ಶುಕ್ರವಾರ, ಮೇ 30, 2025

ಪೌರ ಕಾರ್ಮಿಕರ ಮುಷ್ಕರದ ಎಫೆಕ್ಟ್: ಎಲ್ಲಿ ನೋಡಿದರು ಕಸವೋ ಕಸ, ಗಬ್ಬೆದ್ದು ನಾರುತ್ತಿದೆ ನಾಗಾವಿ ನಾಡು.

ಪೌರ ಕಾರ್ಮಿಕರ ಮುಷ್ಕರದ ಎಫೆಕ್ಟ್: ಎಲ್ಲಿ ನೋಡಿದರು ಕಸವೋ ಕಸ, ಗಬ್ಬೆದ್ದು ನಾರುತ್ತಿದೆ ನಾಗಾವಿ ನಾಡು.

ಚಿತ್ತಾಪುರ: ನಾಗಾವಿ ನಾಡು ಎಂದೆ ಪ್ರಸಿದ್ಧಿ ಪಡೆದ ಚಿತ್ತಾಪುರ ಪಟ್ಟಣದಲ್ಲಿ ಪುರಸಭೆ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಪೌರಕಾರ್ಮಿಕರು ನಡೆಸ್ತಿರೋ ಮುಷ್ಕರದಿಂದ ಪಟಣವೆಲ್ಲಾ ಗಬ್ಬೆದ್ದು ನಾರುತ್ತಿದೆ. ರಸ್ತೆ ಗುಡಿಸೋರಿಲ್ಲ, ಮನೆ ಮನೆಯಲ್ಲಿ ಸಂಗ್ರಹವಾಗಿರುವ ಕಸ ಕೇಳೋರಿಲ್ಲ. ಕಟ್ಟಿರುವ ಒಳ ಚರಂಡಿಗಳು ಸರಿಪಡಿಸುವವರಿಲ್ಲ. ಸ್ವಚ್ಛತಾ ವಾಹನಕ್ಕೆ ಚಾಲಕರೇ ಇಲ್ಲದೆ ನಗರವೆಲ್ಲಾ ದುರ್ನಾತ ಬೀರುತ್ತಿದೆ.

ಪಟ್ಟಣದ ಹೃದಯ ಭಾಗ ಸೇರಿದಂತೆ ಇಡೀ ಪ್ರಮುಖ ಮುಖ್ಯ ವೃತ್ತಗಳಲ್ಲಿ ಸಮರ್ಪಕವಾಗಿ ಕಸ ವಿಲೇವಾರಿಯಾಗದೇ ಇಡೀ ಪಟ್ಟಣ ಗಬ್ಬೆದ್ದು ನಾರುತ್ತಿದೆ. ಪಟ್ಟಣದ ಸ್ವಚ್ಛತಾ ಕಾರ್ಯಕ್ಕೆ ಪಾರ್ಶ್ವವಾಯು ಹೊಡೆದಂತಾಗಿದೆ. ನಿತ್ಯ 7 ಟನ್ ವಿಲೇವಾರಿಯಾಗುತ್ತಿದ್ದ ಕಸ, ಈಗ ನಗರದಲ್ಲಿಯೇ ಬಿದ್ದಿದ್ದು, ಕಳೆದ ಮೂರು ದಿನಗಳಲ್ಲಿ 21ಕ್ಕೂ ಹೆಚ್ಚು ಟನ್ ಕಸ ಸಂಗ್ರಹವಾಗಿ ವಿಲೇವಾರಿಯಾಗದೇ ಎಲ್ಲರ ಮನೆ, ರಸ್ತೆಯಲ್ಲಿಯೇ ಕೊಳೆತು, ಇಡೀ ನಗರ ದುರ್ವಾಸನೆ ಬೀರುತ್ತಿದೆ.
ಪುರಸಭೆ ಕಾರ್ಯಲಯದ ಪೌರ ಕಾರ್ಮಿಕರು,ನೀರು ಸರಬರಾಜುಗಾರರು,ವಾಹನ ಚಾಲಕರು, ಲೋಡರ್ಸ್, ಇಲಾಖೆಯ ಖಾಯಂ ಸಿಬ್ಬಂದಿ ಮತ್ತು ಹೊರ ಗುತ್ತಿಗೆ ಸಿಬ್ಬಂದಿ ವರ್ಗ ಸೇರಿ ಒಟ್ಟು 95 ಮಂದಿ ಮುಷ್ಕರಕ್ಕೆ ಬೆಂಬಲ ನೀಡಿದ್ದರಿಂದ ತರಕಾರಿ ಮಾರುಕಟ್ಟೆ, ಒಂಟ್ ಕಮಾನ್, ಸುಪ್ರಸಿದ್ಧ  ಶ್ರೀ ನಾಗಾವಿ ದೇವಸ್ಥಾನ, ಚಿತ್ತಾವಲಿ ದರ್ಗಾ, ಬಸ್ ನಿಲ್ದಾಣ, ತಹಸೀಲ್ ಕಾರ್ಯಲಯ ಸುತ್ತ ಮುತ್ತಲು, ಮತ್ತು ಲಾಡ್ಜಿಂಗ್ ಕ್ರಾಸ್ನಾ ಪರಿಸ್ಥಿತಿ ಶೋಚನೀಯವಾಗಿದೆ.
ಹೋಟೆಲ್‌ಗಳಲ್ಲಿ ಸಂಗ್ರಹವಾಗುತ್ತಿರುವ ಭಾರೀ ಪ್ರಮಾಣದ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಕೆಲವರು ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಕಸ ವಿಲೇವಾರಿ ಮಾಡುತ್ತಿದ್ದು, ಈಗ ಎಲ್ಲೆಂದರಲ್ಲಿ ಕಸದ ರಾಶಿ ಕಾಣುತ್ತಿದೆ. ಕೊಡಲೇ ಪುರಸಭೆ ಇಲಾಖೆ ಅಥವಾ ತಾಲೂಕು ಆಡಳಿತ ಈ ಸಮಸ್ಯೆ ಬಗೆಹರಿಸುವಲ್ಲಿ ಕ್ರಮಕ್ಕೆ ಮುಂದಾಗಬೇಕು.ಇಲ್ಲವಾದಲ್ಲಿ ಚಿತ್ತಾಪೂರ ಪಟ್ಟಣ ಒಂದು ವಾರದಲ್ಲಿ ಗಬ್ಬು ನಾರುವ ಮೂಲಕ ಪಟ್ಟಣದ ಜನತೆ ಸಾಂಕ್ರಾಮಿಕ ರೋಗಗಳಿಗೆ ಬಲಿಯಾಗುವ ಪರಿಸ್ಥಿತಿ ಬಂದ್ರೂ ಬರಬಹುದಾಗಿದೆ.

"ಎಲ್ಲಾ ನಗರ ಸ್ಥಳಿಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರ ನೌಕರರೆಂದು ಪರಿಗಣಿಸಿ ಮತ್ತು ಜ್ಯೋತಿ ಸಂಜೀವಿನಿ, ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯವನ್ನು ನೀಡಬೇಕೆಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಈ ಸಮಸ್ಯೆ ಪಟ್ಟಣದಲ್ಲಿ ಆಗುತ್ತಿದೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ ಎರಡು ದಿನಗಳಲ್ಲಿ ಸಮಸ್ಯೆ ಇತ್ಯರ್ಥ ಆದ್ರೇ ಎಲ್ಲಾ ಸರಿ ಆಗುತ್ತದೆ ಎಂದರು ಒಂದು ವೇಳೆ ಆಗದಿದ್ದರೆ ಮೇಲಾಧಿಕಾರಿಗೆ ಸೂಚನೆಯಂತೆ ನಡೆಯುವುದಾಗಿ ತಿಳಿಸಿದ್ದಾರೆ".

