ಬುಧವಾರ, ಡಿಸೆಂಬರ್ 3, 2025

ಆರ್‌ಎಸ್ಎಸ್, ಬಿಜೆಪಿ ನಕಲಿ ದೇಶಭಕ್ತರು: ಹೊಸಮನಿ.

✓ಭೀಮನಡೆ ಯಶಸ್ವಿ ಬಿಜೆಪಿ ಹತಾಶೆ,   ✓ಬಿಜೆಪಿಗರ ಆರೋಪ ಸತ್ಯಕ್ಕೆ ದೂರ.

ಚಿತ್ತಾಪುರ: ಆರ್‌ಎಸ್ಎಸ್ ನವರು ತ್ರಿವರ್ಣ ಧ್ವಜಗಳು ಹಿಡಿದಿಲ್ಲ ಕೈಯಲ್ಲಿ ಬಡಗಿ ಹಿಡಿದು ಪಥಸಂಚಲನ ಮಾಡಿದ್ದರೆ ನಾವು ತ್ರಿವರ್ಣ ಧ್ವಜಗಳು ಹಿಡಿದು ಹಾಗೂ ಸಂವಿಧಾನ ಪೀಠಕೆ ಜೊತೆಗೆ ಎಲ್ಲಾ ಸಮಾಜಗಳ ಗುರುಗಳ ಭಾವಚಿತ್ರಗಳೊಂದಿಗೆ ಮೆರವಣಿಗೆ ಮಾಡಿದ್ದೇವೆ ಹಾಗಾಗಿ ಆರ್‌ಎಸ್ಎಸ್ ಮತ್ತು ಬಿಜೆಪಿ ನವರು ನಕಲಿ ದೇಶಭಕ್ತರು ನಾವು ನಿಜವಾದ ದೇಶಭಕ್ತರು ಎಂದು ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ ಹೇಳಿದರು.

ಪಟ್ಟಣದ ಬುದ್ಧ ಮಂದಿರದಲ್ಲಿ ಸಂವಿಧಾನ 
ಸಂರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಭೀಮ ನಡಿಗೆ ಪಥಸಂಚಲನದಲ್ಲಿ ಅಂಬೇಡ್ಕ‌ರ್ ಅನುಯಾಯಿಗಳು ಹಾಗೂ 22 ಸಮಾಜದ ಜನರು ಭಾಗವಹಿಸಿದ್ದರಿಂದ ಅಭೂತಪೂರ್ವ ಯಶಸ್ವಿಗೊಂಡಿದೆ, ಇದನ್ನು ಸಹಿಸಿಕೊಳ್ಳಲು ಆಗದ ಬಿಜೆಪಿ ಮುಖಂಡರು ಹತಾಶೆಗೊಂಡು ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

ಆ‌ರ್.ಎಸ್.ಎಸ್ ನವರು ಕೈಯಲ್ಲಿ ಬಡಗಿ ಹಿಡಿದು ಪಥ ಸಂಚಲನ ಮಾಡುವ ಮೂಲಕ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ, ಆದರೆ ನಾವು ಯಾವುದೇ ಮಾರಕಾಸ್ತ್ರ ಇಲ್ಲದೇ ಶಿಸ್ತುಬದ್ಧವಾಗಿ, ಶಾಂತಿಯುತವಾಗಿ ಐತಿಹಾಸಿಕ ಭೀಮ ನಡಿಗೆ ಪಥ ಸಂಚಲನ ಮಾಡಿದ್ದೇವೆ, ಭೀಮ ನಡಿಗೆ ಪಥಸಂಚಲನದಲ್ಲಿ ಸ್ವಯಂಪ್ರೇರಿತವಾಗಿ ಜನ ಬಂದಿದ್ದಾರೆ ಯಾರನ್ನೂ ಹಣ ನೀಡಿ ಕರೆಯಿಸಿಲ್ಲ. ಪ್ರಿಯಾಂಕ್ ಖರ್ಗೆ ಅವರು ಸಂವಿಧಾನದ ಪರ ಇದ್ದಾರೆ ಹೀಗಾಗಿ ಅವರ ಪರ ಘೋಷಣೆ ಕೂಗಿದ್ದೇವೆ, ಸಂವಿಧಾನ ವಿಷಯದಲ್ಲಿ ಬಿಜೆಪಿ ಮುಖಂಡರು ರಾಜಕೀಯ ಮಾಡುವುದನ್ನು ಬಿಟ್ಟುಬಿಡಿಲ್ಲಿ ಎಂದು ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದರು.

ಮಾದಿಗ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ ಮಾತನಾಡಿ, ಸಂವಿಧಾನ ಪರವಾಗಿ ಯಾರು ಇರುತ್ತಾರೆ ಅವರ ಪರ ಘೋಷಣೆ ಕೂಗುತ್ತೇವೆ ಅಷ್ಟೇ ಅಲ್ಲ ತಲೆ ಮೇಲೆ ಹೊತ್ತುಕೊಂಡು ಮೆರವಣಿಗೆ ಸಹ ಮಾಡುತ್ತೇವೆ. ಭೀಮ ನಡಿಗೆ ಪಥಸಂಚಲನದಲ್ಲಿ ಎಲ್ಲಾ ಸಮಾಜದವರು ಭಾಗವಹಿಸಿದ್ದರಿಂದ ಬಿಜೆಪಿ ಅವರಿಗೆ ಹೊಟ್ಟೆ ಕಿಚ್ಚು ಆಗಿದೆ ಹೀಗಾಗಿ ಹತಾಶೆಯಿಂದ ಹೇಳಿಕೆ ನೀಡಿದ್ದಾರೆ. ಪ್ರತಿ ವರ್ಷ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್, ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಬಂಜಾರ ಸಮಾಜದ ಅಧ್ಯಕ್ಷ ಭೀಮಸಿಂಗ ಚವ್ಹಾಣ, ಮುಸ್ಲಿಂ ಸಮಾಜದ ಅಧ್ಯಕ್ಷ ಎಂ.ಎ.ರಷೀದ್, ಮಹಾದೇವ ರಾಠೋಡ, ಮಲ್ಲಿಕಾರ್ಜುನ ಮುಡಬೂಳಕ‌ರ್, ಶರಣು ಡೋಣಗಾಂವ, ಜಗನ್ನಾಥ ಮುಡಬೂಳಕ‌ರ್, ಶರಣಪ್ಪ ಹೊನ್ನಪೂರ, ದೇವು ಯಾಬಾಳ ಇದ್ದರು.

ಸಚಿವರ ಕೈಗೊಂಬೆಯಾದ ತಹಸೀಲ್ದಾರ: ಸಜ್ಜನಶೆಟ್ಟಿ.

ಚಿತ್ತಾಪುರ: ಭೀಮ ನಡಿಗೆ ಪಥಸಂಚಲನಕ್ಕೆ
ಎರೆಡೆರಡು ಬಾರಿ ಅನುಮತಿ ನೀಡುವ ಮೂಲಕ ತಹಸೀಲ್ದಾರ್ ತಮ್ಮ ಮನಬಂದಂತೆ ವರ್ತಿಸಿದ್ದು, ಸಚಿವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ  ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ‌ರ್ ಎಸ್ಎಸ್ ಪಥ ಸಂಚಲನಕ್ಕೆ ತಾಲೂಕು ಕಂದಾಯ ವ್ಯಾಪ್ತಿಯಲ್ಲಿ ಇರುವವರಿಗೆ ಹಾಗೂ 350 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು, ಸಂಚಲನಕ್ಕೆ ಬರುವವರ ಐಡಿ ಕಾರ್ಡ್ ಪರಿಶೀಲನೆ ನಡೆಸಿ ಬ್ಯಾರಿಕೇಡ್ ಹಾಕಿ ನಾಕಾಬಂಧ ಹಾಕಿ, ಪಥ ಸಂಚಲನ ಫೇಲ್ ಮಾಡುವ ಉದ್ದೇಶದಿಂದ ಪೊಲೀಸರು ತುಂಬಾ ತೊಂದರೆ ನೀಡಿದ್ದರು. ಆದರೆ ಭೀಮ ನಡಿಗೆ ಪಥಸಂಚಲನಕ್ಕೆ ಯಾವುದೇ ಬ್ಯಾರಿಕೇಡ್ ಹಾಕಿಲ್ಲ, ಯಾರನ್ನು ತಪಾಸಣೆ ನಡೆಸಲಿಲ್ಲ ಮತ್ತು ಇಂತಿಷ್ಟೇ ಜನರು ಭಾಗವಹಿಸಬೇಕು ಅಂತ ಹೇಳಿಲ್ಲ ಮತ್ತು ಸಮಯ ಪರಿಪಾಲನೆ ಮಾಡಿಲ್ಲ ಹೀಗಾಗಿ ಇಲ್ಲಿ ಅಧಿಕಾರಿಗಳು ತಾರತಮ್ಯ ಮಾಡಿ ಕಾನೂನು ತಮಗೆ ಬೇಕಾದ ಹಾಗೆ ಬಳಸಿಕೊಂಡಿದ್ದಾರೆ ಎಂದು ದೂರಿದರು.

ಆರ್.ಎಸ್ಎಸ್ ಪಥ ಸಂಚಲನ ಸಮಯದಲ್ಲಿ ನಾವು ಪಥ ಸಂಚಲನ ಮಾಡುತ್ತೇವೆ ಎಂದು ಹೇಳಿದ ಸಂಘಟನೆಗಳೇ ಬೇರೆ, ಈಗ ಮಾಡಿದವರೇ ಬೇರೆನೇ ಎಂದು ಕುಟುಕಿದರು. ಶಾಂತಿಪ್ರಿಯ ಚಿತ್ತಾಪುರದಲ್ಲಿ ಇಷ್ಟೊಂದು ಗದ್ದಲ, ಅಶಾಂತಿ ವಾತಾವರಣ ನಿರ್ಮಾಣವಾಗುವುದಕ್ಕೆ ಕಾರಣ ಯಾರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕ‌ರ್ ಮಾತನಾಡಿ ಕಾನೂನು ಎಲ್ಲರಿಗೂ ಒಂದೇ ಇರುವಾಗ ಇಲ್ಲಿಯ ತಹಸೀಲ್ದಾ‌ರ್ ಸೇರಿದಂತೆ ತಾಲೂಕು ಆಡಳಿತ ಆರ್.ಎಸ್ಎಸ್ ಪಥ ಸಂಚಲನಕ್ಕೆ ಒಂದು ಕಾನೂನು, ಭೀಮ ನಡಿಗೆ ಪಥಸಂಚಲನಕ್ಕೆ ಇನ್ನೊಂದು ಕಾನೂನು ಮಾಡಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿದ್ದಾರೆ. ತಾಲೂಕಿನ ಕಂದಾಯ ವ್ಯಾಪ್ತಿಯಲ್ಲಿ ಇರುವವರಿಗೆ ಮಾತ್ರ ಪಥಸಂಚಲನದಲ್ಲಿ ಭಾಗವಹಿಸುವ ಅವಕಾಶ ಇದೆ ಎಂದು ಆದೇಶ ಹೊರಡಿಸಿದ್ದ ತಹಸೀಲ್ದಾರ್ ಬೆಳಿಗ್ಗೆ ಬೇರೆ ಜಿಲ್ಲೆಯವರಿಗೂ ಅವಕಾಶ ಇದೆ ಎಂದು ಮತ್ತೊಂದು ಆದೇಶ ಹೊರಡಿಸಿರುವುದು ಖಂಡನೀಯ ಎಂದರು.

2015 ರಲ್ಲಿ ಸಂವಿಧಾನ ಸಮರ್ಪಣೆ ದಿನಾಚರಣೆ ಜಾರಿಗೆ ತಂದಿದ್ದೇ ಪ್ರಧಾನಿ ಮೋದಿ. ಅಂಬೇಡ್ಕ‌ರ್ ಅವರಿಗೆ ಕಾಂಗ್ರೆಸ್ ಅವಮಾನಿಸಿದೆ ಆದರೆ ಬಿಜೆಪಿ ಗೌರವಿಸಿದೆ ಎಂದರು. ಸಂವಿಧಾನದ 108 ತಿದ್ದುಪಡಿಗಳಲ್ಲಿ ಕಾಂಗ್ರೆಸ್ 100 ತಿದ್ದುಪಡಿ ಮಾಡಿದೆ ಆದರೆ ಬಿಜೆಪಿ ಬರೀ 8 ತಿದ್ದುಪಡಿ ಮಾಡಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ ಹೀಗಾಗಿ ನಮ್ಮದು ಭೀಮ ನಡಿಗೆ ಪಥಸಂಚಲನಕ್ಕೆ ವಿರೋಧ ಇರಲಿಲ್ಲ, ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಪಥ ಸಂಚಲನ ಮಾಡಿರುವುದಕ್ಕೆ ನಾವು ಸ್ವಾಗತಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪುರಸಭೆ ಮಾಜಿ ಸದಸ್ಯರಾದ ನಾಗರಾಜ ಭಂಕಲಗಿ, ಸುರೇಶ್ ಬೆನಕನಳ್ಳಿ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್, ಪ್ರಧಾನ ಕಾರ್ಯದರ್ಶಿ ನಾಗರಾಜ್ ಹೂಗಾರ, ಶಿವರಾಮ್ ಚವ್ಹಾಣ, ರಾಜು ದೊರೆ ಇದ್ದರು.

ಶುಕ್ರವಾರ, ನವೆಂಬರ್ 28, 2025

ಕನ್ನಡ ಸಾಹಿತ್ಯ ಪರಿಷತ್‌ ಕಾರ್ಯಕ್ರಮ ಆಂಗ್ಲ ಶಾಲೆಯಲ್ಲಿ : ಇಂದೂರು ಆಕ್ಷೇಪ.


ಚಿತ್ತಾಪುರ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದಲ್ಲಿ ಸಿರಿನುಡಿ ಸಂಭ್ರಮ ಎಂಬ ಕಾರ್ಯಕ್ರಮ ಇಂದು ಶನಿವಾರ ಹಮ್ಮಿಕೊಂಡಿರುವ ಶೇಷಗಿರಿರಾವ್ ಹಿರಿಯ ಮತ್ತು ಪ್ರೌಢ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸುವ ಮೂಲಕ ಕನ್ನಡ ಭಾಷೆಗೆ ಅವಮಾನ ಮಾಡಲಾಗುತ್ತಿದೆ ಎಂದು ತಾಲೂಕಾ ಜೈ ಕರ್ನಾಟಕ ಮಾಜಿ ಅಧ್ಯಕ್ಷ ಮಲ್ಲಿನಾಥ ಇಂದೂರು ಅವರು ಉದಯಕಾಲ ಪತ್ರಿಕೆ ಜೊತೆಗೆ ಮಾತನಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ

ಕನ್ನಡ ನಾಡು, ನುಡಿ, ನೆಲ,ಜಲ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಕೊಡುಗೆ ನೀಡಿರುವ ಮತ್ತು ಶ್ರಮಿಸುತ್ತಿರುವವರನ್ನು ಗುರುತಿಸಿ ಪರಿಷತ್ತಿನಿಂದ ಸನ್ಮಾನಿಸಿ, ಪ್ರಶಸ್ತಿ ನೀಡಿ ಗೌರವಿಸುವುದು ಪರಿಷತ್ತಿನ ಸಂಪ್ರದಾಯ. ಅದನ್ನು ಮೀರಿ ಆಂಗ್ಲ ಭಾಷೆಯಲ್ಲಿ ಬೋಧನೆ ಮಾಡುವ ಉಪನ್ಯಾಸಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡುವುದು ಅಲ್ಲದೇ ಮಾಧ್ಯಮ ಕ್ಷೇತ್ರವನ್ನು ಕಡೆಗಣಿಸುವ ಮೂಲಕ ಕನ್ನಡ ಭಾಷೆ ಬೋಧಿಸುವ ಶಿಕ್ಷಕ, ಉಪನ್ಯಾಸಕರಿಗೆ, ಹಾಗೂ ನಾಲ್ಕನೆ ಅಂಗವಾದ ಪತ್ರಿಕಾ ರಂಗವನ್ನು ಅವಮಾನ ಮಾಡಿದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಕೇಳಿದಾಗ ತಾಲೂಕಾ ಅಧ್ಯಕ್ಷರಿಗೆ ಕೇಳಿ ಎಂದು ಹಾರಿಕೆ ಉತ್ತರ ನೀಡಿದ್ದಾರೆ. ತಾಲೂಕಾ ಅಧ್ಯಕ್ಷರಿಗೆ ಕೇಳಿದರೆ ಆಗಿರುವ ತಪ್ಪು ಮುಂದಿನ ಕಾರ್ಯಕ್ರಮದಲ್ಲಿ ಸರಿಪಡಿಸಿಕೊಳ್ಳೋಣ ಎಂದು ಹೇಳುವ ಮೂಲಕ ತಪ್ಪು ಒಪ್ಪಿಕೊಂಡು ಕನ್ನಡ ಭಾಷೆಗೆ ಮಾಡಿರುವ ಅವಮಾನ ಸಮರ್ಥಸಿಕೊಂಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ಬುಧವಾರ, ಅಕ್ಟೋಬರ್ 8, 2025

ಪ್ರಜಾ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

ಚಿತ್ತಾಪುರ: ಪಟ್ಟಣದ ಪ್ರಜಾ ಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ರಾಜಕುಮಾ‌ರ್ ಮರತೂರಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಸಮಾಜ ಕಲ್ಯಾಣಾಧಿಕಾರಿ ಚೇತನ್ ಗುರಿಕಾರ, ವಾಲ್ಮೀಕಿ ಸಮಾಜ ತಾಲೂಕು ಅಧ್ಯಕ್ಷ ಭೀಮರಾಯ ದೋರಿ, ಯುವ ಅಧ್ಯಕ್ಷ ರಾಜು ದೋರಿ, ಮುಖಂಡರಾದ ಸಾಬಣ್ಣ ಮುಸ್ಲಾ, ಅಂಬಣ್ಣ ಬೊಮ್ಮನಹಳ್ಳಿ, ಹಣಮಂತ ಬೊಮ್ಮನಹಳ್ಳಿ, ಮೌನೇಶ್ ಲಾಡ್ಲಾಪೂರ, ಸಾಬಣ್ಣ ಲಾಡ್ಲಾಪೂರ, ರಾಮು ಮುಸ್ಲಾ, ಭೀಮರಾಯ ಲಾಡ್ಡಾಪೂರ, ಸಾಬಣ್ಣ ಕುಂಬಾರಹಳ್ಳಿ, ಹಣಮಂತ ಗಲಿಗಿನ್, ಅಮೃತ್ ಶಾಮನೂರ, ಮಹಾದೇವ ಬೊಮ್ಮನಹಳ್ಳಿ, ಉಮೇಶ್ ದೋರಿ, ವೆಂಕಟೇಶ್ ಬಳಿಚಕ್ರ, ಜಗದೇವ ಚಾಮನೂರ, ಚಂದ್ರು ಇಟಗಾ, ಭಾಗಣ್ಣ ದೋರಿ, ಸಾಯಬಣ್ಣ ವಾಡಿ, ದೇವಪ್ಪ ಕುಂಬಾರಹಳ್ಳಿ, ನಿಂಗಣ್ಣ ಚಾಮನೂರ, ಹಣಮಂತ ದಿಗ್ಗಾಂವ, ಶರಣು ವಾಡಿ, ಭೀಮಾಶಂಕರ ದಿಗ್ಗಾಂವ ಸೇರಿದಂತೆ ಇತರರು ಇದ್ದರು.

