ, ಸ್ಟೇಷನ್ ರಸ್ತೆ, ನಾಗಾವಿ ವೃತ್ತ, ಜನತಾ ವೃತ್ತ, ಕಪ್ಪಡಾ ಬಜಾರ್ ಮೂಲಕ ಪುನಃ ಚಿತ್ತಾವಲಿ ವೃತ್ತಕ್ಕೆ ಆಗಮಿಸಿ ಸಮಾಪ್ತಿಗೊಂಡಿತ್ತು. ಈ ಸಂದರ್ಭದಲ್ಲಿ ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್‌ಐ ಶ್ರೀಶೈಲ್ ಅಂಬಾಟಿ, ಪತ್ರಕರ್ತ ಕಾಶಿನಾಥ ಗುತ್ತೇದಾರ, ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಕಾಳಗಿ, ಸೂರ್ಯಕಾಂತ ಪೂಜಾರಿ, ನಾಗರೆಡ್ಡಿ ಗೋಪಸೇನ್, ಭೀಮಸಿಂಗ್ ಚವ್ಹಾಣ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಕ್ತಾರ್ ಪಟೇಲ್, ಮಹ್ಮದ್ ಎಕ್ಸಾಲ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಎಂ.ಡಿ.ಯುನುಸ್, ಮೋಸಿನ್ ಚೈನು, ಆಸೀಫ್ ಶೇಖ್, ಮನಾನ್ ನಾಗಾಯಿ, ಸದ್ದಾಮ್, ಇಮ್ರಾನ್ ಖುರೇಷಿ, ಬಾಬಾ ಎಂಐಎಂ, ಇಬ್ರಾಹಿಂ ಎ.ಟು.ಝಡ್ ...

ಗಣೇಶನ ಲಡ್ಡು 93 ಸಾವಿರಕ್ಕೆ ಹರಾಜು.

ಇಮೇಜ್
ಚಿತ್ತಾಪುರ: ಪಟ್ಟಣದ ಇಂದಿರಾನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ಯುಥ್ ಕ್ಲಾಬ್ ಯುವಕರು ಸಂಘ ನೇತೃತ್ವದಲ್ಲಿ 9ದಿನ ಗಣೇಶ ಕೂಡಿಸಲಾಗಿತ್ತು. 5ಕೆಜಿ ಲಡ್ಡುಗೆ 11ನೂರಕ್ಕೆ ತರಲಾಗಿತ್ತು. ಕೊನೆಯ ದಿನಕ್ಕೆ ಗಣೇಶ ಲಡ್ಡು ಹರಾಜು ಪ್ರಕ್ರಿಯೆ ಆರಂಭವಾಗಿ 93 ಸಾವಿರಕ್ಕೆ ಸಿದ್ದು ತಂದೆ ಹಣಮಂತ ಬೆನಕನಹಳ್ಳಿ ಎಂಬುವರು ಲಡ್ಡು ಪಡೆದರು ಎಂದು ಗಣೇಶ ಮಂಡಳಿಯವರು ತಿಳಿಸಿದ್ದಾರೆ.

ಅಕ್ರಮ ಮರಳು ದಂಧೆ: ತಾಲೂಕು ಆಡಳಿತ ಮೌನ.