- ಮನೋಜಕುಮಾರ ಗುರಿಕಾರ
ಪುರಸಭೆ ಮುಖ್ಯಾಧಿಕಾರಿ ಚಿತ್ತಾಪುರ.

=====================================

"ಪಟ್ಟಣದಲ್ಲಿ ಕರ್ತವ್ಯಕ್ಕೆ ಪೌರ ನೌಕರರು ಗೈರಾಗುವ ಮೂಲಕ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು. ಸಂಘದ ಬೇಡಿಕೆಗಳನ್ನು ಈಡೇರಿಸುವವರಿಗೆ  ಮುಷ್ಕರ ನಿಲ್ಲಿಸಲು ಸಾಧ್ಯವಿಲ್ಲ ಎಂದರು".

- ಸಾಬಣ್ಣ ಸಿ.ಕಾಶಿ
ತಾಲ್ಲೂಕು ಅಧ್ಯಕ್ಷರು, ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಚಿತ್ತಾಪೂರ.

ಬುಧವಾರ, ಮೇ 28, 2025

ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ: ಆನಂದ ಯರಗಲ್ ಖಂಡನೆ.

ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ: ಆನಂದ ಯರಗಲ್ ಖಂಡನೆ.
ಚಿತ್ತಾಪುರ: ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಹಾಗೂ ಜಿಲ್ಲಾ ಉುವಾರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆಯವರಿಗೆ ಮೇಲ್ಮನೆ ಬಿಜೆಪಿ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅಸಂಸದೀಯ ಪದ ಬಳಸಿ ಮಾಡಿರುವ ನಿಂದನೆಗೆ ಕಾಂಗ್ರೆಸ್ ಯುವ ಮುಖಂಡ ಆನಂದ ಯರಗಲ್ ಖಂಡಿಸಿದ್ದಾರೆ.

ಸಚಿವರ ಅಭಿವೃದ್ದಿ ಕೆಲಸ ಕಾರ್ಯಗಳು ನೋಡಿ ಸಹಿಸದ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರವರನ್ನು ನಿಂದನೆ ಮಾಡುವ ಮೂಲಕ ಹಾರಿಕೆ ಉತ್ತರ ನೀಡುತ್ತಿದ್ದಾರೆ. ನಮ್ಮ ಕ್ಷೇತ್ರದ ಜನರಿಗೆ ಕಾಂಗ್ರೆಸ್‌ ಇತಿಹಾಸ ಗೊತ್ತಿದೆ, ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿ ಕೆಲಸಗಳು ನಡೆದಿವೆ, ಬಿಜೆಪಿಯವರ ಸುಳ್ಳು ಮಾತುಗಳಿಗೆ ಜನರು ನಂಬಬೇಡಿ ಎಂದರು.

ಮಣಿಕಂಠ ರಾಠೋಡ ಕ್ಷಮೆ ಯಾಚನೆಗೆ ಮೈನಾಳಕರ್ ಆಗ್ರಹ.

ಮಣಿಕಂಠ ರಾಠೋಡ ಕ್ಷಮೆ ಯಾಚನೆಗೆ ಮೈನಾಳಕರ್ ಆಗ್ರಹ.
ಚಿತ್ತಾಪುರ: ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಲಚ್ಚಪ್ಪ ಜಮಾದಾರ ಅವರನ್ನು ಅವಾಚ್ಯವಾಗಿ ಸಂಬೋಧಿಸಿ ಅವಹೇಳನ ಮಾಡಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು ಕೋಲಿ ಸಮಾಜದ ಯುವ ಘಟಕದ ನಗರ ಅಧ್ಯಕ್ಷ ಬಸವರಾಜ ಮೈನಾಳಕರ್ ಆಗ್ರಹಿಸಿದ್ದಾರೆ.

ಸಾರ್ವಜನಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಘನತೆ ಹೊಂದಿರುವವರನ್ನು ಅವಹೇಳನ ಮಾಡಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಅಶಾಂತಿಯ ವಾತಾವರಣ ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದರು. 

ಪುರಸಭೆ ಮುಂದೆ ಪೌರ ನೌಕರರ ಮುಷ್ಕರ.

ಪುರಸಭೆ ಮುಂದೆ ಪೌರ ನೌಕರರ ಮುಷ್ಕರ.
ಚಿತ್ತಾಪುರ: ಎಲ್ಲಾ ನಗರ ಸ್ಥಳಿಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರ ನೌಕರರೆಂದು ಪರಿಗಣಿಸಿ ಹಾಗೂ ಜ್ಯೋತಿ ಸಂಜೀವಿನಿ, ಕೆ.ಜಿ.ಐ.ಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯವನ್ನು ನೀಡಬೇಕೆಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಪ್ರಯುಕ್ತ ತಾಲ್ಲೂಕು ಘಟಕ ವತಿಯಿಂದ ಮಂಗಳವಾರ ಪುರಸಭೆ ಕಚೇರಿ ಎದುರು ಪೌರಕಾರ್ಮಿಕರು ಮುಷ್ಕರ ನಡೆಸಿದ್ದಾರೆ.

ಸಂಘದ ತಾಲೂಕು ಅಧ್ಯಕ್ಷ ಸಾಬಣ್ಣ ಸಿ.ಕಾಶಿ ಮಾತನಾಡಿ, ರಾಜ್ಯಾದ್ಯಂತ ಕರ್ತವ್ಯಕ್ಕೆ ಪೌರ ನೌಕರರು ಗೈರು, ಕಸ ಸಂಗ್ರಹ ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ, ನಿರ್ವಹಣೆ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದು ಹೇಳಿದರು.

ಸಂಘದ ಬೇಡಿಕೆಗಳನ್ನು ಈಡೇರಿಸುವವರಿಗೆ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸೂಚಿಸಿದಂತೆ ಚಿತ್ತಾಪುರ ಪುರಸಭೆಗೆ ಸಂಬಂಧ ಪಟ್ಟ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದರು.

ರಾಜ್ಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ, ಕ್ಲಿನರ್ಸ್, ಸ್ಯಾನಿಟರಿ ಸುಪರವೈಸರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು, ದಿನಗೂಲಿ ಕ್ಷೇಮಾಭಿವೃದ್ಧಿ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಖಾಯಂ ಮಾಡುವುದು, ಎಲ್ಲಾ ನೌಕರರಿಗೆ ಎಸ್.ಎಫ್.ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂಬ ಬೇಡಿಕೆಗಳ ಮನವಿ ಪತ್ರವನ್ನು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅವರಿಗೆ ಹಾಗೂ ತಹಸೀಲ್ದಾ‌ರ್ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವೆಂಕಟೇಶ್ ಜೈಗುರು, ಖಜಾಂಚಿ ಕ್ರಾಂತಿದೇವಿ ಸೇರಿದಂತೆ ಪೌರ ನೌಕರರ ಉಪಸ್ಥಿತರಿದ್ದರು.

ಮಂಗಳವಾರ, ಮೇ 27, 2025

ವಿಪಕ್ಷ ಸ್ಥಾನ ರದ್ದತಿಗೆ ಆಗ್ರಹಿಸಿ ಮೇ. 31ಕ್ಕೆ ಬೃಹತ್ ಪ್ರತಿಭಟನೆ.

ವಿಪಕ್ಷ ಸ್ಥಾನ ರದ್ದತಿಗೆ ಆಗ್ರಹಿಸಿ ಮೇ. 31ಕ್ಕೆ ಬೃಹತ್ ಪ್ರತಿಭಟನೆ.

ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿ, ಅಸಂವಿಧಾನಿಕವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿಯ ವಿಧಾನ ಪರಿಷತ್ ಸದಸ್ಯತ್ವ ಹಾಗೂ ವಿಪಕ್ಷ ಸ್ಥಾನ ರದ್ದುಗೊಳಿಸುವಂತೆ ಆಗ್ರಹಿಸಿ ಕಲಬುರಗಿ ನಾಗರಿಕ ಹೋರಾಟ ಸಮಿತಿಯಿಂದ ಮೇ 31 ರಂದು ನಗರದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ ಮಲ್ಲಪ್ಪ ಹೊಸಮನಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೃಹತ್ ಪ್ರತಿಭಟನೆಯ ನಿಮಿತ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ಆದ್ದರಿಂದ ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ನಾರಾಯಣಸ್ವಾಮಿ ಒಬ್ಬ ಜವಾಬ್ದಾರಿತ ಸ್ಥಾನದಲ್ಲಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿ ಎಂದು ಸಂಭೋದಿಸಿರುವುದು ಅವರ ಬೌದ್ಧಿಕ ಮಟ್ಟ ಹಾಗೂ ಸಂಸ್ಕೃತಿ ಎಂತಹದ್ದು ಎಂಬುದು ತೋರಿಸುತ್ತದೆ ಎಂದು ಹೇಳಿದರು.

ಮುಖಂಡ ದಿನೇಶ್‌ ದೊಡ್ಡಮನಿ ಮಾತನಾಡಿ, ನಾರಾಯಣಸ್ವಾಮಿ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಗುಲಾಮಗಿರಿ ಮಾಡುತ್ತಾ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ರಾಜಕೀಯ ಬೆಳವಣಿಗೆ ಸಹಿಸದೆ ಅವರ ಕುಟುಂಬವನ್ನು ಗುರಿಯಾಗಿಸಿಕೊಂಡು ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿ ರಾಜಕೀಯ ತೇಜೋವಧೆ ಮಾಡುತ್ತಿದ್ದ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

ಮುಖಂಡರಾದ ಪ್ರಕಾಶ್ ಮೂಲ ಭಾರತಿ, ರಾಜು ಕಪನೂರ, ಸುರೇಶ್ ಹಾದಿಮನಿ, ಗುಂಡಪ್ಪ ಲಂಡನಕರ್, ಪ್ರಕಾಶ್ ನಾಗನಹಳ್ಳಿ, ದೇವಿಂದ್ರ ಸಿನ್ನೂರ್, ಅಶೋಕ ವೀರ ನಾಯಕ, ಶಿವಕಾಂತ್ ಬೆಣ್ಣೂರಕರ್, ಮಲ್ಲಿಕಾರ್ಜುನ ಬೆಣ್ಣೂರಕ‌ರ್, ಸುಭಾಷ್ ಕಲ್ಮರಿ, ಶಿವಯೋಗಿ ರಾವೂರ, ಜಗನ್ನಾಥ ಮುಡಬೂಳಕ‌ರ್, ಸಾಗರ್ ಚಿಟ್ಟೇಕಾರ, ಪ್ರೇಮ್ ಸಾಗರ, ಬಸವರಾಜ ಮುಡಬೂಳಕರ್, ನಾಗೇಂದ್ರ ಬುರ್ಲಿ, ರಾಜಪ್ಪ ಹುಂಡೇಕಾರ, ಯಲ್ಲಾಲಿಂಗ ಕಲ್ಲಕ್, ದೇವಿಂದ್ರ ಭಾಗೋಡಿ, ಪೀರಪ್ಪ ಸಾಲಹಳ್ಳಿ, ಶೈಲೇಶ್ ಬೆಣ್ಣೂರಕ‌ರ್, ಶರಣು ತಲಾಟಿ, ಬಸವರಾಜ ಮುಡಬೂಳಕ‌ರ್, ಲೋಹಿತ್ ಮುದ್ದಡಗಿ, ವಿಶ್ವನಾಥ ಬೀದಿಮನಿ, ಪೃಥ್ವಿ ಸಾಗರ ಸೇರಿದಂತೆ ಇತರರು ಇದ್ದರು. ಮಲ್ಲಿಕಾರ್ಜುನ ಮುಡಬೂಳಕರ್ ಸ್ವಾಗತಿಸಿದರು, ಉದಯಕುಮಾರ್ ಸಾಗರ ನಿರೂಪಿಸಿ ವಂದಿಸಿದರು.

ಮರ ಕಟಾವು ಮಾಡಿದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ.

ಮರ ಕಟಾವು ಮಾಡಿದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ.

ಚಿತ್ತಾಪುರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸೋಮವಾರ ಅನುಮತಿ ಪಡೆಯದೆ ಮರ ಕಟಾವು ಮಾಡಿದ ವಿಷಯ ತಿಳಿದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ವಿಜಯಕುಮಾರ ಬಡೀಗೇರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು ಎಪಿಎಂಸಿ ಕಾರ್ಯದರ್ಶಿ ಅನುಮತಿ ಕೋರಿ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದರು ಇನ್ನೂ ನಮ್ಮ ಇಲಾಖೆಯಿಂದ ಅನುಮತಿ ನೀಡಿರಲಿಲ್ಲ ಈಗ ಏಕಾಏಕಿ ಮರ ಕಡಿದ ವಿಷಯ ತಿಳಿದುಬಂದಿದೆ ಈ ಕುರಿತು ಕೊಡಲೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮೊಹಮ್ಮದ್ ಜಾವೀದ್, ಅರಣ್ಯ ವೀಕ್ಷಕ ಸವಿತಾ ಸೇರಿದಂತೆ ಇತರರು ಇದ್ದರು.

ಸೋಮವಾರ, ಮೇ 26, 2025

ಮರಕ್ಕೆ ಕೊಡಲಿ, ಎಪಿಎಂಸಿ ಮತ್ತು ಅರಣ್ಯ ಇಲಾಖೆ ಜಾಣಮೌನ.

ಜಗದೇವ ಎಸ್ ಕುಂಬಾರ.
ಚಿತ್ತಾಪುರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಹಾಡು ಹಗಲೇ ಮರಗಳು ಧರೆಗೆ ಉರಳಿಸುತ್ತಿದ್ದರೂ ಯಾರೂ ಕೇಳುವರಿಲ್ಲದಂತಾಗಿದೆ ಎಪಿಎಂಸಿ ಮತ್ತು ಅರಣ್ಯ ಅಧಿಕಾರಿಗಳು ಜಾಣಮೌನಕ್ಕೆ ಜಾರಿದ್ದು ನೋಡಿದರೆ ಇನ್ನೂ ಅದೆಷ್ಟೋ ಮರಳು ನೆಲಕ್ಕೆ ಉರುಳುತ್ತವೆ ಎಂಬ ಚಿಂತೆ ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.

ಸುಮಾರು 50ಕ್ಕೂ ಅಧಿಕ ವರ್ಷಗಳ ಹಳೆಯದಾದ ಬೆಲೆಬಾಳುವ ಮರಗಳು ಕಡಿಯುತ್ತಿರುವುದು ನೋಡಿದರೆ ಎಪಿಎಂಸಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಮೌನ ಹಲವಾರು ಗುಮಾನಿಗೆ ಎಡೆ ಮಾಡಿಕೊಟ್ಟಿದೆ ಎಂದು ಜನರು ದೂರುತ್ತಿದ್ದಾರೆ. ಕಾನೂನಿನ ಯಾವುದೇ ಅಳಕು ಅಂಜಿಕೆಯಿಲ್ಲದೆ ಗಿಡ, ಮರಗಳನ್ನು ಅವ್ಯಾಹತವಾಗಿ ಕಡಿಯುವ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದೆ.