ನ್ಯಾ.ಬಿ.ಆರ್ ಗವಾಯಿ ಮೇಲೆ ಶೂ ಎಸೆತಕ್ಕೆ ಖಂಡನೆ

ಚಿತ್ತಾಪುರ : ರಾಷ್ಟ್ರದ ಸರ್ವೋಚ್ಛ ನ್ಯಾಯಾಲಯದ ಘನತೆವೆತ್ತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರನ್ನು ಅಪಮಾನಿಸಲು ಶೂ ಎಸೆಯಲು ಯತ್ನಿಸಿರುವ ಘಟನೆ ಅತ್ಯಂತ ಖಂಡನೀಯ ಎಂದು ಬೌದ್ಧ ಮಹಾಸಭಾ ತಾಲೂಕಾಧ್ಯಕ್ಷ ಜಗನ್ನಾಥ ಮುಡಬೂಳಕ‌ರ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ಈ ಸಂವಿಧಾನದ ಘಟನೆ ಸಾರ್ವಭೌಮತ್ವವನ್ನು ಅಪಮಾನಿಸಲು ಯತ್ನಿಸಿದ ನೀಚ ಹಾಗೂ ಅನಾಗರೀಕ ವರ್ತನೆಯಾಗಿದ್ದು, ಕೃತ್ಯ ಎಸಗಿದ ವಕೀಲನ ವರ್ತನೆ ಯಾರೂ ಕ್ಷಮಿಸಲಾರದ ದುಷ್ಕೃತ್ಯವಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಮಾನಿಸುವ ಹಾಗೂ ಅಗೌರವ ತೋರುವ ವರ್ತನೆ ಹಾಗೂ ಕೃತ್ಯಗಳು ವಿದ್ರೋಹಿತನದ ಪರಮಾವಧಿಯಾಗಿದೆ. ದೇಶದ ಕಾನೂನಿನ ಅನ್ವಯ ಪೊಲೀಸರು ಈ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಉತ್ಸವ ಯಶಸ್ಸು: ಕೃತಜ್ಞತೆ ಸಲ್ಲಿಸಿದ ಹಿರೇಮಠ

ಚಿತ್ತಾಪುರ: ಐತಿಹಾಸಿಕ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವದ ಯಶಸ್ಸಿಗೆ ಶ್ರಮಿಸಿದ ಮತ್ತು ಸಹಕರಿಸಿದ ಎಲ್ಲರಿಗೂ ದೇವಸ್ಥಾನ ಸಮಿತಿ ಅಧ್ಯಕ್ಷರು/ತಹಸೀಲ್ದಾರ್ ನಾಗಯ್ಯ ಹಿರೇಮಠ ರವರು ತಾಲೂಕು ಆಡಳಿತದಿಂದ ಹೃದಯ ಪೂರ್ವಕ ಧನ್ಯವಾದಗಳು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ ಮಾರ್ಗದರ್ಶನದಿಂದ ಯಾವುದೇ ಲೋಪವಿಲ್ಲದೆ ಪಲ್ಲಕ್ಕಿ ಉತ್ಸವ ಶಾಂತಿಯುತವಾಗಿ ನಡೆಯಿತ್ತು. ನಾಗಾವಿ ಯಲ್ಲಮ್ಮ ದೇವಿ ಪಲ್ಲಕ್ಕಿ ಉತ್ಸವ ಮತ್ತು ಜಾತ್ರೆಯು ಸುಗಮವಾಗಿ ನಡೆಯುವಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪುರಸಭೆ ಕಾರ್ಯಲಯದ ಸಿಬ್ಬಂದಿ ವರ್ಗ, ಪದವಿ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಮಾಡಿದ ಶಿಸ್ತುಬದ್ಧ ಸೇವೆ, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ದೀಪಾಲಂಕಾರ ಸಮಿತಿ ಸದಸ್ಯರು ಸದಸ್ಯರು, ಪತ್ರಕರ್ತರಿಗೂ ಮತ್ತೂ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡದ ಭಕ್ತಾದಿಗಳ ಜೊತೆಗೆ ಎಲ್ಲರ ಸಾಮೂಹಿಕ ಪ್ರಯತ್ನದಿಂದಾಗಿ ಜಾತ್ರೆಯು ವಿಜ್ರಂಭಣೆಯಿಂದ ನೆರವೇರಿತು ಎಂದು ಹೇಳಿ ಕೃತಜ್ಞತೆ ಸಲ್ಲಿಸಿದ್ದಾರೆ.

ಶೂ ಎಸೆಯುವ ಯತ್ನ ಭಯೋತ್ಪಾದಕ ಕೃತ್ಯ: ಬುಳಕರ ಆಗ್ರಹ

ಚಿತ್ತಾಪುರ: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿಯವರ ಮೇಲೆ ವಕೀಲನೊಬ್ಬ ಶೂ ಎಸೆಯುವ ಪ್ರಯತ್ನ ಮಾಡಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಯುವ ಮುಖಂಡ ಸಂಜಯ ಬುಳಕರ ಹೇಳಿದರು. 

ಬುಧವಾರ ತಹಸೀಲ್ ಕಾರ್ಯಾಲಯಕ್ಕೆ ತೆರಳಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಸೀಲ್ದಾರ್ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಸಲ್ಲಿಸಿದರು. ತದನಂತರ ಮಾತನಾಡದ ಅವರು ಈ ದೇಶದ ಸರ್ವೋಚ್ಚ ನ್ಯಾಯಮೂರ್ತಿಗಳ ಮೇಲೆಯೇ ಕೋರ್ಟ್ ಹಾಲ್ ನಲ್ಲೇ ಈ ಕೃತ್ಯ ನಡೆದಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದರು.

ಇದೊಂದು ಭಯೋತ್ಪಾದಕ ಕೃತ್ಯ, ಇದು ಈ ದೇಶದ ಸಂವಿಧಾನವನ್ನು ಒಪ್ಪದ ಸಮುದಾಯದವರ ಮನೋ ಸ್ಥಿತಿಯಾಗಿದೆ.ದಲಿತರೊಬ್ಬರು ಈ ಸ್ಥಾನಕ್ಕೆ ಬಂದಿರುವುದನ್ನೆ ಸಹಿಸಲಾಗದ ದುಷ್ಟ-ಮನಸುಗಳು ಈ ರೀತಿಯ ಕೃತ್ಯವನ್ನು ಬೆಂಬಲಿಸುತ್ತವೆ, ಮತ್ತು ಇಂತಹ ಕೃತ್ಯದಲ್ಲಿ ತೊಡಗುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯ ನ್ಯಾಯಮೂರ್ತಿಗಳು ದಲಿತರು, ಬೌದ್ಧ ಧರ್ಮದ ಉಪಾಸಕರು ಆಗಿದ್ದು. ಅದೇ ಮುಖ್ಯ ಕಾರಣವನ್ನಾಗಿಸಿಕೊಂಡು ಸನಾತನ ಧರ್ಮದ ಹೆಸರಲ್ಲಿ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿಗಳ ಮೇಲೆಯೇ ಶೂ ಎಸೆಯುವ ದುಷ್ಟ ಪ್ರಯತ್ನ ನಡೆಸಿರುವಾಗ ಈ ದೇಶದ ಸಾಮಾನ್ಯ ದಲಿತರ ಪಾಡೇನು ಎಂಬುದನ್ನು ಯೋಚಿಸಬೇಕಾಗಿದೆ. 

ಈ ಕೃತ್ಯ ಸಂವಿಧಾನದ ಮೇಲೆ ನಡೆದ ತೀವ್ರ ಹಲ್ಲೆಯಾಗಿದೆ. ಇಂಥ ವ್ಯಕ್ತಿಗಳ ಹಿಂದಿರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಕಾಶಿ ವಡ್ಡರ ಸಮಾಜದ ಸರಪಂಚ್ ವಿಠ್ಠಲ್ ಕಾಶಿಯವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಸಂಧರ್ಭದಲ್ಲಿ ದಿಗ್ಗಾoವ ಗ್ರಾಮ ಅಧ್ಯಕ್ಷರಾದ ಹರಾಳಯ್ಯ ಬಡಿಗೇರ,ಸಾಬಣ್ಣ ಕಲಬುರಗಿ, ಚಂದ್ರಕಾಂತ್ ಕಾಶಿ,ದೇವಪ್ಪ ತಳವಾರ, ನರೇಂದ್ರ ರೆಡ್ಡಿ ಬಂಕಲಗಿ, ಬಸವರಾಜ್ ಮೈನಾಳಕರ,ಗುರು ಪಾಟೀಲ್, ಭೀಮು ಉಪಾರ, ಹುಸನಪ್ಪ, ರಾಹುಲ್, ಮಹೇಶ್ ದೇವರ ಸೇರಿದಂತೆ ಇತರರಿದ್ದರು.

ವನ್ಯಜೀವಿಗಳಿಂದ ಜಗದ ಉಳಿವು : ಬಡಿಗೇರ್.

ಚಿತ್ತಾಪುರ: ಜಗದ ಉಳಿವು ವನ್ಯಜೀವಿಗಳನ್ನು ಅವಲಂಬಿಸಿವೆ. ಅವುಗಳ ನಾಶವಾದರೆ ನಮಗೆ ಉಳಿಗಾಲವಿಲ್ಲ ಎಂದು ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್ ಹೇಳಿದರು. 

ಜಿಲ್ಲಾ ಪ್ರಾದೇಶಿಕ ಅರಣ್ಯ ವಿಭಾಗ, ತಾಲ್ಲೂಕ ವಲಯ ಅರಣ್ಯ ವಿಭಾಗ ಹಾಗೂ ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ವತಿಯಿಂದ ಲುಂಬಿನಿ ಟ್ರಿ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಕೃತಿ ಒಂದು ಅದ್ಭುತ ಸೃಷ್ಟಿ ಅದರಲ್ಲಿ ಅರಣ್ಯಗಳು ಹಾಗೂ ವನ್ಯಜೀವಿಗಳ ಪಾತ್ರ ಪ್ರಮುಖವಾದದ್ದು. ಆದರೆ ಅನೇಕ ಕಾರಣಗಳಿಂದ ಅರಣ್ಯಗಳಲ್ಲಿರುವ ವನ್ಯಜೀವಿಗಳಿಗೆ ಆತಂಕ ಎದುರಾಗಿವೆ. ಪ್ರಕೃತಿಯಲ್ಲಿ ಪ್ರತಿಯೊಂದು ಪ್ರಾಣಿಗಳು ಆಹಾರ ಸರಪಳಿಯಲ್ಲಿ ಒಂದು ಇನ್ನೊಂದನ್ನು ಆಶ್ರಯಿಸಿ ಬದುಕುತ್ತಿವೆ ಹೀಗಿರುವಾಗ ಪ್ರತಿಯೊಬ್ಬರೂ ಕಾಡು ಪ್ರಾಣಿಗಳನ್ನು ರಕ್ಷಿಸುವ ಸಂಕಲ್ಪ ಮಾಡಬೇಕು. ಅವುಗಳ ರಕ್ಷಣೆಯೇ ನಮ್ಮೇಲ್ಲರ ರಕ್ಷಣೆಯಾಗಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ಸಿದ್ದಲಿಂಗ ಬಾಳಿ ಪ್ರತಿವರ್ಷ ವನ್ಯಜೀವಿ ಸಂರಕ್ಷಣೆಯ ಅರಿವು ಮೂಡಿಸಲು ಭಾರತೀಯ ವನ್ಯಜೀವಿ ಮಂಡಳಿಯು ದೇಶದಾದ್ಯoತ ಅಕ್ಟೊಬರ್ 2 ರಿಂದ 8 ರವರೆಗೆ ವನ್ಯಜೀವಿ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದೆ. ಪರಿಸರದ ಜೊತೆಗೆ ವನ್ಯಜೀವಿಗಳ ರಕ್ಷಣೆ ನಮ್ಮೇಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಅರಣ್ಯ ಅಧಿಕಾರಿ ವಿಶ್ವನಾಥ ಪಾಟೀಲ್, ಏನ್. ಸಿ. ಸಿ ಅಧಿಕಾರಿ ಶರಣು ಸಜ್ಜನ್. ಟ್ರಿ ಪಾರ್ಕ್ ಸಿಬ್ಬಂದಿಗಳಾದ ಶ್ರೀಕಾಂತ, ನಾಗೇಶ್, ಜಾಫರ್ ಇದ್ದರು.ಮಕ್ಕಳಿಗೆ ಅರಣ್ಯ, ವನ್ಯಜೀವಿ ಧಾಮಗಳ ಮಹತ್ವವನ್ನು ಹೇಳಿ ಕೊಡುವುದರ ಜೊತೆಗೆ ಅಲ್ಲಿರುವ ಚಿಟ್ಟೆ ಪಾರ್ಕ ಸೇರಿದಂತೆ ವಿವಿಧ ಸಸ್ಯಗಳ ಪ್ರಭೇಧಗಳು, ಪ್ರಾಣಿ ಪ್ರಭೇಧಗಳ ಬಗ್ಗೆ ಅರಣ್ಯಧಿಕಾರಿಗಳು ಮಾರ್ಗದರ್ಶನ ಮಾಡಿದರು. ಮಕ್ಕಳು ಅಲ್ಲಿನ ಪ್ರಕೃತಿ ಸೌಂದರ್ಯವನ್ನು ಸವಿಯುತ್ತ, ಮನೋರಂಜನೆ ಜೊತೆಗೆ ಪರಿಸರದ ಅನೇಕ ವಿಷಯಗಳನ್ನು ಕೇಳಿ ತಿಳಿದುಕೊಂಡರು.

ನಾಳೆ ಜಮೀನು ಹರಾಜು ಪ್ರಕ್ರಿಯೆ: ತಹಸೀಲ್ದಾ‌ರ್

ಚಿತ್ತಾಪುರ: ನ್ಯಾಯಾಲಯದ ಆದೇಶದಂತೆ ಬಾಂಡ್ ಮೊತ್ತ ಭರಿಸದೆ ಇರುವುದರಿಂದ ತಾಲೂಕಿನ ಯರಗಲ್ ಗ್ರಾಮದ ಸ.ನಂ:4/*/1 ವಿ:3-30ಎ.ಗುಂ ಜಮೀನಿನ ಹರಾಜು ಪ್ರಕ್ರಿಯೆ ಅ. 9 ರಂದು ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿರುತ್ತದೆ. ಕಾರಣ ಹರಾಜು ಪ್ರಕ್ರಿಯೆಯಲ್ಲಿ ಆಸಕ್ತಿಯುಳ್ಳವರು ಪಾಲ್ಗೊಳ್ಳಲು ಅವಕಾಶ ಇರುತ್ತದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.

Crl Misc No:453/2020, Cr NO:14/2019(RG Nagar PS V/s Jakeer &Ors) reg : ಆದೇಶದಂತೆ ಬಾಂಡ್ ಮೊತ್ತ ಭರಿಸುವಂತೆ ನೋಟಿಸ್-37 ಮತ್ತು ನೋಟಿಸ್‌-38 ನೀಡಲಾಗಿರುತ್ತದೆ ಆದರೆ ಕಂದಾಯ ನಿರೀಕ್ಷಕರು ಚಿತ್ತಾಪುರ ರವರು ಅರ್ಜುನ ತಂದೆ ಮರೆಪ್ಪಾ ರವರು ಯರಗಲ್ ಗ್ರಾಮದಲ್ಲಿ ಹಾಗೂ ಶಹಾಬಾದ ಪಟ್ಟಣದಲ್ಲಿ ವಾಸವಿರುವುದಿಲ್ಲ ಎಂದು ವರದಿ ಸಲ್ಲಿಸಿರುತ್ತಾರೆ. ವಿಚಾರಣೆ ಮುಂದುವರೆದು ಸೆ.24 ರಂದು ದಿನದಂದು ಮಾನ್ಯ ನ್ಯಾಯಾಧಿಶರು ಬಾಂಡ್ ಮೊತ್ತ ಭರಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿರುತ್ತಾರೆ ಹಾಗೂ ಆರಕ್ಷಕರು ಉಪನಿರೀಕ್ಷಕರು ಪೋಲಿಸ್ ಠಾಣೆ ಚಿತ್ತಾಪುರ ರವರಿಗೆ ಪತ್ರ ಬರೆಯಲಾಗಿದ್ದು ಅರ್ಜುನ ಮರೆಪ್ಪಾ ರವರನ್ನು ಬಂಧಿಸಿ ಹಾಜರಪಡಿಸುವಂತೆ ಸೂಚಿಸಲಾಗಿರುತ್ತದೆ.

ಪ್ರಯುಕ್ತ ಪಹಣಿ ಮಾಲಿಕರಾದ ಅರ್ಜುನ ತಂ ಮರೆಪ್ಪಾ ರವರ ಯರಗಲ್ ಗ್ರಾಮದಲ್ಲಿ ವಾಸವಿರದೆ ಇರುವುದರಿಂದ ಯರಗಲ್ ಗ್ರಾಮದ ಸ.ನಂ:4/*/1 ವಿ:3-30ಎ.ಗುಂ ಜಮೀನಿನ ಹರಾಜು ಪ್ರಕ್ರಿಯೆ ಅ. 9 ರಂದು ಬೆಳಿಗ್ಗೆ 11.00 ಗಂಟೆಗೆ ನಿಗದಿಪಡಿಸಲಾಗಿರುತ್ತದೆ. ಕಾರಣ ಯರಗಲ್ ಗ್ರಾಮದ ಸ.ನಂ:4/*/1 2:3-302. ಹರಾಜು ಪ್ರಕ್ರಿಯೆಯಲ್ಲಿ ಆಸಕ್ತಿಯುಳ್ಳವರು ಪಾಲ್ಗೊಳ್ಳಲು ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.

