ಜನತೆಯ ಸುದ್ದಿ ವಾಹಿನಿ

ಗುರುವಾರ, ಅಕ್ಟೋಬರ್ 24, 2024

ಮಹಿಳಾ ಶೌಚಾಲಯ ದುರಸ್ತಿಗೆ ಆಗ್ರಹ.

ಚಿತ್ತಾಪುರ: ಪಟ್ಟಣದ ಪುರಸಭೆಯ ವಾರ್ಡ್ ಸಂಖ್ಯೆ 15ರ ವ್ಯಾಪ್ತಿಯಲ್ಲಿ ಬರುವ ಒಂಬತ್ತು ಕಮಾನ್ ಏರಿಯಾದ ಮಹಿಳಾ ಶೌಚಾಲಯ ಅವ್ಯವಸ್ಥೆಯಿಂದ ಮಹಿಳೆಯರು ಶೌಚಾಲಯಕ್ಕೆ ಪರದಾಡುವ ಪರಿಸ್ಥಿತಿ ಉಂಟಾಗಿದೆ ಕೂಡಲೇ ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಕಾರ್ಯ ಮಾಡಬೇಕು ಎಂದು ಪುರಸಭೆ ಸದಸ್ಯ ಶ್ಯಾಮ್ ಮೇಧಾ ಆಗ್ರಹಿಸಿದ್ದಾರೆ.

ಶೌಚಾಲಯದ ಬಾಗಿಲುಗಳು ಮುರಿದು ಬಿದ್ದು ಸುಮಾರು ತಿಂಗಳುಗಳಾದರೂ ಇನ್ನೂ ರಿಪೇರಿ ಆಗಿರುವುದಿಲ್ಲ. ಮತ್ತು ಶೌಚಾಲಯದ ಸುತ್ತಲೂ ಗಿಡ ಗಂಟಿಗಳು ಬೆಳೆದಿದ್ದರಿಂದ ಶೌಚಾಲಯಕ್ಕೆ ಹೋಗಲು ಪರದಾಡುವಂತಾಗಿದೆ. ಹೊಸ ಶೌಚಾಲಯದ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಆಗಿದ್ದರೂ ಇನ್ನೂ ಕೂಡ ಯಾವುದೇ ಕಾಮಗಾರಿ ಆರಂಭವಾಗಿರುವುದಿಲ್ಲ. ಶೌಚಾಲಯಕ್ಕೆ ಹೋಗುವ ರಸ್ತೆ ಹಾಗೂ ಸುತ್ತಮುತ್ತಲಿನ ಗಿಡಗಂಟಿಗಳು ಬೆಳೆದಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ ಹೀಗಾಗಿ ಮಹಿಳೆಯರು ಆತಂಕದಲ್ಲಿದ್ದಾರೆ. ಹೊಸ ಶೌಚಾಲಯ ನಿರ್ಮಾಣ ಆಗುವವರೆಗೆ ಈಗಿರುವ ಶೌಚಾಲಯದ ರಿಪೇರಿ ಮಾಡಿಸಿ ಬೆಳೆದಿರುವ ಗಿಡಗಂಟಿಗಳು ತೆರವುಗೊಳಿಸಿ ಮಹಿಳೆಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ...