ಮಂಗಳವಾರ, ಜನವರಿ 28, 2025

ಯುವ ಘಟಕ ವತಿಯಿಂದ ಬೃಹತ್ ಶೋಭಾಯಾತ್ರೆ.

ಚಿತ್ತಾಪುರ: ಬಸವಾದಿ ಶರಣರಲ್ಲಿ ನಿಜ ಶರಣ ಎನಿಸಿಕೊಂಡಿರುವ ನಿಜಶರಣ ಅಂಬಿಗರ ಚೌಡಯ್ಯನವರ 905ನೇ ಜಯಂತ್ಯೋತ್ಸವದ ನಿಮಿತ್ಯ ತಾಲೂಕು ಕೋಲಿ ಸಮಾಜದ ಯುವ ಘಟಕ ಅಧ್ಯಕ್ಷ ರಾಜು ಹೋಳಿಕಟ್ಟಿ, ನಗರ ಅಧ್ಯಕ್ಷ ಬಸವರಾಜ ಮೈನಾಳಕರ್, ಬಸವರಾಜ ರಾಜೋಳ್ಳಿ , ಪ್ರಕಾಶ ಯಾಡಗೂಟ್ಟಿ, ಭಾಗಣ್ಣ ಹಳ್ಳಿ, ಜಗ್ಗು ಹಳ್ಳಿ, ನಾಗು ದಂಡಗುಂಡ, ಗೂಳಿ ಡಿಗ್ಗಿ, ಶಿವು ದಿಗ್ಗಾಂವ್ , ನಾಗು, ಗೌತಮ ಇತರರ ನೆತೃತ್ವದಲ್ಲಿ ಜ.28 ಇಂದು ಸಾಯಂಕಾಲ 4:30ಕ್ಕೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರು ಅವರು ಬೃಹತ್‌ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ ಜೊತೆಗೆ ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪಾ ಜಮಾದಾರ ಸೇರಿದಂತೆ ಸಮಾಜದ ಅನೇಕ ಹಿರಿಯರು ಭಾಗವಹಿಸಲಿದ್ದಾರೆ.

ಬೃಹತ್‌ ಶೋಭಾಯಾತ್ರೆಯಲ್ಲಿ ಮಹಿಳೆಯರ ಕುಂಭಕಳಸ, ಡೊಳ್ಳು ಕುಣಿತ, ಹಲಿಗೆ ವಾದನ ಶೋಭಾಯಾತ್ರೆಗೆ ಮೆರಗು ನೀಡಲಿದೆ. ಅಂಬಿಗರ ಚೌಡಯ್ಯನವರ ಮೂರ್ತಿ, ಮಾತೆ ಮಾಣಿಕೇಶ್ವರಿ, ಕೋಲಿ ಸಮಾಜದ ಧೀಮಂತ ಹೋರಾಟಗಾರ ದಿ.ವಿಠಲ್ ಹೇರೂರ ಭಾವಿಚಿತ್ರದ ಜೊತೆಗೆ ಅನೇಕ ಶರಣರ ಭಾವಚಿತ್ರವು ಅದ್ಧೂರಿಯಾಗಿ ಬೃಹತ್‌ ಶೋಭಾಯಾತ್ರೆ ಮೆರವಣಿಗೆ ನಡೆಯಲಿದ್ದು ಕೋಲಿ ಸಮಾಜದ ಬಾಂಧವರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಿ: ಪ್ರಭುರೆಡ್ಡಿ ಸೂಚನೆ.

ಚಿತ್ತಾಪುರ: ಮುಂಬರುವ ಬೇಸಿಗೆ ಮತ್ತು ಮುಂಗಾರು ಮಳೆಗಾಲದ ಆರಂಭದ ಅವಧಿಯಲ್ಲಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ...