ರಸ್ತೆ ದುರಸ್ತಿಗೆ ಸ್ಪಂದನೆ: ಗ್ರಾಪಂ ಅಧ್ಯಕ್ಷ ಸ್ಪಷ್ಟನೆ.
ಚಿತ್ತಾಪುರ: ಭಾಗೋಡಿ ಮತ್ತು ಮುಡಬೂಳ ರಸ್ತೆ ದುರಸ್ತಿ ಬಗ್ಗೆ ಜನವರಿ 30ಕ್ಕೆ ಅಧಿಕಾರ ವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ತಿಳಿದು ವರದಿಗಾರರ ಜೊತೆ ಭಾಗೋಡಿ ಗ್ರಾಪಂ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಜಗದೀಶ್ ಪಾಟೀಲ್ ಮಾತನಾಡಿ ಭಾಗೋಡಿಯಿಂದ ಡಿಗ್ರಿ ಕಾಲೇಜು ಮಾರ್ಗವಾಗಿ ಮತ್ತು ಮುಡಬೂಳ ಮಾರ್ಗವಾಗಿ ಚಿತ್ತಾಪುರ ಹೋಗುವ ರಸ್ತೆ ಹಾಗೂ ಭಾಗೋಡಿಯಿಂದ ಗುಂಡಗುರ್ತಿ ರಸ್ತೆ ದುರಸ್ತಿ ಬಗ್ಗೆ ಈಗಾಗಲೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ರವರಿಗೆ ಮನವಿ ಮಾಡಲಾಗಿದ್ದು ಸಚಿವರು ಸ್ಪಂದಿಸಿ ಅದೋಷ್ಟು ಬೇಗನೆ ರಸ್ತೆ ದುರಸ್ತಿ ಮಾಡಿಸುವ ಭರವಸೆ ನೀಡಿರುವುದಾಗಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