ಗುರುವಾರ, ಜನವರಿ 2, 2025

ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ದೇವಿಂದ್ರಮ್ಮ ಆಯ್ಕೆ


ಚಿತ್ತಾಪುರ: ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕದಿಂದ ಮಹಿಳಾ ಸಾಧಕಿಯರಿಗೆ ಪ್ರತಿ ವರ್ಷ ನೀಡುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಮಟ್ಟದ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಜೀವಣಗಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ದೇವಿಂದ್ರಮ್ಮ ವಿ ಮಾಲಿ ಪಾಟೀಲ್ ಆಯ್ಕೆಯಾಗಿದ್ದಾರೆ.

ಜ.3ರಂದು ವಿಜಯಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಸಂಚಾಲಕ ಜಗದೇವ ಕುಂಬಾರ ಪ್ರಕಟಣೆಗೆ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಿ: ಪ್ರಭುರೆಡ್ಡಿ ಸೂಚನೆ.

ಚಿತ್ತಾಪುರ: ಮುಂಬರುವ ಬೇಸಿಗೆ ಮತ್ತು ಮುಂಗಾರು ಮಳೆಗಾಲದ ಆರಂಭದ ಅವಧಿಯಲ್ಲಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ...