ಗ್ರಾಮೀಣ ಭಾಗದ 87 ಹಳ್ಳಿಗಳ ಅಭಿವೃದ್ದಿಗೆ ಕ್ರಿಯಾಯೋಜನೆ ಸಿದ್ದ: ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಮತಕ್ಷೇತ್ರದ ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ದಿಗಾಗಿ 150 ಕೋಟಿ ರೂಪಾಯಿ ವೆಚ್ಚದ ಕ್ರಿಯಾ ಯೋಜನೆ ಈಗಾಗಲೇ ಸಿದ್ದವಾಗಿದೆ. ಇದರ ಅಡಿಯಲ್ಲಿ 87 ಹಳ್ಳಿಗಳಿಗೆ ಅಗತ್ಯ ಅನುದಾನ ಲಭ್ಯವಾಗಲಿದ್ದು ಮುಂದಿನ ಹದಿನೈದು ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪಟ್ಟಣದ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 
ಅಮೃತ್ ಯೋಜನೆಯಡಿಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅಡಿಗಲ್ಲು, ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾಂಗಣ ಉದ್ಘಾಟನೆ ಸೇರಿದಂತೆ ರೂ 86.79 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು ಮೂಲಭೂತ ಸೌಕರ್ಯ, ಕುಡಿಯುವ ನೀರು ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದ್ದು ಮತ್ತು 25 ಕೋಟಿ ರೂಪಾಯಿ ವೆಚ್ಚದಲ್ಲಿ ಗುಂಡಗುರ್ತಿ ಬಳಿ ಸೋಲಾರ್ ಎನರ್ಜಿ ವಿದ್ಯುತ್ ಉತ್ಪಾದನಾ ಕೆಂದ್ರ ಸ್ಥಾಪಿಸಲಾಗುತ್ತಿದೆ. ಪ್ರಗತಿ ಪಥ ಹಾಗೂ ಕಲ್ಯಾಣ ಪಥ ಯೋಜನೆಗಳ ಅಡಿಯಲ್ಲಿ ಜಿಲ್ಲೆಯ ರಸ್ತೆ ಅಭಿವೃದ್ದಿ ಪಡಿಸಲಾಗುತ್ತಿದೆ. ಜೊತೆಗೆ ವಾಡಿ ಹಾಗೂ ಚಿತ್ತಾಪುರ ಪಟ್ಟಣದ ಅಭಿವೃದ್ದಿಗೆ ನೀಲ ನಕ್ಷೆ ತಯಾರಿಸಲಾಗುತ್ತಿದೆ‌ ಎಂದರು.
ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿಯಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದ ಸಚಿವರು, ರಾಜ್ಯಾದ್ಯಂತ 5,770 ಅರಿವು ಕೇಂದ್ರಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಯುವಕ ಯುವತಿಯರಿಗಾಗಿ ಜ್ಞಾನಾರ್ಜನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈ ಸಲ ಒಟ್ಟು 1,281 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿದೆ. ಇದು ದಾಖಲೆಯ ಸಂಗ್ರಹವಾಗಿದೆ. ನರೇಗಾ ಯೋಜನೆಯಡಿಯಲ್ಲಿ ತಾಯಂದಿರು ಕೆಲಸ ಮಾಡಲು ಹೋದಾಗ ಅವರ ಮಕ್ಕಳನ್ನು ಬಿಟ್ಟು ಹೋಗಲು 3,867 ಕೂಸಿನ ಮನೆ ಗಳನ್ನು ಸ್ಥಾಪಿಸಲಾಗಿದ್ದು ಅಲ್ಲಿ ಸುಮಾರು 50,000 ಮಕ್ಕಳನ್ನು ಆರೈಕೆ ಮಾಡಲಾಗುತ್ತಿದೆ ಎಂದರು.

ರೈತರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 9 ಗ್ರಾಹಕ ಬಾಡಿಗೆ ಸೇವಾ ಕೇಂದ್ರ ಸ್ಥಾಪನೆ ಮಾಡಿದ್ದು ಕೃಷಿ ಚಟುವಟಿಕೆ ನಡೆಸಲು ಬಾಡಿಗೆ ಆಧಾರದ ಮೇಲೆ ಕೃಷಿ ಯಂತ್ರೋಪಕರಣಗಳನ್ನು ಪಡೆಯಬಹುದಾಗಿದೆ. ಖಾಸಗಿಯವರಿಗೆ ಹೋಲಿಸಿದರೆ ಯಂತ್ರೋಪಕರಣಗಳ ಬಾಡಿಗೆ ಕೂಡಾ ಕಡಿಮೆಯಾಗಿದೆ. ಚಿತ್ತಾಪುರ ತಾಲೂಕಿನಲ್ಲಿ ಇಂತಹ 2 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರೈತ ಬಾಂಧವರು ಈ ಕೇಂದ್ರಗಳ ಅನುಕೂಲ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.
ಕ್ಷೇತ್ರದ ಶಾಸಕ ಹಾಗೂ ಸಚಿವನಾಗಿ ನಿಮ್ಮ ಕೆಲಸ ಮಾಡುವುದು ನನ್ನ ಧರ್ಮ. ಮೂಲಭೂತ ಸೌಕರ್ಯ, ಶೈಕ್ಷಣಿಕ ಪ್ರಗತಿ ಸೇರಿದಂತೆ ನೀರಾವರಿ ಯೋಜನೆಗಳ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಶಕ್ತಿ‌ ಮೀರಿ ಅಭಿವೃದ್ದಿ ಕೆಲಸ ಮಾಡಿದ್ದೇನೆ. ನೀವು ಎಷ್ಟು ಶಕ್ತಿ ತುಂಬುತ್ತಿರೋ‌ ಮತ್ತಷ್ಟು ಕೆಲಸ ಮಾಡುತ್ತೇನೆ. ನೀವು ಮಾಡುವ ಮತದಾನದ ಮೌಲ್ಯ ಅರಿತುಕೊಳ್ಳಬೇಕು ಎಂದು‌ ಮನವಿ ಮಾಡಿದ ಸಚಿವರು ಮತದಾರರ ಆಶೀರ್ವಾದದಿಂದ ಕ್ಷೇತ್ರದಲ್ಲಿ ಅಭಿವೃದ್ದಿಯಾಗುತ್ತಿವೆ. ನಾನು ಯಾವ ಉಪಕಾರ ಮಾಡುತ್ತಿಲ್ಲ ಬದಲಿಗೆ ನಿಮ್ಮ ಋಣ ತೀರಿಸುತ್ತಿದ್ದೇನೆ.