ದಸರಾ ರಜೆ ವಿಸ್ತರಣೆಗೆ ಜಿಲ್ಲಾಧ್ಯಕ್ಷ ಸ್ವಾಗತ.

ಚಿತ್ತಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ಅ. 18 ವರೆಗೆ ವಿಸ್ತರಿಸಿದ ಸರಕಾರದ ಆದೇಶಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ರವರು ಸ್ವಾಗತಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025ರ ಗಣತಿ ಕಾರ್ಯದಲ್ಲಿ ರಾಜ್ಯಾದಾದ್ಯಂತ ಸರ್ಕಾರಿ ಶಾಲೆಗಳ ಶಿಕ್ಷಕರುಗಳಿಗೆ ಕಳೆದ ಸೆ.22 ರಿಂದ ಅ.7 ವರೆಗೆ ಗಣತಿ ಕಾರ್ಯನಿರ್ವಹಿಸಲು ನಿಯೋಜಿಸಲಾಗಿತ್ತು. ಗಣತಿ ಕಾರ್ಯದಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ಗಣತಿ ಕಾರ್ಯ ಪೂರ್ಣಗೊಳ್ಳದೇ ಇರುವುದರಿಂದ ಶಿಕ್ಷಕರು ದೈಹಿಕ ಮತ್ತು ಬೌದ್ಧಿಕವಾಗಿ ಒತ್ತಡದಲ್ಲಿ ಗಣತಿ ಕಾರ್ಯ ನಿರ್ವಹಿಸಬೇಕಾಗಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕಾಗಿ ದಸರಾ ರಜೆ ವಿಸ್ತರಿಸಲು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜಾಧ್ಯಕ್ಷ ಸಿ.ಎಸ್.ಷಡಕ್ಷರಿ ರವರು ಮುಖ್ಯಮಂತ್ರಿಗಳಿಗೆ ಮತ್ತು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗಿತ್ತು,

ತಕ್ಷಣವೇ ಸಂಘದ ಮನವಿಗೆ ಸ್ಪಂದಿಸಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಸರಾ ರಜಾ ಅವಧಿಯನ್ನು ಅ.18 ವರೆಗೆ ವಿಸ್ತರಿಸಿ ಆದೇಶ ನೀಡಿರುವುದಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕಲಬುರಗಿ ಅಧ್ಯಕ್ಷ ಬಸವರಾಜ ಬಳ್ಳಂಡಗಿ, ಪದಾಧಿಕಾರಿಗಳಾದ ಮಹೇಶ ಹೂಗಾರ, ಶ್ರೀಮಂತ ಪಟ್ಟೇದಾರ, ಧರ್ಮರಾಜ ಜವಳಿ, ಸುರೇಶ ಶರ್ಮಾ, ಚಂದ್ರಕಾಂತ ಏರಿ, ಎಂ.ಬಿ ಪಾಟೀಲ, ಸುರೇಶ ವಗ್ಗೆ ರವರು ಸಂತಸ ವ್ಯಕ್ತಪಡಿಸಿದ್ದಾರೆ.

ನಾಗಾವಿ ಎಕ್ಸಪ್ರೆಸ್‌ ವಿಶೇಷ ಪುರವಣಿಗೆ ಬಿಡುಗಡೆ.

ಚಿತ್ತಾಪೂರ: ಪಟ್ಟಣದ ಲಚ್ಚಪ್ಪ ನಾಯಕ ಸರಾಫ್ ಮನೆಯಲ್ಲಿ ಮಂಗಳವಾರ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿ ನಂತರ ಕಾಶಿನಾಥ ಗುತ್ತೇದಾರ ಅವರ ಸಂಪಾದಕತ್ವದಲ್ಲಿ ಮುನ್ನೆಡೆಯುತ್ತಿರುವ ನಾಗಾವಿ ಎಕ್ಸಪ್ರೆಸ್‌ ಕನ್ನಡ ದಿನಪತ್ರಿಕೆಯ ವಿಶೇಷ ಪುರವಣಿಯನ್ನು ಗಣ್ಯರು ಬಿಡುಗಡೆ ಮಾಡಿದರು 

ಈ ಸಂದರ್ಭದಲ್ಲಿ ತಹಸೀಲ್ದಾರ ನಾಗಯ್ಯ ಹಿರೇಮಠ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಲ್'ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಬಿಜೆಪಿ ಮುಖಂಡ ಅಯ್ಯಪ್ಪ ರಾಮತೀರ್ಥ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್‌, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್‌ ಚವ್ಹಾಣ, ರೈತ ಸಂಘದ ಅಧ್ಯಕ್ಷ ಮೌನೇಶ್ ಭಂಕಲಗಿ, ರತ್ನಾಕರ್ ನಾಯಕ, ಗೌತಮ್ ನಾಯಕ, ಬೌದ್ಧ ಮಹಾಸಭಾ ಅಧ್ಯಕ್ಷ ಜಗನ್ನಾಥ ಮುಡಬೂಳಕ‌ರ್, ಪತ್ರಕರ್ತ ಜಗದೇವ ಕುಂಬಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಭೋವಿ ಸಮಾಜದಿಂದ ಪಲ್ಲಕ್ಕಿ ಸೇವೆ.

ಚಿತ್ತಾಪುರ: ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವ ನಡೆಯಿತು.ಭೋವಿ ಸಮಾಜದಿಂದ ಪಲ್ಲಕ್ಕಿ ಸೇವೆ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಲಕ್ಷ್ಮಿಕಾಂತ ತಾಂಡೂರಕರ್, ರಾಹುಲ್ ಭೋವಿ, ಮಾರುತಿ ತಾಂಡೂರಕರ್, ಮಹೇಶ್ ಮೇಟಿ, ಜಗನ್ನಾಥ್ ಅಳ್ಳೊಳ್ಳಿ, ಅಂಬು ದುದಲಿಕರ್,  ಜಗನ್ನಾಥ್ ಭೋವಿ, ಲಕ್ಷ್ಮಿಕಾಂತ್ ಮೇಟಿ, ಲಾಲು ಅಲ್ಮೆಲಕರ್, ಅಂಬರೀಶ್ ಭೋವಿ, ಶಿವಕುಮಾರ್ ಭೋವಿ, ಸೇರಿದಂತೆ ಇತರರು ಇದ್ದರು.

ಅನ್ನದಾಸೋಹ: ಶಂಕರಗೌಡ ಪಾಟೀಲ ಚಾಲನೆ.

ಚಿತ್ತಾಪುರ: ಪಟ್ಟಣದ ಐತಿಹಾಸಿಕ ಶ್ರೀ ನಾಗಾವಿ
ಯಲ್ಲಮ್ಮ ಪಲ್ಲಕ್ಕಿ ಉತ್ಸವದ ಪ್ರಯುಕ್ತ ಅನ್ಮೋಲ್ ಹೋಟೆಲ್ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಅನ್ನದಾಸೋಹಕ್ಕೆ ಡಿವೈಎಸ್ಪಿ ಶಂಕರಗೌಡ ಪಾಟೀಲ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಜಾತ್ರಾ ಮಹೋತ್ಸವದ ಅಂಗವಾಗಿ ಇಂತಹ ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಅನ್ಮೋಲ್ ಹೋಟೆಲ್  ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಪಿಐ ಚಂದ್ರಶೇಖರ್ ತಿಗಡೆ, ಅನ್ಮೋಲ್ ಹೋಟೆಲ್ ಶ್ರೀಮತಿ ಭಾಗಮ್ಮ ಕಲ್ಲಾಕ್, ಸುರಾಜ್ ಕಲ್ಲಾಕ್ ವಿಜಯ್ ಕಲ್ಲಾಕ್, ಅರುಣ್ ಕಲ್ಲಾಕ್, ವಿಜಯಕುಮಾರ್ ದೊಡ್ಮನಿ, ಜಗನ್ನಾಥ ಮುಡಬೂಳಕರ್, ಅಂಬರೀಶ್, ಪ್ರಕಾಶ್ ಸೇರಿದಂತೆ ಇತರರು ಇದ್ದರು.

ಭಾನುವಾರ, ಅಕ್ಟೋಬರ್ 5, 2025

ವಿದ್ಯಾರ್ಥಿಗಳ ಗೋಳು ಕೇಳೋರಿಲ್ಲ : ವಾರ್ಡನ್ ನಿರ್ಲಕ್ಷ.

ಹೈಟೆಕ್ ವಸತಿ ನಿಲಯ, ಒಳಗೆ ಹೋಗಲು ಮುಜುಗರ.

ಚಿತ್ತಾಪುರ: ಪಟ್ಟಣದ ಬಾಲಾಜಿ ಮಂದಿರದ ಮುಂದೆ ಇರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಹೋಗುವ ರಸ್ತೆಯಲ್ಲಿ ಸುಮಾರು ದಿನಗಳಿಂದ ಮಳೆ ನೀರು ನಿಂತು ಗಬ್ಬು ನಾರುತ್ತಿದರು ಸಹ ಆ ನೀರನ್ನು ಸ್ವಚ್ಛಗೊಳಿಸದೆ ಕ್ರಮ ಕೈಗೊಳ್ಳದೆ ವಸತಿ ನಿಲಯದ ವಾರ್ಡನ್ ನಿರ್ಲಕ್ಷತನ ತೋರುತ್ತಿರುವುದು ಎದ್ದು ಕಾಣುತ್ತಿದೆ.

ಪ್ರತಿನಿತ್ಯ ವಸತಿ ನಿಲಯದ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಿ /ಬರುವಾಗ ಅದೇ ನೀರಿನಲ್ಲಿ ಮೂಗು ಮುಚ್ಚಿಕೊಂಡು ನಡೆದುಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ. ಕೆಲ ವಿದ್ಯಾರ್ಥಿಗಳು ಆ ಗಬ್ಬು ನೀರಿನಲ್ಲಿ ನಡೆದುಕೊಂಡು ಹೋಗಲು ಹಿಂಜರಿದು ಕಾಂಪೌಂಡ ಹಾರಿ (ಜಿಗಿದು) ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ನಿಲಯದ ಅಡುಗೆ ಸಿಬ್ಬಂದಿ ವರ್ಗ ವಾರ್ಡನ್ ಸಹ ಇದೇ ನೀರಿನಲ್ಲಿ ನಡೆದುಕೊಂಡು ಬರುತ್ತಿದ್ದಾರೆ ಇದಕ್ಕೆ ಪರಿಹಾರ ಕಂಡುಕೊಳ್ಳಲು ಇವರಿಗೆ ಆಗುತ್ತಿಲ್ಲ. 

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಚಿವ ಪ್ರಿಯಾಂಕ ಖರ್ಗೆ ಹೈಟೆಕ್ ವಸತಿ ನಿಲಯ ನಿರ್ಮಿಸಿದ್ದಾರೆ ಆದರೆ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಸಣ್ಣ-ಪುಟ್ಟ ಸಮಸ್ಯೆಗಳು ಉದ್ಭವಿಸುತ್ತಿವೆ ಎನ್ನುತ್ತಿದ್ದಾರೆ ಸ್ಥಳೀಯರು.

ವಸತಿ ನಿಲಯದ ವಿದ್ಯಾರ್ಥಿಗಳು ಉದಯಕಾಲ ವರದಿಗಾರ ಜೊತೆ ಮಾತನಾಡಿ ಅವರು ಈ ನಿಂತ ನೀರಿನಿಂದ ಬೆಳಗ್ಗೆ ಸಾಯಂಕಾಲ ಗಬ್ಬು ವಾಸನೆ ಬರುತ್ತಿದ್ದು, ಇದರ ಜೊತೆಗೆ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಈ ಕುರಿತು ವಾರ್ಡನ್ ಅವರಿಗೆ ಹೇಳಿದರೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಮ್ಮ ಗೋಳು ಹೇಳಿಕೊಂಡಿದ್ಜಾರೆ.

ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಸುದ್ದಿಯನ್ನು ನೋಡಿ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳ ಗೋಳನ್ನು ಆಲಿಸಿ ಕ್ರಮ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.

ಗುರುವಾರ, ಸೆಪ್ಟೆಂಬರ್ 18, 2025

ದುಡ್ಡು ಕೊಟ್ರೆ ಮನೆ ನಿರ್ಮಾಣಕ್ಕೆ ಅನುಮತಿ ಪತ್ರ: ದಸಂಸ ಆರೋಪ.

ಚಿತ್ತಾಪುರ: ಮತ ಕ್ಷೇತ್ರದ ಮಾಲಗತ್ತಿ ಗ್ರಾಮ ಪಂಚಾಯತನ  ಅಧ್ಯಕ್ಷರು ಮತ್ತು ಪಿಡಿಓ ಸೇರಿಕೊಂಡು ದುಡ್ಡು ಕೊಟ್ಟವರಿಗೆ ಮಾತ್ರ ಮನೆ ನಿರ್ಮಾಣಕ್ಕೆ ಅನುಮತಿ ಪತ್ರ ನೀಡುವುದು ದುಡ್ಡು ಕೊಡದವರಿಗೆ ನೀಡದೆ ಅನ್ಯಾಯ ಮಾಡುತ್ತಿರುವುದು ಖಂಡನೀಯ ಎಂದು ಆರೋಪಿಸಿ ಪತ್ರಿಕಾ ಪ್ರಕಟಣೆ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಶಿವಮೂರ್ತಿ ಪಾಮನೋರ ತಿಳಿಸಿದ್ದಾರೆ.

ಪಂಚಾಯತ ವ್ಯಾಪ್ತಿಯಲ್ಲಿರುವ ಯರಗಲ್ ಗ್ರಾಮದ 2024-25ನೇ ಸಾಲಿನ ಇಂದಿರಾ ಆವಾಜ ಯೋಜನೆ, ಮನೆಯಲ್ಲಿ ಫಲಾನುಭವುಗಳಿಗೆ ಆಯ್ಕೆಯಾದ ಮನೆಗಳಲ್ಲಿ 2012-13ನೇ ಸಾಲಿನಲ್ಲಿ ಆಯ್ಕೆಯಾದ ಹಲವಾರು ಫಲಾನುಭವಿಗಳಿಗೆ ಈಗಾಗಲೇ ಮನೆ ಕಟ್ಟಲು ಅನುಮತಿ ಪತ್ರ ಕೊಟ್ಟಿದ್ದು ತಮಗೆ ಯಾರು ಹಣ ಕೊಟ್ಟಿರುವರೋ ಅಂಥವರಿಗೆ ಮಾತ್ರ ಅನುಮತಿ ಪತ್ರ (ವರ್ಕ ಆರ್ಡರ) ಕೊಟ್ಟು ಮನೆ ಕಟ್ಟಲು ಅವಕಾಶ ಮಾಡಿ ಮೊದಲನೆ ಹಂತ ಬಿಲ್ ಸಹ ಮಾಡಿರುತ್ತಾರೆ. ಇನ್ನುಳಿದ ಫಲಾನುಭವಿಗಳು ವರ್ಕ ಆರ್ಡರ ಕೇಳಿದರೆ  ನಿಮ್ಮ ಮನೆಗಳು ಹಿಂದೆ 2012-13ನೇ ಸಾಲಿನಲ್ಲಿ ತೆಗೆದುಕೊಂಡಿರುವಿರಿ ಎಂದು ಹಣ ಕೊಡದವರಿಗೆ ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಮಾಲಗತ್ತಿ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು ಸೇರಿಕೊಂಡು ಫಲಾನುಭವಿಗಳಿಗೆ ಅನ್ಯಾಯ ಮಾಡುತ್ತಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಿ ಅನ್ಯಾಯಕೊಳಗಾದ ಫಲಾನುಭವಿಗಳಿಗೆ ನ್ಯಾಯ ಕೊಡಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಶನಿವಾರ, ಸೆಪ್ಟೆಂಬರ್ 13, 2025

ಬಿಸಿಯೂಟದ ಜವಾಬ್ದಾರಿಯಿಂದ ಶಿಕ್ಷಕರಿಗೆ ಬೇಡ: ಶಿವಾನಂದ ನಾಲವಾರ.


ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ. 

ಚಿತ್ತಾಪುರ: ಬಿಸಿಯೂಟ ಯೋಜನೆಯಲ್ಲಿ ಶಿಕ್ಷಕರ ಪಾಲ್ಗೊಳ್ಳುತ್ತಿರುವುದರಿಂದ ಬೋಧನೆಯಲ್ಲಿ ಏಕಾಗ್ರತೆ ಸಾಧಿಸುವಲ್ಲಿ ದುಷ್ಪರಿಣಾಮ ಬಿರುತ್ತಿದೆ ಹೀಗಾಗಿ ಬಿಸಿಯೂಟದ ಜವಾಬ್ದಾರಿಯಿಂದ ಶಿಕ್ಷಕರಿಗೆ ಬೇಡ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ ಹೇಳಿದರು.

ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಸರಕಾರಿ, ಅನುದಾನಿತ.ಪ್ರಾಥಮಿಕ, ಪದವಿಧರ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘ, ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ತಾಲೂಕ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಮೊದಲಿಗಿಂತ ಶಿಕ್ಷಕರಿಗೆ ಗೌರವ ಕಡಿಮೆ ಆಗಲು ಕಾರಣವೇನು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು. ಬಿಸಿಯೂಟದ ಜವಾಬ್ದಾರಿಯಿಂದ ಶಿಕ್ಷಕರಿಗೆ ಮುಕ್ತಿ ಹಾಡಬೇಕು, ಶಿಕ್ಷಕರಿಗೆ ಬರೀ ಪಾಠ ಮಾಡಲು ಅವಕಾಶ ಮಾಡಬೇಕು ಎಂದು ಹೇಳಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಹೀಗಾಗಿ ಅವರಿಗೆ ಶಿಕ್ಷಣ ಇಲಾಖೆ ಅಭಾರಿಯಿದೆ ಎಂದರು.

ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಮಾತನಾಡಿ ದೇಶ ಕಟ್ಟುವ ವಿದ್ಯಾರ್ಥಿಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಶಿಕ್ಷಕರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ಶಿಕ್ಷಕರ ತಮ್ಮ ಮನಃಪರಿವರ್ತನೆ ಮಾಡಿಕೊಂಡಾಗ ಮಾತ್ರ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಲು ಸಾಧ್ಯ ಎಂದರು. ಶಿಕ್ಷಕರ ದಿನಾಚರಣೆಗೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಆದರ್ಶ ವಿದ್ಯಾರ್ಥಿಗಳನ್ನು ತಯ್ಯಾರಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಪಿಎಲ್‌'ಡಿ ಬ್ಯಾಂಕ್‌ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ ಸಾವಿತ್ರಿ ಬಾಯಿ ಫುಲೆ ರವರ ಬಗ್ಗೆ ಮಾತನಾಡುತ್ತಾ ಶಿಲ್ಪಿಗಳು ಹೇಗೆ ಕಲ್ಲನ್ನು ಕಟಿದು ತಿದ್ದಿ ತೀಡಿ ಮೂರ್ತಿ ಮಾಡುತ್ತಾನೆ ಹಾಗೇ ಶಿಕ್ಷಕರು ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಯನ್ನು ತಿದ್ದಿ ತೀಡಿ ವಿದ್ಯಾ ಬುದ್ಧಿ ಕಲಿಸಿ ಉತ್ತಮ ಪ್ರಜೆಗಳಾಗಿ ಮಾಡುತ್ತಾನೆ ಇವರ ಕಾರ್ಯ ಮೆಚ್ಚುವಂತದು ಎಂದರು.

ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್‌, ಪದವಿಧರ ಶಿಕ್ಷಕರ ಸಂಘದ ಅಧ್ಯಕ್ಷ ಸಂಗಣ್ಣಗೌಡ ಎಸ್‌.ಎಂ ಮಾತನಾಡಿದರು. ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ನಡೆಯಿತು.
ಮುಖ್ಯ ಅತಿಥಿಗಳಾಗಿ ಸರ್ಕಾರಿ ಅರೆ ಸರ್ಕಾರಿ ಪ.ಜಾ./ಪ.ಪಂ. ನೌಕರರ ಸಂಘದ ಅಧ್ಯಕ್ಷ ಅರುಣಕುಮಾರ ಎಸ್. ಚೆಂಚನಸೂರ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶರಣಪ್ಪ ಮಂಠಾಳೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭೀಮರೆಡ್ಡಿ ಮಕಾಸಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ, ಕಾರ್ಯದರ್ಶಿ ಹೀರಾಲಾಲ ರಾಠೋಡ, ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಚಂದ್ರಾಮ ಅಮ್ಮನಗಡೆ, ಬಡ್ತಿ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ರವೀಂದ್ರ ರೆಡ್ಡಿ ಎನ್. ಶಿಕಾರಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದೇವಿಂದ್ರ ರೆಡ್ಡಿ ದುಗನೂರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಪ್ಪ ಗುರುಮಿಠಕಲ್‌, ಅನುದಾನಿತ ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಸಂತೋಷ ಕೋಮಟೆ, ಅಬ್ದುಲ್ ಸಲೀಂ ಪ್ಯಾರೆ, ಅಂಬಣ್ಣ ಘಂಟಿ, ರಮೇಶ ಬಟಗೇರಿ, ಅಪ್ಪಯ್ಯ ಎಸ್. ಹಿರೇಮಠ, ವೆಂಕಟೇಶ ಕೆ, ಬಸವರಾಜ ಹೊಸಮನಿ, ಮಲ್ಲಣ್ಣ ತಳವಾರ, ಜಗದೇವರೆಡ್ಡಿ ಪಾಟೀಲ, ಶರಣು ಡೋಣಗಾಂವ ವೇದಿಕೆಯಲ್ಲಿದ್ದರು.

ನಿವೃತ್ತ ನೌಕರರ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ರೋಣದ್, ವಿನೋದ ಗೌಳಿ, ಆದಪ್ಪ ಬಗಲಿ, ಗಂಗಾಧರ್, ತಮ್ಮನ್ನಾ ಕೌಸರ್, ಸುಭಾಶ್ಚಂದ್ರ, ಸಾಬಣ್ಣ, ಗುರುಬಸಪ್ಪ, ದೇವಪ್ಪ ನಂದೂರಕರ್, ಮಲ್ಲಣ್ಣ ಮಾಸ್ಟ‌ರ್, ಬಿ.ಆರ್.ಪಿ, ಸಿ.ಆರ್.ಪಿ ಸೇರಿದಂತೆ ಇತರರು ಇದ್ದರು

ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿ ಡಾ.ಸರ್ವಪಲ್ಲಿ ರಾಧಾಕೃಷ್ಣ ಮತ್ತು ಸಾವಿತ್ರಿಬಾಯಿ ಫುಲೆ ರವರ ಆದರ್ಶಗಳು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದರು. ಶಿವಲೀಲಾ ಕಲಗುರ್ಕಿ ಪ್ರಾರ್ಥಿಸಿದರು, ಬಿಆ‌ರ್'ಸಿ ಮಲ್ಲಿಕಾರ್ಜುನ ಸೇಡಂ ಸ್ವಾಗತಿಸಿದರು, ಶರಣಪ್ಪ ಅಬ್ಬಿಗೇರಿ ನಿರೂಪಿಸಿದರು.

ಸೋಮವಾರ, ಸೆಪ್ಟೆಂಬರ್ 8, 2025

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ 

ಚಿತ್ತಾಪುರ: ಪಟ್ಟಣದ ನಾಗಾವಿ ಎಜುಕೇಷನ್ ಹಬ್‌ ಪ್ರದೇಶದಲ್ಲಿ ನಿರ್ಮಿಸಲಾದ 1000 ಜಿ+1 ಮನೆಗಳ ಹಂಚಿಕೆಯು ಮಂಗಳವಾರ ನಡೆಯಬೇಕಿದ್ದ ಪ್ರಕ್ರಿಯೆ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕೊಳಚೆ ನಿರ್ಮೂಲನೆ ಮಂಡಳಿಯ ಎಇಇ ಶ್ರೀಧ‌ರ್ ಸಾರವಾಡ ತಿಳಿಸಿದ್ದಾರೆ.

ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ದಿನಾಂಕ 9 ಸೆಪ್ಟೆಂಬರ್ ಮಂಗಳವಾರ ಮಧ್ಯಾಹ್ನ 1ಕ್ಕೆ ನಡೆಯಲಿರುವ ಸಮಾರಂಭ ರದ್ದಾಗಿದ್ದು ಜಿಲ್ಲಾ ಅಧಿಕಾರಿಗಳ ಅನುಮತಿ ಮೆರೆಗೆ ಮುಂದೂಡಲಾಗಿದೆ ದಿನಾಂಕ 12 ಸೆಪ್ಟೆಂಬರ್ ರಂದು  ಫಲಾನುಭವಿಗಳಿಗೆ ಮನೆಗಳ ಅಂಕಿ ಸಂಖ್ಯೆಗಳನ್ನು ನೀಡುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿ ಇಲಾಖೆ ಅಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್, ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ, ಉಪಾಧ್ಯಕ್ಷರು, ಸರ್ವ ಸದಸ್ಯರು ರಾಜಕೀಯ ಧುರೀಣರು ಸಹಭಾಗಿತ್ವದಲ್ಲಿ ಈ ಸಮಾರಂಭನಡೆಯಲಿದೆ. ವಸತಿ ಪಡೆದುಕೊಳ್ಳುವ ಪಟ್ಟಣದ ಫಲಾನುಭವಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಶುಕ್ರವಾರ, ಜುಲೈ 4, 2025

ಸರ್ಕಾರದ ಕಛೇರಿಗಳು ಜನಸ್ನೇಹಿಯಾಗಲಿ: ಪ್ರಿಯಾಂಕ್ ಖರ್ಗೆ.


ಸರ್ಕಾರದ ಕಛೇರಿಗಳು ಜನಸ್ನೇಹಿಯಾಗಲಿ: ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಒಳ್ಳೆಯ ಆಡಳಿತ ಜನರಿಗೆ ಕೊಡಬೇಕಾದರೆ ಸರ್ಕಾರದ ಕಛೇರಿಗಳು ಜನಸ್ನೇಹಿ ಆಗಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಪಟ್ಟಣದಲ್ಲಿ 18.41 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಜಾಸೌಧ (ಮಿನಿ ವಿಧಾನಸೌಧ) ಉದ್ಘಾಟಿಸಿ ಮಾತನಾಡಿದ ಅವರು ಈ‌ ಹಿಂದೆ ಮಿನಿ ವಿಧಾನಸೌಧ ಎಂದು ಕರೆಯುತ್ತಿದ್ದ ಕಟ್ಟಡಗಳಿಗೆ ಪ್ರಜಾಸೌಧ ಎಂದು ಹೆಸರಿಸಲಾಗುತ್ತಿದೆ ಕಾರಣ ಸರ್ಕಾರದ ಆಡಳಿತ ಜನರಿಗೆ ಹತ್ತಿರವಾಗಬೇಕು ಸರ್ಕಾರ ಜನರಿಗೆ ಸೇರಿದ್ದು ಅವರ ಕೆಲಸಗಳು ನಿರಂತರವಾಗಿ ನಡೆಯಬೇಕು ಎನ್ನುವ ಉದ್ದೇಶವಾಗಿದೆ ಎಂದರು.

ಮುಂದಿನ ಮೂರು ವಾರದಲ್ಲಿ ಸಮೃದ್ಧಿ ಯೋಜನೆಯಡಿಯಲ್ಲಿ 150 ಕೋಟಿ ರೂಪಾಯಿ ಅನುದಾನವನ್ನು ಮತಕ್ಷೇತ್ರಕ್ಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಜೊತೆಗೆ ಜುಲೈ ಅಂತ್ಯದ ಒಳಗೆ ಅಥವಾ ಅಗಸ್ಟ್ ಮೊದಲ ವಾರದಲ್ಲಿ ಗ್ರಾಮೀಣ ಮಟ್ಟದ ಅಕ್ರಮ ಜಾಗಗಳನ್ನು ಸಕ್ರಮ ಮಾಡಿ ಇ ಸ್ವತ್ತು ದಾಖಲೆ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.


 ಕಲ್ಯಾಣ ಕರ್ನಾಟಕ ಭಾಗಕ್ಕೆ ಆರ್ಟಿಕಲ್ 371(ಜೆ) ಜಾರಿಗೆ ಬಂದ ನಂತರ ಈ ಭಾಗದ ಅಭಿವೃದ್ದಿಗೆ ಸಹಕಾರಿಯಾಗಿದೆ ಪ್ರತಿವರ್ಷ5000 ಕೋಟಿ ರೂಪಾಯಿ ಅನುದಾನ ಮಂಡಳಿಗೆ ಬರುತ್ತಿದೆ.ಕಳೆದ ಒಂದು ದಶಕದಲ್ಲಿ 30,000 ಕಾಮಗಾರಿಗಳು ನಡೆದಿವೆ. 6,795 ಮೆಡಿಕಲ್ ಹಾಗೂ 22,219 ಇಂಜಿನೀಯರಿಂಗ್ ಸೀಟುಗಳು ಆರ್ಟಿಕಲ್ 371(ಜೆ) ಅಡಿಯಲ್ಲಿ ದೊರಕಿದರೆ, ಇದೂವರೆಗೆ 1.10 ಲಕ್ಷ ಜನರಿಗೆ ನೌಕರಿ ಹಾಗೂ 37,600 ನೌಕರರಿಗೆ ಪ್ರಮೋಷನ್ ಸಿಕ್ಕಿದೆ ಎಂದರು.

ಮನ್ ಕೀ ಬಾತ್ ನಲ್ಲಿ‌ ಮಾತನಾಡಿದ ಪ್ರಧಾನಿಗಳು ಕಲಬುರಗಿ ರೊಟ್ಟಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ
ಮಹಿಳೆಯರಿಗೆ ಸ್ವಾವಲಂಬಿ ಜೀವನದ‌ ಬಗ್ಗೆ ಕೊಂಡಾಡಿದ್ದಾರೆ. ಆದರೆ ಅನುದಾನ ಬಿಡುಗಡೆ ಮಾಡಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು ಎಂದ ಖರ್ಗೆ, ನಮ್ಮ ಕೆಲಸಗಳ ಬಿಜೆಪಿಯ ಸ್ಥಳೀಯ ನಾಯಕರು ಹೊಗಳದೆ ಟೀಕಿಸುತ್ತಿದ್ದಾರೆ. ಇತ್ತೀಚಿಗೆ ಬಿಜೆಪಿಯ ನಾಯಕರು ಪದೇ ಪದೇ ಕಲಬುರಗಿಗೆ ಬರುತ್ತಿದ್ದಾರೆ ಕಾರಣ ನನ್ನ ಬಗ್ಗೆ ವೈಯಕ್ತಿಕ‌ ಟೀಕೆ ಮಾಡಲು ಬರುತ್ತಿದ್ದಾರೆ. 

ವಿಜಯೇಂದ್ರ ಸ್ಥಳೀಯ ಬಿಜೆಪಿ ನಾಯಕರನ್ನು‌ ನಂಬಿಕೊಂಡು ರಾಜಕೀಯ ಮಾಡಲು ಆಗುವುದಿಲ್ಲ. ಅದನ್ನು‌ ನಾನು ಅವರಿಗೆ ನೇರವಾಗಿ ಹೇಳಿದ್ದೇನೆ.‌ ಇಲ್ಲಿನ ಒಬ್ಬ ವ್ಯಕ್ತಿಯನ್ನು‌ ನಂಬಿ ಅವರು ಬಂದಿದ್ದರು. ಈಗ ಅವನು ಎಲ್ಲಿದ್ದಾನೋ ಗೊತ್ತಿಲ್ಲ. ಹೆಣದ ಮೇಲೆ ಬಿಜೆಪಿಯವರು ರಾಜಕೀಯ ಮಾಡುತ್ತಾರೆ. ಬೀದರ್ ನಲ್ಲಿ ಯುವಕನೋರ್ವನ ಸಾವಿನ ವಿಚಾರದಲ್ಲಿ ರಾಜಕೀಯ ಮಾಡಿದ್ದರು. ಮಂಗಳೂರು ಹಾಗೂ ಕರಾವಳಿ ಭಾಗವನ್ನು ಪ್ರಯೋಗ ಶಾಲೆ ಮಾಡಿದಂತೆ ನಮ್ಮ ಭಾಗದಲ್ಲಿ ಮಾಡಲು ಸಾಧ್ಯವಿಲ್ಲ.‌ಇದು ಸರ್ವಜನಾಂಗದ ಶಾಂತಿಯ ತೋಟ. ಇಲ್ಲಿ ಬಿಜೆಪಿಯವರ ಯಾವ ಪ್ರಯೋಗ ನಡೆಯುವುದಿಲ್ಲ. ವಾಡಿಯಲ್ಲಿ ನಡೆದ ಒಂದು ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ‌ ಜಗಳವಾದರೆ ವಿರೋಧಪಕ್ಷದ ನಾಯಕರು ಬರುತ್ತಾರೆ ಎಂದರೆ ಅವರ ಭೌದ್ದಿಕ ದಿವಾಳಿತನ ತೋರಿಸುತ್ತದೆ ಎಂದರು.

ಬಿಜೆಪಿ ಹಾಳಾಗಲು ರವಿಕುಮಾರ್ ಕಾರಣ ಅವರ ಕಂಪನಿಗೆ ಸಂವಿಧಾನದಲ್ಲಿ ನಂಬಿಕೆಯ ಇಲ್ಲ‌ ಮನುಸ್ಮೃತಿಯ ಮೇಲೆ ನಂಬಿಕೆ ಇದೆ. ಮನುಸ್ಕೃತಿಯನ್ನು ನಿಮ್ಮ ಮನೆಯಲ್ಲಿ ಜಾರಿಗೆ ತನ್ನಿ ಎಂದು ನಾನು ಅವರಿಗೆ ಒಂದು ಸವಾಲ್ ಹಾಕುತ್ತೇನೆ. ಇದು ಸಾಧ್ಯನಾ? ಧರ್ಮದ‌ ಹೆಸರಲ್ಲಿ ಬಡವರ ಮಕ್ಕಳನ್ನು ದಾರಿ ತಪ್ಪಿಸುವ ಬಿಜೆಪಿ ನಾಯಕರು, ತಮ್ಮ ಮಕ್ಕಳನ್ನ ಧರ್ಮದ, ಗೋ ರಕ್ಷಣೆಗೆ ಕಳಿಸಿದ್ದಾರೆ? ನಿಮ್ಮ ಮಕ್ಕಳಿಗೆ ಬುದ್ದ, ಬಸವ, ಅಂಬೇಡ್ಕರ್, ನಾರಾಯಣಗುರು,‌ಕುವೆಂಪು ಅವರ ಆದರ್ಶದ ಬಗ್ಗೆ ತಿಳಿ ಹೇಳಿ ಎಂದು ಪೋಷಕರಿಗೆ ಮನವಿ ಮಾಡಿದರು.

ಮುಂದಿನ ಮೂರು ವರ್ಷದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಿಸಲಾಗಿದೆ. ಕಲಬುರಗಿ ಹಾಗೂ ಚಿತ್ತಾಪುರ ಮತ್ತು ವಾಡಿ ಪಟ್ಟಣಗಳ ಅಭಿವೃದ್ದಿಗೆ ಖಾಸಗಿ ಸಂಸ್ಥೆಯೊಂದಿಗೆ ಮಾತುಕತೆ ನಡದಿದೆ. ಇದಕ್ಕೆ ಸಂಸದರ ಅವರ ಆಶೀರ್ವಾದ ಬೇಕಾಗುತ್ತದೆ. ವಾಡಿ ಹಾಗೂ ಚಿತ್ತಾಪುರ‌ ಅಭಿವೃದ್ದಿಗೆ ತಲಾ‌100 ಕೋಟಿ‌ ಅನುದಾನ ಬಿಡುಗಡೆ ಮಾಡುವಂತೆ ವೇದಿಕೆಯ ಮೇಲಿದ್ದ ಅದಾನಿ ಸಿಮೆಂಟ್ಸ್ ಕಂಪನಿಯ ಅಧಿಕಾರಿಗಳಿಗೆ‌ ಮನವಿ ಮಾಡಿದರು.

