ಸೋಮವಾರ, ಜನವರಿ 27, 2025

ರೋಣದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ.

ಚಿತ್ತಾಪುರ: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷರಾಗಿ ನಿವೃತ್ತ ಶಿಕ್ಷಕ ರೇವಣಸಿದ್ದಪ್ಪ ರೋಣದ ಆವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ನಿವೃತ್ತ ನೌಕರರ ಸಭೆಯಲ್ಲಿ ಸರ್ವಸದಸ್ಯರ ಒಪ್ಪಿಗೆ ಮೇರೆಗೆ ಅಧ್ಯಕ್ಷರ ಆಯ್ಕೆ ಮಾಡಿದ್ದು ತಾಲೂಕು ಅಧ್ಯಕ್ಷ ಸ್ಥಾನದ ಆಯ್ಕೆಗಾಗಿ ಕಿಶನ್ ರಾಠೋಡ ಸೂಚಿಸಿದರು ಮೋನಯ್ಯ ಪಂಚಾಳ ಅನುಮೋದನೆ ಮಾಡಿದರು. 

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷರ ವಿಜಯಕುಮಾರ ಲೊಡ್ಡೆನೋರ ಖಜಾಂಚಿ ಮಲ್ಲಣ್ಣ ಮಾಡಬೂಳ, ಮಲ್ಲಿಕಾರ್ಜುನ ಮಲಕೂಡ, ಸುಭಾಷ್ ಮೆಂಗಜೀ ಆರೋಗ್ಯ ಇಲಾಖೆಯ ನಿಜಾಮೋದಿನ್, ಶಿವಾಜಿ ನಿಂಬೆಳಕರ, ಬಸವರಾಜ ಕಲಬುರ್ಗಿ ಬಾಗೋಡಿ, ಹಾಜಪ್ಪ ಶಹಾಬಾದ್, ಶಶಿಧರ, ಮಹ್ಮದ್ ಅಬ್ದುಲ್ ನಬಿ ರವಿ ಪೊತ್ದಾರ, ಇದ್ದರು.ಮಹಾದೇವಪ್ಪ ಉಪ್ಪಾರ ನಿರೂಪಿಸಿ, ಕಿಶನ್ ರಾಠೋಡ ವಂದಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...