ಅ,25ಕ್ಕೆ ಅಭಿನಂದನಾ ಸಮಾರಂಭ: ಸಾಲಿ.
ಚಿತ್ತಾಪುರ : ಕಲಬುರಗಿಯ ನೂತನ ಸಂಸದ ಡಾ. ರಾಧಾಕೃಷ್ಣನ ದೊಡ್ಡಮನಿ ಅವರು ಸಂಸದರಾಗಿ ಪ್ರಪ್ರಥಮ ಬಾರಿ ಪಟ್ಟಣಕ್ಕೆ ಅ 25 ರಂದು ಆಗಮಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ವತಿಯಿಂದ ಅದ್ದೂರಿಯಾಗಿ ಅಭಿನಂದನಾ ಸಮಾರಂಭ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ಜರುಗಿತು. ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸಂಸದ ಡಾ. ರಾಧಾಕೃಷ್ಣ ದೊಡ್ಡಮನಿ ಅವರು ಪಟ್ಟಣದ ಸುಪ್ರಸಿದ್ಧ ಶ್ರೀ ನಾಗಾವಿ ಯಲ್ಲಮ್ಮ ದೇವಸ್ಥಾನಕ್ಕೆ ಮತ್ತು ಹಜರತ್ ಚಿತ್ತಶಾವಲಿ ದರ್ಗಾಕ್ಕೆ ಭೇಟಿ ನೀಡಿ ನಂತರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ಶ್ರೀ ಬಸವೇಶ್ವರ ಮೂರ್ತಿಗೆ ಮಲಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶಾಸಕ ಡಾ. ಅಜಯಸಿಂಗ, ಶಾಸಕ ಎಂವೈ ಪಾಟೀಲ, ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಭವ್ಯ ಮೆರವಣಿಗೆ : ಪಟ್ಟಣದ ಚಿತ್ತಾಶವಲಿ ಚೌಕದಿಂದ ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ಆರಂಭವಾಗಿ , ಜನತಾ ಬಂಜಾರ, ಭುನೇಶ್ವರಿ ವೃತ್ತ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ಮೂಲಕ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದ ಮುಖ್ಯ ವೇದಿಕೆಗೆ ತಲುಪುತ್ತದೆ ಎಂದು ತಿಳಿಸಿದರು.
ಈ ಸಮಾರಂಭ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತೆಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ವಾಡಿ ಬ್ಲಾಕ್ ಅಧ್ಯಕ್ಷ ಮಹಿಮೂದ ಸಾಹೇಬ್, ಪ್ರಮುಖರಾದ ವೀರಣ್ಣಗೌಡ ಪರಸರಡ್ಡಿ ಮಲ್ಲಿಕಾರ್ಜುನ ಕಾಳಗಿ, ಮುಕ್ತಾರ ಪಟೇಲ್, ಪ್ರಕಾಶ ಕಮಕನೂರ, ಚಂದ್ರಶೇಖರ ಕಾಶಿ, ಶಿವರುದ್ರ ಭೀಣಿ, ಯಲ್ಲಾಲಿಂಗ ಪೂಜಾರಿ, ಬಸವರಾಜ ಚಿನಮಳ್ಳಿ, ಶಿವಾಜಿ ಕಾಶಿ, ನಜೀರ ಅಡಕಿ, ಸಲೀಂ ಸಾಬ್, ಜುಮಣ್ಣ ಪೂಜಾರಿ, ಬಸವರಾಜ ಹೊಸಳ್ಳಿ, ಶ್ರೀನಿವಾಸ ರಡ್ಡಿ ಪಾಲಪ್, ಸಂಜೆ ಬುಳ್ಳಕರ್, ಸೇರಿದಂತೆ ಇತರರು ಉಪಸ್ಥಿತದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