 ಜಿಲ್ಲಾಧಿಕಾರಿ ಬಗ್ಗೆ ಎಂ‌ಎಲ್ ಸಿ ರವಿಕುಮಾರ್ ಏನೇನೋ ಮಾತನಾಡಿದ್ದರು. ಜಿಲ್ಲಾಧಿಕಾರಿಯವರ ಒಂದೊಂದು‌ ಕಣ್ಣೀರ ಹನಿ ಅವನ‌ ಒಂದೊಂದು ವರ್ಷ ಆಯಸ್ಸು ಕಮ್ಮಿ ಆಗುತ್ತದೆ. ಈಗ ಮತ್ತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಸಿಎಸ್) ಬಗ್ಗೆ ಮಾತನಾಡಿದ್ದಾನೆ. ಅವನು ಕುಡಿದು ಮಾತನಾಡುತ್ತಾನೋ ಏನೋ? ಹೀಗೆ ಮಾತನಾಡುವವನು ತಾನು ಹುಟ್ಟಿರುವ ಜಾತಿಗೂ ಕೂಡಾ ಅವಮಾನ. ತಕ್ಷಣ ಅವನು ರಾಜೀನಾಮೆ‌‌ ಕೊಡಬೇಕು ಎಂದು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು.

- ತಿಪ್ಪಣ್ಣಪ್ಪ ಕಮಕನೂರ.
ವಿಧಾನ ಪರಿಷತ್ತ ಸದಸ್ಯ ಕಲಬುರಗಿ.
====================================
 ಸಚಿವ ಪ್ರಿಯಾಂಕ್ ಖರ್ಗೆ ರವರ ಸೇವೆ ಈ ಕ್ಷೇತ್ರಕ್ಕೆ ಸೀಮಿತವಾಗಿದೆ ಜಿಲ್ಲೆಯ ಪ್ರತಿ ತಾಲ್ಲೂಕಿಗೂ ವ್ಯಾಪಿಸಿದೆ ಅದರಲ್ಲೂ ಅಫಜಲಪೂರ ಪಟ್ಟಣಕ್ಕೆ 120 ಕೋಟಿ ರೂಪಾಯಿ ವೆಚ್ಚದ‌ ಕುಡಿಯುವ ನೀರಿನ ಯೋಜನೆ ಮಂಜೂರಾತಿಗಾಗಿ ಸಚಿವರ ಕೊಡುಗೆ ಬಹಳಷ್ಟಿದೆ ಎಂದರು.

- ಎಂ ವೈ ಪಾಟೀಲ್
ಶಾಸಕರು, ಅಫಜಲಪೂರ.

ಇದೇ ಸಂದರ್ಭದಲ್ಲಿ ಸಚಿವರು ಹಾಗೂ ಗಣ್ಯರು 517 ಫಲಾನುಭವಿಗಳಿಗೆ ಸೌಲಭ್ಯ ಪತ್ರಗಳನ್ನು ನೀಡಲಾಯಿತು.

ವೇದಿಕೆ ಮೇಲೆ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಅಫಜಲಪುರ ಶಾಸಕ ಎಂ ವೈ ಪಾಟೀಲ್, ಅಂಬಿಗರ ಚೌಡಯ್ಯ ನಿಗಮ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ವಿಧಾನ ಪರಿಷತ್ ಶಾಸಕರಾದ ಜಗದೇವ ಗುತ್ತೆದಾರ್, ರಮೇಶ ಮರಗೋಳ, ನಾಗರೆಡ್ಡಿ ಪಾಟೀಲ್, ಭೀಮಣ್ಣ ಸಾಲಿ, ಪುರಸಭೆ ಅಧ್ಯಕ್ಷ ಶ್ರೀಮತಿ ಅನ್ನಪೂರ್ಣ ಕಲ್ಲಕ್, ಶಿವಾನಂದ ಪಾಟೀಲ್ ಶ್ರೀನಿವಾಸ ಸಾಗರ, ಅಧಿಕಾರಿಗಳಾದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೊರು ಶ್ರೀನಿವಾಸುಲು, ಡಿವಾಯ್ಎಸ್ಪಿ ಶಂಕರಗೌಡ ಪಾಟೀಲ್, ಗ್ರೇಡ್-2 ತಹಸೀಲ್ದಾರ್ ರಾಜಕುಮಾರ್ ಮರತೂರ, ಶಹಾಬಾದ ತಹಸೀಲ್ದಾರ್ ಜಗದೀಶ್, ಸೇಡಂ ತಹಸೀಲ್ದಾರ್ ಶ್ರೀಯಾಂಕ್ ಧನುಶ್ರೀ, ಚಿಂಚೋಳಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ಬಿಇಓ ಶಶಿಧರ ಬಿರಾದಾರ್, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ್ ಗುರಿಕಾರ್, ಕೃಷಿ ಇಲಾಖೆ ಅಧಿಕಾರಿ ಸಂಜೀವಕುಮಾರ್ ಮಾನಕರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚೇತನ್ ಗುರಿಕಾರ್, ಸಿಡಿಪಿಓ ಆರತಿ ತುಪ್ಪದ್, ಬಿಸಿಎಂ ಅಧಿಕಾರಿ ಸುನಿತಾ, ತೋಟಗಾರಿಕೆ ಇಲಾಖೆ ಅಧಿಕಾರಿ ಶಂಕರಗೌಡ ಪಾಟೀಲ, ತಾಪಂ ಇಓ ಆಕ್ರಂ ಪಾಷಾ, ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್, ಗ್ರಾಮ ಆಡಳಿತ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಸುನೀಲ್ ಚವ್ಹಾಣ, ಬಸ್ ಘಟಕ ಅಧಿಕಾರಿ ಗೋಲಾಳಪ್ಪ ಬೀರಾದಾರ್, ಮುಖಂಡರಾದ ಅಜೀಜ್ ಸೇಟ್, ಶಿವರುದ್ರಪ್ಪ ಭೀಣ್ಣಿ, ಜಗಣ್ಣಗೌಡ ರಾಮತೀರ್ಥ, ಜಯಪ್ರಕಾಶ್‌ ಕಮಕನೂರ, ಸಿದ್ದುಗೌಡ ಅಫಜಲಪುರ, ಬಸವರಾಜ ಬಳೂಂಡಗಿ, ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಮುಕ್ತಾರ್ ಪಟೇಲ್, ಶೀಲಾ ಕಾಶಿ, ಮಹಿಮೂದ್ ಸಾಹೇಬ್, ವೀರಣ್ಣಗೌಡ ಪರಸರೆಡ್ಡಿ, ಸುನೀಲ್ ದೊಡ್ಡಮನಿ, ಮನ್ಸೂ‌ರ್ ಪಟೇಲ್, ನಾಗಯ್ಯ ಗುತ್ತೇದಾರ, ಶರಣಪ್ಪ ನಾಟೀಕಾರ, ಮಲ್ಲಪ್ಪ ಹೊಸಮನಿ, ಜಫಾರುಲ್ ಹಸನ್, ದೇವು ಯಾಬಾಳ, ಸಂಜಯ ಬುಳಕರ್‌ ಸೇರಿದಂತೆ ಮುಖಂಡರು ಮತ್ತು ತಾಲೂಕಿನ ಇತರೆ ಇಲಾಖೆಗಳ ಸಿಬ್ಬಂದಿಗಳು ಇದ್ದರು.

ಸೇಡಂ ಎಸಿ ಪ್ರಭು ರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಡಾ.ಶಂಕರ ಕಣ್ಣಿ ಸ್ವಾಗತಿಸಿದರು, ಸಂತೋಷ ಶಿರನಾಳ ನಿರೂಪಿಸಿದರು.

ಬುಧವಾರ, ಜೂನ್ 25, 2025

ಪಿಂಚಣಿ ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಲು ಒತ್ತಾಯ.


ಪಿಂಚಣಿ ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಲು ಒತ್ತಾಯ.

ಚಿತ್ತಾಪುರ: ನಿವೃತ್ತಿ ಸರ್ಕಾರಿ ನೌಕರರಿಗೆ ಪಿಂಚಣಿ
ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರೇವಣಸಿದ್ದಪ್ಪ ರೋಣದ್ ನೇತೃತ್ವದಲ್ಲಿ ಬುಧವಾರ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

ನಿವೃತ್ತ ಹೊಂದಿದ ಸರಕಾರಿ ನೌಕರರು ಆರ್ಥಿಕ ಸೌಲಭ್ಯದಿಂದ ವಂಚಿತರಾಗದಿರಲಿ ಎಂದು ಕೇಂದ್ರ ಸರ್ಕಾರವು 2004 ರಲ್ಲಿ ಹೊಸ ಪಿಂಚಣಿಯನ್ನು ಜಾರಿ ತರಲಾಗಿದೆ ಹಾಗೂ ಎಲ್ಲಾ ರಾಜ್ಯಗಳು ಸಹ ಕೇಂದ್ರ ಸರ್ಕಾರದ ಮಾದರಿಯಲ್ಲಿ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸಾಕಷ್ಟು ಹೋರಾಟವೆ ನಡೆದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಹೊಸ ವೇತನ ಶ್ರೇಣಿ ಪರಿಷ್ಕರಿಸಲು 8ನೇ ವೇತನ ಆಯೋಗ ರಚನೆ ಮಾಡಲಾಗಿದೆ. ಆಯೋಗದ ವರದಿಯು ಪ್ರಗತಿ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ ಕೇಂದ್ರ ಸರ್ಕಾರವು ಮಾರ್ಚ್ 25 ರಂದು ಲೋಕಸಭೆಯಲ್ಲಿ ಆರ್ಥಿಕ ಬಿಲ್ಲು ಮಂಡಿಸಿ 1 ಏಪ್ರಿಲ್ 2026 ಕ್ಕೆ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಸಾಧ್ಯವಿಲ್ಲವೆಂಬ ನಿರ್ಣಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಇದರಿಂದ ನಿವೃತ್ತ ಸರಕಾರಿ ನೌಕರ ಪಿಂಚಣಿದಾರರಿಗೆ ಮತ್ತು ಕುಟುಂಬ ಪಿಂಚಣಿದಾರರಿಗೆ 8ನೇ ವೇತನ ಆಯೋಗದಲ್ಲಿ ಪರಿಷ್ಕರಿಸಲು ಸಾಧ್ಯವಾಗುವುದಿಲ್ಲವೆಂದು ತಿಳಿಸಿದ್ದಾರೆ. ಇದರಿಂದ ನಿವೃತ್ತ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರು ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿ ನಾಲ್ಕು ಬಲವಾದ ಸಂಘಟನೆಗಳು ಹೋರಾಟಕ್ಕಿಳಿದಿವೆ ನಮ್ಮ ಸಂಘವು ಸಹ ಅವರಿಗೆ ಬೆಂಬಲ ನೀಡುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ವಿಜಯಕುಮಾ‌ರ್ ಲೊಡ್ಡೆನೋರ, ಉಪಾಧ್ಯಕ್ಷ ಕಿಶನ್ ರಾಠೋಡ, ಮಹಾದೇವಪ್ಪ ಉಪ್ಪಾರ, ಖಜಾಂಚಿ ಮಲ್ಲಣ್ಣ ಮುಡಬೂಳ, ಪ್ರಧಾನ ಕಾರ್ಯದರ್ಶಿ ಶಶೀಧರ ಪಾಟೀಲ, ಸಹ ಕಾರ್ಯದರ್ಶಿ ಸುಭಾಷ್ ಮೇಗಂಜಿ, ಸಂಘಟನಾ ಕಾರ್ಯದರ್ಶಿಗಳಾದ ಮೋನಯ್ಯ ಪಂಚಾಳ, ಬಾಬು ಕರದಾಳ, ಶಮೀಮ್, ಕಾನೂನು ಸಲಹೆಗಾರ ಮೋತಿಲಾಲ್‌ ಚವ್ಹಾಣ, ಸಾಂಸ್ಕೃತಿಕ ಕಾರ್ಯದರ್ಶಿ ದೇವಪ್ಪ ನಂದೂರಕರ್, ಕ್ರೀಡಾ ಕಾರ್ಯದರ್ಶಿ ಶಿವನಾಗಪ್ಪ ಮುತ್ತಲಗಡ್ಡಿ, ಜಂಟಿ ಕಾರ್ಯದರ್ಶಿ ಹಾಜಪ್ಪ ಬಿಳಾರ್, ನಿರ್ದೇಶಕರಾದ ಬಸವರಾಜ ಕಲಬುರಗಿ, ತುಕಾರಾಮ ನಾಯಕ, ಶ್ರೀಮತಿ ಸರಳಬಾಯಿ, ಶಾಂತಬಾಯಿ, ಶಿವಲಿಂಗಪ್ಪ ದೊಡ್ಡಮನಿ, ಮಲ್ಲೇಶಪ್ಪ ದಂಡೋತಿ, ಸಿದ್ದಯ್ಯ ಸ್ಥಾವರಮಠ, ಲಿಂಗಣ್ಣ ಮಲಕನ್, ಮುನಿಯಪ್ಪ ಸೇರಿದಂತೆ ಇತರರು ಇದ್ದರು.

ಸೋಮವಾರ, ಜೂನ್ 16, 2025

ದೇವರಲ್ಲಿ ಶ್ರದ್ಧೆ, ಭಕ್ತಿ ಇರಲಿ: ಮರೆಪ್ಪ ಮುತ್ಯಾ.

       ದೇವರಲ್ಲಿ ಶ್ರದ್ಧೆ, ಭಕ್ತಿ ಇರಲಿ: ಮರೆಪ್ಪ ಮುತ್ಯಾ.

ಚಿತ್ತಾಪುರ: ಪ್ರತಿಯೊಬ್ಬರೂ ದೇವರಲ್ಲಿ ಶ್ರದ್ಧೆ, ಭಕ್ತಿ ಇಟ್ಟುಕೊಳ್ಳಬೇಕು ಎಂದು ಹೂಡಾ(ಬಿ) ಗ್ರಾಮದ ಹಯ್ಯಾಳಸಿದ್ದೇಶ್ವರ ದೇವಸ್ಥಾನದ ಶ್ರೀಗಳಾದ ಮರೆಪ್ಪ ಮುತ್ಯಾ ಹೇಳಿದರು.

ತಾಲೂಕಿನ ಮರಗೋಳ ಗ್ರಾಮದಲ್ಲಿ ನಡೆದ ಶ್ರೀ ಬೀರಲಿಂಗೇಶ್ವರ ಹಾಗೂ ಶ್ರೀ ಮಾಳಿಂಗೇಶ್ವರರ ನೂತನ ಮಂದಿರ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮದಲ್ಲಿ ಹಾಲುಮತದ ಜನರು ಹಾಗೂ ಊರಿನವರ ಸಹಕಾರದಿಂದ ಕುರಿದೊಡ್ಡಿ ಇದ್ದ ಸ್ಥಳದಲ್ಲಿ ಇಂತಹ ಭವ್ಯ ಮಂದಿರ ನಿರ್ಮಾಣ ಮಾಡಿದ್ದು ಹೆಮ್ಮೆಯ ವಿಷಯ.ಜೀವನದಲ್ಲಿ ಏನನ್ನೂ ಸಾಧಿಸುವುದು ಸಾಧ್ಯವಿಲ್ಲವೆಂದು ಕೈಕಟ್ಟಿ ಕುಳಿತುಕೊಂಡರೆ, ಸಾಧನೆ ಮಾಡುವುದು ಅಸಾಧ್ಯ. ಗುರುವಿನ ಕೆಲಸದಲ್ಲಿ ಪ್ರಾಮಾಣಿಕ, ಶ್ರದ್ಧೆ, ಭಕ್ತಿ ಇದ್ದರೆ ಇಂತಹ ಕಾರ್ಯ ಕೆಲಸಗಳು ಆಗಲು ಸಾಧ್ಯ. ಸಮಾಜದ ಗುರುಗಳನ್ನು ಪೂಜಿಸುವುದರ ಜೊತೆಗೆ 
ಸಮಾಜದಲ್ಲಿ ಸತ್ಕಾರ್ಯ ಮಾಡುವ ಗುಣ ಬೆಳೆಸಿಕೊಳ್ಳಬೇಕು. 

ಹಾಲುಮತ ಸಮಾಜದ ಜಿಲ್ಲಾಧ್ಯಕ್ಷ ರೇವಣಸಿದ್ದಪ್ಪ ಸಾತನೂರ ಮಾತನಾಡಿ ಈ ಗ್ರಾಮದಲ್ಲಿ ಬೀರಲಿಂಗೇಶ್ವರ ಮತ್ತು ಮಾಳಿಂಗರಾಯ ದೇವಸ್ಥಾನವನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ ಅಲ್ಲದೇ ಇಲ್ಲಿನ ಜನರ ಸೌರ್ಹಾದತೆಯನ್ನು ಎತ್ತಿ ತೋರಿಸುತ್ತದೆ ಈ ಸಮಾಜವು ಸಧೃಡವಾಗಬೇಕಾದರೆ ನಾವುಗಳು ಎಲ್ಲರೂ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ನಮ್ಮ ಸಮಾಜ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಸದೃಡರಾಗಲು ಸಾಧ್ಯವಾಗುತ್ತದೆ ಎಂದರು.
ದೇವಸ್ಥಾನದ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಕೊಂಡಂಪಳ್ಳಿ ಅಧ್ಯಕ್ಷತೆ ವಹಿಸಿದ್ದರು. ದಿಗ್ಗಾಂವದ ಕಂಚಗಾರ ಹಳ್ಳಿಯ ಶ್ರೀ ಮಲ್ಲಯ್ಯ ಮಹಾಸ್ವಾಮಿಗಳು, ಶ್ರೀ ಶರಣಯ್ಯ ಸ್ವಾಮಿ, ಬೀರಣ್ಣ ಸ್ವಾಮಿ ಕೋರವಾರ, ಹಿರಗಪ್ಪ ತಾತಾ ಸೂಗೂರ, ಮುಖಂಡರಾದ ನಾಗಣ್ಣಗೌಡ, ಬಸವರಾಜ ವಾರದ, ಶರಣಗೌಡ ಪೊಲೀಸ್ ಪಾಟೀಲ್, ಅಣ್ಣಾರಾವ ಸಣ್ಣೂರಕ‌ರ್, ಶರಣು ಸಾಹು, ಬಸವರಾಜ ಪೂಜಾರಿ ಮೊಗಲಾ, ಮಲ್ಲಿಕಾರ್ಜುನ ಪೂಜಾರಿ ಮೊಗಲಾ, ಈರಪ್ಪ ಭೋವಿ, ಯಲ್ಲಾಲಿಂಗ ಪೂಜಾರಿ, ಬೀರಪ್ಪ ಹೆಬ್ಬಾಳ, ಬೀರಪ್ಪ ಮುಗಟಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ಉತ್ತಮ ಶಿಕ್ಷಣವನ್ನು ಪಡೆದ ಹಾಗೂ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು. ಕಾಶಿರಾಯ ಕಲಾಲ್ ಸ್ವಾಗತಿಸಿದರು, ನರಸಪ್ಪ ಚಿನ್ನಾಕಟ್ಟಿ ನಿರೂಪಿಸಿದರು.

