ನಾಗಾವಿಗೆ ಹೋಗುವ ರಸ್ತೆ ಸುಧಾರಣೆಗೆ ಆಗ್ರಹ.

ಚಿತ್ತಾಪೂರ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದಿಂದ ನಾಗಾವಿ ಯಲ್ಲಮ್ಮ ದೇವಸ್ಥಾನದ ವರೆಗಿನ ರಸ್ತೆ ಸುಧಾರಣೆ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ರಾಷ್ಟ್ರಕೂಟರ ಮನೆತನದ ಕುಲದೇವತೆ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವ ಅಕ್ಟೋಬರ್ 17ರಂದು ನಡೆಯಲಿದ್ದು ಈ ಉತ್ಸವಕ್ಕೆ ವಿವಿಧ ರಾಜ್ಯಗಳಾದ ತೆಲಂಗಾಣ, ಹೈದರಾಬಾದ್, ಮಹಾರಾಷ್ಟ್ರ, ಸೇರಿದಂತೆ ಸಾಕಷ್ಟು ಭಕ್ತರು ಆಗಮಿಸುತ್ತಾರೆ ಹಾಗೂ ಪಲ್ಲಕ್ಕಿ ಉತ್ಸವ ಕೊಡ ಇದೇ ರಸ್ತೆ ಮಾರ್ಗವಾಗಿ ಸಾಗುತ್ತದೆ ಹೀಗಾಗಿ ರಸ್ತೆ ಉದ್ದಕ್ಕೂ ಇರುವ ತಗ್ಗು ಗುಂಡಿಗಳು ಹಾಗೂ ಅಲ್ಲಲ್ಲಿ ಹಾಳ್ಳಾದ ರಸ್ತೆ ಸುಧಾರಣೆ ಮಾಡುವಂತೆ ಸ್ಥಳೀಯರು ಆಗ್ರಹವಾಗಿದೆ.

ಖಬರಸ್ಥಾನ್ ರಸ್ತೆಯ ಅಕ್ಕ-ಪಕ್ಕ ಸಾರ್ವಜನಿಕರು ಮಲವಿಸರ್ಜನೆ ಮಾಡುತ್ತಿದ್ದು ಇಂತಹ ಜಾತ್ರಾ ಮಹೋತ್ಸವ ಸಮಯದಲ್ಲಿ ಹೋರ ಜಿಲ್ಲಾ, ರಾಜ್ಯಗಳಿಂದ ಬರುವ ಭಕ್ತಾದಿಗಳು ನೋಡಿ ಪಟ್ಟಣದ ಅಸ್ವಚ್ಛತೆ ಕಾಣದೆ ಸ್ವಚ್ಛತಾ ಕಾರ್ಯ ಆಗಬೇಕು ಇದಕ್ಕೆ ಪುರಸಭೆ ಇಲಾಖೆ ಕಾಳಜಿ ವಹಿಸಿ ಕೆಲಸ ಮಾಡಬೇಕು

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪುರಸಭೆ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ಉತ್ಸವಕ್ಕೂ ಮುಂಚೆ ರಸ್ತೆ ಸುಧಾರಣೆ ಮಾಡಿ ಭಕ್ತರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಾರೆ ಕಾದುನೋಡಬೇಕಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.