ಇಮೇಜ್
-ಜಗದೇವ ಎಸ್ ಕುಂಬಾರ ಚಿತ್ತಾಪುರ: ಕಾಗಿಣಾ ನದಿಯಲ್ಲಿ ಅಕ್ರಮ ಮರಳು ದಂಧೆ ಯಾರ ಭಯವಿಲ್ಲದೆ ರಾಜಾರೋಷವಾಗಿ ನಡೆಯುತ್ತಿದ್ದರು ತಾಲೂಕು ಆಡಳಿತ ಮೌನವಾಗಿದೆ ಎಂದು ಸಾರ್ವಜನಿಕರು ಆರೂಪಿಸುತ್ತಿದ್ದಾರೆ. ತಾಲೂಕಿನ ದಂಡೋತಿ, ಮುಡಬೂಳ, ಭಾಗೋಡಿ, ಕದ್ದರ್ಗಿ, ಮುತ್ತಗಿ, ಕಾಟಮದೇವರ ಹಳ್ಳಿ, ಈ ಗ್ರಾಮಗಳಲ್ಲಿ  ಟ್ರ್ಯಾಕ್ಟರ್ ಮೂಲಕ ಮರಳು ತುಂಬಿಕೊಂಡು ಸಾಗುತ್ತಿವೆ. ರಾಯಲ್ಟಿ ಇಲ್ಲದೆ, ಯಾರ ಭಯವಿಲ್ಲದೆ ಮರಳು ದಂಧೆಯಲ್ಲಿ ತೋಡಗಿದ್ದಾರೆ. ಸರಕಾರದ ಆದೇಶ ಗಾಳಿಗೆ ತೂರಿ ಅಕ್ರಮ ಮರಳು ದಂಧೆ ನಡೆಸುತ್ತಿರುವುದಕ್ಕೆ ಕಡಿವಾಣ ಹಾಕಬೇಕಿದ್ದ,  ಗಣಿ ಮತ್ತು ಭೂ ವಿಜ್ಞಾನ, ಪೊಲೀಸ್‌, ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸೇರಿದಂತೆ ಗ್ರಾಮ ಪಂಚಾಯಿತಿ ಪಿಡಿಒಗಳಿಗೂ ಅಕ್ರಮ ಮರಳು ಸಾಗಣೆ ಜಾಲದ ವಿರುದ್ಧ ಕಾನೂನು ಕ್ರಮ ಜರುಗಿಸುವ ಅಧಿಕಾರ ಇದೆ. ಆದರೂ ಈ ಅಕ್ರಮ ದಂಧೆಗೆ ಕಡಿವಾಣ ಹಾಕುವಲ್ಲಿ ಆಡಳಿತ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಮರಳು ದಂಧೆಯಿಂದ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹಾಳಾಗಿವೆ ಇದರಿಂದ ಪ್ರಯಾಣಿಕರ ಸಂಚಾರಕ್ಕೆ ಅಡೆತಡೆಗಳು ಆಗುತ್ತಿವೆ. ಇನ್ನೂಂದು ಕಡೆ ಕಾಗಿಣಾ ನದಿಯ ನೀರು ಮಾಲಿನ್ಯವಾಗುತ್ತಿದೆ.  ನದಿಯಲ್ಲಿ ಮರಳು ಬಗೆದು ಚಿತ್ತಾಪೂರ ಪಟ್ಟಣದಲ್ಲಿ ಸಾಗಾಟ ಮಾಡುತ್ತಿದ್ದರು ತಾಲೂಕ ಆಡಳಿತ ಸಂಪೂರ್ಣ ನಿರ್ಲಕ್ಷ್ಯ ತೋರುತ್ತ...

ಶಿವಲಿಂಗದ ಮೇಲೆ ಕಾಲಿಟ್ಟಿದ್ದು ಮಹಾಪಾಪ: ದಳಪತಿ.

ಇಮೇಜ್
ಚಿತ್ತಾಪುರ: ತಾಲೂಕಿನ ದಿಗ್ಗಾಂವ್ ಗ್ರಾಮದ ಸಿದ್ದವೀರ ಶಿವಾಚಾರ್ಯರು ಶಿವಲಿಂಗದ ಮೇಲೆ ಕಾಲಿಟ್ಟಿದ್ದು ಮಹಾಪಾಪ ಎಂದು  ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಕಾರ್ಯದರ್ಶಿ, ಬಸವರಾಜ ಪೊಲೀಸ್ ಪಾಟೀಲ್ ದಳಪತಿ ಭಾಗೋಡಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆ ಹೇಳಿಕೆ ನೀಡಿದ ಅವರು, ಇದಕ್ಕೂ ಮೊದಲು ಮೋಟ್ನಳ್ಳಿ ಗ್ರಾಮದಲ್ಲಿ ಹೆಣ್ಣು ದೇವತೆಯ ಮೇಲೆ ಪಾದವನ್ನು ಇಟ್ಟು ಪೂಜೆ ಮಾಡಿದ್ರು ಈಗ ಮತ್ತೆ ಸೇಡಂ ತಾಲೂಕಿನ ಕಲಕಂಬ ಗ್ರಾಮದಲ್ಲಿ ಶಿವಲಿಂಗ ಮೇಲೆ ಪಾದವನ್ನು ಇಟ್ಟು ಪೂಜೆ ಮಾಡಿದ್ದು ಮಹಾ ಅಪರಾಧವಾಗಿದೆ ಕೂಡಲೇ ಶಿವಭಕ್ತರಲ್ಲಿ ಕ್ಷಮೆ ಯಾಚಿಸಬೇಕು ಎಂದರು. ಸುಮಾರು 20 ವರ್ಷಗಳ ಹಿಂದೆ ಸ್ವಾಮೀಜಿ ನಾಗಾವಿ ಯಲ್ಲಮ್ಮ ದೇವಸ್ಥಾನ ಹತ್ತಿರ ತಪಸ್ಸು ಮಾಡಿದ್ರು, ನಂತರ 3/4 ವರ್ಷಗಳ ಹಿಂದೆ ತಾಲೂಕಿನ ಲಕ್ಷ ದೀಪೋತ್ಸವ ಮಾಡಿ ಹೇಸರು ಪಡೆದಿದ್ದರು. ಈ ಕಾರ್ಯಕ್ರಮಕ್ಕೆ ಪ್ರತಿ ಗ್ರಾಮಗಳಿಂದ ಪಟ್ಟಿ ಮಾಡಲಾಗಿತ್ತು. ಭಕ್ತರಿಂದ ಹೆಸರು ಪ್ರಚಾರ ಪಡೆದು ಈಗ ನಾನೇ ಶಿವನಿಗಿಂತ ದೊಡ್ಡವ ಎನ್ನುವಂತೆ ಸಮರ್ಥನೆ ಮಾಡಿಕೊಂಡಿದ್ದಾರೆ. ಎಡಗೈನಲ್ಲಿ ಲಿಂಗ ಹಿಡಿದು ಪೂಜೆ ಮಾಡಿಕೋಳ್ಳುವ ಸ್ವಾಮೀಜಿ ಸ್ವಲ್ಪ ವಿಚಾರ ಮಾಡಬೇಕಿತ್ತು ಮಾಡಿಲ್ಲ ಆದ್ರೆ ಸಾಕಷ್ಟು ಸ್ವಾಮೀಜಿ, ಶಿವಾಚಾರ್ಯರು ಪಟ್ಟಾಭಿಷೇಕ ಆಗಿರುವುದು ನೋಡಿರುವೆ ಆದ್ರೆ ಈ ಸಿದ್ದವೀರ ಶಿವಾಚಾರ್ಯರು ಪಟ್ಟಾಭಿಷೇಕ ಆಗಿದ್ದೇನಾ ಎಂಬುದು ಅನುಮಾನವಿದೆ. ಏಕೆಂದರೆ ಪಟ್ಟಾಭಿಷೇಕ ಆ...