ಗುರುವಾರ, ಜೂನ್ 5, 2025

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಕರಣ್ ಗುಜ್ಜರ್.


ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಕರಣ್ ಗುಜ್ಜರ್.

ಚಿತ್ತಾಪುರ: ಜೀವ ಸಂಕುಲದ ಉಳುವಿಗಾಗಿ ಪರಿಸರದಲ್ಲಿನ ಹಾಗೂ ನಮ್ಮ ಸುತ್ತಲಿನ ಮರ-ಗಿಡಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಕರಣ್ ಗುಜ್ಜರ್ ಹೇಳಿದರು.

ಪಟ್ಟಣದ ಶಿಶುವಿಹಾರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪ್ರಾದೇಶಿಕ ಅರಣ್ಯ ವಲಯ ಮತ್ತು ಶಿಶುವಿಹಾರ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ "ವಿಶ್ವ ಪರಿಸರ ದಿನ" ಕಾನೂನು ಅರಿವು ಕಾರ್ಯಕ್ರಮ ನಿಮಿತ್ಯ ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಹಿಂದಿನ ಕಾಲದ ಜನರು ಗಿಡ-ಮರಗಳನ್ನು ಹೆಚ್ಚೆಚ್ಚು ಸಂರಕ್ಷಿಸುತ್ತಿದ್ದರು ಆದ್ರೆ ಇಂದಿನ ಕಾಲದಲ್ಲಿ ಗಿಡ-ಮರಗಳು ನಾಶ ಮಾಡುವುದು ನೋಡುತ್ತಿದ್ದೇವೆ ನಗರೀಕರಣ ಬೆಳೆದಂತೆ ಗಿಡಮರಗಳು ಸಂಖ್ಯೆ ಕಡಿಮೆ ಆಗುತ್ತಿದೆ ಮುಂದೊಂದಿನ ಆಮ್ಲಜನಕ ಬೆನ್ನಿಗೆ ಕಟ್ಟಿಕೊಂಡು ಓಡಾಡುವ ಪರಿಸ್ಥಿತಿ ಬರಬಹುದು ಹೀಗಾಗಿ ಪರಿಸರದಲ್ಲಿನ ಗಿಡಮರಗಳು ಬೆಳೆಸುವ ಮನೋಭಾವ ಕಲಿಯಬೇಕು ಪ್ರತಿದಿನ ಪರಿಸರ ದಿವಾಗಿರಲ್ಲಿ ಎಂದು ಹೇಳಿದರು.

ಶಾಲಾ ಆವರಣದಲ್ಲಿ ಕೆಲ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ನಿಮಿತ್ಯ ಸಸಿಗಳನ್ನು ವಿತರಿಸಲಾಗುತ್ತದೆ ಯಾವ ವಿದ್ಯಾರ್ಥಿ ದಿನನಿತ್ಯ ಸಸಿಗೆ ನೀರು ಹಾಕುವುದರ ಜೊತೆಗೆ ಸಂರಕ್ಷಿಸಿ ಚೆನ್ನಾಗಿ ಬೆಳೆಸುತ್ತಾರೆ ಆ ವಿದ್ಯಾರ್ಥಿಗೆ ಮುಂದಿನ ವರ್ಷ ನಮ್ಮ ಕೋರ್ಟ್ ವತಿಯಿಂದ ಪ್ರಶಸ್ತಿ ನೀಡುವುದಾಗಿ ಘೋಷಿಸಿದರು.

- ಅಭಿಷೇಕ್ ಆರ್ ಜೋಶಿ
ಸಿವಿಲ್ ನ್ಯಾಯಾಧೀಶರು ಚಿತ್ತಾಪುರ.
==================================

ಶಾಲಾ ಆವರಣದಲ್ಲಿ ವಿಧ್ಯಾರ್ಥಿಗಳು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅವಕಾಶ ಮಾಡಿಕೊಡಬೇಡಿ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬಿಳುವ ಸಾಧ್ಯತೆ ಇರುತ್ತದೆ ಇದರಿಂದ ಬಳಕೆ ಬೇಡ ಎಂದು ಕಿವಿ ಮಾತು ಹೇಳಿದರು.

- ಸಿಸ್ಟರ್ ಸಿಂಪ್ರೊಸ್
ಮುಖ್ಯಗುರುಗಳು, ಶಿಶುವಿಹಾರ ಹಿ.ಪ್ರಾ.ಶಾಲೆ ಚಿತ್ತಾಪೂರ

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿಶನ್ ಮಾಡಲಗಿ, ವಕೀಲರ ಸಂಘದ ಅಧ್ಯಕ್ಷ ನಾಗರಾಜ ಕಡಬೂರ, ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್,  ಭೆಂಥನಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಕವಿತಾ ಬಿಎಸ್, ಸಹಾಯಕ ಸರ್ಕಾರಿ ಅಭಿಯೋಜಕರಾದ ಅಂಜನಾದೇವಿ, ವಕೀಲರಾದ ಎಸ್ಎಂ ಪಾಟೀಲ್, ಎಸ್ಎಂ ನಂದೂರಕರ್, ಶಿಕ್ಷಕರಾದ ಶೆಶಪ್ಪ ಬಡಿಗೇರ್, ಸತೀಶ್, ಸುಜಾತಾ, ಮಲ್ಲಪ್ಪ, ಕಲ್ಪನಾ, ಅರುಣಕುಮಾರ, ಸೇರಿದಂತೆ ಇತರರು ಇದ್ದರು ನಿರೂಪಣೆ ಸುಮಲತಾ ನಾಡಗೌಡ ನೆರವೇರಿಸಿದರು ವಿಶ್ವನಾಥ ಟೋನಿ ಸ್ವಾಗತಿಸಿಕೊಂಡರು ವಿಶ್ವನಾಥ ಕುಂಬಾರ ವಂದಿಸಿದರು.

ಭಾನುವಾರ, ಜೂನ್ 1, 2025

ಜನ್ಮದಿನದ ಆಚರಿಸಿದ ಅಭೀಮಾನಿಗಳು.

ಜನ್ಮದಿನದ ಆಚರಿಸಿದ ಅಭೀಮಾನಿಗಳು.

ಚಿತ್ತಾಪುರ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಾಂಗ್ರೆಸ್ ಹಿರಿಯ ಮುಖಂಡರಾದ ಶಿವರುದ್ರ ಭೀಣಿ ರವರ 56ನೇ ಜನ್ಮದಿನದ ನಿಮಿತ್ಯ ಅವರ ಅಭಿಮಾನಿ ಬಳಗದ ವತಿಯಿಂದ ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿ ಸಂಭ್ರಮಿಸಿದರು.
ಈ ವೇಳೆಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಚನ್ನವೀರ ಬಿ ಕಣ್ಣಿಗಿ,ಕಾಂಗ್ರೆಸ್ ಯುವ ಘಟಕ ಮಾಜಿ ಅಧ್ಯಕ್ಷ ಸಂಜಯ ಬುಳಕರ, ಶಿಕ್ಷಕರಾದ ಸದಾಶಿವ, ರೇವಣಸಿದ್ಧಪ್ಪ ರೋಣದ, ದಿಗ್ಗಾಂವ ಗ್ರಾಪಂ ಸದಸ್ಯರಾದ ಗುರುಶಾಂತ ಭಾಗೋಡಿ, ಸುರೇಶ ಅಚ್ಚೆಲಿ, ವಿವಿಎಸ್ಎಸ್ಎನ್ ಸದಸ್ಯ ಸಿದ್ದಣ್ಣ ಸಜ್ಜನ, ಗುರುಲಿಂಗ ಬಂದಳ್ಳಿ, ಭೀಮರಾಯ ದೇವರ, ಹಣಮಂತ ಭೀಮನಹಳ್ಳಿ, ಉದಯ ಕುಮಾರ ದಿಗಾಂವ್, ಶ್ರೀಧರ ಬಡಿಗೇರ್, ಬಸಪ್ಪ ದೊಡ್ಡಮನಿ, ಸಂಜಯ ಬುಳಕರ ಸೇರಿದಂತೆ ಇತರರು ಇದ್ದರು.

ಶುಕ್ರವಾರ, ಮೇ 30, 2025

ಪೌರ ಕಾರ್ಮಿಕರ ಮುಷ್ಕರದ ಎಫೆಕ್ಟ್: ಎಲ್ಲಿ ನೋಡಿದರು ಕಸವೋ ಕಸ, ಗಬ್ಬೆದ್ದು ನಾರುತ್ತಿದೆ ನಾಗಾವಿ ನಾಡು.

ಪೌರ ಕಾರ್ಮಿಕರ ಮುಷ್ಕರದ ಎಫೆಕ್ಟ್: ಎಲ್ಲಿ ನೋಡಿದರು ಕಸವೋ ಕಸ, ಗಬ್ಬೆದ್ದು ನಾರುತ್ತಿದೆ ನಾಗಾವಿ ನಾಡು.

ಚಿತ್ತಾಪುರ: ನಾಗಾವಿ ನಾಡು ಎಂದೆ ಪ್ರಸಿದ್ಧಿ ಪಡೆದ ಚಿತ್ತಾಪುರ ಪಟ್ಟಣದಲ್ಲಿ ಪುರಸಭೆ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಪೌರಕಾರ್ಮಿಕರು ನಡೆಸ್ತಿರೋ ಮುಷ್ಕರದಿಂದ ಪಟಣವೆಲ್ಲಾ ಗಬ್ಬೆದ್ದು ನಾರುತ್ತಿದೆ. ರಸ್ತೆ ಗುಡಿಸೋರಿಲ್ಲ, ಮನೆ ಮನೆಯಲ್ಲಿ ಸಂಗ್ರಹವಾಗಿರುವ ಕಸ ಕೇಳೋರಿಲ್ಲ. ಕಟ್ಟಿರುವ ಒಳ ಚರಂಡಿಗಳು ಸರಿಪಡಿಸುವವರಿಲ್ಲ. ಸ್ವಚ್ಛತಾ ವಾಹನಕ್ಕೆ ಚಾಲಕರೇ ಇಲ್ಲದೆ ನಗರವೆಲ್ಲಾ ದುರ್ನಾತ ಬೀರುತ್ತಿದೆ.

ಪಟ್ಟಣದ ಹೃದಯ ಭಾಗ ಸೇರಿದಂತೆ ಇಡೀ ಪ್ರಮುಖ ಮುಖ್ಯ ವೃತ್ತಗಳಲ್ಲಿ ಸಮರ್ಪಕವಾಗಿ ಕಸ ವಿಲೇವಾರಿಯಾಗದೇ ಇಡೀ ಪಟ್ಟಣ ಗಬ್ಬೆದ್ದು ನಾರುತ್ತಿದೆ. ಪಟ್ಟಣದ ಸ್ವಚ್ಛತಾ ಕಾರ್ಯಕ್ಕೆ ಪಾರ್ಶ್ವವಾಯು ಹೊಡೆದಂತಾಗಿದೆ. ನಿತ್ಯ 7 ಟನ್ ವಿಲೇವಾರಿಯಾಗುತ್ತಿದ್ದ ಕಸ, ಈಗ ನಗರದಲ್ಲಿಯೇ ಬಿದ್ದಿದ್ದು, ಕಳೆದ ಮೂರು ದಿನಗಳಲ್ಲಿ 21ಕ್ಕೂ ಹೆಚ್ಚು ಟನ್ ಕಸ ಸಂಗ್ರಹವಾಗಿ ವಿಲೇವಾರಿಯಾಗದೇ ಎಲ್ಲರ ಮನೆ, ರಸ್ತೆಯಲ್ಲಿಯೇ ಕೊಳೆತು, ಇಡೀ ನಗರ ದುರ್ವಾಸನೆ ಬೀರುತ್ತಿದೆ.
ಪುರಸಭೆ ಕಾರ್ಯಲಯದ ಪೌರ ಕಾರ್ಮಿಕರು,ನೀರು ಸರಬರಾಜುಗಾರರು,ವಾಹನ ಚಾಲಕರು, ಲೋಡರ್ಸ್, ಇಲಾಖೆಯ ಖಾಯಂ ಸಿಬ್ಬಂದಿ ಮತ್ತು ಹೊರ ಗುತ್ತಿಗೆ ಸಿಬ್ಬಂದಿ ವರ್ಗ ಸೇರಿ ಒಟ್ಟು 95 ಮಂದಿ ಮುಷ್ಕರಕ್ಕೆ ಬೆಂಬಲ ನೀಡಿದ್ದರಿಂದ ತರಕಾರಿ ಮಾರುಕಟ್ಟೆ, ಒಂಟ್ ಕಮಾನ್, ಸುಪ್ರಸಿದ್ಧ  ಶ್ರೀ ನಾಗಾವಿ ದೇವಸ್ಥಾನ, ಚಿತ್ತಾವಲಿ ದರ್ಗಾ, ಬಸ್ ನಿಲ್ದಾಣ, ತಹಸೀಲ್ ಕಾರ್ಯಲಯ ಸುತ್ತ ಮುತ್ತಲು, ಮತ್ತು ಲಾಡ್ಜಿಂಗ್ ಕ್ರಾಸ್ನಾ ಪರಿಸ್ಥಿತಿ ಶೋಚನೀಯವಾಗಿದೆ.
ಹೋಟೆಲ್‌ಗಳಲ್ಲಿ ಸಂಗ್ರಹವಾಗುತ್ತಿರುವ ಭಾರೀ ಪ್ರಮಾಣದ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಕೆಲವರು ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಕಸ ವಿಲೇವಾರಿ ಮಾಡುತ್ತಿದ್ದು, ಈಗ ಎಲ್ಲೆಂದರಲ್ಲಿ ಕಸದ ರಾಶಿ ಕಾಣುತ್ತಿದೆ. ಕೊಡಲೇ ಪುರಸಭೆ ಇಲಾಖೆ ಅಥವಾ ತಾಲೂಕು ಆಡಳಿತ ಈ ಸಮಸ್ಯೆ ಬಗೆಹರಿಸುವಲ್ಲಿ ಕ್ರಮಕ್ಕೆ ಮುಂದಾಗಬೇಕು.ಇಲ್ಲವಾದಲ್ಲಿ ಚಿತ್ತಾಪೂರ ಪಟ್ಟಣ ಒಂದು ವಾರದಲ್ಲಿ ಗಬ್ಬು ನಾರುವ ಮೂಲಕ ಪಟ್ಟಣದ ಜನತೆ ಸಾಂಕ್ರಾಮಿಕ ರೋಗಗಳಿಗೆ ಬಲಿಯಾಗುವ ಪರಿಸ್ಥಿತಿ ಬಂದ್ರೂ ಬರಬಹುದಾಗಿದೆ.

"ಎಲ್ಲಾ ನಗರ ಸ್ಥಳಿಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರ ನೌಕರರೆಂದು ಪರಿಗಣಿಸಿ ಮತ್ತು ಜ್ಯೋತಿ ಸಂಜೀವಿನಿ, ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯವನ್ನು ನೀಡಬೇಕೆಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಈ ಸಮಸ್ಯೆ ಪಟ್ಟಣದಲ್ಲಿ ಆಗುತ್ತಿದೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ ಎರಡು ದಿನಗಳಲ್ಲಿ ಸಮಸ್ಯೆ ಇತ್ಯರ್ಥ ಆದ್ರೇ ಎಲ್ಲಾ ಸರಿ ಆಗುತ್ತದೆ ಎಂದರು ಒಂದು ವೇಳೆ ಆಗದಿದ್ದರೆ ಮೇಲಾಧಿಕಾರಿಗೆ ಸೂಚನೆಯಂತೆ ನಡೆಯುವುದಾಗಿ ತಿಳಿಸಿದ್ದಾರೆ".

- ಮನೋಜಕುಮಾರ ಗುರಿಕಾರ
ಪುರಸಭೆ ಮುಖ್ಯಾಧಿಕಾರಿ ಚಿತ್ತಾಪುರ.

=====================================

"ಪಟ್ಟಣದಲ್ಲಿ ಕರ್ತವ್ಯಕ್ಕೆ ಪೌರ ನೌಕರರು ಗೈರಾಗುವ ಮೂಲಕ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು. ಸಂಘದ ಬೇಡಿಕೆಗಳನ್ನು ಈಡೇರಿಸುವವರಿಗೆ  ಮುಷ್ಕರ ನಿಲ್ಲಿಸಲು ಸಾಧ್ಯವಿಲ್ಲ ಎಂದರು".

- ಸಾಬಣ್ಣ ಸಿ.ಕಾಶಿ
ತಾಲ್ಲೂಕು ಅಧ್ಯಕ್ಷರು, ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಚಿತ್ತಾಪೂರ.

ಬುಧವಾರ, ಮೇ 28, 2025

ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ: ಆನಂದ ಯರಗಲ್ ಖಂಡನೆ.

ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ: ಆನಂದ ಯರಗಲ್ ಖಂಡನೆ.
ಚಿತ್ತಾಪುರ: ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಹಾಗೂ ಜಿಲ್ಲಾ ಉುವಾರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆಯವರಿಗೆ ಮೇಲ್ಮನೆ ಬಿಜೆಪಿ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅಸಂಸದೀಯ ಪದ ಬಳಸಿ ಮಾಡಿರುವ ನಿಂದನೆಗೆ ಕಾಂಗ್ರೆಸ್ ಯುವ ಮುಖಂಡ ಆನಂದ ಯರಗಲ್ ಖಂಡಿಸಿದ್ದಾರೆ.

