ಬುಧವಾರ, ಮೇ 28, 2025

ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ: ಆನಂದ ಯರಗಲ್ ಖಂಡನೆ.

ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ: ಆನಂದ ಯರಗಲ್ ಖಂಡನೆ.
ಚಿತ್ತಾಪುರ: ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಹಾಗೂ ಜಿಲ್ಲಾ ಉುವಾರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆಯವರಿಗೆ ಮೇಲ್ಮನೆ ಬಿಜೆಪಿ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅಸಂಸದೀಯ ಪದ ಬಳಸಿ ಮಾಡಿರುವ ನಿಂದನೆಗೆ ಕಾಂಗ್ರೆಸ್ ಯುವ ಮುಖಂಡ ಆನಂದ ಯರಗಲ್ ಖಂಡಿಸಿದ್ದಾರೆ.

ಸಚಿವರ ಅಭಿವೃದ್ದಿ ಕೆಲಸ ಕಾರ್ಯಗಳು ನೋಡಿ ಸಹಿಸದ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರವರನ್ನು ನಿಂದನೆ ಮಾಡುವ ಮೂಲಕ ಹಾರಿಕೆ ಉತ್ತರ ನೀಡುತ್ತಿದ್ದಾರೆ. ನಮ್ಮ ಕ್ಷೇತ್ರದ ಜನರಿಗೆ ಕಾಂಗ್ರೆಸ್‌ ಇತಿಹಾಸ ಗೊತ್ತಿದೆ, ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿ ಕೆಲಸಗಳು ನಡೆದಿವೆ, ಬಿಜೆಪಿಯವರ ಸುಳ್ಳು ಮಾತುಗಳಿಗೆ ಜನರು ನಂಬಬೇಡಿ ಎಂದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಿ: ಪ್ರಭುರೆಡ್ಡಿ ಸೂಚನೆ.

ಚಿತ್ತಾಪುರ: ಮುಂಬರುವ ಬೇಸಿಗೆ ಮತ್ತು ಮುಂಗಾರು ಮಳೆಗಾಲದ ಆರಂಭದ ಅವಧಿಯಲ್ಲಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ...