ಪೋಸ್ಟ್‌ಗಳು

ನವೆಂಬರ್, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.

ಇಮೇಜ್
ಚಿತ್ತಾಪುರ: ಪಟ್ಟಣದ ಮಾತೋಶ್ರೀ ಮಹಾದೇವಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಭುವನೇಶ್ವರ ದೇವಿಯ ಭಾವಚಿತ್ರಕ್ಕೆ ಪೊಜೆ ನಂತರ ಪುಷ್ಪ ನಮನ ಸಲ್ಲಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಿದರು. ಈ ವೇಳೆಯಲ್ಲಿ ಶಾಲೆಯ ಮುಖ್ಯಗುರುಗಳಾದ ಜಗದೇವ ಕುಂಬಾರ, ಶಿಕ್ಷಕರಾದ ವಿಶ್ವನಾಥ ಮಡಿವಾಳ, ಶ್ರೀದೇವಿ, ಸೇವಕಿ ಜಯಶ್ರೀ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಕನ್ನಡ ರಾಜ್ಯೋತ್ಸವಕ್ಕೆ ಅವಮಾನ.

ಇಮೇಜ್
ಚಿತ್ತಾಪೂರ: ಈ ಬಾರಿ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಬೇಕು ಎಂದು  ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು ಆದ್ರೇ ಚಿತ್ತಾಪುರ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೆ ಅವಮಾನ ಮಾಡಿದ್ದು ಕಂಡುಬಂದಿದೆ. ಪಟ್ಟಣದ ನ್ಯಾಯಾಲಯ, ಕರ್ನಾಟಕ ಗ್ರಾಮೀಣ ಬ್ಯಾಂಕ,ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯ, ಬಿಜೆಪಿ ಮಂಡಲ ಕಾರ್ಯಾಲಯ, ಜೆಡಿಎಸ್ ಕಾರ್ಯಾಲಯ, ಭಾರತೀಯ ಸ್ಟೇಟ್ ಬ್ಯಾಂಕ, ಎಸ್ ಬಿಐ ಬ್ಯಾಂಕ,  ರೈಲುನಿಲ್ದಾಣ, ಸೇರಿದಂತೆ ಈ ಎಲ್ಲಾವುಗಳಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡದೆ ಕನ್ನಡಿಗರಿಗೆ ರಾಜ್ಯ ಸರ್ಕಾರಕ್ಕೆ ಅವಮಾನ ಮಾಡಿದಂತೆ ಆಗಿದೆ ಎನ್ನಲಾಗುತ್ತಿದೆ. ಕೊಡಲೇ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾ ಆಡಳಿತ ಎಚ್ಚತ್ತುಕೊಂಡು ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ ಅವಮಾನಿಸಿದ ಈ ಎಲ್ಲಾ ಕಾರ್ಯಾಲಯ, ಬ್ಯಾಂಕ, ರೈಲುನಿಲ್ದಾಣ, ನ್ಯಾಯಾಲಯ ವಿರುದ್ಧ ಕ್ರಮ ಕೈಗೊಂಡು ಕಾನೂನು ರೀತಿಯಲ್ಲಿ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಲಾಗಿದೆ. ಪಟ್ಟಣದಲ್ಲಿ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ ಅವಮಾನ ಮಾಡುವುದು ಇದೇನು ಹೊಸದಲ್ಲ, ಪದೇ ಪದೇ ಕನ್ನಡ ಭಾಷೆಗೆ ಅವಮಾನ ಆಗುತ್ತಿದೆ. ಇದರ ಕುರಿತು ಸಾಕಷ್ಟು ಬಾರಿ ಮನವಿ ಹೋರಾಟ ಮಾಡಿದ್ರು ಪ್ರಯೋಜನವಾಗಿಲ್ಲ ಎನ್ನುತ್ತಾರೆ. - ಚಂದರ ಚವ್ಹಾಣ್ ಕರವೇ, ಅಧ್ಯಕ್ಷರು ಚಿತ್ತಾಪುರ. ತಾಲ್ಲೂಕು ಆಡಳಿತ ವತಿಯಿಂದ ನಡೆದ 69ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಹಳೆಯ ಭುವನೇ...

ಕನ್ನಡ ಭಾಷೆಯನ್ನು ಗೌರವಿಸಬೇಕು: ಹಿರೇಮಠ.

ಇಮೇಜ್
ಚಿತ್ತಾಪುರ: ಕನ್ನಡ ನಾಡು ಉದಯವಾದ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಇದರ ಜೊತೆಗೆ ಕನ್ನಡ ಭಾಷೆಯನ್ನು ಗೌರವಿಸಬೇಕು ಎಂದು ತಹಸೀಲ್ದಾರ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ತಹಸೀಲ್‌ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ 69ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಸಹಸ್ರಾರು ವರ್ಷಗಳ ಇತಿಹಾಸವಿದೆ,ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತ ಎಂದು ಹೇಳಿದರು. ವಿಶೇಷ ಉಪನ್ಯಾಸಕ ರಾಗಿ ಆಗಮಿಸಿದ ರಾವೂರಿನ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ ಸಿದ್ದಲಿಂಗ ಬಾಳಿ ಮಾತನಾಡಿ, 1956 ನವೆಂಬರ್ 1ರಂದು ಕನ್ನಡ ಭಾಷಿಗರಿಗಾಗಿ ಒಂದು ರಾಜ್ಯ ಉದಯವಾದ ಹಿನ್ನೆಲೆ ರಾಜ್ಯೋತ್ಸವ ಆಚರಣೆಯನ್ನು ಮಾಡಲಾಯಿತು. 1973 ನವೆಂಬರ್ 1ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಯಿತು ಹೀಗಾಗಿ ಕರ್ನಾಟಕ ರಾಜ್ಯೋತ್ಸವಕ್ಕೆ ತನ್ನದೇ ಆದ ಭವ್ಯ ಇಹಾಸವಿದೆ ಎಂದರು.  ಎಲ್ಲಾ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಅದ್ಯತೆ ನೀಡಬ...