ಕಾಡು ಬೆಳೆಸಿ ನಾಡು ಉಳಿಸಿ ಎಂದು ಅರಣ್ಯ ಇಲಾಖೆ ಘೋಷಣೆ ಕೇವಲ ದಾಖಲೆಯಲ್ಲಿ ಮಾತ್ರ ಉಳಿದಿದೆ. ಅನುಷ್ಠಾನದಲ್ಲಿ ಜಾರಿಯಾಗಿಲ್ಲ ಎಂಬುದಕ್ಕೆ ಸಾಕ್ಷಿಗಳು ಸಾಕಷ್ಟು ಸಿಗಲಿವೆ. ಸರಕಾರ ಇಲ್ಲಿನ ಗಿಡ ಮರಗಳ ರಕ್ಷಣೆಗೆ ಈಗಲಾದರೂ ಎಚ್ಚೆತ್ತು ತುರ್ತು ಕ್ರಮ ಕೈಗೂಳ್ಳಬೇಕು. ಇರದಿದ್ದರೆ ಜನ ಹೋರಾಟ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ದಿನಕ್ಕೆ ಒಂದೆರಡರಂತೆ ನಿತ್ಯ ಮರಗಳ ಮಾರಣ ಹೋಮ ನಡೆಸಿದರೆ ಹೀಗೆ ಬಿಟ್ಟರೆ ಕೆಲ ದಿನದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿನ ಎಲ್ಲ ಹಸಿರು ಸಂಪತ್ತು ನಾಶವಾಗಲಿದೆ ಎಂದು ಪರಿಸರ ಪ್ರೇಮಿಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ನಮ್ಮ ವ್ಯಾಪ್ತಿಗೆ ಒಳಪಡುವ ಎಪಿಎಂಸಿಯಲ್ಲಿ ಮರಗಳು ಕಡಿದಿದ್ದು ನಮ್ಮ ಗಮನಕ್ಕೆ ಇಲ್ಲ ಒಂದು ವೇಳೆ ಮರಗಳು ಕಡಿದಿದ್ದು ನಿಜವಾಗಿದ್ದರೆ ನಾನು ಕ್ರಮ ಕೈಗೊಳ್ಳುವೆ ನಮ್ಮ ಇಲಾಖೆಯಿಂದ ಯಾವುದೇ ರೀತಿಯ ಮರಗಳು ಕಡಿಸಲು ಸೂಚಿಸಿಲ್ಲ ಎಂದರು.

- ಶ್ರೀಮತಿ ಸವಿತಾ ಘೋನಿ.
ಕಾರ್ಯದರ್ಶಿ,ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚಿತ್ತಾಪೂರ.

ಎಪಿಎಂಸಿಯಲ್ಲಿ ಯಾವುದೇ ರೀತಿಯ ಒಪ್ಪಿಗೆ ಪರವಾನಿಗೆ ಇರದೆ ಬೆಳಿಗ್ಗೆ ಮರ ಕಡಿದ ವಿಷಯ ತಿಳಿದು ಬಂದಿದೆ ಕೂಡಲೆ ಮರ ಕಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ಪಂಚನಾಮೆ ಮಾಡಿಕೊಳ್ಳಲಾಗಿದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

- ಮಹಮ್ಮದ್ ಜಾವೀದ್
ಉಪ ವಲಯ ಅರಣ್ಯಾಧಿಕಾರಿ ಚಿತ್ತಾಪೂರ.



ಶುಕ್ರವಾರ, ಮೇ 23, 2025

ಈ ರಸ್ತೆಗೆ ಸಂಚರಿಸಿದರೆ ಜೀವದ ಭಯ.ಕಿರಿದಾದ ರಸ್ತೆ, ರಸ್ತೆ ಉದ್ದಕ್ಕೂ ತಗ್ಗು ಗುಂಡಿಗಳು, ದಿನ ಒಂದಲ್ಲ ಒಂದು ಘಟನೆ.

-ಜಗದೇವ ಎಸ್ ಕುಂಬಾರ.
ಚಿತ್ತಾಪುರ: ಪಟ್ಟಣದ ಹೊರವಲಯದಿಂದ ರಾವೂರ ಹೋಗುವ 6 ಕಿಲೋ ಮೀಟರ್ ಡಾಂಬರೀಕರಣ ರಸ್ತೆಯು ಸುಮಾರು ವರ್ಷಗಳಿಂದ ಕಿರಿದಾದ ರಸ್ತೆಯಾಗಿದ್ದು, ಈಗ ಆ ರಸ್ತೆ ಉದ್ದಕ್ಕೂ ಅಲ್ಲಿಲ್ಲಿ ತಗ್ಗು-ಗುಂಡಿಗಳು ನಿರ್ಮಾಣವಾಗಿದ್ದು, ಬೆಳಿಗ್ಗೆಯಿಂದ ರಾತ್ರಿವರೆಗೆ ಒಂದಲ್ಲ ಒಂದು ವಾಹನ ಸವಾರರ ಮಧ್ಯ ಸಣ್ಣಪುಟ್ಟ ಘಟನೆಗಳು ಸಂಭವಿಸುತ್ತಿದ್ದು, ಈಗಾಗ್ಲೇ ಸಾಕಷ್ಟು ಜೀವ ಹಾನಿಗಳು ಆಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಜೀವದ ಭಯ ಉಂಟಾಗುತ್ತಿದೆ ಎನ್ನುತ್ತಾರೆ.
ಈ ರಸ್ತೆ ಮೇಲೆ ಎದುರಿನಿಂದ ಬರುವ ವಾಹನಗಳಿಗೆ ಇನ್ನೊಂದು ವಾಹನ ಜಾಗ ಬಿಡದಿದ್ದರೆ ವಾಹನ ನೆಲಕಚ್ಚುವ ಸಾಧ್ಯತೆಗಳೇ ಹೆಚ್ಚಾಗಿವೆ. ಎದುರಿನಿಂದ ಬರುವ ವಾಹನಗಳಿಗೆ ಜಾಗ ಬಿಡಲು ಸಾಧ್ಯವಾಗದಷ್ಟು ರಸ್ತೆ ಇಕ್ಕಟ್ಟಾಗಿದೆ. ಇದರಿಂದಾಗಿ ಅನೇಕ ಬಾರಿ ಬೈಕ್ ಸವಾರರು ತೊಂದರೆ ಅನುಭವಿಸಿದ ಉದಾಹರಣೆಗಳಿವೆ ಎಂದು ತಮ್ಮ ಮನದಾಳದ ಮಾತು ಹೇಳುತ್ತಿದ್ದಾರೆ.
ರಸ್ತೆಗಳ ದುರಸ್ತಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ವಿವಿಧ ಯೋಜನೆಯಡಿ ಕೋಟ್ಯಾಂತರ ರೂ. ಅನುದಾನ ನೀಡುತ್ತಿದೆ. ಆದರೆ ಈ ರಸ್ತೆಗೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕಾದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿಷ್ಕಾಳಜಿಯಿಂದ ರಸ್ತೆ ಮಾತ್ರ ಹಾಗೇ ಉಳಿಯುವಂತಾಗಿದೆ. ಒಟ್ಟಿನಲ್ಲಿ ಹದಗೆಟ್ಟ ಕಿರಿದಾದ ರಸ್ತೆಯ ದುಃಸ್ಥಿತಿಯಿಂದ ಚಿತ್ತಾಪುರ ಸುತ್ತ ಮುತ್ತಲಿನ ಗ್ರಾಮಸ್ಥರು ನಿತ್ಯ ಹಿಡಿಶಾಪ ಹಾಕುತ್ತಾ ಓಡಾಡುವಂತಾಗಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ರಸ್ತೆ ಬಗ್ಗೆ ನಿರ್ಲಕ್ಷ್ಯತನ ಬಿಟ್ಟು ಶೀಘ್ರ ರಸ್ತೆ ನಿರ್ಮಾಣ ಕಾರ್ಯಕ್ಕೆ ಮುಂದಾಗಬೇಕಿದೆ ಎಂದರು.