ಅಪೌಷ್ಟಿಕತೆ ನಿವಾರಣೆಗೆ ಪೋಷಣ್ ಮಾಸಾಚರಣೆ ಅಗತ್ಯ.

ಇಮೇಜ್
ಚಿತ್ತಾಪುರ: ಮಹಿಳೆ ಹಾಗೂ ಮಕ್ಕಳನ್ನು ಅಪೌಷ್ಟಿಕತೆಯಿಂದ  ಮುಕ್ತಗೊಳಿಸಿ ಆರೋಗ್ಯವಂತರಾಗಿ ಮಾಡುವಲ್ಲಿ ಪೋಷಣ್ ಮಾಸಾಚರಣೆ ಅಗತ್ಯವಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಆರತಿ ತುಪ್ಪದ್ ಹೇಳಿದರು.   ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಆಡಳಿತ ಮತ್ತು ಶಿಶು ಅಭಿವೃದ್ಧಿ ಯೋಜನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಷೋಷಣ ಮಾಸಾಚರಣೆ ಕಾರ್ಯಕ್ರಮ  ಉದ್ಘಾಟಿಸಿ ಮಕ್ಕಳಿಗೆ ಅನ್ನಪ್ರಾಸನ, ಮೊದಲ ಗರ್ಬಿಣಿಗೆ ಸಿಮ್ಮಂತ, ಹಾಗೂ ಸ್ವಚ್ಛತಾ ಕುರಿತು ಮಾತನಾಡಿದ ಅವರು ಪೋಷಣ್ ಅಭಿಯಾನ ಮಾಸಾಚರಣೆ ಮೂಲಕ ಗ್ರಾಮೀಣ ಭಾಗಗಳಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಹಿಳೆಯರು ಹಾಗೂ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸಾ ವ್ಯವಸ್ಥೆಯನ್ನು  ಕಲ್ಪಿಸುವುದರ ಜೊತೆಗೆ ಆರೋಗ್ಯ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.    ಗ್ರಾಮೀಣ ಭಾಗದ ಮಹಿಳೆಯರು ಪೌಷ್ಠಿಕ ಆಹಾರ ಪದ್ಧತಿಗೆ ಹೆಚ್ಚಿನ ಒತ್ತು ನೀಡಬೇಕು, ಮಾತೃವಂದನಾ ಯೋಜನೆ ಅಡಿಯಲ್ಲಿ ಮೊದಲ ಗಂಡು ಮಗುವಿಗೆ 5 ಸಾವಿರ, ಹಾಗೂ ಎರಡನೇ ಮಗು ಹೆಣ್ಣು ಹುಟ್ಟಿದರೆ 6 ಸಾವಿರ ರೂಪಾಯಿ ನೀಡಲಾಗುತ್ತಿದೆ. ಹೀಗೆ ಅನೇಕ ಸರ್ಕಾರ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದರು.  ಈ ಸಂದರ್ಭದಲ್ಲಿ ತಾಪಂ ಇಓ ಆಕ್ರಂ ಮಹ್ಮದ್ ಪಾಶಾ,...