ಜನತೆಯ ಸುದ್ದಿ ವಾಹಿನಿ

ಶುಕ್ರವಾರ, ಅಕ್ಟೋಬರ್ 18, 2024

ಸಂಘದ ಚುನಾವಣೆ: ಅರುಣಕುಮಾರ್‌ ನಾಮಪತ್ರ ಸಲ್ಲಿಕೆ.

ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆಯ ಚುನಾವಣೆ ಇದೇ ಅ.28 ರಂದು ನಡೆಯಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಅರುಣಕುಮಾರ್ ಚಿಂಚನಸೂರ ನಿರ್ದೇಶಕರ ಹುದ್ದೆಗೆ ಆಯ್ಕೆ ಬಯಿಸಿ ಇಲಾಖೆಯ ಸಿಬ್ಬಂದಿಗಳೊಂದಿಗೆ ತೆರಳಿ ಚುನಾವಣಾಧಿಕಾರಿ ವಿಜಯಕುಮಾರ ಲೊಡ್ಡೆನೋರ ಅವರಿಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಅರುಣಕುಮಾರ್ ಚಿಂಚನಸೂರ ಅವರು ನಾಮಪತ್ರ ಸಲ್ಲಿಸಿ ಚುನಾವಣಾ ಕಣಕ್ಕಿಳಿದಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಬಸವರಾಜ ಜಮಾದಾರ, ಕೆಎಂಎಫ್ ಮಾಜಿ ನಿರ್ದೇಶಕ ತಿಪ್ಪಣ್ಣ ಆಳಂದ, ಇಲಾಖೆ ಸಿಬ್ಬಂದಿಗಳಾದ ಮಹ್ಮದ್ ಗೌಸೋದ್ದಿನ್, ಸಿದ್ದರಾಜ್, ಶರಣು, ಜಯಶ್ರೀ, ಸಿದ್ದಪ್ಪ, ರವಿಕುಮಾ‌ರ್, ಲಿಂಗರಾಜ್, ಪರಶುರಾಮ, ದೇವಿಂದ್ರಪ್ಪ ಭಾಲ್ಕಿ, ರವಿ ಬೆಳಮಗಿ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಬೆಥನಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಶೇ.100 ಸಾಧನೆ.

ಚಿತ್ತಾಪೂರ : ತಾಲೂಕಿನ ಬೆಥನಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಥನಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಹಾಗೂ ಬೆಥನಿ ಇಂಗ್ಲಿಷ್ ಮೀಡಿಯಂ ...