ಕಾಂಗ್ರೆಸ್ ನಿಂದ ಮಿಂಚಿನ ಪ್ರತಿಭಟನೆ, ಛಲವಾದಿ ನಾರಾಯಣಸ್ವಾಮಿ ಕ್ಷಮೆಯಾಚನೆಗೆ ಆಗ್ರಹ, ತಿರಂಗಾ ಯಾತ್ರೆ ವೇದಿಕೆ ಕಾರ್ಯಕ್ರಮ ರದ್ದು.

ಚಿತ್ತಾಪುರ: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಆನೆ ಹೋಗುವಾಗ ನಾಯಿಗಳು ಬೂಗಳುತ್ತವೆ ಎಂದಾಗ ಆನೆ, ನಾಯಿ ಯಾರು ಪ್ರಶ್ನಿಸಿದಾಗ ಪ್ರಧಾನಿ ನರೇಂದ್ರ ಮೋದಿ ಅವರು ಆನೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಕೆ ಮಾಡಿ ಮಾತನಾಡಿರುವುದನ್ನು ತೀವ್ರವಾಗಿ ಖಂಡಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟ್ಟಣದಲ್ಲಿ ಮಿಂಚಿನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲು ಬುಧವಾರ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಛಲವಾದಿ ನಾರಾಯಣಸ್ವಾಮಿ ಪ್ರವಾಸಿ ಮಂದಿರದಲ್ಲಿ ಇರುವ ವಿಷಯ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು ಪ್ರವಾಸಿ ಮಂದಿರಕ್ಕೆ ಮುತ್ತಿಗೆ ಹಾಕಿ ಛಲವಾದಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಈ ಮಧ್ಯೆ ಕಾಂಗ್ರೆಸ್ ಮುಖಂಡರು ಪ್ರವಾಸಿ ಮಂದಿರದ ಗೇಟ್ ತೆರೆದು ಒಳನುಗ್ಗುವ ಪ್ರಯತ್ನ ಮಾಡಿದಾಗ ಪೊಲೀಸ್ ಅಧಿಕಾರಿಗಳು ಪ್ರತಿಭಟನೆ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಹೊರಹಾಕಿ ಗೇಟ್ ಬಂದ್ ಮಾಡಿದರು. ಗೇಟ್ ಮುಂದೆ ಕುಳಿತುಕೊಂಡು ಕಾಂಗ್ರೆಸ್ ಮುಖಂಡರು ಹೋರಾಟ ಮುಂದುವರೆಸಿದರು. ಪ್ರವಾಸಿ ಮಂದಿರದಲ್ಲಿದ್ದ ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕ್ಷಮೆ ಯಾಚಿಸಬೇಕೆಂದು ಪಟ್ಟುಹಿಡಿದಿದ್ದಾರೆ.

ಈ ಹೋರಾಟ ಮುಂದೆ ಯಾವ ರೂಪ ಪಡೆಯಲಿದೆ ಎಂಬುದು ಕಾದುನೋಡಬೇಕಿದೆ. ಸ್ಥಳದಲ್ಲಿ ಹೆಚ್ಚುವರಿ ಎಸ್ಪಿ ಮಹೇಶ ಮೇಗಣ್ಣ, ಡಿವಾಯ್ಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ನಟರಾಜ್ ಲಾಡೆ, ಜಗದೇವ ಪಾಳಾ, ಪಿಎಸ್‌ಐಗಳಾದ ಶ್ರೀಶೈಲ್ ಅಂಬಾಟಿ, ಸೇರಿದಂತೆ ಪೊಲೀಸರು ಸ್ಥಳದಲ್ಲಿದ್ದಾರೆ.

ಚಿತ್ತಾಪುರ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರವರಿಗೆ ಅನುವು ಮಾಡಿಕೋಡಿ ಎಂದು ಬಿಜೆಪಿ ಕಾರ್ಯಕರ್ತರು ಪೋಲಿಸ ಅಧಿಕಾರಿಗಳ ಜೊತೆಗೆ ಮಾತಿನ ಸಂಘರ್ಷ ನಡೆಯಿತ್ತು.

ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಆನೆ ಹೋಗುವಾಗ ನಾಯಿಗಳು ಬೂಗಳುತ್ತವೆ ಎಂಬ ವಿಷಯಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಡುವ ಪ್ರತಿಭಟನೆಗೆ ನಾನು ಉತ್ತರ ನೀಡಲ್ಲ, ನನ್ನಗೂ ಪ್ರಿಯಾಂಕ್ ರವರಿಗೆ ಸಂಬಂಧಿಸಿದ್ದು ಅವರು ಬೇಕಿದ್ದರೆ ನನ್ನ ಮೇಲೆ ಕೇಸು ದಾಖಲೆ ಮಾಡಲಿ ಎಂದು ಉತ್ತರಿಸಿದರು. ಸ್ಥಳದಲ್ಲಿ ಕ್ಷಮೆಯಾಚನೆಗೆ ಒತ್ತಾಯಿಸಿದರೆ ನಾನು ಪ್ರವಾಸಿ ಮಂದಿರದ ವಾಸ್ತವ್ಯ ಮಾಡುವುದಾಗಿ ಹೇಳಿದರು.

- ಛಲವಾದಿ ನಾರಾಯಣಸ್ವಾಮಿ
ವಿಧಾನ ಪರಿಷತ್ ವಿಪಕ್ಷ ನಾಯಕ.

ಕೆಲ ಕಾರ್ಯಕರ್ತೆರು ಪ್ರವಾಸಿ ಮಂದಿರಕ್ಕೆ ನುಗ್ಗಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಕಾರಿಗೆ ಬಣ್ಣ ಎರಚಿದರು.
ನಂತರ ಪೋಲಿಸರು ಅವರನ್ನು ಸಮಾಧಾನ ಮಾಡಿ ಕಳುಹಿಸಿದ ಘಟನೆ ನಡೆಯಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.