ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸೋಣ.

ಚಿತ್ತಾಪುರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸೋಣ ಎಂದು ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವೆಂಬರ್ 1 ರಂದು ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬೆಳಿಗ್ಗೆ 8 ಗಂಟೆ ಅಧಿಕಾರಿಗಳು ಧ್ವಜಾರೋಹಣವನ್ನು ನೆರವೇರಿಸಿ ತಾಲೂಕು ಆಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲಾರೂ ಭಾಗವಹಿಸಬೇಕು ಎಂದು ಕೋರಿದ್ದಾರೆ. 

ಪಟ್ಟಣದ ಎಲ್ಲ ರಸ್ತೆಗಳಲ್ಲಿ ಸ್ವಚ್ಛತೆ ಕಾರ್ಯ ಮಾಡಬೇಕು ಎಂದು ಪುರಸಭೆಗೆ ಸೂಚಿಸಿದರು, ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ದೀಪಾಲಂಕಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಪಟ್ಟಣದ ಎಲ್ಲ ಅಂಗಡಿಗಳ ನಾಮಫಲಕ ಕನ್ನಡದಲ್ಲಿ ಇರುವಂತೆ ಮಾಡಬೇಕು, ಭುವನೇಶ್ವರಿ ವೃತ್ತ ಅಭಿವೃದ್ಧಿಗೊಳಿಸಿ ಆಲ್ಲಿ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸಬೇಕು, ಎಲ್ಲ ಅಂಗಡಿಗಳ ಮೇಲೆ ಕನ್ನಡ ಧ್ವಜ ಅಳವಡಿಸುವಂತೆ ಸೂಚಿಸಬೇಕು, ಉಪಹಾರದ ವ್ಯವಸ್ಥೆ ಮಾಡಬೇಕು, ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳ ವ್ಯವಸ್ಥೆ ಮಾಡಬೇಕು, ಮೆರವಣಿಗೆ ಅಚ್ಚುಕಟ್ಟಾಗಿ ನಡೆಯಬೇಕು ಮತ್ತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮಾಡಬೇಕು, ಅದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಿಸಬೇಕು ಎಂಬ ವಿವಿಧ ಅಭಿಪ್ರಾಯಗಳು ವ್ಯಕ್ತವಾದವು ಈ ಎಲ್ಲಾವು ಕುರಿತು ಮಹ್ಮದ್ ಇಬ್ರಾಹಿಂ,  ಕಾಶಿನಾಥ ಗುತ್ತೇದಾರ, ನರಹರಿ ಕುಲಕರ್ಣಿ, ಚಂದ್ರಶೇಖರ ಬಳ್ಳಾ,  ಜಗದೇವ ದಿಗ್ಗಾಂವಕರ್, ರವಿ ಇವಣಿ, ಪ್ರಹ್ಲಾದ ವಿಶ್ವಕರ್ಮ, ವೀರಣ್ಣ ಸುಲ್ತಾನಪೂ‌ರ್, ಮಾತನಾಡಿದರು.


ಪಟ್ಟಣದಲ್ಲಿ ಸೂಕ್ತವಾದ ವೃತ್ತದಲ್ಲಿ ಭುವನೇಶ್ವರಿ ದೇವಿ ಮೂರ್ತಿ ಕುಡಿಸಬೇಕು,ಅಂಗಡಿ ಮುಂಗಟ್ಟುಗಳ ಮೇಲಿನ ಹಾಕಿದ ಆಂಗ್ಲ ಭಾಷೆಯ ನಾಮಫಲಕ ತೆರುವುಗೋಳಿಸಬೇಕು, ಸರ್ಕಾರ ಜಾರಿಗೆ ತಂದಿರುವ ಸರ್ಕಾರಿ ನೌಕರರ ಕೆಂಪು ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಕಡ್ಡಾಯವಾಗಿ ಧರಿಸಬೇಕು, ಕ್ಷೇತ್ರದಲ್ಲಿ ಓರಿಯಂಟ್, ಎಸಿಸಿ, ಮತ್ತು ಶ್ರೀ ಸಿಮೆಂಟ್ ಕಂಪೆನಿಯಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲು ಸೂಚಿಸುವುದರ ಜೊತೆಗೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಬೇಕು ಕನ್ನಡ ಬಾವುಟಗಳು ತಾಲೂಕಿನಲ್ಲಿ ರಾರಾಜಿಸಬೇಕು ಎಂದರು.

- ಜಗದೇವ ಎಸ್ ಕುಂಬಾರ
ಕಸಾಪ ಸದಸ್ಯರು, ಪತ್ರಕರ್ತರು ಚಿತ್ತಾಪೂರ.

ಗ್ರೇಡ್ -2 ತಹಸೀಲ್ದಾರ್ ರಾಜಕುಮಾರ ಮರತೂರಕರ್, ಕಸಾಪ ಅಧ್ಯಕ್ಷ ವಿರೇಂದ್ರ ಕೊಲ್ಲೂರ, ಅಧಿಕಾರಿಗಳಾದ ಸಿಪಿಐ ಚಂದ್ರಶೇಖರ ತಿಗಡೆ, ಆರತಿ ತುಪ್ಪದ್, ಕರಣಕುಮಾರ ಸವಿತಾ ಗೋಣಿ, ಚೇತನ್ ಗುರಿಕಾರ, ಬಾಲಕೃಷ್ಣ, ಡಾ.ಶಂಕರ ಕಣ್ಣಿ, ಡಾ.ಸೃಯಾದ್ ರಜೀವುಲ್ಲಾ, ಶಿವಶರಣಪ್ಪ ಮಂಠಾಳೆ, ಬಸವರಾಜ ಜೆಇ ವಾಡಿ, ಲೋಹಿತ್ ಕಟ್ಟಿಮನಿ, ಅಮೃತ್ ಕ್ಷೀರಸಾಗರ, ಮಹ್ಮದ್ ಜಾವೀದ್, ವಿಜಯಲಕ್ಷ್ಮಿ, ಶ್ರೀಮತಿ ಸುನೀತಾ, ರಾಜಕುಮಾರ, ಚಂದ್ರಕಾಂತ ಮುಖಂಡರಾದ ಚಂದ್ರಶೇಖರ ಉಟಗೂರ, ಲಕ್ಷ್ಮೀಕಾಂತ ತಾಂಡೂರಕರ್, ಶರಣು ದಂಡೋತಿ, ವೆಂಕಟೇಶ್ ಬಳಿಚಕ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.