ಸಚಿವರ ಅಭಿವೃದ್ದಿ ಕೆಲಸ ಕಾರ್ಯಗಳು ನೋಡಿ ಸಹಿಸದ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರವರನ್ನು ನಿಂದನೆ ಮಾಡುವ ಮೂಲಕ ಹಾರಿಕೆ ಉತ್ತರ ನೀಡುತ್ತಿದ್ದಾರೆ. ನಮ್ಮ ಕ್ಷೇತ್ರದ ಜನರಿಗೆ ಕಾಂಗ್ರೆಸ್‌ ಇತಿಹಾಸ ಗೊತ್ತಿದೆ, ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿ ಕೆಲಸಗಳು ನಡೆದಿವೆ, ಬಿಜೆಪಿಯವರ ಸುಳ್ಳು ಮಾತುಗಳಿಗೆ ಜನರು ನಂಬಬೇಡಿ ಎಂದರು.

ಮಣಿಕಂಠ ರಾಠೋಡ ಕ್ಷಮೆ ಯಾಚನೆಗೆ ಮೈನಾಳಕರ್ ಆಗ್ರಹ.

ಮಣಿಕಂಠ ರಾಠೋಡ ಕ್ಷಮೆ ಯಾಚನೆಗೆ ಮೈನಾಳಕರ್ ಆಗ್ರಹ.
ಚಿತ್ತಾಪುರ: ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಲಚ್ಚಪ್ಪ ಜಮಾದಾರ ಅವರನ್ನು ಅವಾಚ್ಯವಾಗಿ ಸಂಬೋಧಿಸಿ ಅವಹೇಳನ ಮಾಡಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು ಕೋಲಿ ಸಮಾಜದ ಯುವ ಘಟಕದ ನಗರ ಅಧ್ಯಕ್ಷ ಬಸವರಾಜ ಮೈನಾಳಕರ್ ಆಗ್ರಹಿಸಿದ್ದಾರೆ.

ಸಾರ್ವಜನಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಘನತೆ ಹೊಂದಿರುವವರನ್ನು ಅವಹೇಳನ ಮಾಡಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಅಶಾಂತಿಯ ವಾತಾವರಣ ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದರು. 

ಪುರಸಭೆ ಮುಂದೆ ಪೌರ ನೌಕರರ ಮುಷ್ಕರ.

ಪುರಸಭೆ ಮುಂದೆ ಪೌರ ನೌಕರರ ಮುಷ್ಕರ.
ಚಿತ್ತಾಪುರ: ಎಲ್ಲಾ ನಗರ ಸ್ಥಳಿಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರ ನೌಕರರೆಂದು ಪರಿಗಣಿಸಿ ಹಾಗೂ ಜ್ಯೋತಿ ಸಂಜೀವಿನಿ, ಕೆ.ಜಿ.ಐ.ಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯವನ್ನು ನೀಡಬೇಕೆಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಪ್ರಯುಕ್ತ ತಾಲ್ಲೂಕು ಘಟಕ ವತಿಯಿಂದ ಮಂಗಳವಾರ ಪುರಸಭೆ ಕಚೇರಿ ಎದುರು ಪೌರಕಾರ್ಮಿಕರು ಮುಷ್ಕರ ನಡೆಸಿದ್ದಾರೆ.

ಸಂಘದ ತಾಲೂಕು ಅಧ್ಯಕ್ಷ ಸಾಬಣ್ಣ ಸಿ.ಕಾಶಿ ಮಾತನಾಡಿ, ರಾಜ್ಯಾದ್ಯಂತ ಕರ್ತವ್ಯಕ್ಕೆ ಪೌರ ನೌಕರರು ಗೈರು, ಕಸ ಸಂಗ್ರಹ ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ, ನಿರ್ವಹಣೆ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದು ಹೇಳಿದರು.

ಸಂಘದ ಬೇಡಿಕೆಗಳನ್ನು ಈಡೇರಿಸುವವರಿಗೆ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸೂಚಿಸಿದಂತೆ ಚಿತ್ತಾಪುರ ಪುರಸಭೆಗೆ ಸಂಬಂಧ ಪಟ್ಟ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದರು.

ರಾಜ್ಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ, ಕ್ಲಿನರ್ಸ್, ಸ್ಯಾನಿಟರಿ ಸುಪರವೈಸರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು, ದಿನಗೂಲಿ ಕ್ಷೇಮಾಭಿವೃದ್ಧಿ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಖಾಯಂ ಮಾಡುವುದು, ಎಲ್ಲಾ ನೌಕರರಿಗೆ ಎಸ್.ಎಫ್.ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂಬ ಬೇಡಿಕೆಗಳ ಮನವಿ ಪತ್ರವನ್ನು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅವರಿಗೆ ಹಾಗೂ ತಹಸೀಲ್ದಾ‌ರ್ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವೆಂಕಟೇಶ್ ಜೈಗುರು, ಖಜಾಂಚಿ ಕ್ರಾಂತಿದೇವಿ ಸೇರಿದಂತೆ ಪೌರ ನೌಕರರ ಉಪಸ್ಥಿತರಿದ್ದರು.

ಮಂಗಳವಾರ, ಮೇ 27, 2025

ವಿಪಕ್ಷ ಸ್ಥಾನ ರದ್ದತಿಗೆ ಆಗ್ರಹಿಸಿ ಮೇ. 31ಕ್ಕೆ ಬೃಹತ್ ಪ್ರತಿಭಟನೆ.

ವಿಪಕ್ಷ ಸ್ಥಾನ ರದ್ದತಿಗೆ ಆಗ್ರಹಿಸಿ ಮೇ. 31ಕ್ಕೆ ಬೃಹತ್ ಪ್ರತಿಭಟನೆ.

ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿ, ಅಸಂವಿಧಾನಿಕವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿಯ ವಿಧಾನ ಪರಿಷತ್ ಸದಸ್ಯತ್ವ ಹಾಗೂ ವಿಪಕ್ಷ ಸ್ಥಾನ ರದ್ದುಗೊಳಿಸುವಂತೆ ಆಗ್ರಹಿಸಿ ಕಲಬುರಗಿ ನಾಗರಿಕ ಹೋರಾಟ ಸಮಿತಿಯಿಂದ ಮೇ 31 ರಂದು ನಗರದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ ಮಲ್ಲಪ್ಪ ಹೊಸಮನಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೃಹತ್ ಪ್ರತಿಭಟನೆಯ ನಿಮಿತ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ಆದ್ದರಿಂದ ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ನಾರಾಯಣಸ್ವಾಮಿ ಒಬ್ಬ ಜವಾಬ್ದಾರಿತ ಸ್ಥಾನದಲ್ಲಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿ ಎಂದು ಸಂಭೋದಿಸಿರುವುದು ಅವರ ಬೌದ್ಧಿಕ ಮಟ್ಟ ಹಾಗೂ ಸಂಸ್ಕೃತಿ ಎಂತಹದ್ದು ಎಂಬುದು ತೋರಿಸುತ್ತದೆ ಎಂದು ಹೇಳಿದರು.

ಮುಖಂಡ ದಿನೇಶ್‌ ದೊಡ್ಡಮನಿ ಮಾತನಾಡಿ, ನಾರಾಯಣಸ್ವಾಮಿ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಗುಲಾಮಗಿರಿ ಮಾಡುತ್ತಾ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ರಾಜಕೀಯ ಬೆಳವಣಿಗೆ ಸಹಿಸದೆ ಅವರ ಕುಟುಂಬವನ್ನು ಗುರಿಯಾಗಿಸಿಕೊಂಡು ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿ ರಾಜಕೀಯ ತೇಜೋವಧೆ ಮಾಡುತ್ತಿದ್ದ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

ಮುಖಂಡರಾದ ಪ್ರಕಾಶ್ ಮೂಲ ಭಾರತಿ, ರಾಜು ಕಪನೂರ, ಸುರೇಶ್ ಹಾದಿಮನಿ, ಗುಂಡಪ್ಪ ಲಂಡನಕರ್, ಪ್ರಕಾಶ್ ನಾಗನಹಳ್ಳಿ, ದೇವಿಂದ್ರ ಸಿನ್ನೂರ್, ಅಶೋಕ ವೀರ ನಾಯಕ, ಶಿವಕಾಂತ್ ಬೆಣ್ಣೂರಕರ್, ಮಲ್ಲಿಕಾರ್ಜುನ ಬೆಣ್ಣೂರಕ‌ರ್, ಸುಭಾಷ್ ಕಲ್ಮರಿ, ಶಿವಯೋಗಿ ರಾವೂರ, ಜಗನ್ನಾಥ ಮುಡಬೂಳಕ‌ರ್, ಸಾಗರ್ ಚಿಟ್ಟೇಕಾರ, ಪ್ರೇಮ್ ಸಾಗರ, ಬಸವರಾಜ ಮುಡಬೂಳಕರ್, ನಾಗೇಂದ್ರ ಬುರ್ಲಿ, ರಾಜಪ್ಪ ಹುಂಡೇಕಾರ, ಯಲ್ಲಾಲಿಂಗ ಕಲ್ಲಕ್, ದೇವಿಂದ್ರ ಭಾಗೋಡಿ, ಪೀರಪ್ಪ ಸಾಲಹಳ್ಳಿ, ಶೈಲೇಶ್ ಬೆಣ್ಣೂರಕ‌ರ್, ಶರಣು ತಲಾಟಿ, ಬಸವರಾಜ ಮುಡಬೂಳಕ‌ರ್, ಲೋಹಿತ್ ಮುದ್ದಡಗಿ, ವಿಶ್ವನಾಥ ಬೀದಿಮನಿ, ಪೃಥ್ವಿ ಸಾಗರ ಸೇರಿದಂತೆ ಇತರರು ಇದ್ದರು. ಮಲ್ಲಿಕಾರ್ಜುನ ಮುಡಬೂಳಕರ್ ಸ್ವಾಗತಿಸಿದರು, ಉದಯಕುಮಾರ್ ಸಾಗರ ನಿರೂಪಿಸಿ ವಂದಿಸಿದರು.

ಮರ ಕಟಾವು ಮಾಡಿದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ.

ಮರ ಕಟಾವು ಮಾಡಿದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ.

ಚಿತ್ತಾಪುರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸೋಮವಾರ ಅನುಮತಿ ಪಡೆಯದೆ ಮರ ಕಟಾವು ಮಾಡಿದ ವಿಷಯ ತಿಳಿದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ವಿಜಯಕುಮಾರ ಬಡೀಗೇರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು ಎಪಿಎಂಸಿ ಕಾರ್ಯದರ್ಶಿ ಅನುಮತಿ ಕೋರಿ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದರು ಇನ್ನೂ ನಮ್ಮ ಇಲಾಖೆಯಿಂದ ಅನುಮತಿ ನೀಡಿರಲಿಲ್ಲ ಈಗ ಏಕಾಏಕಿ ಮರ ಕಡಿದ ವಿಷಯ ತಿಳಿದುಬಂದಿದೆ ಈ ಕುರಿತು ಕೊಡಲೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮೊಹಮ್ಮದ್ ಜಾವೀದ್, ಅರಣ್ಯ ವೀಕ್ಷಕ ಸವಿತಾ ಸೇರಿದಂತೆ ಇತರರು ಇದ್ದರು.

ಸೋಮವಾರ, ಮೇ 26, 2025

ಮರಕ್ಕೆ ಕೊಡಲಿ, ಎಪಿಎಂಸಿ ಮತ್ತು ಅರಣ್ಯ ಇಲಾಖೆ ಜಾಣಮೌನ.

ಜಗದೇವ ಎಸ್ ಕುಂಬಾರ.
ಚಿತ್ತಾಪುರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಹಾಡು ಹಗಲೇ ಮರಗಳು ಧರೆಗೆ ಉರಳಿಸುತ್ತಿದ್ದರೂ ಯಾರೂ ಕೇಳುವರಿಲ್ಲದಂತಾಗಿದೆ ಎಪಿಎಂಸಿ ಮತ್ತು ಅರಣ್ಯ ಅಧಿಕಾರಿಗಳು ಜಾಣಮೌನಕ್ಕೆ ಜಾರಿದ್ದು ನೋಡಿದರೆ ಇನ್ನೂ ಅದೆಷ್ಟೋ ಮರಳು ನೆಲಕ್ಕೆ ಉರುಳುತ್ತವೆ ಎಂಬ ಚಿಂತೆ ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.

ಸುಮಾರು 50ಕ್ಕೂ ಅಧಿಕ ವರ್ಷಗಳ ಹಳೆಯದಾದ ಬೆಲೆಬಾಳುವ ಮರಗಳು ಕಡಿಯುತ್ತಿರುವುದು ನೋಡಿದರೆ ಎಪಿಎಂಸಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಮೌನ ಹಲವಾರು ಗುಮಾನಿಗೆ ಎಡೆ ಮಾಡಿಕೊಟ್ಟಿದೆ ಎಂದು ಜನರು ದೂರುತ್ತಿದ್ದಾರೆ. ಕಾನೂನಿನ ಯಾವುದೇ ಅಳಕು ಅಂಜಿಕೆಯಿಲ್ಲದೆ ಗಿಡ, ಮರಗಳನ್ನು ಅವ್ಯಾಹತವಾಗಿ ಕಡಿಯುವ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದೆ.

ಕಾಡು ಬೆಳೆಸಿ ನಾಡು ಉಳಿಸಿ ಎಂದು ಅರಣ್ಯ ಇಲಾಖೆ ಘೋಷಣೆ ಕೇವಲ ದಾಖಲೆಯಲ್ಲಿ ಮಾತ್ರ ಉಳಿದಿದೆ. ಅನುಷ್ಠಾನದಲ್ಲಿ ಜಾರಿಯಾಗಿಲ್ಲ ಎಂಬುದಕ್ಕೆ ಸಾಕ್ಷಿಗಳು ಸಾಕಷ್ಟು ಸಿಗಲಿವೆ. ಸರಕಾರ ಇಲ್ಲಿನ ಗಿಡ ಮರಗಳ ರಕ್ಷಣೆಗೆ ಈಗಲಾದರೂ ಎಚ್ಚೆತ್ತು ತುರ್ತು ಕ್ರಮ ಕೈಗೂಳ್ಳಬೇಕು. ಇರದಿದ್ದರೆ ಜನ ಹೋರಾಟ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ದಿನಕ್ಕೆ ಒಂದೆರಡರಂತೆ ನಿತ್ಯ ಮರಗಳ ಮಾರಣ ಹೋಮ ನಡೆಸಿದರೆ ಹೀಗೆ ಬಿಟ್ಟರೆ ಕೆಲ ದಿನದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿನ ಎಲ್ಲ ಹಸಿರು ಸಂಪತ್ತು ನಾಶವಾಗಲಿದೆ ಎಂದು ಪರಿಸರ ಪ್ರೇಮಿಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ನಮ್ಮ ವ್ಯಾಪ್ತಿಗೆ ಒಳಪಡುವ ಎಪಿಎಂಸಿಯಲ್ಲಿ ಮರಗಳು ಕಡಿದಿದ್ದು ನಮ್ಮ ಗಮನಕ್ಕೆ ಇಲ್ಲ ಒಂದು ವೇಳೆ ಮರಗಳು ಕಡಿದಿದ್ದು ನಿಜವಾಗಿದ್ದರೆ ನಾನು ಕ್ರಮ ಕೈಗೊಳ್ಳುವೆ ನಮ್ಮ ಇಲಾಖೆಯಿಂದ ಯಾವುದೇ ರೀತಿಯ ಮರಗಳು ಕಡಿಸಲು ಸೂಚಿಸಿಲ್ಲ ಎಂದರು.

- ಶ್ರೀಮತಿ ಸವಿತಾ ಘೋನಿ.
ಕಾರ್ಯದರ್ಶಿ,ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚಿತ್ತಾಪೂರ.

ಎಪಿಎಂಸಿಯಲ್ಲಿ ಯಾವುದೇ ರೀತಿಯ ಒಪ್ಪಿಗೆ ಪರವಾನಿಗೆ ಇರದೆ ಬೆಳಿಗ್ಗೆ ಮರ ಕಡಿದ ವಿಷಯ ತಿಳಿದು ಬಂದಿದೆ ಕೂಡಲೆ ಮರ ಕಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ಪಂಚನಾಮೆ ಮಾಡಿಕೊಳ್ಳಲಾಗಿದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

- ಮಹಮ್ಮದ್ ಜಾವೀದ್
ಉಪ ವಲಯ ಅರಣ್ಯಾಧಿಕಾರಿ ಚಿತ್ತಾಪೂರ.



ಶುಕ್ರವಾರ, ಮೇ 23, 2025

ಈ ರಸ್ತೆಗೆ ಸಂಚರಿಸಿದರೆ ಜೀವದ ಭಯ.ಕಿರಿದಾದ ರಸ್ತೆ, ರಸ್ತೆ ಉದ್ದಕ್ಕೂ ತಗ್ಗು ಗುಂಡಿಗಳು, ದಿನ ಒಂದಲ್ಲ ಒಂದು ಘಟನೆ.

