ಅಭಿವೃದ್ಧಿಗೆ ಶ್ರಮಿಸಿ, ಸಚಿವರ ಹೆಸರು ತನ್ನಿ: ನಾಗರೆಡ್ಡಿ ಪಾಟೀಲ.

ಚಿತ್ತಾಪುರ: ನೂತನವಾಗಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸದಸ್ಯರು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ತರಬೇಕು ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಕಿವಿಮಾತು ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು ಒಂದೇ ಸ್ಥಾನಕ್ಕೆ ಹಲವರು ಆಕಾಂಕ್ಷಿಗಳು ಇದ್ದಾಗ ಸ್ವಲ್ಪ ಅಸಮಾಧಾನ ಇದ್ದೆ ಇರುತ್ತದೆ ಹೀಗಾಗಿ ಸ್ವಲ್ಪ ತಾಳ್ಮೆಯಿಂದ ಇರಬೇಕು ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಸಿಗಲಿದೆ, ಹೀಗಾಗಿ ಅಸಮಾಧಾನ ಬದಿಗಿಟ್ಟು ಎಲ್ಲರೂ ಒಗ್ಗೂಡಿ ಸರ್ವ ಸದಸ್ಯರ ಅಭಿಪ್ರಾಯ ಪಡೆದು ಅಭಿವೃದ್ಧಿಗೆ ಶ್ರಮವಹಿಸಬೇಕು ಎಂದು ಹೇಳಿದರು.

ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೂ ಮತ್ತು ಪುರಸಭೆ ಸದಸ್ಯರಿಗೂ ಯಾವುದೇ ದಕ್ಕೆ ಯಾಗದಂತೆ ಎಲ್ಲರ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದರು.

- ಶ್ರೀಮತಿ ಅನ್ನಪೂರ್ಣ ಕಲ್ಲಕ್
ನೂತನ ಅಧ್ಯಕ್ಷೆ ಪುರಸಭೆ ಚಿತ್ತಾಪೂರ.

ವೀಕ್ಷಕರಾಗಿ ಕಲಬುರಗಿ ಜಿಡಿಎ ಅಧ್ಯಕ್ಷ ಮಜ‌ರ್ ಅಲ್ಲಾಂಖಾನ್, ಜಿಪಂ ಮಾಜಿ ಸದಸ್ಯ ಶರಣಗೌಡ ಪಾಟೀಲ ಚಿಂಚನಸೂರ, ಈರಣ್ಣ ಝಳಕಿ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮರಗೋಳ, ಜಿಪಂ ಮಾಜಿ ಸದಸ್ಯ ಶಿವರುದ್ರಪ್ಪ ಭೀಣ್ಣಿ, ಚಂದ್ರಶೇಖರ ಕಾಶಿ, ಶೀಲಾ ಕಾಶಿ, ಮಲ್ಲಿಕಾರ್ಜುನ ಕಾಳಗಿ, ವಿನೋದ ಗುತ್ತೇದಾರ, ಅಣ್ಣಾರಾವ್ ಸಣ್ಣೂರಕರ್, ಶ್ರೀನಿವಾಸ ರೆಡ್ಡಿ ಪಾಲಪ್, ಜಗದೀಶ್ ಚವ್ಹಾಣ, ಶಿವಕಾಂತ್ ಬೆಣ್ಣೂರಕ‌ರ್, ಪಾಶಾಮಿಯ್ಯಾ ಖುರೇಷಿ, ಸಂತೋಷ್ ಚೌದರಿ, ಶಿವರಾಜ್ ಪಾಳೇದ್, ರಸೂಲ್ ಮುಸ್ತಫಾ, ಮಹ್ಮದ್ ಯಕ್ಸಾಲ್, ಜಗದೇವರೆಡ್ಡಿ ಪಾಟೀಲ, ನಾಗರೆಡ್ಡಿ ಗೋಪಸೇನ್, ಅಹ್ಮದ್ ಸೇಟ್, ನಾಗು ಕಲ್ಲಕ್‌, ಸಿದ್ದುಗೌಡ ಅಫಜಲಪುರಕ‌ರ್, ಇಸ್ಮಾಯಿಲ್ ಕಮರವಾಡಿ, ಮಹಾಂತೇಶ್‌ ಬೊಮ್ಮನಳ್ಳಿ, ಭೀಮರಾಯ ಹೊತಿನಮಡಿ, ರಾಜಣ್ಣ ಕರದಾಳ, ಸಂಜಯ ಬುಳಕರ್, ಸಂತೋಷ ಪೂಜಾರಿ, ನಜೀರ್‌ ಆಡಕಿ, ರವಿಸಾಗರ ಹೊಸಮನಿ, ಸೂರಜ್ ಕಲ್ಲಕ್, ಶರಣಪ್ಪ ಕೋರವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮುಕ್ತಾರ್ ಪಟೇಲ್ ನಿರೂಪಿಸಿದರು, ಯುವ ಕಾಂಗ್ರೆಸ್‌ ಅಧ್ಯಕ್ಷ ದೇವಿಂದ್ರ ಯಾಬಾಳ ದಿಗ್ಗಾಂವ ವಂದಿಸಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೂತನ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್ ಅವರ ಮೆರವಣಿಗೆ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.