ಉದ್ದು ಬೆಳೆ ಹಾನಿ, ಪರಿಹಾರಕ್ಕೆ ರೈತ ಸಂಘ ಒತ್ತಾಯ.

ಚಿತ್ತಾಪುರ: ಸತತವಾಗಿ ಸುರಿದ ಮಳೆಯಿಂದಾಗಿ ಉದ್ದು ಬೆಳೆ ಸಂಪೂರ್ಣ ನೆಲಕಚ್ಚಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಬೆಳೆ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದರು.
ತಾಲೂಕಿನ ಬಂಕಲಗಿ ಗ್ರಾಮದ ಸಾಕಷ್ಟು ರೈತರು ಉದ್ದು ಹೆಸರು ಬೆಳೆ ಬೆಳೆದಿದ್ದು, ಈಗ ಸಾದ್ಯಕ್ಕೆ ಸತತವಾಗಿ ಸುರಿದ ಮಳೆಗೆ ಉದ್ದು ಬೆಳೆ ಸಂಪೂರ್ಣ ನೆಲಕಚ್ಚಿದ್ದು. ಸಂಬಂಧಪಟ್ಟ ಅಧಿಕಾರಿಗಳು ಜಮೀನಿಗೆ ವಿಕ್ಷಣೆಗೆ ಬಂದಿಲ್ಲ ಎಂದು ನಿರೂಪಿಸಿ ಕೂಡಲೆ ಕೇಂದ್ರ ರಾಜ್ಯ ಸರ್ಕಾರ ರೈತರ ಪ್ರತಿ ಎಕರೆಗೆ ಕನಿಷ್ಠ 25 ಸಾವಿರ ರೂಪಾಯಿ ನೀಡಬೇಕು ಎಂದರು.

ಈ ವೇಳೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ ಮಲಬೋ, ಸಣ್ಣ ಅಯ್ಯಪ್ಪ ಪೂಜಾರಿ, ಭೀಮರಾಯ ಚಿತ್ತಾಪುರ, ಮಲ್ಲಪ್ಪ ಸುಬೆದರ, ಅರಣಪ್ಪ ದೋಡ್ಡಮನಿ, ಹುಸೆನಪಾಷ, ಹಣಮಂತ ಮೂಲಿಮನಿ, ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.