ಜನ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಸ್ತೆ ತೀರ ಕಿರಿದಾಗಿದ್ದು, ರಸ್ತೆಯ ಮಧ್ಯ ಭಾಗದಲ್ಲಿ ತಗ್ಗು-ಗುಂಡಿಗಳು ಬಿದ್ದು ಹಾಳಾಗಿದ್ದರಿಂದ ವಾಹನಗಳು ಸರ್ಕಸ್ ಮಾಡುತ್ತ ಚಲಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಯ ಡಾಂಬರೀಕರಣ ಕಿತ್ತು ಹೋಗಿದ್ದರಿಂದ ಅಲ್ಲಲ್ಲಿ ಕಂಕರ್ ಕಲ್ಲುಗಳು ಮೇಲೆದ್ದು ಕೆಲವು ಕಡೆ ಗುಂಡಿಗಳು ನಿರ್ಮಾಣವಾಗಿವೆ ಎನ್ನುತ್ತಾರೆ.

- ವೆಂಕಟೇಶ ರಾಠೋಡ್
 ಕರವೇ (ಸ್ವಾಭಿಮಾನಿ ಬಣ)ಕಾರ್ಯಕರ್ತರು ಚಿತ್ತಾಪೂರ.

===================================

ಇಂದು ಬೆಳಗಿನ ಜಾವ ಓರಿಯಂಟ್ ಸಿಮೆಂಟ್ ಕಂಪೆನಿಯಲ್ಲಿ ಸೆಕ್ಯೂರಿಟಿ ಕೆಲಸಕ್ಕೆ ಹೋಗುತ್ತಿದ್ದ ರಾವೂರ ಗ್ರಾಮದ ರಾಜಕುಮಾರ ಶೆಟ್ಟಿ ಎನ್ನುವ ನಿವಾಸಿ ಇದೇ ಇಕ್ಕಟ್ಟಾದ ರಸ್ತೆಯಲ್ಲಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ ಘಟನೆ ನಡೆದಿದೆ.

-ಮಹೇಶ ಬಾಳಿ
ರಾವೂರ ಗ್ರಾಮಸ್ಥರು.

ರಕ್ಷಣೆ ನೀಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ಸಜ್ಜನಶೆಟ್ಟಿ ಆಕ್ರೋಶ.

ಚಿತ್ತಾಪುರ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ರಕ್ಷಣೆ ನೀಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳದಲ್ಲಿ 400-500 ಜನ ಪೊಲೀಸರು ಮತ್ತು ಜಿಲ್ಲೆಯ ಎಲ್ಲಾ ಹಂತದ ಪೊಲೀಸ್‌ ಅಧಿಕಾರಿಗಳು ಇದ್ದರೂ ಛಲವಾದಿ ನಾರಾಯಣಸ್ವಾಮಿ ಅವರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಪೊಲೀಸರೇ ಹೆದರಿಸಿ ಬೆದರಿಸಿ ಸಚಿವರ ಕ್ಷಮೆ ಕೋರುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಿದರು. ತಿರಂಗಾ ಯಾತ್ರೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಭಾಗಿಯಾಗದಂತೆ ಪೊಲೀಸರು ಮತ್ತು ಗುಂಡಾಗಳು ಸೇರಿ ಮೊದಲೇ ಪ್ರೀಪ್ಲಾನ್ ಮಾಡಿದ್ದರು ಎಂದರು.

ಅಪರೇಷನ್‌ ಸಿಂಧೂರ ಯಶಸ್ವಿಯಾದ ಹಿನ್ನಲೆಯಲ್ಲಿ ಭಾರತೀಯ ಸೈನಿಕರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈತಿಕ ಬೆಂಬಲ ನೀಡಲು ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ವೇದಿಕೆ ವತಿಯಿಂದ ಪಟ್ಟಣದಲ್ಲಿ ಬುಧವಾರ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು ಇದೊಂದು ಪಕ್ಷಾತೀತವಾಗಿ ಕಾರ್ಯಕ್ರಮವಾಗಿತ್ತು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗಮಿಸಿದ್ದರು ಇದನ್ನು ಸಹಿಸಿಕೊಳ್ಳದ ಕಾಂಗ್ರೆಸ್‌ ಪಕ್ಷದ ಮರಳು ಮಾಫಿಯಾ, ಲಿಕ್ಕರ್ ಮಾಫಿಯಾ ಹಾಗೂ ರೌಡಿ ಶೀಟರ್ ಗಳು ಗಂಡಾಗಳ ಜೊತೆಗೆ ಪೊಲೀಸರು ಸೇರಿ ಪ್ರವಾಸಿ ಮಂದಿರದಲ್ಲಿ ಐದಾರು ತಾಸು ದಿಬ್ಬಂಧನ ಮಾಡಿ ಟಾರ್ಚರ್ ನೀಡಿದ್ದಾರೆ. ಪೊಲೀಸರು ತಮ್ಮ ಸೇವೆ ಮರೆತು ಗುಲಾಮರಂತೆ ವರ್ತಿಸಿ ಸಚಿವರ ಕಾವಲುಗಾರರಾಗಿದ್ದಾರೆ, ಅವರು ಪೊಲೀಸ್‌ ಇಲಾಖೆಯಲ್ಲಿರಲು ಲಾಯಕ್ಕಿಲ್ಲ, ತಿರಂಗಾ ಯಾತ್ರೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಭಾಗಿಯಾಗದಂತೆ ನೋಡಿಕೊಳ್ಳುವುದು ಹಾಗೂ ಯಾತ್ರೆ ಹಾಳು ಮಾಡುವುದೇ ಅವರ ಉದ್ದೇಶವಾಗಿತ್ತು. ಅಂಬೇಡ್ಕ‌ರ್ ದೇಶಕ್ಕೆ ಸಂವಿಧಾನ ಬರೆದರೆ ಪ್ರಿಯಾಂಕ್ ಖರ್ಗೆ ಚಿತ್ತಾಪುರಕ್ಕೆ ರಿಪಬ್ಲಿಕ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕ‌ರ್ ಮಾತನಾಡಿ, ಶಾಂತಿ, ಪ್ರೀತಿ ವಿಶ್ವಾಸಕ್ಕೆ ಹೆಸರಾದ ಚಿತ್ತಾಪುರದಲ್ಲಿ ಗುಂಡಾ ಪ್ರವೃತ್ತಿ ನಡೆದಿರುವುದು ಖಂಡನೀಯ. ನಮ್ಮೆದುರು ಯಾರು ಮಾತನಾಡಬಾರದು ಯಾರು ಬೆಳೆಯಬಾರದು ಎನ್ನುವ ಸಂಸ್ಕೃತಿ ಗುರುಮಠಕಲ್ ನಲ್ಲಿತ್ತು ಅದು ಈಗ ಚಿತ್ತಾಪುರದಲ್ಲಿ ತಂದಿದ್ದಾರೆ. ಬಿಜೆಪಿಯಲ್ಲಿ ದಲಿತರ ಬೆಳವಣಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಹಿಸುತ್ತಿಲ್ಲ ಇದಕ್ಕೆ ಅಂಬಾರಾಯ ಅಷ್ಠಗಿ ಮೇಲೆ ಗುಂಡಾಗಿರಿ ನಡೆಸಿರುವುದೇ ಸಾಕ್ಷಿ ಎಂದು ಹೇಳಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹಗುರವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಆಗ ನಮ್ಮ ನಾಯಕರು ಮಾದ್ಯಮ ಮೂಲಕ ಕೌಂಟರ್ ನೀಡಿದ್ದರು ಹಾಗೆ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ಕೌಂಟ‌ರ್ ನೀಡುವುದನ್ನು ಬಿಟ್ಟು ಗುಂಡಾಗಿರಿ ಮಾಡಿ ಭಯದ ವಾತಾವರಣ ನಿರ್ಮಾಣ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಕಿಡಿ ಕಾರಿದರು.

ಸಂವಿಧಾನಿಕ ಹುದ್ದೆಯಲ್ಲಿದ್ದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ಅಶ್ಲೀಲ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರೂ ಸಹ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ, ಛಲವಾದಿ ನಾರಾಯಣಸ್ವಾಮಿ ಹೇಳಿಕೆ ತಪ್ಪಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಕಲಿ ಅದನ್ನು ಬಿಟ್ಟು ಗುಂಡಾಗಳಿಗೆ ಬಿಟ್ಟು ಗುಂಡಾಗಿರಿ ನಡೆಸುವುದಕ್ಕೆ ಕುಮ್ಮಕ್ಕು ನೀಡಿದ್ದೆ ಸಚಿವ ಪ್ರಿಯಾಂಕ್ ಖರ್ಗೆ ಕಾರಣ ಎಂದು ಆಪಾದಿಸಿದರು.

-ಚಂದ್ರಶೇಖರ ಅವಂಟಿ
ಬಿಜೆಪಿ ಹಿರಿಯ ಮುಖಂಡ ಚಿತ್ತಾಪೂರ.

=====================================

ಚಿತ್ತಾಪುರದಲ್ಲಿ ಪೊಲೀಸರ ಗುಂಡಾ ವರ್ತನೆ ಹೆಚ್ಚಾಗಿದೆ, ಭಾರತ್ ಮಾತಾ ಕೀ ಜೈ ಎನ್ನುವರನ್ನು ತಡೆಹಿಡಿದ ಪೊಲೀಸರು ಛಲವಾದಿ ನಾರಾಯಣಸ್ವಾಮಿ ವಿರುದ್ಧ ಅಸಂವಿಧಾನಿಕ ಪದಗಳ ಬಳಕೆ ಮಾಡಿ ನಿಂದಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಕೂಡಲೇ ಕೈಗೊಳ್ಳಬೇಕು ಎಂದರು.
 
-ಮಲ್ಲಿಕಾರ್ಜುನ ಎಮ್ಮೆನೋ‌ರ್
ಜಿಲ್ಲಾಧ್ಯಕ್ಷರು,ಬಿಜೆಪಿ ಹಿಂದುಳಿದ ವರ್ಗಗಳ ಚಿತ್ತಾಪುರ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಸುರೇಶ್ ಬೆನಕನಳ್ಳಿ, ಶಿವರಾಮ ಚವ್ಹಾಣ, ರಮೇಶ್ ಕಾಳನೂರು ಇದ್ದರು

ಬುಧವಾರ, ಮೇ 21, 2025

ಕಾಂಗ್ರೆಸ್ ನಿಂದ ಮಿಂಚಿನ ಪ್ರತಿಭಟನೆ, ಛಲವಾದಿ ನಾರಾಯಣಸ್ವಾಮಿ ಕ್ಷಮೆಯಾಚನೆಗೆ ಆಗ್ರಹ, ತಿರಂಗಾ ಯಾತ್ರೆ ವೇದಿಕೆ ಕಾರ್ಯಕ್ರಮ ರದ್ದು.

ಚಿತ್ತಾಪುರ: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಆನೆ ಹೋಗುವಾಗ ನಾಯಿಗಳು ಬೂಗಳುತ್ತವೆ ಎಂದಾಗ ಆನೆ, ನಾಯಿ ಯಾರು ಪ್ರಶ್ನಿಸಿದಾಗ ಪ್ರಧಾನಿ ನರೇಂದ್ರ ಮೋದಿ ಅವರು ಆನೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಕೆ ಮಾಡಿ ಮಾತನಾಡಿರುವುದನ್ನು ತೀವ್ರವಾಗಿ ಖಂಡಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟ್ಟಣದಲ್ಲಿ ಮಿಂಚಿನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲು ಬುಧವಾರ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಛಲವಾದಿ ನಾರಾಯಣಸ್ವಾಮಿ ಪ್ರವಾಸಿ ಮಂದಿರದಲ್ಲಿ ಇರುವ ವಿಷಯ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು ಪ್ರವಾಸಿ ಮಂದಿರಕ್ಕೆ ಮುತ್ತಿಗೆ ಹಾಕಿ ಛಲವಾದಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಈ ಮಧ್ಯೆ ಕಾಂಗ್ರೆಸ್ ಮುಖಂಡರು ಪ್ರವಾಸಿ ಮಂದಿರದ ಗೇಟ್ ತೆರೆದು ಒಳನುಗ್ಗುವ ಪ್ರಯತ್ನ ಮಾಡಿದಾಗ ಪೊಲೀಸ್ ಅಧಿಕಾರಿಗಳು ಪ್ರತಿಭಟನೆ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಹೊರಹಾಕಿ ಗೇಟ್ ಬಂದ್ ಮಾಡಿದರು. ಗೇಟ್ ಮುಂದೆ ಕುಳಿತುಕೊಂಡು ಕಾಂಗ್ರೆಸ್ ಮುಖಂಡರು ಹೋರಾಟ ಮುಂದುವರೆಸಿದರು. ಪ್ರವಾಸಿ ಮಂದಿರದಲ್ಲಿದ್ದ ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕ್ಷಮೆ ಯಾಚಿಸಬೇಕೆಂದು ಪಟ್ಟುಹಿಡಿದಿದ್ದಾರೆ.

ಈ ಹೋರಾಟ ಮುಂದೆ ಯಾವ ರೂಪ ಪಡೆಯಲಿದೆ ಎಂಬುದು ಕಾದುನೋಡಬೇಕಿದೆ. ಸ್ಥಳದಲ್ಲಿ ಹೆಚ್ಚುವರಿ ಎಸ್ಪಿ ಮಹೇಶ ಮೇಗಣ್ಣ, ಡಿವಾಯ್ಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ನಟರಾಜ್ ಲಾಡೆ, ಜಗದೇವ ಪಾಳಾ, ಪಿಎಸ್‌ಐಗಳಾದ ಶ್ರೀಶೈಲ್ ಅಂಬಾಟಿ, ಸೇರಿದಂತೆ ಪೊಲೀಸರು ಸ್ಥಳದಲ್ಲಿದ್ದಾರೆ.

ಚಿತ್ತಾಪುರ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರವರಿಗೆ ಅನುವು ಮಾಡಿಕೋಡಿ ಎಂದು ಬಿಜೆಪಿ ಕಾರ್ಯಕರ್ತರು ಪೋಲಿಸ ಅಧಿಕಾರಿಗಳ ಜೊತೆಗೆ ಮಾತಿನ ಸಂಘರ್ಷ ನಡೆಯಿತ್ತು.

ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಆನೆ ಹೋಗುವಾಗ ನಾಯಿಗಳು ಬೂಗಳುತ್ತವೆ ಎಂಬ ವಿಷಯಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಡುವ ಪ್ರತಿಭಟನೆಗೆ ನಾನು ಉತ್ತರ ನೀಡಲ್ಲ, ನನ್ನಗೂ ಪ್ರಿಯಾಂಕ್ ರವರಿಗೆ ಸಂಬಂಧಿಸಿದ್ದು ಅವರು ಬೇಕಿದ್ದರೆ ನನ್ನ ಮೇಲೆ ಕೇಸು ದಾಖಲೆ ಮಾಡಲಿ ಎಂದು ಉತ್ತರಿಸಿದರು. ಸ್ಥಳದಲ್ಲಿ ಕ್ಷಮೆಯಾಚನೆಗೆ ಒತ್ತಾಯಿಸಿದರೆ ನಾನು ಪ್ರವಾಸಿ ಮಂದಿರದ ವಾಸ್ತವ್ಯ ಮಾಡುವುದಾಗಿ ಹೇಳಿದರು.

- ಛಲವಾದಿ ನಾರಾಯಣಸ್ವಾಮಿ
ವಿಧಾನ ಪರಿಷತ್ ವಿಪಕ್ಷ ನಾಯಕ.

ಕೆಲ ಕಾರ್ಯಕರ್ತೆರು ಪ್ರವಾಸಿ ಮಂದಿರಕ್ಕೆ ನುಗ್ಗಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಕಾರಿಗೆ ಬಣ್ಣ ಎರಚಿದರು.
ನಂತರ ಪೋಲಿಸರು ಅವರನ್ನು ಸಮಾಧಾನ ಮಾಡಿ ಕಳುಹಿಸಿದ ಘಟನೆ ನಡೆಯಿತ್ತು.

ಮಂಗಳವಾರ, ಮೇ 13, 2025

ಗ್ರಾಮೀಣ ಭಾಗದ 87 ಹಳ್ಳಿಗಳ ಅಭಿವೃದ್ದಿಗೆ ಕ್ರಿಯಾಯೋಜನೆ ಸಿದ್ದ: ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಮತಕ್ಷೇತ್ರದ ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ದಿಗಾಗಿ 150 ಕೋಟಿ ರೂಪಾಯಿ ವೆಚ್ಚದ ಕ್ರಿಯಾ ಯೋಜನೆ ಈಗಾಗಲೇ ಸಿದ್ದವಾಗಿದೆ. ಇದರ ಅಡಿಯಲ್ಲಿ 87 ಹಳ್ಳಿಗಳಿಗೆ ಅಗತ್ಯ ಅನುದಾನ ಲಭ್ಯವಾಗಲಿದ್ದು ಮುಂದಿನ ಹದಿನೈದು ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪಟ್ಟಣದ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 
ಅಮೃತ್ ಯೋಜನೆಯಡಿಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅಡಿಗಲ್ಲು, ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾಂಗಣ ಉದ್ಘಾಟನೆ ಸೇರಿದಂತೆ ರೂ 86.79 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು ಮೂಲಭೂತ ಸೌಕರ್ಯ, ಕುಡಿಯುವ ನೀರು ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದ್ದು ಮತ್ತು 25 ಕೋಟಿ ರೂಪಾಯಿ ವೆಚ್ಚದಲ್ಲಿ ಗುಂಡಗುರ್ತಿ ಬಳಿ ಸೋಲಾರ್ ಎನರ್ಜಿ ವಿದ್ಯುತ್ ಉತ್ಪಾದನಾ ಕೆಂದ್ರ ಸ್ಥಾಪಿಸಲಾಗುತ್ತಿದೆ. ಪ್ರಗತಿ ಪಥ ಹಾಗೂ ಕಲ್ಯಾಣ ಪಥ ಯೋಜನೆಗಳ ಅಡಿಯಲ್ಲಿ ಜಿಲ್ಲೆಯ ರಸ್ತೆ ಅಭಿವೃದ್ದಿ ಪಡಿಸಲಾಗುತ್ತಿದೆ. ಜೊತೆಗೆ ವಾಡಿ ಹಾಗೂ ಚಿತ್ತಾಪುರ ಪಟ್ಟಣದ ಅಭಿವೃದ್ದಿಗೆ ನೀಲ ನಕ್ಷೆ ತಯಾರಿಸಲಾಗುತ್ತಿದೆ‌ ಎಂದರು.
ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿಯಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದ ಸಚಿವರು, ರಾಜ್ಯಾದ್ಯಂತ 5,770 ಅರಿವು ಕೇಂದ್ರಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಯುವಕ ಯುವತಿಯರಿಗಾಗಿ ಜ್ಞಾನಾರ್ಜನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈ ಸಲ ಒಟ್ಟು 1,281 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿದೆ. ಇದು ದಾಖಲೆಯ ಸಂಗ್ರಹವಾಗಿದೆ. ನರೇಗಾ ಯೋಜನೆಯಡಿಯಲ್ಲಿ ತಾಯಂದಿರು ಕೆಲಸ ಮಾಡಲು ಹೋದಾಗ ಅವರ ಮಕ್ಕಳನ್ನು ಬಿಟ್ಟು ಹೋಗಲು 3,867 ಕೂಸಿನ ಮನೆ ಗಳನ್ನು ಸ್ಥಾಪಿಸಲಾಗಿದ್ದು ಅಲ್ಲಿ ಸುಮಾರು 50,000 ಮಕ್ಕಳನ್ನು ಆರೈಕೆ ಮಾಡಲಾಗುತ್ತಿದೆ ಎಂದರು.

ರೈತರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 9 ಗ್ರಾಹಕ ಬಾಡಿಗೆ ಸೇವಾ ಕೇಂದ್ರ ಸ್ಥಾಪನೆ ಮಾಡಿದ್ದು ಕೃಷಿ ಚಟುವಟಿಕೆ ನಡೆಸಲು ಬಾಡಿಗೆ ಆಧಾರದ ಮೇಲೆ ಕೃಷಿ ಯಂತ್ರೋಪಕರಣಗಳನ್ನು ಪಡೆಯಬಹುದಾಗಿದೆ. ಖಾಸಗಿಯವರಿಗೆ ಹೋಲಿಸಿದರೆ ಯಂತ್ರೋಪಕರಣಗಳ ಬಾಡಿಗೆ ಕೂಡಾ ಕಡಿಮೆಯಾಗಿದೆ. ಚಿತ್ತಾಪುರ ತಾಲೂಕಿನಲ್ಲಿ ಇಂತಹ 2 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರೈತ ಬಾಂಧವರು ಈ ಕೇಂದ್ರಗಳ ಅನುಕೂಲ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.
ಕ್ಷೇತ್ರದ ಶಾಸಕ ಹಾಗೂ ಸಚಿವನಾಗಿ ನಿಮ್ಮ ಕೆಲಸ ಮಾಡುವುದು ನನ್ನ ಧರ್ಮ. ಮೂಲಭೂತ ಸೌಕರ್ಯ, ಶೈಕ್ಷಣಿಕ ಪ್ರಗತಿ ಸೇರಿದಂತೆ ನೀರಾವರಿ ಯೋಜನೆಗಳ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಶಕ್ತಿ‌ ಮೀರಿ ಅಭಿವೃದ್ದಿ ಕೆಲಸ ಮಾಡಿದ್ದೇನೆ. ನೀವು ಎಷ್ಟು ಶಕ್ತಿ ತುಂಬುತ್ತಿರೋ‌ ಮತ್ತಷ್ಟು ಕೆಲಸ ಮಾಡುತ್ತೇನೆ. ನೀವು ಮಾಡುವ ಮತದಾನದ ಮೌಲ್ಯ ಅರಿತುಕೊಳ್ಳಬೇಕು ಎಂದು‌ ಮನವಿ ಮಾಡಿದ ಸಚಿವರು ಮತದಾರರ ಆಶೀರ್ವಾದದಿಂದ ಕ್ಷೇತ್ರದಲ್ಲಿ ಅಭಿವೃದ್ದಿಯಾಗುತ್ತಿವೆ. ನಾನು ಯಾವ ಉಪಕಾರ ಮಾಡುತ್ತಿಲ್ಲ ಬದಲಿಗೆ ನಿಮ್ಮ ಋಣ ತೀರಿಸುತ್ತಿದ್ದೇನೆ.

