ಯುವ ಘಟಕ ವತಿಯಿಂದ ಬೃಹತ್ ಶೋಭಾಯಾತ್ರೆ.

ಚಿತ್ತಾಪುರ: ಬಸವಾದಿ ಶರಣರಲ್ಲಿ ನಿಜ ಶರಣ ಎನಿಸಿಕೊಂಡಿರುವ ನಿಜಶರಣ ಅಂಬಿಗರ ಚೌಡಯ್ಯನವರ 905ನೇ ಜಯಂತ್ಯೋತ್ಸವದ ನಿಮಿತ್ಯ ತಾಲೂಕು ಕೋಲಿ ಸಮಾಜದ ಯುವ ಘಟಕ ಅಧ್ಯಕ್ಷ ರಾಜು ಹೋಳಿಕಟ್ಟಿ, ನಗರ ಅಧ್ಯಕ್ಷ ಬಸವರಾಜ ಮೈನಾಳಕರ್, ಬಸವರಾಜ ರಾಜೋಳ್ಳಿ , ಪ್ರಕಾಶ ಯಾಡಗೂಟ್ಟಿ, ಭಾಗಣ್ಣ ಹಳ್ಳಿ, ಜಗ್ಗು ಹಳ್ಳಿ, ನಾಗು ದಂಡಗುಂಡ, ಗೂಳಿ ಡಿಗ್ಗಿ, ಶಿವು ದಿಗ್ಗಾಂವ್ , ನಾಗು, ಗೌತಮ ಇತರರ ನೆತೃತ್ವದಲ್ಲಿ ಜ.28 ಇಂದು ಸಾಯಂಕಾಲ 4:30ಕ್ಕೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರು ಅವರು ಬೃಹತ್‌ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ ಜೊತೆಗೆ ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪಾ ಜಮಾದಾರ ಸೇರಿದಂತೆ ಸಮಾಜದ ಅನೇಕ ಹಿರಿಯರು ಭಾಗವಹಿಸಲಿದ್ದಾರೆ.

ಬೃಹತ್‌ ಶೋಭಾಯಾತ್ರೆಯಲ್ಲಿ ಮಹಿಳೆಯರ ಕುಂಭಕಳಸ, ಡೊಳ್ಳು ಕುಣಿತ, ಹಲಿಗೆ ವಾದನ ಶೋಭಾಯಾತ್ರೆಗೆ ಮೆರಗು ನೀಡಲಿದೆ. ಅಂಬಿಗರ ಚೌಡಯ್ಯನವರ ಮೂರ್ತಿ, ಮಾತೆ ಮಾಣಿಕೇಶ್ವರಿ, ಕೋಲಿ ಸಮಾಜದ ಧೀಮಂತ ಹೋರಾಟಗಾರ ದಿ.ವಿಠಲ್ ಹೇರೂರ ಭಾವಿಚಿತ್ರದ ಜೊತೆಗೆ ಅನೇಕ ಶರಣರ ಭಾವಚಿತ್ರವು ಅದ್ಧೂರಿಯಾಗಿ ಬೃಹತ್‌ ಶೋಭಾಯಾತ್ರೆ ಮೆರವಣಿಗೆ ನಡೆಯಲಿದ್ದು ಕೋಲಿ ಸಮಾಜದ ಬಾಂಧವರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.