ಸಂಘಟನೆಗೆ ಯುವಕರ ಪಾತ್ರ ಮುಖ್ಯ: ಬ್ಲಾಕ್ ಅಧ್ಯಕ್ಷ.

ಚಿತ್ತಾಪುರ: ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಯುವ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯುವಕರು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡಲು ಕಾಂಗ್ರೇಸ್ ಯುವ ಘಟಕ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಅದರ ಜೊತೆಗೆ ಯುವಕರಲ್ಲಿ ಏನೇ ವೈ ಮನಸುಗಳಿದ್ದಲ್ಲಿ ಯುವಕರು ಸರಿಪಡಿಸಿಕೊಂಡು ಪಕ್ಷದ ಸಿದ್ಧಾಂತದ ಅಡಿಯಲ್ಲಿ ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷದ ಕೆಲಸ ಮಾಡಬೇಕೆಂದು ಹೇಳಿದರು.

ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಾಳ ಮಾತನಾಡಿ
ಹಿಂದಿನ ಕಾಂಗ್ರೆಸ್ ಯುವ ಘಟಕ ಅಧ್ಯಕ್ಷ ಸಂಜು ಬೂಳ್ಕರ್ ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದರು ಅದೇ ರೀತಿ ನೂತನ ಅಧ್ಯಕ್ಷರು ಸಹ ಸಕ್ರಿಯವಾಗಿ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡುವುದರ ಜೊತೆಗೆ ಯುವಕರಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ತಿಳಿಸುವಂತಹ ಕೆಲಸಗಳು ಆಗಲಿ ಹೇಳಿದರು.

ಪಕ್ಷದಲ್ಲಿನ ನನ್ನ ಸೇವೆಯನ್ನು ಗುರುತಿಸಿ ನನಗೆ ನೂತನ ತಾಲೂಕು ಯುವ ಘಟಕ ಅಧ್ಯಕ್ಷ ಸ್ಥಾನ ಸಿಕ್ಕಿದ್ದು ಸಂತೋಷವಾಗಿದೆ, ಇನ್ನು ಹೆಚ್ಚಿನ ರೀತಿಯಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳ ಅಡಿಯಲ್ಲಿ ಯುವ ಘಟಕ ಸಂಘಟನೆ ಸಲುವಾಗಿ ಸಕ್ರಿಯವಾಗಿ ನಾನು ಪಕ್ಷದಲ್ಲಿ ಸೇವೆ ಸಲ್ಲಿಸುವುದಾಗಿ ತಿಳಿಸಿ, ಹಿರಿಯರ ಮಾರ್ಗದರ್ಶನ ನನ್ನ ಮೇಲೆ ಇರಲಿ ಎಂದು ಹೇಳಿದರು.

- ದೇವೇಂದ್ರ ಯಾಬಾಳ್ 
ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಚಿತ್ತಾಪುರ.

ಪ್ರಾಸ್ತಾವಿಕವಾಗಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮುಕ್ತರ್ ಪಾಟೀಲ್ ಮಾತನಾಡಿದರು ಈ ಸಂದರ್ಭದಲ್ಲಿ ಮಾಜಿ ಪುರಸಭೆ ಅಧ್ಯಕ್ಷ ಹಾಲಿ ಸದಸ್ಯ ಚಂದ್ರಶೇಖರ ಕಾಶಿ, ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮಲ್ಲಿಕಾರ್ಜುನ ಕಾಳಗಿ, ಮುಖಂಡರಾದ ಗೋಪಸೇನ, ಶರಣು ಡೋಣಗಾಂವ್ , ಸಂಜು ಬುಳಕರ್, ಬಸವರಾಜ ಚಿನ್ನಮಳ್ಳಿ, ಸಾಬಣ್ಣ ಡಿಗ್ಗಿ, ನಾಜಿರ ಅಡಕಿ, ರಾಮಲಿಂಗ ಬಾನರ್, ಹಣಮಂತ ಸಂಕನೂರ, ನಿಂಗಣ್ಣ ಹೆಗಲೇರಿ, ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.