ಮೊದಲ ಬಾರಿಗೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಸಂದರ್ಭದಲ್ಲಿ ನಮಗೆ ಟಿಕೇಟ್ ನೀಡಲು ವಿರೋಧ ವ್ಯಕ್ತವಾಗಿತ್ತು. ಪತ್ರಿಕೆಗಳು ಕೂಡಾ ನನ್ನ ಬಗ್ಗೆ ವ್ಯಂಗ್ಯಮಾಡಿ ಹೆಡ್ ಲೈನ್ ಪ್ರಕಟಿಸಿದ್ದವು. ಆ ಸಂದರ್ಭದಲ್ಲಿ ಹಿರಿಯ ನಾಯಕ ಎಸ್ ಆರ್ ಪಾಟೀಲ್ ಐಟಿ‌/ಬಿಟಿ ಸಚಿವರಾಗಿದರು ಆಗ ನನಗೆ ಐಟಿಬಿಟಿ ಸಚಿವನಾಗಿದ್ದಾಗ ಕೆಲವರು ಟಿಕಿಸಿದರು ನನ್ನಗೆ ಏನೂ ಗೋತ್ತಿಲ್ಲ, ನನ್ನಿಂದ ಅಭಿವೃದ್ದಿ ಕೆಲಸಗಳು ಆಗಲ್ಲ ಅಂತಾ ಹೇಳುವರು ಈಗ ಕೆಲ ವರ್ಷಗಳಲ್ಲಿ ಪ್ರಿಯಾಂಕ್ ಅವರನ್ನೇ ಐಟಿ/ಬಿಟಿ ಸಚಿವರನ್ನಾಗಿ ಮಾಡಿ ಎಂದು ಎಲ್ಲರೂ ಒತ್ತಾಯಿಸಿದ್ದರು. ಇದಕ್ಕೆಲ್ಲಾ ನಿಮ್ಮ ಆಶೀರ್ವಾದವೇ ಕಾರಣ ಎಂದು ಖರ್ಗೆ ಹೇಳಿದರು.

ಚಿತ್ತಾಪುರ ಮತ ಕ್ಷೇತ್ರದ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮುಂಬರುವ ದಿನಗಳಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಗಳು ಇವೇ ಎಂದರು.

- ತಿಪ್ಪಣ್ಣಪ್ಪ ಕಮಕನೂರು
ಎಂಎಲ್‌ಸಿ ಕಲಬುರಗಿ.

ಬಳ ಚರಂಡಿ ಮಂಡಳಿ ವಿಭಾಗದ ನರಸಿಂಹರೆಡ್ಡಿ ಎನ್, ಎಂಎಲ್‌ಸಿ ಹಾಗೂ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್, ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಚಂದ್ರಶೇಖರ ಕಾಶಿ, ಬಾಬು ಕಾಶಿ, ಮಾತನಾಡಿದರು.

ಈ ಸಂದರ್ಭದಲ್ಲಿ ಚಂದ್ರಲಾ ಪರಮೇಶ್ವರಿ, ಪುರಸಭೆ ಅಧ್ಯಕ್ಷ ಅನ್ನಪೂರ್ಣ ನಾಗಪ್ಪ, ಜಿಲ್ಲಾಧಿಕಾರಿ‌ ಫೌಜಿಯಾ ತರನ್ನುಮ್, ಸಿಇಒ ಭಂವರ್ ಸಿಂಗ್ ಮೀನಾ, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಸಹಾಯಕ ಆಯುಕ್ತರಾದ ಪ್ರಭುರೇಡ್ಡಿ, ತಹಸೀಲ್ದಾರ ನಾಗಯ್ಯ ಹೀರೆಮಠ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್ ಮರಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಶ್ರೀನಿವಾಸ ಸಗರ, ಶಿವಾನಂದ ಪಾಟೀಲ, ಮಹೆಬೂಬ್ ಸಾಬ್, ಮುಕ್ತರ್ ಪಟೇಲ್, ಮಲ್ಲಿಕಾರ್ಜುನ ಕಾಳಗಿ, ಶ್ರೀಮತಿ ಶೀಲಾ ಕಾಶಿ, ಶರಣಪ್ಪ ನಾಟೀಕಾರ್, ಜಗದೀಶ ಚವ್ಹಾಣ್, ವಿನೋದ ಗುತ್ತೇದಾರ್, ಸಾಬಣ್ಣ ಕಾಶಿ, ಸೇರಿದಂತೆ 
ಇತರರು ಇದ್ದರು. ಪಶು ಇಲಾಖೆ ಶಂಕರ ಕಣ್ಣಿ ಸ್ವಾಗತಿಸಿ, ಸಂತೋಷ ಕುಮಾರ ಶಿರನಾಳ ನಿರೂಪಿಸಿದರು.

ಕಾಣೆಯಾಗಿದ್ದಾರೆ

ಕಲಬುರಗಿ ಜಿಲ್ಲೆ ಶಹಾಬಾದ ತಾಲ್ಲೂಕು ಭಂಕೂರ ಪಟ್ಟಣದ ನಿವಾಸಿ ಮಹಾದೇವಪ್ಪಾ ಜಲವಾದಿ ಇವರ ಹೆಂಡತಿ ಶ್ರೀಮತಿ ಸಾವಿತ್ರಿಬಾಯಿ (41) ವರ್ಷ ಎಂಬಾತಳು ದಿನಾಂಕ 06-05-2025 ರಂದು ಮುಂಜಾನೆ 6 ಗಂಟೆ ಸುಮಾರಿಗೆ  ಮನೆಯಿಂದ ಕಾಣೆಯಾಗಿದ್ದಾರೆ. 

ವೃತ್ತಿ, ಮನೆಗೆಲಸ 4/5 ಅಡಿ ಎತ್ತರ ಸಾಧರಣ ಮೈ ಕಟ್ಟು, ದುಡ್ಡನೆ ಮುಖ, ಗೋಧಿ ಮೈ ಬಣ್ಣ, ಕನ್ನಡ, ಹಿಂದಿ ಮಾತನಾಡಲು ಬರುತ್ತದೆ. ಸುಳಿವು ಯಾರಿಗಾದರೂ ಸಿಕ್ಕಲ್ಲಿ 6360290334 ಈ ಮೊಬೈಲ್‌ ನಂಬರಗೆ  ಸಂಪರ್ಕಿಸಲು ಕೋರಲಾಗಿದೆ.ಅಥವಾ ಸ್ಥಳೀಯ ಪೋಲಿಸ ಠಾಣೆ ತಿಳಿಸಲು ಕೊರಲಾಗಿದೆ.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...