ಮಂಗಳವಾರ, ಮಾರ್ಚ್ 18, 2025

ಅಪ್ಪು 50ನೇ ಹುಟ್ಟುಹಬ್ಬ ಆಚರಣೆ.

ಚಿತ್ತಾಪುರ: ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟು ಹಬ್ಬವನ್ನು ಅಪ್ಪು ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದರು.

ಪಟ್ಟಣದ ಲಾಡ್ಡಿಂಗ್ ಕ್ರಾಸ್ ಹತ್ತಿರ ಕರ್ನಾಟಕ ರಾಜ್ಯ ಭೋವಿ ವಡ್ಡರ ಮಹಾಸಭಾ ತಾಲೂಕ ಅಧ್ಯಕ್ಷ ವೆಂಕಟೇಶ್ ಹರವಾಳ ನೇತೃತ್ವದಲ್ಲಿ ಅಪ್ಪು ಅಭಿಮಾನಿಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರತ್ನ ಪುನೀತ್ ರಾಜಕುಮಾ‌ರ್ ಅವರ ಜನ್ಮ ದಿನದ ಸಮಾರಂಭದಲ್ಲಿ ಕಲಾವಿದ ಬಾಬು ಕಾಶಿ ಮಾತನಾಡಿ, ಚಿಕ್ಕ ವಯಸ್ಸಿನಲ್ಲೇ ಬಾಲ ನಟನಾಗಿ ಅಭಿನಯಿಸಿ ನಂತರ ನಾಯಕ ನಟನಾಗಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವಂತಹ ಸಿನೇಮಾ ಮಾಡಿದ ಪುನೀತ್ ರಾಜಕುಮಾ‌ರ್ ಅವರು ಚಿತ್ರರಂಗಕ್ಕೆ ಸಲ್ಲಿಸಿದ ಸೇವೆ ಅಮೋಘವಾಗಿದೆ ಹಾಗೂ ಎಲೆಮರೆ ಕಾಯಿಯಂತೆ ಸಲ್ಲಿಸಿದ ಸಮಾಜ ಸೇವೆ ಮೆಚ್ಚುವಂಥದ್ದು ಇಂತಹ ಅಪರೂಪದ ಚಿತ್ರನಟ ಪುನೀತ್ ರಾಜಕುಮಾ‌ರ್ ಅವರ ಹೆಸರನ್ನು ಪಟ್ಟಣದ ಲಾಡ್ಡಿಂಗ್ ಕ್ರಾಸ್ ಗೆ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್ ಕೇಕ್ ಕತ್ತರಿಸಿದರು. ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಪುರಸಭೆ ಸದಸ್ಯ ವಿನೋದ ಗುತ್ತೇದಾರ, ರವಿ ವಿಟ್ಕರ್, ರಮೇಶ ಬೋಸಗಿ, ಬಾಬು ಜೆಸಿಬಿ, ತಿಮ್ಮಯ್ಯ ಪವಾರ್, ರಾಜೇಶ್ ಕಾಶಿ, ರಾಮು ಹರವಾಳ, ವಿಠಲ್ ಕಟ್ಟಿಮನಿ, ರವಿ ಇವಣಿ, ಕಾಶಿನಾಥ ಗುತ್ತೇದಾರ, ಆನಂದ್ ಗುತ್ತೇದಾರ, ನಾಗು ಕಲ್ಲಕ್, ಮಧುಸೂದನ್ ಕಾಶಿ, ಚಂದ್ರಶೇಖರ್ ಬಿಎಸ್‌ಎನ್‌ಎಲ್, ವೆಂಕಟೇಶ್ ಕಲಬುರಗಿಕರ್ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ದತ್ತು ಜಾನೆ, ಮಂಜುನಾಥ್ ಕಾಶಿ, ಅಂಕುಶ್ ಕಾಶಿ, ಕಾಶಿ ಇದ್ದರು.

ಗುರುವಾರ, ಮಾರ್ಚ್ 13, 2025

ಚಿತ್ತಾಪುರ: ಅಕ್ರಮ ಮದ್ಯ ವಶ.

ಚಿತ್ತಾಪುರ: ಪಟ್ಟಣದದಲ್ಲಿ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ರೂ.75045 ಮೌಲ್ಯದ ಮದ್ಯ ಹಾಗೂ ಒಂದು ಆಟೋ ವಶಕ್ಕೆ ಪಡೆದ ಘಟನೆ ನಡೆದಿದೆ.

ಪಿಎಸ್‌ಐ ಶ್ರೀಶೈಲ ಅಂಬಾಟಿ ಬುಧವಾರ ರಾತ್ರಿ ದಾಳಿ ಮಾಡಿ 650ಎಂಎಲ್ ಪವರ್ ಕೂಲ್ ಸ್ಟ್ರಾಂಗ್ ಬೀರ್ 6 ಬಾಕ್ಸ್ 10800 ರೂಪಾಯಿ, 650ಎಂಎಲ್ ಕಿಂಗ್ ಫಿಶರ್ ಸ್ಟ್ರಾಂಗ್ ಬೀರ್ 5 ಬಾಕ್ಸ್ 11250ರೂಪಾಯಿ, 90ಎಂಎಲ್ ಒರಿಜಿನಲ್ ಚಾಯ್ಸ್ ವಿಸ್ಕಿ 10 ಬಾಕ್ಸ್ 36480 ರೂಪಾಯಿ, 180ಎಂಎಲ್ ಬ್ಯಾಗ ಪೇಪರ್ ವಿಸ್ಕಿ 1 ಬಾಕ್ಸ್ 6912 ರೂಪಾಯಿ, 330 ಎಂಎಲ್ ಕಿಂಗ್ ಫಿಶರ್ ಸ್ಟ್ರಾಂಗ್ ಬೀರ್ 4 ಬಾಕ್ಸ್ 9600 ರೂಪಾಯಿ ಒಟ್ಟು 75045 ರೂಪಾಯಿ ಮೌಲ್ಯದ ಆಕ್ರಮ ಮದ್ಯ ವಶಕ್ಕೆ ಪಡೆಯುವುದರ ಜೊತೆಗೆ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹಾಗೂ ಒಂದು ಆಟೋ ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಬಂಧಿಸಿದ ತನಿಖೆ ಮುಂದುವರೆದಿದೆ ಎನ್ನಲಾಗಿದೆ.

ಶನಿವಾರ, ಮಾರ್ಚ್ 1, 2025

ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ.

ಚಿತ್ತಾಪುರ: ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯೆಯರಾದ ಶ್ರೀಮತಿ ಅನ್ನಪೂರ್ಣ ನಾಗಪ್ಪ ಕಲ್ಲಕ್ ನೂತನ ಅಧ್ಯಕ್ಷೆಯಾಗಿ ಮತ್ತು ಶ್ರೀಮತಿ ಆತೀಯಾ ಬೇಗಂ ನಜಮೋದ್ದಿನ್ ಉಪಾಧ್ಯಕ್ಷೆಯಾಗಿ ಆಯ್ಕೆಯಾಗುವ ಮೂಲಕ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ತಿಕ್ಕೆಗೆ ಹೋಗಿದೆ.