ಮೊದಲ ಬಾರಿಗೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಸಂದರ್ಭದಲ್ಲಿ ನಮಗೆ ಟಿಕೇಟ್ ನೀಡಲು ವಿರೋಧ ವ್ಯಕ್ತವಾಗಿತ್ತು. ಪತ್ರಿಕೆಗಳು ಕೂಡಾ ನನ್ನ ಬಗ್ಗೆ ವ್ಯಂಗ್ಯಮಾಡಿ ಹೆಡ್ ಲೈನ್ ಪ್ರಕಟಿಸಿದ್ದವು. ಆ ಸಂದರ್ಭದಲ್ಲಿ ಹಿರಿಯ ನಾಯಕ ಎಸ್ ಆರ್ ಪಾಟೀಲ್ ಐಟಿ‌/ಬಿಟಿ ಸಚಿವರಾಗಿದರು ಆಗ ನನಗೆ ಐಟಿಬಿಟಿ ಸಚಿವನಾಗಿದ್ದಾಗ ಕೆಲವರು ಟಿಕಿಸಿದರು ನನ್ನಗೆ ಏನೂ ಗೋತ್ತಿಲ್ಲ, ನನ್ನಿಂದ ಅಭಿವೃದ್ದಿ ಕೆಲಸಗಳು ಆಗಲ್ಲ ಅಂತಾ ಹೇಳುವರು ಈಗ ಕೆಲ ವರ್ಷಗಳಲ್ಲಿ ಪ್ರಿಯಾಂಕ್ ಅವರನ್ನೇ ಐಟಿ/ಬಿಟಿ ಸಚಿವರನ್ನಾಗಿ ಮಾಡಿ ಎಂದು ಎಲ್ಲರೂ ಒತ್ತಾಯಿಸಿದ್ದರು. ಇದಕ್ಕೆಲ್ಲಾ ನಿಮ್ಮ ಆಶೀರ್ವಾದವೇ ಕಾರಣ ಎಂದು ಖರ್ಗೆ ಹೇಳಿದರು.

ಚಿತ್ತಾಪುರ ಮತ ಕ್ಷೇತ್ರದ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮುಂಬರುವ ದಿನಗಳಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಗಳು ಇವೇ ಎಂದರು.

- ತಿಪ್ಪಣ್ಣಪ್ಪ ಕಮಕನೂರು
ಎಂಎಲ್‌ಸಿ ಕಲಬುರಗಿ.

ಬಳ ಚರಂಡಿ ಮಂಡಳಿ ವಿಭಾಗದ ನರಸಿಂಹರೆಡ್ಡಿ ಎನ್, ಎಂಎಲ್‌ಸಿ ಹಾಗೂ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್, ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಚಂದ್ರಶೇಖರ ಕಾಶಿ, ಬಾಬು ಕಾಶಿ, ಮಾತನಾಡಿದರು.

ಈ ಸಂದರ್ಭದಲ್ಲಿ ಚಂದ್ರಲಾ ಪರಮೇಶ್ವರಿ, ಪುರಸಭೆ ಅಧ್ಯಕ್ಷ ಅನ್ನಪೂರ್ಣ ನಾಗಪ್ಪ, ಜಿಲ್ಲಾಧಿಕಾರಿ‌ ಫೌಜಿಯಾ ತರನ್ನುಮ್, ಸಿಇಒ ಭಂವರ್ ಸಿಂಗ್ ಮೀನಾ, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಸಹಾಯಕ ಆಯುಕ್ತರಾದ ಪ್ರಭುರೇಡ್ಡಿ, ತಹಸೀಲ್ದಾರ ನಾಗಯ್ಯ ಹೀರೆಮಠ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್ ಮರಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಶ್ರೀನಿವಾಸ ಸಗರ, ಶಿವಾನಂದ ಪಾಟೀಲ, ಮಹೆಬೂಬ್ ಸಾಬ್, ಮುಕ್ತರ್ ಪಟೇಲ್, ಮಲ್ಲಿಕಾರ್ಜುನ ಕಾಳಗಿ, ಶ್ರೀಮತಿ ಶೀಲಾ ಕಾಶಿ, ಶರಣಪ್ಪ ನಾಟೀಕಾರ್, ಜಗದೀಶ ಚವ್ಹಾಣ್, ವಿನೋದ ಗುತ್ತೇದಾರ್, ಸಾಬಣ್ಣ ಕಾಶಿ, ಸೇರಿದಂತೆ 
ಇತರರು ಇದ್ದರು. ಪಶು ಇಲಾಖೆ ಶಂಕರ ಕಣ್ಣಿ ಸ್ವಾಗತಿಸಿ, ಸಂತೋಷ ಕುಮಾರ ಶಿರನಾಳ ನಿರೂಪಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.