ಶಿವಾಜಿ ಪ್ರಬುದ್ಧ ಆಡಳಿತಗಾರ: ಕಂಬಳೇಶ್ವರ ಶ್ರೀ.


ಚಿತ್ತಾಪುರ: ಶಿವಾಜಿ ಮಹಾರಾಜರು ಅತ್ಯುತ್ತಮ ನಾಯಕತ್ವ, ಆಡಳಿತ ತಂತ್ರಗಳು ಮತ್ತು ಪ್ರಬುದ್ಧ ಆಡಳಿತಗಾರನಾಗಿದ್ದರು ಎಂದು ಕಂಬಳೇಶ್ವರ ಮಠದ ಸೋಮಶೇಖರ ಶಿವಾಚಾರ್ಯರು ಹೇಳಿದರು.

ಪಟ್ಟಣದ ಭುವನೇಶ್ವರಿ ವೃತ್ತದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯೋತ್ಸವ ನಿಮಿತ್ಯ ಶಿವಾಜಿ ಮೂರ್ತಿಗೆ ಶ್ರೀಗಳು ಪೂಜೆ ಸಲ್ಲಿಸಿ ಮಾತನಾಡಿದ ಅವರು ಅವರ ಆಳ್ವಿಕೆಯ ಅವಧಿಯು ಆಡಳಿತ ಮತ್ತು ನ್ಯಾಯಾಲಯ ವಲಯಗಳಲ್ಲಿ ಪರ್ಷಿಯನ್ ಭಾಷೆಗಿಂತ ಮರಾಠಿ ಮತ್ತು ಸಂಸ್ಕೃತಕ್ಕೆ ಆದ್ಯತೆ ನೀಡುವ ಮೂಲಕ ಗುರುತಿಸಲ್ಪಟ್ಟಿತು, ಇದು ಅವರ ಸಾಂಸ್ಕೃತಿಕ ರಾಷ್ಟ್ರೀಯತೆಯನ್ನು ಸೂಚಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಅನಿಲ್ ಯಂಡೆ, ಮುಖಂಡರಾದ ರೋಹಿತ್ ಚವ್ಹಾಣ್, ರೋಹಿತ್ ಯಂಡೆ, ಸಂತೋಷ ಗವಳಕರ್, ಆಕಾಶ್ ಸುಗಂಧಿ, ರಾಘವೇಂದ್ರ ಮೋಹಿತೆ, ಸಂಜು ಸೂರ್ಯವಂಶಿ, ಗುರು ಉಪ್ಪಾರ್, ನವೀನ್ ಚವ್ಹಾಣ್, ಅನುಪ್ ಉಬಾಳೆ, ಬಂಟ್ಟಿ ಹರಳೆ, ಸುನೀಲ್ ಯಂಡೆ, ನಿತೇಶ ಸುಗಂಧಿ, ಅನೀಲ್ ಚಪಟ್ಲೆ, ಅಂಬಣ್ಣ ಹೋಳಿಕಟ್ಟಿ, ಸಾಬಣ್ಣ ಹೋಳಿಕಟ್ಟಿ,
ಮಲ್ಲಿಕಾರ್ಜುನ ಅಲ್ಲೂರಕರ್, ಮೇಘರಾಜ ಗುತ್ತೇದಾರ್, ನರಹರಿ ಕುಲ್ಕರ್ಣಿ, ಮಹೇಶ್ ಸುಗಂಧಿ, ಪ್ರಶಾಂತ್ ಶಿಂದೆ,ರಾಜೇಶ ಹೋಳಿಕಟ್ಟಿ, ಹರ್ಷ ಸೂರ್ಯವಂಶಿ ಸೇರಿದಂತೆ ಪಿಎಸ್‌ಐ ಚಂದ್ರಾಮಪ್ಪ, ದತ್ತು ಜಾನೆ, ಸವಿಕುಮಾರ, ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.