ಸಂಘದ ಚುನಾವಣೆಗೆ ಪಿಡಿಓ ನಾಮಪತ್ರ ಸಲ್ಲಿಕೆ

ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆಯ ಚುನಾವಣೆ ಇದೇ ಅ.28 ರಂದು ನಡೆಯಲಿದ್ದು, ನಿರ್ದೇಶಕರ ಹುದ್ದೆಗೆ ಆಯ್ಕೆ ಬಯಿಸಿ ಅಳ್ಳೋಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಿಂದ್ರಪ್ಪ ಭಾಲ್ಕೆ ಅವರು ಇಲಾಖೆಯ ಸಿಬ್ಬಂದಿಗಳೊಂದಿಗೆ ತೆರಳಿ ಚುನಾವಣಾಧಿಕಾರಿ ವಿಜಯಕುಮಾರ ಲೊಡ್ಡೆನೋರ ಅವರಿಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ತಾಲೂಕು ಪಂಚಾಯತ್ ಕಚೇರಿ ವತಿಯಿಂದ ದೇವಿಂದ್ರಪ್ಪ ಭಾಲ್ಕೆ ಅವರು ನಾಮಪತ್ರ ಸಲ್ಲಿಸಿ ಚುನಾವಣಾ ಕಣಕ್ಕಿಳಿದಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ತಾಲೂಕು ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಾದ ಅಮೃತ್ ಕ್ಷೀರಸಾಗರ, ಹರೀಶ್ ಶಿಂಧೆ, ಓಂಕಾರ, ಶ್ರಾವಣ,ಅನೀಲಕುಮಾರ, ರೇಷ್ಮಾ, ಅನೀತಾ, ಜಕ್ಕಪ್ಪ, ಜುಬೇರ್, ಸಂದೇಶ, ಪ್ರಕಾಶ್ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.