ಪಟ್ಟಣದ ಪುರಸಭೆ ಕಾರ್ಯಲಯದಲ್ಲಿ ಶುಕ್ರವಾರ ನಡೆದ ಪುರಸಭೆ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ನಪೂರ್ಣ ಕಲ್ಲಕ್, ಬಿಜೆಪಿ ಪಕ್ಷದಿಂದ ಸುಶೀಲಾ ದೇವಸುಂಧರ ನಾಮಪತ್ರ ಸಲ್ಲಿಸಿದರು. ಒಟ್ಟು 23 ಸದಸ್ಯರ ಪೈಕಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಕಲ್ಲಕ್ ಅವರು 18 ಮತಗಳು ಪಡೆಯುವ ಮೂಲಕ ಗೆಲವು ಸಾಧಿಸಿದ್ದಾರೆ. ಬಿಜೆಪಿಯ ಸುಶೀಲಾ ದೇವಸುಂಧರ ಅವರು 5 ಮತಗಳು ಪಡೆದು ಸೋಲು ಅನುಭವಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಆತೀಯಾ ಬೇಗಂ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗಯ್ಯ ಹಿರೇಮಠ ಅವರು ಘೋಷಣೆ ಮಾಡಿದರು.

ಇದೇ ವೇಳೆ ತಹಶೀಲ್ದಾರ್ ನಾಗಯ್ಯ ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾ‌ರ್ ಅವರು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಿದರು.

ಪುರಸಭೆ ಸದಸ್ಯರಾದ ಚಂದ್ರಶೇಖರ ಕಾಶಿ, ಶೀಲಾ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಪಾಶಾ ಖುರೇಶಿ, ಸುಮಂಗಲಾ ಸಣ್ಣೂರಕರ್, ಬೇಬಿಬಾಯಿ ಜಾಧವ, ವಿನೋದ ಗುತ್ತೇದಾರ, ಕಾಶಿಬಾಯಿ ಬೆಣ್ಣೂರ್, ಜಗದೀಶ ಚವ್ಹಾಣ, ಸಂತೋಷ ಚೌದ್ರಿ, ಶ್ರುತಿ ಪೂಜಾರಿ, ಶ್ರೀನಿವಾಗರೆಡ್ಡಿ ಪಾಲಪ್, ಶಹಾರಾಜ ಬೇಗಂ, ಖಾಜಾಬಿ, ಮಹ್ಮದ್ ರಸೂಲ್ ಮುಸ್ತಫಾ, ಶಿವರಾಜ ಪಾಳೇದ್, ನಾಗರಾಜ ಭಂಕಲಗಿ, ಪ್ರಭು ಗಂಗಾಣಿ, ರಮೇಶ ಬಮ್ಮನಳ್ಳಿ ಶ್ಯಾಮ್ ಮೇಧಾ ಇದ್ದರು.

ವಿಜಯೋತ್ಸವ : ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ನಂತರ ಕಾಂಗ್ರೆಸ್ ಕಚೇರಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು.

ಅಭಿವೃದ್ಧಿಗೆ ಶ್ರಮಿಸಿ, ಸಚಿವರ ಹೆಸರು ತನ್ನಿ: ನಾಗರೆಡ್ಡಿ ಪಾಟೀಲ.

ಚಿತ್ತಾಪುರ: ನೂತನವಾಗಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸದಸ್ಯರು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ತರಬೇಕು ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಕಿವಿಮಾತು ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು ಒಂದೇ ಸ್ಥಾನಕ್ಕೆ ಹಲವರು ಆಕಾಂಕ್ಷಿಗಳು ಇದ್ದಾಗ ಸ್ವಲ್ಪ ಅಸಮಾಧಾನ ಇದ್ದೆ ಇರುತ್ತದೆ ಹೀಗಾಗಿ ಸ್ವಲ್ಪ ತಾಳ್ಮೆಯಿಂದ ಇರಬೇಕು ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಸಿಗಲಿದೆ, ಹೀಗಾಗಿ ಅಸಮಾಧಾನ ಬದಿಗಿಟ್ಟು ಎಲ್ಲರೂ ಒಗ್ಗೂಡಿ ಸರ್ವ ಸದಸ್ಯರ ಅಭಿಪ್ರಾಯ ಪಡೆದು ಅಭಿವೃದ್ಧಿಗೆ ಶ್ರಮವಹಿಸಬೇಕು ಎಂದು ಹೇಳಿದರು.

ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೂ ಮತ್ತು ಪುರಸಭೆ ಸದಸ್ಯರಿಗೂ ಯಾವುದೇ ದಕ್ಕೆ ಯಾಗದಂತೆ ಎಲ್ಲರ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದರು.

- ಶ್ರೀಮತಿ ಅನ್ನಪೂರ್ಣ ಕಲ್ಲಕ್
ನೂತನ ಅಧ್ಯಕ್ಷೆ ಪುರಸಭೆ ಚಿತ್ತಾಪೂರ.

ವೀಕ್ಷಕರಾಗಿ ಕಲಬುರಗಿ ಜಿಡಿಎ ಅಧ್ಯಕ್ಷ ಮಜ‌ರ್ ಅಲ್ಲಾಂಖಾನ್, ಜಿಪಂ ಮಾಜಿ ಸದಸ್ಯ ಶರಣಗೌಡ ಪಾಟೀಲ ಚಿಂಚನಸೂರ, ಈರಣ್ಣ ಝಳಕಿ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮರಗೋಳ, ಜಿಪಂ ಮಾಜಿ ಸದಸ್ಯ ಶಿವರುದ್ರಪ್ಪ ಭೀಣ್ಣಿ, ಚಂದ್ರಶೇಖರ ಕಾಶಿ, ಶೀಲಾ ಕಾಶಿ, ಮಲ್ಲಿಕಾರ್ಜುನ ಕಾಳಗಿ, ವಿನೋದ ಗುತ್ತೇದಾರ, ಅಣ್ಣಾರಾವ್ ಸಣ್ಣೂರಕರ್, ಶ್ರೀನಿವಾಸ ರೆಡ್ಡಿ ಪಾಲಪ್, ಜಗದೀಶ್ ಚವ್ಹಾಣ, ಶಿವಕಾಂತ್ ಬೆಣ್ಣೂರಕ‌ರ್, ಪಾಶಾಮಿಯ್ಯಾ ಖುರೇಷಿ, ಸಂತೋಷ್ ಚೌದರಿ, ಶಿವರಾಜ್ ಪಾಳೇದ್, ರಸೂಲ್ ಮುಸ್ತಫಾ, ಮಹ್ಮದ್ ಯಕ್ಸಾಲ್, ಜಗದೇವರೆಡ್ಡಿ ಪಾಟೀಲ, ನಾಗರೆಡ್ಡಿ ಗೋಪಸೇನ್, ಅಹ್ಮದ್ ಸೇಟ್, ನಾಗು ಕಲ್ಲಕ್‌, ಸಿದ್ದುಗೌಡ ಅಫಜಲಪುರಕ‌ರ್, ಇಸ್ಮಾಯಿಲ್ ಕಮರವಾಡಿ, ಮಹಾಂತೇಶ್‌ ಬೊಮ್ಮನಳ್ಳಿ, ಭೀಮರಾಯ ಹೊತಿನಮಡಿ, ರಾಜಣ್ಣ ಕರದಾಳ, ಸಂಜಯ ಬುಳಕರ್, ಸಂತೋಷ ಪೂಜಾರಿ, ನಜೀರ್‌ ಆಡಕಿ, ರವಿಸಾಗರ ಹೊಸಮನಿ, ಸೂರಜ್ ಕಲ್ಲಕ್, ಶರಣಪ್ಪ ಕೋರವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮುಕ್ತಾರ್ ಪಟೇಲ್ ನಿರೂಪಿಸಿದರು, ಯುವ ಕಾಂಗ್ರೆಸ್‌ ಅಧ್ಯಕ್ಷ ದೇವಿಂದ್ರ ಯಾಬಾಳ ದಿಗ್ಗಾಂವ ವಂದಿಸಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೂತನ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್ ಅವರ ಮೆರವಣಿಗೆ ನಡೆಯಿತು.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...