-ಜಗದೇವ ಎಸ್ ಕುಂಬಾರ.
ಚಿತ್ತಾಪುರ: ಪಟ್ಟಣದ ಹೊರವಲಯದಿಂದ ರಾವೂರ ಹೋಗುವ 6 ಕಿಲೋ ಮೀಟರ್ ಡಾಂಬರೀಕರಣ ರಸ್ತೆಯು ಸುಮಾರು ವರ್ಷಗಳಿಂದ ಕಿರಿದಾದ ರಸ್ತೆಯಾಗಿದ್ದು, ಈಗ ಆ ರಸ್ತೆ ಉದ್ದಕ್ಕೂ ಅಲ್ಲಿಲ್ಲಿ ತಗ್ಗು-ಗುಂಡಿಗಳು ನಿರ್ಮಾಣವಾಗಿದ್ದು, ಬೆಳಿಗ್ಗೆಯಿಂದ ರಾತ್ರಿವರೆಗೆ ಒಂದಲ್ಲ ಒಂದು ವಾಹನ ಸವಾರರ ಮಧ್ಯ ಸಣ್ಣಪುಟ್ಟ ಘಟನೆಗಳು ಸಂಭವಿಸುತ್ತಿದ್ದು, ಈಗಾಗ್ಲೇ ಸಾಕಷ್ಟು ಜೀವ ಹಾನಿಗಳು ಆಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಜೀವದ ಭಯ ಉಂಟಾಗುತ್ತಿದೆ ಎನ್ನುತ್ತಾರೆ.
ಈ ರಸ್ತೆ ಮೇಲೆ ಎದುರಿನಿಂದ ಬರುವ ವಾಹನಗಳಿಗೆ ಇನ್ನೊಂದು ವಾಹನ ಜಾಗ ಬಿಡದಿದ್ದರೆ ವಾಹನ ನೆಲಕಚ್ಚುವ ಸಾಧ್ಯತೆಗಳೇ ಹೆಚ್ಚಾಗಿವೆ. ಎದುರಿನಿಂದ ಬರುವ ವಾಹನಗಳಿಗೆ ಜಾಗ ಬಿಡಲು ಸಾಧ್ಯವಾಗದಷ್ಟು ರಸ್ತೆ ಇಕ್ಕಟ್ಟಾಗಿದೆ. ಇದರಿಂದಾಗಿ ಅನೇಕ ಬಾರಿ ಬೈಕ್ ಸವಾರರು ತೊಂದರೆ ಅನುಭವಿಸಿದ ಉದಾಹರಣೆಗಳಿವೆ ಎಂದು ತಮ್ಮ ಮನದಾಳದ ಮಾತು ಹೇಳುತ್ತಿದ್ದಾರೆ.
ರಸ್ತೆಗಳ ದುರಸ್ತಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ವಿವಿಧ ಯೋಜನೆಯಡಿ ಕೋಟ್ಯಾಂತರ ರೂ. ಅನುದಾನ ನೀಡುತ್ತಿದೆ. ಆದರೆ ಈ ರಸ್ತೆಗೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕಾದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿಷ್ಕಾಳಜಿಯಿಂದ ರಸ್ತೆ ಮಾತ್ರ ಹಾಗೇ ಉಳಿಯುವಂತಾಗಿದೆ. ಒಟ್ಟಿನಲ್ಲಿ ಹದಗೆಟ್ಟ ಕಿರಿದಾದ ರಸ್ತೆಯ ದುಃಸ್ಥಿತಿಯಿಂದ ಚಿತ್ತಾಪುರ ಸುತ್ತ ಮುತ್ತಲಿನ ಗ್ರಾಮಸ್ಥರು ನಿತ್ಯ ಹಿಡಿಶಾಪ ಹಾಕುತ್ತಾ ಓಡಾಡುವಂತಾಗಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ರಸ್ತೆ ಬಗ್ಗೆ ನಿರ್ಲಕ್ಷ್ಯತನ ಬಿಟ್ಟು ಶೀಘ್ರ ರಸ್ತೆ ನಿರ್ಮಾಣ ಕಾರ್ಯಕ್ಕೆ ಮುಂದಾಗಬೇಕಿದೆ ಎಂದರು.

ಜನ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಸ್ತೆ ತೀರ ಕಿರಿದಾಗಿದ್ದು, ರಸ್ತೆಯ ಮಧ್ಯ ಭಾಗದಲ್ಲಿ ತಗ್ಗು-ಗುಂಡಿಗಳು ಬಿದ್ದು ಹಾಳಾಗಿದ್ದರಿಂದ ವಾಹನಗಳು ಸರ್ಕಸ್ ಮಾಡುತ್ತ ಚಲಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಯ ಡಾಂಬರೀಕರಣ ಕಿತ್ತು ಹೋಗಿದ್ದರಿಂದ ಅಲ್ಲಲ್ಲಿ ಕಂಕರ್ ಕಲ್ಲುಗಳು ಮೇಲೆದ್ದು ಕೆಲವು ಕಡೆ ಗುಂಡಿಗಳು ನಿರ್ಮಾಣವಾಗಿವೆ ಎನ್ನುತ್ತಾರೆ.

- ವೆಂಕಟೇಶ ರಾಠೋಡ್
 ಕರವೇ (ಸ್ವಾಭಿಮಾನಿ ಬಣ)ಕಾರ್ಯಕರ್ತರು ಚಿತ್ತಾಪೂರ.

===================================

ಇಂದು ಬೆಳಗಿನ ಜಾವ ಓರಿಯಂಟ್ ಸಿಮೆಂಟ್ ಕಂಪೆನಿಯಲ್ಲಿ ಸೆಕ್ಯೂರಿಟಿ ಕೆಲಸಕ್ಕೆ ಹೋಗುತ್ತಿದ್ದ ರಾವೂರ ಗ್ರಾಮದ ರಾಜಕುಮಾರ ಶೆಟ್ಟಿ ಎನ್ನುವ ನಿವಾಸಿ ಇದೇ ಇಕ್ಕಟ್ಟಾದ ರಸ್ತೆಯಲ್ಲಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ ಘಟನೆ ನಡೆದಿದೆ.

-ಮಹೇಶ ಬಾಳಿ
ರಾವೂರ ಗ್ರಾಮಸ್ಥರು.

ರಕ್ಷಣೆ ನೀಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ಸಜ್ಜನಶೆಟ್ಟಿ ಆಕ್ರೋಶ.

ಚಿತ್ತಾಪುರ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ರಕ್ಷಣೆ ನೀಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳದಲ್ಲಿ 400-500 ಜನ ಪೊಲೀಸರು ಮತ್ತು ಜಿಲ್ಲೆಯ ಎಲ್ಲಾ ಹಂತದ ಪೊಲೀಸ್‌ ಅಧಿಕಾರಿಗಳು ಇದ್ದರೂ ಛಲವಾದಿ ನಾರಾಯಣಸ್ವಾಮಿ ಅವರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಪೊಲೀಸರೇ ಹೆದರಿಸಿ ಬೆದರಿಸಿ ಸಚಿವರ ಕ್ಷಮೆ ಕೋರುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಿದರು. ತಿರಂಗಾ ಯಾತ್ರೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಭಾಗಿಯಾಗದಂತೆ ಪೊಲೀಸರು ಮತ್ತು ಗುಂಡಾಗಳು ಸೇರಿ ಮೊದಲೇ ಪ್ರೀಪ್ಲಾನ್ ಮಾಡಿದ್ದರು ಎಂದರು.

ಅಪರೇಷನ್‌ ಸಿಂಧೂರ ಯಶಸ್ವಿಯಾದ ಹಿನ್ನಲೆಯಲ್ಲಿ ಭಾರತೀಯ ಸೈನಿಕರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈತಿಕ ಬೆಂಬಲ ನೀಡಲು ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ವೇದಿಕೆ ವತಿಯಿಂದ ಪಟ್ಟಣದಲ್ಲಿ ಬುಧವಾರ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು ಇದೊಂದು ಪಕ್ಷಾತೀತವಾಗಿ ಕಾರ್ಯಕ್ರಮವಾಗಿತ್ತು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗಮಿಸಿದ್ದರು ಇದನ್ನು ಸಹಿಸಿಕೊಳ್ಳದ ಕಾಂಗ್ರೆಸ್‌ ಪಕ್ಷದ ಮರಳು ಮಾಫಿಯಾ, ಲಿಕ್ಕರ್ ಮಾಫಿಯಾ ಹಾಗೂ ರೌಡಿ ಶೀಟರ್ ಗಳು ಗಂಡಾಗಳ ಜೊತೆಗೆ ಪೊಲೀಸರು ಸೇರಿ ಪ್ರವಾಸಿ ಮಂದಿರದಲ್ಲಿ ಐದಾರು ತಾಸು ದಿಬ್ಬಂಧನ ಮಾಡಿ ಟಾರ್ಚರ್ ನೀಡಿದ್ದಾರೆ. ಪೊಲೀಸರು ತಮ್ಮ ಸೇವೆ ಮರೆತು ಗುಲಾಮರಂತೆ ವರ್ತಿಸಿ ಸಚಿವರ ಕಾವಲುಗಾರರಾಗಿದ್ದಾರೆ, ಅವರು ಪೊಲೀಸ್‌ ಇಲಾಖೆಯಲ್ಲಿರಲು ಲಾಯಕ್ಕಿಲ್ಲ, ತಿರಂಗಾ ಯಾತ್ರೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಭಾಗಿಯಾಗದಂತೆ ನೋಡಿಕೊಳ್ಳುವುದು ಹಾಗೂ ಯಾತ್ರೆ ಹಾಳು ಮಾಡುವುದೇ ಅವರ ಉದ್ದೇಶವಾಗಿತ್ತು. ಅಂಬೇಡ್ಕ‌ರ್ ದೇಶಕ್ಕೆ ಸಂವಿಧಾನ ಬರೆದರೆ ಪ್ರಿಯಾಂಕ್ ಖರ್ಗೆ ಚಿತ್ತಾಪುರಕ್ಕೆ ರಿಪಬ್ಲಿಕ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕ‌ರ್ ಮಾತನಾಡಿ, ಶಾಂತಿ, ಪ್ರೀತಿ ವಿಶ್ವಾಸಕ್ಕೆ ಹೆಸರಾದ ಚಿತ್ತಾಪುರದಲ್ಲಿ ಗುಂಡಾ ಪ್ರವೃತ್ತಿ ನಡೆದಿರುವುದು ಖಂಡನೀಯ. ನಮ್ಮೆದುರು ಯಾರು ಮಾತನಾಡಬಾರದು ಯಾರು ಬೆಳೆಯಬಾರದು ಎನ್ನುವ ಸಂಸ್ಕೃತಿ ಗುರುಮಠಕಲ್ ನಲ್ಲಿತ್ತು ಅದು ಈಗ ಚಿತ್ತಾಪುರದಲ್ಲಿ ತಂದಿದ್ದಾರೆ. ಬಿಜೆಪಿಯಲ್ಲಿ ದಲಿತರ ಬೆಳವಣಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಹಿಸುತ್ತಿಲ್ಲ ಇದಕ್ಕೆ ಅಂಬಾರಾಯ ಅಷ್ಠಗಿ ಮೇಲೆ ಗುಂಡಾಗಿರಿ ನಡೆಸಿರುವುದೇ ಸಾಕ್ಷಿ ಎಂದು ಹೇಳಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹಗುರವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಆಗ ನಮ್ಮ ನಾಯಕರು ಮಾದ್ಯಮ ಮೂಲಕ ಕೌಂಟರ್ ನೀಡಿದ್ದರು ಹಾಗೆ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ಕೌಂಟ‌ರ್ ನೀಡುವುದನ್ನು ಬಿಟ್ಟು ಗುಂಡಾಗಿರಿ ಮಾಡಿ ಭಯದ ವಾತಾವರಣ ನಿರ್ಮಾಣ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಕಿಡಿ ಕಾರಿದರು.

ಸಂವಿಧಾನಿಕ ಹುದ್ದೆಯಲ್ಲಿದ್ದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ಅಶ್ಲೀಲ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರೂ ಸಹ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ, ಛಲವಾದಿ ನಾರಾಯಣಸ್ವಾಮಿ ಹೇಳಿಕೆ ತಪ್ಪಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಕಲಿ ಅದನ್ನು ಬಿಟ್ಟು ಗುಂಡಾಗಳಿಗೆ ಬಿಟ್ಟು ಗುಂಡಾಗಿರಿ ನಡೆಸುವುದಕ್ಕೆ ಕುಮ್ಮಕ್ಕು ನೀಡಿದ್ದೆ ಸಚಿವ ಪ್ರಿಯಾಂಕ್ ಖರ್ಗೆ ಕಾರಣ ಎಂದು ಆಪಾದಿಸಿದರು.

-ಚಂದ್ರಶೇಖರ ಅವಂಟಿ
ಬಿಜೆಪಿ ಹಿರಿಯ ಮುಖಂಡ ಚಿತ್ತಾಪೂರ.

=====================================

ಚಿತ್ತಾಪುರದಲ್ಲಿ ಪೊಲೀಸರ ಗುಂಡಾ ವರ್ತನೆ ಹೆಚ್ಚಾಗಿದೆ, ಭಾರತ್ ಮಾತಾ ಕೀ ಜೈ ಎನ್ನುವರನ್ನು ತಡೆಹಿಡಿದ ಪೊಲೀಸರು ಛಲವಾದಿ ನಾರಾಯಣಸ್ವಾಮಿ ವಿರುದ್ಧ ಅಸಂವಿಧಾನಿಕ ಪದಗಳ ಬಳಕೆ ಮಾಡಿ ನಿಂದಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಕೂಡಲೇ ಕೈಗೊಳ್ಳಬೇಕು ಎಂದರು.
 
-ಮಲ್ಲಿಕಾರ್ಜುನ ಎಮ್ಮೆನೋ‌ರ್
ಜಿಲ್ಲಾಧ್ಯಕ್ಷರು,ಬಿಜೆಪಿ ಹಿಂದುಳಿದ ವರ್ಗಗಳ ಚಿತ್ತಾಪುರ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಸುರೇಶ್ ಬೆನಕನಳ್ಳಿ, ಶಿವರಾಮ ಚವ್ಹಾಣ, ರಮೇಶ್ ಕಾಳನೂರು ಇದ್ದರು

ಬುಧವಾರ, ಮೇ 21, 2025

ಕಾಂಗ್ರೆಸ್ ನಿಂದ ಮಿಂಚಿನ ಪ್ರತಿಭಟನೆ, ಛಲವಾದಿ ನಾರಾಯಣಸ್ವಾಮಿ ಕ್ಷಮೆಯಾಚನೆಗೆ ಆಗ್ರಹ, ತಿರಂಗಾ ಯಾತ್ರೆ ವೇದಿಕೆ ಕಾರ್ಯಕ್ರಮ ರದ್ದು.

ಚಿತ್ತಾಪುರ: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಆನೆ ಹೋಗುವಾಗ ನಾಯಿಗಳು ಬೂಗಳುತ್ತವೆ ಎಂದಾಗ ಆನೆ, ನಾಯಿ ಯಾರು ಪ್ರಶ್ನಿಸಿದಾಗ ಪ್ರಧಾನಿ ನರೇಂದ್ರ ಮೋದಿ ಅವರು ಆನೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಕೆ ಮಾಡಿ ಮಾತನಾಡಿರುವುದನ್ನು ತೀವ್ರವಾಗಿ ಖಂಡಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟ್ಟಣದಲ್ಲಿ ಮಿಂಚಿನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲು ಬುಧವಾರ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಛಲವಾದಿ ನಾರಾಯಣಸ್ವಾಮಿ ಪ್ರವಾಸಿ ಮಂದಿರದಲ್ಲಿ ಇರುವ ವಿಷಯ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು ಪ್ರವಾಸಿ ಮಂದಿರಕ್ಕೆ ಮುತ್ತಿಗೆ ಹಾಕಿ ಛಲವಾದಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಈ ಮಧ್ಯೆ ಕಾಂಗ್ರೆಸ್ ಮುಖಂಡರು ಪ್ರವಾಸಿ ಮಂದಿರದ ಗೇಟ್ ತೆರೆದು ಒಳನುಗ್ಗುವ ಪ್ರಯತ್ನ ಮಾಡಿದಾಗ ಪೊಲೀಸ್ ಅಧಿಕಾರಿಗಳು ಪ್ರತಿಭಟನೆ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಹೊರಹಾಕಿ ಗೇಟ್ ಬಂದ್ ಮಾಡಿದರು. ಗೇಟ್ ಮುಂದೆ ಕುಳಿತುಕೊಂಡು ಕಾಂಗ್ರೆಸ್ ಮುಖಂಡರು ಹೋರಾಟ ಮುಂದುವರೆಸಿದರು. ಪ್ರವಾಸಿ ಮಂದಿರದಲ್ಲಿದ್ದ ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕ್ಷಮೆ ಯಾಚಿಸಬೇಕೆಂದು ಪಟ್ಟುಹಿಡಿದಿದ್ದಾರೆ.

ಈ ಹೋರಾಟ ಮುಂದೆ ಯಾವ ರೂಪ ಪಡೆಯಲಿದೆ ಎಂಬುದು ಕಾದುನೋಡಬೇಕಿದೆ. ಸ್ಥಳದಲ್ಲಿ ಹೆಚ್ಚುವರಿ ಎಸ್ಪಿ ಮಹೇಶ ಮೇಗಣ್ಣ, ಡಿವಾಯ್ಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ನಟರಾಜ್ ಲಾಡೆ, ಜಗದೇವ ಪಾಳಾ, ಪಿಎಸ್‌ಐಗಳಾದ ಶ್ರೀಶೈಲ್ ಅಂಬಾಟಿ, ಸೇರಿದಂತೆ ಪೊಲೀಸರು ಸ್ಥಳದಲ್ಲಿದ್ದಾರೆ.

ಚಿತ್ತಾಪುರ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರವರಿಗೆ ಅನುವು ಮಾಡಿಕೋಡಿ ಎಂದು ಬಿಜೆಪಿ ಕಾರ್ಯಕರ್ತರು ಪೋಲಿಸ ಅಧಿಕಾರಿಗಳ ಜೊತೆಗೆ ಮಾತಿನ ಸಂಘರ್ಷ ನಡೆಯಿತ್ತು.

ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಆನೆ ಹೋಗುವಾಗ ನಾಯಿಗಳು ಬೂಗಳುತ್ತವೆ ಎಂಬ ವಿಷಯಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಡುವ ಪ್ರತಿಭಟನೆಗೆ ನಾನು ಉತ್ತರ ನೀಡಲ್ಲ, ನನ್ನಗೂ ಪ್ರಿಯಾಂಕ್ ರವರಿಗೆ ಸಂಬಂಧಿಸಿದ್ದು ಅವರು ಬೇಕಿದ್ದರೆ ನನ್ನ ಮೇಲೆ ಕೇಸು ದಾಖಲೆ ಮಾಡಲಿ ಎಂದು ಉತ್ತರಿಸಿದರು. ಸ್ಥಳದಲ್ಲಿ ಕ್ಷಮೆಯಾಚನೆಗೆ ಒತ್ತಾಯಿಸಿದರೆ ನಾನು ಪ್ರವಾಸಿ ಮಂದಿರದ ವಾಸ್ತವ್ಯ ಮಾಡುವುದಾಗಿ ಹೇಳಿದರು.

- ಛಲವಾದಿ ನಾರಾಯಣಸ್ವಾಮಿ
ವಿಧಾನ ಪರಿಷತ್ ವಿಪಕ್ಷ ನಾಯಕ.

ಕೆಲ ಕಾರ್ಯಕರ್ತೆರು ಪ್ರವಾಸಿ ಮಂದಿರಕ್ಕೆ ನುಗ್ಗಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಕಾರಿಗೆ ಬಣ್ಣ ಎರಚಿದರು.
ನಂತರ ಪೋಲಿಸರು ಅವರನ್ನು ಸಮಾಧಾನ ಮಾಡಿ ಕಳುಹಿಸಿದ ಘಟನೆ ನಡೆಯಿತ್ತು.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...