ಶಿಕ್ಷಕರ ಸ್ನೇಹಿ ಪೆನಲಗೆ ಬೆಂಬಲಿಸಲು ಮನವಿ.

ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಗೆ 2024-29 ನೇ ಸಾಲಿನ ಅವಧಿಗಾಗಿ ಅ.28 ರಂದು ನಡೆಯಲಿರುವ ಚುನಾವಣೆಯಲ್ಲಿ ನಿರ್ದೇಶಕರ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಕೈಲಾಸ ನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ಬಳೂಂಡಗಿ ನೇತೃತ್ವದ ಶಿಕ್ಷಕರ ಸ್ನೇಹಿ ಪೆನಲ್ ಹಾಗೂ ಇಂಗಳಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಣ್ಣಗೌಡ ಮಲ್ಯದ್ ರವರ ಪ್ರಜಾಸತ್ತಾತ್ಮಕ ಕ್ರಿಯಾಶೀಲ ಶಿಕ್ಷಕರ ಪೆನಲ್ ಅವರ ನಡುವೆ ಪೈಪೋಟಿ ನಡೆಯುತ್ತಿದೆ, 

ಬಸವರಾಜ ಬಳೂಂಡಗಿ ನೇತೃತ್ವದಲ್ಲಿ ಚಿತ್ತಾಪುರ ಸರ್ಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿವಾನಂದ ನಾಲವಾರ, ಚಾಮನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗೌತಮಿ, ಗಂಡಗುರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಹ್ಮದ್ ಜಾವೀದ್, ಅಲ್ಲೂರ.ಬಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ಸಾಬಣ್ಣ ಜಕಬೋ ಅವರು ತಮ್ಮ ಬೆಂಬಲಿಗರೊಂದಿಗೆ ಅಬ್ಬರದ ಪ್ರಚಾರ ನಡೆಸಿದ್ದಾರೆ.

ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಸವರಾಜ ಬಳೂಂಡಗಿ ರವರು ಕ್ಷೇತ್ರದಲ್ಲಿ ಸುಮಾರು 7 ವರ್ಷಕ್ಕೂ ಅಧಿಕ ವರ್ಷ ಸೇವೆ ಸಲ್ಲಿಸಿ ಈ ಕ್ಷೇತ್ರದಲ್ಲಿ ಸಾಕಷ್ಟು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಹಾಗೂ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಕೆಲಸ ಮಾಡಿದ್ದಾರೆ. ಇನ್ನೂ ಸಹ ಕ್ಷೇತ್ರದಲ್ಲಿ ಶಿಕ್ಷಕ ಕುಂದು ಕೊರತೆಗಳ ಹಾಗೂ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಸೇವೆ ಮಾಡಲು ಇಚ್ಛಿಸಿರುವೆ.
 ಇದರ ಜೊತೆಗೆ ತಾಲ್ಲೂಕಿನಲ್ಲಿ ನೌಕರರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ ಎಂಬತ್ತನಾಳ್ ರವರು ಸುಮಾರು 5 ವರ್ಷಗಳ ವರೆಗೆ ಸೇವೆ ಸಲ್ಲಿಸಿರುವ ಮತ್ತು ಗುಂಡಗುರ್ತಿ ಸೇರಿ ಬಿಇಓ ಇಲಾಖೆಯಲ್ಲಿ ಶಿಕ್ಷಣ ಸಂಯೋಜಕರಾಗಿ 6 ವರ್ಷ ಸೇವೆ ಸಲ್ಲಿಸಿದ ಸಂತೋಷಕುಮಾರ ಶಿರನಾಳ ರವರು ಸಹ ಪ್ರೌಢ ಶಾಲಾ ಶಿಕ್ಷಣ ವಿಭಾಗದಿಂದ ಸ್ಪರ್ಧಿಸಿದ್ದು ಅವರು ಸಹ ನಮ್ಮ ಪೆನಲ್ ನವರು ಇಗಿದ್ದು.

ನಾಳೆ ಅಕ್ಟೋಬರ 28/10/2024 ರಂದು ನಡೆಯಲಿರುವ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಚುನಾವಣೆಗೆ ಸ್ಪರ್ಧಿಸಿರುವ ಶಿಕ್ಷಕರ ಸ್ನೇಹಿ ಪೆನಲ್ ಬಸವರಾಜ ಬಳೂಂಡಗಿ ನೇತೃತ್ವದ ಪೆನಲಗೆ ಎಲ್ಲಾ ಶಿಕ್ಷಕ ವೃಂದದವರು ಮತ ನೀಡಿ ಪ್ರಚಂಡ ಬಹುಮತದಿಂದ ಆರಿಸಿ ತರಲು ವಿನಂತಿ.

ಪ್ರೌಢ ಶಾಲಾ ಶಿಕ್ಷಣ ವಿಭಾಗದಿಂದ ಬಸಪ್ಪ ಯಂಬತ್ನಾಳ್, ಸಂತೋಷಕುಮಾರ ಶಿರನಾಳ, ಇವರ ಪೆನಲ್ ಗೆ ಶಿಕ್ಷಕ ವೃಂದದವರು ಹಾಗೂ ಎಲ್ಲಾ ಸಿಬ್ಬಂದಿ ನೌಕರರು ಮತ ನೀಡಿ ಆರಿಸಿ ತರಬೇಕಾಗಿ ತಮ್ಮೇಲ್ಲರಲ್ಲಿ ಹೃದಯ ಪೂರ್ವಕ ವಿನಂತಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.